Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ದಾಳಿಯ ವೇಳೆ ಐವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಐವರು ಯುವತಿಯರನ್ನು ಇದೆ ವೇಳೆ ರಕ್ಷಣೆ ಮಾಡಿರುವ ಘಟನೆ ಮೈಸೂರಿನ ವಿಜಯನಗರದಲ್ಲಿ ನಡೆದಿದೆ. ಹೌದು ಮೈಸೂರಿನ ವಿಜಯನಗರದಲ್ಲಿ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಐವರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಐವರು ಯುವತಿಯರನ್ನು ಇದೆ ವೇಳೆ ಪೊಲೀಸರು ರಕ್ಷಣೆ ಮಾಡಿದ್ದಾರೆ ಮೈಸೂರಿನ ವಿಜಯನಗರದ ರಾಯಲ್ ಇಷಾ ಸ್ಪಾ ಹೆಸರಲ್ಲಿ ವೇಶ್ಯಾ ವಾಟಿಕೆ ದಂದೇ ನಡೆಸುತ್ತಿದ್ದ ಆರೋಪ ಕೇಳಿ ಬಂದಿದೆ ದಂಧೆಯ ಬಗ್ಗೆ ಒಡನಾಡಿ ಸಂಸ್ಥೆಗೆ ನಾಗರೀಕರು ದೂರು ನೀಡಿದ್ದರು ಎಂದು ಹೇಳಲಾಗುತ್ತಿದೆ. ವಿಜಯನಗರ ಪೊಲೀಸರ ಜೊತೆ ಎಸಿಪಿ ಗಜೇಂದ್ರ ಪ್ರಸಾದ್ ಸಿಬ್ಬಂದಿಗಳ ಜೊತೆಗೆ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ಐವರು ಯುವತಿಯರನ್ನು ರಕ್ಷಿಸಿದ್ದಾರೆ.
ಚಿತ್ರದುರ್ಗ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಪೆನ್ ಡ್ರೈವ್ ಹಂಚಿಕೆ ಹಿಂದೆ ಎಚ್ಡಿಕೆ ಇದ್ದಾರೆ ಎಂದು ಆರೋಪಿಸಿದ್ದಾರೆ ಈ ಒಂದು ಆರೋಪಕ್ಕೆ ಬಿಜೆಪಿಯ ಮಾರಿ ಸಚಿವ ಸಿಟಿ ರವಿ ತಿರುಗೇಟು ನೀಡಿದ್ದು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಎಲ್ಲಾ ಯಾಕೆ ಸಚಿವ ಕೆ ಎನ್ ರಾಜಣ್ಣ ಅವರೇ ಚಾರ್ಜ್ ಶೀಟ್ ಸಲ್ಲಿಸಲಿ ಎಂದು ಲೇವಡಿ ಮಾಡಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಕೇಸ್ ಹಿಂದೆ ಎಚ್ಡಿಕೆ ಇದ್ದರೆ ಆರೋಪ ವಿಚಾರವಾಗಿ ಸಚಿವ ರಾಜಣ್ಣ ಹೇಳಿಕೆಗೆ ಮಾಜಿ ಶಾಸಕ ಸಿಟಿ ರವಿ ತಿರುಗೇಟು ನೀಡಿದ್ದು, ಎಸ್ಐಟಿ ಯಾಕೆ ರಾಜಣ್ಣ ಅವರೇ ಚಾರ್ಜ್ ಶೀಟ್ ಹಾಕಲಿ.ಪ್ರಕರಣವನ್ನು ರಾಜಕೀಯಕ್ಕೆ ದುರ್ಬಳಕೆ ಮಾಡಬಾರದು ಎಂದರು. ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಬೇಕು. ಎಸ್ ಐ ಟಿ ಅವರು ರಾಜಣ್ಣರನ್ನೇ ವಿಚಾರಣೆಗೆ ಒಳಪಡಿಸಬೇಕು. ಸತ್ಯಾಸತ್ಯತೆ ಹೊರಬರಲಿ.ಪ್ರಜ್ವಲ್…
ಬೆಂಗಳೂರು : ಪಕ್ಕದ ತೆಲಂಗಾಣದ ರೀತಿ ರಾಜ್ಯದಲ್ಲೂ ಚಿತ್ರಮಂದಿರನಗಳನ್ನು ಬಂದ್ ಮಾಡಬೇಕೆಂಬ ಬಗ್ಗೆ ಕಳೆದ ಎರಡು ದಿನಗಳ ಹಿಂದೆ ಚಿತ್ರರಂಗದ ನಿರ್ಮಾಪಕರು ಪ್ರದರ್ಶಕರ ಸಂಘ ಫಿಲಂ ಚೇಂಬರ್ ನೇತೃತ್ವದಲ್ಲಿ ಸಭೆ ನಡೆಸಿತ್ತು. ಸ್ಯಾಂಡಲ್ ವುಡ್ ಬಂದ್ ವಿಚಾರಕ್ಕೆ ಕುರಿತಾಗಿ ನಟ ಹಾಗೂ ನಿರ್ಮಾಪಕ ಬೇಸರ ವ್ಯಕ್ತಪಡಿಸಿದ್ದು ನಾನು 10 ಸಿನಿಮಾ ಮಾಡಲು ರೆಡಿ ಇದ್ದೇನೆಬನ್ನಿ ನನ್ನ ಹತ್ತಿರ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಡಲ್ ವುಡ್ ಬಂದ್ ವಿಚಾರಕ್ಕೆ ರವಿಚಂದ್ರನ್ ಬೇಸರ ವ್ಯಕ್ತಪಡಿಸಿದ್ದು. ಸಮಸ್ಯೆ ಇವೆ ಅಂತ ಚಿತ್ರರಂಗ ಬಂದ್ ಮಾಡೋಕೆ ಆಗುತ್ತಾ? ನಾನು ಹತ್ತು ಸಿನಿಮಾ ಮಾಡಲು ರೆಡಿ ಇದ್ದೇನೆ. ನನ್ನತ್ರ ಬನ್ನಿ ಎಂದು ನಟ ಹಾಗೂ ನಿರ್ಮಾಪಕ ರವಿಚಂದ್ರನ್ ತಿಳಿಸಿದರು. ದರ್ಶನ್ , ಯಶ್ ಅವರು ವರ್ಷಕ್ಕೆ ಮೂರು ಸಿನಿಮಾ ಮಾಡೋಕೆ ಆಗುತ್ತಾ? ಅವರಿಗೂ ಸ್ಟೋರಿ ಸಿಗಬೇಕು. ಅದಕ್ಕೆ ಟೈಮ್ ತೆಗೆದುಕೊಳ್ಳಬೇಕು. ಇಂಡಸ್ಟ್ರಿಯಲ್ ಏರುಪೇರು ಇದ್ದಿದ್ದೆ. ಅದು ಇಂದು ನಿನ್ನೆಯದಲ್ಲ ಅವಾಗಿನಿಂದಲೂ ಇದೆ ಎಂದು ಸ್ಯಾಂಡಲ್…
ಕೊಪ್ಪಳ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆದರೆ ತಮ್ಮ ದೇವಸ್ಥಾನವನ್ನು ತಾವೇ ಕಟ್ಟಿಕೊಳ್ಳುತ್ತಾರೆ ಎಂದು ಕೊಪ್ಪಳದ ಕಾರಟಗಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಮಾತನಾಡಿದ ಅವರು, ಮೋದಿ ಮತ್ತೊಮ್ಮೆ ಗೆದ್ದರೆ ತಮ್ಮ ದೇವಸ್ಥಾನ ತಾವೇ ಕಟ್ಟಿಕೊಳ್ಳುತ್ತಾರೆ. ರಾಮನ ದೇಗುಲ ಆಯ್ತು ಇನ್ನು ನನ್ನ ದೇಗುಲ ಅಂತ ಕಟ್ಟಿಕೊಳ್ಳುತ್ತಾರೆ. ಯಾಕೆಂದರೆ ಮೋದಿ ಸ್ಟೇಟ್ಮೆಂಟ್ ಗಳು ಹಾಗೆ ಇವೆ ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ ಅಂತ ನರೇಂದ್ರ ಮೋದಿ ಹೇಳುತ್ತಾರೆ. ಜನ ಮತ್ತೊಮ್ಮೆ ಅವಕಾಶ ಕೊಟ್ಟರೆ ಮೋದಿ ದೇಗುಲ ಕಟ್ಟುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಪ್ರತಿ ಊರಲ್ಲಿ ಮೋದಿ ದೇವಸ್ಥಾನ ಕಟ್ಟಿ ಅನ್ನೋ ಸ್ಥಿತಿ ಬರುತ್ತದೆ. ಪುರಿ ಜಗನ್ನಾಥರು ಮೋದಿ ಭಕ್ತರು ಅಂತಾರೆ. ಎಲ್ಲಿಗೆ ಬಂದಿದೆ ಸ್ಥಿತಿ ನೋಡಿ. ಮೋದಿ ಸಬ್ ಕಾ ಸಾಥ್ ಅಂತಾರೆ ವೇದಿಕೆಯಲ್ಲಿ ಹಿಂದುತ್ವ ಅಂತಾರೆ ಎಂತಹ ಮಾತನ್ನು ಹಿಂದಿನ…
ಉತ್ತರಪ್ರದೇಶ : ನಿನ್ನೆ ರಾತ್ರಿ ಅಯೋಧ್ಯೆಯ ಬಳಿ ಲಾರಿ ಮತ್ತು ಟಿಟಿ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ.ಅಪಘಾತದಲ್ಲಿ ಕಲಬುರ್ಗಿ ಮೂಲದ ಒಂದೇ ಕುಟುಂಬದ ಮೂವರು ಸಾವನಪ್ಪಿದ್ದು, ಇನ್ನುಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಶಿವರಾಜ್, ಕಾಶಿನಾಥ್ ಹಾಗೂ ತಂಗೆಮ್ಮ ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ. ಗಾಯಾಳುಗಳಿಗೆ ಅಯೋಧ್ಯೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ಕುಟುಂಬದ 22 ಜನ ಕಾಶಿ ವಿಶ್ವನಾಥನ ದರ್ಶನ ಮುಗಿಸಿ ಟಿಟಿಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಟಿಟಿ ವಾಹನದಲ್ಲಿದ್ದವರು ಕಾಶಿ ವಿಶ್ವನಾಥನ ದರ್ಶನವನ್ನು ಪಡೆದು ವಾಪಸಾಗುತ್ತಿದ್ದ ವೇಳೆ ಲಾರಿಗೆ ಟಿಟಿ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ವೇಳೆ ಕಲಬುರ್ಗಿ ಜಿಲ್ಲೆಯ ಮೂವರು ಸಾವನಪ್ಪಿದ್ದಾರೆ.ಅಲ್ಲದೆ ಟಿಟಿ ವಾಹನದಲ್ಲಿದ್ದ ಇನ್ನೂ ಉಳಿದ ಹಲವರಿಗೆ ಗಂಭೀರವಾದಂತಹ ಗಾಯಗಳಾಗಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಬೆಂಗಳೂರಿನ ಕೆಸಿ ಜನರಲ್ ಹಾಸ್ಪಿಟಲ್ ನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಐಸಿಯು(ICU)ನಲ್ಲಿ ಇದ್ದ ವ್ಯಕ್ತಿಗೆ ನಿನ್ನೆ ರಾತ್ರಿ ರಕ್ತ ಬರುವ ಹಾಗೆ ಆಸ್ಪತ್ರೆಯ ಸಿಬ್ಬಂದಿ ಥಳಿಸಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ನಿನ್ನೆ ನೆಲಮಂಗಲ ಮೂಲದ ವೆಂಕಟೇಶ್ ಎಂಬುವವರು ವಿಷ ಸೇವಿಸಿ ಐಸಿಯು ವಾರ್ಡ್ ಸೇರಿದ್ದರು. ಈ ವೇಳೆ ಆಸ್ಪತ್ರೆಯ ವಾರ್ಡ್ ಬಾಯ್ ಧನಂಜಯ್ ಎಂಬಾತ ಇಗ್ಗಾ ಮುಗ್ಗ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಚಿಕಿತ್ಸೆ ವೇಳೆ ಕೂಗಾಡಿದ ಎನ್ನುವ ಕಾರಣಕ್ಕೆ ಥಳಿತ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಆಸ್ಪತ್ರೆ ಬೇಜವಾಬ್ದಾರಿತನದ ವಿರುದ್ಧ ಗಾಯಾಳು ವೆಂಕಟೇಶ್ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಗಿ ಸಂಬಂಧಿ ಲಲಿತ ಎಂಬುವವರು ಮಾತನಾಡಿ, ನಮ್ಮವರು ವಿಷ ಕುಡಿದು ಕೆಸಿ ಜನರಲ್ ಆಸ್ಪತ್ರೆ ಐಸಿಯುನಲ್ಲಿ ಸೇರಿದ್ದರು. ಈ ವೇಳೆ ‘ಧನಂಜಯ ಎಂಬ ವಾರ್ಡ್ ಬಾಯ್ ಪೇಷಂಟ್ ಕೂಗಾಡುತ್ತಿದ್ದ ಎಂದು ಹೇಳಿ ಬಾಯಿ, ಮೂಗಿನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆಸ್ಪತ್ರೆ ವೈದ್ಯಕೀಯ ಅಧೀಕ್ಷಕಿ ಹೇಳಿದ್ದಿಷ್ಟು ಇನ್ನು ಘಟನೆ…
ಮೈಸೂರು : ಚನ್ನಗಿರಿಯ ಠಾಣೆಯಲ್ಲಿ ನಡೆದ ಸಾವು ಪ್ರಕರಣಕ್ಕೆ ಸಂಬಂಧಿಸದಂತೆ ಇದು ಲಾಕಪ್ ಡೆತ್ ಅಲ್ಲ, ಆತನಿಗೆ ಮೂರ್ಛೆ ರೋಗ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಎಫ್ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಆದೇಶ ಮಾಡಿದ್ದೇನೆ. ಆದರೆ ಇದು ಲಾಕಪ್ ಡೆತ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು. ಇನ್ನು ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ವಿಚಾರದ ಕುರಿತು ಸರ್ಕಾರದಿಂದ ಕೇಂದ್ರಕ್ಕೆ ತಡವಾಗಿ ಪತ್ರ ಬಂತು ಎಂಬ ಕೇಂದ್ರ ಸಚಿವರ ಹೇಳಿಕೆ ಕುರಿತು ಮಾತನಾಡಿ, ಇದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಅಷ್ಟೇ. ನಾನು 15 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಪತ್ರ ಬರೆದರೂ ನನಗೆ ಉತ್ತರ ಬಂದಿಲ್ಲ. ಒಂದು ವೇಳೆ ನಾನು ಪತ್ರ ಬರೆದದ್ದು ತಡವೇ ಅಂದುಕೊಳ್ಳಿ. ಈಗ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಹೇಳಿ. ಸುಮ್ಮನೇ ಕಾಲ ಕಳೆಯುವುದನ್ನು…
ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅಶ್ಲೀಲ ವಿಡಿಯೋ ಹಂಚಿಕೆ ಮಾಡಿದ್ದು ತಪ್ಪು ಎಂಬ ಹೇಳಿಕೆಗೆ ಹೆಚ್ಡಿ ಕುಮಾರಸ್ವಾಮಿ ಟ್ವೀಟ್ ನಲ್ಲಿ ತಿರುಗೇಟು ನೀಡಿದ್ದು,ನಿಮ್ಮದು ‘CABINET OF KARNATAKA’ ಅಲ್ಲ, ಅದು CABINET OF CONSPIRACY ಎಂದು ಸಿಎಂ ವಿರುದ್ಧ HDK ಕಿಡಿ ಕಾರಿದ್ದಾರೆ. ಟ್ವೀಟ್ ನಲ್ಲಿ ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು ಹೇಳುತ್ತಿದ್ದೇನೆ ಸಿದ್ದರಾಮಯ್ಯನವರೇ. ಮೈಸೂರಿನಲ್ಲಿ ಇವತ್ತು ಬೆಳಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೀರಿ “ನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು, ಹರಡುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ! ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್ನಲ್ಲಿದೆ? ಅದನ್ನು ಯಾವ…
ಮಂಗಳೂರು : ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದಲ್ಲದೆ ಪಿಎಸ್ಐ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಎಂಎಲ್ಎ ಅಂತ ಬಿಟ್ಟು ಬಿಡೋಕೆ ಆಗುತ್ತಾ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ವಾಗ್ದಾಳಿ ನಡೆಸಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಠಾಣೆಯಲ್ಲಿ ಪ್ರತಿಭಟನೆ ನಡೆದಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ. ಪೂಂಜಾ ಪ್ರಕರಣದಲ್ಲಿ ಕಾಂಗ್ರೆಸ್ನ ಒತ್ತಡ ಅಂದರೆ ಏನು ಅರ್ಥ? ಕಾನೂನು ಎಲ್ಲರಿಗೂ ಒಂದೇ ಅಲ್ವಾ? ಇದು ಜಾಮೀನು ಪ್ರಕರಣ ಅಲ್ಲ ಈ ಕೆ ಎಸ್ ನಲ್ಲಿ ಏಳು ವರ್ಷ ಜೈಲು ಶಿಕ್ಷೆ ಇರುತ್ತದೆ ಎಂಎಲ್ಎ ಅಂತ ಬಿಟ್ಟುಬಿಡುವುದಕ್ಕೆ ಆಗುತ್ತಾ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಾಸಕ ಹರೀಶ್ ಪೂಂಜ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಬೆಂಗಳೂರು : ಪ್ರಜ್ವಲ್ ರೇವಣ್ಣ ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೆಂದೂ ನಾನು ವಕೀಲಿಕೆ ಮಾಡುತ್ತಿದ್ದೆ ಎನ್ನಬೇಡಿ ಸುಧೀರ್ಘವಾದಂತ ಟ್ವೀಟ್ ಮಾಡಿರುವ ಅವರು, ಎಚ್ ಡಿ ದೇವೇಗೌಡರೇ ಪ್ರಜ್ವಲ್ ಅನ್ನು ವಿದೇಶಕ್ಕೆ ಕಳುಸಿದ್ದಾರೆ ಎಂಬ ಹೇಳಿಕೆಗೆ ಕಿಡಿ ಕಾರಿದ್ದಾರೆ. ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಸಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ. “ಅತ್ಯಾಚಾರದ ವೀಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ” ಎನ್ನುವ ಆಣಿಮುತ್ತು ಉದುರಿಸಿದ್ದೀರಿ. ನಿಮ್ಮ ವಕೀಲಿಕೆಯ ಪಾಂಡಿತ್ಯದ ಬಗ್ಗೆ ಈ ನಿಮ್ಮ ಮಾತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಉಂಟು ಮಾಡಿದೆ.ಅತ್ಯಾಚಾರ ಅಮಾನುಷ…