Subscribe to Updates
Get the latest creative news from FooBar about art, design and business.
Author: kannadanewsnow05
ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ HD ದೇವೇಗೌಡರು ಅಂಬುಲೆನ್ಸ್ ನಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದ್ದರು. ಈ ಒಂದು ಹೇಳಿಕೆಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ದೇವೇಗೌಡರ ವಯಸ್ಸಿಗೆ ಡಿಕೆ ಸುರೇಶ್ ಅವರು ಬದುಕಿರುತ್ತಾರೆ ಇಲ್ಲವೋ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಎಚ್ ಡಿ ದೇವೇಗೌಡ ಆಂಬುಲೆನ್ಸ್ ನಲ್ಲಿ ಪ್ರಚಾರಕ್ಕೆ ಬರುತ್ತಾರೆ ಎಂಬ ಡಿಕೆ ಸುರೇಶ್ ಹೇಳಿಕೆಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು HD ದೇವೇಗೌಡರ ವಯಸ್ಸಿಗೆ ಡಿಕೆ ಸುರೇಶ್ ಬದುಕಿರುತ್ತಾರೋ ಇಲ್ಲವೋ ಗೊತ್ತಿಲ್ಲ.ಎಚ್ಡಿ ದೇವೇಗೌಡರು ಬೆವರು ಸುರಿಸಿ ಪಕ್ಷ ಕಟ್ಟಿದ್ದಾರೆ. ಈ ವಯಸ್ಸಿನಲ್ಲೂ ಪಕ್ಷಕ್ಕಾಗಿ ದೇವೇಗೌಡರು ದುಡಿಯುತ್ತಿದ್ದಾರೆ. ಎಚ್ ಡಿ ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ.ಇದಕ್ಕೆ ಕ್ಷೇತ್ರದ ಜನರು ಮತಗಳ ಮೂಲಕ ಉತ್ತರ ಕೊಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗಲೇ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು…
ತುಮಕೂರು : ಸೆಲ್ಫಿ ಹುಚ್ಚಾಟಕ್ಕೆ ಅನೇಕರು ತಮ್ಮ ಜೀವಕ್ಕೆ ಆಪತ್ತು ತಂದುಕೊಂಡಿದ್ದು ಉಂಟು ಹಾಗೂ ಪ್ರಾಣವನ್ನು ಕೂಡ ಕಳೆದುಕೊಂಡಿದ್ದು ಉಂಟು. ಇದೀಗ ಅಂತದ್ದೇ ಸೆಲ್ಫಿ ಕ್ರೇಜಿಗೆ ರಾಜ್ಯದಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು ತುಮಕೂರಿನಲ್ಲಿ ಕೆರೆ ಕೋಡಿಗೆ ಬಿದ್ದ ಯುವತಿಯು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಹೌದು ತುಮಕೂರಿನ ಗುಬ್ಬಿ ತಾಲೂಕಿನ ಶಿವಪುರದ ಸೋಮನಾಥ್ ಎಂಬುವವರ ಪುತ್ರಿ ಹಂಸ ಸ್ನೇಹಿತರೊಂದಿಗೆ ಮೈದಾಳ ಕೆರೆ ನೋಡಲು ತೆರಳಿದ್ದರು. ಈ ವೇಳೆ ಕೋಡಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದರು. ನೀರಿನಲ್ಲಿ ಜಾರಿ ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದರು. ಮಂದಾರಗಿರಿ ಬೆಟ್ಟದ ತಪ್ಪಲಿನಲ್ಲಿರುವ ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಹಂಸ (20) ಕೆಳಕ್ಕೆ ಬಿದ್ದು ಕಾಣೆಯಾಗಿದ್ದಳು. ಸಂಜೆಯಾದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಪಾಯಕ್ಕೆ ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿತ್ತು. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ನಿನ್ನೆ ಸಂಜೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ರಾತ್ರಿಯಾದರೂ ಆಕೆ ಪತ್ತೆಯಾಗಲಿಲ್ಲ. ಕೆರೆ ಕೋಡಿ ನೀರನ್ನು…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಮುಡಾ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸುತ್ತಿದ್ದಾರೆ. ಮುಡಾ ಹಗರಣದ ಜಾಡು ಬೆಂಗಳೂರಿನವರೆಗೂ ವ್ಯಾಪಿಸಿದ್ದು, ಇಡಿ ಅಧಿಕಾರಿಗಳು ಇಲ್ಲಿನ ಜೆಪಿ ನಗರದಲ್ಲಿರುವ ಬಿಲ್ಡರ್ ಎನ್. ಮಂಜುನಾಥ್ ಎಂಬುವರ ಮನೆ ಮೇಲೆ ದಾಳಿ ಮಾಡಿ, ದಾಖೆಗಳನ್ನು ಪರಿಶೀಲಿಸುತ್ತಿದ್ದಾರೆ. ಇದರ ಮಧ್ಯ ಸ್ನೇಹಮಯಿ ಕೃಷ್ಣ ಬಿಲ್ಡರ್ ಮಂಜುನಾಥ್ ವಿರುದ್ಧ ವಿಡಿಯೋ ಸಮೇತವಾಗಿ ಮತ್ತೊಂದು ದೂರು ನೀಡಿದ್ದಾರೆ ಎನ್ನಲಾಗಿದೆ. ಹೌದು ಸ್ನೇಹಮಯಿ ಕೃಷ್ಣ ಅವರು ಬಿಲ್ಡರ್ ಮಂಜುನಾಥ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ. ಮೈಸೂರಿನ ಶಿವಣ್ಣ ಎಂಬುವವರಿಂದ ಬಿಲ್ಡರ್ ಮಂಜುನಾಥ ಹಣ ಪಡೆದಿದ್ದರು ಎಂದು ಆರೋಪಿಸಿ ದೂರು ನೀಡಿದ್ದಾರೆ ಎನ್ನಲಾಗಿದೆ. 25 ಲಕ್ಷ ನಗದು ಹಣ ಎಣಿಸುತ್ತಿರುವ ಸಮೇತ ಸ್ನೇಹಮಯಿ ಕೃಷ್ಣ ಸಾಕ್ಷಿ ಸಮೇತವಾಗಿ ಇಡಿಗೆ ದೂರು ಕೊಟ್ಟಿದ್ದಾರೆ. ಸದ್ಯ ಮುಡಾ ಹಗರಣಕ್ಕೆ ವಿಡಿಯೋ ಪ್ರಮುಖ ಸಾಕ್ಷಿಯಾಗಿದೆ. ಬಿಲ್ಡರ್…
ಬೆಳಗಾವಿ : ಕಳೆದ ವರ್ಷ ಬೆಳಗಾವಿ ಜಿಲ್ಲೆಯ ವಂಟಮುರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಇಡೀ ದೇಶಾದ್ಯಂತ ಸುದ್ದಿಯಾಗಿತ್ತು. ಇದೀಗ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡದಲ್ಲಿ ದಲಿತರ ಗುಡಿಸಲುಗಳಿಗೆ ಸವರ್ಣಿಯರು ಬೆಂಕಿ ಹಾಕಿರುವ ಘಟನೆ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ಗೋಮಾಳ ಜಾಗದಲ್ಲಿ ಮಹದೇವ್ ಮಾದರ್ ಎನ್ನುವವರು ಸುಮಾರು 12 ಗುಂಟೆ ಜಾಗದಲ್ಲಿ ಗುಡಿಸಿಲು ಹಾಕಿಕೊಂಡು ನೆಲೆಸಿದ್ದರು.ಈ ಜಾಗಕ್ಕಾಗಿ ಮಹಾವೀರ ಕುರಾಡೆ ಹಾಗೂ ಮಹಾದೇವ ಮಾದರ್ ಕುಟುಂಬಗಳ ನಡುವೆ ಜಗಳವಿತ್ತು. ಮುಗಳಖೋಡ ಗ್ರಾಮದಲ್ಲಿನ ಈ ಒಂದು ಗೋಮಾಳ ಜಾಗಕ್ಕಾಗಿ ಎರಡು ಕುಟುಂಬಗಳ ಮಧ್ಯೆ ಜಗಳವಿತ್ತು. ಗೋಮಾಳ ಜಾಗದಲ್ಲಿ ಶೆಡ್ ಹಾಕಿಕೊಂಡಿದ್ದ ಮಹಾದೇವ ಮಾದರ್ ಕುಟುಂಬ ಸುಮಾರು 12 ಗುಂಟೆ ಗೋಮಾಳ ಜಾಗದಲ್ಲಿ ಗುಡಿಸಲುಗಳನ್ನು ನಿರ್ಮಾಣ ಮಾಡಿದ್ದರು. ಈ ಗುಡಿಸಲುಗಳಿಗೆ ಊರಿನ ಮಹಾವೀರ ಕುರಾಡೆ ಕುಟುಂಬದವರು ಬೆಂಕಿ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಬಹಳ ದಿನಗಳಿಂದಲೂ…
ಬೆಂಗಳೂರು : ಇಂದು ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ಅತ್ಯಂತ ಸುಸೂತ್ರವಾಗಿ ನಡೆದಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದರು. ಈ ಕುರಿತಂತೆ ಮಾತನಾಡಿದ ಅವರು, ಗ್ರಾಮ ಆಡಳಿತ ಅಧಿಕಾರಿಯ ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಲಿಖಿತ ಪರೀಕ್ಷೆ ಅತ್ಯಂತ ಸುಗಮವಾಗಿ ನಡೆಯಿತು. ಪರೀಕ್ಷೆಗೆ ಶೇ. 80 ರಷ್ಟು ಮಂದಿ ಹಾಜರಾಗಿದ್ದರು ಎಂದು ತಿಳಿಸಿದ್ದಾರೆ. ಬೆಂಗಳೂರಿನ 88 ಕೇಂದ್ರ ಸೇರಿದಂತೆ ರಾಜ್ಯದ 1,173 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆಯಿತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು 4.79 ಲಕ್ಷ ಅಭ್ಯರ್ಥಿಗಳ ಪೈಕಿ 4.16 ಲಕ್ಷ ಮಂದಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡಿದ್ದರು. ಅವರಲ್ಲಿ ಶೇ. 80 ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಅವರು ವಿವರಿಸಿದರು.
ಕೇರಳ : ತಮ್ಮದೇ ಆದಂತ ವಿಭಿನ್ನ ಶೈಲಿಯಲ್ಲಿ ಯೂಟ್ಯೂಬ್ ಚಾನಲ್ನಲ್ಲಿ ಸಕ್ರಿಯವಾಗಿದ್ದ ದಂಪತಿ ಭಾನುವಾರ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದ ಪರಸ್ಸಾಲ ಪಟ್ಟಣದಲ್ಲಿ ನಡೆದಿದೆ. ಹೌದು ಮೃತ ದಂಪತಿಗಳನ್ನ ಸೆಲ್ವರಾಜ್ (45), ಪ್ರಿಯಾ (40) ಎಂದು ತಿಳಿಬಂದಿದೆ.ಸೆಲ್ವರಾಜ್ ಹಾಗೂ ಪ್ರಿಯಾ ದಂಪತಿ ‘ಸೆಲ್ಲು ಫ್ಯಾಮಿಲಿ’ ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದರು. ಅವರ ಚಾನಲ್ ಸುಮಾರು 18,000 ಫಾಲೋವರ್ಸ್ ಅನ್ನು ಹೊಂದಿದ್ದು, 1,400ಕ್ಕೂ ಹೆಚ್ಚು ವೀಡಿಯೋಗಳನ್ನು ತಮ್ಮ ಚಾನಲ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಕೊನೆಯದಾಗಿ ಅ.25ರಂದು ತಮ್ಮ ಫ್ಯಾಮಿಲಿ ಫೋಟೋಗಳನ್ನ ಎಡಿಟಿಂಗ್ ಮಾಡಿ 55 ಸೆಕೆಂಡುಗಳ ವೀಡಿಯೋ ಮಾಡಿ ಅಪ್ಲೋಡ್ ಮಾಡಿದ್ದರು. ಎರಡು ದಿನಗಳಿಂದ ಮನೆಯಿಂದ ಆಚೆ ಬಾರದ ಕಾರಣ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ತೆಗೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸೆಲ್ವರಾಜ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಿಯಾ ಮೃತದೇಹ ಹಾಸಿಗೆ ಮೇಲೆ ಪತ್ತೆಯಾಗಿದೆ.ಪ್ರಾಥಮಿಕ ತನಿಖೆಯ ಪ್ರಕಾರ, ಎರಡು ದಿನಗಳ ಹಿಂದೆ ಘಟನೆ ಸಂಭವಿಸಿರಬಹುದು…
‘BMTC’ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕೇಸ್ ಹಾಕೋದಲ್ಲ, ಕಠಿಣ ಶಿಕ್ಷೆ ಆಗಬೇಕು : ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು : ಕಳೆದ ಒಂದು ತಿಂಗಳಿನಲ್ಲಿ ಬೆಂಗಳೂರಿನ ಬಿಎಂಟಿಸಿ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣಗಳು ನಡೆದಿವೆ. ಹಾಗಾಗಿ BMTC ಸಿಬ್ಬಂದಿ ಮೇಲಿನ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಡ್ರೈವರ್, ಚಾಲಕರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಕೇಸ್ ಮಾಡುವುದು ಮುಖ್ಯವಲ್ಲ, ಶಿಕ್ಷೆ ಆಗುವ ರೀತಿಯಲ್ಲಿ ಮಾಡಬೇಕು. ಜೈಲಿಗೆ ಹೋಗುವ ರೀತಿ ಮಾಡಬೇಕು, ಆಗ ಅವರಿಗೆ ಬುದ್ಧಿ ಬರುತ್ತದೆ ಎಂದು ಹೇಳಿದ್ದಾರೆ. ಇನ್ನು ಟ್ಯಾನರಿ ರಸ್ತೆಯಲ್ಲಿ ನಿನ್ನೆ ಸಂಜೆ ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ಮೇಲೆ ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳಿಂದ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಸದ್ಯ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ…
ಗುಜರಾತ್ : ಗುಜರಾತನ ಅಮ್ರೇಲಿ ಜಿಲ್ಲೆಯಲ್ಲಿ ಲಘು ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.7 ರಷ್ಟು ಕಂಪನದ ತೀವ್ರತೆ ದಾಖಲಾಗಿದೆ ಎಂದು ಹೇಳಲಾಗುತ್ತಿದೆ. ಭೂಕಂಪದಲ್ಲಿ ಸಾವು ನೋವುಗಳ ಕುರಿತು ಇನ್ನು ವರದಿಯಾಗಿಲ್ಲ ವಾದ್ದರಿಂದ, ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಅಯೋಧ್ಯೆ : ಇತ್ತೀಚಿಗೆ ದೇಶದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ, ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಹಾಗೂ ಕರೆಗಳು ಬರುತ್ತಿವೆ ಇದೀಗ ಬೆಂಗಳೂರು ಅಯೋಧ್ಯೆ ನಡುವೆ ಸಂಚರಿಸುವ ವಿಮಾನಕ್ಕೆ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಅಯೋಧ್ಯೆ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಸ್ಪರ್ಶ ಮಾಡಲಾಗಿದೆ. ಹೌದು ವಿಮಾನದಲ್ಲಿ ಬಾಂಬ್ ಬೆದರಿಕೆ ಕರೆ ಬಂದ ಬಳಿಕ ಪರಿಶೀಲನೆ ನಡೆಸಿದ ಸಿಬ್ಬಂದಿ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆ ಹುಸಿಬಾಂಬ್ ಎಂದು ಅಯೋಧ್ಯೆ ಏರ್ಪೋರ್ಟ್ ಸಿಬ್ಬಂದಿಗಳು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ಟು ಅಯೋಧ್ಯೆಗೆ 173 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಕಾಶ ಏರ್ಲೈನ್ಸ್ಗೆ ಹುಸಿಬಾಂಬ್ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಒಟ್ಟು ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ.
ಶಿವಮೊಗ್ಗ : ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದಲ್ಲಿ ಶಾಂತಿ ಕದಡುವ, ದ್ವೇಷ ಹರಡುವವರ ಮೇಲೆ ನಿಗಾ ವಹಿಸಿ ಕಾನೂನು ಚೌಕಟ್ಟಿನೊಳಗೆ ಕಠಿಣ ಕ್ರಮ ಕೈಗೊಳ್ಳಿ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆಯು ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಸುಳ್ಳು ಸುದ್ದಿ, ವಿವಾದಾತ್ಮಕ ಪೋಸ್ಟ್ಗಳನ್ನು ಪ್ರಕಟಿಸುವರ ಮೇಲೆ ನಿಗಾವಹಿಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಜರುಗಿಸುವಂತೆ ಸೂಚನೆ ನೀಡಿದರು. ಅಧಿಕಾರಿ ಮತ್ತು ಸಿಬ್ಬಂದಿಗಳು ಚೆನ್ನಾಗಿ ಕೆಲಸ ಮಾಡಿ, ಅಪರಾಧ ಪ್ರಕರಣಗಳನ್ನು ನಿಯಂತ್ರಣಕ್ಕೆ ತಂದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ನಮ್ಮ ಇಲಾಖೆಯ ಮೇಲೆ ಹೆಚ್ಚು ಜವಾಬ್ಧಾರಿ ಇದೆ.ಬಡವರ ಪರ ಸರ್ಕಾರ ನಮ್ಮದು. ಸಮಾಜದಲ್ಲಿ ಬಡವರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕೆಲಸವಾಗಬೇಕು. ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ. ಪ್ರಕರಣ ದಾಖಲಿಸುವ ಸಂದರ್ಭದಲ್ಲಿ…














