Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಗೆ ನಿನ್ನೆ ಸಾಹಿತಿ ಹಂ.ಪ ನಾಗರಾಜಯ್ಯ ವಿದ್ಯುಕ್ತವಾದಂತ ಚಾಲನೆ ನೀಡಿದ್ದರು. ಈ ಒಂದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಿದ್ದರು. ಇಂದು ಈ ಒಂದು ದಸರಾ ಮಹೋತ್ಸವದ ಎರಡನೇ ದಿನದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದಿನ ವಿಶ್ವ ವಿಖ್ಯಾತ ಮೈಸೂರು ದಸರಾದ ಎರಡನೇ ದಿನದ ಕಾರ್ಯಕ್ರಮದಲ್ಲಿ ಜಾವಾ ಬೈಕ್ ರ್ಯಾಲಿ ಆಯೋಜನೆ ಮಾಡಲಾಗಿದೆ. ಕೆಲವೇ ಹೊತ್ತಿನಲ್ಲಿ ಪಾರಂಪರಿಕ ಜಾವಾ ಬೈಕ್ ರ್ಯಾಲಿಗೆ ಸಚಿವ ಎಚ್.ಕೆ ಪಾಟೀಲ್ ಚಾಲನೆ ನೀಡಲಿದ್ದಾರೆ. ಟೌನ್ ಹಾಲ್ ಬಳಿ ಸಚಿವ ಪಾಟೀಲ್ ಈ ಒಂದು ಬೈಕ್ ರ್ಯಾಲಿ ಚಾಲನೆ ನೀಡಲಿದ್ದಾರೆ. ಇನ್ನು ಬೆಳಗ್ಗೆ 7:30ಕ್ಕೆ ಅರಮನೆ ಒಳ ಆವರಣದಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಈ ಒಂದು ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ. ನಂತರ ಬೆಳಗ್ಗೆ 9:30ಕ್ಕೆ ಮಕ್ಕಳ ದಸರಾ ಕಲಾಥನ್ ಪ್ರದರ್ಶನ ಆಯೋಜನೆ ಮಾಡಲಾಗಿದೆ.ಅರಮನೆ ಕೋಟೆ ಆಂಜನೇಯ ದೇಗುಲದ ಬಳಿ ಕಲಾಥನ್…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ A2 ಆರೋಪಿ ಆಗಿರುವಂತಹ ನಟ ದರ್ಶನ್ ಅವರ ಜಾಮೀನು ಭವಿಷ್ಯ ಎಂದು ನಿರ್ಧಾರವಾಗಲಿದೆ. ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹಾಗಾಗಿ ನಟ ದರ್ಶನ್ ಅವರಿಗೆ ಇಂದು ಜಾಮೀನು ಸಿಗುತ್ತಾ ಎಂದು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇನ್ನು ನಿನ್ನೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪುತ್ರ ವಿನೇಶ್ ಭೇಟಿ ನೀಡಿದ್ದರು. ಈ ವೇಳೆ ವಿನೀಶ್ ದರ್ಶನ್ ಅವರನ್ನು ತಬ್ಬಿಕೊಂಡು ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಬಿಕ್ಕಿ ಬಿಕ್ಕಿ ಅತ್ತಿರುವ ಪ್ರಸಂಗ ನಡೆಯಿತು.ನಿನ್ನೆ ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್ ಭೇಟಿಯಾದರು. ಅಪ್ಪನ ಮುಖ ನೋಡುತ್ತಿದ್ದಂತೆ ಪುತ್ರ ವಿನೇಶ್ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಈ ವೇಳೆ ಮಗನನ್ನು ತಬ್ಬಿ ದರ್ಶನ್ ಸಂತೈಸಿದ್ದಾರೆ. ಇದೆ ಸಂದರ್ಭದಲ್ಲಿ ಸೆಂಟ್ರಲ್ ಜೈಲಿನಲ್ಲಿರುವ ಅಪ್ಪನ…
ಮಂಡ್ಯ : ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಶ್ರೀರಂಗಪಟ್ಟಣಕ್ಕೆ ದಸರಾ ಆನೆಗಳು ಆಗಮಿಸಿವೆ. ಈ ಬಾರಿಯ ಶ್ರೀರಂಗಪಟ್ಟಣ ದಸರಾದ ಅಂಬಾರಿಯನ್ನು ಮಹೇಂದ್ರ ಆನೆ ಹೊರಲಿದ್ದಾನೆ. ಮಹೇಂದ್ರ ಆನೆಗೆ ಲಕ್ಷ್ಮಿ ಮತ್ತು ಹಿರಣ್ಯ ಆನೆಗಳು ಸಾಥ್ ನೀಡಲಿವೆ ಎಂದು ತಿಳಿದುಬಂದಿದೆ. ಹೌದು ಇಂದು ಶ್ರೀರಂಗಪಟ್ಟಣ ಪಟ್ಟಣದಲ್ಲಿ ನಡೆಯುವ ದಸರಾ ಉತ್ಸವದ ಜಂಬೂ ಸವಾರಿಯಲ್ಲಿ ಪ್ರಮುಖ ಆಕರ್ಷಣೆ ಚಾಮುಂಡೇಶ್ವರಿ ದೇವಿಯ ಮೆರವಣಿಗೆ. ಕಳೆದ ವರ್ಷದಂತೆ ಈ ವರ್ಷವೂ ಮಹೇಂದ್ರ ಆನೆಯು 400 ಕೆ.ಜಿ. ತೂಕದ ಮರದ ಅಂಬಾರಿ ಸೇರಿ ಒಟ್ಟು 650 ಕೆ.ಜಿ. ತೂಕದ ಸರ್ವಾಲಂಕೃತ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಸಾಗಲಿದೆ. ಈ ಬಾರಿ ಪಟ್ಟಣದಲ್ಲಿ ಮಧ್ಯಾಹ್ನ ನಡೆಯುವ ದಸರಾ ಉತ್ಸವದ ಜಂಬೂ ಸವಾರಿಯಲ್ಲಿ ಮೂರು ಆನೆಗಳು ಪಾಲ್ಗೊಳ್ಳಲಿವೆ. ಹಾಗಾಗಿ ಮಹೇಂದ್ರ, ಹಿರಣ್ಯ ಮತ್ತು ಲಕ್ಷ್ಮಿ ಹೆಸರಿನ ಆನೆಗಳು ನಿನ್ನೆ ಸಂಜೆನೇ ಮೈಸೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿವೆ.
ಬೆಂಗಳೂರು : ಕುಡಿದ ಮತ್ತಿನಲ್ಲಿ ತಮ್ಮ ಸಹೋದ್ಯೋಗಿಯನ್ನೇ ಭೀಕರವಾಗಿ ಕೊಂದಿರುವ ಘಟನೆ ಬೆಂಗಳೂರಿನ ಮೈಕೋಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಬಿಹಾರ ಮೂಲದ ವ್ಯಕ್ತಿಯ ಬರ್ಬರ ಹತ್ಯೆ ನಡೆದಿದೆ. ಸಜಿತ್ (34) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಎಣ್ಣೆಯ ನಶೆಯಲ್ಲಿ ಗಲಾಟೆ ಮಾಡಿ ಸಹೋದ್ಯೋಗಿಯನ್ನು ಕೊಂದಿದ್ದಾರೆ. ಮೈಕೋಲೇಔಟ್ ಬಳಿಯ ಪುಟ್ಟಪ್ಪ ಗಾರ್ಡನ್ನಲ್ಲಿ ಈ ಒಂದು ಕೊಲೆ ನಡೆದಿದೆ. ನಿನ್ನೆ ರಾತ್ರಿ ಎಣ್ಣೆಯ ಮತ್ತಿನಲ್ಲಿ ದೊಣ್ಣೆಗಳಿಂದ ಹೊಡೆದು ಸಹೋದ್ಯೋಗಿ ಸಜಿತ್ ಎನ್ನುವವನನ್ನು ಕೊಲೆ ಮಾಡಿದ್ದಾರೆ. ಇಂಟರಿಯರ್ ಡಿಸೈನ್ ಗೌಡನಲ್ಲಿ ಸಜಿತ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದ್ದೂ, ಕೊಲೆ ಕುರಿತಂತೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರ : ನಿನ್ನೆ ವಿಜಯಪುರ ನಗರದ ಗಣಪತಿ ಚೌಕ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗಾಂಧಿಚೌಕ ಪೊಲೀಸರು ಕೇವಲ 10 ಗಂಟೆಯಲ್ಲೇ ಪ್ರಕರಣವನ್ನ ಭೇದಿಸಿದ್ದಾರೆ. ಈ ಸಂಬಂಧ ಸೊಹೇಲ್ ಜಮಾದಾರ್ (21) ಎಂಬಾತನನ್ನ ಬಂಧಿಸಿದ್ದಾರೆ. ಹೌದು ನಿನ್ನೆ ನಗರದ ಗಣಪತಿ ಚೌಕ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ಎಸೆದು ಕೋಮು ಗಲಭೆ ಸೃಷ್ಟಿಸಲು ಯೋಜನೆ ಮಾಡಿದ್ದರು.ನಿನ್ನೆ ರಾತ್ರಿ 1 ಗಂಟೆ ಸುಮಾರಿಗೆ ಗಣಪತಿ ಚೌಕ್ ಮೇಲೆ ಆರೋಪಿ ಸೊಹೇಲ್ ಜಮಾದಾರ್ ಕಲ್ಲು ಎಸೆದಿದ್ದ. ಕುಡಿದ ನಶೆಯಲ್ಲಿದ್ದ ಖದೀಮರು ಕಲ್ಲು ತೂರಿ, ಸ್ಥಳದಲ್ಲಿದ್ದ ಹೋಮ್ಗಾರ್ಡ್ಗೆ ಅವಾಚ್ಯವಾಗಿ ನಿಂದಿಸಿದ್ದರು. ಘಟನೆ ನಡೆದ ಬೆನ್ನಲ್ಲೇ ಎಸ್ಪಿ ಹೃಷಿಕೇಶ್ ಸೋನಾವಣೆ ಅವರು ಸಿಪಿಐ ತಳಕೇರಿ ನೇತೃತ್ವದಲ್ಲಿ ತಂಡವೊಂದನ್ನ ರಚಿಸಿದ್ದರು. ಸಿಸಿಟಿವಿ ದೃಶ್ಯಾವಳಿ ಹಾಗೂ ಕೃತ್ಯದ ವೇಳೆ ಬಳಸಿದ್ದ ಆಟೋ ನಂಬರ್ ಮೂಲಕ ಆರೋಪಿಯನ್ನ ಪತ್ತೆ ಮಾಡಿದ್ದಾರೆ.ಗಾಂಧಿ ಚೌಕ ಸಿಪಿಐ ಪ್ರದೀಪ ತಳಕೇರಿ ಹಾಗೂ ತಂಡ ಸೊಹೇಲ್ ನನ್ನ ವಶಕ್ಕೆ ಪಡೆದಿದ್ದಾರೆ. ಇನ್ನೋರ್ವ ಆರೋಪಿ ಸೊಹೇಲ್…
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಸದ್ಯ SIT ವಶದಲ್ಲಿ ಇರುವ ಆರ್ಆರ್ ನಗರ ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ದೂರಿನಲ್ಲಿ ಉಲ್ಲೇಖಿತ ಎಚ್ಐವಿ ಸೋಂಕಿತೆ ಎನ್ನಲಾದ ಮಹಿಳೆಯನ್ನು ಪತ್ತೆ ಹಚ್ಚಿರುವ ಎಸ್ಐಟಿ, ಈಗ ಆಕೆಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಹೌದು ಶಾಸಕ ಮುನಿರತ್ನ ತಮ್ಮ ರಾಜಕೀಯ ವಿರೋಧಿಗಳನ್ನು ಎಚ್ಐವಿ ಸೋಂಕಿತೆಯನ್ನು ಬಳಸಿಕೊಂಡು ಏಡ್ಸ್ ಟ್ರ್ಯಾಪ್ ಮಾಡಿದ್ದರು ಎಂದು ಗಂಭೀರ ಆರೋಪ ಮಾಡಲಾಗಿತ್ತು. ಇನ್ನು ಅತ್ಯಾಚಾರ ಕುರಿತ ದೂರಿನಲ್ಲಿ ಓರ್ವ ಎಚ್ಐವಿ ಸೋಂಕಿತೆ ಎಂದೂ ಮಹಿಳೆ ಹೆಸರು ಸಹ ಉಲ್ಲೇಖವಾಗಿತ್ತು. ಆದರೆ ಪ್ರಕರಣ ದಾಖಲಾದ ಬಳಿಕ ಭೂಗತವಾಗಿದ್ದ ಎಚ್ ಐವಿ ಸೋಂಕಿತೆ ಎನ್ನಲಾದ ಮಹಿಳೆಯನ್ನು ಪತ್ತೆ ಹಚ್ಚಿದ ಎಸ್ಐಟಿ, ಆಕೆ ಎಚ್ಐವಿ ಸೋಂಕಿತಳೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಲು ವೈದ್ಯಕೀಯ ಪರೀಕ್ಷೆಗೆ ನಡೆಸಿ ವರದಿ ಪಡೆಯಲು ಯೋಚಿಸಿದೆ. ಈ ಬಗ್ಗೆ 2-3 ದಿನಗಳಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ ಎಂದು ಮೂಲಗಳು…
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ಅಗತ್ಯವಿಲ್ಲ ಎಂದು ತಿಳಿಸಿದೆ. ಹಾಗೂ ವೈವಾಹಿಕ ಅತ್ಯಾಚಾರದ ವಿಷಯವು ಕಾನೂನು ಸಮಸ್ಯೆಗಿಂತ ಹೆಚ್ಚು ಸಾಮಾಜಿಕ ಸಮಸ್ಯೆಯಾಗಿದ್ದು, ಇದನ್ನು ಅಪರಾಧೀಕರಣ ಗೊಳಿಸಿದರೆ ಸಮಾಜದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಸ್ಪಷ್ಟಪಡಿಸಿದೆ. ವೈವಾಹಿಕ ಅತ್ಯಾಚಾರ ಅಪರಾಧವೇ ಎಂದು ಸುಪ್ರೀಂ ಕೋರ್ಟ್ನಲ್ಲಿ ವ್ಯಾಜ್ಯ ನಡೆಯುತ್ತಿದ್ದು, ಈ ಬಗ್ಗೆ ಕೋರ್ಟಿಗೆ ಸರ್ಕಾರ ತನ್ನ ಅಭಿಪ್ರಾಯವನ್ನು ಅಫಿಡವಿಟ್ ಮುಖಾಂತರಸಲ್ಲಿಸಿದೆ. ಗಂಡನು ಹೆಂಡತಿಯ ಸಮ್ಮತಿ ಪಡೆದೇ ಸಂಬಂಧ ಬೆಳೆಸಬೇಕು ನಿಜ. ಇದನ್ನು ಉಲ್ಲಂಘಿಸುವ ಮೂಲಭೂತ ಹಕ್ಕು ಆತನಿಗಿಲ್ಲ. ಆದಾಗ್ಯೂ ಒಂದುವೇಳೆ ಗಂಡನು ಹೆಂಡತಿಯೊಂದಿಗೆ ನಡೆಸುವ ಲೈಂಗಿಕ ಕ್ರಿಯೆಯನ್ನೂ ಅಪರಾಧ ವ್ಯಾಪ್ತಿಗೆ ತಂದರೆ ವೈವಾಹಿಕ ಜೀವನದ ಮೇಲೆ ದೂರಗಾಮಿ ಪರಿಣಾಮ ಬೀರುತ್ತದೆ ಎಂದು ಹೇಳಿದೆ. ಇದು ಕೋರ್ಟ್ ಅಧಿಕಾರ ವ್ಯಾಪ್ತಿಗೆ ಒಳಪಡುವುದಿಲ್ಲ. ಎಲ್ಲಪಾಲುದಾರರೊಂದಿಗೆ, ಹಾಗೂ ರಾಜ್ಯಗಳ ಜತೆ ಸರಿಯಾದ ಸಮಾಲೋಚನೆ ಮಾಡದೇ ವೈವಾಹಿಕ ಅತ್ಯಾಚಾರ ನಿರ್ಧರಿಸಲು ಆಗದು ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ…
ಬೆಂಗಳೂರು: ಬೆಂಗಳೂರಿಗರಿಗೆ ನಮ್ಮ ಮೆಟ್ರೋ ಸಿಹಿಸುದ್ದಿಯೊಂದು ನೀಡಿದ್ದು, ಸಂಚಾರ ದಟ್ಟನೆ ನಿಯಂತ್ರಣಕ್ಕಾಗಿ ಇದೀಗ ನಮ್ಮ ಮೆಟ್ರೋ ಹಸಿರು ಕಾರಿಡಾರ್ ವಿಸ್ತರಿತ ನಾಗಸಂದ್ರ ಮಾದಾವರ ಮಾರ್ಗದಲ್ಲಿ ಗುರುವಾರ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಂಡ (ಸಿಎಂಆರ್ಎಸ್) ತಪಾಸಣೆ ಪೂರ್ಣ ಗೊಳಿಸಿದೆ.ಹಾಗಾಗಿ ಇನ್ನೆರಡು ವಾರದಲ್ಲಿ ವರದಿ ನೀಡುವ ನಿರೀಕ್ಷೆಯಿದ್ದು, ಶೀಘ್ರವೇ ಇಲ್ಲಿ ಪ್ರಯಾಣಿಕರ ಸಂಚಾರ ಪ್ರಾರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಮೋಟಾರ್ ಟ್ರಾಲಿ ಮೂಲಕ ಮಾರ್ಗದಲ್ಲಿ ಸಂಚರಿಸಿದ ಸಿಎಂಆರ್ ಎಸ್ ತಂಡದವರು ಪರಿಶೀಲನೆ ನಡೆಸಿದರು. ಮಾರ್ಗದ ತಿರುವು, ಪ್ರಾಯೋಗಿಕ ಸಂಚಾರದ ವೇಳೆಯಲ್ಲಿ ರೈಲಿನ ವೇಗ, ನಿಲ್ದಾಣಗಳಲ್ಲಿ ನಿಲ್ಲಬೇಕಾದಾಗ ನಿಧಾನಗತಿ, ಬ್ರೇಕ್ ಸಿಸ್ಟಂ, ವಿದ್ಯುತ್ ಪೂರೈಕೆ ಸೇರಿ ಇತರೆ ಅಂಕಿ ಅಂಶಗಳನ್ನು ಬೆಂಗಳೂರು ಮೆಟ್ರೋ ರೈಲು ನಿಗ ಮದ ಅಧಿಕಾರಿಗಳಿಂದ ಪಡೆದರು ಎನ್ನಲಾಗಿದೆ. ಜೊತೆಗೆ ಮಂಜುನಾಥನಗರ, ಚಿಕ್ಕಬಿದ ರಕಲ್ಲು ಹಾಗೂ ಬೆಂಗಳೂರು ಅಂತಾ ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ ನಿಲ್ದಾಣಗಳನ್ನು ತಪಾಸಣೆ ಮಾಡಿ ದರು. ಸಿಎಂಆರ್ಎಸ್ ತಂಡ 15 ದಿನ ಗಳಲ್ಲಿ ವರದಿ ನೀಡುವ ಸಾಧ್ಯತೆಯಿದೆ. ಅವರು…
BREAKING : ಬೆಂಗಳೂರಿನಲ್ಲಿ ಮುಂದಿನ ವರ್ಷ ಫೆ.10ರಿಂದ 5 ದಿನಗಳ ಕಾಲ ‘ಏರೋ ಇಂಡಿಯಾ-2025’ ವೈಮಾನಿಕ ಪ್ರದರ್ಶನ ಆಯೋಜನೆ
ಬೆಂಗಳೂರು: 2 ವರ್ಷಗಳಿಗೊಮ್ಮೆ ಬೆಂಗಳೂರಿನ ಯಲಹಂಕ ಏರ್ಫೋರ್ಸ್ ಸ್ಟೇಷನ್ನಲ್ಲಿ ನಡೆ ಯುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ-2025’ ಫೆ. 10ರಿಂದ 14ರವರೆಗೆ5 ದಿನಗಳಕಾಲ ನಡೆಯಲಿದೆ ಎಂದು ರಕಣಾ ಇಲಾಖೆ ಗುರುವಾರ ಘೋಷಿಸಿದೆ. 13 ರಕ್ಷಣಾ ಇಲಾಖೆ, ಎಚ್ಎಎಲ್, ಭಾರತೀಯ ವಾಯುಸೇನೆ, ಡಿಆರ್ ಡಿಒ, ನಾಗರಿಕ ವಿಮಾನ ಯಾನ ಸಚಿವಾಲಯಗಳು ಜಂಟಿಯಾಗಿ ಆಯೋ ಜಿಸುವ ಈ ಪ್ರದರ್ಶನದಲ್ಲಿ ದೇಶ-ವಿದೇಶಗಳ ವೈಮಾನಿಕ ಕ್ಷೇತ್ರದ ನೂರಾರು ಕಂಪನಿಗಳು ಭಾಗವಹಿಸುತ್ತವೆ ಎಂದು ತಿಳಿದುಬಂದಿದೆ. ಯುದ್ಧ ವಿಮಾನ, ಹೆಲಿಕಾಪ್ಟರ್, ನಾಗರಿಕ ವಿಮಾನ, ಸಣ್ಣ ವಿಮಾನಗಳು, ಕ್ಷಿಪಣಿಗಳು, ಶಸ್ತ್ರಾಸ್ತ್ರಗಳು, ರಾಡಾರ್ ವ್ಯವಸ್ಥೆ ಸೇರಿ ದಂತೆ ರಕ್ಷಣಾ ವಲಯ ಮತ್ತು ನಾಗರಿಕ ವಿಮಾನ ಯಾನಕ್ಕೆ ಸಂಬಂಧಿಸಿದ ಉತ್ಪನ್ನಗಳು, ಬಿಡಿ ಭಾಗಗಳು, ಮಾಹಿತಿ ತಂತ್ರಜ್ಞಾನ, ಕೃತಕ ಬುದ್ದಿಯ ಉತ್ಪನ್ನಗಳು ಪ್ರದರ್ಶನಕ್ಕೆ ಇರುತ್ತವೆ. ಏರೋ ಇಂಡಿಯಾದಲ್ಲಿ ಕಂಪನಿಗಳು ಭಾಗವಹಿಸಲು ಮತ್ತು ನಾಗರಿಕರು ಪ್ರದರ್ಶನ ವೀಕ್ಷಣೆಗೆ ನೋಂದಣಿ ಪ್ರಕ್ರಿಯೆ ಮುಂದಿನ ದಿನಗಳಲ್ಲಿ ಆರಂಭವಾಗಲಿದೆ.
ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಲ್ಸಿ ರಮೇಶ್ ಗೌಡ ಅವರ ವಿರುದ್ಧ ಉದ್ಯಮಿ ವಿಜಯ್ ತಾತಾ ಅವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಇದರ ಬೆನ್ನಲ್ಲೆ ಮಾಜಿ ಎಂಎಲ್ಸಿ ರಮೇಶ್ ಗೌಡ ಉದ್ಯಮಿಯ ವಿರುದ್ಧ ಪ್ರತಿ ದೂರನ್ನು ದಾಖಲಿಸಿದ್ದಾರೆ. ಹೌದು ಕಳೆದ ಆಗಸ್ಟ್ 24ರಂದು ವಿಜಯ್ ತಾತ ತಮ್ಮ ಮನೆಗೆ ಕರೆದಿದ್ದರು. ಊಟಕ್ಕೆ ಎಂದು ಕರೆದಿದ್ದಾಗ ನನಗೆ 100 ಕೋಟಿ ರೂಪಾಯಿ ಹಣ ಬೇಕು ಎಂದು ಹೇಳಿದ್ದರು ಆಗ ನಾನು ನನ್ನ ಹತ್ತಿರ ಇಲ್ಲ ಎಂದಾಗ ನನಗೆ ಧಮ್ಕಿ ಹಾಕಿದ್ದಾರೆ ಎಂದು ರಮೇಶ್ ಗೌಡ ದೂರು ಸಲ್ಲಿಸಿದ್ದಾರೆ. ನಾನು ಈಗ ತುಂಬಾ ಲಾಸ್ ನಲ್ಲಿ ಇದ್ದೇನೆ ನನಗೆ ಈಗ 100 ಕೋಟಿ ರೂಪಾಯಿ ಅವಶ್ಯಕತೆ ಇದೆ. ಒಂದು ವೇಳೆ ನನಗೆ 100 ಕೋಟಿ ರೂಪಾಯಿ ಕೊಡದೆ ಹೋದರೆ ನಿಮ್ಮನ್ನು ಮತ್ತು ಕುಮಾರಸ್ವಾಮಿ ಅವರನ್ನು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ…













