Author: kannadanewsnow05

ಬೆಂಗಳೂರು : ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಪಟಾಕಿ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಇಂದು ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲೆಯ ಡಿಸಿಗಳು ಹಾಗೂ ಎಸ್ ಪಿ ಗಳಿಗೆ ಸೂಚನೆ ನೀಡಿ ಪರಿಸರಕ್ಕೆ ಹಾನಿಯಾಗುವ ಪಟಾಕಿಗಳನ್ನು ಬಳಸಬಾರದು. ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ. ಈ ಕುರಿತು ಆಯಾ ಜಿಲ್ಲಾಧಿಕಾರಿಗಳು ಹಾಗೂ ಎಸ್ ಪಿ ಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಡಿಸಿಗಳು ಮತ್ತು ಎಸ್ ಪಿ ಗಳಿಗೆ ಸಿಎಂ ಸಿದ್ದರಾಮಯ್ಯ ಈ ಕುರಿತು ಖಡಕ್ ಸೂಚನೆ ನೀಡಿದ್ದಾರೆ. ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಕುಡಿಯುವ ನೀರನ್ನು ಸಂಗ್ರಹಿಸಿ ಬೆಳೆಗೆ ನೀರು ಬಿಡಲು ಹೇಳಿದ್ದೇನೆ ರಾಜ್ಯದ ಹಲವೆಡೆ ಅತಿವೃಷ್ಟಿಯಿಂದ 25 ಜನರು ಸಾವನ್ನಪ್ಪಿದ್ದಾರೆ. ಮಳೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸೂಚನೆ…

Read More

ವಿಜಯನಗರ : ರಾಜ್ಯದಲ್ಲಿ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ಹೇಗೆ ಭರದ ಸಿದ್ಧತೆ ನಡೆದಿದ್ದು ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳು ಪ್ರಬಲ ಅಭ್ಯರ್ಥಿಗಳನ್ನು ಮೂರು ಕ್ಷೇತ್ರಗಳಲ್ಲಿ ಕಣಕ್ಕೆ ಇಳಿಸಿವೆ.ಇದರ ಬದನಲ್ಲೇ ಈ ಒಂದು ಉಪಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು. ಕೊಟ್ಟೂರಿನ ಉಜ್ಜಯನಿ ಸದ್ದರ್ಮ ಪೀಠಕ್ಕೆ ಆಗಮಿಸಿ ಜಗದ್ಗುರುಗಳಿಂದ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಂತರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರು ರಾಜೀನಾಮೆ ನೀಡುವುದನ್ನು ಯಾವುದೇ ಶಕ್ತಿ ತಡೆ ಯಲಾರದು. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಪೆರೋಲ್ ಮೇಲೆ ಹೊರಗಿದ್ದಾರೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ರಾಜಕೀಯ ಮೇಲಾಟ ನಡೆದಿದೆ. ಕೊನೆಯ ದಾಗಿ ಮೈತ್ರಿ ಅಭ್ಯರ್ಥಿ ಗೆಲುವಿನ ದಡ ತಲುಪಲಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದವರು ಯೋಗೇಶ್ವ‌ರ್ ಅವರನ್ನು ಹರಕೆಯ ಕುರಿ ಮಾಡಲು ಮುಂದಾಗಿದ್ದಾರೆ. ಬಿಜೆಪಿಯವರು ನಿಖಿಲ್…

Read More

ಶಿವಮೊಗ್ಗ : ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರು ಬೆಂಗಳೂರಿನ ಇಬ್ಬರು ಬಿಜೆಪಿ ಶಾಸಕರು ಸೇರಿದಂತೆ ಒಟ್ಟು 8 ಜನ ಬಿಜೆಪಿ ಶಾಸಕರು ಶೀಘ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದರು. ಈ ಒಂದು ವಿಚಾರವಾಗಿ ಶಿವಮೊಗ್ಗದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು, ಪ್ರತಿಕ್ರಿಯೆ ನೀಡಿ, ಸಿಪಿ ಯೋಗೇಶ್ವರ್ ಬೆನ್ನಲ್ಲೇ ಇನ್ನು 8ಜನ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರಲಿರುವ ವದಂತಿಯನ್ನು ಕೇಳಿದಾಗ ಪ್ರತಿಕ್ರಿಯಿಸಿದ ಪರಮೇಶ್ವರ್, ತನಗಂತೂ ಅದರ ಬಗ್ಗೆ ಮಾಹಿತಿ ಇಲ್ಲ, ಎಸ್ ಟಿ ಸೋಮಶೇಖರ್ ವಿಷಯದ ಬಗ್ಗೆ ಮಾತಾಡಿರುವುದರಿಂದ ಅವರಿಂದಲೇ ಹೆಚ್ಚಿನ ವಿವರಣೆ ಸಿಗಬಹುದು ಎಂದರು. ಇನ್ನು HDK ಕುರಿತಾಗಿ ಮಾತನಾಡಿದ ಅವರು, ಕೇಂದ್ರ ಭಾರೀ ಕೈಗಾರಿಕೆ ಮತ್ತ್ತು ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಮುಚ್ಚಿರುವ ಹೆಚ್​ಎಂಟಿ ಕಾರ್ಖಾನೆಯನ್ನು ಪುನರಾರಂಭಿಸುವ ಬಗ್ಗೆ ಮಾತಾಡುತ್ತಾರೆ. ಈ ವೇಳೆ ಗೃಹಸಚಿವ ಜಿ ಪರಮೇಶ್ವರ್, ಹೆಚ್​ಎಂಟಿ ಕಾರ್ಖಾನೆ ಮುಚ್ಚಿಹೋಗಿರುವುದರಿಂದ ಅದಕ್ಕೆ ನೀಡಿದ ಜಮೀನನ್ನು…

Read More

ಮಂಗಳೂರು : ಸಾಮಾನ್ಯವಾಗಿ ಉದ್ಯಮಿಗಳು ಹಾಗೂ ಬ್ಯಾಂಕ್ ನೌಕರರನ್ನು ಗುರಿಯಾಗಿಸಿಕೊಂಡು ಸೈಬರ್ ವಂಚಕರು ಅವರ ಖಾತೆಗಳನ್ನು ಹ್ಯಾಕ್ ಮಾಡುವುದು ಅಥವಾ ನಕಲಿ ಖಾತೆಗಳನ್ನು ಸೃಷ್ಟಿಸಿದ್ದನ್ನು ನೋಡಿದ್ದೇವೆ. ಆದರೆ ಇದೀಗ ಸೈಬರ್ ವಂಚಕರು ಒಂದು ಹೆಜ್ಜೆ ಮುಂದೆ ಹೋಗಿ ಪೊಲೀಸ್ ಕಮಿಷನರ್ ಹೆಸರಿನಲ್ಲೇ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದು ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೇ ಮಂಗಳೂರಲ್ಲಿ ನಡೆದಿದೆ. ಹೌದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಅವುಗಳ ಮುಖಾಂತರ ಫ್ರೆಂಡ್ಸ್ ರಿಕ್ವೆಸ್ಟ್ ಗಳನ್ನ ಅಕ್ಸೆಪ್ಟ್ ಮಾಡಿಕೊಂಡು, ಮೆಸೆಂಜರ್ ಮುಖಾಂತರ ಹಣಕ್ಕೆ ಬೇಡಿಕೆ ಇಡುತ್ತಿದ್ದರು ಎಂದು ತಿಳಿದುಬಂದಿದೆ. ಈ ವಿಚಾರ ತಿಳಿದ ಮಂಗಳೂರು ಪೊಲೀಸ್ ಆಯುಕ್ತ ​​​​ ಅನುಪಮ್ ಅಗರ್ವಾಲ್ ಅವರು ವಂಚಕರ ವಿರುದ್ಧ ಮಂಗಳೂರು ಸೆನ್​ ​ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Read More

ಬೆಳಗಾವಿ : ದೇಶದ ಜನತೆ ಯಾರೊಂದಿಗೂ ದ್ವೇಷ ಮಾಡಬಾರದು. ಎಲ್ಲಾ ಜಾತಿ ಧರ್ಮದವರನ್ನು ಪ್ರೀತಿಸಬೇಕು ದ್ವೇಷ ಎಂಬ ಬೀಜವನ್ನು ಬಿತ್ತುವರನ್ನು ವಿರೋಧಿಸಬೇಕು ಎಂದು ಐತಿಹಾಸಿಕ ಕಿತ್ತೂರು ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕಿತ್ತೂರು ಕೋಟೆ ಆವರಣದಲ್ಲಿ ಈ ಒಂದು ಕಾರ್ಯಕ್ರಮ ನಡೆಯುತ್ತಿದೆ. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಹೇಳಿದವರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮೊದಲಿಗರು. ಬ್ರಿಟಿಷರು ಈ ದೇಶವನ್ನು 200 ವರ್ಷಗಳ ಕಾಲ ಆಳಿದರು. ವಿದೇಶಿಯರು ಈ ದೇಶ ಆಳಬಾರದೆಂದು ಕಿತ್ತೂರು ರಾಣಿ ಚೆನ್ನಮ್ಮ ಹೋರಾಡಿದರು. ಅಮಟೂರು ಬಾಳಪ್ಪ, ಸಂಗೊಳ್ಳಿ ರಾಯಣ್ಣ ಚೆನ್ನಮ್ಮನ ಜೊತೆಗೆ ಇದ್ದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕಿತ್ತೂರು ಸಂಸ್ಥಾನ ಉಳಿಸಿಕೊಳ್ಳಲು ರಾಣಿ ಚೆನ್ನಮ್ಮ ಪ್ರಾಣ ತ್ಯಾಗ ಮಾಡಿದರು.ಈ ದೇಶಕ್ಕೆ ಅಷ್ಟು ಸುಲಭವಾಗಿ ಸ್ವಾತಂತ್ರ್ಯ ಸಿಕ್ಕಿಲ್ಲ. ಯಾವುದೇ ಕಾರಣಕ್ಕೂ ಈ ದೇಶದ ಜನತೆ ದ್ವೇಷ ಮಾಡಬಾರದು. ಯಾವುದೇ ಜಾತಿ ಧರ್ಮದವರಿದ್ದರು ಪರಸ್ಪರ ಪ್ರೀತಿಸಬೇಕು ದ್ವೇಷ ಮಾಡಿ ಎಂದು ವಿಷ…

Read More

ಬೆಂಗಳೂರು : ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಅವರ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಇಂದು ಬೆಂಗಳೂರಿನ 91ನೇ CCH ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಈ ಒಂದು ಪ್ರಕರಣದಲ್ಲಿ ವಿ ಸೋಮಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. 2013 ರಲ್ಲಿ ಮೂಡಲಪಾಳ್ಯದ ರಾಮಕೃಷ್ಣ ಎನ್ನುವವರು ವಿ.ಸೋಮಣ್ಣ ಮತ್ತು ಕುಟುಂಬದವರು ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ಸಾಕಷ್ಟು ಅಕ್ರಮ ಸ್ಥಿರಾಸ್ತಿ ಹೊಂದಿದ್ದಾರೆ.ಲ್ ಎಂದು ಖಾಸಗಿ ದೂರು ಸಲ್ಲಿಸಿದ್ದರು.ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ.ಸಂತೋಷ್ ಗಜಾನನ ಭಟ್ ಅವರಿದ್ದ ಏಕಸದಸ್ಯ ಪೀಠ, ರಾಮಕೃಷ್ಣ ಅವರ ಆರೋಪಕ್ಕೆ ಪೂರಕ ಸಾಕ್ಷಿ ಇಲ್ಲವೆಂದು ಪಿಸಿಆರ್ ಅನ್ನು ವಜಾಗೊಳಿಸಿದೆ. ಪ್ರಕರಣ ಹಿನ್ನೆಲೆ? 2013 ರಲ್ಲಿ ಮೂಡಲಪಾಳ್ಯದ ರಾಮಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನಲ್ಲಿ ಸೋಮಣ್ಣ ಮತ್ತು ಕುಟುಂಬದವರು ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ಸಾಕಷ್ಟು ಅಕ್ರಮ ಸ್ಥಿರಾಸ್ತಿ ಹೊಂದಿದ್ದಾರೆ. ಮಾರ್ಗದರ್ಶಿ…

Read More

ತೆಲಂಗಾಣ : ಈಗಾಗಲೇ ಕರ್ನಾಟಕದಲ್ಲಿ ಮದ್ಯದ ಬೆಲೆ ಏರಿಸಿ ಮದ್ಯಪ್ರಿಯರ ಆಕ್ರೋಶಕ್ಕೆ ರಾಜ್ಯ ಸರ್ಕಾರ ಗುರಿಯಾಗಿದೆ. ಇದರ ಮಧ್ಯ ತೆಲಂಗಾಣದಲ್ಲಿ ವಿಡಿಯೋ ಒಂದು ಬಾರಿ ವೈರಲ್ ಆಗಿದ್ದು ಮದ್ಯದ ಬಾಟಲಿಯಲ್ಲಿ ಒಂದು ಹಲ್ಲಿ ತೇಲಾಡುತ್ತಿರುವ ದೃಶ್ಯ ಸದ್ಯ ಸಕತ್ ವೈರಲ್ ಆಗಿದೆ. ಹೌದು ವ್ಯಕ್ತಿಯೊಬ್ಬರು ತಾವು ಕುಡಿಯಲು ಕುಳಿತಿದ್ದಾಗ ಹತ್ತಿರದ ಮದ್ಯದ ಅಂಗಡಿಯಲ್ಲಿ ಬಿಯರ್ ಖರೀದಿಸಿದ್ದಾರೆ. ಈ ವೇಳೆ ಅವರು ಇನ್ನೇನು ಬಾಟಲಿ ಎತ್ತಿಕೊಳ್ಳಬೇಕು ಎನ್ನುವಷ್ಟರಲ್ಲಿ ಬಾಟಲಿಯಲ್ಲಿ ಏನೋ ಒಂದು ವಸ್ತು ತೇಲಾಡಿದಂತೆ ಕಾಣಿಸಿದೆ. ಕೂಡಲೇ ಎಚ್ಚೆತ್ತ ವ್ಯಕ್ತಿ ಏನೆಂದು ಪರಿಶೀಲನೆ ಮಾಡಿದಾಗ ಹಲ್ಲಿ ಎಂದು ಗೊತ್ತಾಗಿದೆ.ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಒಂದು ಘಟನೆ ತೆಲಂಗಾಣದ ವಿಕಾರಾಬಾದ್ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇನ್ನೇನು ಕುಡಿಯಬೇಕು ಅನ್ನುವಷ್ಟರಲ್ಲಿ ಬಾಟಲಿಯಲ್ಲಿ ಹಲ್ಲಿಯನ್ನು ಕಂಡು ವ್ಯಕ್ತಿ ನಿಜಕ್ಕೂ ಶಾಕ್ ಗೆ ಒಳಗಾಗಿದ್ದಾರೆ. ಬಳಿಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಾಗ ನೆಟ್ಟಿಗರು ಹಾಗೂ ಮದ್ಯಪ್ರಿಯರು ವಿಡಿಯೋ…

Read More

ದಾವಣಗೆರೆ : ಪೆಟ್ರೋಲ್ ಬಂಕ್ ನ ಸೈಟ್ ಕಂದಾಯವನ್ನು ಕಟ್ಟಿಲ್ಲವೆಂದು ಪೆಟ್ರೋಲ್ ಬಂಕ್ ಮಾಲೀಕನ ಬಳಿ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.ಕಂದಾಯ ಅಧಿಕಾರಿ ರಮೇಶ್ FDA ನಾಗೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ನಾಲ್ಕು ವರ್ಷದಿಂದ ಶ್ರೀದೇವಿ ಪೆಟ್ರೋಲ್ ಬಂಕ್ ಸೈಟ್ ಕಂದಾಯ ಕಟ್ಟಿರಲಿಲ್ಲ. ಕಂದಾಯದ ಮೊತ್ತ ಕಡಿಮೆ ಮಾಡಲು ರಮೇಶ್ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಸೈಟ್ ಮಾಲೀಕ ನಾಗೇಶ್ ನಿಂದ 20 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಎಸ್ಪಿ ಎಂ ಎಸ್ ಕೋಲಾಪುರ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ.

Read More

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಒಂದು ನಡೆದಿದ್ದು, ಬೆಂಗಳೂರಿನ ಬಿಎಂಟಿಸಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೌದು ಈ ಒಂದು ಘಟನೆಯು ಬೆಂಗಳೂರಿನ ಬೊಮ್ಮನಹಳ್ಳಿ ಹಾಗೂ ಹೊಸೂರು ಮುಖ್ಯರಸ್ತೆಯಲ್ಲಿ ಬಸ್ ಚಲಿಸುತ್ತಿದ್ದ ವೇಳೆ ಏಕಾಏಕಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಕಂಡ ಕೂಡಲೇ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದು, ಕೂಡಲೇ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಪ್ರಯಾಣಿಕರು ಬಸ್ ನಿಂದ ಇಳಿದು ಹೋಗುತ್ತಿದ್ದಂತೆ ನಡು ರಸ್ತೆಯಲ್ಲಿ ಬಸ್ ಹತ್ತಿ ಉರಿದಿದೆ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಯವರು ಬೆಂಕಿಯನ್ನು ನಂದಿಸಿದ್ದಾರೆ. ಹೊಸೂರು ಹಾಗೂ ಬೊಮ್ಮನಹಳ್ಳಿ ಹೆದಾರಿಯಲ್ಲಿ ಬಸ್ ಹೊತ್ತಿ ಉರಿದಿದ್ದರಿಂದ ಕಿಲೋಮೀಟರುಗಳ ಗಟ್ಟಲೆ ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದಾವೆ.

Read More

ಮಂಗಳೂರು : ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ದ ಸಂತ್ರಸ್ಥೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಿಲ್ಡರ್ ನನ್ನು ರಶೀದ್‌ ಎಂದು ಹೇಳಲಾಗುತ್ತಿದ್ದೆ. ಮಹಿಳೆ ನೀಡಿದ ದೂರಿನಲ್ಲಿ ಕುಶಾಲನಗರದಲ್ಲಿ ಒಳ್ಳೆಯ ಸೈಟ್‌ ಇದ್ದು ಅದನ್ನು ಖರೀದಿ ಮಾಡಬಹುದು ಎಂದು ರಶೀದ್‌ ಹೇಳಿದಾಗ ಅದಕ್ಕೆ ಒಪ್ಪಿದ್ದೆ. ಅ.21ರಂದು ರಶೀದ್‌ ಕಾರಿನಲ್ಲಿ ಕುಶಾಲನಗರಕ್ಕೆ ಕರೆದೊಯ್ದಿದ್ದರು. ಅಲ್ಲಿನ ಹೊಟೇಲ್‌ನಲ್ಲಿ ಇಬ್ಬರಿಗೆ ಪ್ರತ್ಯೇಕ ರೂಮ್‌ ಬುಕ್‌ ಮಾಡಿದ್ದೆ. ಆಗ ರಶೀದ್‌ ಒಂದೇ ರೂಮ್‌ನಲ್ಲಿ ಇರುವ ಇಂಗಿತ ವ್ಯಕ್ತಪಡಿಸಿದ್ದರು. ಅದಕ್ಕೆ ಹೆದರಿ ವಿರಾಜಪೇಟೆಯಲ್ಲಿರುವ ತಂಗಿಯ ಮನೆಯಲ್ಲಿ ಉಳಿದುಕೊಂಡಿದ್ದೆ. ಮರುದಿನ ರಶೀದ್ ಕರೆ ಮಾಡಿ 12 ಗಂಟೆಗೆ ಸೈಟ್ ನೋಡಲು ಬಾ ಎಂದಿದ್ದಾನೆ. ನಿನ್ನೆ ಒಂದೇ ರೂಂ ನಲ್ಲಿ ಇರಬಹುದು ಇತ್ತು ನಾನು ಏನೋ ನಿರೀಕ್ಷೆ ಮಾಡಿದ್ದೆ ಎಂದಾಗ ಯುವತಿ ನೀವು ಹೀಗೆ ಮಾತಾನಾಡುವುದು ಸರೀ ಅಲ್ಲ ನೀವು ವಯಸ್ಸಿನಲ್ಲಿ ನನ್ನ…

Read More