Author: kannadanewsnow05

ಬೆಂಗಳೂರು : ಕುಡಿದ ಅಮಲಿನಲ್ಲಿ ವ್ಯಕ್ತಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯ ಕೊತ್ತನೂರು ಸಮುದಾಯ ಭವನದ ಬಳಿ ನಡೆದಿದೆ. ನೇಪಾಳ ಮೂಲದ ಬಾಲಾಜಿ (43) ಹತ್ಯೆಯಾದ ವ್ಯಕ್ತಿ. ಕೃತ್ಯದ ಬಳಿಕ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ. ದಿನಗೂಲಿ ಕೆಲಸ ಮಾಡಿಕೊಂಡಿದ್ದ ಬಾಲಾಜಿ ಹಾಗೂ ಇಬ್ಬರು ವ್ಯಕ್ತಿಗಳು ತಡರಾತ್ರಿ ಮದ್ಯಪಾನ ಮಾಡಿದ್ದರು. ಈ ವೇಳೆ ಪರಸ್ಪರ ಗಲಾಟೆ ಮಾಡಿಕೊಂಡು ಬಾಲಾಜಿಯನ್ನು ಹತ್ಯೆಗೈದಿರುವ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳು ದಿನಗೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಹಾಗಾಗಿ ಕೊಲೆಗೆ ಏನು ಕಾರಣ ಎನ್ನುವುದನ್ನು ಪೊಲೀಸರು ತನಿಖೆ ನಡೆಸಲಿದ್ದಾರೆ. ಇದೀಗ ಸ್ಥಳಕ್ಕೆ ಕೋಣನಕುಂಟೆ ಠಾಣಾ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Read More

ದಾವಣಗೆರೆ : ಬಿಜೆಪಿಯ ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೇರಿ ಎಂಬಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ರಸ್ತೆ ಬದಿಯಲ್ಲಿ ಕಾರು ನಿಂತಿರುವುದನ್ನು ಸ್ಥಳೀಯರು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುತ್ತಾರೆ. ಈ ವೇಳೆ ಪೊಲೀಸರು ಆಗಮಿಸಿ ಕೂಡಲೇ ಕೆ.ಜಿ ಪ್ರತಾಪ್ ಕುಮಾರ್ ಅವರನ್ನು ಸ್ಥಳೀಯ ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡುತ್ತಾರೆ ಆದರೆ ಅಲ್ಲಿಂದ ನಂತರ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸುತ್ತಾರೆ. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಪ್ರತಾಪ್ ಕುಮಾರ್ ಸಾವನ್ನಪ್ಪಿದ್ದಾರೆ. ಎಂದು ಹೇಳಲಾಗುತ್ತಿದೆ.ಮೃತ ಪ್ರತಾಪ್ ಕುಮಾರ್ ಅವರು ಬಿಸಿ ಪಾಟೀಲ್ ಅವರ ಮೊದಲನೇ ಮಗಳ ಪತಿಯಾಗಿದ್ದು,ಸದ್ಯ ಆತ್ಮಹತ್ಯೆಗೆ ಏನು ಕಾರಣ ಎನ್ನುವುದು ಪೊಲೀಸರು ತನಿಖೆ ನಡೆಸುತ್ತಿದ್ದು, ಹೊನ್ನಾಳಿ ಪೊಲೀಸ್…

Read More

ಶಿವಮೊಗ್ಗ : ಇತ್ತೀಚಿಗೆ ಹಾವೇರಿಯಲ್ಲಿ ಭೀಕರ ಅಪಘಾತ ಸಂಭವಿಸಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಎಮ್ಮೆಹಟ್ಟಿಯ 13 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಇಂದು ನಟ ಶಿವರಾಜಕುಮಾರ್ ಪತ್ನಿ ಗೀತಾ ಮೃತ ಕುಟುಂಬಸ್ಥರಿಗೆ ಭೇಟಿ ನೀಡಿ ಸಾಂತ್ವನ ಹೇಳಿ 1 ಲಕ್ಷ ರೂಪಾಯಿ ಪರಿಹಾರ ನೀಡಿದರು. ಹೌದು ಅಪಘಾತದಲ್ಲಿ ಮೃತಪಟ್ಟ ಶಿವಮೊಗ್ಗ ಜಿಲ್ಲೆಯ ಎಮ್ಮೆಹಟ್ಟಿ ಗ್ರಾಮದ 13 ಜನರ ಕುಟುಂಬಗಳಿಗೆ ಶಿವರಾಜ್​ಕುಮಾರ್​ ಮತ್ತು ಗೀತಾ ದಂಪತಿ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಪ್ರತಿ ಕುಟುಂಬಕ್ಕೆ ತಲಾ ಒಂದು ಲಕ್ಷ ರೂಪಾಯಿ ನೀಡಿದ್ದಾರೆ. ಈ ಕುಟುಂಬದವರಿಗೆ ನೋವು ಸಹಿಸುವ ಶಕ್ತಿಯನ್ನು ದೇವರ ನೀಡಲಿ ಎಂದು ಶಿವರಾಜ್​ಕುಮಾರ್​-ಗೀತಾ ದಂಪತಿ ಪ್ರಾರ್ಥಿಸಿದ್ದಾರೆ. ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಶಿವರಾಜಕುಮಾರ, ಸಹಾಯ ಮಾಡುವುದು ಸುಲಭ. ಆದರೆ ಈ ಕುಟುಂಬದವರಿಗೆ ಸಮಾಧಾನ ಮಾಡುವುದು ಹೇಗೆ ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಗ್ರಾಮಸ್ಥರೆಲ್ಲ ಒಂದಾಗಿ ಇರುವುದೇ ದೊಡ್ಡ ವಿಷಯ. ಕುಟುಂಬದವರಿಗೆ ಆದ ನಷ್ಟ ಪ್ರತಿದಿನವೂ ಕಾಡುತ್ತಾ ಇರುತ್ತದೆ. ನೋವನ್ನು ಸಹಿಸುವ ಶಕ್ತಿ…

Read More

ಹುಬ್ಬಳ್ಳಿ : ಕಳೆದ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ್ ಭೀಕರವಾಗಿ ಕೊಲೆಯಾಗಿದ್ದಳು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಯ 1ನೇ ಹೆಚ್ಚುವರಿ ದಿವಾಣಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೌದು ನೇಹಾ ಕೊಲೆಗೆ ಸಂಬಂಧಿಸಿದಂತೆ ಇಂದು CID ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹುಬ್ಬಳ್ಳಿಯ 1ನೇ ಹೆಚ್ಚುವರಿ ದಿವಾನಿ ಕೋರ್ಟಿಗೆ ಇದೀಗ ಸಿಐಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.ಸುಮಾರು 483 ಪುಟಗಳ ಚಾರ್ಜ್ ಶೀಟ್ ಗಳನ್ನು ಸಲ್ಲಿಸಿದರು. ಕಳೆದ ಏಪ್ರಿಲ್ 28ರಂದು ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಭೀಕರವಾಗಿ ಹತ್ಯೆಯಾಗಿತ್ತು. ನಿಹಾಗೆ ಚಾಕುವಿನಿಂದ ಹಿಡಿದು ಫಯಾಜ್ ಬರ್ಬರವಾಗಿ ಕೊಂದಿದ್ದ. ನೇಹಾ ಹಿರೇಮಠ ಹತ್ಯೆ ಖಂಡಿಸಿ ದೇಶಾದ್ಯಂತ ಹೋರಾಟ ನಡೆದಿತ್ತು.ಇದೀಗ ಸಿಐಡಿ ಪೋಲೀಸರು 483 ಪುಟಗಳಷ್ಟು ಚಾರ್ಜ್ ಶೀಟ್ ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

Read More

ಬೆಂಗಳೂರು : ಅನರ್ಹ ಬಿಪಿಎಲ್ ಕಾರ್ಡ್ ಹೊಂದಿದ್ದವರಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಯಾರೆಲ್ಲಾ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಪಡೆದುಕೊಂಡಿದ್ದರೆ ಅಂತಹ ಕಾರ್ಡ್ ಗಳನ್ನು ಪತ್ತೆ ಹಚ್ಚಿ ಅವುಗಳನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಇದೀಗ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹೌದು ಇಂದು ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿ ಹಾಗೂ ಸಿಇಓಗಳ ಜೊತೆಗಿನ ಸಭೆಯಲ್ಲಿ ಈ ವಿಚಾರವಾಗಿ ಮಹತ್ವದ ಸೂಚನೆಗಳನ್ನು ಅವರು ನೀಡಿದರು.ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಈ ವೇಳೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು ಎಂದು ವಿವರಿಸಿದರು. ಹಾಗಾಗಿ ಅನರ್ಹ ಡಿಪಿಎಲ್ ಕಾರ್ಡುಗಳನ್ನು ಪತ್ತೆ ಹಚ್ಚಿ ಕೂಡಲೇ ಅವುಗಳನ್ನು ರದ್ದುಪಡಿಸುವಂತೆ…

Read More

ಬೆಂಗಳೂರು : ಇತ್ತೀಚಿಗೆ ಮಂಗಳೂರಿಗೆ ಭೇಟಿ ನೀಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಾಡಿದ್ದರು. ಈ ವಿಷಯದ ಕುರಿತಾಗಿ ಬಿಜೆಪಿ ನಾಯಕರು ಕಿಡಿ ಕಾರಿದ್ದರು. ಇದಕ್ಕೆ ತಿರುಗೆಟು ನೀಡಿದ ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿಯವರು ಡೆಂಗ್ಯೂ ಸೊಳ್ಳೆಗಿಂತಲೂ ವೇಗವಾಗಿ ಸುಳ್ಳುಗಳನ್ನು ಹರಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಕೆಲಸ ಇಲ್ಲ. ಸ್ವಿಮಿಂಗ್ ಮಾಡುವುದು ಒಂದು ಉತ್ತಮ ಹವ್ಯಾಸ. ವಾಕಿಂಗ್, ಜಾಗಿಂಗ್, ರೀತಿ ಸ್ವಿಮ್ಮಿಂಗ್ ಕೂಡ ಆರೋಗ್ಯಕರ ಹವ್ಯಾಸವಾಗಿದೆ. ಬಿಜೆಪಿಯವರ ರೀತಿ ರೆಸಾರ್ಟಿಗೆ ಹೋಗಿ ಸ್ವಿಮ್ ಮಾಡಿದ್ದಲ್ಲ. ಅದು ಬಿಜೆಪಿ ಅವರಿಗೆ ಬರಿ ಮೋಜು ಮಸ್ತಿ ಅಂತ ಮಾತನಾಡಿ ಅಭ್ಯಾಸವಿದೆ ಎಂದರು. ನಿನ್ನೆ ನೆಲಮಂಗಲ ಬಳಿ ಜನರಿಗೆ ಬಾಡೂಟದ ಜೊತೆ ಮದ್ಯ ಹಂಚಿದ್ದಾರಲ್ಲ. ನಾನೇನಾದ್ರೂ ಆ ರೀತಿ ಮಾಡಿದ್ದೀನಾ ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.ಕಾರ್ಪೊರೇಷನ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಸ್ವಿಮ್ ಮಾಡಿದೆ ತಪ್ಪೇನಿದೆ? ನಂತರ ಆಸ್ಪತ್ರೆಗಳಿಗೆ…

Read More

ಬೆಂಗಳೂರು : ಲೋಕಸಭಾ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಪ್ರಮುಖ 5 ಗ್ಯಾರಂಟಿ ಯೋಜನೆಗಳ ರದ್ದು ಮಾಡಲಾಗುತ್ತದೆ ಎಂಬ ಚರ್ಚೆಯ ಬೆನ್ನಲ್ಲೇ ಇದೀಗ ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿಗೆ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯತ್ ಸಿಇಓಗಳ ಸಭೆಯಲ್ಲಿ ಸೂಚನೆ ನೀಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿಗೆ ಸಮೀಕ್ಷೆ ನಡೆಸಬೇಕಾಗಿದೆ. ಸುಮಾರು 5 ಕೋಟಿ ಜನರಿಂದ ಅಭಿಪ್ರಾಯ ಸಂಗ್ರಹಕ್ಕೆ ಕ್ರಮ ಕೈಗೊಳ್ಳಬೇಕಾಗಿದೆ. ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಫಲಾನುಭವಿಗಳಿಂದ ಪ್ರತಿಕ್ರಿಯೆ ಪಡೆಯಲು ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಫಲಾನುಭವಿಗಳಿಂದ ಪ್ರತಿಕ್ರಿಯೆ ಪಡೆಯಲು ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಬೇಕು. ರಾಜ್ಯದಲ್ಲಿ 8452317 ಕುಟುಂಬಗಳ ಸುಮಾರು 5 ಕೋಟಿ ಜನರ ಸಮೀಕ್ಷೆ ನಡೆಸಬೇಕಾಗಿದೆ ಎಂದು ಸೂಚನೆ ನೀಡಿದರು.

Read More

ಬೆಂಗಳೂರು : ನಟಿ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದಕ್ಕಾಗಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯಾಗಿ ಇಂದಿಗೆ ಒಂದು ತಿಂಗಳು ಕಳೆದಿದೆ. ಈ ನಡುವೆ ಅವಧಿಗೂ ಮುನ್ನ ಚಾರ್ಜ್‍ಶೀಟ್ ಸಲ್ಲಿಸಲು ಪೊಲೀಸರು ತಯಾರಿ ನಡೆಸುತ್ತಿದ್ದಾರೆ.ಮುಂದಿನ 45 ದಿನಗಳ ಒಳಗಾಗಿ ಚಾರ್ಜ್‍ಶೀಟ್ ಗೆ ಪೊಲೀಸರು ತಯಾರಿ ನಡೆಸುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ 17 ಮಂದಿ ಜೈಲುಪಾಲಾಗಿದ್ದಾರೆ. ತಿಂಗಳಿಂದ ಪೊಲೀಸರ ತನಿಖೆ, 200ಕ್ಕೂ ಅಧಿಕ ಸಾಕ್ಷ್ಯ ಸಂಗ್ರಹ ಕಾರ್ಯ ನಡೆದಿದೆ. ಆರೋಪಿಗಳ ಮೊಬೈಲ್ ರಿಟ್ರೀವ್‍ಗೆ ರವಾನೆ, ವರದಿ ಬರಬೇಕು ಅಷ್ಟೆ. ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ ಎಂದು ಆರೋಪಿಸಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಮಾಡಿ ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಪಟ್ಟಣಗೆರೆ ಶೆಡ್ ಗೆ ಕರೆತಂದು ದರ್ಶನ್ ಸೇರಿದಂತೆ ಆತನ ಸಹಚರರು ಭೀಕರವಾಗಿ ಅಲೆ ನಡೆಸಿ ಕೊಲೆ ಮಾಡಿದ್ದರು. ಕೊಲೆಯ ಬಳಿಕ ರೇಣುಕಾಸ್ವಾಮಿ ಮೃತದೇಹವನ್ನು ಸುಮ್ಮನಹಳ್ಳಿ ಮೋರಿ ಬಳಿ ಎಸೆಯಲಾಗಿತ್ತು. ಇದಾದ…

Read More

ಕಲಬುರ್ಗಿ : ನವ ವಿಹಾಹಿತೆಯ ಶವವೊಂದು ಪತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕಲಬುರ್ಗಿ ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಮೃತಳನ್ನು ಅವರಾದ (ಬಿ) ಗ್ರಾಮದ ನವವಿವಾಹಿತ ರಂಜಿತ (25) ಎಂದು ಹೇಳಲಾಗುತ್ತಿದ್ದು, ರಂಜಿತಾ ಕುಟುಂಬದವರಿಂದ ಇದೀಗ ಪತಿಯ ಮನೆಯವರಿಂದ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪತಿ ಉಮೇಶ್ ಕಟ್ಟಿಮನಿ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ನೀರಾವರಿ ಇಲಾಖೆಯಲ್ಲಿ ರಂಜಿತಾ ಪತಿ ಉಮೇಶ್ ಸಹಾಯಕ ಇಂಜಿನಿಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ 5 ತಿಂಗಳ ಹಿಂದೆ ರಂಜಿತ, ಉಮೇಶ್ ಅವರ ಮದುವೆಯಾಗಿತ್ತು. ಇದೀಗ ರಂಜಿತಾ ಪತಿ, ಅತ್ತೆ ಹಾಗೂ ಮಾವನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಕಲ್ಬುರ್ಗಿ ಸ್ಟೇಷನ್ ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಯಾದಗಿರಿ : ಕಳೆದ ಜುಲೈ 6 ರಂದು ಯಾದಗಿರಿಯಲ್ಲಿ 2 ತಿಂಗಳ ಹಸುಗೂಸು ಕೊಲೆ ನಡೆದಿತ್ತು. ಆದರೆ ಈ ಒಂದು ಕೊಲೆಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆಯೊಬ್ಬಳು ಮಗುವನ್ನೇ ಕೊಂದಿರುವುದಾಗಿ ತಿಳಿದುಬಂದಿದೆ. ಹೌದು ನಾಗೇಶ್ ಹಾಗೂ ಚಿಟ್ಟೆಮ್ಮ ಮಗವನ್ನು ಅಪ್ರಾಪ್ತೆ ಕೊಂದಿದ್ದಾಳೆ ಎಂದು ತಿಳಿದುಬಂದಿದೆ.ನಾಗೇಶ್‌ನ ತಮ್ಮ ಯಲ್ಲಪ್ಪನನ್ನ ಅಪ್ರಾಪ್ತೆ ಪ್ರೀತಿಸುತ್ತಿದ್ದಳಂತೆ. ಸಂಬಂಧದಿಂದ ತಂಗಿಯಾಗಬೇಕೆಂದು ಈ ಪ್ರೀತಿಯನ್ನು ಯಲ್ಲಪ್ಪ ನಿರಾಕರಿಸಿದ್ದನಂತೆ.ಯಲ್ಲಪ್ಪನ ಮೇಲೆ ಸೇಡು ತೀರಿಸಿಕೊಳ್ಳಲು ಅಪ್ರಾಪ್ತೆ ಈ ಪ್ಲ್ಯಾನ್‌ ಮಾಡಿದ್ದಾಳೆ. ಮಗುವನ್ನು ಕೊಲೆ ಮಾಡಿ ಯಲ್ಲಪ್ಪನ ಮೇಲೆ ಹಾಕಲು ಪ್ಲ್ಯಾನ್‌ ಮಾಡಿದ್ದಳು. ಅದರಂತೆ ಜುಲೈ 6ರಂದು ಮಗುವನ್ನು ಬಾವಿಗೆ ಎಸೆದಿದ್ದಾಳೆ. ಬಳಿಕ ಪೋಷಕರ ಜತೆ ಮಗು ಹುಡುಕುವ ಡ್ರಾಮಾ ಮಾಡಿದ್ದಾಳೆ. ಮಗು ಹತ್ಯೆ ಬಳಿಕ ಕಣ್ಣೀರಾಕಿ ನಾಟಕ ಮಾಡಿದ್ದ ಹಂತಕಿ,ಅನುಮಾನ ಬಂದು ಪೊಲೀಸರ ವಿಚಾರಣೆ ನಡೆಸಿದಾಗ ಈ ಕೃತ್ಯ ಬಯಲಿದೆ ಬಂದಿದೆ. ಸದ್ಯ ಪೊಲೀಸರು ಅಪ್ರಾಪ್ತೆಯನ್ನು ವ್ಯಕ್ತಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Read More