Author: kannadanewsnow05

ತುಮಕೂರು : ಜಮೀನು ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಮಹಿಳೆ ಒಬ್ಬಳು ದೂರು ನೀಡಲು ಠಾಣೆಗೆ ಬಂದಂತಹ ಸಂದರ್ಭದಲ್ಲಿ ಆಕೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಿಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಡಿವೈಎಸ್ಪಿ ರಾಮಚಂದ್ರಪ್ಪನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಮಧುಗಿರಿ JMFC ಕೋರ್ಟ್ ಆದೇಶ ಹೊರಡಿಸಿದೆ. ಇಂದು ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ರಾಮಚಂದ್ರಪ್ಪನನ್ನು ಮಧುಗಿರಿ JMFC ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಜಡ್ಜ್ ಡಿವೈಎಸ್ಪಿ ರಾಮಚಂದ್ರಪ್ಪ ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದರು. ಸೋಮವಾರದವರೆಗೂ ಡಿವೈಎಸ್ಪಿ ರಾಮಚಂದ್ರಪ್ಪ ಮಧುಗಿರಿ ತೀರಿನಲ್ಲಿ ಇರಲಿದ್ದಾರೆ ಬಳಿಕ ಜಿಲ್ಲಾ ಕರಾಗ್ರಹಕ್ಕೆ ಶಿಫ್ಟ್ ಮಾಡುವಂತೆ ಆದೇಶ ಹೊರಡಿಸಲಾಯಿತು. ಜಮೀನು ವ್ಯಾಜ್ಯಕೆ ಸಬಂಧಿಸಿದಂತೆ ದೂರು ನೀಡಲು ಮಹಿಳೆಯೊಬ್ಬರು ಮಧುಗಿರಿ ಠಾಣೆಗೆ ಬಂದಿದ್ದಾಳೆ. ಆದರೆ ಠಾಣೆಯಲ್ಲಿದ ಡಿವೈಎಸ್ಪಿ ಅಧಿಕಾರಿ ರಾಮಚಂದ್ರಪ್ಪ ಮಹಿಳೆಯನ್ನು ಪುಸಲಾಯಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಪಾವಗಡದ ಮಹಿಳೆಯೊಬ್ಬರು ಜಮೀನು…

Read More

ಹಾಸನ : ಅನುದಾನಿತ ಶಾಲೆಯ ಅನುದಾನ ಬಿಡುಗಡೆಯ ಸಲುವಾಗಿ ಡಿಡಿಪಿಐ ಕಚೇರಿಯ ಸೂಪರಿಡಿಯೆಂಟ್ ಅಧಿಕಾರಿ ಒಬ್ಬ ಲಂಚ ಲಂಚ ಸ್ವೀಕರಿಸುತ್ತಿರುವಾಗಲೇ ಅಧಿಕಾರಿಗಳಿಗೆ ಬೆಲೆ ಬಿದ್ದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಡಿಡಿಪಿಐ ಕಚೇರಿಯಲ್ಲಿ ಅನುದಾನಿತ ಶಾಲೆಯ ಅನುದಾನ ಬಿಡುಗಡೆ ಸಂಬಂಧ ಲಂಚ ಸ್ವೀಕರಿಸುತ್ತಿದ್ದ ಸೂಪರಿಡಿಯೆಂಟ್ ವೇಣುಗೋಪಾಲ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಸದ್ಯ ವೇಣುಗೋಪಾಲನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಮನೆಯ ಕಾರ್ಯಕ್ರಮಕ್ಕೆ ಎಂದು ಬಂದಿದ್ದ ಫೋಟೋಗ್ರಾಫರ್ ಒಬ್ಬ ಯುವತಿಯನ್ನು ಪರಿಚಯ ಮಾಡಿಕೊಂಡು ಆಕೆಯ ಜೊತೆ ಲವ್ ನಾಟಕವಾಡಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಎಸಗಿದ್ದ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಂಗಳೂರಿನ ನೆಲಮಂಗಲ ಠಾಣೆಯ ಪೊಲೀಸರು ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ನೆಲಮಂಗಲದಲ್ಲಿ ಈ ಒಂದು ಲವ್ ಸೆಕ್ಸ್ ದೋಖಾ ಪ್ರಕರಣ ನಡೆದಿತ್ತು. ಯುವತಿಗೆ ವಂಚಿಸಿದ್ದ ಆರೋಪಿ ಮಧುವನ್ನು ಈಗ ಅರೆಸ್ಟ್ ಮಾಡಿದ್ದಾರೆ. ಫೋಟೋಗ್ರಾಫರ್ ಮಧು ವಿರುದ್ಧ ವಂಚನೆ ಆರೋಪ ಕೇಳಿ ಬಂದಿತ್ತು. ಫೋಟೋ ತೆಗೆಯಲು ಹೋದಾಗ ಪರಸ್ಪರ ಯುವತಿ ಮತ್ತು ಫೋಟೋಗ್ರಾಫರ್ ನಡುವೆ ಪರಿಚಯವಾಗಿದೆ.ಮನೆಯ ಕಾರ್ಯಕ್ರಮಕ್ಕೆ ಮಧು ಫೋಟೋ ತೆಗೆಯಲು ಬಂದಿದ್ದ. ಮದುವೆಯಾಗುವುದಾಗಿ ನಂಬಿಸಿ ಆರೋಪಿ ಮಧು ಯುವತಿಗೆ ವಂಚಿಸಿದ್ದಾನೆ. ಮನೆಯ ಹತ್ತಿರ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದ. ಹಾಗಾಗಿ ಮಧು ಕುಟುಂಬಸ್ಥರ ವಿರುದ್ಧ ಕೊಲೆ ಬೆದರಿಕೆ ಆರೋಪ ಕೇಳಿ ಬಂದಿದೆ. ಅಲ್ಲದೆ ಇತ್ತೀಚಿಗೆ ಆತ ಮೈಸೂರಿನ ಮತ್ತೊಬ್ಬ ಯುವತಿಯೊಂದಿಗೆ…

Read More

ಮೈಸೂರು : ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಶಾಲೆಯಲ್ಲಿ ಈ ಒಂದು ಹೊಸ ವರ್ಷಾಚರಣೆ ಆಚರಿಸುವ ವೇಳೆ ಕೇಕ್ ತಿಂದು ಸುಮಾರು 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಬೋಳನಹಳ್ಳಿಯ ಶ್ರೀ ಮಂಜುನಾಥ ಅನುದಾನಿತ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದಲ್ಲಿ ನಡೆದಿದೆ. ಹೌದು ಹೊಸವರ್ಷದ ಅಂಗವಾಗಿ ಕೇಕ್‌ ಕಟ್‌ ಮಾಡಿ ಮಕ್ಕಳಿಗೆ ವಿತರಿಸಿದ್ದಾರೆ. ಕೇಕ್‌ ತಿಂದಿದ್ದರಿಂದಾಗಿ ನಿನ್ನೆ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಮಕ್ಕಳನ್ನು ಬೋಳನಹಳ್ಳಿ ಗ್ರಾಮದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಒಮೆಲೆ ಬಂದ ಮಕ್ಕಳನ್ನು ಪರೀಕ್ಷಿಸಿದ ವೈದ್ಯೆ ದಾಕ್ಷಾಯಣಿ ಹಾಗೂ ಸಿಬ್ಬಂದಿ ಅಸ್ವಸ್ಥಗೊಂಡ ಮಕ್ಕಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದಾರೆ. ಭೇದಿ ಕಾಣಿಸಿಕೊಂಡಿದ್ದ 36 ಮಕ್ಕಳ ಪೈಕಿ 6 ಮಕ್ಕಳು ತಕ್ಷಣವೇ ಚೇತರಿಸಿಕೊಂಡಿದ್ದರಿಂದ ಮನೆಗೆ ಕಳುಹಿಸಲಾಗಿದೆ. ಉಳಿದ ಮಕ್ಕಳನ್ನು ದಾಖಲಿಸಿಕೊಂಡು ಸಂಜೆವರೆಗೆ ಚಿಕಿತ್ಸೆ ನೀಡಿದ ನಂತರ ಚೇತರಿಸಿಕೊಂಡವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.ಕೇಕ್‌ನ ಸ್ಯಾಂಪಲ್‌ ಪಡೆದಿದ್ದು, ಲ್ಯಾಬ್‌ಗೆ ಕಳುಹಿಸಲಾಗುವುದು. ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ಎಂದು ವೈದ್ಯರು…

Read More

ಹಾಸನ : ಹಾಸನದಲ್ಲಿ ಕುಡಿದ ನಶೆಯಲ್ಲಿ ಮಗನಿಂದಲೇ ತಂದೆಯ ಬರ್ಬರ ಹತ್ಯೆಯಾಗಿದ್ದು, ಕುಡಿದ ನಶೆಯಲ್ಲಿ ಪಾಪಿ ಮಗ ತಂದೆಯನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಲಿಂಗಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶಶಿಧರ್ (58) ಎಂದು ತಿಳಿದುಬಂದಿದೆ.ಕಂಠಪೂರ್ತಿ ಕುಡಿದು ತಂದೆ ಜೊತೆಗೆ ದಿನೇಶ್ ಜಗಳವಾಡಿದ್ದಾನೆ. ಮಾತಿಗೆ ಮಾತು ಬೆಳೆದು ಮಗನಿಂದ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಪಾಪಿ ಪುತ್ರ ದಿನೇಶ್ ಹತ್ಯೆ ಗೈದಿದ್ದಾನೆ. ಈ ವೇಳೆ ಗಾಬರಿಗೊಂಡು ದಿನೇಶ್ ತಾಯಿ ಮನೆಯಿಂದ ಸಹೋದರನ ಮನೆಗೆ ಹೋಗಿದ್ದಾರೆ. ಇತ್ತ ದಿನೇಶ್ ಕೊಲೆ ಮಾಡಿದ ತಂದೆಯನ್ನು ಹೃದಯಾಘಾತವಾಗಿದೆ ಎಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಆಸ್ಪತ್ರೆಯಿಂದ ಬಂದು ಅಂತ್ಯಕ್ರಿಯೆಗೂ ಕೂಡ ಗಣೇಶ ಸಿದ್ಧತೆ ಮಾಡಿಕೊಂಡಿದ್ದ ಎನ್ನಲಾಗಿದೆ. ಪೊಲೀಸರು ಆತನ ವಶಪಡಿಸಿಕೊಂಡು ವಿಚಾರಣೆಗೆ ಒಳಪಡಿಸಿದಾಗ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಸದ್ಯ ಅರೆಹಳ್ಳಿ ಠಾಣೆ ಪೊಲೀಸರು ಅರೇಸ್ಟ್ ಮಾಡಿದ್ದಾರೆ.

Read More

ದಾವಣಗೆರೆ : ಬೀದರ್ ನಲ್ಲಿ ರೈಲಿಗೆ ತಲೆ ಕೊಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಇಂದು ಕಲಬುರ್ಗಿಯಲ್ಲಿ ಬಿಜೆಪಿ ನಾಯಕರು ಸಚಿವ ಪ್ರಿಯಾಂಕ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಅಲ್ಲದೆ ರಾಜೀನಾಮೆ ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಕಾಮಗಾರಿಯಾದರೂ ಕೂಡ ಹಣ ಬಿಡುಗಡೆ ಮಾಡಿಲ್ಲ ಎಂದು ಪ್ರಥಮ ದರ್ಜೆಯ ಗುತ್ತಿಗೆದಾರರು ಒಬ್ಬರು ಸಿಎಂ ಸಿದ್ದರಾಮಯ್ಯ ಹಾಗೂ ಗವರ್ನರ್ ಅವರಿಗೆ ದಯಾಮರಣ ಕೋರಿ ಪತ್ರ ಪಡೆದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೌದು ಕಾಮಗಾರಿ ಮುಗಿದು ಒಂದು ವರ್ಷ ಪೂರೈಸಿದರೂ ಕೂಡ ಇನ್ನು ಕಾಮಗಾರಿಯ ಹಣ ಬಿಡುಗಡೆಯಾಗಿಲ್ಲ. ಅಲ್ಲದೇ ಮಗಳ ಮದುವೆಗೆ ಹಣ ಇಲ್ಲ ಎಂದು ಮನನೊಂದ ಗುತ್ತಿಗೆದಾರ ಒಬ್ಬರು ಸಿಎಂ ಸಿದ್ದರಾಮಯ್ಯ, ಗವರ್ನರ್ ಗೆ ದಯಾಮರಣ ಕೋರಿ ಪತ್ರ ಬರೆದಿರುವ ಘಟನೆ ದಾವಣಗೆರೆ ಹರಿಹರದಲ್ಲಿ ನಡೆದಿದೆ.ಹರಿಹರದ ನಿವಾಸಿ ಪ್ರಥಮ ದರ್ಜೆಯ ಗುತ್ತಿಗೆದಾರ ಮೊಹಮ್ಮದ್ ಮಝರ್ ಪತ್ರ ಬರೆದ ಗುತ್ತಿಗೆದಾರ ಎಂದು ತಿಳಿದುಬಂದಿದೆ. ಈ ಕುರಿತು…

Read More

ಬೆಂಗಳೂರು : ಸಾರಿಗೆ ಬಸ್ಗಳಲ್ಲಿ ಟಿಕೆಟ್ ಪ್ರಯಾಣದ ದರ ಶೇಕಡ 15 ಪರ್ಸೆಂಟ್ ಹೆಚ್ಚಳ ಮಾಡಿ ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರದಿಂದ ಅನುಮೋದನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿ ಇಂದಲೇ ಸಾರಿಗೆ ಬಸ್ಗಳ ಟಿಕೆಟ್ ದರ ಶೇಕಡ 15ರಷ್ಟು ಏರಿಕೆ ಆಗುವ ಸಾಧ್ಯತೆಯಿದ್ದು ಪರಿಷ್ಕೃತ ದರ ಜಾರಿ ಆಗುತ್ತದೆ. ಹೌದು ಇಂದು ಮಧ್ಯರಾತ್ರಿಯಿಂದಲೇ ಟಿಕೆಟ್ ದರ ಏರಿಕೆಯಾಗಲಿದ್ದು, KSRTC, KKRTC, NWKRTC ಹಾಗೂ BMTC ಸೇರಿ ಎಲ್ಲ ನಾಲ್ಕು ಸಾರಿಗೆ ನಿಗಮಗಳು ಅಧಿಕೃತ ಆದೇಶದ ಪ್ರತಿಗಾಗಿ ಕಾಯುತ್ತಿವೆ. ಮಧ್ಯಾಹ್ನದ ಬಳಿಕ ಆದೇಶದ ಪ್ರತಿ ಸಿಗುವ ಸಾಧ್ಯತೆ ಇದ್ದು, ಬಳಿಕ ಇಟಿಎಂ ಅಪ್ಲೋಡ್ ಕೆಲಸ ಆರಂಭವಾಗುತ್ತದೆ. ಆದೇಶ ಬಂದರೆ ಮಧ್ಯರಾತ್ರಿ ಇಂದಲೇ ಪರಿಷ್ಕೃತ ದರ ಜಾರಿ ಆಗುತ್ತದೆ. ಪ್ರತಿ ಡಿಪೋಗು ಟೆಕ್ನಿಕಲ್ ಇಂಜಿನಿಯರ್ ಕಳುಹಿಸಲು ಚಿಂತನೆ ನಡೆಸಲಾಗುತ್ತಿದ್ದು, ಇಟಿಎಂ ಹೊಸ ದರಗಳ ಚಿಂತನೆ ನಡೆಸಲಾಗುತ್ತಿದೆ. ಸದ್ಯಕ್ಕೆ ಚಿಲ್ಲರೆ ಸಮಸ್ಯೆ ಸೇರಿದಂತೆ ಕೆಲ ಗೊಂದಲಗಳಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಗೊಂದಲಗಳನ್ನು…

Read More

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತೊಂದು ಭೀಕರವಾದಂತಹ ಅಪಘಾತವಾಗಿದ್ದು, ಬಿಬಿಎಂಪಿ ಕಸದ ಲಾರಿಯನ್ನು ಓವರ್ ಟೇಕ್ ಮಾಡಲು ಯತ್ನಿಸಿ, ಇಬ್ಬರು ಮಹಿಳೆಯರು ರಸ್ತೆ ಮೇಲೆ ಬಿದ್ದಿದ್ದಾರೆ. ಈ ವೇಳೆ ಅವರ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದು ಸಾವನಪ್ಪಿರುವ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ನಡೆದಿದೆ. ಹೌದು ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರೂ ಮಹಿಳೆಯರು ಸಾವನ್ನಪ್ಪಿರುವ ಘಟನೆ ಥಣಿಸಂದ್ರ ಮುಖ್ಯರಸ್ತೆಯ ಸರಾಯಿ ಪಾಳ್ಯದ ಬಳಿ ಒಂದು ಘಟನೆ ನಡೆದಿದೆ. ಇಂದು ಮಧ್ಯಾಹ್ನ 12.20 ರ ಸುಮಾರಿಗೆ ಈ ಒಂದು ದುರ್ಘಟನೆ ಸಂಭವಿಸಿದೆ. ಕಸದ ಲಾರಿಯನ್ನು ಓವರ್ ಟೇಕ್ ಮಾಡಲು ಮಹಿಳೆಯರು ಮುಂದಾಗಿದ್ದಾರೆ. ಲಾರಿಯನ್ನು ಎಡಗಡೆಯಿಂದ ಓವರ್ ಟೇಕ್ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಲಾರಿ ಗೆ ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಮೃತರನ್ನು ಗೋವಿಂದಪುರ ನಿವಾಸಿಗಳಾದ ನಾಜಿಯಾ ಸುಲ್ತಾನ್ ಹಾಗೂ ನಾಜಿಯಾ ಇರ್ಫಾನ್ ಮೃತ ಮಹಿಳೆಯರು ಎಂದು ತಿಳಿದುಬಂದಿದ್ದು, ಇಬ್ಬರೂ ಕೂಡ ಸಹೋದರಿಯರು ಎಂದು ತಿಳಿದುಬಂದಿದೆ. ಸದ್ಯ…

Read More

ಬೆಂಗಳೂರು : ರಾಜ್ಯ ಸಾರಿಗೆ ಇಲಾಖೆ ಇದೀಗ ವಾಹನ ಸವಾರರಿಗೆ ಮತ್ತೊಮ್ಮೆ ಬಿಗ್ ರಿಲೀಫ್ ನೀಡಿದ್ದು, HSRP ನಂಬರ್ ಪ್ಲೇಟ್ ಅಳವಡಿಕೆಗೆ ವಾಹನ ಮಾಲೀಕರಿಗೆ ಇದೀಗ ರಾಜ್ಯ ಸಾರಿಗೆ ಇಲಾಖೆಯು ಜನವರಿ 31 ರವರೆಗೆ ವಿಸ್ತರಿಸಿದೆ. ಜನವರಿ 31ರವರೆಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಇದುವರೆಗೂ ಆರು ಬಾರಿ ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ನೀಡಿತ್ತು. ಇದೀಗ ಮತ್ತೊಮ್ಮೆ ಅವಕಾಶ ನೀಡಿದ್ದು, ಜನವರಿ 31 ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ರಾಜ್ಯ ಸಾರಿಗೆ ಇಲಾಖೆ ಗಡು ವಿಸ್ತರಿಸಿ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಮುಂದಿನ ಆದೇಶದವರೆಗೂ ವಾಹನ ಮಾಲೀಕರ ಮೇಲೆ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಈ ಹಿಂದೆ ಆದೇಶ ನೀಡಿತು. ಕಳೆದ ಒಂದುವರೆ ವರ್ಷದಿಂದ ಎರಡು ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ 56.40 ಲಕ್ಷ ವಾಹನಗಳಿಗೆ ಮಾತ್ರ ಎಚ್ಎಸ್ಆರ್ಪಿ ನಂಬರ್ ಅಳವಡಿಕೆ ಮಾಡಲಾಗಿದೆ ಅಲ್ಲದೆ ಇನ್ನೂ 1.40 ಕೋಟಿ…

Read More

ಬೆಂಗಳೂರು : ಕಳೆದ ಡಿಸೆಂಬರ್ ನಲ್ಲಿ ನಟ ಶಿವರಾಜ ಕುಮಾರ್ ಅವರು ಕ್ಯಾನ್ಸರ್ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದರು. ಬಳಿಕ ಕ್ಯಾನ್ಸರ್ ಗೆದ್ದ ನಂತರ ವಿಡಿಯೋ ಮುಖಾಂತರ ಅವರ ಪತ್ನಿ ಗೀತಾ ಅವರು ಶಿವರಾಜ್ ಕುಮಾರ್ ಕ್ಯಾನ್ಸರ್ ಅನ್ನು ಗೆದ್ದಿದ್ದಾರೆ ಎಂದು ಇತ್ತೀಚಿಗೆ ವಿಡಿಯೋ ಮೂಲಕ ಹಂಚಿಕೊಂಡಿದ್ದರು. ಇದೀಗ ನಟ ಶಿವರಾಜ್ ಕುಮಾರ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ. ನಟ ಶಿವರಾಜಕುಮಾರ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಫೋಟೋ ವೈರಲ್ ಆಗಿದ್ದು, ನಟ ಶಿವರಾಜಕುಮಾರ್ ಪತ್ನಿ ಗೀತಾ ಸೇರಿದಂತೆ ಫೋಟೋದಲ್ಲಿ ಹಲವರು ಇದ್ದಾರೆ. ಶಿವರಾಜಕುಮಾರ್ ಮೂತ್ರ ಕೋಶ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದೇ ಆಸ್ಪತ್ರೆಯಿಂದ ನಟ ಶಿವರಾಜಕುಮಾರ್ ಡಿಸ್ಚಾರ್ಜ್ ಆದರೂ ಕೂಡ ಅವರು ಸಧ್ಯಕ್ಕೆ ಭಾರತಕ್ಕೆ ಆಗಮಿಸುತ್ತಿಲ್ಲ. ಜನವರಿ 26ರಂದು ಅವರು ಭಾರತಕ್ಕೆ ಮರಳಲಿದ್ದು ಮಲ್ಲಿಕಾ ಫೆಬ್ರುವರಿಯಲ್ಲಿ ಚಿತ್ರೀಕರಣದಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗಿದೆ. ನಟ ರಾಮಚರಣ್ ಅವರ ಚಿತ್ರದಲ್ಲಿ ನಟಿಸಿ ರಾಜಕುಮಾರ್ ಅವರು…

Read More