Author: kannadanewsnow05

ಬೆಂಗಳೂರು : ಇದೀಗ ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡುವುದು ಅಥವಾ ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಹಣ ಹೂಡಿಕೆ ಮಾಡುವುದರಿಂದ ಅನೇಕರು ಲಕ್ಷಾಂತರ ರೂಪಾಯಿಗಳನ್ನು ಹೂಡಿಕೆ ಮಾಡಿ ಬೀದಿಗೆ ಬಂದಿದ್ದು, ಅಲ್ಲದೆ ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ. ಇದೀಗ ಇಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಆನ್ಲೈನ್ ನಲ್ಲಿ ಮದುವೆ ಹೆಸರಿನಲ್ಲಿ ಸೈಬರ್ ವಂಚಕರು ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ್ದಾರೆ. ಹೌದು ಬೆಂಗಳೂರಿನ ಹೆಗ್ಗನಹಳ್ಳಿ ನಿವಾಸಿ ಪ್ರವೀಣ್ಗೆ 32 ಲಕ್ಷ ರೂಪಾಯಿ ವಂಚನೆ ಎಸಗಲಾಗಿದೆ. ವಂಚಕನೊಬ್ಬ ವಾಟ್ಸಾಪ್ನಲ್ಲಿ ಯುವಕನಿಗೆ ಕಲರ್ ಕಲರ್ AI ಹುಡುಗಿಯರ ಫೋಟೋ ಕಳುಹಿಸಿದ್ದಾನೆ. AI ಫೋಟೋಗಳನ್ನು ವಂಚಕ ಕಳುಹಿಸಿದ್ದ. ಎ ಐ ಫೋಟೋ ನೋಡಿ ಯುವತಿಯ ಜೊತೆಗೆ ಪ್ರವೀಣ್ ಮದುವೆಗೆ ಒಪ್ಪಿದ್ದ. ನಂತರ ಫೋನ್ ಕರೆ ಮಾಡಿ ಇಬ್ಬರೂ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಸದ್ಯ ಕೇರಳದಲ್ಲಿ ಸ್ಟಾಕ್ ಮಾರ್ಕೆಟ್ನಲ್ಲಿ ಕೆಲಸ ಮಾಡುತ್ತಿದ್ದೇನೆ.ನನ್ನ ಟಾರ್ಗೆಟ್ ಮುಗಿಸಿ ಬೆಂಗಳೂರಿಗೆ ಬಂದು ಭೇಟಿಯಾಗುತ್ತೇನೆ. ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡಿದರೆ ಒಳ್ಳೆಯ ಲಾಭ ಬರುತ್ತದೆ…

Read More

ಮಂಗಳೂರು : ಜಾತಿ ಗಣತಿ ವಿಚಾರದಲ್ಲಿ ಸ್ವಾಮೀಜಿ ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ ಎಂದಿದ್ದ ಬಿ.ಕೆ.ಹರಿ ಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿದ ಪೇಜಾವರಶ್ರೀಗಳು,ಮಾತನಾಡುವ ಹಕ್ಕು ಕೇವಲ ರಾಜಕಾರಣಿಗಳಿಗೆ ಮಾತ್ರನಾ? ಪ್ರಜೆಗಳಿಗೆ ಹಕ್ಕಿಲ್ವಾ? ರಾಜಕಾರಣಿಗಳಿಗೆ ಮಾತ್ರ ಹಕ್ಕಿದೆ ಅಂತ ಹೇಳಲಿ.ಪ್ರಜಾಪ್ರಭುತ್ವ ಇಲ್ಲ ಈಗ ರಾಜಕಾರಣಿಗಳ ರಾಜ್ಯ ಅಂತ ಹೇಳಲಿ ಎಂದು ವಾಗ್ದಾಳಿ ನಡೆಸಿದರು. ಇಂದು ಮಂಗಳೂರಿನ ಕುಳಾಯಿ ಚಿತ್ರಾಪುರ ಮಠದಲ್ಲಿ ನಡೆದ ಧರ್ಮಸಭೆ ಉದ್ದೇಶಿಸಿ ಮಾತನಾಡಿದ ಶ್ರೀಗಳು, ಇಂತಹ ರಾಜಕಾರಣಿಗಳಿಗೆ ಸದ್ಬುದ್ಧಿ ಕೊಡುವಂತೆ ಪ್ರಾರ್ಥನೆ ಮಾಡಿದ್ದೇವೆ. ನಮ್ಮ ಪಂಗಡದಲ್ಲಿ ಯಾರಿಗೆಲ್ಲ ವೈಮನಸ್ಸು ಇದೆಯೋ ಅದು ದೂರವಾಗಲಿ. ಜಾತಿ ವ್ಯವಸ್ಥೆ ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ. ಒಂದೆಡೆ ನಾವು ಜಾತ್ಯಾತೀತರು ಎನ್ನುತ್ತಾರೆ, ಇನ್ನೊಂದೆಡೆ ಎಲ್ಲ ವಲಯದಲ್ಲೂ ಅದನ್ನು ಪೋಷಿಸುತ್ತಿದ್ದಾರೆ ಎಂದರು. ಜಾತ್ಯಾತೀತ ಅಂತ ಹೇಳಿಕೊಳ್ಳುವಾಗ ಇಲ್ಲಿ ಜಾತಿ ಪಂಗಡಗಳ ಲೆಕ್ಕಾಚಾರ ಯಾಕೆ ಅನ್ನೋದು ನಮ್ಮ ಅಭಿಪ್ರಾಯ. ಹೀಗೆ ಹೇಳಿದ್ದನ್ನ ಪುಡಿ ರಾಜಕಾರಣ ಅಂತಾರೆ, ನಾವು ಹೇಳಿದ್ದು ತಪ್ಪು ಅಂತಾರೆ. ಹಾಗಾದ್ರೆ ಇದು ಪ್ರಜಾಪ್ರಭುತ್ವ…

Read More

ಹಾಸನ : ಸದ್ಯ ರಾಜ್ಯದಲ್ಲಿ ಚನ್ನಪಟ್ಟಣ ಕ್ಷೇತ್ರ ಕೇಂದ್ರ ಬಿಂದುವಾಗಿದೆ ಎಂದರೆ ತಪ್ಪಾಗಲಿಕ್ಕಿಲ್ಲ. ರಾಜ್ಯ ಮಾತ್ರವಲ್ಲ ಇಡೀ ದೇಶದ ಗಮನವನ್ನು ಚನ್ನಪಟ್ಟಣ ಉಪಚುನಾವಣೆ ಸೆಳೆಯುತ್ತಿದೆ. ಇತ್ತ ಸ್ವಕ್ಷೇತ್ರದಲ್ಲಿ ಮಗನನ್ನು ಗಲ್ಲಿಸಲೇಬೇಕೆಂದು ಪಣ ತೊಟ್ಟಿರುವ ಹೆಚ್‌ಡಿ ಕುಮಾರಸ್ವಾಮಿ ಇಂದು ಕುಟುಂಬ ಸಮೇತರಾಗಿ ಹಾಸನಾಂಬೆ ದರ್ಶನ ಪಡೆದರು. ಈ ವೇಳೆ ಚನ್ನಪಟ್ಟಣದಲ್ಲಿ ಪುತ್ರ ನಿಖಿಲ್​ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಮಾಡಿದರು. ಹೌದು ಹಾಸನಾಂಬೆಗೆ ಪೂಜೆ ಸಲ್ಲಿಸಿದ ಬಳಿಕ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ಸ್ವಾಮಿಯ ಬಲಭಾಗದಿಂದ ಹೂ ಕೆಳಗೆ ಬಿದ್ದಿದೆ. ಇದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರಿಗೆ ಶುಭ ಸೂಚನೆ ನೀಡಿದ್ರಾ ಸಿದ್ದೇಶ್ವರ ಸ್ವಾಮಿಯವರು ಎಂಬ ಕುತೂಹಲ ಹೆಚ್ಚಿಸಿದೆ. ಸಾಮಾನ್ಯವಾಗಿ ಹಿಂದೂ ಸಂಪ್ರದಾಯ, ಪದ್ಧತಿಗಳಲ್ಲಿ ದೇವರ ಪೂಜೆ ನಡೆಯುವ ವೇಳೆ ಪ್ರಾರ್ಥಿಸುವಾಗ ಅಕಸ್ಮಾತಾಗಿ ದೇವರ ಬಲಗಡೆಯಿಂದ ಹೂವು ಬಿದ್ದರೆ ಶುಭ ಶಕುನ ಹಾಗೂ ಮನಸಲ್ಲಿ ಬೇಡಿಕೊಂಡಿರುವ ಇಚ್ಛೆ ಪೂರ್ತಿಯಾಗುತ್ತದೆ ಎಂದು ನಂಬಿಕೆ ಇದೆ…

Read More

ಬೆಂಗಳೂರು : ಟೈಟಾಗಿ ಕುಡಿದು ಬಂದು ಕನ್ನಡ ಬರಲ್ಲ ಎಂದಿದ್ದಕ್ಕೆ ಅಂಗಡಿ ಕ್ಯಾಶಿಯರ್ ಮೇಲೆ ಕುಡುಕನೊಬ್ಬ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ವಿಜಯನಗರದ ಬಳಿ ಹಂಪಿ ನಗರದಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ 3 ಗಂಟೆಗೆ ಈ ಒಂದು ಘಟನೆ ನಡೆದಿದ್ದು, ಘಟನೆ ಕುರಿತಂತೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕುಡಿದು ಟೈಟ್ ಆಗಿ ಬಂದಿದ್ದ ವ್ಯಕ್ತಿ ತನಗೆ ಏನು ಬೇಕೋ ಅದನ್ನೆಲ್ಲ ಅಂಗಡಿಯಲ್ಲಿ ಆರ್ಡರ್ ಮಾಡಿದ್ದಾನೆ. ಈ ವೇಳೆ ಕ್ಯಾಶಿಯರ್ ದುಡ್ಡು ಪೇ ಮಾಡಿ ಎಂದು ಹೇಳಿದ್ದಾನೆ. ಈ ವೇಳೆ ಕುಡುಕ ವ್ಯಕ್ತಿ ಕನ್ನಡ ಬರೋದಿಲ್ವ ಎಂದು ಕೇಳಿದಾಗ ಕ್ಯಾಶಿಯರ್ ಬರಲ್ಲ ಎಂದಿದ್ದಾನೆ. ಕೂಡಲೇ ಕ್ಯಾಶಿಯರ್ ಮೇಲೆ ವ್ಯಕ್ತಿ ಹಲ್ಲೆ ಮಾಡಿದ್ದಾನೆ. ಬಳಿಕ ಕನ್ನಡ ಬರಲ್ಲ ಅಂದರೆ ಕಲಿ ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ ಎಂದು ತಿಳಿದುಬಂದಿದೆ.

Read More

ಬೆಳಗಾವಿ : ಜಗತ್ತಿನಲ್ಲಿ ಎಂತೆಂಥ ಮಕ್ಕಳು ಇರುತ್ತಾರೆ ನೋಡಿ. ಕುಡಿತದ ಚಟಕ್ಕೆ ಒಳಗಾಗಿರುವ ಮಗ ತಂದೆಗೆ ಮದ್ಯ ಸೇವಿಸಲು ದುಡ್ಡು ಕೊಡು ಎಂದು ಕೇಳಿದಾಗ ತಂದೆ ಒಪ್ಪಲ್ಲ. ಇದಕ್ಕೆ ಕೋಪಗೊಂಡ ಮಗ ತಂದೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿಯಲ್ಲಿ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದಲ್ಲಿ ತುಕಾರಾಮ ವನಖಂಡೆ (89) ಎನ್ನುವವರನ್ನು ಮಗ ಬಾಳಾಸಾಬ ಮಲ್ಲು ವನಖಂಡೆಯನ್ನು (49) ಎಂಬಾತ ಕೊಲೆ ಮಾಡಿದ್ದಾನೆ. ಆರೋಪಿ ಬಾಳಾಸಾಬ್ ವನಖಂಡೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಗೆ ಒಳಗಾದಂತಹ ತುಕಾರಾಮ್ ಅವರನ್ನು ಕೂಡಲೇ ಮೀರಜ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದರು. ಘಟನೆ ಕುರಿತಂತೆ ಅಥಣಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಆರೋಪಿ ಮಗನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Read More

ಮೈಸೂರು : ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, ಕಳೆದ ಎರಡು ದಿನಗಳ ಹಿಂದೆ ಪತ್ನಿ ಪಾರ್ವತಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.ಇದೀಗ ಪಾರ್ವತಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ (ED) ಮತ್ತೊಂದು ದೂರು ನೀಡಲಾಗಿದೆ. ಹೌದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ದಾಖಲಿಸಿದ್ದಾರೆ.ಮೈಸೂರಿನ ಕೈಗಾರಿಕಾ ಪ್ರದೇಶದಲ್ಲಿ 2023ರ ನವೆಂಬರ್‌ನಲ್ಲಿ 1.84 ಕೋಟಿ ರೂ. ಹಣ ನೀಡಿ ಖರೀದಿಸಿರುವ 20 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಹಣದ ಮೂಲ ಪತ್ತೆ ಹಚ್ಚಿ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ED ಗೆ ದೂರು ನೀಡಿದ್ದಾರೆ. ಇನ್ನು ಕೆಆರ್‌ಎಸ್‌ ರಸ್ತೆಯಲ್ಲಿ 20 ಗುಂಟೆ ಜಮೀನು ಖರೀದಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಮೊದಲ ಪ್ರಕರಣದಲ್ಲಿ ಕೆಸರೆಯ ಸರ್ವೇ ನಂಬರ್‌ 462 ಮತ್ತು 464ರ 3.16 ಎಕರೆ ಭೂಮಿ ಹಾಗೂ 14 ಸೈಟ್‌ ವಿಚಾರದಲ್ಲಿ ದಾಖಲೆ ಬಿಡುಗಡೆ ಮಾಡಿದ್ದರು. ಹೀಗಾಗಿ…

Read More

ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರ ತೀವ್ರ ಚುನಾವಣೆಯ ರಂಗೇರಿದ್ದು , ಎಚ್ ಡಿ ಕುಮಾರಸ್ವಾಮಿ ಅವರು ನಿಖಿಲ್ ಕುಮಾರಸ್ವಾಮಿ ಈ ಒಂದು ಚುನಾವಣೆಯಲ್ಲಿ ಅರ್ಜುನನಿಗೆ ಹೋಲಿಸಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಎರಡು ಬಾರಿ ಚುನಾವಣೆಯಲ್ಲಿ ಸೋತಾಗ ಅರ್ಜುನ ಅಭಿಮನ್ಯು ಆಗಿರಲಿಲ್ಲವೇ ಎಂದು ತಿರುಗೇಟು ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ನಿಖಿಲ್ ಚುನಾವಣೆಯಲ್ಲಿ ಎರಡು ಬಾರಿ ಸೋತಿದ್ದಾರೆ. ಆಗ ಅರ್ಜುನ ಮತ್ತು ಅಭಿಮನ್ಯು ಆಗಿರಲಿಲ್ವಾ? ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗಲೇ ಮಂಡ್ಯದಲ್ಲಿ ಸೋತಿದ್ದಾರೆ. ರಾಮನಗರದಲ್ಲಿ ಸೋತಿದ್ದಾಗ ಆಗ ಅಭಿಮನ್ಯು ಆಗಿರಲಿಲ್ವಾ? ಈಗ ಇದಕ್ಕಿದಂತೆ ಅದೇನು ಅರ್ಜುನ ಅಭಿಮನ್ಯು ಅಂತ ವ್ಯಂಗವಾಡಿದರು. ಸಚಿವರು ಶಾಸಕರು ಎಂಎಲ್‌ಸಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಪದಾಧಿಕಾರಿಗಳು, ಶಾಸಕರು, ಸಚಿವರ ಜೊತೆಗೆ ಸಭೆ ನಡೆಸಿದ್ದೇವೆ. ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಉಪಚುನಾವಣೆಯ ಬಗ್ಗೆ ಚರ್ಚಿಸಿದ್ದೇವೆ ಎಂದು ತಿಳಿಸಿದರು. ಸಭೆಯಲ್ಲಿ ಕೆಲ…

Read More

ಕೋಲಾರ : ಅತ್ತಿಗೆಯ ಮೇಲೆ ದೂರದ ಸಂಬಂಧಿ ಹಾಗೂ ಸ್ನೇಹಿತನಾಗಿದ್ದವನು ಕಣ್ಣು ಹಾಕಿದ್ದಾನೆ ಎಂದು ಯುವಕನೊಬ್ಬ ಸ್ನೇಹಿತನಿಗೆ ವಾರ್ನಿಂಗ್ ಕೊಟ್ಟಿದ್ದಾನೆ. ಇದರಿಂದ ಕೋಪಗೊಂಡ ಸ್ನೇಹಿತ ಯುವಕನ ಎದೆಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದ ಜಮಾಲ್ ಷಾ ನಗರದಲ್ಲಿ ನಡೆದಿದೆ. ಹೌದು ಕೊಲೆಯಾದ ಯುವಕನನ್ನು ರೋಹಿದ್​ ಅಲಿಯಾಸ್ ಅರ್ಬಾಜ್(26) ಎಂದು ತಿಳಿದುಬಂದಿದೆ. ಇನ್ನು ಕೊಲೆಗೈದ ಯುವಕನನ್ನು ಅಮ್ಜದ್ ಎಂದು ತಿಳಿದುಬಂದಿದೆ.ರೋಹಿದ್​ ಮತ್ತು ಅಮ್ಜಾದ್ ದೂರದ ಸಂಬಂಧಿಗಳು ಮತ್ತು ಸ್ನೇಹಿತರಾಗಿದ್ದರು. ಹೀಗಿರುವಾಗ‌ ಅಮ್ಜಾದ್ ಆಗಾಗ ರೋಹಿದ್​ ಮನೆಗೆ ಬರುತ್ತಿದ್ದ. ಈ ವೇಳೆ ರೋಹಿದ್​ ಅಣ್ಣನ ಹೆಂಡತಿ ಅಂದರೆ ಅತ್ತಿಗೆ‌ ಮೇಲೆ‌ ಕಣ್ಣು‌ ಹಾಕಿದ್ದಾನೆ. ರೋಹಿದ್​​ಗೆ ತಿಳಿಯದಂತೆ ತನ್ನ ಅತ್ತಿಗೆ ಮೊಬೈಲ್ ನಂಬರ್​ ಪಡೆದುಕೊಂಡು ಆಗ್ಗಾಗ ಫೋನ್​ ಹಾಗೂ ವಿಡಿಯೋ ಕಾಲ್​ ಮಾಡಿ‌‌‌ ರೋಹಿದ್​ ಅತ್ತಿಗೆಗೆ ಪಿಡಿಸುತ್ತಿದ್ದ. ಈ ವಿಷಯ ಮನೆಯವರಿಗೆ ತಿಳಿದು ಅಮ್ಜಾದ್‌ ಮನೆ ಬಳಿ ಹೋಗಿ‌ ರೋಹಿದ್​ & ಸಂಬಂಧಿಕರು ಗಲಾಟೆ ಮಾಡಿ ಎಚ್ಚರಿಕೆ ಕೊಟ್ಟು ಬಂದಿದ್ದರು. ಇದಾದ…

Read More

ಬೀದರ್ : ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ್ ಸೈಲ್‌ಗೆ 7 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ನೀಡಲಾಗಿದೆ. ಈ ವಿಚಾರವಾಗಿ ಕಾನೂನು ಸಚಿವ HK ಪಾಟೀಲ್ ಸ್ಪೋಟಕ ಆರೋಪ ಮಾಡಿದ್ದೂ, ಬೇಲೆಕೇರಿ ಅದಿರು ಲೂಟಿಯಾಗಿದ್ದು ಬಿಜೆಪಿ ಟೈಂನಲ್ಲಿ. ಆದರೆ, ಪ್ರಕರಣದಲ್ಲಿ ಭಾಗಿಯಾಗಿದ್ದ 23 ಅಧಿಕಾರಿಗಳನ್ನು ಬಿಜೆಪಿ ದೋಷಮುಕ್ತ ಮಾಡಿದೆ ಎಂದು ಬಾಂಬ್ ಸಿಡಿಸಿದ್ದಾರೆ. ಬೀದರ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ಪ್ರಹ್ಲಾದ್‌ ಜೋಶಿ, ಆರ್.ಅಶೋಕ್ ಸೇರಿದಂತೆ ಎಲ್ಲರೂ ಕ್ಷಮೆ ಕೇಳಬೇಕು. ಸೈಲ್‌ಗೆ ಲೂಟಿ ಮಾಡಲು ಅನುಕೂಲ ಮಾಡಿದ 23 ಅಧಿಕಾರಿಗಳನ್ನು ದೋಷಮುಕ್ತ ಮಾಡಿದ್ದರು., ಪ್ರಕರಣದಲ್ಲಿ ಇದ್ದವರನ್ನು ನೀವು ಕೈಬಿಟ್ಟಿದ್ದೀರಿ. ಆದರೆ, ನಾಚಿಗೆ ಪಟ್ಟುಕೊಳ್ಳದೇ ಹೇಳಿಕೆ ನೀಡಲು ಬರುತ್ತೀರಲ್ಲವೆ? ಸಮಾಜಕ್ಕೆ ಮುಖ ತೋರಿಸಲು ನಿಮಗೆ ಮುಜುಗರ ಅನಿಸೋದಿಲ್ವಾ? ಸೈಲ್‌ಗೆ ಸಹಕಾರ ನೀಡಿದ ಅಧಿಕಾರಿಗಳನ್ನು ದೋಷಮುಕ್ತ ಮಾಡಿದ್ದಕ್ಕೆ ನೀವು ಕ್ಷಮೆ ಕೇಳಬೇಕು ಎಂದರು. ಬೇಲೆಕೇರಿ ಅದಿರು ಪ್ರಕರಣದಲ್ಲಿ ಸತೀಶ್ ಸೈಲ್‌ಗೆ ಜೈಲು ಶಿಕ್ಷೆ ಕುರಿತು ಮಾತನಾಡಿ, ಯಾರು ಉಪ್ಪು…

Read More

ಉತ್ತರಪ್ರದೇಶ : ದೇಶಾದ್ಯಂತ ವಿಮಾನಗಳಿಗೆ ಬಾಂಬ್ ಬೆದರಿಕೆಯ ಮಧ್ಯ ನಿನ್ನೆ ಆಂಧ್ರಪ್ರದೇಶದ ತಿರುಪತಿಯ ಎರಡು ಪ್ರಮುಖ ಹೋಟೆಲ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದವು. ಇದೀಗ ಉತ್ತರ ಪ್ರದೇಶದ ಹಲವು ಪ್ರತಿಷ್ಠಿತ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ. ಹೌದು ಆಂಧ್ರದ ಬಳಿಕ ಉತ್ತರ ಪ್ರದೇಶದ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿವೆ. ಲಖನೌನಲ್ಲಿರುವ ಫಾರ್ಚುನ್, ಲೆಮನ್ ಟ್ರೀ ಹಾಗೂ ಮ್ಯಾರೀಯೇಟ್ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಈಮೇಲ್ ಸಂದೇಶ ಬಂದಿದ್ದು ಹಲವು ಪ್ರತಿಷ್ಠಿತ ಹೋಟೆಲ್ ಗಳಿಗೆ ಬಾಂಬೆ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಲಾಗಿದೆ. ಇನ್ನು ನಿನ್ನೆ ತಿರುಪತಿಯ ಹಲವು ಹೋಟೆಲ್ ಗಳಿಗೆ ಬೆದರಿಕೆ ಸಂದೇಶ ಬಂದಿದ್ದವು. ಮಾದಕವಸ್ತು ನಿಯಂತ್ರಣ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಮಾದಕವಸ್ತು ಕಳ್ಳಸಾಗಣೆ ಜಾಲದ ಕಿಂಗ್ಪಿನ್ ಜಾಫರ್ ಸಾದಿಕ್ ಅವರನ್ನು ಬೆದರಿಕೆಯಲ್ಲಿ ಉಲ್ಲೇಖಿಸಲಾಗಿದೆ.ತಮಿಳುನಾಡಿನ ಉನ್ನತ ಪೊಲೀಸ್ ಅಧಿಕಾರಿ ಶಂಕರ್ ಜಿವಾಲ್ ಮತ್ತು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಪತ್ನಿ…

Read More