Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ವಿಜಯಪುರದಲ್ಲಿ ರೈತರ ಜಮೀನುಗಳು ವಕ್ಫ್ ಆಸ್ತಿ ಎಂದು ತೋರಿಸುತ್ತಿರುವ ವಿಚಾರವಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಿಜೆಪಿ ಪರಿಶೀಲನ ತಂಡವನ್ನು ರಚನೆ ಮಾಡಿದ್ದರು ಇದಕ್ಕೆ ಬಸನಗೌಡ ಪಾಟೀಲ್ ಯತ್ನಾಳ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೆ ಇಂದು ಮತ್ತೆ ಪುನರ್ ರಚನೆ ಮಾಡಿದ್ದಾರೆ. ಹೌದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಬಿಜೆಪಿ ಪರಿಶೀಲನ ತಂಡ ಪುನರ್ ರಚಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶದ ಬೆನ್ನಲ್ಲೆ ತಂಡ ಪುನರ್ ರಚನೆ ಮಾಡಲಾಗಿದೆ. ಸಂಸದ ಜಿಗಜಿಣಗಿ ಶಾಸಕ ಯತ್ನಾಳ ಸೇರ್ಪಡೆಗೊಳಿಸಿ ತಂಡ ಪುನರ್ ರಚಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ. ನಾಳೆ ಕಾರಜೋಳ ನೇತೃತ್ವದ ಈ ತಂಡ ವಿಜಯಪುರ ಜಿಲ್ಲೆಗೆ ತೆರಳಲಿದೆ. ಇಂದು ತಂಡಕ್ಕೆ ರಮೇಶ್ ಜಿಗಜಿಣಗಿ, ಶಾಸಕ ಯತ್ನಾಳ್ ಹಾಗೂ ಮಾಜಿ ಜಿಲ್ಲಾಧ್ಯಕ್ಷ ಎಂ.ಬಿ ಜಿರಲಿ ಸೇರ್ಪಡೆ ಮಾಡಿದ ವಿಜಯೇಂದ್ರ. ನಿನ್ನೆ ಬಿವೈ ವಿಜಯೇಂದ್ರ ಬಿಜೆಪಿಯ ಪರಿಶೀಲನ ತಂಡ ರಚಿಸಿದ್ದರು. ಬಿಜೆಪಿ ತಂಡ ಬಹಿಷ್ಕರಿಸುವುದಾಗಿ ಇಂದು ಬಸವನಗೌಡ ಪಾಟೀಲ…
ಹುಬ್ಬಳ್ಳಿ : ಇತ್ತೀಚಿಗೆ ಹುಚ್ಚು ನಾಯಿ ಹಾಗೂ ಬೀದಿ ನಾಯಿಗಳ ದಾಳಿಯಿಂದ ಮಕ್ಕಳು ಗಾಯಗೊಂಡಿರುವ ಘಟನೆಗಳು ನಡೆದಿವೆ. ಇದೀಗ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಹುಚ್ಚುನಾಯಿ ದಾಳಿಗೆ ಸುಮಾರು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹೌದು ಹುಬ್ಬಳ್ಳಿ ನಗರದ ಗೋಕುಲ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದ್ದು, ಹುಚ್ಚುನಾಯಿ ದಾಳಿಯಿಂದ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕೂಡಲೇ ಗಾಯಳುಗಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಾಯಿಗೆ ಹುಚ್ಚು ಹಿಡಿದಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ ಸದ್ಯ ಗಾಯಾಳುಗಳಿಗೆ ಹುಬ್ಬಳ್ಳಿಯಕೆಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಮನಗರ : ಕ್ರಷರ್ ನಿಂದ ಜಲ್ಲಿ ಸಾಗಿಸುತ್ತಿದ್ದ ಲಾರಿ ಮಾಲೀಕನಿಗೆ ನೋಟಿಸ್ ನೀಡಲಾಗಿತ್ತು. ಆದರೆ ನೋಟಿಸ್ ಗೆ ಹೆದರಿದ ಲಾರಿ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದಲ್ಲಿ ನಡೆದಿದೆ. ಲಾರಿ ಚಾಲಕ ಗಣಿ ಮತ್ತು ಭೂ ವಿಜ್ಞಾನ ಕಚೇರಿಯ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಮನಗರದಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಯ ಬಳಿ ಮಾಗಡಿ ಮೂಲದ ನಾಗೇಶ್ (50) ಆತ್ಮಹತ್ಯೆಗೆ ಶರಣಾದ ಲಾರಿ ಚಾಲಕ ಎಂದು ತಿಳಿದುಬಂದಿದೆ. ಸದ್ಯ ಕಚೇರಿ ಆವರಣದ ಮರದಲ್ಲಿ ನಾಗೇಶ್ ಶವ ನೇತಾಡುತ್ತಿದೆ. ಘಟನಾ ಸ್ಥಳಕ್ಕೆ ರಾಮನಗರದ ಐಜೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಮಧ್ಯಾಹ್ನ ಕಚೇರಿಗೆ ಬಂದಿದ್ದ ಲಾರಿ ಮಾಲೀಕ ನಾಗೇಶ್ ನನಗೆ ನೋಟಿಸ್ ಯಾಕೆ ಕೊಟ್ಟಿದ್ದೀರಿ ಅಂತ ಪ್ರಶ್ನೆ ಮಾಡಿದ್ದಾನೆ. ನಿಯಮ ಉಲ್ಲಂಘನೆ ಆಗಿದೆ ಅದಕ್ಕೆ ಕಾರಣ ಕೊಡಿ ಎಂದು ಗಡಿ ಮತ್ತು ಭೂ ವಿಜ್ಞಾನ ಅಧಿಕಾರಿ ತಿಳಿಸಿದ್ದಾರೆ.…
ಧಾರವಾಡ : ಈಗಾಗಲೇ ರೈತರ ಜಮೀನುಗಳು ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ತೋರಿಸುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರದ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ ಇದೀಗ ಧಾರವಾಡದಲ್ಲೂ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಹಲವು ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಅಸ್ತಿಗೆ ಜೋಡಣೆಯದದ್ದು ಕಂಡುಬಂದಿದೆ. ಹೌದು ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಜವಳಗಿ, ಮಸೂತಿ ಹಾಗೂ ಹುಟಗಿ ಎಂಬ ಕುಟುಂಬಕ್ಕೆ ಸೇರಿದ ಜಮೀನುಗಳು ಪಿತ್ರಾರ್ಜಿತವಾಗಿದ್ದು, ಅವುಗಳನ್ನು ಈ ರೈತರು ಯಾರಿಂದಲೂ ದಾನವಾಗಿ ಪಡೆದಿಲ್ಲ ಆದರೂ ಇವರ ಜಮೀನಿನ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿಗೆ ಈ ಜಮೀನು ಒಳಪಟ್ಟಿದೆ ಎಂದು ನಮೂದಾಗಿದ್ದು, ಅದನ್ನು ತೆಗೆದು ಹಾಕಲು ರೈತರು ವಕ್ಫ್ ಕಚೇರಿ, ತಹಶೀಲ್ದಾರ್ ಕಚೇರಿಗೆ ಅಲೆದಾಡಿದರೂ ಅಧಿಕಾರಿಗಳು ಮಾತ್ರ ಯಾವುದಕ್ಕೂ ಸ್ಪಂದನೆ ನೀಡಲಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ತಮ್ಮ ಜಮೀನನ್ನು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿರುವ ಈ ರೈತರೆಲ್ಲ ಉಪ್ಪಿನ ಬೆಟಗೇರಿ ಗ್ರಾಮದವರು.…
ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಅಲ್ಲಿನ ರಾಜಾತಿಥ್ಯ ಪತ್ರಣಕ್ಕೆ ಸಂಬಂಧಪಟ್ಟಂತೆ ನಂತರ ಅವರನ್ನು ಬಳ್ಳಾರಿ ಜಿಲ್ಲೆಗೆ ಶಿಫ್ಟ್ ಮಾಡಲಾಯಿತು. ಇದೀಗ ಈ ಒಂದುಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ನೇತೃತ್ವದಲ್ಲಿ ಬಳ್ಳಾರಿ ಜೈಲಿಗೆ ಆಗಮಿಸಿದ್ದು, ನಟ ದರ್ಶನ್ ಅವರನ್ನು ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಲಿದ್ದಾರೆ. ಈಗಾಗಲೇ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ ಅವರು ಜಾಮೀನು ಅರ್ಜಿ ಸಲ್ಲಿಸಿದ್ದು, ಅಲ್ಲದೆ ಅವರಿಗೆ ತೀವ್ರವಾಗಿ ಬೆನ್ನು ನೋವು ಕಾಣಿಸಿಕೊಂಡಿದೆ. ಇಂದು ಹೈ ಕೋರ್ಟ್ ನಲ್ಲಿ ಇವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು ಸದ್ಯದಲ್ಲೇ ತೀರ್ಪು ಹೊರಬೀಳಲಿದೆ
ಬೆಂಗಳೂರು : ವಿಜಯಪುರ ರೈತರಿಗೆ ವಕ್ಫ್ ಬೋರ್ಡ್ ನಿಂದ ನೋಟಿಸ್ ನೀಡಿದ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ಬಂದರೆ ವಿಶೇಷವಾಗಿ ಮುಸ್ಲಿಮರನ್ನು ಓಲೈಕೆ ಮಾಡುತ್ತಾರೆ. ಟಿಪ್ಪು ಸುಲ್ತಾನ್ ಜಯಂತಿಗೆ ಆದೇಶ ಹೊರಡಿಸಿದ್ದರು.ಅವರೇನು ಕೇಳಿದ್ರಾ ಜಯಂತಿ ಮಾಡಿ ಅಂತ? ಎಂದು ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದರು. ಕಾಂಗ್ರೆಸಿಗರು ಎಲ್ಲಾ ಆಸ್ತಿಯನ್ನ ವಕ್ಫ್ ಬೋರ್ಡ್ ಗೆ ಬರೆಯುತ್ತಾರೆ. ಅವನ್ಯಾರೋ ಪಾರ್ಲಿಮೆಂಟ್ ನಮ್ಮದೇ ಅಂತ ಹೇಳಿದ್ದಾನೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿಧಾನಸೌಧ, ಲೋಕಸಭೆ ಅವರದ್ದೇ. ಎಲ್ಲಾ ಆಸ್ತಿಗಳು ಮುಸ್ಲಿಮರದಂತೆ ಏನು ಅರಬ್ ನವರು ಕೊಟ್ರಾ? ಕಾಂಗ್ರೆಸ್ ಪಕ್ಷಕ್ಕೆ ಎಂತಹ ಹೀನಾಯ ಪರಿಸ್ಥಿತಿ ಬಂದಿದೆ ಅಂದರೆ ಮಾತು ಎತ್ತಿದರೆ ಎಲ್ಲವನ್ನೂ ಎಸ್ಐಟಿ ಎಸ್ಐಟಿ ಎನ್ನುತ್ತಾರೆ. ಈಗ ತಹಶೀಲ್ದಾರ್ ತಪ್ಪು ಆಗಿದ್ದು ಬಿಜೆಪಿ ಕಾಲದಲ್ಲಿ ಅಂತ ಹೇಳುತ್ತಿದ್ದಾರೆ. ಕಾಲ ಯಾವುದು ಅನ್ನೋದಲ್ಲ ತಪ್ಪು ಏನಾಗಿದೆ ಅನ್ನೋದು ಮುಖ್ಯ.ಯಾರ ಕಾಲದಲ್ಲಿ ಆಗಲಿ ತಪ್ಪು ಸರಿಪಡಿಸಬೇಕು. ಕಾಂಗ್ರೆಸ್ನವರು ಎಲ್ಲವನ್ನು ಅಲ್ಪಸಂಖ್ಯಾತರಿಗೆ ಬರೆದು ಕೊಡುತ್ತಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆಯ ಪ್ರವೃತ್ತಿ ಬಿಡಬೇಕು. ಈ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಇಡಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಮುಡಾದ ಮಾಜಿ ಆಯುಕ್ತ ನಟೇಶ್ ಮನೆಯ ಮೇಲೆ ಹಾಗೂ ಬಿಲ್ಡರ್ ಮಂಜುನಾಥ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೇ ನಡೆಸುತ್ತಿದ್ದಾರೆ ಎನ್ನಲಾಗಿದೆ. ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಪಟ್ಟಂತೆ ಬೆಂಗಳೂರಿನ ಮಲ್ಲೇಶ್ವರಂ ನ 10ನೇ ಕ್ರಾಸ್ ನಲ್ಲಿರುವ ಮುಡಾ ಮಾಜಿ ಆಯುಕ್ತ ನಟೇಶ್ ಮನೆ ಮೇಲೆ ಐವರು ಇಡಿ ಅಧಿಕಾರಿಗಳು ದಾಳಿ ಮಾಡಿದ್ದು ಶೋಧ ನಡೆಸುತ್ತಿದ್ದಾರೆ. ಇಡಿ ದಾಳಿಯ ವೇಳೆ ಮಾಜಿ ಆಯುಕ್ತ ನಟೇಶ್ ಮನೆಯಲ್ಲಿ ಇದ್ದರು ಎಂದು ತಿಳಿದುಬಂದಿದೆ. ಇನ್ನೊಂದು ಕಡೆ ಬಿಲ್ಡರ್ ಮಂಜುನಾಥ್ ನಿವಾಸದ ಮೇಲು ಕೂಡ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಇರುವ ಬಿಲ್ಡರ್ ಮಂಜುನಾಥ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ದಾಖಲೆಗಳು ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಹಾಸನ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೈಲರ್ಜಿಗೆ ಏರಿಸಲು ಇಂದು ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್ಚಿಗೆ ಪಾಟೀಲ್ ತಿಳಿಸಿದರು. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್ ಅವರು ಹಾಸನದ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೈಲ್ದರ್ಜೆಗೆ ಏರಿಸಲು ಸಂಪುಟದಲ್ಲಿ ಅನುಮೋದನೆ ದೊರಕಿದೆ ಎಂದರು. ಅಲ್ಲದೆ ರಾಯಚೂರು ವಿವಿಗೆ ‘ಮಹರ್ಷಿ ವಾಲ್ಮೀಕಿ ಎಂದು ಮರುನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಕಳೆದ ಕೆಲವು ದಿನಗಳ ಹಿಂದೆ ರಾಯಚೂರಿನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ರಾಯಚೂರು ವಿಶ್ವವಿದ್ಯಾಲಯಕ್ಕೆ ವಾಲ್ಮೀಕಿಯವರ ನಾಮಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ನಡೆದ ಸಂಪುಟದಲ್ಲಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ನಾಮಕರಣಕ್ಕೆ ಅನುಮೋದನೆ ನೀಡಲಾಗಿದೆ ಎಂದು ಎಚ್ ಕೆ ಪಾಟೀಲ್ ತಿಳಿಸಿದರು.
BREAKING : ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಗೆ ಬಿಗ್ ರಿಲೀಫ್ : ವಂಚನೆ ಕೇಸ್ ನಲ್ಲಿ ಬಿಡುಗಡೆಗೆ ಹೈಕೋರ್ಟ್ ಆದೇಶ
ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಾಂತರ ರೂಪಾಯಿ ವಂಚನೆ ಎಸೆಗಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಸಹೋದರ ಗೋಪಾಲ ಜೋಶಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ ಒಂದು ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ಬಿಡುಗಡೆಗೆ ಆದೇಶ ನೀಡಿದೆ. ಹೌದು ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆಯನ್ನು ಕೈಗೊತ್ತಿಕೊಂಡು, ತನಿಖೆ ಹಾಗೂ ದೂರಿನ ಆಧಾರದಲ್ಲಿ ಆನಂತರ ಕೈಗೊಂಡಿರುವ ಎಲ್ಲಾ ಕ್ರಮಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ. ಅಲ್ಲದೆ ಪೊಲೀಸ್ ಕಸ್ಟಡಿಯಲ್ಲಿರುವ ಅರ್ಜಿದಾರರನ್ನು ಕಾನೂನಿನ ಅನ್ವಯ ಬಿಡುಗಡೆ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ. ಪ್ರಕರಣ ಹಿನ್ನೆಲೆ? ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಹೋದರ ಗೋಪಾಲ ಜೋಶಿ ವಿರುದ್ಧ,ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ದೇವಾನಂದ ಚೌವ್ಹಾಣ್ ಹಾಗೂ ಪತ್ನಿ ಸುನೀತಾ ಚೌವ್ಹಾಣ್ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. 5 ಕೋಟಿಗೆ ಬೇಡಿಕೆ ಇಟ್ಟಿದ್ದರು. ಆದರೆ ದೇವಾನಂದ ದಂಪತಿ 5…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ನಡೆದಂತಹ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಸಂಬಂಧ ಆಯೋಗ ರಚನೆಗೆ ಸಂಪುಟ ಅಸ್ತು ಎಂದಿದೆ ಎಂದು ಕ್ಯಾಬಿನೆಟ್ ಸಭೆಯ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಕುರಿತು ಮಾತನಾಡಿ, ಒಳ ಮೀಸಲಾತಿ ಜಾರಿ ಸಂಬಂಧ ಆಯೋಗ ರಚನೆಗೆ ಸಂಪುಟ ಅಸ್ತು ಎಂದಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿದೆ. ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದೆ ನಿರ್ಣಯಿಸಿ ನಿರ್ಧಾರ ಕೈಗೊಳ್ಳಲಾಗುತ್ತೆ ಎಂದು ಎಚ್ ಕೆ ಪಾಟೀಲ್ ತಿಳಿಸಿದರು. ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡಲು ಆಯೋಗಕ್ಕೆ ಸೂಚನೆ ನೀಡಲಾಗಿದೆ. ಅದಲ್ಲದೆ ಮುಂದಿನ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಲಾಗಿದೆ ಇಂದಿನಿಂದ ಯಾವುದೇ ನೇಮಕಾತಿ ನೋಟಿಫಿಕೇಷನ್ ಆದರೂ ಕೂಡ ಆಯೋಗದ ವರದಿ ಆಧರಿಸಿ ಮುಂದಿನ ತೀರ್ಮಾನ…













