Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಮುಂದಿನ 5 ವರ್ಷದಲ್ಲಿ ಬಿಜೆಪಿ ಜೊತೆಗೆ ಸೇರಿ ಸರ್ಕಾರ ಮಾಡುತ್ತೇನೆ. ಆಗ ನಾವು ರಾಮರಾಜ್ಯದ ಸರ್ಕಾರ ಮಾಡಬಹುದು. ನಾನು ರಾಮರಾಜ್ಯ ಮಾಡದಿದ್ದರೆ ರಾಜಕಾರಣದಲ್ಲಿ ಇರುವುದಿಲ್ಲ ಎಂದು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು. ಇಂದು ಮೈಸೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮುಂದಿನ ಬಾರಿ ಬಿಜೆಪಿ ಜೆಡಿಎಸ್ ಸರ್ಕಾರ ತಪ್ಪಿಸಲು ಸಾಧ್ಯವಿಲ್ಲ. 2028ಕ್ಕೆ ಅಧಿಕಾರಕ್ಕೆ ಬರುತ್ತೇವೆ ಎಂದು ಕಾಂಗ್ರೆಸ್ನವರು ಹೇಳುತ್ತಾರೆ. ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದೆ ಅಂತಿಮವಲ್ಲ. ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಗೆಲ್ಲುವುದು ಸಾಮಾನ್ಯ. 18 ಶಾಸಕರನ್ನು ಕರೆದೊಯ್ದಿದ್ದ ವೇಳೆ ಬಿಜೆಪಿ 17 ಸ್ಥಾನದಲ್ಲಿ ಗೆದ್ದಿತ್ತು ನಂತರ ನಡೆದ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಸ್ಥಾನ ಪಡೆದರು? 2023ರಲ್ಲಿ ಬಿಜೆಪಿಗೆ ಆದ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೂ ಬರುತ್ತದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಗೆ ಉತ್ತಮ ಭವಿಷ್ಯವಿದೆ. ಇದಕ್ಕೆ ಕಾರಣ ಕಾಂಗ್ರೆಸ್ ಸರ್ಕಾರದ ಕೆಟ್ಟ ಆಡಳಿತ…
ಬೆಂಗಳೂರು : ಜಪ್ತಿ ಮಾಡಿದಂತಹ ಆಟೋವನ್ನು ಬಿಡುಗಡೆಗೊಳಿಸಲು ಎಎಸ್ಐ ಅಧಿಕಾರಿ ಒಬ್ಬ ಆಟೋ ಚಾಲಕನ ಬಳಿ 40,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬೆಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ನಡೆದಿದೆ. ಬೆಂಗಳೂರಿನ ಸಂಜಯ್ ನಗರ ಠಾಣೆಯ ASI ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಜಪ್ತಿ ಮಾಡಿದ್ದ ಆಟೋ ಬಿಡುಗಡೆಗಾಗಿ 40,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಎಎಸ್ಐ ವಿಜಯಕುಮಾರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. 50 ಸಾವಿರ ರೂಪಾಯಿ ಲಂಚ ನೀಡುವಂತೆ ಎಎಸ್ಐ ವಿಜಯಕುಮಾರ್ ಬೇಡಿಕೆ ಇಟ್ಟಿದ್ದ. ಮೊಹಮ್ಮದ್ ಸುಜತ್ ನಿಂದ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಬ್ರೋಕರ್ ಸಯ್ಯದ್ ರಿಜ್ವಾನ್, ಎ ಎಸ್ ಐ ವಿಜಯ್ ಕುಮಾರ್ ನನ್ನು ಇದೀಗ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 40,000 ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು, ವಿಜಯಕುಮಾರ್ ನನ್ನ ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ
ಬಾಗಲಕೋಟೆ : ಮೊದಲೇ ಈಗಿನ ಕಾಲದಲ್ಲಿ ಮದುವೆಯಾಗಲು ಗಂಡು ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ. ಅಂತದ್ರಲ್ಲಿ ಬ್ರೋಕರ್ ಒಬ್ಬನನ್ನು ನಂಬಿದ ವ್ಯಕ್ತಿ ಆತನಿಗೆ 4 ಲಕ್ಷ ರೂಪಾಯಿ ನೀಡಿ ಈಗಾಗಲೇ ಎರಡು ಮದುವೆಯಾಗಿದ್ದ ಮಹಿಳೆಯನ್ನು ಮದುವೆ ಮಾಡಿಸಿದ್ದಾನೆ. ಆದರೆ ಕೆಲವೇ ತಿಂಗಳಲ್ಲಿ ಆಕೆ ಗಂಡನನ್ನು ಬಿಟ್ಟು ಪರಾರಿಯಾಗಿದ್ದು, ಇತ್ತ 4 ಲಕ್ಷ ಪಡೆದು ಬ್ರೋಕರ್ ಕೂಡ ಪರಾರಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ. ಹೌದು ಕಳೆದ 2023ರಲ್ಲಿ ಕುನಾಳ ಗ್ರಾಮದ ಮ್ಯಾರೇಜ್ ಬ್ರೋಕರ್ ಸತ್ಯಪ್ಪ ಎಂಬಾತ ಮುಧೋಳ ನಗರದ ಸೋಮಶೇಖರ ಎಂಬಾತನಿಗೆ ಮದುವೆ ಮಾಡಿಸುತ್ತೇನೆ ಎಂದು 4 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದ. ಒಪ್ಪಂದದ ಪ್ರಕಾರ ಶಿವಮೊಗ್ಗದ ಮಂಜುಳಾ ಎಂಬ ಯುವತಿ ಜೊತೆ ಸೊಮಶೇಖರನ ಮದುವೆ ಆಗುತ್ತೆ. ಕೊಟ್ಟ ಮಾತಿನಂತೆ ಸೋಮಶೇಖರ್ ಬ್ರೋಕರ್ ಸತ್ಯಪ್ಪನಿಗೆ 4 ಲಕ್ಷ ನೀಡುತ್ತಾನೆ. ಆದರೆ ಒಂದು ತಿಂಗಳೊಳಗೆ ಹೆಂಡತಿ ಮಂಜುಳಾ ಶಿವಮೊಗ್ಗಕ್ಕೆ ವಾಪಾಸ್ ಹೋಗುತ್ತಾಳೆ. ಕಳೆದ ವರ್ಷ ಬಾಗಲಕೋಟೆ ಜಿಲ್ಲೆಯ ಮುಧೋಳದ ಕಾಳಿಕಾದೇವಿ ದೇಗುಲದಲ್ಲಿ ಸೋಮಶೇಖರ್…
ವಿಜಯಪುರ : ತರಗತಿಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ದೂರಿನ ಮೇರೆಗೆ ಇದೀಗ ಸರ್ಕಾರಿ ಕಾಲೇಜಿನ ಪ್ರಿನ್ಸಿಪಾಲ್ ನನ್ನು ಅರೆಸ್ಟ್ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಡೆದಿದೆ. ಬಂಧಿತ ಪ್ರಿನ್ಸಿಪಾಲ್ ನನ್ನು ಸಚಿನ್ ಕುಮಾರ್ ಪಾಟೀಲ್ ಎಂದು ತಿಳಿದುಬಂದಿದೆ.ಕಳೆದ ಜುಲೈನಲ್ಲಿ ಈ ಕೃತ್ಯ ನಡೆದಿದೆ. ಇದೀಗ ಜನವರಿ 2ರಂದು ವಿದ್ಯಾರ್ಥಿನಿಯರು ಮನಗೂಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಪ್ರಾಂಶುಪಾಲ ವಿದ್ಯಾರ್ಥಿನಿಯರ ಮೈ-ಕೈ ಮುಟ್ಟುವುದು ಹಾಗೂ ಅಪ್ಪಿಕೊಳ್ಳುತ್ತಿದ್ದ. ಪ್ರತಿರೋಧಿಸಿದರೆ, ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ಬೆದರಿಸುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಚಿನ್ ಪಾಟೀಲ್ ಕಿರುಕುಳಕ್ಕೆ ವಿದ್ಯಾರ್ಥಿನಿ ಒಬ್ಬಳು ಅರ್ಧಕ್ಕೆ ಕಾಲೇಜು ಬಿಟ್ಟಿದ್ದಳು. ಅಲ್ಲದೆ ಮೊದಲ ಸೆಮಿಸ್ಟರ್ ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ ಕೂಡ ಫೇಲ್ ಮಾಡಲಾಗಿತ್ತು ಇದನ್ನು ಪ್ರಶ್ನಿಸಿದಾಗ ನನಗೆ ಸಹಕರಿಸಿದರೆ ಟಾಪರ್ ಮಾಡುತ್ತೇನೆ ಎಂದು ಹೇಳಿದ್ದನಂತೆ. ಇನ್ನು ಇನ್ನೊರ್ವ ವಿದ್ಯಾರ್ಥಿನಿಗೆ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಗೆ ಹೋದಾಗಲೂ ಕಿರುಕುಳ ನೀಡಲಾಗಿತ್ತು ಎಂದು ದೂರಲಾಗಿದೆ. ಈ ದೂರಿನ…
ಬೆಂಗಳೂರು : ಕಳೆದ ವರ್ಷ ರಾಜ್ಯದ ಬಳ್ಳಾರಿ ಬೆಳಗಾವಿ ರೈಚೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣಗಳು ನಡೆದಿತ್ತು. ಇದೀಗ ಈ ಒಂದು ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಚೌದರಿ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಕರಣದ ವರದಿಯನ್ನು ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಹೆರಿಗೆಯ ನಂತರ ತಾಯಂದಿರ ಸಾವುಗಳ ಬಗ್ಗೆ ರಾಜ್ಯ ಮಹಿಳಾ ಆಯೋಗದ ವರದಿ ಗಂಭೀರ ಸಮಸ್ಯೆಗಳನ್ನು ಬಹಿರಂಗಪಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಅನುಚಿತ ನೈರ್ಮಲ್ಯ, ಸಿಬ್ಬಂದಿ ಕೊರತೆ, ಪೌಷ್ಟಿಕಾಂಶದ ಕೊರತೆ ಮತ್ತು ಸೂಕ್ತ ವೈದ್ಯಕೀಯ ಸೌಲಭ್ಯಗಳ ಕೊರತೆಯನ್ನು ವರದಿ ಉಲ್ಲೇಖಿಸಿದೆ. ತುರ್ತು ಆರೋಗ್ಯ ಸುಧಾರಣೆಗಳನ್ನು ಕೈಗೊಳ್ಳುವಂತೆ ವರದಿ ಶಿಫಾರಸು ಮಾಡಿದೆ. ವರದಿಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿನ ನೀರಿನ ಟ್ಯಾಂಕ್ಗಳಲ್ಲಿ ಪಾಚಿಕಟ್ಟಿದ್ದು ನೀರು ಕಲುಷಿತಗೊಂಡಿದ್ದು ಅದೇ ನೀರು ಹೆರಿಗೆ ಕೊಠಡಿಗೂ ಸರಬರಾಜು ಆಗುತ್ತಿದೆ. ಆ ನೀರಿನಲ್ಲಿ ಅಪಾಯಕಾರಿ ಬ್ಯಾಕ್ಟಿರಿಯಾಗಳು ಇರುವ ಸಾಧ್ಯತೆ ಇದ್ದು ಪ್ರಾಣಾಪಾಯಕ್ಕೂ ಎಡೆಮಾಡಿಕೊಡುವ ಸಂಭವವಿರುತ್ತದೆ. ಹಾಗಾಗಿ ಆಸ್ಪತ್ರೆಗಳಲ್ಲಿನ ನೀರಿನ…
BREAKING : ಬೆಂಗಳೂರಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್ : ಪತ್ನಿ ನಿಖಿತಾ ಸೇರಿ ಮೂವರಿಗೆ ಜಾಮೀನು ಮಂಜೂರು!
ಬೆಂಗಳೂರು : ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತರ ಪ್ರದೇಶದ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಒಂದು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಅತುಲ್ ಸುಭಾಷ್ ಪತ್ನಿ ನಿಖಿತಾ ಸಿಂಘಾಣಿಯ, ನಿಖಿತಾ ತಾಯಿ ನಿಶಾ ಹಾಗೂ ಅನುರಾಗ್ ಗೆ ಬೆಂಗಳೂರಿನ 29ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಮಂಜೂರು ನೀಡಿ ಆದೇಶಿಸಿದೆ. ಹೌದು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಪತ್ನಿ ನಿಕಿತಾ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ನಿಖಿತಾ ಸೇರಿ ಮೂವರಿಗೆ ಜಾಮೀನು ಮಂಜೂರು ನೀಡಿ ಆದೇಶಸಿದೆ. ಬೆಂಗಳೂರಿನ 29ನೇ ಸಿಸಿಎಚ್ ನ್ಯಾಯಾಲಯದಿಂದ u ಆದೇಶ ಹೊರಡಿಸಲಾಗಿದೆ. ಪತ್ನಿ ನಿಖಿತ ಸಿಂಘಾಣಿಯ ನಿಶಾ ಹಾಗೂ ಸಹೋದರ ಅನುರಾಗ ಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ. ಪ್ರಕರಣದ ಹಿನ್ನೆಲೆ? ಪತ್ನಿ ಹಾಗೂ ಆಕೆಯ ಮನೆಯವರು ಕಿರುಕುಳ ನೀಡಿರುವುದಾಗಿ ಆರೋಪಿಸಿ ಸುದೀರ್ಘ ಡೆತ್ ನೋಟ್ ಬರೆದು…
ರಾಮನಗರ : ರಾಮನಗರದಲ್ಲಿ ಇಂದು ಘೋರವಾದಂತಹ ದುರಂತ ನಡೆದಿದ್ದು, ಬಾಯ್ಲರ್ ಸ್ಪೋಟಗೊಂಡು ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಈ ಒಂದು ಅವಘಡ ಸಂಭವಿಸಿದೆ. ರಾಮನಗರದ ಆರ್ಬಿಟ್ ಪವರ್ ಕಂಪನಿಯಲ್ಲಿ ಬಾಯ್ಲರ್ ಸ್ಪೋಟವಾಗಿದೆ.ಉತ್ತರ ಭಾರತದ ಮೂಲದ ಅಮ್ಬ್ಲೇಶ್ ಹಾಗೂ ತರುಣ್, ಉಮೇಶ್, ಸಂತುನ್ ಹಾಗೂ ಲಖನ್ ಗೆ ಗಂಭೀರವಾದ ಗಾಯಗಳಾಗಿವೆ.ಐವರು ಗಾಯಾಳುಗಳ ಪೈಕಿ ಮೂವರ ಸ್ಥಿತಿ ಚಿಂತಾ ಜನಕವಾಗಿದೆ. ಗಾಯಾಳುಗಳಿಗೆ ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬಿಡದಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಪಲ್ಟಿಯಾಗಿದ್ದು ಪ್ರವಾಸಕ್ಕೆ ಎಂದು ತೆರಳಿದ್ದ 45 ಪ್ರಯಾಣಿಕರಲ್ಲಿ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುಂಬ್ರಿ ಎಂಬ ಗ್ರಾಮದಲ್ಲಿ ನಡೆದಿದೆ. ಪ್ರವಾಸಕ್ಕೆ ಎಂದು ತೆರಳಿದ್ದ ಬೆಂಗಳೂರು ಮೂಲದ ಪ್ರವಾಸಿಗರಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುಂಬ್ರಿ ಗ್ರಾಮದಲ್ಲಿ ಬೆಂಗಳೂರು ಮೂಲದ ಬಸ್ ಪಲ್ಟಿಯಾಗಿದೆ. ಶೃಂಗೇರಿ ಶಾರದಾ ಮಠಕ್ಕೆಂದು ಪ್ರವಾಸಿಗರು ಬಂದಿದ್ದರು. ಶೃಂಗೇರಿಯಿಂದ ಹೊರನಾಡಿಗೆ ತೆರಳುತ್ತಿದ್ದ ವೇಳೆ ಬಸ್ ಪಲ್ಟಿಯಾಗಿದೆ. ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿ ಯಾದ ಬಳಿಕ ಬಸ್ ನಲ್ಲಿ ಇದ್ದಂತಹ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಘಟನೆ ಕುರಿತಂತೆ ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಚಲಿಸುತ್ತಿದ್ದ ಐರಾವತ ಬಸ್ಸಿನ ಇಂಜಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 45 ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿ ಈ ಒಂದು ಘಟನೆ ನಡೆದಿದೆ. KA 57 F 0984 ಸಂಖ್ಯೆಯ ಐರಾವತ ಬಸ್ ನಲ್ಲಿ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಗಳೂರಿನಿಂದ ಈ ಒಂದು ಐರಾವತ ಬಸ್ ಚಿಕ್ಕಮಂಗಳೂರಿಗೆ ತೆರಳುತ್ತಿತ್ತು. ಐರಾವತ ಬಸ್ ನಲ್ಲಿ ತೆರಳುತ್ತಿದ್ದ 45 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ, ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಬಳಿಕ ಸಾರಿಗೆ ಸಂಸ್ಥೆಯಿಂದ ಮತ್ತೊಂದು ಬಸ್ ವ್ಯವಸ್ಥೆ ಮಾಡಿ ಪ್ರಯಾಣಿಕರನ್ನು ಕಳುಹಿಸಿಕೊಡಲಾಗಿದೆ. ಘಟನೆ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಕಳೆದ ವರ್ಷ ಬಳ್ಳಾರಿ ಬೆಳಗಾವಿ ಹಾಗೂ ರಾಯಚೂರಿನಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಈ ಒಂದು ಬಾಣಂತಿಯರ ಮರಣ ಮೃದಂಗ ಮುಂದುವರೆದಿದ್ದು ಶಿವಮೊಗ್ಗದ ಮೆಗನ್ ಆಸ್ಪತ್ರೆಯಲ್ಲಿ ಬಾಣಂತಿ ಸಾವಾಗಿದೆ.ನಿನ್ನೆ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೌದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ವಾರ್ಡ್ ನಲ್ಲಿ ಬಾಣಂತಿಯ ಸಾವಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ಮೂಲದ ಕವಿತಾ ಎನ್ನುವ ಬಾಣಂತಿಯ ಸಾವಾಗಿದೆ. ಎರಡು ದಿನದ ಹಿಂದೆ ಕವಿತಾ ಹೆರಿಗೆಗಾಗಿ ಶಿವಮೊಗ್ಗದ ಮೆಗ್ನ ಆಸ್ಪತ್ರೆಗೆ ದಾಖಲಾಗಿದ್ದರು.ನಿನ್ನೆ ಬೆಳಿಗ್ಗೆ 8 ಗಂಟೆಗೆ ಹೆಣ್ಣು ಮಗುವಿಗೆ ಕವಿತಾ ಜನ್ಮ ನೀಡಿದ್ದಾರೆ. ಹೆರಿಗೆ ಬಳಿಕ ಕವಿತಾಗೆ ದಿಢೀರ್ ರಕ್ತ ಹೆಪ್ಪುಗಟ್ಟಿದೆ. ಹೆರಿಗೆ ಬಳಿಕ ಕವಿತಾ ದೇಹದಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಬಾಣಂತಿ ಕವಿತಾ ಸಾವು ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕವಿತಾ ಮಗು ಆರೋಗ್ಯವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಬಾಣಂತಿ ಸಾವಿನ ಬಗ್ಗೆ ಕುಟುಂಬಸ್ಥರು ಯಾವುದೇ ದೂರು…














