Subscribe to Updates
Get the latest creative news from FooBar about art, design and business.
Author: kannadanewsnow05
ಚಿತ್ರದುರ್ಗ : ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನ ಎದುರಿಸಲಿ. ಕ್ಲೀನ್ ಚಿಟ್ ಸಿಕ್ಕರೆ ಮತ್ತೆ ಸಿಎಂ ಆಗಲಿ ನಮ್ಮ ಅಭ್ಯಂತರ ಇಲ್ಲ. ಸಿದ್ದರಾಮಯ್ಯ ಎಲ್ಲರಂತಲ್ಲ ಎಂಬ ಮಾತಿನಂತೆ ಇರಲಿ ಎಂದು ಹೇಳುವ ಮೂಲಕ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆಯುವೆ ಎಂದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಟಾಂಗ್ ಕೊಟ್ಟಿದ್ದಾರೆ. ಇಂದು ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಒಂದು ತಪ್ಪು ಮಾಡಲು ಹೋಗಿ ಹತ್ತಾರು ತಪ್ಪು ಮಾಡುತ್ತಿದ್ದಾರೆ. ತಮ್ಮ ಕಾಲ ಮೇಲೆ ತಾವೇ ಕಲ್ಲು ಹಾಕಿಕೊಂಡು ಗಾಯ ಮಾಡಿಕೊಳ್ಳುತ್ತಿದ್ದಾರೆ. ಆತ್ಮಸಾಕ್ಷಿ ಅನ್ನೋದಕ್ಕಿಂತ ನೈತಿಕತೆ ಸಹ ದೊಡ್ಡದು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನ ಎದುರಿಸಲಿ. ಕ್ಲೀನ್ ಚಿಟ್ ಸಿಕ್ಕರೆ ಮತ್ತೆ ಸಿಎಂ ಆಗಲಿ ನಮ್ಮ ಅಭ್ಯಂತರ ಇಲ್ಲ ಎಂದು ಅವರು ತಿಳಿಸಿದರು. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ಶೀಘ್ರ ಬಿಡುಗಡೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನ…
ಬೆಂಗಳೂರು : ಸೀರಿಯಲ್ ನಟಿಯ ಮದುವೆಯ ಪ್ರಸ್ತಾಪಕ್ಕೆ ಬೆದರಿದ ಯುವಕನೊಬ್ಬ ಬೆಂಗಳೂರಿನಲ್ಲಿ ಇಂದು ಸೊಸೈಡ್ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ದಂತೆ ಇದೀಗ ಕನ್ನಡತಿ ಸೀರಿಯಲ್ ಕಿರುತೆರೆ ನಟಿ ವೀಣಾ ಆಮೇಲೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ಹುಳಿಮಾವು ಠಾಣೆಯಲ್ಲಿ ಕಿರುತೆರೆ ನಟಿ ವೀಣಾ ವಿರುದ್ಧ FIR ದಾಖಲಾಗಿದೆ. ಕಿರುತೆರೆ ನಟಿ ವೀಣಾ, ಮದನ್ ಸ್ನೇಹಿತನನ್ನು ಪ್ರೀತಿ ಮಾಡುತ್ತಿದ್ದಳು. ಆದರೂ ಮದನ್ ಪ್ರೀತಿಸುವಂತೆ ವೀಣಾ ಒತ್ತಾಯಿಸುತ್ತಿದ್ದಳು. ವೀಣಾ ಎಷ್ಟೇ ಒತ್ತಾಯಿಸಿದ್ದರು ಮದನ್ ಇಷ್ಟವಿಲ್ಲ ಎಂದು ಹೇಳಿದ್ದ. ಬಳಿಕ ಆಗಾಗ ನಮ್ಮ ಮನೆ ಹತ್ತಿರ ಕಿರುತೆರೆ ನಟಿ ವೀಣಾ ಬರುತ್ತಿದ್ದಳು. ಮಾನ ಹರಾಜು ಹಾಕ್ತಿನಿ ಎಂದು ವೀಣಾ ಬೆದರಿಕೆ ಹಾಕುತ್ತಿದ್ದಳು ಎಂದು ಮದನ್ ತಾಯಿ ತಿಳಿಸಿದ್ದಾರೆ. ಈ ಹಿಂದೆ ಬ್ಲೇಡ್ನಿಂದ ಕೈ ಕೊಯ್ದುಕೊಂಡಿದ್ದಳು. ಆಗಾಗ ಕರೆ ಮಾಡಿ ಹೇಳಿದ ಜಾಗಕ್ಕೆ ಬರಲು ಒತ್ತಾಯ ಮಾಡುತ್ತಿದ್ದಳು. ನಿನ್ನೆ ಸಂಜೆ 4ಗಂಟೆಗೆ ಸಿಕೆ ಪಾಳ್ಯದ ಮನೆಗೆ ಕರೆಸಿಕೊಂಡಿದ್ದಳು. ಕುಡಿದ ಮರಿನಲ್ಲಿ ಗಲಾಟೆ ಮಾಡಿ ಮಾನಸಿಕ…
ಬೀದರ್ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾದ 14 ಸೈಟ್ಗಳನ್ನು ವಾಪಸ್ಸು ನೀಡಿದ್ದಾರೆ. ಈ ವಿಚಾರವಾಗಿ ಬೀದರ್ ನಲ್ಲಿ ಬಿಜೆಪಿ ಶಾಸಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು,ಇಡೀ ದೇಶದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಸಿನ ಬೆನ್ನೆಲುಬಾಗಿದ್ದಾರೆ. ಹಾಗಾಗಿ ಎಲ್ಲಿ ಅವರು ರಾಜೀನಾಮೆ ಕೊಟ್ಟರೆ ಕಾಂಗ್ರೆಸ್ ಮುಳುಗುತ್ತದೆ ಎಂದು ಭಯದಲ್ಲಿ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬೀದರ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಅಧಿಕಾರದ ವ್ಯಾಮೋಹ ಹೆಚ್ಚಾಗಿದೆ ಎಂದು ಬೀದರ್ ನಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗಾರ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಗೆ ಮುಳುಗುವ ಭಯ ಶುರುವಾಗಿದೆ. ಇಡೀ ದೇಶದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಬೆನ್ನೆಲುಬು ಆಗಿದ್ದಾರೆ ಎಂದು ತಿಳಿಸಿದರು. ಮಾನ, ಮರ್ಯಾದೆ, ಇಲ್ಲದವರು, ನೀತಿಗೆಟ್ಟವರು ಸಿದ್ದರಾಮಯ್ಯ ಬೆನ್ನಿಗಿದ್ದಾರೆ. 65 ಕೋಟಿ ಕೊಟ್ರೆ ಸೈಟ್ ವಾಪಸ್ ಕೊಡ್ತೀನಿ ಅಂತ ಸಿಎಂ ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು. ಜನರಿಗೆ ಎಮೋಷನಲ್ ಬ್ಲಾಕ್ ಮೇಲ್ ಮಾಡಲು ಪತ್ನಿಯವರಿಂದ…
ದಾವಣಗೆರೆ : ಇತ್ತೀಚಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಒಟ್ಟು ನಾಲ್ವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದರು. ಇದೀಗ ದಾವಣಗೆರೆಯಲ್ಲೂ ಕೂಡ ನಾಲ್ವರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅವರ ಹಿನ್ನೆಲೆ ತಿಳಿದುಕೊಂಡು ಸ್ವತಃ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಹೌದು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಿದ್ದಿಕಿ ಮೊಹಮ್ಮದ್ ಯಾಸಿನ್ (ಮಗ), ಜೈನಾಬಿ ನೂರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದು, ಅಲ್ತಾಫ್ ಪತ್ನಿ ಫಾತಿಮಾ ಪಾಕಿಸ್ತಾನ ಪ್ರಜೆಯಾಗಿದ್ದಾಳೆ ಎಂದು ತಿಳಿದುಬಂದಿದೆ. ಹಿಂದೂಗಳ ಹೆಸರಲ್ಲಿ ವಾಸ! ನಾಲ್ವರು ಪಾಕಿಸ್ತಾನಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಬೆಚ್ಚಿ ಬೀಳಿಸುವಂತಹ ಮಾಹಿತಿ ಬಹಿರಂಗವಾಗಿದೆ. ಈ ನಾಲ್ವರು ಹಿಂದೂಗಳ ಹೆಸರುಗಳನ್ನು ಇಟ್ಟುಕೊಂಡು ಹಲವು ವರ್ಷಗಳಿಂದ ಈ ಒಂದು ಬಡಾವಣೆಯಲ್ಲಿ ವಾಸಿಸುತ್ತಿದ್ದರು ಎನ್ನುವ ಆತಂಕಕಾರಿ ವಿಷಯ ತಿಳಿದುಬಂದಿದೆ. ಪಾಕಿಸ್ತಾನ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್ ನನ್ನು ವಿವಾಹವಾಗಿದ್ದಳು.ಮೊಹಮ್ಮದ್ ಹನೀಫ್ ಕೂಡ ಪಾಕಿಸ್ತಾನದವನಾಗಿದ್ದಾನೆ.…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಈಗಾಗಲೇ ಮುಡಾಗೆ 14 ಸೈಟ್ ಗಳನ್ನು ವಾಪಸ್ಸು ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಬಿಜೆಪಿಯು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಭಂಡತನದ ಬ್ರ್ಯಾಂಡ್ ಅಂಬಾಸಿಡರ್ ಎಂಬಂತೆ ಪೋಸ್ ಕೊಟ್ಟ ಐಪಿಸಿ 420 A1 ಸಿದ್ದರಾಮಯ್ಯ ಎಂದು ಟೀಕಿಸಿದೆ. ಸಾಮಾಜಿಕ ಜಾಲತಾಣ X ನಲ್ಲಿ ಬಿಜೆಪಿ ಸಿಎಂ ಸಿದ್ದರಾಮಯ್ಯ ವಿರುದ್ಧ, “ಕಳ್ಳ ಕಳ್ಳನೇ ಹೊರತು ತಪ್ಪು ಒಪ್ಪಿಕೊಂಡರೇ ಸಾಚಾ ಆಗುವುದಿಲ್ಲ” ಬಿಜೆಪಿ ಬಿಡುವುದೂ ಇಲ್ಲ. A1 ಭ್ರಷ್ಟ ಸಿದ್ದರಾಮಯ್ಯ ಅವರ ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ ಹಾಗೂ ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ಮಿತ್ರ ಪಕ್ಷಗಳು ನಡೆಸಿದ ಮೈಸೂರು ಚಲೋ ಪಾದಯಾತ್ರೆ ಇಂದು ಸಾರ್ಥಕವಾಗಿದೆ.ಮೈಸೂರು ಚಲೋ ಪಾದಯಾತ್ರೆ ಯಶಸ್ವಿಗೊಂಡ ನಂತರ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದರು. ಹೈಕೋರ್ಟ್ ಭ್ರಷ್ಟ ಸಿದ್ದರಾಮಯ್ಯ ಅರ್ಜಿ ತಿರಸ್ಕರಿಸಿ, ತನಿಖೆ ನಡೆಯಬೇಕೆಂದು ಆದೇಶ ನೀಡಿತು. ಹೈಕೋರ್ಟ್ ಆದೇಶದವರೆಗೂ ತೀರ್ಪು ಕಾಯ್ದಿರಿಸಿಕೊಂಡಿದ್ದ…
ಬೆಂಗಳೂರು : ಬಿಜೆಪಿಯವರಿಗೆ ನಾಥೂರಾಮ್ ಗೋಡ್ಸೆ ನಾಯಕನಾಗಿದ್ದಾನೆ, ದೇಶಕ್ಕೆ ಸ್ವತಂತ್ರ ಕೊಟ್ಟ ಮಹಾತ್ಮ ಗಾಂಧೀಜಿಯವರು ಖಳನಾಯಕರಾಗಿದ್ದಾರೆ. ಬಿಜೆಪಿಯವರು ದೇಶವನ್ನು ಗೋಡ್ಸೆ ಭಾರತ ಮಾಡಲು ಹೊರಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಗರು ದೇಶವನ್ನು ಗೋಡ್ಸೆ ಭಾರತ ಮಾಡುವುದಕ್ಕೆ ಹೊರಟಿದ್ದಾರೆ. ಸುಳ್ಳು ಹೇಳಿ ದೇಶವನ್ನು ಒಡೆಯಲು ಹೊರಟವರು ಬಿಜೆಪಿಯವರು. ದೇಶದ ಉದ್ದಗಲಕ್ಕೆ ಜಾತಿ ಧರ್ಮದ ಹೆಸರಲ್ಲಿ ಸುಳ್ಳು ಹೇಳುತ್ತಿದ್ದಾರೆ.ಬಿಜೆಪಿಯವರು ಗೋಡ್ಸೆ ಭಾರತವನ್ನು ಮಾಡಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕೋಮು ಶಕ್ತಿಗಳು ದೇಶದ ಪ್ರಗತಿಗೆ ವಿರುದ್ಧವಾಗಿವೆ. ಕರ್ನಾಟಕದಲ್ಲಿ ನಾಲ್ಕು ವರ್ಷಗಳ ಕಾಲ ಬಿಜೆಪಿಯವರು ಅಧಿಕಾರದಲ್ಲಿದ್ದರು. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಬಡವರಿಗೆ ಶಕ್ತಿ ಕೊಡಲಿಲ್ಲ. ದೇಶ ಉದ್ಧಾರ ಆಗಬೇಕು ಸಮಾನತೆಯನ್ನು ಬಿಜೆಪಿ ಅವರು ಬಯಸಲ್ಲ. ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅಭಿವೃದ್ಧಿ ಕೆಲಸ ಮಾಡಲಿಲ್ಲ.ಬದಲಾಗಿ ನಾವು ಮಾಡಿದ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಾರೆ.ಬಿಜೆಪಿಯವರು ಜನರ ದಾರಿ ತಪ್ಪಿಸುವ ಕೆಲಸ…
ಬೆಳಗಾವಿ : ಕಾರಿನಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿರುವಂತಹ ಉದ್ಯಮಿಯೊಬ್ಬರ ಶವ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೈನಾಪೂರ ಗ್ರಾಮದ ಹೊರವಲಯದ ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಶವ ಪತ್ತೆಯಾಗಿರುವ ಈ ಘಟನೆ ನಡೆದಿದೆ.ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಹಾಗೂ ಹೆಚ್ಚುವರಿ ಎಸ್ ಪಿ ಶೃತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯನ್ನು ಗ್ರಾನೈಟ್ ಉದ್ಯಮಿ ಫೈರೋಜ್ ಬಡಗಾಂವಿ (40) ಎಂದು ಗುರುತಿಸಲಾಗಿದೆ. ಫೈರೋಜ್ ಅವರು ಚಿಕ್ಕೋಡಿಯ ಮುಲ್ಲಾ ಪ್ಲಾಟ್ ನಿವಾಸಿ ಎಂದು ತಿಳಿದುಬಂದಿದೆ. ಇಂದು ಅವರ ಶವ ಕಾರಿನಲ್ಲಿ ಸಂಪೂರ್ಣ ಸುಟ್ಟುಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಜೈನಾಪೂರ ಗ್ರಾಮದ ಹೊರವಲಯದ ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿ ಪಕ್ಕ ಅವರ ಕಾರು ಬೆಂಕಿಗೆ ಆಹುತಿಯಾಗಿದೆ. ಕಾರು ಸಂಪೂರ್ಣ ಸುಟ್ಟುಹೋಗಿದ್ದು, ಚಾಲಕನ ಸೀಟಿನಲ್ಲಿ ಕುಳಿತಿದ್ದ ಫೈರೋಜ್ ಕೂಡ ಬೆಂದುಹೋಗಿದ್ದಾರೆ. ಮೇಲ್ನೋಟಕ್ಕೆ ಅಪಘಾತವಾಗಿ ಬೆಂಕಿ ಹೊತ್ತಿಕೊಂಡಂತೆ ಕಾಣುತ್ತಿದೆ. ಆದರೂ ಸಾವು ಅನುಮಾನಾಸ್ಪದವಾಗಿದೆ. ಮೃತನ ಕುಟುಂಬದವರ ದೂರು ಆಧರಿಸಿ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ…
ತುಮಕೂರು : ಕೈಗಾರಿಕಾ ಪ್ರದೇಶಕ್ಕೆ ಸೇರ್ಪಡೆಗೊಂಡಂತಹ ಜಮೀನೀನ ಕೆಐಎಡಿಬಿಯ ಪರಿಹಾರದ ಹಣ ಹೊಡೆಯಲು ಬದುಕಿರುವವರನ್ನು ಸತ್ತಿದ್ದಾನೆ ಎಂದು ತಿಥಿ ಕಾರ್ಡ್ ತಯಾರಿಸಿ ಕೋಟ್ಯಂತರ ಹಣ ಲಪಟಾಯಿಸಲು ಕುಟುಂಬವೊಂದು ಬಿಗ್ ಪ್ಲಾನ್ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಹೌದು ಬದುಕಿದ್ದ ವ್ಯಕ್ತಿಯು ಸತ್ತಿದ್ದಾನೆ ಎಂದು ತಿಥಿ ಕಾರ್ಡ್ ಹೊಡೆಸಿ ಜಮೀನನ್ನು ಸಂಬಂಧಿಕರೇ ಗೋಲ್ಮಾಲ್ ಮಾಡಿದ್ದಾರೆ.ಸೋರೆಕುಂಟೆ ಗ್ರಾಮದ ಸರ್ವೆ ನಂಬರ್ 41/44ರಲ್ಲಿರುವ ನಾಲ್ಕು ಎಕರೆ ಜಮೀನನ್ನು ತುಮಕೂರಿನ ಹಿಂದಿನ ತಾಶಿಲ್ದಾರ್ ಸಿದ್ದೇಶ್ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಈ ಒಂದು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಬಸರಿಹಳ್ಳಿ ಗ್ರಾಮದ ಬಸವರಾಜು ಬಿನ್ ಲೇಟ್ ಮಲ್ಲಯ್ಯಗೆ ಸೇರಿದ ಜಮೀನು ಎಂದು ಹೇಳಲಾಗುತ್ತಿದ್ದು,ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬಸರಿ ಹಳ್ಳಿಯ ನಿವಾಸಿ ಬಸವರಾಜು 1977 ಮತ್ತು 78 ರಲ್ಲಿ ಬಸವರಾಜು ಎಂಬವರಿಗೆ ಸಾಗುವಳಿ ಮಂಜೂರು ಮಾಡಲಾಗಿತ್ತು. 97ರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಬದಲಾಯಿಸಿರುವ ಸಂಬಂಧಿ ನಂಜಯ್ಯ, ನಕಲಿ ದಾಖಲೆ ಸೃಷ್ಟಿಸಿರುವ ನಂಜಯ್ಯ ಮೂಲ ಜಮೀನು ಮಾಲೀಕನ ಸಂಬಂಧಿ ಎಂದು ಹೇಳಲಾಗುತ್ತಿದೆ.…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದು ಕಡೆ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ, ಇಡಿ ಕಾಟ ಕೊಡುತ್ತಿದ್ದರೆ, ಇನ್ನೊಂದು ಕಡೆ ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿವೆ. ಇದರ ಮಧ್ಯ ಕಾಂಗ್ರೆಸ್ ಪಕ್ಷದಲ್ಲೇ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ನಾನೇ ಮುಂದಿನ ಸಿಎಂ ಎಂದು ಹಲವು ಸಚಿವರು ಹೇಳಿಕೆ ನೀಡುತ್ತಾ ಬಂದಿದ್ದಾರೆ. ಹಾಗಾಗಿ ನಮ್ಮಲ್ಲಿ ಪ್ಲಾನ್ A B ಏನು ಇಲ್ಲ ನೇರವಾಗಿ C ಪ್ಲ್ಯಾನ್ ಅನುಷ್ಠಾನ ತರುತ್ತೇವೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮುಡಾ ಹಗರಣದಲ್ಲಿ ಸಾಕಷ್ಟು ಬೆಳವಣಿಗೆಯ ಹಿನ್ನಲೆ ಸಿಎಂ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದ್ದು, ಈ ಬೆನ್ನಲ್ಲೇ ದಲಿತ ಸಚಿವರಾದ ಗೃಹ ಸಚಿವ ಜಿ ಪರಮೇಶ್ವರ್, ಮಹದೇವಪ್ಪ, ಹಾಗೂ ಸತೀಶ್ ಜಾರಕಿಹೊಳಿ ಸೀಕ್ರೆಟ್ ಸಭೆಯನ್ನು ನಡೆಸಿದ್ದಾರೆ.ಈ…
ಶಿವಮೊಗ್ಗ : ಹಾಲು ಮಾರಾಟದ ದರದಲ್ಲಿ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡುತ್ತಿರುವುದು ಒಂದು ಕಡೆ ಆದರೆ, ಇನ್ನೊಂದು ಕಡೆ ಹಾಲು ಖರೀದಿಸುವ ರೈತರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ನಷ್ಟದ ನೆಪ ಹೇಳಿ ಪ್ರತಿ ಲೀಟರ್ ಹಾಲಿನ ಮೇಲೆ 90 ಪೈಸೆ ಇಳಿಕೆ ಮಾಡಿ ಶಿಮೂಲ್ ತೀರ್ಮಾನಿಸಿದೆ. ಹೌದು ಈಗಾಗಲೇ ಸಂಕಷ್ಟದಲ್ಲಿರುವ ರೈತರಿಗೆ ಶಾಕ್ ನೀಡಿದ ಶಿಮೂಲ್, ಪ್ರತಿ ಲೀಟರ್ ಹಾಲಿನ ಮೇಲೆ 90 ಪೈಸೆ ಇಳಿಕೆ ಮಾಡಿದೆ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗದ ಹಾಲು ಒಕ್ಕೂಟವಾದ ಶಿಮೂಲ್ ನಿಂದ ರೈತರಿಗೆ ಸಂಕಷ್ಟೇ ಎದುರಾಗಿದೆ. ನಷ್ಟದ ನೆನಪ ಹೇಳಿ ರೈತರಿಂದ ಖರೀದಿಸುವ ಹಾಲಿನ ದರ ಇಳಿಕೆ ಮಾಡಿದೆ. ಶಿಮೂಲ್ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಮಾಡಿ ಈ ಒಂದು ದರ ಇಳಿಕೆ ಮಾಡಲಾಗಿದೆ. ಶಿಮೂಲ್ 7 ಕೋಟಿ ನಷ್ಟದಲ್ಲಿದ್ದು ಅದರಿಂದ ಹೊರಬರಲು ಖರೀದಿಯ ದರ ಇಳಿಕೆ ಮಾಡಲಾಗಿದೆ.ಹಾಗಾಗಿ ನಿನ್ನೆಯಿಂದಲೇ ನೂತನ ದರ ಜಾರಿಯಾಗಿದೆ. 33.03 ರೂಪಾಯಿಗೆ ಹಾಲು ಉತ್ಪಾದಕರ ಸೊಸೈಟಿಗಳಿಂದ ಶಿಮೂಲ್…














