Author: kannadanewsnow05

ಬೆಂಗಳೂರು : ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ಮ ಸುಮ್ಮನೆ ಬರುವುದಿಲ್ಲ. ಇಂಥಾ ತೀರ್ಮಾನ ಮಾಡಬೇಕಾಗುತ್ತದೆ.ಒಳಮೀಸಲಾತಿಗಾಗಿ ಮಾದಿಗ ಸಮುದಾಯ ದಶಕಗಳಿಂದ ಹೋರಾಟ ನಡೆಸಿದೆ. ಈಗ ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಒಳಮೀಸಲಾತಿ ಕುರಿತ ಸಚಿವ ಸಂಪುಟದ ನಿರ್ಣಯಕ್ಕಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನ ಅಭಿನಂದಿಸಿದ ಮಾದಿಗ ಸಮುದಾಯದ ರಾಜ್ಯ ಮುಖಂಡರು, ಒಳಮೀಸಲಾತಿ ಹೋರಾಟದ ನಾಯಕರು, ಪದಾಧಿಕಾರಿಗಳು ಮತ್ತು ಸಮುದಾಯದ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಎಲ್ಲರನ್ನೂ ಸಮಾಧಾನ ಮಾಡುವುದು ಸಾಧ್ಯವಿಲ್ಲದಿದ್ದರೂ, ಶೇ.90 ರಷ್ಟು ಸಮುದಾಯಗಳಿಗೆ ಸಮಾಧಾನ‌ ಆಗುವ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದನ್ನು ನಮ್ಮ‌ ಸರ್ಕಾರ ಮಾಡಲಿದೆ ಎಂದರು. ಗೃಹ ಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ನಡೆದ ದಲಿತ ಶಾಸಕರ ಸಭೆಯಲ್ಲಿ, “ಒಳ ಮೀಸಲಾತಿಗೆ ತಮ್ಮ ವಿರೋಧ ಇಲ್ಲ”…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಅಕ್ರಮ ಎಸಗಿದವರಿಗೆ ಇಡಿ ಅಧಿಕಾರಿಗಳು ಚುರುಕು ಮುಟ್ಟಿಸುತ್ತಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆ ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿತ್ತು. ಇದೀಗ ಇಡಿ ಹಿಟ್ ಲಿಸ್ಟ್ ನಲ್ಲಿ 20ಕ್ಕೂ ಹೆಚ್ಚು ಜನಪ್ರತಿನಿಧಿಗಳು ಹಾಗೂ ಉದ್ಯಮಿಗಳ ಹೆಸರು ಇದೆ ಎನ್ನಲಾಗಿದೆ. ಅಲ್ಲದೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಪಟ್ಟಂತಹ ಬೆಂಗಳೂರಿನ ಜೆಪಿ ನಗರದಲ್ಲಿರುವ ಬಿಲ್ಡರ್ ಮಂಜುನಾಥ್ ನಿವಾಸದ ಮೇಲು ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೇ ನಡೆಸಿದ್ದರು. ಅದಾದ ಬಳಿಕ ಇನ್ನೊಬ್ಬ ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರ ನಿವಾಸದ ಮೇಲು ಇಡೀ ಅಧಿಕಾರಿಗಳು ದಾಳಿ ಮಾಡಿದ್ದರು. ನಿನ್ನೆ ಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕ ಕೂಡಲೇ ವಾಕಿಂಗ್ ಗೆ ಹೋಗಿದ್ದ ದಿನೇಶ್ ಕುಮಾರ್ ಅಲ್ಲಿಂದಲೇ ಪರಾರಿಯಾಗಿದ್ದಾರೆ. ಹಾಗಾಗಿ ಇಂದು ಈಡೇ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ದಿನೇಶ್…

Read More

ವಿಜಯಪುರ : ಜಿಲ್ಲೆಯ ಸಾವಿರಾರು ಎಕರೆ ಭೂಮಿ ವಕ್ಫ್ ಭೂಮಿಗೆ ಸೇರಿದ್ದು ಎಂದು ಸರ್ಕಾರದಿಂದ ರೈತರಿಗೆ ನೋಟಿಸ್ ನೀಡಿದ ವಿಚಾರವಾಗಿ, ನಿನ್ನೆ ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದರು.ಇದೀಗ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ವಿರಕ್ತ ಮಠದ ಆಸ್ತಿ ಕೂಡ ವಕ್ಫ್ ಗೆ ಆಸ್ತಿಗೆ ಸೇರಿದೆ ಎಂದು ಹೇಳಲಾಗುತ್ತಿದೆ. ಹೌದು ಸಿಂದಗಿ ಪಟ್ಟಣದ ವಿರಕ್ತ ಮಠದ ಆಸ್ತಿ ಇದೀಗ ವಕ್ಫ್ ಆಸ್ತಿಯಾಗಿದೆ. ಸರ್ವೆ ನಂ 1020 ರ ಅಸ್ತಿಯಲ್ಲಿ ಕಬರಸ್ಥಾನ ವಕ್ಫ್ ಬೋರ್ಡ್‌ ಎಂದು ನೋಂದಣಿಯಾಗಿದೆ.ಸಿದ್ದಲಿಂಗ ಸ್ವಾಮಿಜಿಗಳು ಈ ಮಠದ ಪೀಠಾಧಿಪತಿಗಳಾಗಿದ್ದಾಗ ಪಹಣಿಯ ಕಾಲಂ ನಂ 11 ಖಾಲಿ ಇತ್ತು. 2018-19 ರಲ್ಲಿ ಖಾಲಿ ಇದ್ದ ಕಲಂ ನಲ್ಲಿ ವಕ್ಫ್ ಬೋರ್ಡ್‌ ಎಂದು ಸೇರ್ಪಡೆಯಾಗಿದೆ. 13ನೇ ಶತಮಾನದಲ್ಲಿ ಸ್ಥಾಪನೆಯಾಗಿರುವ ಮಠ ಖಬರಸ್ಥಾನ ವಕ್ಫ್ ಬೋರ್ಡ್‌ ಆಗಿದ್ದು ಹೇಗೆ? ವಕ್ಫ್ ಬೋರ್ಡ್‌ಗೆ 1.28 ಎಕರೆ ಆಸ್ತಿಯನ್ನು ಸೇರಿಸಿದ್ದಕ್ಕೆ ಮಠದ ಭಕ್ತರ ತೀವ್ರ ವಿರೋಧ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದೆ ರೀತಿ ಸಿಂದಗಿ ತಾಲೂಕಿನಲ್ಲಿ…

Read More

ಬೆಂಗಳೂರು : ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ವಕ್ಫ್ ಆಸ್ತಿಯೆಂದು ಯಾವ ರೈತರಿಗೂ ನೋಟೀಸ್ ಕೊಟ್ಟಿಲ್ಲ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಈ ವಿಚಾರದಲ್ಲಿ ಬಿಜೆಪಿ ಬೇಕೆಂದೇ ರಾಜಕೀಯ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಇಂದು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಮಾತನಾಡಿ, ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಒಂದು ಕಾಲಕ್ಕೆ 14,201.32 ಎಕರೆ ವಕ್ಫ್ ಮಂಡಳಿ ಆಸ್ತಿಯಾಗಿತ್ತು. ಈ ಪೈಕಿ ಭೂ ಸುಧಾರಣಾ ಕಾಯ್ದೆಯಡಿ 11,835.29 ಎಕರೆ ಮತ್ತು ಇನಾಂ ರದ್ದತಿ ಕಾಯ್ದೆಯಡಿ 1,459.26 ಎಕರೆಯನ್ನು ರೈತರಿಗೆ ಮಂಜೂರು ಮಾಡಲಾಗಿದೆ ಎಂದರು. ಜಮೀರ್ ಅಹ್ಮದ್ ಮಾತನಾಡಿ, ಹೊನವಾಡದಲ್ಲಿ…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಬಾಬುಸಾಬ್ ಪಾಳ್ಯ ದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಭೀಕರ ದುರಂತದಲ್ಲಿ 8 ಜನ ಕಾರ್ಮಿಕರು ಮೃತಪಟ್ಟಿದ್ದರು. ಇದೀಗ ಮೃತ ಕುಟುಂಬಸ್ಥರಿಗೆ ಸಚಿವ ಸಂತೋಷ್ ಲಾಡ್ ಪರಿಹಾರದ ಚೆಕ್ ವಿತರಿಸಿದ್ದಾರೆ. ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಜನರು ಕಾರ್ಮಿಕರು ಸಾವನ್ನಪ್ಪಿದ್ದರು. ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಸೂಕ್ತ ಮಾಹಿತಿ ಪಡೆದುಕೊಂಡರು.ಬಳಿಕ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ. ಇದೀಗ ಬೆಂಗಳೂರಿನ ವಿಕಾಸ ಸೌಧದಲ್ಲಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃತ ಕುಟುಂಬಸ್ಥರಿಗೆ 2.04 ಲಕ್ಷ ಪರಿಹಾರದ ಚೆಕ್ ವಿತರಿಸಿದ್ದಾರೆ.

Read More

ಕಲಬುರ್ಗಿ : ಸುಮಾರು 13 ವರ್ಷಗಳ ಕಾಲ ಪ್ರೀತಿಸಿದ ಹುಡುಗಿ ಬೇರೊಬ್ಬನ ಜೊತೆಗೆ ಮದುವೆಯಾಗಿದ್ದು ಅಲ್ಲದೆ,ಮದುವೆಯಾದ ಬಳಿಕ ಸುಮ್ಮನಿರದೆ ಪುನಃ ತನ್ನನ್ನು ಮದುವೆಯಾಗು ಇಲ್ಲವಾದರೆ ಪೊಲೀಸ್ ಕಂಪ್ಲೇಂಟ್ ಕೊಡುವುದಾಗಿ ಬೆದರಿಕೆ ಒಡ್ಡಿದ್ದಾಳೆ. ಇದರಿಂದ ಮನನೊಂದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಡಕಿ ಗ್ರಾಮದಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಯುವಕನನ್ನು ದೇವೇಂದ್ರಪ್ಪ ಕಲಕೇರಿ (32) ಎಂದು ತಿಳಿದುಬಂದಿದೆ. ದೇವಿಂದ್ರಪ್ಪ ಅದೇ ಗ್ರಾಮದ ಯುವತಿಯನ್ನು ಪ್ರೀತಿಸಿದ್ದ. ನಾಲ್ಕು ವರ್ಷದ ಹಿಂದೇಯೆ ಯುವತಿ ಬೇರೊಬ್ಬನನ್ನು ಮದುವೆಯಾಗಿ ಬೆಂಗಳೂರಿನಲ್ಲಿ ಚಿಕ್ಕಪ್ಪ ಹಾಗೂ ಗಂಡನ ಜೊತೆಗೆ ವಾಸಿಸುತ್ತಿದ್ದಳು. ಮದುವೆ ಆದರೂ ಕೂಡ ದೇವೇಂದ್ರಪ್ಪನಿಗೆ ಕರೆ ಮಾಡಿ ನನ್ನನ್ನು ಮದುವೆಯಾಗುವಂತೆ ಎಂದು ದುಂಬಾಲು ಬಿದ್ದಿದ್ದಳು. ಯುವತಿ ಒತ್ತಾಯಿಸಿದರಿಂದ ದೇವೇಂದ್ರಪ್ಪ ಬೆಂಗಳೂರಿಗೆ ತೆರಳಿದ್ದಾನೆ.ಅಲ್ಲಿ ಚಿಕ್ಕಪ್ಪ ಎಂದು ಪರಿಚಯಿಸಿದ್ದ ವ್ಯಕ್ತಿಯೊಂದಿಗೆ ಮಲಗಿರುವುದನ್ನು ನೋಡಿ ತಾನು ಆಘಾತಗೊಂಡಿದ್ದಾಗಿಯೂ, ನಂತರ ನಡೆದ ಮಾತಿನ ಚಕಮಕಿ ವೇಳೆ ಆ ವ್ಯಕ್ತಿಗೆ ಚಾಕು…

Read More

ಹಾವೇರಿ : ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆಗೆ ಭರದ ಸಿದ್ಧತೆ ನಡೆದಿದ್ದು ಈಗಾಗಲೇ ಉಭಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿವೆ. ಇನ್ನು ಶಿಗ್ಗಾವಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಸಂಸದ ಮಂಜುನಾಥ್ ಕುನ್ನೂರ್ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ. ಹೌದು ಶಿಗ್ಗಾವಿಯಲ್ಲಿ ಯಾಸಿರ್​ ಪಠಾಣ್​​​ಗೆ ಕಾಂಗ್ರೆಸ್​​​ ಟಿಕೆಟ್​ ನೀಡಿದ್ದಕ್ಕೆ ಬಂಡಾಯವೆದ್ದ ಅಜ್ಜಂಪೀರ್​ ಖಾದ್ರಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಚರ್ಚಿಸಿದ ಬಳಿಕ ನಾಮಪತ್ರ ಹಿಂಪಡೆಯುವುದಾಗಿ ತಿಳಿಸಿದ್ದಾರೆ. ಆದರೆ ಇದೀಗ ಅಗತ್ಯ ಹಾಗೂ ಸಮರ್ಪಕ ವಿವರ ನೀಡಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ್ ಕುನ್ನುರ್ ಸಲ್ಲಿಸಿದ ನಾಮಪತ್ರ ತಿರಸ್ಕೃತಗೊಂಡಿದೆ. ತಮ್ಮ ಪುತ್ರ ರಾಜು ಕುನ್ನೂರ್ ಅವರಿಗೆ ಟಿಕೆಟ್​ ಕೈತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮಂಜುನಾಥ್ ಅವರು ಪಕ್ಷಕ್ಕೆ ಈ ಮೂಲಕ ಬಂಡಾಯದ ಬಿಸಿಯನ್ನು ಮುಟ್ಟಿಸಿದ್ದಾರೆ. ಇನ್ನು ಯಾವುದೇ ಬಂಡಾಯದ ಬಿಸಿ ಹೆಚ್ಚಾಗಲು ಬಿಡಲ್ಲ. ಎಲ್ಲರೂ ಒಟ್ಟಾಗಿ ಚುನಾವಣೆಯ ಎದುರಿಸುತ್ತೇವೆ. ಖಾದ್ರಿ ಅವರು ತಮ್ಮ ನಾಮಪತ್ರವನ್ನು ವಾಪಸ್​ ಪಡೆಯಲಿದ್ದಾರೆ ಎಂದು ಕೆಪಿಸಿಸಿ…

Read More

ಹೈದ್ರಾಬಾದ್ : ಇತ್ತೀಚಿನ ದಿನಗಳಲ್ಲಿ ಯುವ ಜನತೆಗೆ ಮನೆ ಊಟಕ್ಕಿಂತ ಸ್ಟ್ರೀಟ್ ಫುಡ್, ಜಂಕ್ ಫುಡ್ ಹಾಗೂ ಹೋಟೆಲ್ ಗಳಲ್ಲಿನ ಊಟ ನೆಚ್ಚಿನ ಆಹಾರವಾಗಿದೆ. ಆದರೆ ಈ ಒಂದು ಆಹಾರ ಪದ್ಧತಿ ನಮ್ಮ ದೇಹದ ಮೇಲೆ ಎಷ್ಟು ದುಷ್ಪರಿಣಾಮ ಬೀರುತ್ತದೆ ಎಂಬುದು ಅವರಿಗೆ ಅರಿವಿಲ್ಲ. ಇದೀಗ ಹೈದರಾಬಾದ್ ನಲ್ಲಿ ಮೊಮೋಸ್ ತಿಂದು ಓರ್ವ ಮಹಿಳೆ ಸಾವನಪ್ಪಿದ್ದು, 50 ಜನರು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಹೌದು ಈ ಒಂದು ಘಟನೆ ಹೈದ್ರಾಬಾದ್ ನ ಬಂಜಾರ ಹಿಲ್ಸ್ ಪಿಎಸ್ ನಲ್ಲಿ ನಡೆದಿದೆ. ಮೃತ ಯುವತಿಯನ್ನು ಸಿಗದಕುಂಟಾ ಬಸ್ತಿಯ ನಿವಾಸಿಯಾದ ರೇಷ್ಮಾ (29) ಎಂದು ತಿಳಿದುಬಂದಿದೆ. ರೇಷ್ಮಾ ಬೀದಿಬದಿ ಆಹಾರ ತಿಂದಿದ್ದಾಳೆ. ಆರೋಗ್ಯದಲ್ಲಿ ಏರುಪೇರು ಕಂಡುಬಂದ ಕೂಡಲೇ ಮನೆಯವರು ನಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಆದರೆ ಆಕೆಯ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಪ್ರತಿ ವಾರದಂತೆ ಈ ವಾರವೂ ನಂದಿನಗರದಲ್ಲಿ ಸಂತೆ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿ ತಯಾರಾದ ಮೊಮೊಸ್ ಗಳನ್ನು ಹಲವರು ಖರೀದಿಸಿ ತಿಂದರು. ಮೊಮೊಸ್…

Read More

ಬೆಳಗಾವಿ : ರೈತರೊಬ್ಬರ ಹೊಲದಲ್ಲಿ ಈಜಲು ತೆರಳಿದ್ದಾಗ ವಸತಿ ನಿಲಯದ ವಿದ್ಯಾರ್ಥಿಯೊಬ್ಬ ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೈಲಹೊಂಗಲ ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದ ರಜತ್ ಕಲ್ಲೊಳ್ಳಿ (17) ಎಂದು ತಿಳಿದುಬಂದಿದೆ. ರಜತ್ ಬೈಲಹೊಂಗಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಬರುವ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಯಾಗಿದ್ದ ಎನ್ನಲಾಗುತ್ತಿದೆ. ಇನ್ನು ರಜತ್ ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಗೆಳೆಯರ ಜೊತೆಗೆ ಹೊಂಡದಲ್ಲಿ ಈಜಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೈಲಹೊಂಗಲ ತಹಶಿಲ್ದಾರ ಹನುಮಂತ ಶಿರಹಟ್ಟಿ, ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲಿನಲ್ಲಿ ಇರುವಂತಹ ನಟ ದರ್ಶನ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನಾಳೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ. ವಿಚಾರಣೆಯ ವೇಳೆ ನಟ ದರ್ಶನ್ ಅವರ ಬೆನ್ನು ನೋವಿನ ವರದಿಯನ್ನು ಕೋರ್ಟಿಗೆ ಸಲ್ಲಿಸಲಾಗಿದೆ. ಬೆನ್ನು ನೋವಿನ ಸಮಸ್ಯೆಗೆ ಸಂಬಂಧಿಸಿದಂತೆ ವೈದ್ಯಕೀಯ ವರದಿಯಲ್ಲಿ ಸ್ಪೋಟಕ ವಿಷಯ ಬಹಿರಂಗವಾಗಿದ್ದು ನಟ ದರ್ಶನ್ ಅವರ ಬೆನ್ನು ಮೂಳೆಯ L5 ಹಾಗೂ S1 ನಲ್ಲಿ ವಿಪರೀತ ನೋವು ಕಾಣಿಸಿಕೊಂಡಿದ್ದು, ಅಲ್ಲದೆ ಬೆನ್ನಿನಲ್ಲಿ ಊತ ಸಹ ಕಂಡುಬಂದಿದೆ. ಅಲ್ಲದೆ ಇತ್ತೀಚಿಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನ್ ಮಾಡಿಸಲಾಗಿತ್ತು. ಇದೆ ರೀತಿ ಮುಂದುವರೆದರೆ ನಟ ದರ್ಶನ್ ಅವರಿಗೆ ಪ್ಯಾರಲಿಸಿಸ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಂದು ನಟ ದರ್ಶನ್ ಅವರ ಆರೋಗ್ಯದ ಕುರಿತು ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ಬಳಿಕ ದರ್ಶನ್ ಪರ ವಕೀಲ…

Read More