Author: kannadanewsnow05

ಹಾವೇರಿ : ಜಮೀನು ಒಂದರ ನಕಾಶೆ ನೀಡಲು ವ್ಯಕ್ತಿ ಒಬ್ಬರ ಬಳಿ 15,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಲ್ಯಾಂಡ್ ಸರ್ವೆಯರ್ ಒಬ್ಬ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ರೈತ ಮಂಜುನಾಥ ಕಡ್ಲಿ ಅವರು ಹಾವೇರಿ ತಾಲ್ಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ತಮ್ಮ ಜಮೀನು ವಾಟ್ನಿ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ವಾಟ್ನಿ ಮಾಡಿಸುವುದಕ್ಕೆ ಜಮೀನು ನಕಾಶೆ ಅಗತ್ಯವಿತ್ತು ಹಾಗಾಗಿ ಹಾವೇರಿ ತಾಲ್ಲೂಕು ಭೂ ದಾಖಲೆಗಳ ಸಹಾಯಕ ಕಚೇರಿಯ ಭೂಮಾಪಕ ಅಶೋಕ ಎಚ್.ಜಿ ಎನ್ನುವವರ ಬಳಿ ಮಂಜುನಾಥ್ ಅರ್ಜಿ ಸಲ್ಲಿಸಿದ್ದರು. ನಕಾಶೆ ನೀಡಲು ಅಶೋಕ 30 ಸಾವಿರ ರೂ.ಕೇಳಿದ್ದ. ಅಷ್ಟು ಹಣವಿಲ್ಲವೆಂದು ರೈತ ಹೇಳಿದ್ದರು. ನಂತರ, 25 ಸಾವಿರಕ್ಕೆ ಮಾತುಕತೆ ಆಗಿತ್ತು. ಈ ಬಗ್ಗೆ ಮಂಜುನಾಥ ಅವರು ಕಚೇರಿಗೆ ದೂರು ಸಲ್ಲಿಸಿದ್ದರು. ಶನಿವಾರ ಮುಂಗಡವಾಗಿ 15 ಸಾವಿರ ಲಂಚ ಪಡೆಯುವ ಸಂದರ್ಭದಲ್ಲಿ ದಾಳಿ ಮಾಡಿ ಅಶೋಕ ಅವರನ್ನು ಪುರಾವೆ ಸಮೇತ ಸೆರೆ ಹಿಡಿಯಲಾಗಿದೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಬಳ್ಳಾರಿಯಲಿ ನಿರಂತರವಾಗಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಸಂಜೆ 4:30 ಗಂಟೆಗೆ ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಹೌದು ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತನಿಖಾ ತಂಡ ರಚನೆ ಮಾಡಿ ವರದಿ ತರಿಸಿಕೊಂಡಿತು. ತನಿಖೆಯಲ್ಲಿ ಬಾಣಂತಿಯರಿಗೆ ಐವಿ ಗ್ಲುಕೋಸ್ ನೀಡಿದ ಪರಿಣಾಮ ಅವರು ಸಾವನಪ್ಪಿದ್ದಾರೆ ಎಂದು ತನಿಖಾ ವರದಿಯು ತಿಳಿಸಿದೆ. ಹೀಗಾಗಿ ಇಂದು ಸಂಜೆ 4:30 ಗಂಟೆಗೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು ಈ ಒಂದು ಸಭೆಯಲ್ಲಿ ಆರೋಗ್ಯ ಇಲಾಖೆಯ ಸಚಿವ ದಿನೇಶ್ ಗುಂಡುರಾವ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಳಗಾವಿ : ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರ ತನಿಖಾ ತಂಡ ರಚನೆ ಮಾಡಿತ್ತು. ಐ ವಿ ಗ್ಲುಕೋಸ್ ನಿಂದ ಬಾಣಂತಿಯರ ಸಾವು ಆಗಿದೆ ಎಂದು ತನಿಖಾ ವರದಿಯಲ್ಲಿ ಬಹಿರಂಗವಾಗಿತ್ತು. ಇದರ ಬೆನ್ನಲ್ಲೇ ಬೆಳಗಾವಿಯ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಇದೀಗ ಆರ್‌ಎಲ್‌ಎಸ್‌ ಐವಿ ಗ್ಲುಕೋಸ್ ಬಾಕ್ಸ್ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹೌದು ಬೆಳಗಾವಿ ಜಿಲ್ಲಾ ಔಷಧ ಉಗ್ರಾಣದಲ್ಲಿ ಐವಿ ಗ್ಲುಕೋಸ್ ಪತ್ತೆಯಾಗಿದೆ.ಖಚಿತ ಮಾಹಿತಿಯನ್ನು ಆಧರಿಸಿ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಡೇಟ್ ಬಾರ್ ಆಗಿರುವಂತ ‘RLS IV ಗ್ಲುಕೋಸ್’ ಇದ್ದಂತಹ ಹತ್ತಾರು ಬಾಕ್ಸ್ ಗಳು ಪತ್ತೆಯಾಗಿವೆ.ಕಳೆದ ಏಪ್ರಿಲ್ ತಿಂಗಳಿನಿಂದಲೇ RLS IV ಗ್ಲುಕೋಸ್ ಪೂರೈಕೆ ಆಗಿದೆ. ಕಳೆದೊಂದು ಗಂಟೆಯಿಂದ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ 8 ಅಧಿಕಾರಿಗಳಿಂದ ದಾಳಿ ಮಾಡಿದ್ದು, ಉಗ್ರಾಣದಲ್ಲಿ ಪರಿಶೀಲನೆ ಮುಂದುವರೆದಿದೆ. ಪಿಬಿಪಿ ಸಂಸ್ಥೆ ಸರಬರಾಜು ಮಾಡಿರುವ…

Read More

ರಾಮನಗರ : ಯಾರು ಕಣ್ಣೀರು ಹಾಕಬಾರದು ನಾವು ಸತ್ತಿಲ್ಲ ಸೋತಿದ್ದೇವೆ ಅಷ್ಟೇ. ಜೆಡಿಎಸ್ ಕಾರ್ಯಕರ್ತರು ಯಾರು ಧೃತಿಗೆಡಬಾರದು. ಸೋತ ಬಳಿಕವೂ ಇಷ್ಟೊಂದು ಪ್ರಮಾಣದಲ್ಲಿ ಜನ ಸೇರುತ್ತಾರೆ ಎಂದು ಊಹಿಸಿರಲಿಲ್ಲ ಎಂದು ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಇಂದು ರಾಮನಗರ ಜಿಲ್ಲೆಯ ಚೆನ್ನಪಟ್ಟಣದಲ್ಲಿ ಜೆಡಿಎಸ್ ಕೃತಜ್ಞತಾ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರು. ಮೂರು ಚುನಾವಣೆ ಸೋತಿರಬಹುದು ಆದರೆ ಎದೆಗುಂದಿಲ್ಲ ಎದೆಗುಂದೊದು ಇಲ್ಲ. ಸೋತ ಬಳಿಕವೂ ಇಷ್ಟು ಜನ ಸೇರುತ್ತಾರೆಂದು ಊಹೆ ಮಾಡಿರಲಿಲ್ಲ. ಚನ್ನಪಟ್ಟಣ ಕಾರ್ಯಕರ್ತರು ಧೃತಿಗೆಡುವುದಿಲ್ಲ. ಯಾರು ಕಣ್ಣೀರು ಹಾಕಬಾರದು ನಾವು ಸತ್ತಿಲ್ಲ ಸೋತಿದ್ದೇವೆ ಅಷ್ಟೇ. ಜೆಡಿಎಸ್ ಪಕ್ಷವನ್ನು ಯಾರು ಮುಗಿಸಲು ಸಾಧ್ಯವಿಲ್ಲ. ನಾನು ಸೋತಿದ್ದೇನೆ ಅಂತ ನನ್ನ ಮಾತನ್ನು ವಾಪಸ್ ಪಡೆಯಲ್ಲ. ಉಪಚುನಾವಣೆಯ ಫಲಿತಾಂಶ ಯಾರು ನಿರೀಕ್ಷೆ ಮಾಡಿರಲಿಲ್ಲ. ಕಾರ್ಯಕರ್ತರು ಹಗಲು ರಾತ್ರಿ ಉತ್ಸಾಹದಿಂದ ಕೆಲಸ ಮಾಡಿದ್ದಾರೆ. ಜಯಮುತ್ತು ತಮ್ಮ ಮಾತನ್ನು ವಾಪಸ್ ತೆಗೆದುಕೊಳ್ಳಬೇಕು. ಈ ಫಲಿತಾಂಶದಿಂದ ಎಲ್ಲರೂ ಹೊರಬರಬೇಕಿದೆ. ಜೆಡಿಎಸ್ ಅಭಿಮಾನಿಗಳು, ಇಡೀ…

Read More

ಬೆಳಗಾವಿ : ತನ್ನ ಪಾಡಿಗೆ ತಾನು ಎಗ್ ರೈಸ್ ಅಂಗಡಿ ನಡೆಸಿಕೊಂಡು ಹೋಗುತ್ತಿದ್ದ ಯುವಕನನ್ನು ಐವರು ಯುವಕರ ಗ್ಯಾಂಗ್ ಒಂದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದಲ್ಲಿ ನಡೆದಿದೆ. ಮುರಗೋಡ ಗ್ರಾಮದಲ್ಲಿ ಸೋಹೇಲ್ ಅಹಮದ್ (17) ಎನ್ನುವ ಯುವಕನನ್ನು ಕೊಲೆ ಮಾಡಲಾಗಿದೆ. ಊರಿನಲ್ಲಿ ಸೋಹೇಲ್ ಅಹ್ಮಫ್ ಎಗ್ ರೈಸ್ ಅಂಗಡಿಯನ್ನು ನಡೆಸಿಕೊಂಡು ಹೋಗುತ್ತಿದ್ದ. ಐವರು ಯುವಕರ ಗ್ಯಾಂಗ್ ನಿಂದ ಸೋಹೈಲ್ ಅಹ್ಮದ್ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ ಕೊಲೆಗೂ ಮುನ್ನ ಸೋಹಲ್ ಗೆ ಜೀವ ಬೆದರಿಕೆ ಹಾಕಿರುವ ಕುರಿತು ಮಾಹಿತಿ ಬಂದಿದೆ. ಸೋಹೈಲ್ ಅಹ್ಮದ್ ಕೊಲೆಗೆ ಸಂಬಂಧಪಟ್ಟಂತೆ ಮುರಗೋಡ ಪೊಲೀಸ್ ಠಾಣೆಯಲ್ಲಿ ಇದೀಗ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಶ್ವಾನದಳ, ಬೆರಳುಚ್ಚು ತಜ್ಞರ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದರೆ ಎಂದು ತಿಳಿದುಬಂದಿದೆ.

Read More

ಮಂಗಳೂರು : ಇತ್ತೀಚಿಗೆ ಕಾಫಿ ನಾಡು ಕೃಷ್ಣ ನಗರಿಯಲ್ಲಿ ನಕ್ಸಲರ ಹೆಜ್ಜೆ ಗುರುತು ಸಿಕ್ಕ 15 20 ದಿನದಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಎಎನ್ಎಫ್ ಗುಂಡಿಗೆ ಕಾಡಿನಲ್ಲಿಯೇ ಹತನಾಗಿದ್ದ, ಇದೀಗ ಚಿಕ್ಕಮಂಗಳೂರು ಜಿಲ್ಲೆ ಸುತ್ತಮುತ್ತ ಇನ್ನು ಕರ್ನಾಟಕದ ಇವರು ನಕ್ಸಲರಿಗಾಗಿ ಶೋಧ ನಡೆಸುತ್ತಿದೆ. ಇದರ ಬೆನ್ನಲ್ಲೇ ಗೃಹ ಸಚಿವ ಜಿ ಪರಮೇಶ್ವರ್ ಅವರು ನಕ್ಸಲರು ಶರಣಾದರೆ ಅವರಿಗೆ ಪ್ಯಾಕೇಜ್ ನೀಡುತ್ತೇವೆ ಎಂದು ತಿಳಿಸಿದರು. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಕ್ಸಲರು ಶರಣಾಗತಿ ಆದರೆ ಅವರಿಗೆ ಪ್ಯಾಕೇಜ್ ನೀಡುತ್ತೇವೆ. ಶರಣಾದ ಬಳಿಕ ಸರಳ ಜೀವನ ನಡೆಸಲು ಅವರಿಗೆ ಪ್ಯಾಕೇಜ್ ನೀಡಲಾಗುತ್ತದೆ.ನಕ್ಸಲರು ಮತ್ತು ಅವರ ಜೊತೆಗೆ ಇರೋರನ್ನು ಶರಣಾಗವುಂತೆ ಹೇಳಿದ್ದೇವೆ. ಒಂದು ವೇಳೆ ಏನಾದರೂ ಸರಳ ಜೀವನ ನಡೆಸಲು ಪ್ಯಾಕೇಜ್ ನೀಡುತ್ತೇವೆ ಎಂದು ತಿಳಿಸಿದರು. ಮುಂದುವರೆದ ‘ಕೂಂಬಿಂಗ್’ ಕಾರ್ಯಾಚರಣೆ ಒಂದೂವರೆ ತಿಂಗಳ ಹಿಂದೆ ಕೇರಳದಿಂದ ಬಂದ ನಕ್ಸಲರು 2 ತಂಡ ಮಾಡಿಕೊಂಡು ಉಡುಪಿ-ಚಿಕ್ಕಮಗಳೂರು ಸೇರಿದ್ದರು. ಮುಂಡಗಾರು ಲತಾ ಕಾಡಲ್ಲಿ ಕಾಣೆಯಾದ ಬೆನ್ನಲ್ಲೇ ವಿಕ್ರಂಗೌಡ…

Read More

ಮೈಸೂರು : ಈ ಬಾರಿ ರಾಜ್ಯದಲ್ಲಿ ನಡೆದಂತಹ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲಲು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹರಕು ಬಾಯಿಯೆ ಕಾರಣ. ಯತ್ನಾಳ ಅವರ ಬೇಕಾಬಿಟ್ಟಿ ಹೇಳಿಕೆಯಿಂದಲೇ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲಾಯಿತು ಹಾಗಾಗಿ ಶೀಘ್ರದಲ್ಲಿ ಪಕ್ಷದಿಂದ ಅವರ ಉಚ್ಚಾಟನೆ ಆಗಲಿದೆ ಕಾದು ನೋಡಿ ಎಂದು ಬಿಜೆಪಿ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ತಿಳಿಸಿದರು. ಬಿ ಎಸ್ ಯಡಿಯೂರಪ್ಪ ರಾಜಕಾರಣಕ್ಕೆ ಬಂದಾಗ ಇವರು ಇನ್ನು ಕಣ್ಣು ಬಿಟ್ಟಿರಲಿಲ್ಲ ಬಿಎಸ್ ಯಡಿಯೂರಪ್ಪ ಅವರ ಕಾಲಿನ ಧೂಳಿಗೂ ಇವರು ಸಮ ಅಲ್ಲ ಬಿಎಸ್ ಯಡಿಯೂರಪ್ಪ ಗೆ ತೊಂದರೆ ಕೊಡಲು ಕೆಲವರು ಶಕುನಿಗಳಿದ್ದಾರೆ.ಬಿಜೆಪಿಯನ್ನು ಕಟ್ಟಿ ಬೆಳೆಸಿದಿ ಕಾರ್ಯಕರ್ತದ್ದು ಬಿಎಸ್ ಯಡಿಯೂರಪ್ಪ. ವಿಜೇಂದ್ರ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿದ್ದು ಬಿ ಎಸ್ ಯಡಿಯೂರಪ್ಪ ಅಲ್ಲ. ಹೈಕಮಾಂಡ್ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದೆ. ವಿಜಯೇಂದ್ರಗೆ ಬೈದರೆ ಪಕ್ಷದ ಹಿರಿಯ ನಾಯಕರಿಗೆ ಬೈದಂತೆ.…

Read More

ಮಂಗಳೂರು : ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಸ್ವಾಮೀಜಿ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದ್ದು, ಪೊಲೀಸರು ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ. ಈ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಮಾತನಾಡಿದ್ದು ಸ್ವಾಮೀಜಿ ಅವರ ವಿಚಾರಣೆಯ ಕುರಿತು ಹಾಗೂ ಬಂಧನದ ಕುರಿತಂತೆ ಪೊಲೀಸರು ತೀರ್ಮಾನಿಸುತ್ತಾರೆ ಎಂದು ತಿಳಿಸಿದರು. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನಿನ ಎದುರು ಚಂದ್ರಶೇಖರನಾಥ ಶ್ರೀಗಳು ದೊಡ್ಡವರಲ್ಲ. ಕಾನೂನಿನ ಎದುರು ನಾನು ಸೇರಿ ಸ್ವಾಮೀಜಿಯು ಒಂದೇ. ಈ ದೇಶದಲ್ಲಿರುವ ಎಲ್ಲರಿಗೂ ಕಾನೂನು ಒಂದೇ. ಕಾನೂನಿನ ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಬಂಧನ ಪ್ರಕ್ರಿಯೆ ಬಗ್ಗೆಯೂ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಮಂಗಳೂರಿನಲ್ಲಿ ಗೃಹ ಇಲಾಖೆಯ ಸಚಿವ ಪರಮೇಶ್ವರ್ ಹೇಳಿಕೆ ನೀಡಿದರು. ಹಾಸನ ಸಮಾವೇಶದ ಕುರಿತು ಮಾತನಾಡಿದ ಅವರು, ಅನಾಮಧೇಯ ಪತ್ರವನ್ನು ಬಿಜೆಪಿಯವರೇ ಏಕೆ ಬರೆದಿರಬಾರದು? ಬಿಜೆಪಿಯವರೇ ಅನಾಮಧೇಯ ಪತ್ರ ಬರಿತಾರೆ. ಅದು ನಮಗೆ ಲೆಕ್ಕಕ್ಕೆ…

Read More

ಬೆಂಗಳೂರು : ಮುಸ್ಲಿಮರಿಗೆ ಭಾರತದಲ್ಲಿ ಮತದಾನದ ಹಕ್ಕು ನೀಡಬಾರದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿಗಳಿಗೆ ಪೊಲೀಸರು ಡಿಸೆಂಬರ್ 2ರಂದು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದಾರೆ. ಈ ವಿಚಾರವಾಗಿ ಚಂದ್ರಶೇಖರನಾಥ ಸ್ವಾಮೀಜಿಗಳು ನನಗೆ ಆರೋಗ್ಯ ಸರಿ ಇಲ್ಲ ನನಗೆ ವಿಚಾರಣೆಗೆ ಹೋಗಲು ಆಗೋಲ್ಲ ಬೇಕಾದರೆ ಅವರೇ ಇಲ್ಲಿ ಬಂದು ಸ್ಪಷ್ಟನೆ ತೆಗೆದುಕೊಳ್ಳಲಿ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ ಎಲ್ಲ ಧರ್ಮದವರ ದೇಶ. ನಮ್ಮ ಮಠಕ್ಕೂ ಮುಸ್ಲಿಂ ಭಕ್ತರಿದ್ದಾರೆ, ನಾನು ಸಹ ಮುಸ್ಲಿಂ ಸಮುದಾಯದ ಮದುವೆಗಳಿಗೆ ಹೋಗ್ತಿನಿ. ಇದಾದ್ಮೇಲೆ ಯಾಕೇ ದೂರು ದಾಖಲಿಸಿಕೊಂಡಿದ್ದಾರೋ ಗೊತ್ತಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.ನೋಟಿಸ್ ನೀಡಿರೋದು ಗೊತ್ತಿಲ್ಲ, ನನಗೆ ಆರೋಗ್ಯ ಸರಿಯಿಲ್ಲ, ನಾನು ವಿಶ್ರಾಂತಿಯಲ್ಲಿದ್ದೆ.ವಿಚಾರಣೆಗೆ ಹೋಗಲು ಆಗೋಲ್ಲ, ಅವ್ರೇ ಇಲ್ಲೇ ಬಂದ್ರೇ ನನ್ನ ಹೇಳಿಕೆಗೆ ಸ್ಪಷ್ಟನೆ ನೀಡ್ತೇನೆ ಎಂದಿದ್ದಾರೆ. ಜೈಲಿಗೆ ಹಾಕ್ತರಾ? ಹಾಕ್ಲಿ ಬಿಡಿ, ಅಲ್ಲೇ ಇರ್ತಿನಿ. ದೇವರ ಮೇಲೆ ಭಾರ ಹಾಕಿದ್ದೀನಿ, ರೈತರ ಪರ ಹೋರಾಟದಲ್ಲಿ ಭಾಗಿಯಾಗಿದ್ದೆ.…

Read More

ಮೈಸೂರು : ರಾಜ್ಯ ಬಿಜೆಪಿಯ ಬಣ ಬಡಿದಾಟ ಇದೀಗ ಪೂರ್ತಿ ಬೀದಿಗೆ ಬಂದಿದ್ದು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ, ಬಿಜೆಪಿ ಕಾರ್ಯಕರ್ತರೇ ಕಿಡಿ ಕಾರಿದ್ದಾರೆ. ಇಂದು ಮೈಸೂರಿನಲ್ಲಿ ಬಿಜೆಪಿಯ ಹಲವು ಹಿರಿಯ ನಾಯಕರು ಸುದ್ದಿಗೋಷ್ಠಿ ನಡೆಸುವ ಸಂದರ್ಭದಲ್ಲಿ ಯತ್ನಾಳನ್ನು ಉಚ್ಚಾಟನೆ ಮಾಡಿ ಉಗಿದು ಆಚೆ ಹಾಕಿ ಎಂದು ಕೆಂಡಾಮಂಡಲಗೊಂಡರು. ಇಂದು ಬಿ ವೈ ವಿಜಯೇಂದ್ರ ಬಣದ ಎಂಪಿ ರೇಣುಕಾಚಾರ್ಯ ಬಿಸಿ ಪಾಟೀಲ್ ಸೇರಿದಂತೆ ಹಲವು ನಾಯಕರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದರು ಬಳಿಕ ಸುದ್ದಿಗೋಷ್ಠಿ ಆರಂಭಿಸಿದಾಗ ಬಿಜೆಪಿ ಹಲವು ಕಾರ್ಯಕರ್ತರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಕ್ರೋಶ ಹೊರ ಹಾಕಿದರು. ಆತನ ಹೇಳಿಕೆಗಳಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ ಅಲ್ಲದೆ ಕಾರ್ಯಕರ್ತರ ಹುಮ್ಮಸ್ಸು ಕುಗ್ಗಿಸುತ್ತಿದ್ದಾರೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಅವನು ಮುಖವಾಡ ಹಾಕಿಕೊಂಡಿರುವ ಹಿಂದುತ್ವ ನಾಯಕ. ಅವನನ್ನು ಉಗಿದು ಆಚೆ ಹಾಕಿ ಎಂದು ಕಾರ್ಯಕರ್ತರು ಕೆಂಡಮಂಡಲವಾಗಿದ್ದಾರೆ. ಏಕವಚನದಲ್ಲಿ ಯತ್ನಾಳ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಕಿಡಿಕಾರಿದ್ದಾರೆ.…

Read More