Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹಗೆ ಅಯೋಗ್ಯ ಎಂಬ ಪದ ಬಳಸಿದ್ದರಿಂದ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ ವಿರುದ್ಧ ಕೇಸ್ ದಾಖಲಾಗಿತ್ತು. ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಹೈಕೋರ್ಟ್ ಇದೀಗ ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಹಾಗಾಗಿ ಶಾಸಕ ಪ್ರದೀಪ್ ಈಶ್ವರ್ ಗೆ ಇದೀಗ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಹೌದು ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಕುರಿತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಪ್ರತಾಪ್ ಸಿಂಹ ಒಬ್ಬ ಅಯೋಗ್ಯ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ, ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ದಾಖಲಾಗಿತ್ತು. ಇಂದು ಹೈಕೋರ್ಟ್ ಅಲ್ಲಿ ಈ ಒಂದು ಪ್ರಕರಣದ ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದ್ದಾರೆ. ಪ್ರದೀಪ್ ಈಶ್ವರ್ ಹೇಳಿದ್ದೇನು? ಅಯೋಧ್ಯಾ ಶ್ರೀ ರಾಮ ದೇವಸ್ಥಾನ ಉದ್ಘಾಟನೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ಚರ್,…
ಬೆಳಗಾವಿ : ವಾಣಿಜ್ಯ ಮಳಿಗೆಯ ಕುರಿತು ಮಾಹಿತಿ ಪಡೆಯಲು ಪುರಸಭೆಗೆ ಬಂದಿದ್ದ ವಕೀಲರೊಬ್ಬರೂ ಪುರಸಭೆಯ ಮುಖ್ಯಾಧಿಕಾರಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯ ಪುರಸಭೆ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದೆ. ಮುಖ್ಯಾಧಿಕಾರಿ ಅಶೋಕ ಗುಡಿಮನಿ ಮೇಲೆ ವಕೀಲನೆಂದೆ ಹಲ್ಲೆ ನಡೆದಿದೆ. ಪುರಸಭೆ ಮುಖ್ಯ ಅಧಿಕಾರಿ ಮೇಲೆ ವಕೀಲ ಮಿತೇಶ್ ಪಟ್ಟಣ ಹಲ್ಲೆ ಮಾಡಿದ್ದಾರೆ. ಪಟ್ಟಣದ ವಾಣಿಜ್ಯ ಮಳಿಗೆ ಬಗ್ಗೆ ವಕೀಲರು ಮಾಹಿತಿ ಕೇಳಿದ್ದರು. ಮಳಿಗೆ ಬಗ್ಗೆ ಮಾಹಿತಿ ಕೇಳಿ ಮುಖ್ಯ ಅಧಿಕಾರಿ ಜೊತೆಗೆ ವಾಗ್ವಾದ ಮಾಡಿದ್ದಾರೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ವಕೀಲರು ಮಾತಿಗೆ ಮಾತು ಬೆಳೆದು ಮುಖ್ಯಾಧಿಕಾರಿ ಮೇಲೆ ಹಲ್ಲೆ ಮಾಡಿದ್ದಾರೆ. ಕೂಡಲೇ ಅಥಣಿ ಸರಕಾರಿ ಆಸ್ಪತ್ರೆಗೆ ಸದ್ಯ ಪುರಸಭೆಯ ಮುಖ್ಯಾಧಿಕಾರಿ ದಾಖಲಾಗಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಇಡಿ ಸಂಕಷ್ಟ ಎದುರಾಗಿದೆ. ಇದರ ಮಧ್ಯ ಅವರ ಪತ್ನಿ ಪಾರ್ವತಿಯವರು, ಮುಡಾಗೆ 14 ಸೈಟ್ ಗಳನ್ನು ವಾಪಸ್ ನೀಡಿದ್ದಾರೆ. ಆದರೆ ವಿಪಕ್ಷಗಳು ಎಷ್ಟೇ ಒತ್ತಾಯ ಮಾಡಿದರು, ನಾನು ರಾಜೀನಾಮೆ ನೀಡಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ ಈ ವಿಚಾರವಾಗಿ, ಬಿಜೆಪಿಯ ಪರಿಷತ್ ಸದಸ್ಯ ಸಿಟಿ ರವಿ ಅವರು ಸಿಎಂ ಸಿದ್ದರಾಮಯ್ಯ ನಾನೇ ಜಡ್ಜ್ ಎನ್ನುವ ಮನಸ್ಥಿತಿಯಿಂದ ಹೊರಬರಲಿ ಎಂದು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಆರ್ ಅಶೋಕ್ ಅವರ 11 ವರ್ಷಗಳ ಹಳೆಯ ಪ್ರಕರಣವನ್ನು ಎತ್ತಿದ್ದಾರೆ. ಇವರಿಗೆ ಸಿದ್ದರಾಮಯ್ಯ ರಾಜೀನಾಮೆ ಕೇಳುವ ತಾಕತ್ ಇಲ್ಲ. ಅಶೋಕ ರಾಜೀನಾಮೆ ಕೇಳುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಧ್ವನಿ ಎತ್ತಿದ್ದಾರೆ ಎಂದರು. ಆರ್.ಅಶೋಕ ಹೆಗಲ ಮೇಲೆ ಬಂದೂಕಿಟ್ಟು ಸಿದ್ದರಾಮಯ್ಯಗೆ ಗುರಿ ಇಟ್ಟಿದ್ದಾರೆ.ಸಿದ್ದರಾಮಯ್ಯ ಕಡೆ ಬಹಳ ಬಂದೂಕು ಇವೆ ಎಂಬುದು ಸ್ಪಷ್ಟವಾಗಿದೆ. ಸಿದ್ದರಾಮಯ್ಯ ನಾನೆ ಜಡ್ಜ್…
ಬೆಂಗಳೂರು : ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಮುಡಾ ಸೈಟ್ ಹಂಚಿಕೆಯಾಗಿದೆ ಹಾಗಾಗಿ ಇದರಲ್ಲಿ ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ನೀಡಬೇಕು ಎಂದು ಸ್ವಪಕ್ಷದ ವಿರುದ್ಧವೇ ಶಾಸಕ ಎಸ್ ಟಿ ಸೋಮಶೇಖರ್ ವಾಗ್ದಾಳಿ ನಡೆಸಿದರು. ಈ ವಿಚಾರವಾಗಿ ಎಂಎಲ್ಸಿ ಸಿಟಿ ರವಿ ಅವರು ಶಾಸಕ ಎಸ್ ಟಿ ಸೋಮಶೇಖರ್ ಗೆ ಆತ್ಮಸಾಕ್ಷಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ನೈತಿಕ ಮೌಲ್ಯ ಎತ್ತಿ ಹಿಡಿಯುವ ಯಾವುದೇ ರಾಜಕಾರಣಿ ತಮ್ಮ ಮೇಲೆ ಆಪಾದನೆ ಬಂದಾಗ ರಾಜೀನಾಮೆ ನೀಡುತ್ತಾರೆ. ಜಿ ಟಿ ದೇವೇಗೌಡರ ಹೇಳಿಕೆಗೆ ಉತ್ತರಿಸುವ ಕೆಲಸ ನಂದಲ್ಲ.ಎಸ್ ಟಿ ಸೋಮಶೇಖರ್ ಆತ್ಮಸಾಕ್ಷಿ ಇಲ್ಲದಿರುವ ಕಾರಣಕ್ಕೆ ತಾಂತ್ರಿಕವಾಗಿ ಮಾತ್ರ ಬಿಜೆಪಿಯಲ್ಲಿ ಇದ್ದಾರೆ ಸೋಮಶೇಖರ್ ಜಿ ಟಿ ದೇವೇಗೌಡ ಬಗ್ಗೆ ನಾನು ಮಾತನಾಡುವುದಿಲ್ಲ ನಮ್ಮ ಪಕ್ಷದ ನಿಲುವಿನಲ್ಲಿ ವ್ಯತ್ಯಾಸ ಇಲ್ಲ ಎಂದು ತಿಳಿಸಿದರು.
ನವದೆಹಲಿ : ತಿರುಪತಿ ಲಡ್ಡು ವಿಚಾರವಾಗಿ ಕಳೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಆಂಧ್ರ ಸರ್ಕಾರಕ್ಕೆ ಛೀಮಾರಿ ಹಾಕಿತ್ತು. ರಾಜಕೀಯದಲ್ಲಿ ದೇವರನ್ನು ಎಳೆದು ತರಬೇಡಿ ಎಂದು ಹಿಗ್ಗಾ ಮುಗ್ಗ ಜಾಡಿಸಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ನಡೆದ ವಿಚಾರಣೆ ಮುಂದೂಡಲಾಯಿತು. ಹೌದು ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನಾಳೆಗೆ ಭಾರತದ ಸುಪ್ರೀಂ ಕೋರ್ಟ್ ಮುಂದೂಡಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನಾಳೆಗೆ ಬೆಳಿಗ್ಗೆ 10.30ಕ್ಕೆ ಮುಂದೂಡುವಂತೆ ಕೋರಿದ ನಂತರ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಈಗಾಗಲೇ ಈ ವಿಷಯದ ಕುರಿತು 4 ಅರ್ಜಿಗಳನ್ನು ವಶಪಡಿಸಿಕೊಂಡಿದೆ. ಹಿಂದಿನ ಆಡಳಿತದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಆಂಧ್ರಪ್ರದೇಶ ಮುಖ್ಯಮಂತ್ರಿ…
ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಳ್ಳಾರಿ ಜಿಲ್ಲೆಗೆ ಕೊಲೆ ಆರೋಪಿ ಆಗಿರುವಂತಹ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಹಾಗೂ ನಟ ದರ್ಶನ್ ಸಹೋದರಿ, ಭಾವ ಭೇಟಿ ನೀಡಿದ್ದರು. ಈ ವೇಳೆ ವಿನೀಶ್ ದರ್ಶನ್ ಅವರನ್ನು ತಬ್ಬಿಕೊಂಡು ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಬಿಕ್ಕಿ ಬಿಕ್ಕಿ ಅತ್ತಿರುವ ಪ್ರಸಂಗ ನಡೆಯಿತು. ಇಂದು ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್ ಭೇಟಿಯಾದರು. ಅಪ್ಪನ ಮುಖ ನೋಡುತ್ತಿದ್ದಂತೆ ಪುತ್ರ ವಿನೇಶ್ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಈ ವೇಳೆ ಮಗನನ್ನು ತಬ್ಬಿ ದರ್ಶನ್ ಸಂತೈಸಿದ್ದಾರೆ. ಇದೆ ಸಂದರ್ಭದಲ್ಲಿ ಸೆಂಟ್ರಲ್ ಜೈಲಿನಲ್ಲಿರುವ ಅಪ್ಪನ ಆರೋಗ್ಯವನ್ನು ವಿನೀಶ್ ವಿಚಾರಿಸಿದ. ಆದಷ್ಟು ಬೇಗ ಹೊರ ಬರುತ್ತೇನೆ ಆರಾಮಾಗಿರು ಎಂದು ದರ್ಶನ್ ಪುತ್ರನಿಗೆ ತಿಳಿಸಿದ್ದಾರೆ. ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಪುತ್ರ ವಿನೀಶ್ ಕಣ್ಣೀರಿಟ್ಟಿದ್ದಾನೇ. ಮಗ ಅಳುವುದನ್ನು ಕಂಡು ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಭಾವುಕರಾಗಿದ್ರು. ವಿಜಯಲಕ್ಷ್ಮಿ…
ಮೈಸೂರು : ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಅವರು ಮೈಸೂರಿನಲ್ಲಿ ನಾಡಹಬ್ಬ ವಿಶ್ವವಿಖ್ಯಾತ ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್ ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಚುನಾವಣೆಯಲ್ಲಿ ಜಯ ಗಳಿಸಿದ ಎಂಟೇ ತಿಂಗಳಲ್ಲಿ ಎಲ್ಲಾ 5 ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.…
ಮೈಸೂರು : ಒಂದು ಕಡೆಗೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದರೆ, ಇನ್ನೊಂದೆಡೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ವಿಪಕ್ಷಗಳು ಆಗ್ರಹಿಸುತ್ತಿವೆ. ಇದರ ಮಧ್ಯ ಕಾಂಗ್ರೆಸ್ಸಿನ ಹಲವು ನಾಯಕರು ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ. ಇದೀಗ ಇಂದು ದಸರಾ ಮಹೋತ್ಸವದ ವೇದಿಕೆಯಲ್ಲಿ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಇನ್ನೊಂದು ವರ್ಷ ದೇವಿ ನನಗೆ ಅಧಿಕಾರ ನಡೆಸಲು ಆರ್ಶೀವಾದ ಮಾಡಲಿ ಎಂದು ತಿಳಿಸಿದ್ದಾರೆ. ಹೌದು ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು,ಇನ್ನೊಂದು ವರ್ಷ ದೇವಿ ನನಗೆ ಅಧಿಕಾರ ನಡೆಸಲು ಆರ್ಶೀವಾದ ಮಾಡಲಿ. ಉತ್ತಮ ಕೆಲಸ ಮಾಡಲು ದೇವಿ ಇನ್ನೊಂದು ವರ್ಷವಾದರೂ ಆಶೀರ್ವದಿಸಲಿ. ಜನರ ಸೇವೆ ಮಾಡಲು ಆ ತಾಯಿ ಚಾಮುಂಡಿ ಶಕ್ತಿ ಕೊಡಲಿ ಎಂದು ಬೇಡಿಕೊಳ್ಳುವೆ ಎಂದಿದ್ದಾರೆ. ಇನ್ನೊಂದು ವರ್ಷದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿದು, ರಾಜ್ಯಕ್ಕೆ ಹೊಸ ಸಿಎಂ ಆಯ್ಕೆ ಆಗಲಿದ್ದಾರೆ ಎಂಬ ಮಾತಿಗೆ ಇದೀಗ ಖುದ್ದು ಸಿದ್ದರಾಮಯ್ಯ ಅವರ ಹೇಳಿಕೆಗಳಿಗೆ ರೆಕ್ಕೆ ಪುಕ್ಕ ಬಂದಂತಾಗಿದೆ.ಅಧಿಕಾರದ ಹಂಚಿಕೆ ಬಗ್ಗೆಯೇ ಸಿಎಂ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಇಡಿ ಹಾಗೂ ಲೋಕಾಯುಕ್ತ ತನಿಖೆಯನ್ನು ಆರಂಭಿಸಿದ್ದು ಅಲ್ಲದೆ, ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾದ 14 ಸೈಟ್ಗಳನ್ನು ಸಹ ವಾಪಸ್ ನೀಡಿದ್ದಾರೆ. ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದು, ಮುಡಾ ಸೈಟ್ ಹಂಚಿಕೆಯಾಗಿದ್ದು ಬಿಜೆಪಿ ಕಾಲದಲ್ಲಿ ಆಗ ಅವರು ಏನು ಲಡ್ಡು ತಿನ್ನುತ್ತಿದ್ದರ? ಎಂದು ಸಚಿವ ಜಮೀರ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಕೇಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿಲ್ಲ ಅದು ಬಿಜೆಪಿ ಕಾಲದಲ್ಲಿ ನಡೆದಿರುವಂತದ್ದು. ಸೈಡ್ ಕೊಟ್ಟಿರುವುದು ಬಿಜೆಪಿ ಕಾಲದಲ್ಲಿ ಆಗ ನಮ್ಮ ಸರ್ಕಾರ ಇರಲಿಲ್ಲ. ಆಗ ಬಿಜೆಪಿ ನಾಯಕರು ಏನು ಮಾಡುತ್ತಿದ್ದರು ಲಡ್ಡು ತಿನ್ನುತ್ತಿದ್ದಾರಾ? ಕೋರ್ಟ್ ನ ತೀರ್ಪು ಸ್ವಾಗತಿಸುವೆ. ತನಿಖೆ ಬಳಿಕ ಸತ್ಯಾಂಶ ಗೊತ್ತಾಗುತ್ತದೆ ಎಂದರು. ಇನ್ನು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದು ಎಂದು ಜಿ ಟಿ ದೇವೇಗೌಡ ಹೇಳಿಕೆಗೆ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿ, ಜಿ ಟಿ…
ಬೆಂಗಳೂರು : ಇತ್ತೀಚಿಗೆ ಕಲ್ಬುರ್ಗಿಯಲ್ಲಿ ಉದ್ಯಮಿಗಳ ಮೇಲೆ 2 ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಅವರನ್ನು ಹನಿಟ್ರ್ಯಾಪ್ಗೆ ಸಿಲುಕಿಸಲು ಯತ್ನಿಸಿ, 6 ಕೋಟಿ ನೀಡುವಂತೆ ಒತ್ತಾಯಿಸಿದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ ಮೂವರು ಆರೋಪಿಗಳನ್ನು ವಿದ್ಯಾ ಬಿರಾದರ್ ಪಾಟೀಲ್, ಗಗನ್ ಹಾಗೂ ಸೂರ್ಯನಾರಾಯಣ್ ಎಂದು ತಿಳಿದುಬಂದಿದೆ. ಕಳೆದ ಆಗಸ್ಟ್ 31ರಂದು ಸ್ಬಾಮೀಜಿಗೆ ಕರೆ ಮಾಡಿದ ಆರೋಪಿತೆ ವಿದ್ಯಾ, ತಾನು ರಾಜ್ಯ ಮಾಹಿತಿ ಹಕ್ಕು ಆಯೋಗದ ಅಧ್ಯಕ್ಷೆ ಹಾಗೂ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ ಅವರ ಸಹೋದರಿಯಾಗಿದ್ದೇನೆ ಎಂದು ಹೇಳಿದ್ದಾಳೆ. ಬಳಿಕ ನಿಮಗೆ ಸಂಬಂಧಿಸಿ, ಮಹಿಳೆಯೊಂದಿಗಿನ ಆಶ್ಲೀಲ ವಿಡಿಯೋ ಕಳುಹಿಸಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಹೀಗಾಗಿ, ಕೂಡಲೇ ಭೇಟಿಯಾಗುವಂತೆ ಹೇಳಿದ್ದರು.ಇದರಂತೆ ಭೇಟಿಯಾದಾಗ ಸ್ವಾಮೀಜಿಯವರಿಗೆ ಸಂಬಂಧಿಸಿದ ಆಶ್ಲೀಲ ವಿಡಿಯೊಗಳಿವೆ ಎಂದು ಆರೋಪಿಗಳು ತಿಳಿಸಿದ್ದಾರೆ. ಈ ವಿಡಿಯೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಬಾರದು ಎಂದರೆ 6 ಕೋಟಿ ರೂ. ಹಣ…













