Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಂಚಾರಿ ಪೇದೆಯೊಬ್ಬ ಮಹಿಳೆಯ ಹತ್ತಿರ ನಿಮ್ಮ ಮಗಳು ಪಾನಮತ್ತ ಚಾಲನೆ ಮಾಡಿರುವುದಾಗಿ ಬೆದರಿಸಿ 5 ಸಾವಿರ ವಸೂಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಜೀವನ್ ಭೀಮಾ ನಗರ ಸಂಚಾರ ಠಾಣೆ ಕಾನ್ಸ್ಟೇಬಲ್ವೊಬ್ಬರ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. https://kannadanewsnow.com/kannada/centre-instructs-states-to-fix-6-years-as-minimum-age-for-class-1-admission/ ವಾರಾಂತ್ಯದಲ್ಲಿ ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆಗೆ ಅಧಿಕಾರಿಗಳು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಸ್ರೋ ಜಂಕ್ಷನ್ನಲ್ಲಿ ಶನಿವಾರ ರಾತ್ರಿ ಜೆ.ಬಿ.ನಗರ ಸಂಚಾರ ಠಾಣೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಆ ವೇಳೆ ಮಣಿಪಾಲ್ ಆಸ್ಪತ್ರೆ ಕಡೆಯಿಂದ ಬಂದ ಮಹಿಳೆಯೊಬ್ಬರನ್ನು ಅಡ್ಡಗಟ್ಟಿದ ಜೆ.ಬಿ.ನಗರ ಸಂಚಾರ ಠಾಣೆ ಕಾನ್ಸ್ಟೇಬಲ್ ಹುಚ್ಚುಸಾಬ್, ಆ ಮಹಿಳೆಗೆ ಅಲ್ಕೋಮೀಟರ್ ಮೂಲಕ ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆ ನಡೆಸಿದ್ದಾರೆ. https://kannadanewsnow.com/kannada/big-shock-to-primary-and-secondary-school-hindi-co-teachers-in-the-state-school-education-department-withdraws-promotions/ ಆದರೆ ಮಹಿಳೆ ಮದ್ಯ ಸೇವಿಸದೆ ಇದ್ದರೂ 15 ಸಾವಿರ ನೀಡುವಂತೆ ಕಾನ್ಸ್ಟೇಬಲ್ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಗೂಗಲ್ ಪೇ ಮೂಲಕ ₹5 ಸಾವಿರ ಪಡೆದು ಅವರನ್ನು ಕಾನ್ಸ್ಟೇಬಲ್ ಕಳುಹಿಸಿದ್ದಾರೆ.ಜೆ.ಬಿ.ನಗರ ಕಾನ್ಸ್ಟೇಬಲ್ ಹುಚ್ಚುಸಾಬ್ ಕಡಿಮಣಿ ಮೇಲೆ…
ಗದಗ : ಸಂಸದ ಅನಂತಕುಮಾರ ಹೆಗಡೆ, ಮುಖ್ಯಮಂತ್ರಿಗೆ ಸಿದ್ರಾಮುಲ್ಲಾಖಾನ್ ಎಂಬ ಹೇಳಿಕೆ ವಿಚಾರಕ್ಕೆ ಆಕ್ರೋಶಗೊಂಡ ಯತೀಂದ್ರ ಸಿದ್ದರಾಮಯ್ಯ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರನ್ನು ಜನ ಎಂದಿಗೂ ಒಪ್ಪುವುದಿಲ್ಲ, ಯಾರು ಕೆಲಸ ಮಾಡಿದ್ದಾರೋ ಅವರಿಗೆ ಜನ ಮತ ಹಾಕುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಸದ ಅನಂತಕುಮಾರ ಹೆಗಡೆ, ಮುಖ್ಯಮಂತ್ರಿಗೆ ಸಿದ್ರಾಮುಲ್ಲಾಖಾನ್ ಎಂಬ ಹೇಳಿಕೆ ವಿಚಾರಕ್ಕೆ ಆಕ್ರೋಶಗೊಂಡ ಅವರು, ಯಾರು ಎಲ್ಲ ಸಮುದಾಯಕೋಸ್ಕರ ಕೆಲಸ ಮಾಡುತ್ತಾರೆಯೋ ಅವರನ್ನು ಒಂದು ಸಮುದಾಯದ ಪರ ಎಂದು ಬಿಂಬಿಸುತ್ತಾರೆ. ಇದು ಬಿಜೆಪಿಗರ ಹಳೆಯ ಟ್ಯಾಕ್ಟಿಕ್ಸ್ ಎಂದರು.ಅನಂತಕುಮಾರ ಹೆಗಡೆ 5 ವರ್ಷ ಏನೂ ಕೆಲಸ ಮಾಡಿಲ್ಲ, ಅವರ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. 5 ವರ್ಷ ಜನರ ಮುಂದೆ ಬರಲಿಲ್ಲ, ಪಾರ್ಲಿಮೆಂಟ್ನಲ್ಲಿ ಒಂದೂ ಪ್ರಶ್ನೆ ಕೇಳಲಿಲ್ಲ, ಈಗ ಎಲೆಕ್ಷನ್ ಬಂದಿದೆ ಎಂದು ಹಿಂದೂ -ಮುಸ್ಲಿಂ ಮಧ್ಯೆ ಭಿನ್ನಾಭಿಪ್ರಾಯ ತರಲು ಯತ್ನಿಸುತ್ತಿದ್ದಾರೆ. 4 ಲಕ್ಷ ಕೋಟಿಯಷ್ಟು ತೆರಿಗೆ ಸಂಗ್ರಹಣವಾಗುತ್ತಿದೆ, ರುಪಾಯಿ ಕೊಟ್ಟರೆ 12…
ಹುಬ್ಬಳ್ಳಿ : ಮಹದಾಯಿ ವಿಚಾರದಲ್ಲಿ ದೊಡ್ಡ ಅಪರಾಧ ಮಾಡಿದ್ದು ಕಾಂಗ್ರೆಸ್. ನ್ಯಾಯಾಧಿಕರಣಕ್ಕೆ ತಾವೇ ಬರೆದುಕೊಟ್ಟಿದ್ದಾರೆ ಮಹದಾಯಿಯಿಂದ ಮತ್ತು ಮಲಪ್ರಭಾ ನಡುವೆ ಇಂಟರ್ ಲಿಂಕಿಂಗ್ ಕಾಲುವೆ ಮಾಡಿದ್ದೆವು. ನಾವು ಮಾಡಿದ್ದ ಇಂಟರ್ ಲಿಂಕಿಂಗ್ ಕಾಲುವೆಗೆ ಕಾಂಗ್ರೆಸ್ನವರು ಗೋಡೆ ಕಟ್ಟಿದರು. ಕಾಲುವೆಯಲ್ಲಿ ಗೋಡೆ ಕಟ್ಟಿದ ಅಪಖ್ಯಾತಿ ಕಾಂಗ್ರೆಸ್ದು ಎಂದು ಮಾಜಿ ಸಿಎಂ. ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. https://kannadanewsnow.com/kannada/free-travel-for-ii-puc-exam-students/ ಮಹದಾಯಿ ಯೋಜನೆ ಹಿನ್ನಡೆಗೆ ಕಾಂಗ್ರೆಸ್ ನೇರ ಕಾರಣ. ಈ ವಿಚಾರವಾಗಿ ನ್ಯಾಯಾಧಿಕರಣಕ್ಕೆ ಹೋಗುವ ಅವಶ್ಯಕತೆ ಇರಲಿಲ್ಲ, ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಟ್ರಿಬ್ಯುನಲ್ಗೆ ಹೋಗಿದ್ದು ಕಾಂಗ್ರೆಸ್ ಸರ್ಕಾರ ಎಂದು ತಿಳಿಸಿದರು. https://kannadanewsnow.com/kannada/monthly-household-spending-has-doubled-in-the-last-10-years-in-the-country-nsso-survey/ ಪರಿಸರ ಇಲಾಖೆ ಅನುಮತಿ ಪಡೆಯದೇ ಟೆಂಡರ್ ಪ್ರಕ್ರಿಯೆ ಮಾಡುವ ಕೆಲಸ ಮಾಡಿದ್ದಾರೆ. ಗೋವಾದವರು ಈಗ ಕೋರ್ಟ್ಗೆ ಹೋಗಿದ್ದಾರೆ. ರಾಜ್ಯ ಸರ್ಕಾರ ಕೋರ್ಟ್ನಲ್ಲಿ ಸಮರ್ಥವಾದ ಮಾಡುತ್ತಿಲ್ಲ. ಕೃಷ್ಣ ಯೋಜನೆ, ಮೇಕೆದಾಟು ಸೇರಿ ಎಲ್ಲಾ ನೀರಾವರಿ ಯೋಜನೆ ವಿಚಾರದಲ್ಲೂ ಸರ್ಕಾರದಿಂದ ನಿರ್ಲಕ್ಷ್ಯವಾಗುತ್ತಿದೆ. ಈ ಸರ್ಕಾರ ಬಂದ ಮೇಲೆ ನಯಾ ಪೈಸೆ ಹಣ ಬಿಡುಗಡೆ ಮಾಡಿಲ್ಲ. ಗೋಡೆ…
ಬೆಂಗಳೂರು : ಸ್ನೇಹಿತನೊಂದಿಗೆ ರಾತ್ರಿಯ ವೇಳೆ ಯುವತಿಯವರು ಕಸ ಎಸೆಯಲು ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು ಯುವತಿಯ ಖಾಸಗಿ ಭಾಗಗಳನ್ನು ಮುಟ್ಟಿ ಲೈಂಗಿಕವಾಗಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋರಮಂಗಲದಲ್ಲಿ ಈ ಘಟನೆ ಸಂಭವಿಸಿದೆ. https://kannadanewsnow.com/kannada/mann-ki-baat-indias-nari-shakti-reaching-new-heights-pm-modi/ ರಾತ್ರಿ ವೇಳೆ ಕಸ ಎಸೆಯುವುದಕ್ಕೆ ಹೋಗಿದ್ದ ಯುವತಿಯನ್ನು ಕಿಡಿಗೇಡಿಗಳು ತಬ್ಬಿಕೊಂಡು ಖಾಸಗಿ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾರೆ.ಫೆ.18ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂದು ರಾತ್ರಿ ಯುವತಿಯೊಬ್ಬಳು ತನ್ನ ಸ್ನೇಹಿತನೊಂದಿಗೆ ಮಧ್ಯರಾತ್ರಿ ವೇಳೆ ಕಸ ಎಸೆಯಲು ಹೋಗಿದ್ದಳು. https://kannadanewsnow.com/kannada/successful-implementation-of-digital-payment-system-in-the-transport-sector-of-the-state-digital-payment-systems/ ಈ ವೇಳೆ ಕೊರಮಂಗಲ ಆಟೋ ಸ್ಟಾಂಡ್ ಬಳಿ ಕುಳಿತಿದ್ದ ಪುಂಡರ ಗುಂಪು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕ ಹಾಗೂ ಯುವತಿಯನ್ನು ಹಿಂಬಾಲಿಸಿಕೊಂಡು ಹೋಗಿದೆ.ನಂತರ, ನಿರ್ಜನ ಪ್ರದೇಶದಲ್ಲಿ ಕಸ ಎಸೆದು ವಾಪಸ್ ಬರುವಾಗ ಅವರನ್ನು ಹಿಂಬಾಲಿಸಿದ ಪುಂಡರ ಗುಂಪಿನಲ್ಲಿದ್ದ ನಾಲ್ವರು, ಯುವತಿಯನ್ನು ಅಡ್ಡಗಟ್ಟಿ ಹಿಡಿದುಕೊಂಡಿದ್ದಾರೆ. https://kannadanewsnow.com/kannada/online-gaming-addiction-son-kills-mother-for-insurance-money-to-repay-loan/ ನಂತರ, ಯುವತಿಯ ಬಾಯಿ ಮುಚ್ಚಿ ಹಿಡಿದುಕೊಂಡು ಆಕೆಯ ಖಾಸಗಿ ಅಂಗಗಳನ್ನು ಕೆಟ್ಟದಾಗಿ…
ಶಿವಮೊಗ್ಗ : ಯುವಕನೊಬ್ಬ 14 ವರ್ಷದ ಬಾಲಕಿಯ ಹಿಂದೆ ಬಿದ್ದು ಪ್ರೀತಿಸುವಂತೆ ಕಿರುಕುಳ ನೀಡಿದ್ದಾನೆ. ಈ ವೇಳೆ ಯುವಕನ ಕಿರುಕುಳ ತಾಳಲಾರದೆ ಬಾಲಕಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿ ನಡೆದಿದೆ. https://kannadanewsnow.com/kannada/online-gaming-addiction-son-kills-mother-for-insurance-money-to-repay-loan/ ಆತ್ಮಹತ್ಯೆಗೆ ಶರಣಾಗಿರುವ ಬಾಲಕಿಯನ್ನ ವರ್ಷಣಿ (14) ಎಂದು ಹೇಳಲಾಗುತ್ತಿದೆ. ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಪ್ರೀತಿಸುವಂತೆ ತ್ಯಾಗರಾಜ್ ಎನ್ನುವ ವ್ಯಕ್ತಿ ಬಾಲಕಿಗೆ ಕಿರುಕುಳ ನೀಡುತ್ತಿದ್ದ ಎಂದು ತಿಳಿದುಬಂದಿದೆ. ಎರಡು ತಿಂಗಳ ಹಿಂದೆ ಬಾಲಕಿ ಪೋಷಕರು ಯುವಕನಿಗೆ ಎಚ್ಚರಿಕೆ ನೀಡಿದ್ದರು. https://kannadanewsnow.com/kannada/justice-anjari-sworn-in-as-chief-justice-of-karnataka-high-court/ ಈ ವೇಳೆ ಇದು ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ತ್ಯಾಗರಾಜ್ ಮತ್ತೆ ಬಾಲಕಿಗೆ ಕಾಟ ಕೊಡಲು ಶುರು ಮಾಡಿದ್ದಾನೆ. ಯುವಕನ ಕಾಟ ತಾಳಲಾರದೆ ನಿನ್ನೆ ಬಾಲಕಿ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಶಿವಮೊಗ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/from-now-on-it-is-mandatory-for-the-police-to-provide-information-about-property-and-purchases-important-order-from-the-state-government/
ಉತ್ತರಕನ್ನಡ : ಸದಾ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಲ್ಲಿರುವ ಸಂಸದ ಕುಮಾರ್ ಹೆಗಡೆ ವಿರುದ್ಧ ಇದೀಗ ಮತ್ತೊಂದು ಕೇಸ್ ದಾಖಲಾಗಿದ್ದು, ಇತ್ತೀಚಿಗೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/bengaluru-police-raid-brothel-three-arrested-7-foreign-girls-rescued/ ಈಗಾಗಲೆ ಅಯೋಧ್ಯೆ ರಾಮಮಂದಿರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ವಿವಾದಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆ ಸಂಬಂಧ ಈಗಾಗಲೇ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಎಫ್ಐಆರ್ ದಾಖಲಾಗಿದೆ. ಇದೀಗ ಅನಂತಕುಮಾರ ಹೆಗಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ಮುಂಡಗೋಡ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/breaking-in-a-heart-rending-incident-in-dharwad-mother-commits-suicide-after-killing-two-children/ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಗೆ ಸಿದ್ರಾಮುಲ್ಲಾ ಖಾನ್ ಎಂದು ಟೀಕಿಸಿದ್ದರು ಅಲ್ಲದೆ ಅಯೋಧ್ಯ ರಾಮಮಂದಿರ ವಿಚಾರವಾಗಿ ಈ ಹಿಂದೆ ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ’…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಮಸಾಜ್ ಪಾರ್ಲರ್ ಹೆಸರಿನಲ್ಲಿ ವಿದೇಶಿ ಯುವತಿಯನ್ನು ಕರೆಸಿಕೊಂಡು ವೇಶ್ಯವಾಟಿಕೆ ದಂದೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸರ ಎಷ್ಟೇ ಕಠಿಣ ಅಕ್ರಮ ಕೈಗೊಂಡರು ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. https://kannadanewsnow.com/kannada/breaking-in-a-heart-rending-incident-in-dharwad-mother-commits-suicide-after-killing-two-children/ ಇದೀಗ ಅದೇ ರೀತಿಯಾಗಿ ಇಂದು ಬೆಂಗಳೂರಿನ ರೋರಾ ಥಾಯ್ ಸ್ಪಾ (ಮಸಾಜ್ ಪಾರ್ಲರ್) ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ನ್ಯೂ ಟೌನ್ ಪೊಲೀಸರು ದಾಳಿ ಮಾಡಿ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ವಶಪಡಿಸಿಕೊಂಡಿದ್ದು 7 ವಿದೇಶಿ ಯುವತಿಯರನ್ನು ರಕ್ಷಣೆ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. https://kannadanewsnow.com/kannada/shocking-driverless-freight-train-travels-from-kathua-to-pathankot-watch-video/ ರೋರಾ ಲಕ್ಸುರಿ ಥಾಯ್ ಸ್ಪಾ (ಮಸಾಜ್ ಪಾರ್ಲರ್) ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಆರೋಪಿಗಳು ಥೈಲ್ಯಾಂಡ್ ಸೇರಿದಂತೆ ವಿವಿಧ ದೇಶದ ಮಹಿಳೆಯರನ್ನು ಟೂರಿಸ್ಟ್ ವೀಸಾ ಹಾಗೂ ಬ್ಯುಸಿನೆಸ್ ವೀಸಾ ಮೂಲಕ ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು. https://kannadanewsnow.com/kannada/water-scarcity-in-bengaluru-tenants-vacating-their-houses/ ಖಚಿತ ಮಾಹಿತಿಯನ್ನು ಪಡೆದುಕೊಂಡ ಈ ವಿಚಾರ ತಿಳಿದ ಈಶಾನ್ಯ ವಿಭಾಗದ ಡಿಸಿಪಿ, ಯಲಹಂಕ ನ್ಯೂಟೌನ್ ಪೊಲೀಸರಿಗೆ…
ಧಾರವಾಡ : ತಾಯಿಯೊಬ್ಬಳು ತನ್ನ ಮಕ್ಕಳನ್ನು ಕತ್ತುಹಿಸಿಕಿ ಕೊಂದು ತಾನು ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆಯು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ. https://kannadanewsnow.com/kannada/shocking-driverless-freight-train-travels-from-kathua-to-pathankot-watch-video/ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.ಕತ್ತು ಹಿಸುಕಿ ದರ್ಶನ್ (4) ಹಾಗೂ ಸುಮಾ (5) ಎನ್ನುವ ಮಕ್ಕಳನ್ನು ಕೊಲೆಗೈದು ಸಾವಿತ್ರಿ (32) ಎನ್ನುವ ಮಹಿಳೆ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. https://kannadanewsnow.com/kannada/water-scarcity-in-bengaluru-tenants-vacating-their-houses/ ಆದರೆ ತಾಯಿಯು ತನ್ನ ಮಕ್ಕಳನ್ನು ಯಾವ ಕಾರಣಕ್ಕೆ ಕೊಂದಿದ್ದಾಳೆ ಹಾಗೂ ತಾನು ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದರ ಕುರಿತು ಇದುವರೆಗೂ ಯಾವುದೇ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದು, ಘಟನೆ ಕುರಿತಂತೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/90-of-young-indian-women-suffer-from-iron-deficiency-doctors/
ಬೆಂಗಳೂರು : ಶಾಲೆಗೆ ತೆರಳಲು ಸರಿಯಾದ ಸಾರಿಗೆ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿಗಳು ಪರದಾಡಾಡುತ್ತಿದ್ದಾರೆ. ಬಸ್ ಗಳಿಲ್ಲದೆ ತೊಂದರೆಯಾಗುತ್ತಿದೆ ಎಂದು ತಾವರಕೆರೆ ವ್ಯಾಪ್ತಿಯ ಸೀಗೆಹಳ್ಳಿಯಲ್ಲಿ ವಾಸವಿರುವ 8ನೇ ತರಗತಿ ವಿದ್ಯಾರ್ಥಿನಿ ವಿವೈ ಹರ್ಷಿಣಿ, ಸಿಎಂ ಅಂಕಲ್ ನಮ್ಗೆ ಸ್ಕೂಲ್ ಗೆ ಹೋಗಲು ಬಸ್ ಕೊಡಿ ಎಂದು ಸಿದ್ದರಾಮಯ್ಯ ಅವರಿಗೆ ಭಾವನಾತ್ಮಕ ಪತ್ರ ಬರೆದಿದ್ದಾಳೆ. https://kannadanewsnow.com/kannada/udupi-first-monkey-disease-case-report-in-the-district/ ಹೌದು, ಬೆಂಗಳೂರು ನಗರದಿಂದ ಸುಮಾರು 25 ಕಿಲೋಮಿಟರ್ ದೂರದಲ್ಲಿರುವ ತಾವರೆಕೆರೆ ವ್ಯಾಪ್ತಿಯ ಸೀಗೇಹಳ್ಳಿಯಿಂದ ಬೆಂಗಳೂರಿಗೆ ಸರಿಯಾದ ಸಾರಿಗೆ ಬಸ್ ವ್ಯವಸ್ಥೆ ಇಲ್ಲದಿರುವ ಬಗ್ಗೆ ಬಾಲಕಿಯೊಬ್ಬಳು ಪತ್ರದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಸೆಳೆದಿದ್ದಾಳೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಬಿಎಂಟಿಸಿ ಎಂಡಿಗೂ ಪತ್ರ ಕಳುಹಿಸಿದ್ದಾಳೆ ಎಂದು ತಿಳಿದುಬಂದಿದೆ. https://kannadanewsnow.com/kannada/chant-this-one-line-mantra-daily-in-the-ears-of-children-to-get-good-marks-in-the-exam/ ಸೀಗೇಹಳ್ಳಿ ನಗರದಿಂದ ಸುಮಾರು 25 ಕಿಲೋಮಿಟರ್ ದೂರವಿದೆ. ಹತ್ತಿರದಲ್ಲೇ ಬಿಎಂಟಿಸಿ ವಾಯುವ್ಯ ವಿಭಾಗದ ಡಿಪೋ ಇದೆ. ಇಲ್ಲಿಂದ ಅನೇಕ ಕಡೆ ಬಸ್ಗಳ ವ್ಯವಸ್ಥೆಯನ್ನು ಬಿಎಂಟಿಸಿ ಕಲ್ಪಿಸಿದೆ. ಅಕ್ಕಪಕ್ಕದಲ್ಲಿರುವ ವನಗನಹಟ್ಟಿ, ಚನ್ನೇನಹಳ್ಳಿ, ಜಟ್ಟಿಪಾಳ್ಯ, ಸೀಗೆಹಳ್ಳಿಯಿಂದ ಬೆಂಗಳೂರಿಗೆ ಬಸ್ಗಳ ವ್ಯವಸ್ಥೆಯೇ ಇಲ್ಲ.…
ಪರೀಕ್ಷೆ ಹತ್ತಿರ ಬರುತ್ತಿದ್ದಂತೆ ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗಳಲ್ಲಿ ಓದುವಂತೆ ಮಾಡುತ್ತೇವೆ, ಇದರಿಂದ ನಾವು ಕಷ್ಟಪಟ್ಟರೂ ಅವರು ಓದಬಹುದು ಮತ್ತು ಉತ್ತಮ ಅಂಕಗಳನ್ನು ಪಡೆಯುತ್ತಾರೆ. ಪ್ರಸ್ತುತ ಸನ್ನಿವೇಶದಲ್ಲಿ ಎಲ್ಲಾ ಮಕ್ಕಳು ಒಳ್ಳೆಯ ಮತ್ತು ಬುದ್ಧಿವಂತ ಮಕ್ಕಳು ಮತ್ತು ಓದುವ ಮಕ್ಕಳು. ಆದರೆ ಕೆಲವು ಮಕ್ಕಳು ಪರೀಕ್ಷೆಯ ಸಮಯದಲ್ಲಿ ಓದುವುದೆಲ್ಲವನ್ನೂ ಮರೆತುಬಿಡುತ್ತಾರೆ. ಕೆಲವು ಮಕ್ಕಳು ಯಾವಾಗಲೂ ಸ್ವಲ್ಪ ಜಡವಾಗಿರುತ್ತಾರೆ. ಇದು ಬದಲಾಗಬೇಕಾದರೆ ಸರಸ್ವತಿ ದೇವಿಯ ಕೃಪೆಗೆ ಪಾತ್ರರಾಗಬೇಕು. ಆ ಕೃಪೆಯನ್ನು ಪರಿಪೂರ್ಣವಾಗಿ ಪಡೆಯಲು ಈ ಒಂದು ಸಾಲಿನ ಮಂತ್ರ ಸಾಕು ಎನ್ನುತ್ತದೆ ಆಧ್ಯಾತ್ಮಿಕತೆ . ಈ ಪೋಸ್ಟ್ನಲ್ಲಿ, ಮಂತ್ರ ಯಾವುದು ಮತ್ತು ಅದನ್ನು ಹೇಗೆ ಹೇಳಬೇಕೆಂದು ನೀವು ವಿವರವಾಗಿ ನೋಡಬಹುದು. ತಮ್ಮ ಮಕ್ಕಳು ಚೆನ್ನಾಗಿ ಓದಿ ಉತ್ತಮ ಸ್ಥಾನದಲ್ಲಿರಬೇಕು ಎಂಬುದು ಪೋಷಕರ ದೊಡ್ಡ ಕನಸು. ಇಂದು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಹೊಂದಲು ಬೆಳಿಗ್ಗೆಯಿಂದ ಸಂಜೆಯವರೆಗೆ ದಣಿವರಿಯಿಲ್ಲದೆ ಶ್ರಮಿಸುತ್ತಾರೆ. ಅದಕ್ಕೆ ಆಧಾರವೆಂದರೆ ಅವರು ಉತ್ತಮ ಶಿಕ್ಷಣ…