Author: kannadanewsnow05

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರರ ನಡುವೆ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿತ್ತು. ಇದೀಗ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ್ದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ಒಂದು ನೋಟಿಸ್ ಗೆ ಶಾಸಕ ತಾಳವರು ಟ್ವೀಟ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ನೀಡುತ್ತೇನೆ, ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಪ್ರಸ್ತುತಪಡಿಸುತ್ತೇನೆ. ಹಿಂದುತ್ವದ ಹೋರಾಟ, ಭ್ರಷ್ಟಾಚಾರದ ವಿರೋಧ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ರಾಜವಂಶದ ರಾಜಕೀಯಕ್ಕೆ ನನ್ನ ಬದ್ಧತೆ ಅಚಲವಾಗಿ ಉಳಿಯುತ್ತದೆ ಎಂದು ತಮ್ಮ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲರಿಗೆ ನೋಟಿಸ್ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ…

Read More

ಬೆಂಗಳೂರು : ಬೆಂಗಳೂರಲ್ಲಿ ಬೆಳ್ಳ ಬೆಳಗ್ಗೆ ಘೋರ ದುರಂತ ಒಂದು ಸಂಭವಿಸಿದ್ದು, ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರವಾದ ಗಾಯಗಳಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಾಚನಾಯಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟಗೊಂಡು ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಬೆಳಿಗ್ಗೆ ಎದ್ದು ಮನೆಯಲ್ಲಿ ಲೈಟ್ ಹಾಕುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಮನೆಯ ಕಿಟಕಿ ಬಾಗಿಲು ಪೀಸ್ ಪೀಸ್ ಆಗಿವೆ. ಗಾಯಾಳುಗಳಿಗೆ ಕೂಡಲೇ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಪಾಸ್ ಪೋರ್ಟ್ ನೆಪದಲ್ಲಿ ಯುವತಿ ಒಬ್ಬಳಿಗೆ ಕಾನ್ಸ್ಟೇಬಲ್ ಒಬ್ಬ ಮನೆಗೆ ಬಂದು ಒಂದೇ ಒಂದು ಬಾರಿ ತಬ್ಬಿಕೋ, ಯಾರಿಗೂ ಹೇಳಲ್ಲ ಎಂದು ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಯುವತಿಯ ದೂರಿನ ಮೇರೆಗೆ ಇದೀಗ ಕಾನ್ಸ್ಟೇಬಲ್ ಕಿರಣನ್ನು ಅಮಾನತುಗೊಳಿಸಿ ಪಶ್ಚಿಮ ವಿಭಾಗದ ಡಿಸಿಪಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಬಾಪೂಜಿ ನಗರದ ಯುವತಿ ಒಬ್ಬಳು ಪಾಸ್ ಪೋರ್ಟ್ ಗಾಗಿ ಇತ್ತೀಚಿಗೆ ಅರ್ಜಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಕಾನ್ಸ್ಟೇಬಲ್ ಕಿರಣ್ ಡಾಕುಮೆಂಟ್ಸ್ ವೆರಿಫಿಕೇಶನ್ ನೆಪದಲ್ಲಿ ಎರಡು ಮೂರು ಬಾರಿ ಯುವತಿಯ ಮನೆಗೆ ತೆರಳಿದ್ದಾನೆ. ಈ ವೇಳೆ ಯುವತಿಯೊಂದಿಗೆ ಕಿರಣ್ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಯುವತಿಯು ದೂರಿನಲ್ಲಿ ಆರೋಪಿಸಿದ್ದಾಳೆ. ನಿನ್ನೆ ಕೂಡ ಕಿರಣ್ ಯುವತಿಯ ಮನೆಗೆ ಬಂದಿದ್ದಾನೆ. ಈ ವೇಳೆ ನಿನ್ನ ಅಣ್ಣ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾನೆ. ನನಗೆ ಸಹಕರಿಸದಿದ್ದರೆ ಪಾಸ್ಪೋರ್ಟ್ ಕ್ಯಾನ್ಸಲ್ ಮಾಡುವುದಾಗಿ ಹೇಳಿ ಒಂದೇ ಒಂದು ಬಾರಿ ತಬ್ಬಿಕೋ ಯಾರಿಗೂ ಹೇಳಲ್ಲ ಎಂದು ಹೇಳಿದ್ದಾನೆ.ಯುವತಿ ಒಪ್ಪದಿದ್ದಾಗ ತಾನೇ ಹೋಗಿ…

Read More

ಬೆಂಗಳೂರು : ಹಾಸನ ಜಿಲ್ಲೆಯಲ್ಲಿ ಮೈಸೂರಿಗೆ ತೆರಳಿ, ಹಾಸನಕ್ಕೆ ಮರಳುತ್ತಿದ್ದಂತ ವೇಳೆಯಲ್ಲಿ ಕಾರು ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಹರ್ಷವರ್ಧನ್ ಅವರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ಸೂಚಿಸಿದ್ದಾರೆ. ಟ್ವಿಟ್ ನಲ್ಲಿ ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ‌ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು.ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ. ಘಟನೆ ಹಿನ್ನೆಲೆ? ಹಾಸನ ಜಿಲ್ಲೆಯಲ್ಲಿ ಮೈಸೂರಿಗೆ ತೆರಳಿ, ಹಾಸನಕ್ಕೆ ಮರಳುತ್ತಿದ್ದಂತ ವೇಳೆಯಲ್ಲಿ ಕಾರು…

Read More

ತಮಿಳುನಾಡು : ತಮಿಳುನಾಡಿನಲ್ಲಿ ಫೆಂಗಲ್ ಸೈಕ್ಲೋನ್ ನಿಂದ ಜನರು ಬೆಚ್ಚಿ ಬಿದ್ದಿದ್ದು ಇದುವರೆಗೂ ಈ ಒಂದು ಚಂಡಮಾರುತದ ಪರಿಣಾಮದಿಂದಾಗಿ ಒಟ್ಟು 11 ಜನರು ಸಾವನ್ನಪ್ಪಿದ್ದರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಹೌದು ತಮಿಳುನಾಡಿನಲ್ಲಿ ಫೆಂಗಲ್ ಆರ್ಭಟಕ್ಕೆ 11 ಜನರು ಬಲಿಯಾಗಿದ್ದಾರೆ. ಫೆಂಗಲ್ ಸೈಕ್ಲೋನ್ ಆರ್ಭಟಕ್ಕೆ ಇದುವರೆಗೂ 11 ಜನರು ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ ಫೆಂಗಲ್ ಅಬ್ಬರಿಸುತ್ತಿದ್ದು, ಮನೆಯ ಮೇಲೆ ಗುಡ್ಡ ಕುಸಿದು ದಂಪತಿ ಸೇರಿದಂತೆ, ಐವರು ಮಕ್ಕಳು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ. ರಾಜಕುಮಾರ್ ಹಾಗೂ ಮೀನಾ ದಂಪತಿ ಸೇರಿದಂತೆ ಐವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮನೆಯ ಮೇಲೆ ಬೆಟ್ಟ ಕುಸಿದು ಮಣ್ಣಿನ ಆಡಿ 7 ಜನರು ಸಿಲುಕಿದ್ದರು. ನವೆಂಬರ್ 30ರಂದು ಕರೆಂಟ್ ಶಾಕ್ ನಿಂದ ನಾಲ್ವರು ಮೃತಪಟ್ಟಿದ್ದರು. ಫೆಂಗಲ್ ಸೈಕ್ಲೋನ್ ಆರ್ಭಟಕ್ಕೆ ತಮಿಳುನಾಡಿನ ಜನ ಇದೀಗ ಅಕ್ಷರಶಃ ಬೆಚ್ಚಿಬಿದ್ದಿದೆ.

Read More

ಮಂಡ್ಯ : ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲು ಬಿರಿದ್ದು, ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಇದೀಗ ಮಂಡ್ಯ ಹಾಗೂ ಚಾಮರಾಜನಗರದಲ್ಲೂ ಕೂಡ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೌದು ಮಂಡ್ಯ ಜಿಲ್ಲೆಯಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಆದೇಶ ಹೊರಡಿಸಿದ್ದಾರೆ. ಅದೇ ರೀತಿಯಾಗಿ ಚಾಮರಾಜನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೂ ಕೂಡ ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪ ನಾಗರಾಜ್ ಕಡ ಆದೇಶ ಹೊರಡಿಸಿದ್ದಾರೆ. ಫೆಂಗಲ್ ಪರಿಣಾಮದಿಂದ ಮಳೆಯಾಗುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಫಂಗಲ್ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದ ಉಳಿದ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಮೈಸೂರು ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು…

Read More

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರರ ನಡುವೆ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿತ್ತು. ಇದೀಗ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ್ದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಶೋಕಾಶ್ ನೋಟಿಸ್ ಜಾರಿ ಮಾಡಿದೆ. ಹೌದು ಬಿಜೆಪಿ ಶಾಸಕ ಬಸನಗೌಡ ಪಾಟೀಲರಿಗೆ ನೋಟಿಸ್ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಹತ್ತು ದಿನದ ಒಳಗೆ ಉತ್ತರ ನೀಡುವಂತೆ ಯತ್ನಾಳಗೆ ನೋಟಿಸ್ ನೀಡಿದೆ. ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. 10 ದಿನದೊಳಗೆ ಕಾರಣ ಕೊಡಿ ಎಂದು ಯತ್ನಾಳ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ಬಿವೈ ವಿಜಯೇಂದ್ರ ಆಪ್ತರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಕಾರ್ಯಕರ್ತರು ಯತ್ನಾಳ್ ನಿಂದ ಏನು ಉಪಯೋಗ…

Read More

ಬೆಂಗಳೂರು : ಬೆಂಗಳೂರಿನ ಜನತೆಗೆ BMRCL ಸಿಹಿ ಸುದ್ದಿಯೊಂದನ್ನು ನೀಡಿದ್ದು, ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇನ್ನು ಮುಂದೆ 5G ಇಂಟರ್ನೆಟ್ ಸಿಗಲಿದೆ. ಮೆಟ್ರೋ ಪ್ರಯಾಣದ ವೇಳೆ ಸಾರ್ವಜನಿಕರಿಗೆ 5ಜಿ ಮೊಬೈಲ್ ನೆಟ್‌ವರ್ಕ್ ಸೌಲಭ್ಯ ಒದಗಿಸುವುದು ಹಾಗೂ ತನ್ನ ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ‘ನಮ್ಮ ಮೆಟ್ರೋ’ ಪಿಲ್ಲರ್ ಗಳಲ್ಲಿ ನೆಟ್ವರ್ಕ್ ಸೆಲ್ ಅಳವಡಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಮುಂದಾಗಿದೆ. ಹೌದು ಮೆಟ್ರೋ ಸಂಚಾರದ ವೇಳೆ ಪ್ರಯಾಣಿಕರಿಗೆ ಕೆಲವೆಡೆ ಕಚೇರಿ ಕೆಲಸ ಮಾಡಲು. ಮಾತನಾಡಲು ಸಾಧ್ಯವಾಗುತ್ತಿಲ್ಲ, ಈ ಹಿನ್ನೆಲೆಯಲ್ಲಿ ನೆಟ್ವರ್ಕ್ ಸಮಸ್ಯೆ ಪರಿಹರಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. ಜತೆಗೆ ನೆಟ್‌ವರ್ಕ್ ಸಲ್ ಗಳ ಅಳವಡಿಕೆ ಮೂಲಕವೂ ಟೆಲಿಕಾಂ ಕಂಪನಿಗಳಿಂದ ಬಾಡಿಗೆ ಪಡೆದು ಆದಾಯ ಗಳಿಸಿಕೊಳ್ಳಲು ಮುಂದಾಗಿದೆ. ವೈಟ್‌ ಫೀಲ್ಡ್‌ ಮೆಟ್ರೋ ನಿಲ್ದಾಣದಿಂದ ಪ್ರಾರಂಭವಾಗಿ ಚಲ್ಲಘಟ್ಟ ಟರ್ಮಿನಲ್‌ವರೆಗೆ (43.49ಕಿ.ಮೀ.) ಹಾಗೂ ಉತ್ತರ-ದಕ್ಷಿಣಕಾರಿಡಾರ್ ಮಾದಾವರದಲ್ಲಿಪ್ರಾ ರಂಭವಾಗಿ ಸಿಲ್ಕ್ ಇನ್‌ಸ್ಟಿಟ್ಯೂಟ್‌ವರೆಗೆ (33.5 ಕಿ.ಮೀ.) ಮತ್ತು ಎಲೆಕ್ಟ್ರಾನಿಕ್ ಸಿಟಿ ಮಾರ್ಗ ಆರ್.ವಿ.ರಸ್ತೆ – ಬೊಮ್ಮನಹಳ್ಳಿ ಹಾಗೂ ಗೊಟ್ಟಿಗೆರೆ-ನಾಗವಾರ ಮಾರ್ಗದಲ್ಲಿ ಪಿಲ್ಲರ್…

Read More

ಬೆಂಗಳೂರು : ತಮಿಳುನಾಡಿನಲ್ಲಿ ಫಂಗಲ್ ಚಂಡಮಾರುತದ ಪರಿಣಾಮದಿಂದ ತಮಿಳುನಾಡು ಅಷ್ಟೇ ಅಲ್ಲದೆ ಕರ್ನಾಟಕಕ್ಕೂ ಅದರ ಎಫೆಕ್ಟ್ ಬೀರಿದೆ. ಇದೀಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಜಟಿಜಿಟಿ ಮಳೆ ಹಾಗೂ ಚಳಿಯಿಂದ ಜನರು ನಡುಗುತ್ತಿದ್ದಾರೆ. ಆದರೆ BREAKING : ‘ಫಂಗಲ್’ ಎಫೆಕ್ಟ್ : ಇಂದು ಬೆಂಗಳೂರಿನಲ್ಲಿ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಬೆಂಗಳೂರು ನಗರ ಶಾಲಾ ಕಾಲೇಜುಗಳಿಗೆ ಯಾವುದೇ ರೀತಿಯಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಹೌದು ಬೆಂಗಳೂರಿನ ನಗರ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಎಂದಿನಂತೆ ಸ್ಕೂಲ್ ಹಾಗೂ ಕಾಲೇಜ್ಗಳು ಓಪನ್ ಆಗಲಿವೆ. ಆದರೆ ಪೋಷಕರು ಎಚ್ಚರಿಕೆಯಿಂದ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಕಳುಹಿಸಬೇಕು. ಎಚ್ಚರಿಕೆಯಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಸೂಚನೆ ನೀಡಲಾಗಿದೆ. ಹಾಗಾಗಿ ಮಳೆಯಲ್ಲಿಯೇ ಶಾಲಾ ಮಕ್ಕಳು ಕೊಡೆ ಹಿಡಿದುಕೊಂಡು ಶಾಲೆಗೆ ತೆರಳುತ್ತಿದ್ದಾರೆ.ನಿನ್ನೆ ರಾತ್ರಿಯಿಂದ ನಿರಂತರವಾಗಿ ಬೆಂಗಳೂರು ನಗರದಾದ್ಯಂತ ಜಟಿಜಿಟಿ ಮಳೆ ಆಗುತ್ತದೆ ಚಳಿ ಮತ್ತು ಮಳೆಗೆ ರಾಜಧಾನಿಯ ಜನ ಇದೀಗ ನಡುಗುತ್ತಿದ್ದು, ತತ್ತರಿಸಿದ್ದಾರೆ. ಇದೇ ವೇಳೆ ಫಂಗಲ್ ಚಂಡಮಾರುತ…

Read More

ಹಾಸನ : ಜಿಲ್ಲೆಯಲ್ಲಿ ಮೈಸೂರಿಗೆ ತೆರಳಿ, ಹಾಸನಕ್ಕೆ ಮರಳುತ್ತಿದ್ದಂತ ವೇಳೆಯಲ್ಲಿ ಕಾರು ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ನಿನ್ನೆ ಮೈಸೂರಿನಲ್ಲಿ ಐಜಿಪಿಯವರನ್ನು ಭೇಟಿಯಾಗಿ ಹಾಸನ ಡಿವೈಎಸ್ಪಿಯಾಗಿ ವರ್ಗಾವಣೆಯಾಗಿದ್ದ ಕಾರಣ, ವರದಿ ಮಾಡಿಕೊಳ್ಳಲು ಜಿಲ್ಲಾ ಪೊಲೀಸ್ ಕಚೇರಿಗೆ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಹಾಸನ ತಾಲ್ಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿಯಲ್ಲಿ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ಕಾರು ಅಪಘಾತದಲ್ಲಿ ಗಾಯಗೊಂಡಿದ್ದಂತ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅಲ್ಲದೇ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯುವ ಸ್ಥಿತಿಯಲ್ಲೂ ಅವರು ಇರಲಿಲ್ಲ. ಇದರ ನಡುವೆ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದರು. ಕ್ಷಣ ಕ್ಷಣಕ್ಕೆ ಅವರ ಸ್ಥಿತಿ ಗಂಭೀರಗೊಂಡಿತ್ತು. ಈಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

Read More