Author: kannadanewsnow05

ಮೈಸೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದು, ಪ್ರಜ್ವಲ್ ವಿದೇಶಕ್ಕೆ ಹೋಗುವುದು ಅವತ್ತೇ ಗೊತ್ತಾಗಿದ್ದರೆ ನಾನು ಅವತ್ತೆ ಅದನ್ನು ನಿಲ್ಲಿಸುತ್ತಿದ್ದೆ. ಪ್ರಜ್ವಲ್ ಭಯ ಬಿದ್ದಿರಬಹುದು. ಅದಕ್ಕೆ ಬರುತ್ತಿಲ್ಲ. ಪ್ರಜ್ವಲ್ ಗೆ ಹೇಳ್ತಿದ್ದಿನಿ, ಈ ವಿಚಾರದಲ್ಲಿ ವಕೀಲರ ಸಲಹೆ ಬೇಡ. ನೈತಿಕ ಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಾಸ್ ಬಾ’ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದರು. ಬಿಜೆಪಿ – ಜೆಡಿಎಸ್ ಮೈತ್ರಿಗೂ ಪೆನ್ ಡ್ರೈವ್‌ಗೂ ಸಂಬಂಧ ಇಲ್ಲ. ಪೆನ್ ಡ್ರೈವ್ ಪ್ರಕರಣದಿಂದ ದೇವೇಗೌಡರ ಫ್ಯಾಮಿಲಿ ಗೆ ಸ್ವಲ್ಪ ಡ್ಯಾಮೆಜ್ ಆಗಿರೋದು ಸತ್ಯ. ಪ್ರಜ್ವಲ್ ಎಚ್.ಡಿ. ರೇವಣ್ಣನ ಸಂಪರ್ಕದಲ್ಲೂ ಇಲ್ಲ. ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರುತ್ತಿರಲಿಲ್ಲ. ಇನ್ನು ಈಗ ಇರ್ತಾನಾ? ನಾನು ಈಗ ಏನಾದರೂ ವಿದೇಶಕ್ಕೆ ಹೋದರೆ, ಪ್ರಜ್ವಲ್ ರಕ್ಷಣೆಗೆ ಹೋಗಿದ್ದಾರೆ ಅಂತಾ ಇವರು ಸುದ್ದಿ ಹಬ್ಬಿಸಿ ಬಿಡುತ್ತಾರೆ ಎಂದು ಮೈಸೂರಿನಲ್ಲಿ ಮಾಜಿ  ಸಿಎಂ…

Read More

ಬೆಳಗಾವಿ : ಇತ್ತೀಚೆಗೆ ಕರ್ನಾಟಕ ಗೋವಾ ಗಡಿಯಲ್ಲಿ ಓಡಾಡುವ ರೈಲಿನಲ್ಲಿ ಚಾಕೊಲೇಟ್ ಗ್ಯಾಂಗ್ ಆ್ಯಕ್ಟೀವ್ ಆಗಿತ್ತು. ಇದೀಗ ಜ್ಯೂಸ್ ಗ್ಯಾಂಗ್ ಆಕ್ಟಿವ್ ಆಗಿದ್ದು, ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್​​ನಲ್ಲಿಯೇ ಜ್ಯೂಸ್ ಹಾಗೂ ಬಾಳೆ ಹಣ್ಣು ಕೊಟ್ಟು ನಗನಾಣ್ಯ ದೋಚಿ ಪರಾರಿಯಾಗಿರುವಂತಹ ಘಟನೆ ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ನಲ್ಲಿ ನಡೆದಿದೆ. ಹೌದು ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಲ್ಲಿ ಜ್ಯೂಸ್ ಹಾಗೂ ಬಾಳೆಹಣ್ಣು ಮಾರಾಟ ಮಾಡುವ ಸೋಗಿನಲ್ಲಿ ಬಂದು ಪ್ರಯಾಣಿಕರಿಗೆ ಜ್ಯೂಸ್ ಬಾಳೆಹಣ್ಣು ಮಾರಾಟ ಮಾಡಿದ್ದಾರೆ. ಈ ವೇಳೆ ಜ್ಯೂಸ್ ಹಾಗೂ ಬಾಳೇನಲ್ಲಿ ಮೂರ್ಛೆ ಬರುವಂತಹ ಪದಾರ್ಥ ಮಿಶ್ರಣ ಮಾಡಿದ್ದಾರೆ. ಈ ವೇಳೆ ಸಂಜೀವ್ ಖೋತ (40) ಹಾಗೂ ಮತ್ತೋರ್ವ ಪ್ರಯಾಣಿಕರಿಂದ ಗ್ಯಾಂಗ್ ಸುಲಿಗೆ ಮಾಡಿದೆ. ತಕ್ಷಣ ಜ್ಯೂಸ್ ಗ್ಯಾಂಗ್ ಪ್ರಯಾಣಿಕರ ಬಳಿ ಇದ್ದಂತ ಬಂಗಾರದ ಚೈನ್, ಬ್ಯಾಗ್, ಪರ್ಸ್ ಕದ್ದು ಪರಾರಿ ಆಗಿದ್ದಾರೆ. ಸದ್ಯ ಹದಿನಾಲ್ಕು ಗಂಟೆಯಿಂದ ಸಂಪೂರ್ಣ ಪ್ರಜ್ಞಾಹೀನ‌ ಸ್ಥಿತಿಯಲ್ಲಿರುವ ಸಂಜೀವ್ ಖೋತಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮತ್ತೋರ್ವನಿಗೆ ಖಾಸಗಿ…

Read More

ಮೈಸೂರು : ಹಾಸನ ಸಂಸದ ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ದಂತೆ ಮೈಸೂರಿನಲ್ಲಿ HD ಕುಮಾರಸ್ವಾಮಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು, ಕಾರು ಚಾಲಕ ಕಾರ್ತಿಕ್ ಹತ್ತಿರ ಪೆನ್ ಡ್ರೈವ್ ಪಡೆದುಕೊಂಡು ವಿಡಿಯೋಗಳನ್ನ ಡಿಕೆ ಶಿವಕುಮಾರ್ ಟ್ರಾನ್ಸ್ಫರ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಪ್ರಕರಣದಲ್ಲಿ ಅರ್ಧ ನಿಮಿಷದಲ್ಲಿ ಎಲ್ಲವೂ ತೀರ್ಮಾನ ಆಗಿದೆ. ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರವಾದ ಆರೋಪ ಮಾಡಿದ್ದಾರೆ. ನಾನು ಪ್ರಜ್ವಲ್ ಪರ ಇಲ್ಲ ಆರೋಪ ಸಾಬೀದಾದರೆ ಶಿಕ್ಷೆ ಕೊಡಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಅಧಿಕಾರ ಶಾಶ್ವತ ಅಲ್ಲ ಅಧಿಕಾರ ದುರುಪಯೋಗ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಪೆನ್ ಡ್ರೈವ್ ಹರಿಬಿಟ್ಟ ಕಾರಣಿಕರ್ತರು ಯಾರಿದ್ದಾರೆ? ರೇವಣ ಮನೆಯಲ್ಲಿ ಕೆಲಸಕ್ಕೆ ಇದ್ದ ಕಾರ್ತಿಕ್ ಅವನು ಪೆನ್ ಡ್ರೈವ್ ಮೂಲ. ಅವನು ಎಲ್ಲಿಗೆ ಹೋದ? ಹಾಸನ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಹಿಡಿದುಕೊಂಡು ಹಳೇ ನರಸೀಪುರದಲ್ಲಿ ವ್ಯಕ್ತಿ…

Read More

ಬೆಂಗಳೂರು : ಪೊಲೀಸ್ ಠಾಣೆಯ ಆವರಣದಲ್ಲಿ ಬೆಂಬಲಿಗರ ಪರ ಧರಣಿ ಕುಳಿತಿದ್ದು, ಹಾಗೂ ಪಿ ಎಸ್ ಐ ಗೆ ದಮ್ಕಿ ಹಾಕಿದ ಆರೋಪದ ಅಡಿಯಲ್ಲಿ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ಅವರ ನಿವಾಸಕ್ಕೆ ತೆರಳಿದ್ದಾರೆ. ಈ ಕುರಿತಂತೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು ಶಾಸಕರನ್ನು ಬಂಧಿಸುವ ದುಸಾಹಸಕ್ಕೆ ಕೈ ಹಾಕಿದರೆ ಮುಂದೆ ಆಗುವಂತಹ ಅನಾಹುತಕ್ಕೆ ಸರ್ಕಾರ ಹಾಗೂ ಇಲಾಖೆ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನ ಸಾಧ್ಯತೆ ವಿಚಾರವಾಗಿ ಹರೀಶ್ ಪೂಂಜಾ ಬಂಧನಕ್ಕೆ ಯತ್ನಿಸುತ್ತಿರುವುದು ಖಂಡನಿಯ. ಪೂಂಜಾ ಭಾಷಣ ನೋಡಿದ್ದೇನೆ. ಅವರ ಜೊತೆ ಚರ್ಚಿಸಿದ್ದೇನೆ. ವಿಷಯ ಮರೆಮಾಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ. ಶಾಸಕರು ಉದ್ವೇಗದಲ್ಲಿ ಕೆಲವು ಮಾತುಗಳನ್ನು ಹೇಳಿದ್ದಾರೆ ಅದು ಸರಿಯಲ್ಲ ಎಂದು ಪೂಂಜಾರಿಗು ಗೊತ್ತಾಗಿದೆ. ಪದೇ ಪದೇ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲು ಆಗುವುದಿಲ್ಲ. ಶಾಸಕರನ್ನು ಅರೆಸ್ಟ್…

Read More

ಹುಬ್ಬಳ್ಳಿ : ರೈಲಿನಿಂದ ಜಿಗಿದು ಗಾಯಗೊಂಡು ಕಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಜಲಿ ಅಂಬಿಗೇರ ಕೊಲೆ ಆರೋಪಿ ವಿಶ್ವ ಅಲಿಯಾಸ್​ ಗಿರೀಶ್​ ಇದೀಗ CID ಅಧಿಕಾರಿಗಳ ಮುಂದೆ ಕೊಲೆಯ ರಹಸ್ಯವನ್ನು ಬಿಚ್ಚಿಟ್ಟಿದ್ದಾನೆ. ಹೌದು ಪ್ರಕರಣವನ್ನು CID ಗೆ ವಹಿಸಲಾಗುವುದು ಎಂದು ಎರಡು ದಿನಗಳ ಹಿಂದೆ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದರು. ಇದೀಗ ಸಿಐಡಿ ಅಧಿಕಾರಗಳ ಮುಂದೆ ಕೊಲೆಯ ಕುರಿತು ಹೇಳಿರುವ ಗಿರೀಶ್, ಮೈಸೂರಿಗೆ ಬರಲು ಯುವತಿ ಅಂಜಲಿ ಒಪ್ಪದಿದ್ದಕ್ಕೆ ಕೊಲೆಯ ಹಿಂದಿನ ದಿನ ಯುವತಿಗೆ ಒಂದು ಸಾವಿರ ಕಳುಹಿಸಿದ್ದ. ಫೋನ್ ಪೇ ಮೂಲಕ ಆರೋಪಿ ವಿಶ್ವ 1000 ರೂಪಾಯಿ ಕಳುಹಿಸಿದ್ದ. 1000 ಹಣ ಪಡೆದು ಅಂಜಲಿ ನಂಬರ್ ಬ್ಲಾಕ್ ಮಾಡಿದ್ದಳು.ಈ ಒಂದು ಕಾರಣಕ್ಕೆ ಸಿಟ್ಟು ಬಂದು ಕೊಲೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾನೆ. ಸಿಐಡಿ ಅಧಿಕಾರಿಗಳ ಬಳಿ ಆರೋಪಿ ವಿಶ್ವ ಕೊಲೆಯ ರಹಸ್ಯ ಬಾಯಿ ಬಿಟ್ಟಿದ್ದಾನೆ. ಕಿಮ್ಸ್ ಆಸ್ಪತ್ರೆಯಲ್ಲಿ ಸಿಐಡಿ ಅಧಿಕಾರಿಗಳು ಆರೋಪಿ ಗಿರೀಶ್ ನನ್ನ ವಿಚಾರಣೆ ನಡೆಸಿದ್ದಾರೆ.

Read More

ಹುಬ್ಬಳ್ಳಿ : ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದೆಂದು ತಿಳಿಸಿದ್ದರು. ಅದರಂತೆ ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಆರೋಪಿ ಗಿರೀಶ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ನಿನ್ನೆ ಸಿಐಡಿ ಅಧಿಕಾರಿಗಳ ತಂಡ ಹುಬ್ಬಳ್ಳಿಗೆ ಬಂದಿತ್ತು. ಇಂದು ಸಿಐಡಿ ಅಧಿಕಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿರುವ ಆರೋಪಿ ಗಿರೀಶ್ ನನ್ನು ವಿಚಾರಣೆ ನಡೆಸಿ, ಇದೀಗ ಆರೋಪಿ ಗಿರೀಶ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ಕಿಮ್ಸ್ ಆಸ್ಪತ್ರೆಯಿಂದ ಕರೆದೋಯ್ದಿದ್ದಾರೆ.ಹಂತಕ ಗಿರೀಶ್ ನನ್ನು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಸಿಐಡಿ ಅಧಿಕಾರಗಳ ಮುಂದೆ ಕೊಲೆಯ ಕುರಿತು ಹೇಳಿರುವ ಗಿರೀಶ್, ಮೈಸೂರಿಗೆ ಬರಲು ಯುವತಿ ಅಂಜಲಿ ಒಪ್ಪದಿದ್ದಕ್ಕೆ ಕೊಲೆಯ ಹಿಂದಿನ ದಿನ ಯುವತಿಗೆ ಒಂದು ಸಾವಿರ ಕಳುಹಿಸಿದ್ದ. ಫೋನ್ ಪೇ ಮೂಲಕ ಆರೋಪಿ ವಿಶ್ವ 1000 ರೂಪಾಯಿ ಕಳುಹಿಸಿದ್ದ. 1000 ಹಣ ಪಡೆದು ಅಂಜಲಿ ನಂಬರ್ ಬ್ಲಾಕ್ ಮಾಡಿದ್ದಳು.…

Read More

ಬೆಂಗಳೂರು : ಇಂದು ರಾಜ್ಯದಲ್ಲಿ ಅನೇಕ ದುರ್ಘಟನೆಗಳು ಸಂಭವಿಸಿದ್ದು ಮಕ್ಕಳು ಮಹಿಳೆಯರು ಸೇರಿದಂತೆ 8 ಜನರು ಸಾವನಪ್ಪಿರುವ ಘಟನೆಗಳು ರಾಜ್ಯದ ವಿವಿಧಡೆ ನಡೆದಿವೆ. ಬೆಂಗಳೂರು ಬೆಳಗಾವಿ ವಿಜಯಪುರ ಚಿಕ್ಕಮಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ದುರಂತ ಸಂಭವಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಬಾಯ್ಲರ್ ಸ್ಫೋಟದಿಂದ ಇಬ್ಬರು ಮಹಿಳೆಯರ ಸಾವು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸಾವನಪ್ಪಿದು, ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟವಾಗಿದೆ. ಬಾಯ್ಲರ್ ಸ್ಫೋಟದಿಂದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಇನ್ನಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಸುನಂದಾ ತೇಲಿ ಹಾಗೂ ಶೋಭಾ ತೇಲಿ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಗಾಯಾಳುಗಳು ಅಥಣಿ ಮತ್ತು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಲಾಸ್ಟ್ ಕೆಲಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ…

Read More

ಮೈಸೂರು : ರಾಜ್ಯದಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಮುಖ್ಯಮಂತ್ರಿ ಇದ್ದರೆ ಅದು ಎಚ್ ಡಿ ಕುಮಾರಸ್ವಾಮಿ ಎಂದು ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಭೆಯಲ್ಲಿ ಮಾಜಿ ಸಚಿವ HD ರೇವಣ್ಣ ಹೇಳಿಕೆ ನೀಡಿದರು. ಇಂದು ಮೈಸೂರಿನಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಸಭೆ ನಡೆಯುತ್ತಿದ್ದು ಈ ಒಂದು ಸಭೆಯಲ್ಲಿ ಮಾತನಾಡಿದ ಅವರು, ಹೆಚ್ ಡಿ ಕುಮಾರಸ್ವಾಮಿ ಬಿಟ್ಟರೆ ಅಶ್ವಥ್ ನಾರಾಯಣ್, ಜಿಟಿ ದೇವೇಗೌಡ ಕೆಲಸ ಮಾಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವ ಮೊದಲು ಹಲವಡೆ ಕಾಲೇಜುಗಳೆ ಇರಲಿಲ್ಲ. ಹಲವು ತಾಲೂಕುಗಳಲ್ಲಿ ಪಿಯು ಹಾಗೂ ಡಿಗ್ರಿ ಕಾಲೇಜುಗಳು ಇರಲಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ 1,600 ಕಾಲೇಜುಗಳನ್ನು ತೆರೆದರು. ಡಿಗ್ರಿ ಪಿಯುಸಿ ಹೈಸ್ಕೂಲ್ ಗಳನ್ನು ತೆರೆದು ಶಿಕ್ಷಣ ಕ್ರಾಂತಿ ಮಾಡಿದರು. 2006- 2008ರಲ್ಲಿ 4,600 ಅಧ್ಯಾಪಕರನ್ನು ನೇಮಕ ಮಾಡಿದರು.ಜೆಡಿಎಸ್ ಬಿಜೆಪಿ ಅಧಿಕಾರದಲ್ಲಿದ್ದಾಗ ಶಿಕ್ಷಣದಲ್ಲಿ ಬದಲಾವಣೆ ಆಗಿತ್ತು. ನಮ್ಮ ಬಳಿಯೇ ಕೆಲವರು ತಿಂದು ತೇಗಿ ನಮಗೆ ಅನ್ಯಾಯ ಮಾಡಿದ್ದಾರೆ. ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಯಾರ ಬಗ್ಗೆಯೂ ಈಗ ಮಾತಾಡಲ್ಲ.…

Read More

ಬೆಂಗಳೂರು : ಮೊಬೈಲ್ ನಿಂದ ಐದು ವರ್ಷದ ಮಗುವಿನಿಂದ ಯಡಿಯೂರು ಪ್ರತಿಯೊಬ್ಬರೂ ಹಾಳಾಗುತ್ತಿರುವುದು ಆತಂಕದ ಸಂಗತಿಯಾಗಿದೆ. ಇದೀಗ ಬೆಂಗಳೂರಿನಲ್ಲಿ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು ಅಶ್ಲೀಲ ವಿಡಿಯೋ ವೀಕ್ಷಣೆ ಮಾಡಿದ ಅಣ್ಣ ತಂಗಿ ಪರಸ್ಪರ ಲೈಂಗಿಕ ಕ್ರಿಯೆ ನಡೆಸಿದ ಪರಿಣಾಮ ತಂಗಿ ಮೂರು ತಿಂಗಳ ಗರ್ಭಿಣಿ ಆಗಿರುವ ಘಟನೆ ಬೆಂಗಳೂರಿನ ಬಾಗಲಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, 14 ವರ್ಷದ ಅವಳಿ ಜವಳಿ ಮಕ್ಕಳಾಗಿದ್ದ ಅಣ್ಣ ಹಾಗೂ ತಂಗಿ. ಮನೆಯಲ್ಲಿ ಪೋಷಕರು ಇಲ್ಲದಿದ್ದಾಗ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಅಪ್ರಾಪ್ತ ವಯಸ್ಸಿನ ಅಣ್ಣ ತಂಗಿ ಲೈಂಗಿಕ ಸಂಪರ್ಕ ನಡೆಸಿದ್ದಾರೆ.ಬಳಿಕ ಅಪ್ರಾಪ್ತ ಬಾಲಕಿ ಹೊಟ್ಟೆ ನೋವೆಂದು ಎಂದಾಗ ತಕ್ಷಣ ಆಕೆಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪರೀಕ್ಷೆ ನಡೆಸಿದಾಗ ಮೂರು ತಿಂಗಳು ಗರ್ಭಿಣಿಯಾಗಿದ್ದು ದೃಢಪಟ್ಟಿದೆ. ತಕ್ಷಣ ಖಾಸಗಿ ಆಸ್ಪತ್ರೆಯ ವೈದರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿ ಅಪ್ರಾಪ್ತನನ್ನು ವಶಕ್ಕೆ ಪಡೆದಿದ್ದಾರೆ.ನಂತರ…

Read More

ಬೆಂಗಳೂರು : ದೇಶ, ರಾಜ್ಯದಲ್ಲಿ ಉತ್ತಮ ಮಳೆ, ಬೆಳೆಯಾಗಲಿ ಎಂದು ಹಜ್ ಯಾತ್ರಿಗಳು ದೇವರಲ್ಲಿ ಪ್ರಾರ್ಥಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಜ್ ಗೆ ಪ್ರಯಾಣ ಬೆಳೆಸಿದ ಯಾತ್ರಾರ್ಥಿಗಳಿಗೆ ತಿಳಿಸಿದರು. ಬೆಂಗಳೂರಿನ ಹೆಗಡೆನಗರದ ಹಜ್ ಭವನದಲ್ಲಿ ಹಜ್ ಯಾತ್ರಾರ್ಥಿಗಳಿಗೆ ಶುಭ ಕೋರಿ ಬಾವುಟ ತೋರಿಸುವ ಮೂಲಕ ಬೀಳ್ಕೊಟ್ಟರು. ಈ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್, ರಹೀಮ್ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಝೀರ್ ಅಹ್ಮದ್ ಭಾಗಿಯಾಗಿದ್ದರು. ಯಾತ್ರಿಗಳ ಪ್ರಯಾಣ ಸುಖಕರವಾಗಿರಲಿ ಎಂದು ಹಾರೈಸುತ್ತೇನೆ. ಈ ವರ್ಷ 10,608 ಜನರು ಜಾತ್ರೆ ಕೈಗೊಳ್ಳುತ್ತಿದ್ದಾರೆ. ಅವರೆಲ್ಲರೂ ಆರೋಗ್ಯವಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ. ಸಮಾಜದಲ್ಲಿ ಸಾಮರಸ್ಯ ಸೌಹಾರ್ದತೆ ನೆಲೆಸಲೆಂದು ಹಜ್ ಯಾತ್ರಿಗಳು ದೇವರಲ್ಲಿ ಈ ರೀತಿ ಪ್ರಾರ್ಥನೆ ಮಾಡಬೇಕು. ದೇಶ ಮತ್ತು ರಾಜ್ಯದಲ್ಲಿ ಮಳೆ ಆಗಿ ಉತ್ತಮ ಬೆಳೆ ಬಂದು ಸಮೃದ್ಧಿ ನೆಲೆಸಲಿ ಎಂದು ಯಾತ್ರಿಗಳು ದೇವರಲ್ಲಿ ಕೇಳಲಿ ಎಂದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿ ಹೇಳಿಕೆ ನೀಡಿದರು. ನಂತರ ಬಾವುಟ ತೋರಿಸುವುದರ…

Read More