Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ವಸತಿ ಶಾಲೆಗಳಲ್ಲಿ ಘೋಷ ವಾಕ್ಯ ಬದಲಾವಣೆ ವಿಚಾರವಾಗಿ ವಿಧಾನಸಭೆಯಲ್ಲಿ ಇಂದು ಭಾರಿ ಸದ್ದು ಮಾಡಿದ್ದೂ, ಆಡಳಿತ ಹಾಗೂ ಪಕ್ಷಗಳ ನಡುವೆ ಬಾರಿ ಗಲಾಟೆ ಗದ್ದಲ ಜರುಗಿದ ಪ್ರಸಂಗ ನಡೆಯಿತು.ಇದೇ ವೇಳೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಮುರಾರ್ಜಿ ವಸತಿ ಶಾಲೆಯಲ್ಲಿ ಕುವೆಂಪುರವರ ಬರಹ ಬದಲಾವಣೆ ವಿಷಯವನ್ನು, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಈ ವಿಷಯವನ್ನು ಪ್ರಸ್ತಾಪಿಸಿದರು. https://kannadanewsnow.com/kannada/breaking-pak-don/ ಸದನದಲ್ಲಿ ಪ್ರಸ್ತಾಪ ಮಾಡಿದ ಬಿವೈ ವಿಜಯೇಂದ್ರ ಅವರು ಕುವೆಂಪು ಅವರಿಗೆ ಅಪಮಾನ ಮಾಡುವ ರೀತಿಯಲ್ಲಿ ಘೋಷವಾಕ್ಯವನ್ನು ಬದಲಾಯಿಸಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಕುರಿತಂತೆ ನಾಳೆ ಸರ್ಕಾರ ಈ ಬಗ್ಗೆ ಉತ್ತರ ಕೊಡುತ್ತೆ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದರು.ಈ ಸಂದರ್ಭದಲ್ಲಿ ಬಿಜೆಪಿಯ ಮಾಜಿ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್,ಕುವೆಂಪುಗೆ ಅವಮಾನಿಸುವ ರೀತಿಯಲ್ಲಿ ಬರಹವನ್ನು ಬದಲಾಯಿಸಿದ್ದಾರೆ. ಇದಕ್ಕೆ ಸಚಿವ ಕೃಷ್ಣ ಬೈರೇಗೌಡ ಕುವೆಂಪು ಅವರ ಪಾಠವನ್ನೇ ತೆಗೆದವರು ನೀವು…
ವಿಜಯಪುರ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದಲ್ಲಿ ಹಾಗೂ ಇತರ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ದ್ವಾರದಲ್ಲಿ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಎನ್ನುವ ಬರಹವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎನ್ನುವ ಬರಹ ಬರೆಸಲಾಗಿತ್ತು. https://kannadanewsnow.com/kannada/%e0%b2%b8%e0%b2%bf%e0%b2%8e%e0%b2%82-%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af-%e0%b2%86%e0%b2%b0%e0%b3%8b%e0%b2%97%e0%b3%8d%e0%b2%af%e0%b2%a6/ ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಚೆತ್ತುಕೊಂಡ ಸಮಾಜ ಕಲ್ಯಾಣ ಇಲಾಖೆಯು ಆ ಬರಹವನ್ನು ತೆರುಗೊಳಿಸಿ ಯಥಾಸಿಟಿಗೆ ವಸತಿ ಶಾಲೆ ಮರಳಿದೆ.ವಸತಿ ಶಾಲೆ ಪ್ರಾಂಶುಪಾಲ ದುಡ್ಡಪ್ಪ ಒಡಜೆ ಹೇಳಿಕೆ ಪ್ರಕಾರ ಮೌಖಿಕ ಆದೇಶದ ಮೇರೆಗೆ ಬರಹ ಬದಲಾವಣೆ ಮಾಡಲಾಗಿತ್ತು ಎಂದು ತಿಳಿಸಿದರು. https://kannadanewsnow.com/kannada/breaking-big-relief-for-siddaramaiah-other-leaders-sc-stays-trial/ ಇದೆ ವೇಳೆ ಎಚ್ಚತ್ತ ಸಮಾಜ ಕಲ್ಯಾಣ ಇಲಾಖೆಯೂ ವಿಜಯಪುರದ ವಸತಿ ಶಾಲೆಯ ಘೋಷ ವಾಕ್ಯ ಇದೀಗ ಪುನಃ ಬದಲಾವಣೆ ಮಾಡಿದ್ದೂ, ವಸತಿ ಶಾಲೆಯಲ್ಲಿ ಮೊದಲಿನಂತೆ ಯಥಾಸ್ಥಿತಿಗೆ ಮೊದಲಿನ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಬರಹ ಒಳಗೊಂಡಿದೆ. https://kannadanewsnow.com/kannada/vhp-protests-against-govt-in-mangaluru-over-teachers-derogatory-remarks-on-hinduism/
ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ತಮ್ಮ ಮತ್ತು ಇತರರ ವಿರುದ್ಧ 2022ರಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸುವಂತೆ ಮಾಡಲಾಗಿದ್ದ ಮನವಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು.ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯ ನಡೆಸಿದ ಸುಪ್ರೀಂಕೋರ್ಟ್ ಇದೀಗ ವಿಚಾರಣೆಗೆ ತಡೆ ನೀಡಿದೆ ಎಂದು ತಿಳಿದುಬಂದಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್, ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಒಳಗೊಂಡ ಪೀಠವು ಈ ಕುರಿತು ವಿಚಾರಣೆ ನಡೆಸಿ ಇದೀಗ ವಿಚಾರಣೆಯನ್ನು ಮುಂದುವರಿದೆ . ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನುಸಂಗ್ವಿ ವಾದ ಮಡಿಸುತ್ತಿದ್ದಾರೆ.ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದೊಂದು ಶಾಂತಿಯುತ ಪ್ರತಿಭಟನೆಯಾಗಿತ್ತು. ಪ್ರತಿಭಟನೆಯಿಂದ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ. ಇದು ರಾಜಕೀಯ ಪ್ರತಿಭಟನೆ ಎಂದು ಕಪಿಲ್ ಸಿಬಲ್ ವಾದ ಮಂಡಿಸಿದ್ದಾರೆ. https://kannadanewsnow.com/kannada/vhp-protests-against-govt-in-mangaluru-over-teachers-derogatory-remarks-on-hinduism/ ರಾಜಕೀಯ ಪಕ್ಷಗಳ ಪ್ರತಿಭಟನೆಗೆ ಸೆಕ್ಷನ್ 141 ಹಾಕಲಾಗಿದೆ ಎಂದು ತಿಳಿಸಿದಾಗ ಇದೆ ವೇಳೆ ಪಕ್ಷಗಳ ಪ್ರತಿಭಟನೆ ಎಂದ ಕೂಡಲೇ ಕೇಸ್…
ಮಂಗಳೂರು : ಮಂಗಳೂರಿನ ಜೇರುಸಾ ಶಾಲೆಯಲ್ಲಿ ಇತ್ತೀಚಿಗೆ ಶಿಕ್ಷಕಿಯೊಬ್ಬರು ಹಿಂದೂ ಧರ್ಮದ ಕುರಿತಂತೆ ಅವಹೇಳನ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರಿನ ಮಿನಿ ವಿಧಾನಸೌಧದ ಆವರಣದಲ್ಲಿ ವಿ ಎಚ್ ಪಿ ಕಾರ್ಯಕರ್ತರು ಸರ್ಕಾರದವರು ಪ್ರತಿಭಟನೆ ನಡೆಸಿದರು. https://kannadanewsnow.com/kannada/shocking-breast-cancer-case-death-toll-on-the-rise-in-karnataka-ncrp/ ಶಿಕ್ಷಕಿಯಿಂದ ಹಿಂದೂ ಧರ್ಮಕ್ಕೆ ಅವಹೇಳನ ಪ್ರಕರಣಕ್ಕೆ ಸಂಬಂಧಸಿದಂತೆ ಹಾಗೂ ಬಿಜೆಪಿ ಶಾಸಕರು ಹಿಂದೂ ನಾಯಕರ ವಿರುದ್ಧ ದಾಖಲಾಗಿರುವ FIR ಹಿನ್ನೆಲೆಯಲ್ಲಿ ಮಂಗಳೂರಿನ ಮಿನಿ ವಿಧಾನಸೌಧದ ವಿ ಎಚ್ ಪಿ ಧರಣಿ ನಡೆಸುತ್ತಿದೆ. ಜೇರುಸಾ ಶಾಲೆ ಶಿಕ್ಷಕಿ ಸಿಸ್ಟರ್ ಪ್ರಭ ಬಂಧಿಸುವಂತೆ ವಿ ಎಚ್ ಪಿ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. https://kannadanewsnow.com/kannada/sandesh-khali-supreme-2/ ಈ ವೇಳೆ ಜೈ ಶ್ರೀ ರಾಮ್ ಘೋಷಣೆ ಕೂಗಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಮಿನಿ ವಿಧಾನ ಸೌಧದ ಎದುರುಗಡೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಪ್ರತಿಭಟನಾಕಾರರು ನಾವು ಪೊಲೀಸರು…
ಬೆಂಗಳೂರು : ಕೆಲವು ವರ್ಷಗಳ ಹಿಂದೆ ಸ್ತನ ಕ್ಯಾನ್ಸರ್ ಪ್ರಕರಣಗಳು ವೃದ್ಧೆಯರಲ್ಲಿ ಸಾಮಾನ್ಯವಾಗಿತ್ತು. ಆದರೆ ಈಗಿನ ಅಂಕಿಅಂಶಗಳು ಯುವ ಜನರಲ್ಲಿ ಪ್ರಕರಣ ಹೆಚ್ಚಾಗಿರುವುದನ್ನು ತೋರಿಸುತ್ತದೆ.ಇದೀಗ ಕರ್ನಾಟಕದಲ್ಲೂ ಕೂಡ ಅದು ಮಧ್ಯವಯಸ್ಸಿನ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹಾಗೂ ಸಾವು ಕಂಡುಬರುತ್ತಿದೆ ಎಂದು ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ಕಾರ್ಯಕ್ರಮ (NCRP) ಅಂಕಿ ಅಂಶಗಳಿಂದ ತಿಳಿದುಬಂದಿದೆ. https://kannadanewsnow.com/kannada/kalki-dham-will-be-a-big-centre-of-faith-pm-narendra-modi/ ಕರ್ನಾಟಕದಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಮತ್ತು ಮರಣ ಪ್ರಮಾಣ ಎರಡರಲ್ಲೂ ಏರಿಕೆ ದಾಖಲಾಗಿರುವುದು ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ಕಾರ್ಯಕ್ರಮ ಅಂಕಿಅಂಶಗಳಿಂದ ತಿಳಿದುಬಂದಿದೆ. https://kannadanewsnow.com/kannada/girl-death/ ಕೇಂದ್ರ ಆರೋಗ್ಯ ಇಲಾಖೆಯ ಸಹಾಯಕ ಸಚಿವ ಸತ್ಯಪಾಲ್ ಸಿಂಗ್ ಬಾಘೇಲ್ ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆಯ ಅಧಿವೇಶನದಲ್ಲಿ ಹಂಚಿಕೊಂಡ ಮಾಹಿತಿಯ ಪ್ರಕಾರ, ಕರ್ನಾಟಕದಲ್ಲಿ 2023 ರಲ್ಲಿ ಅಂದಾಜು 14,484 ಸ್ತನ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿವೆ. ಅದೇ ರೀತಿ, 5,388 ಸ್ತನ ಕ್ಯಾನ್ಸರ್ ಸಂಬಂಧಿತ ಸಾವುಗಳು ರಾಜ್ಯದಲ್ಲಿ ದಾಖಲಾಗಿವೆ. https://kannadanewsnow.com/kannada/kuvempus-sentence-change-in-residential-school-what-minister-h-c-mahadevappa-said/ ಇವೆರಡೂ ಕಳೆದ ಐದು…
ಬೆಂಗಳೂರು : ಕೊಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ನಡೆದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಕೋಚಿಮುಲ್ ದ ಅಧ್ಯಕ್ಷ, ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡಗೆ ಫೆಬ್ರವರಿ 23ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/update-three-killed-in-perfume-godown-tragedy-3rd-person-identified/ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಜನವರಿ 8ರಂದು ಶಾಸಕ ಕೆ.ವೈ.ನಂಜೇಗೌಡ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ನಂಜೇಗೌಡ ಅವರಿಗೆ ಸೇರಿದ ನಾಲ್ಕು ಕಡೆಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. https://kannadanewsnow.com/kannada/the-work-of-a-woman-who-works-from-home-is-precious-and-priceless-sc/ ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಗ್ರಾಮದಲ್ಲಿರುವ ಮನೆ, ಹುತ್ತೂರು ಹೋಬಳಿ ಕೋಚಿಮುಲ್ ಕಚೇರಿಯಲ್ಲಿ, ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ 23ರಂದು ವಿಚಾರಣೆಗೆ ಹಾಜರಾಗುವಂತೆ ಈಡಿ ಸಮನ್ಸ್ ಜಾರಿ ಮಾಡಿದೆ. https://kannadanewsnow.com/kannada/jammu-modi-visits/
ಬೆಂಗಳೂರು : ಕುಂಬಳಗೋಡಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ ಸಂಭವಿಸಿ ಮೂವರು ಸಜೀವ ದಹನ ವಾಗಿರುವ ಘಟನೆಗೆ ಸಂಬಂಧಿಸಿದಂತೆ ಘಟನೆಯಲ್ಲಿ ಮೃತಪಟ್ಟ ಮೂರನೇ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಚಿಕ್ಕಬಸ್ತಿ ನಿವಾಸಿ ಅರ್ಬಸ್ (14) ಎಂದು ಹೇಳಲಾಗುತ್ತಿದೆ. ಅರ್ಬಸ್ ದಿನಗೂಲಿ 500 ರೂ. ಗೆ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ.ಅಲ್ಲದೆ ಇದೆ ಘಟನೆಯಲ್ಲಿ ಚಾಲಕನಾಗಿದ್ದ ನಾಯಂಡಹಳ್ಳಿ ನಿವಾಸಿಯಾಗಿದ ಮಹಬೂಬ್ ಕೂಡ ಮೃತಾಪಟ್ಟಿದ್ದಾನೆ. ಮೆಹಬೂಬ್ ಚಾಲಕನಾ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.ಮೊದಲ ಬಾರಿಗೆ ಮಹೆಬೂಬ್ ಕಾರ್ಖಾನೆಗೆ ತೆರಳಿದ್ದ ಪರ್ಫ್ಯೂಮ್ ಕಾರ್ಖಾನೆಯಲ್ಲಿ ಖಾಲಿ ಬಾಟಲಿ ಅನ್ ಲೋಡ್ ಮಾಡುತ್ತಿದ್ದ. https://kannadanewsnow.com/kannada/the-work-of-a-woman-who-works-from-home-is-precious-and-priceless-sc/ ಗೋಡನ್ ನೋಡಲು ಮೆಹಬೂಬ್ ಈ ವೇಳೆ ಒಳಗೆ ಹೋಗಿದ್ದ.ಅದೇ ಸಂದರ್ಭದಲ್ಲಿ ಗೋಡೌನ್ ನಿಂದ ಹೊರಗಡೆ ಬರುವಾಗ ಆತನಿಗೆ ಕರೆ ಬಂದಿರುತ್ತೆ. ಗೋಡೌನ್ ನಲ್ಲೆ ಚಾಲಕ ಮೆಹಬೂಬ್ ನಿಂತು ಮಾತನಾಡುತ್ತಿದ್ದ ಏಕಾಏಕಿ ಬೆಂಕಿ ಹೊತ್ತಿಕೊಂಡು ಹೊರಗೆ ಬರಲಾಗದೆ ಮೆಹಬೂಬ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಮಾಲೀಕನ ವಿರುದ್ಧ FIR ಕುಂಬಳಗೋಡಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ ಸಂಭವಿಸಿ…
ಬೆಂಗಳೂರು : ವಿಜಯಪುರ ಜಿಲ್ಲೆಯ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ‘ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ’ ಎಂಬ ಬರಹಕ್ಕೆ ಬದಲಾಗಿ, ‘ಜ್ಞಾನ ದೇಗುಲವಿದು, ದೈರ್ಯವಾಗಿ ಪ್ರಶ್ನಿಸಿ’ ಎಂದು ಬರೆಯಿಸಲಾಗಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ವಿಧಾನಸಭೆಯಲ್ಲಿ ಬಿಜೆಪಿ ಪ್ರಸ್ತಾಪಿಸಲು ಸಜ್ಜಾಗಿದೆ. ಹೌದು ವಿಜಯಪುರ ವಸತಿ ಶಾಲೆಗಳ ಪ್ರವೇಶ ದ್ವಾರಗಳಲ್ಲಿ ಕುವೆಂಪು ಅವರ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎನ್ನುವ ಘೋಷವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯದಿಂದ ಪ್ರಶ್ನಿಸಿ ಬರಹದೊಂದಿಗೆ ಬದಲಾವಣೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಇದೀಗ ಬಿಜೆಪಿಗೆ ವಾಗ್ದಾಳಿ ನಡೆಸಲು ಪ್ರಮುಖ ಅಸ್ತ್ರ ಸಿಕ್ಕಂತಾಗಿದೆ.ಇಂದು ಶೂನ್ಯ ವೇಳೆಯಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ಈ ವಿಷಯವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ. https://kannadanewsnow.com/kannada/historic-bangalore-karaga-mahotsava-to-be-held/ ಘಟನೆ ಹಿನ್ನೆಲೆ? ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ವಿಚಾರವಾಗಿ ಒಂದು ಸುತ್ತೋಲೆ ಹೊರಡಿಸಿ ಅದಿನ್ನೇನು ವಿವಾದ ಆಗುತ್ತಿದ್ದಂತೆಯೇ…
ಕಾರವಾರ : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಾಹಿತಿ, ಪ್ರಕಾಶಕ, ನಾಟಕಕಾರ ಅಂಕೋಲಾದ ವಿಷ್ಣು ನಾಯ್ಕ (79) ಶನಿವಾರ ನಿಧನ ಹೊಂದಿದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾರವಾರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ಅವರ ಪಾರ್ಥಿವ ಶರೀರವನ್ನು ಅಂಬಾರ ಕೊಡ್ಲದ ಅವರ ಪರಿಮಳದ ಮನೆಯಂಗಳ ದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಸಾವಿರಾರು ಜನರು ಅಂತಿಮ ದರ್ಶನ ಪಡೆದರು.ಚುಟುಕು ಬ್ರಹ್ಮ ದಿನಕರ ದೇಸಾಯಿ ಗರಡಿಯಲ್ಲಿ ಪಳಗಿದ ವಿಷ್ಣು ನಾಯ್ಕ ವೃತ್ತಿಯಲ್ಲಿ ಶಿಕ್ಷಕರಾಗಿದ್ದರು. https://kannadanewsnow.com/kannada/do-you-know-in-which-direction-the-plants-that-bring-good-luck-in-the-house-should-be-planted-as-per-vastu/ ಸಾಹಿತ್ಯ ಕೃಷಿಗೆ ಸೀಮಿತವಾಗಿರದೇ ಸ್ವತಃ ನಾಟಕಗಳನ್ನು ಬರೆದು ಅಭಿನಯಿಸಿದ್ದರು. ತಮ್ಮದೇ ಆದ ರಾಘವೇಂದ್ರ ಪ್ರಕಾಶನ ಆರಂಭಿಸಿ ಕನ್ನಡ ಪುಸ್ತಕಗಳನ್ನು ಮುದ್ರಿಸಿದರು. ಪತ್ರಕರ್ತ, ಅಂಕಣಕಾರ, ತಾಳಮದ್ದಳೆ ಅರ್ಥಧಾರಿ, ಸಂಘಟಕರಾಗಿ ಕನ್ನಡ ಭಾಷೆಯ ಉಳಿವು, ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ. https://kannadanewsnow.com/kannada/virat-kohli-and-news-anchor-anjana-om-kashyap-deepfake-video-viral/ ಸರಾಯಿ ಸೂರಪ್ಪ, ಬೋಳುಗುಡ್ಡ, ಬಿನ್ನಹಕೆ ಬಾಯಿಲ್ಲ, ಒಂದು ಹನಿ ರಕ್ತ, ಅಯ್ಯೋರ ಪೂಜೆ, ಸಾವಿನ ಹಾದಿ, ಯುದ್ಧ, ಪ್ರೀತಿ ಜಗತ್ತಿನ ದೊರೆ ಅವರ ಪ್ರಮುಖ…
ವಿಜಯಪುರ : ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ವಿಚಾರವಾಗಿ ಒಂದು ಸುತ್ತೋಲೆ ಹೊರಡಿಸಿ ಅದಿನ್ನೇನು ವಿವಾದ ಆಗುತ್ತಿದ್ದಂತೆಯೇ ವಾಪಸ್ ಪಡೆದಿದ್ದ ಸರ್ಕಾರ ಇದೀಗ ಮತ್ತೊಂದು ಯಡವಟ್ಟು ಮಾಡಿಕೊಳ್ಳಲು ಮುಂದಾಗಿದೆಯಾ ಎಂಬ ಅನುಮಾನ ಸೃಷ್ಟಿಯಾಗಿದೆ. ‘ಓ ಚೇತನ ಆಗೂ ನೀ ಅನಿಕೇತನ’ ಎಂಬ ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ಸಾಹಿತ್ಯವಿದು.ಅದೇ ರೀತಿ ಅವರು ಶಿಕ್ಷಣಕ್ಕೆ ಎಷ್ಟು ಮಹತ್ವ ಕೊಟ್ಟಿದ್ದರು ಎಂಬುದಕ್ಕೆ ‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ’ ಎಂಬ ಬರಹ. ಇದೀಗ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬರಹ ಬದಲಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಜಿಪುರದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ. https://kannadanewsnow.com/kannada/hc-imposes-rs-10000-fine-on-siddaramaiah-sc-to-hear-plea-today/ ಹೌದು ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹ ಬದಲಾಗಿದೆ. ಶಾಲೆಗಳಲ್ಲಿ ರಾಷ್ಟ್ರಕವಿ ಕುವೆಂಪು ಅವರ ಬರಹಕ್ಕೆ ಕೊಕ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಗೋಡೆ ಬರಹದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಬರಬರಹಗಳಿಗೆ ಬದಲಾವಣೆ ರೂಪ…