Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಂತ 50:50 ನಿವೇಶನ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಆರ್ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಇ.ಡಿ. ನೋಟಿಸ್ ಜಾರಿಗೊಳಿಸಿದೆ. ಈಗಾಗಲೇ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದಾರೆ. ಬಳಿಕ ಮುಡಾದಲ್ಲಿನ ನಿವೇಶನ ಹಂಚಿಕೆ ಹಗರಣ ಸಂಬಂಧ ಗಂಗರಾಜು ಕೂಡ ಹೋರಾಟ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ಮತ್ತೂಂದು ಭೂ ಅಕ್ರಮದ ಕುರಿತು ಆರೋಪಿಸಿದ್ದರು. ಕೆಆರ್ಎಸ್ ರಸ್ತೆಯಲ್ಲಿ 20 ಗುಂಟೆ ಜಮೀನು ಖರೀದಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಮೊದಲ ಪ್ರಕರಣದಲ್ಲಿ ಕೆಸರೆಯ ಸರ್ವೇ ನಂಬರ್ 462 ಮತ್ತು 464ರ 3.16 ಎಕರೆ ಭೂಮಿ ಹಾಗೂ 14 ಸೈಟ್ ವಿಚಾರದಲ್ಲಿ ದಾಖಲೆ ಬಿಡುಗಡೆ ಮಾಡಿದ್ದರು. ಹೀಗಾಗಿ ವೈಯಕ್ತಿಕ ಮಾಹಿತಿಗಳ ಜತೆಗೆ ಅಗತ್ಯ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಗಂಗರಾಜು ED ವಿಚಾರಣೆಗೆ ಹಾಜರಾಗಲಿ ದ್ದಾರೆ.
ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್ ಅವರ ನಡುವೆ ವಾಕ್ಸಮರ ತೀವ್ರ ತಾರಕಕ್ಕೆ ಏರಿದ್ದು, ಇದೀಗ ಶೋಭಾ ಕರಂದ್ಲಾಜೆ ಅವರು ಭೈರತಿ ಸುರೇಶ್ ಅವರ ವಿರುದ್ಧ ತಾಕತ್ತಿದ್ದರೆ ನನ್ನ ವಿರುದ್ಧ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭೈರತಿ ಸುರೇಶ್ ಆರೋಪಕ್ಕೆ ಶೋಭಾ ಕರಂದ್ಲಾಜೆ ಪ್ರತಿ ಸವಾಲು ಹಾಕಿದ್ದಾರೆ. ಶೋಭಾ ಕರಂದ್ಲಾಜೆ ವಿರುದ್ಧ ಭೈರತಿ ಸುರೇಶ್ ಭ್ರಷ್ಟಾಚಾರ ಆರೋಪ ಮಾಡಿದ್ದರು.ಇಂಧನ ಸಚಿವರಾಗಿದ್ದಾಗ ಅಕ್ರಮ ಎಸಗಿದ್ದಾರೆ ಎಂದು ಭೈರತಿ ಸುರೇಶ್ ಆರೋಪಿಸಿದ್ದರು. ಅಕ್ರಮ ಹೊರ ತರುತ್ತೇವೆ ಎಂದು ಬೈರತಿ ಸುರೇಶ್ ಹೇಳಿದ್ದರು. ಇದೀಗ ಭೈರತಿ ಸುರೇಶ್ ಆರೋಪಕ್ಕೆ ಶೋಭಾ ಕರಂದ್ಲಾಜೆ ತಿರುಗೇಟು ಕೊಟ್ಟಿದ್ದಾರೆ. ತಾಕತ್ ಇದ್ದರೆ ನನ್ನ ವಿರುದ್ಧದ ದಾಖಲೆ ಬಿಡುಗಡೆ ಮಾಡಲಿ. ಸುರೇಶ್ ಮುಡಾದ ಸಾವಿರಾರು ಫೈಲ್ಸ್ ಸುಟ್ಟು ಹಾಕಿದ್ದಾರೆ. ಅದರ ಬಗ್ಗೆ ನಾನು ಧ್ವನಿ ಎತ್ತಿದ್ದೇನೆ. ಹಾಗಾಗಿ ಧ್ವನಿ ಎತ್ತಿದ ತಕ್ಷಣ…
ಬೆಂಗಳೂರು : ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡ್ತೀನಿ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1 ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಆಯೋಜಿಸಿದ್ದ ಹಳ್ಳಿಕಾರ ಸಮುದಾಯದ ಸಮಾವೇಶ ಉದ್ಘಾಟಿಸಿ ಹಳ್ಳಿಕಾರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದ ಅವರು ಜಾತಿ ತಾರತಮ್ಯದ ವ್ಯವಸ್ಥೆಯಲ್ಲಿ ಶಿಕ್ಷಣ ಇಲ್ಲದಿದ್ದರೆ ಸಮಾಜದ ಮುಖ್ಯವಾಹಿನಿಯಲ್ಲಿ ಸಮರ್ಥವಾಗಿರುವುದು ಕಷ್ಟ ಎಂದು ತಿಳಿಸಿದರು. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3A ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ. ಸಮಾಜದಲ್ಲಿ ಯಾವ್ಯಾವ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಜಾತಿ ಸಮೀಕ್ಷಾ ವರದಿಗಳು ಮುಖ್ಯ. 2011 ರಲ್ಲಿ ಜನಗಣತಿಯೇ ಕೊನೆ ಗಣತಿ. ಈಗ ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ ಎಂದರು. ಕೇಂದ್ರದ ಮೋದಿ…
ಬೆಂಗಳೂರು : ಪತ್ನಿ ಹಾಗೂ ಪ್ರಿಯಕರ ಏಕಾಂತದಲ್ಲಿದ್ದ ಖಾಸಗಿ ವಿಡಿಯೋಗಳನ್ನು ಸ್ವತಹ ಪತಿಯೇ ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ ಪತಿಯ ವಿರುದ್ಧವೇ ಇದೀಗ ಎಫ್ಐಆರ್ ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಕುರಿತಂತೆ ಪತ್ನಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ FIR ದಾಖಳಿಸಿದ್ದಾಳೆ. ಪ್ರತಿದಿನವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಪತಿಯ ವರ್ತನೆಗೆ ಬೇಸತ್ತ ಪತ್ನಿಯು ತನ್ನ ಮಾಜಿ ಪ್ರಿಯಕರನೊಂದಿಗೆ ಸಲುಗೆಯಿಂದ ಇದ್ದಾಳೆ.ಈ ವೇಳೆ ಪ್ರಿಯಕರನೊಂದಿಗೆ ಖಾಸಗಿ ಫೋಟೋ ಹಾಗೂ ವಿಡಿಯೋಗಳು ಮಹಿಳೆಯ ಮೊಬೈಲ್ ನಲ್ಲಿ ಇದ್ದವು.ಇದನ್ನು ಪತಿ ತನ್ನ ಮೊಬೈಲ್ಗೆ ಕಳುಹಿಸಿಕೊಂಡಿದ್ದಾನೆ. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವುದಾಗಿ ಕಿರುಕುಳ ನೀಡುತ್ತಿದ್ದಾನೆ. ಮತ್ತು ಆ ವಿಡಿಯೋಗಳನ್ನು ಆತನ ಹಾಗೂ ನನ್ನ ಸ್ನೇಹಿತರಿಗೆ ಕಳಿಸುತ್ತಿದ್ದಾನೆ. ನನಗೆ ಮತ್ತು ನನ್ನ ಮಾಜಿ ಪ್ರಿಯಕರನಿಗೆ ಜೀವ ಬೆದರಿಕೆಯೊಡ್ಡುತ್ತಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಠಾಣೆ ಪೊಲೀಸರು, ತನಿಖೆ ಕೈಗೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ರಾಜ್ಯ ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ತೀವ್ರ ಜಿದ್ದಾಜಿದ್ದಿ ಕುಡಿದು ಮೈತ್ರಿ ಪಕ್ಷಗಳಾದ ಬಿಜೆಪಿ ಜೆಡಿಎಸ್ ಪರವಾಗಿಲ್ಲ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಇತ್ತ ಕಾಂಗ್ರೆಸ್ ಪರವಾಗಿಶ್ವರ್ ಕಣಕ್ಕಿಳಿದಿದ್ದಾರೆ. ಈ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ನಿಮ್ಮ ಗುರುಗೆ ಹೋಗಿ ಹೇಳಿ ಈ ಬಾರಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲ್ಲೋದು ನಾವೇ ಎಂದು ಸವಾಲು ಹಾಕಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಜೆಡಿಎಸ್ ಬಿಜೆಪಿ ಸಮನ್ವಯ ಸಭೆಯಲ್ಲಿ ಸವಾಲು ಹಾಕಿದ ಬಿ ವೈ ವಿಜಯೇಂದ್ರ, ಯೋಗೇಶ್ವರ ಶಿಷ್ಯರಿದ್ದರೆ ಸರಿಯಾಗಿ ಕೇಳಿಸಿಕೊಳ್ಳಿ. ಚನ್ನಪಟ್ಟಣ ಉಪಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ನಾನು ಸವಾಲು ಹಾಕುತ್ತಿದ್ದೇನೆ ನಿಮ್ಮ ಗುರುಗೆ ಹೋಗಿ ಹೇಳಿ ಚನ್ನಪಟ್ಟಣದಲ್ಲಿ ಗೆಲ್ಲೋದು ನಾವೇ ಎಂದು ಬಿ ವೈ ವಿಜಯೇಂದ್ರ ಸವಾಲು ಹಾಕಿದರು. ಚನ್ನಪಟ್ಟಣ ಕ್ಷೇತ್ರದ ಚುನಾವಣೆಯನ್ನು ನಾವು ಸವಾಲಾಗಿ ಸ್ವೀಕಾರ ಮಾಡಿದ್ದೇವೆ. ಶಿಗ್ಗಾಂವಿ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಗೆದ್ದಿರುವಂಥ ವಾತಾವರಣ ನಿರ್ಮಾಣವಾಗಿದೆ. ಸಂಡೂರಿನಲ್ಲೂ ಬಿಜೆಪಿ ಐತಿಹಾಸಿಕ…
ಮಂಡ್ಯ : ರಸ್ತೆ ದಾಟುತ್ತಿದೆ ಸಂದರ್ಭದಲ್ಲಿ ಬೈಕ್ ಒಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಉಪ ತಹಶೀಲ್ದಾರ್ ಒಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಇನ್ನು ಮೃತ ಉಪ ತಹಶೀಲ್ದಾರ್ ರನ್ನು ಚಿಕ್ಕಮಗಳೂರು ಜಿಲ್ಲೆಯ ಬೀರೂರು ಮೂಲದ ಎನ್.ಟಿ ಸುನೀಲ್ (55) ಎಂದು ತಿಳಿದುಬಂದಿದೆ.ಸದ್ಯ ಇವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅ.19ರಂದು ರಾತ್ರಿ 9:30ಕ್ಕೆ ಕೊಳ್ಳೇಗಾಲ ರಸ್ತೆಯ ಸಾರ್ವಜನಿಕ ಆಸ್ಪತ್ರೆಯ ಬಳಿ ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿತ್ತು. ಅಪಘಾತವಾದ ತಕ್ಷಣ ಅವರು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೆ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಪರಿಸ್ಥಿತಿ ಚಿಂತಾಜನಕವಾದಾಗ ತಕ್ಷಣ ಮೈಸೂರು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಸಾವನಪ್ಪಿದ್ದಾರೆ.ಘಟನೆ ಕುರಿತಂತೆ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರಿದ್ವಾರ : ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಈ ಒಂದು ರೀಲ್ಸ್ ಮಾಡುವ ಟ್ರೆಂಡ್ ಹೆಚ್ಚಾಗಿ ಬಿಟ್ಟಿದೆ. ಅದರಲ್ಲೂ ಯುವ ಜನತೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಗೊತ್ತಿದ್ದರೂ ಸಹ ಕೂಡ ಅಪಾಯದ ಸ್ಥಳಗಳಲ್ಲಿ ಹೋಗಿ ರೀಲ್ಸ್ ಮಾಡಿ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಹರಿದ್ವಾರದಲ್ಲಿ ಇಂತಹದ್ದೇ ಘಟನೆ ನಡೆದಿದ್ದು ಹರಿದ್ವಾರದ ಮಾನಸಾ ದೇವಿ ಹಿಲ್ಸ್ನಲ್ಲಿ ಇಂದು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತಿದ್ದು, ಕಾಲು ಜಾರಿ 70 ಮೀಟರ್ ಆಳದ ಕಂದಕಕ್ಕೆ ಬಿದ್ದ ದಾರುಣ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಕೂಡಲೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ಯುವತಿಯನ್ನು ಮುಜಾಫರ್ನಗರ ನಿವಾಸಿ 28 ವರ್ಷದ ರೇಶು ಎಂದು ಗುರುತಿಸಲಾಗಿದ್ದು, ಪೂಜ್ಯ ಮಾನಸಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಲು ತನ್ನ ಕುಟುಂಬದೊಂದಿಗೆ ಹರಿದ್ವಾರಕ್ಕೆ ಬಂದಿದ್ದಳು. ಆಗ ಮೊಬೈಲ್ನಲ್ಲಿ ರೀಲ್ಸ್ ರೆಕಾರ್ಡ್ ಮಾಡುವಾಗ ಆಳವಾದ ಕಂದಕಕ್ಕೆ ಬಿದ್ದಿದ್ದಾಳೆ. ತಕ್ಷಣ ಅಲ್ಲಿದ್ದ ಪ್ರವಾಸಿಗರು ಆಕೆಯನ್ನು ಆ್ಯಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಸೇರಿಸಿದ್ದಾರೆ.…
ಕೋಲಾರ : ಒಂದುವರೆ ಎಕರೆ ಜಮೀನನ್ನು ಅಡವಿಟ್ಟು ಲಕ್ಷಾಂತರ ರೂ.ಸಾಲ ಪಡೆದಿದ್ದ ರೈತನೊಬ್ಬ ಸಾಲ ತೀರಿಸಿದ ಬಳಿಕವೂ ಕೂಡ ಜಮೀನು ಹಿಂತಿರುಗಿಸಿಲ್ಲವೆಂದು, ತನ್ನ ಜಮೀನನ್ನು ಅಡವಿಟ್ಟುಕೊಂಡಿದ್ದವರೆ ಎದುರುಗಡೆನೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಸೋಮಯಾಜಲ ಎಂಬ ಹಳ್ಳಿಯಲ್ಲಿ ನಡೆದಿದೆ. ಅಜರ್ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ನಾರಪ್ಪ ಹಾಗೂ ವೆಂಕಟೇಶ ರೆಡ್ಡಿ ಎಂಬುವರ ಬಳಿ 55 ಲಕ್ಷ ಸಾಲ ಪಡೆಯಲು ಒಂದುವರೆ ಎಕರೆ ಜಾಗವನ್ನು ಅಜರ್ ಅಡವಿಟ್ಟಿದ್ದರು. ಈಗ ಜಮೀನು ವಾಪಾಸ್ ಕೊಡುವಂತೆ ಹೇಳಿದಾಗ ನಾರಪ್ಪ ಹಾಗೂ ವೆಂಕಟೇಶ್ ಸತಾಯಿಸುತ್ತಿದ್ದರು. ಈ ಕಡೆ ಸಾಲ ಮಾಡಿ ಹಣ ತೀರಿಸಿದ್ದರಿಂದ ಹಣವು ಹೋಯಿತು ಆಕಡೆ ಜಮೀನು ಹೋಯಿತು ಎಂದು ಮನನೊಂದ ರೈತ ಅಜರ್ ಸಾಲ ಕೊಟ್ಟವರೆ ಎದುರೇ ವಿಷ ಸೇವಿಸಿದ್ದಾರೆ.ವಿಷ ಸೇವಿಸಿ ಕುಸಿದು ಬಿದ್ದ ಅಜಾರ್ ರನ್ನ ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಜಯಪುರ : ವಿಜಯಪುರ ರೈತರ ಜಮೀನುಗಳ ಪಹಣಿಗಳಲ್ಲಿ ವಕ್ಫ್ ಹೆಸರು ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದೇ ಆಸ್ತಿಯ ಹಕ್ಕನ್ನು ನಿರ್ಣಯ ಮಾಡುವ ಅಧಿಕಾರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇರಲ್ಲ ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ವಿಡಿಯೋ ಮುಖಾಂತರ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಖಾಸಗಿ ವ್ಯಕ್ತಿ ಖಾಸಗಿ ಸಂಸ್ಥೆ ಸರ್ಕಾರಿ ಸಂಸ್ಥೆಯವರು ಅವರ ಬಳಿಯ ಸೂಕ್ತ ದಾಖಲಾತಿ ಕಂದಾಯ ಇಲಾಖೆಗೆ ನೀಡಬೇಕು. ಸಂಬಂಧಿಸಿದವರಿಗೆ ಕಂದಾಯ ಇಲಾಖೆ ಅಧಿಕಾರಿಗಳು ನೋಟಿಸ್ ನೀಡುತ್ತಾರೆ. ನಂತರ ಹಕ್ಕನ್ನು ಖಚಿತಪಡಿಸಿಕೊಂಡು ದಾಖಲಾತಿಗಳನ್ನು ಇಂಡೀಕರಣ ಮಾಡಲಾಗುತ್ತದೆ. ಇಂಡೀಕರಣ ಮಾಡುವುದು ಕಂದಾಯ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದಿದ್ದಾರೆ. 1974 ರಲ್ಲಿ ವಕ್ಫ್ ಬೋರ್ಡ್ ಗೆಜೆಟ್ ನೋಟಿಫಿಕೇಶನ್ ಹೊರಡಿಸಿತ್ತು. ಆಸ್ತಿಗಳ ಕಂದಾಯ ಇಲಾಖೆಗೆ ಇಂಡೀಕರಣ ಮಾಡಲು ಪಟ್ಟಿ ನೀಡಿದ್ದಾರೆ. ವಿಜಯಪುರ ಜಿಲ್ಲಾ ವಕ್ಫ್ ಬೋರ್ಡ್ ಅಧಿಕಾರಿಗಳು ನೀಡಿದ್ದಾರೆ. ದಾಖಲಾತಿ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ.ಈ ಪ್ರಕ್ರಿಯೆಗಾಗಿ ರೈತರಿಗೆ ಹಾಗೂ ಮಾಲೀಕರಿಗೆ ನೋಟಿಸ್ ನೀಡಲಾಗುತ್ತದೆ. ನೋಟಿಸ್ ಗೆ ಭಯಪಡುವ ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿ ಧೈರ್ಯ ತುಂಬಿದ್ದಾರೆ.…
ಬೆಂಗಳೂರು : ಮಲ್ಟಿಪ್ಲೆಕ್ಸ್ ಸಿನಿಮಾ ಮಂದಿರಗಳಲ್ಲಿ ಪ್ರವೇಶ ದರವನ್ನು 200 ರೂಪಾಯಿ ನಿಗದಿಪಡಿಸಿ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಗೃಹ ಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ ಬಳಿಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಮಾತನಾಡಿ,ಇತ್ತೀಚೆಗೆ ಮಲ್ಟಿಪ್ಲೆಕ್ಸ್ ಸೇರಿದಂತೆ ಚಿತ್ರಮಂದಿರಗಳಲ್ಲಿ ಪ್ರವೇಶ ದರ ದುಬಾರಿಯಾಗಿದ್ದು, ಸಾವಿರದಿಂದ ಒಂದೂವರೆ ಸಾವಿರ ರೂಪಾಯಿವರೆಗೂ ಟಿಕೆಟ್ ದರವನ್ನು ನಿಗದಿಪಡಿಸಲಾಗುತ್ತಿದೆ. ಇದರಿಂದ ಕನ್ನಡ ಪ್ರೇಕ್ಷಕರಿಗೆ ಹೊರೆಯಾಗಿದೆ. ರೂ.200 ಮೀರದಂತೆ ಪ್ರವೇಶದರ ವಿಧಿಸುವಂತೆ ಸಿಎಂಗೆ ಮನವಿ ಸಲ್ಲಿಸಿದ್ದೇವೆ ಎಂದರು. ಇತ್ತೀಚೆಗೆ ವಾಣಿಜ್ಯ ಮಂಡಳಿಯ ಮುಂಭಾಗದಲ್ಲಿ ನಿರ್ಮಾಪಕರು, ವಿತರಕರು, ಪ್ರದರ್ಶಕರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ದುಬಾರಿ ಪ್ರವೇಶ ದರದಿಂದ ಚಿತ್ರಮಂದಿರದಲ್ಲಿ ಚಿತ್ರ ವೀಕ್ಷಿಸಲು ಪ್ರೇಕ್ಷಕರು ಗಣನೀಯ ಪ್ರಮಾಣದಲ್ಲಿ ಕುಂಠಿತಗೊಂಡು ಚಿತ್ರ ನಿರ್ಮಾಣಕ್ಕೆ ಹಾಕಿದ ಬಂಡವಾಳ ಸಹ ವಾಪಸ್ ಪಡೆಯಲು ಕಷ್ಟಸಾಧ್ಯವಾಗುತ್ತಿದೆ. ಹಾಗಾಗಿ ಕೂಡಲೇ 200…














