Subscribe to Updates
Get the latest creative news from FooBar about art, design and business.
Author: kannadanewsnow05
ಉಡುಪಿ : ವಿಧಾನ ಪರಿಷತ್ ಟಿಕೆಟ್ ನೀಡಿಲ್ಲವೆಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿರುವ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿದ್ದ ನಾಲ್ವರು ನಾಯಕರಿಗೆ ಇದೀಗ ಬಿಜೆಪಿ ನೋಟಿಸ್ ನೀಡಿದೆ. ಬಿಜೆಪಿಯ ನಾಲ್ವರು ಪದಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಿದ್ದು, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹೇಶ ಠಾಕೂರ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್, ಬಿಜೆಪಿ ಯುವ ಮೋರ್ಚ ಉಪಾಧ್ಯಕ್ಷ ರೋಶನ್ ಶೆಟ್ಟಿ ಹಾಗೂ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುಲೈಗೆ ನೋಟಿಸ್ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಅಕ್ಷಮ್ಯ ಅಪರಾಧ.ಪಕ್ಷದ ಉಲ್ಲಂಘಿಸಿದ್ದಕ್ಕೆ 48 ಗಂಟೆಗಳ ಒಳಗೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರ ಮುಂದೆ ಸ್ಪಷ್ಟೀಕರಣ ನೀಡುವಂತೆ ನೋಟಿಸ್ ಜಾರಿ ಮಾಡಿದೆ. ರಘುಪತಿ ಭಟ್ ಜೊತೆ ಗುರುತಿಸಿಕೊಂಡ ಬಿಜೆಪಿ ನಾಯಕರಿಗೆ ನೋಟಿಸ್ ನೀಡಲಾಗಿದೆ. ರಘುಪತಿ ಭಟ್ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ.
ಬೆಂಗಳೂರು : ವೀರ ಸಾವರ್ಕರ್ಮೇಲ್ಸೇತುವೆ ನಾಮಫಲಕಕ್ಕೆ ಎನ್ಎಸ್ಯುಐ ಕಾರ್ಯಕರ್ತರು ಮಸಿ ಬಳಿದಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಮಾಗಡಿ ರೋಡಿನ ಯುವಕ ಸೇರಿದಂತೆ ಮೂವರನ್ನು ಯಲಹಂಕ ಉಪನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೌದು ವೀರ ಸಾವರ್ಕರ ಜನ್ಮದಿನದ ಮಸಿ ಬಳಿದಿದ್ದ ಮೂವರನ್ನು ಇದೀಗ ಬಂಧಿಸಲಾಗಿದೆ. ಯಲಹಂಕದ ಡೈರಿ ಸರ್ಕಲ್ ಬಳಿ ಇರುವ ಸಾವರ್ಕರ್ ಮೇಲ್ ಸೇತುವೆ ವೀರ ಸಾವರ್ಕರ ಜನ್ಮ ದಿನದಂದೇ ಮಸಿ ಬೆಳೆದಿದ್ದ ಮೂವರನ್ನು ಬಂಧಿಸಿದ್ದಾರೆ. ಸಾವರ್ಕರ್ ಗೆ ಸಿಗುತ್ತಿರುವ ಗೌರವ ಭಗತ್ ಸಿಂಗ್ ಗೆ ಸಿಗುತ್ತಿಲ್ಲ. ಸಾವರ್ಕರ್ ಸೇತುವೆ ಬದಲು ಭಗತ್ ಸಿಂಗ್ ಹೆಸರುಡುವಂತೆ ಆಗ್ರಹಿಸಿದ್ದಾರೆ. ಮಧ್ಯಾಹ್ನ 1.50ಕ್ಕೆ ಪುಂಡರು ಸಾವರ್ಕರ್ ಸೇತುವೆಗೆ ಮಸಿ ಬಳೆದಿದ್ದರು. ಬೆಂಗಳೂರಿನ ಹೊರವಲಯದ ಯಲಹಂಕದಲ್ಲಿ ಎನ್ಎಸ್ಯುಐ ಕಾರ್ಯಕರ್ತರು ಸಂಚಾರ ತಡೆ ನಡೆಸಿದ್ದರು. ಈ ವೇಳೆ ವೀರಸಾವರ್ಕರ್ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ. ಬಳಿಕ ಸೇತುವೆಗೆ ಭಗತ್ ಸಿಂಗ್ ಮೇಲ್ಸೇತುವೆ ಹೆಸರಿನ ಬ್ಯಾನರ್ ಹಾಕಿದ್ದಾರೆ. ನಾಮಫಲಕಕ್ಕೆ ಮಸಿ ಬಳಿದಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಾರ್ಯಕರ್ತರು…
ಬೆಳಗಾವಿ : ಇತ್ತೀಚಿಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸರಕಾರಿ ಐಬಿಯಲ್ಲಿ ಗುತ್ತಿಗೆದಾರರ ಜೊತೆ ಸೇರಿ ಇಂಜಿನಿಯರ್ಗಳು ಎಣ್ಣೆ ಪಾರ್ಟಿ ಮಾಡಿದರು. ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಕೂಡ ಅಂತಹ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಗಳು ರಾತ್ರಿಯಿಡಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಠಾಣೆಯಲ್ಲಿ ನಡೆದಿರುವ ಎಣ್ಣೆ ಪಾರ್ಟಿಯ ಫೋಟೋಗಳು ಇದೀಗ ವೈರಲ್ ಆಗಿವೆ. ಟೇಬಲ್ ಮೇಲೆ ಮಧ್ಯದ ಖಾಲಿ ಬಾಟಲಿ ಇರುವ ಫೋಟೋ ಆಗಿದೆ ಠಾಣೆಯಲ್ಲಿ ಮಧ್ಯದ ಬಾಟಲಿ ಫೋಟೋಗೆ ಇದೀಗ ಸಾರ್ವಜನಿಕರು ಇದೀಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ : ವಾಲ್ಮೀಕಿ ನಿಗಮದ ಅಧಿಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತ ಚಂದ್ರಶೇಖರ್ ಪತ್ನಿ ಕವಿತಾ ಅವರು ಪ್ರತಿಕ್ರಿಯೆ ನೀಡಿದ್ದು, ನನ್ನ ಪತಿ ನಿಯತ್ತಿನ ನಾಯಿ ರೀತಿ ಸರ್ಕಾರದ ಕೆಲಸ ಮಾಡಿದ್ದಾರೆ.ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅಂದರೆ ಎಷ್ಟು ಒತ್ತಡ ಇತ್ತು ಊಹೆ ಮಾಡಿ ಎಂದು ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒತ್ತಡ ಹಾಕಿ ನನ್ನ ಪತಿ ಜೀವ ತೆಗೆದಿದ್ದಾರೆ. ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಗಮನಕ್ಕೆ ಬರದೇ ಏನೋ ನಡೆದಿಲ್ಲ. ನಿರ್ದೇಶಕರ ಸಹಿ ನಕಲು ಆಗಲು ಸಾಧ್ಯವಿಲ್ಲ. ನನಗೆ ಸರ್ಕಾರದ ಮೇಲೆ ವಿಶ್ವಾಸವಿದೆ ಪತಿ ಸಾವಿಗೆ ನ್ಯಾಯ ಸಿಗಬೇಕು ಎಂದು ಶಿವಮೊಗ್ಗದಲ್ಲಿ ಮೃತ ಚಂದ್ರಶೇಖರ್ ಪತ್ನಿ ಕವಿತಾ ಹೇಳಿಕೆ ನೀಡಿದ್ದಾರೆ. ನನ್ನ ಪತಿ ಯಾವುದೇ ತಪ್ಪು ಮಾಡಿಲ್ಲ ಲೂಟಿಯನ್ನು ಮಾಡಿಲ್ಲ. ಡೆತ್ ನೋಟ್ ನಲ್ಲಿ ಅವರು ಎಲ್ಲವನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ನನ್ನದು ಯಾವುದೇ ರೀತಿಯ ತಪ್ಪಿಲ್ಲ ಎಂದು ಉಲ್ಲೇಖ ಮಾಡಿದ್ದಾರೆ. ನನ್ನ ಪತಿ ನಿಯತ್ತಿನ ನಾಯಿ ರೀತಿ ಸರ್ಕಾರದ ಕೆಲಸ…
ಬೆಂಗಳೂರು : ಬೆಂಗಳೂರಿನಲ್ಲಿ ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ HAL ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾರತಹಳ್ಳಿಯ ಸಮೀಪ ಬೋರ್ವೆಲ್ ಜಂಕ್ಷನ್ ಬಳಿ ನಡೆದಿದೆ.ಮೃತ ಮಹಿಳೆಯನ್ನ ರತ್ನಮ್ಮ (47) ಎಂದು ಗುರುತಿಸಲಾಗಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ರತ್ನಮ್ಮ ಚಿಕಿತ್ಸೆ ಫಲಿಸದೇ ಮಣಿಪಾಲ್ ಆಸ್ಪತ್ರೆಯಲ್ಲಿ ರತ್ನಮ್ಮ ಸಾವನ್ನಪ್ಪಿದ್ದಾರೆ. ತಕ್ಷಣ HAL ಸಂಚಾರಿ ಠಾಣೆಯ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ಮೈಸೂರಿನ ಕೆ ಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಧೀಶರಾದ ಸಂತೋಷ್ ಗಜಾನನ ಭಟ್ ಅವರು ವಿಚಾರಣೆಯನ್ನು ನಾಳೆಗೆ ಮುಂದೂಡಿದರು. ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, ಭವಾನಿ ರೇವಣ್ಣರನ್ನು ಈವರೆಗೂ ಆರೋಪಿಯನ್ನಾಗಿ ಮಾಡಿಲ್ಲ. FIR ನಲ್ಲಿ ಸೇರಿಸದೆ ಬಂಧಿಸಬಾರದು ಎಂದೇನಿಲ್ಲ.ಆದರೆ ಮಧ್ಯಂತರ ಜಾಮೀನು ಪರಿಗಣಿಸಲು ಏನಾದರೂ ದಾಖಲೆ ಬೇಕು. ಎಸ್ಐಟಿ ಮೊದಲು ಆಕ್ಷೇಪಣೆಯನ್ನು ಸಲ್ಲಿಸಲಿ ಎಂದು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅಭಿಪ್ರಾಯ ತಿಳಿಸಿ ವಿಚಾರಣೆಯನ್ನುಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ ಮುಂದೂಡಿತು. ಮೈಸೂರು ಜಿಲ್ಲೆಯ ಕೆಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಗುರುವಾರ ಅಥವಾ ಶುಕ್ರವಾರಕ್ಕೆ ವಿಚಾರಣೆ…
ಬೆಂಗಳೂರು : ಪರಿಷತ್ತಿನ 7 ಸ್ಥಾನಗಳಿಗೆ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಲ್ಲರೂ ಬ್ಲಾಕ್, ಜಿಲ್ಲಾ, ರಾಜ್ಯ ಮಟ್ಟದಲ್ಲಿ ಪಕ್ಷಕ್ಕೆ ದುಡಿದಿದ್ದಾರೆ. ಹಾಗಾಗಿ ಈ ಬಾರಿ ಎಲ್ಲಾ ವರ್ಗದವರಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಟಿಕೆಟ್ ಹಂಚಿಕೆ ಸಂಬಂಧ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಟಿಕೆಟ್ಗೆ ಕಾಂಗ್ರೆಸ್ ಪಕ್ಷದಲ್ಲಿ ಮುನ್ನೂರಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ ಎಂದು ಅವರು ತಿಳಿಸಿದರು. ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಭಾಗ ಸೇರಿದಂತೆ ಎಲ್ಲಾ ಕಡೆಗಳಿಗೆ ಅವಕಾಶ ನೀಡಬೇಕು ಎನ್ನುವ ಬೇಡಿಕೆ ಇದೆ. ಕೆಲವು ಸ್ಥಾನಗಳಲ್ಲಿ ಹಾಲಿ ಸದಸ್ಯರು ಇದ್ದಾರೆ. ಹೀಗಾಗಿ ಈ ಬಾರಿ ಕಷ್ಟಕರ ಪರಿಸ್ಥಿತಿ ಎದುರಾಗಿದೆ. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ನೋಡೋಣ ಎಂದು ಅವರು ತಿಳಿಸಿದರು.
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ ಐ ಟಿ ಅಧಿಕಾರಿಗಳು ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ ನನ್ನು ಬಂಧಿಸಿದ್ದಾರೆ. ಹೈಕೋರ್ಟಿಗೆ ಜಾಮೀನು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಇಂದು ಅವರು ಹೈಕೋರ್ಟಿಗೆ ಬಂದಿದ್ದರು. ಈ ವೇಳೆ ನವೀನ ಗೌಡ ಹಾಗೂ ಚೇತನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳು ಹೈಕೋರ್ಟ್ ಗೆ ಬಂದಿದ್ದ ವೇಳೆ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ನವೀನ್ ಗೌಡ ಅರೆಸ್ಟ್ ಆಗದ ಬಗ್ಗೆ ಸಾಕಷ್ಟು ಅನುಮಾನ ಹುಟ್ಟು ಹಾಕಿತ್ತು ಈ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಪ್ರಶ್ನೆ ಮಾಡಿದ್ದರು. ಇದೀಗ ಕೊನೆಗೂ ಇಬ್ಬರು ಆರೋಪಿಗಳನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಆರೋಪಿಗಳು. ಹೀಗಾಗಿ ಹೈಕೋರ್ಟ್ ಕಡೆ ಬಂದಿದ್ದ ಇಬ್ಬರನ್ನು ಇದೀಗ ಎಸ್ ಐ ಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಮೂಲಸೌಕರ್ಯ ಕಡೆಗಣನೆ ವಿಚಾರಕ್ಕೆ ಸಂಬಂಧಿಸಿದಂತೆ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಬಲಿಷ್ಠರಾಗುತ್ತಾರೆಂದು ಸಿಎಂ ಹಣ ಕೊಡುತ್ತಿಲ್ಲ ಎಂದು ಬಿಜೆಪಿಯ ಮಾಜಿ ಸಚಿವ ಡಾ. ಅಶ್ವತ್ ನಾರಾಯಣ ಕಿಡಿ ಕಾರಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಿಂದಲೇ ಸರ್ಕಾರದ ಗ್ಯಾರಂಟಿಗೆ ಹಣ ಬರುತ್ತಿದೆ ಆದರೆ ಕಾಂಗ್ರೆಸ್ ಬೆಂಗಳೂರಿಗೆ ಹಣ ಕೊಡುತ್ತಿಲ್ಲ ಎಂದು ಪ್ರತಿಭಟನೆಯಲ್ಲಿ ಡಾ. ಅಶ್ವತ್ ನಾರಾಯಣ ಕಿಡಿಕಾರಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿಯಿಂದ ರಾಜ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಬೆಂಗಳೂರು ನಗರದಲ್ಲಿ ಯಾವ ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ. ಆದರಿಂದ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಗುಂಡಿ ಬಿದ್ದಿದೆ. ಬೆಂಗಳೂರಿನ ಬಗ್ಗೆ ಕಾಂಗ್ರೆಸ್ ಗೆ ಕಾಳಜಿ ಇಲ್ಲ. ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಬಲಿಷ್ಠರಾಗುತ್ತಾರೆ ಎಂದು ಸಿಎಂ ಹಣ ಕೊಡುತ್ತಿಲ್ಲ ಎಂದರು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜಗಳದಿಂದ ಬೆಂಗಳೂರಿನ ಜನರಿಗೆ ಅನ್ಯಾಯವಾಗುತ್ತಿದೆ.ಈ ಸರ್ಕಾರಕ್ಕೆ ಕಿಂಚಿತ್ತು ಸ್ವಾಭಿಮಾನ ಇಲ್ಲ. ಸಿಎಂ ಗೆ…
ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ಗೆ ವಹಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಸಚಿವ ನಾಗೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಯಾವ ರೀತಿ ಗುರುಪಯೋಗ ಆಗಿದೆ. ಈ ಬಗ್ಗೆ ನಾವು ಪರಿಶೀಲನೆ ಮಾಡುತ್ತಿದ್ದೇವೆ. ನಿಗಮದ ಎಮ್ ಡಿ ಕೂಡ ದೂರು ಮಾಡಿದ್ದಾರೆ.ನಮ್ಮ ಇಲಾಖೆ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ.ಎಮ್ ಡಿ ಅವರ ಸಹಿಗೆ ಕಳುಹಿಸಿದ್ದೇವೆ ಎಂದು ತಿಳಿಸಿದರು. ಸುಮಾರು 87 ಕೋಟಿ ಬ್ಯಾಂಕ್ ನಿಂದ ಹಣ ವರ್ಗಾವಣೆ ಆಗಿದೆ ಎಂದು ತಿಳಿದು ಬಂದಿದ್ದು ಇಲ್ಲಿವರೆಗೆ 28 ಕೋಟಿ ಅಧಿಕಾರಿ ಆಗಿದ್ದು ಉಳಿದ ಹಣವನ್ನು ಇಂದು ಸಂಜೆ ಒಳಗೆ ರಿಕವರಿ ಮಾಡಲಾಗುತ್ತದೆ ಎಂದು ಎಂಡಿ ಅವರು ತಿಳಿಸಿದ್ದಾರೆ ಎಂದು ಸಚಿವ ನಾಗೇಂದ್ರ ತಿಳಿಸಿದರು. ಸಂಜೆಯ ಒಳಗೆ ಸಂಬಂಧಪಟ್ಟ ಖಾತೆಗೆ ಹಣ ರಿಕವರಿ ಯಾಗುತ್ತದೆ ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ್ದೇವೆ ಎಲ್ಲಾ ಹಣ ನಿಗಮದ ಖಾತೆಗೆ ವಾಪಸ್ ಬರಬೇಕು ಗಡವ…