Author: kannadanewsnow05

ತುಮಕೂರು : ನಿನ್ನೆ ಬೆಂಗಳೂರಿನ ಯಲಹಂಕದ ರೈಲು ನಿಲ್ದಾಣದ ಬಿನ್ ನಲ್ಲಿ ನವಜಾತ ಗಂಡು ಮಗುವಿನ ಶವ ಪತ್ತೆಯಾದ ಬಳಿಕ ಇದೀಗ ತುಮಕೂರು ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಎರಡರಿಂದ ಮೂರ ದಿವಸದ ಹಸುಗೂಸಿನ ಶವ ಪತ್ತೆಯಾಗಿದೆ. ಹೌದು ತುಮಕೂರು ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಎರಡರಿಂದ ಮೂರ ದಿವಸದ ಹಸುಗೂಸಿನ ಶವ ಪತ್ತೆಯಾಗಿದೆ. ನಿಲ್ದಾಣದಲ್ಲಿ ಬಟ್ಟೆಯಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಮಗು ಕಂಡು ಬಂದಿದ್ದು ಮಗುವಿನ ಶವವನ್ನು ಕಂಡ ಪ್ರಯಾಣಿಕರೊಬ್ಬರು ಪೊಲೀಸಿಗೆ ಮಾಹಿತಿ ನೀಡಿದ್ದಾರೆ. ಇನ್ನೂ ನಿನ್ನೆ ಯಲಹಂಕದ ರೈಲು ನಿಲ್ದಾಣದ ಡಸ್ಟ್‌ ಬಿನ್‌ ನಲ್ಲಿ ನವಜಾತ ಗಂಡು ಮಗುವಿನ ಶವ ಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಯಲಹಂಕ ರೈಲ್ವೆ ನಿಲ್ದಾಣಕ್ಕೆ ಬಂದ ಪ್ರಶಾಂತಿ ಎಕ್ಸ್‌ ಪ್ರೆಸ್‌ ರೈಲಿನ ಡೆಸ್ಟ್‌ ಬಿನ್‌ ನಲ್ಲಿ ನವಜಾತ ಗಂಡು ಮಗುವಿನ ಶವವನ್ನು ಇಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಗು ಡಸ್ಟ್‌ ಬಿನ್‌ ನಲ್ಲಿ ನರಳಿ ನರಳಿ ಪ್ರಾಣ ಬಿಟ್ಟಿದೆ. ಗಂಡು ಮಗುವಿನ ಶವವನ್ನು ನಿನ್ನೆ ಮುಂಜಾನೆ…

Read More

ಹಾವೇರಿ : ಬೆಳ್ಳಂ ಬೆಳಗ್ಗೆ ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ ಒಂದು ನಡೆದಿದ್ದು, ನಿಂತಿದ್ದ ಲಾರಿಗೆ ಟಿಟಿ ವಾಹನ ಒಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೌದು ಸೌದತ್ತಿ ಯಲ್ಲಮ್ಮನ ದರ್ಶನ ಪಡೆದುಕೊಂಡು ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 10 ಜನ ಸವನ್ನಪಪ್ಪಿದೆ. ಟಿಟಿಯಲ್ಲಿ ಸುಮಾರು 15 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರು ಸಾವನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತ ದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಂತವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾಸ್ಥಳಕ್ಕೆ ಬ್ಯಾಡಗಿ ಠಾಣೆಯ ಪೊಲೀಸರು ಭೇಟಿ…

Read More

ಬೆಂಗಳೂರು : ಹೆಚ್ಚುವರಿ ಡಿಸಿಎಂ ಸ್ಥಾನ ಹುದ್ದೆಯ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು ನಮ್ಮದು ಹೈಕಮಾಂಡ್ ಪಕ್ಷ. ಹಾಗಾಗಿ ಪಕ್ಷದಲ್ಲಿ ಯಾವುದೇ ಬದಲಾವಣೆ ತರಬೇಕಾದರೂ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಅದಕ್ಕೆ ನಾವು ಭಜರಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು. ನಿನ್ನೆ ಬೆಂಗಳೂರಿನಲ್ಲಿ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಚಂದ್ರಶೇಖರ ಶ್ರೀಗಳು ಡಿಸೆಂಬ ಡಿಕೆ ಶಿವಕುಮಾರ್ ಗೆ ಸಮ ಸ್ಥಾನ ಬಿಟ್ಟು ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದರು. ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ,ಕಾಂಗ್ರೆಸ್‌ ಹೈಕಮಾಂಡ್‌ ಪಕ್ಷ. ಗೊತ್ತಾಯ್ತಾ. ಪ್ರಜಾಪ್ರಭುತ್ವದಲ್ಲಿ ಹೈಕಮಾಂಡ್‌ ಏನು ತೀರ್ಮಾನ ಮಾಡುತ್ತದೋ ಆ ರೀತಿ ನಡೆದುಕೊಳ್ಳುತ್ತೇವೆ ಎಂದರು. ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪಚುನಾವಣೆ ಇದೀಗ ಬಾರಿ ಕಾವೇರಿತ್ತಿದ್ದು, ಈ ಒಂದು ಕ್ಷೇತ್ರದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹೆಗಡೆ ಅವರು ಸ್ಪರ್ಧಿಸಲಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ಈಗ ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣ…

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಇದೀಗ ಜಿಲ್ಲೆಯಾದ್ಯಂತ ಅಂಗನವಾಡಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೂ ಕೂಡ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಹೌದು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ, ಆ ಭಾಗಗಳಲ್ಲಿ ಇತ್ತೀಚಿಗೆ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಭಾರಿ ಅವಾಂತರ ಸೃಷ್ಟಿಯಾಗುತ್ತಿವೆ. ಹಾಗಾಗಿ ಜಿಲ್ಲೆಯ ಅಂಗನವಾಡಿ ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಿಗೂ ಕೂಡ ರಜೆ ಘೋಷಸಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಮೀನುಗಾರರು ಸಮುದ್ರ ಕೇಳಿಯಾದಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ ಸಮುದ್ರ ತೀರದ ಜನರು ಎಚ್ಚರವಹಿಸುವಂತೆ ಸಲಹೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಮುಂಜಾಗ್ರತಾ ಕ್ರಮವಾಗಿ ಸುರಕ್ಷತೆಗಾಗಿ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ.

Read More

ಕಲಬುರಗಿ : ಮನೆಯಿಂದ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು ಗುರುವಾರ ರಾವೂರ ಸುಣ್ಣದ ಕಲ್ಲಿನ ಗಣಿಯೊಂದರ ನೀರಿನ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಕಲಬುರ್ಗಿ ಜಿಲ್ಲೆಯ ವಾಡಿ ಪಟ್ಟಣದ ರಾವೂರ ಗ್ರಾಮದ ಭುವನ್ (6) ಮತ್ತು ದೇವರಾಜ (7), ಮೃತ ಬಾಲಕರು ಎಂದು ಹೇಳಲಾಗುತ್ತಿದೆ.ರಾವೂರಿನ ಸಿದ್ದಲಿಂಗೇಶ್ವರ ದೇವಸ್ಥಾನದ ರಥ ಬೀದಿಯಿಂದ ಸ್ವಲ್ಪವೇ ದೂರದಲ್ಲಿದ್ದ ಸುಣ್ಣದ ಕಲ್ಲಿನ ಗಣಿಯ ಹಳ್ಳದಲ್ಲಿ ಈಜಾಡಲು ಹೋಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬುಧವಾರ ಸಂಜೆಯಿಂದಲೇ ಪೋಷಕರು ಹುಡುಕಲಾರಂಭಿಸಿದ್ದು, ಗುರುವಾರ ಸುಣ್ಣದ ಕಲ್ಲಿನ ಗಣಿಯ ಪಕ್ಕದಲ್ಲಿರುವ ಬಾಲಕರ ಚಪ್ಪಲಿಯನ್ನು ಗುರುತಿಸಿ, ಪೊಲೀಸರ ಸಮ್ಮುಖದಲ್ಲಿ ನೀರಿಗೆ ಇಳಿದು ಹುಡುಕಿದಾಗ ಮೃತದೇಹ ಪತ್ತೆಯಾಗಿವೆ ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಪಿಎಸ್‌ಐ ತಿರುಮಲೇಶ ಕುಂಬಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪಚುನಾವಣೆ ಇದೀಗ ಬಾರಿ ಕಾವೇರಿತ್ತಿದ್ದು, ಈ ಒಂದು ಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹೆಗಡೆ ಅವರು ಸ್ಪರ್ಧಿಸಲಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ಈಗ ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ‘ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ, ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ’ ಎಂದು ಅವರು ತಿಳಿಸಿದ್ದಾರೆ. ಲೋಕಸಭೆ ಚುನಾವಣೆ ಮುಕ್ತಾಯದ ಬೆನ್ನಲ್ಲಿ ಶಾಸಕ ಸ್ಥಾನದಿಂದ ತೆರವಾದ ಕರ್ನಾಟಕದ ಊರು ವಿಧಾನಸಭಾ ಕ್ಷೇತ್ರಗಳಾದ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರ, ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಇದೀಗ ರಾಜಕೀಯದಲ್ಲಿ ಕಾವು ಹೆಚ್ಚಾಗಿದೆ. ಅದರಲ್ಲೂ ಚನ್ನಪಟ್ಟಣ…

Read More

ಬೆಂಗಳೂರು : ಕೆಂಪೇಗೌಡರು ನಾಡಿನ ದೊರೆಯಾಗಿ ಮಾದರಿ ಆಡಳಿತ ಕೊಟ್ಟಿದ್ದಾರೆ. ಅವರು ಹುಟ್ಟಿನಿಂದ ರೈತ ಹಾಗೂಒಕ್ಕಲಿಗ ಸಮುದಾಯದಲ್ಲಿ ನೆಲೆಸಿದ್ದರು ಕೂಡ, ಅವರ ಆಡಳಿತ ದಿನಗಳಲ್ಲಿ ಯಾವುದೇ ಜಾತಿ ಧರ್ಮ ವಿಂಗಡಣೆ ಮಾಡತಕ್ಕಂಥ ಕೆಲಸ ಮಾಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಎಂದು ಕೆಂಪೇಗೌಡರ ಜಯಂತಿ ಉತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಈ ಒಂದು ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೆಂಪೇಗೌಡರು ಎಲ್ಲಾ ಜನಾಂಗದವರು ಹಾಗೂ ಎಲ್ಲಾ ಜಾತಿಯವರನ್ನು ಅಭಿವೃದ್ಧಿ ಪಡಿಸತಕ್ಕಂಥಹ ಕೆಲಸ ಮಾಡಿದರು ಬೆಂಗಳೂರು ಇಷ್ಟೊಂದು ಬೆಳೆಯುವುದಕ್ಕೆ ನಾಡಪ್ರಭು ಕೆಂಪೇಗೌಡರೇ ಕಾರಣ ಎಂದು ಅವರು ಕಾರ್ಯಕ್ರಮದಲ್ಲಿ ತಿಳಿಸಿದರು. ಸಿಎಂ ಸ್ಥಾನ ಬಿಟ್ಟು ಕೊಡಿ : ಚಂದ್ರಶೇಖರಶ್ರೀ ಮನವಿ ರಾಜ್ಯದಲ್ಲಿ ಕಾಂಗ್ರೆಸ್ ಹಿರಿಯ ನಾಯಕರಲ್ಲಿ ಡಿ.ಕೆ. ಶಿವಕುಮಾರ್ ಮಾತ್ರ ಸಿಎಂ ಆಗಿಲ್ಲ. ಹೀಗಾಗಿ, ಸಿದ್ದರಾಂಯ್ಯ ಅವರು ತಮ್ಮ ಸಿಂಎಂ ಸ್ಥಾನವನ್ನು ಬಿಟ್ಟುಕೊಟ್ಟು ಡಿ.ಕೆ. ಶಿವಕುಮಾರ್ ಅವರ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕೆಂಗೇರಿ ಆದಿಚುಂಚನಗಿರಿ ಶಾಖಾ…

Read More

ಬಳ್ಳಾರಿ : ಬಳ್ಳಾರಿಯಲಿ 19.10 ಲಕ್ಷ ಮೌಲ್ಯದ 19 ಕೆಜಿ ಗಾಂಜಾ ಜಪ್ತಿ ಮಾಡಿ ಕೊಳ್ಳಲಾಗಿದೆ. ಬಳ್ಳಾರಿ ನಗರ ಪೊಲೀಸರಿಂದ ಇಬ್ಬರು ಆರೋಪಿಗಳನ್ನು ಕೂಡ ಬಂಧಿಸಲಾಗಿದೆ. ಆರೋಪಿಗಳಾದ ವಾಹಿದ್ (38) ಪಿ ಚಾಂದ್ ಪಾಷಾ (40) ಆರೋಪಿಗಳಾಗಿದ್ದು ಉಳಿದ ನಾಲ್ವರು ಆರೋಪಿಗಳಾಗಿ ಪೊಲೀಸರು ಇದೀಗ ಹುಡುಕಾಟ ನಡೆಸುತ್ತಿದ್ದಾರೆ. ಆರು ತಿಂಗಳಲ್ಲಿ 75 ಕೆಜಿ ಗಾಂಜಾವನ್ನು ಸೀಜ್ ಮಾಡಿದ ಬಳ್ಳಾರಿ ಪೊಲೀಸರು, ಇಲ್ಲಿಯವರೆಗೆ ಒಟ್ಟು 13 ಗಾಂಜಾ ಪ್ರಕರಣಗಳಲ್ಲಿ 18 ಆರೋಪಿಗಳು ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಸಾಹೇಬರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಚನ್ನಪಟ್ಟಣದ ಉಪಚುನಾವಣೆಯಲ್ಲಿ ಈ ಬಾರಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪರ್ಧಿಸಲಿದ್ದಾರೆ ಎಂಬ ಕೂಗು ಕೇಳಿ ಬಂದಿದೆ ಈ ಒಂದು ವಿಚಾರಕ್ಕೆ ಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದು ಈ ಬಾರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಡಿಕೆ ಸಹೋದರರಲ್ಲಿ ಆರ್ ಎಸ್ ಸ್ಪರ್ಧಿಸಿದರು ಅವರನ್ನು ಸೋಲಿಸುತ್ತೇವೆ ಎಂದು ತಿಳಿಸಿದರು. ಈ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಭ್ರಷ್ಟ ಸರ್ಕಾರ ಹಣದ ಹೊಳೆ ಹರಿಸುತ್ತೆ. ಯಾರೇ ಅಭ್ಯರ್ಥಿಯಾದರು ಗೆಲ್ಲೋಣ ಎಂದು ಕುಮಾರಸ್ವಾಮಿ ಹೇಳಿದ್ದಾರೆ.ನಾವು ಕುಮಾರಸ್ವಾಮಿ ಈ ವಿಚಾರದಲ್ಲಿ ಮುಕ್ತರಾಗಿದ್ದೇವ ಇಪ್ಪತ್ತು ವರ್ಷಗಳಿಂದ ಡಿಕೆ ಚನ್ನಪಟ್ಟಣಕ್ಕೆ ಹೋಗಿಯೇ ಇಲ್ಲ. ಈಗ ನಾಟಕ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದರು. 20,000 ಮತ ಬಂದಿದ್ದಕ್ಕೆ ಅಲ್ಲಿ ಹೋಗುತ್ತೇವೆ ಅಂದಿದ್ದಾರೆ.ಮತ ಹಾಕಿದವರಿಗೆ ನಮಸ್ಕಾರ ಹಾಕಲು ಹೋಗುತ್ತಾರಂತೆ.ಎಷ್ಟು ನಮಸ್ಕಾರ ಹಾಕುತ್ತಾರೆ ಅಂತ ನೋಡೋಣ. ಡಿಕೆ ಸಹೋದರರಲ್ಲಿ ಯಾರೆ ನಿಂತರು ಸೋಲಿಸುತ್ತೇವೆ. ಚನ್ನಪಟ್ಟಣದಲ್ಲಿ ಯಾರೇ ಸ್ಪರ್ಧಿಸಿದರು ಸೋಲಿಸುತ್ತೇವೆ ಎಂದು ಬೆಂಗಳೂರಿನಲ್ಲಿ…

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಹೆಚ್ಚುವರಿ ಡಿಸಿಎಂ ಸ್ಥಾನ ಹುದ್ದೆ ನೇಮಕ ಮಾಡುವಂತೆ ಕೂಗು ಕೇಳಿ ಬರುತ್ತಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೇಂದ್ರ ರಾಜಣ್ಣ ಅವರಿಗೆ ಕರೆಯ ಮೂಲಕ ಮಾತನಾಡಿದ್ದು ಬಹಿರಂಗವಾಗಿ ಡಿಸಿಎಂ ಹುದ್ದೆ ಕುರಿತು ಮಾತನಾಡದಂತೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಸಚಿವರಿಗೆ ತಾಕಿದ್ದು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಸಚಿವ ಕೆ ಎನ್ ರಾಜಣ್ಣ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚಿಸಿದ್ದಾರೆ. ಸಚಿವ ರಾಜಣ್ಣ ಅವರಿಗೂ ಕೂಡ ಬಹಿರಂಗವಾಗಿ ಮಾತನಾಡದಂತೆ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಬಹಿರಂಗ ಹೇಳಿಕೆಗಳಿಂದ ಸರ್ಕಾರ ಹಾಗೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಯಾವುದೇ ಸಚಿವರಾಗಲಿ ಶಾಸಕರಾಗಲಿ ಡಿಸಿಎಂ ಹುದ್ದೆ ಕುರಿತಂತೆ ಬಹಿರಂಗವಾಗಿ ಹೇಳಿಕೆ ನೀಡಬಾರದು. ಈ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಸಿಎಂ ಸಿದ್ದರಾಮಯ್ಯ ತಾಕಿದ್ದು ಮಾಡಿದ್ದಾರೆ.

Read More