Author: kannadanewsnow05

ಹುಬ್ಬಳ್ಳಿ : ವ್ಯವಸ್ಥೆ ತುಂಬಾ ಕೆಟ್ಟಿದೆ ಸಚಿವರ ಭ್ರಷ್ಟಾಚಾರ ನೋಡಿ ಏನಪ್ಪಾ ಇದು ಅಂತ ಅನಿಸುತ್ತಿದೆ ಹಾಗಾಗಿ ವ್ಯವಸ್ಥೆ ಸುಧಾರಣೆ ಮಾಡಬೇಕಿದೆ ಎಂದು ಸಚಿವರು ಆರ್.ಬಿ ತಿಮ್ಮಪೂರ್ ತಿಳಿಸಿದರು. ಈ ಒಂದು ಹೇಳಿಕೆ ಮೂಲಕ ತಿಮ್ಮಾಪುರ್ ಅವರು ಮಂತ್ರಿಗಳ ಭ್ರಷ್ಟಾಚಾರವನ್ನು ಒಪ್ಪಿಕೊಂಡರಾ? ಎನ್ನುವ ಪ್ರಶ್ನೆ ಇದೀಗ ಕಾಡುತ್ತಿದೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವ್ಯವಸ್ಥೆ ಕೆಟ್ಟಿದೆ ಸುಧಾರಣೆ ಮಾಡಬೇಕಿದೆ. ಸುಧಾರಣೆ ಮಾಡುವ ಕೆಲಸಕ್ಕೆ ನಾನು ಕೈ ಹಾಕಿದ್ದೇನೆ. ಹೀಗಾಗಿ ನಾವು ಹೊಸ ಯೋಜನೆ ತರಬೇಕಾಗಿದೆ. ಮಂಡ್ಯದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ ಎಂದು ಸಚಿವ ಆರ್ ಬಿ ತಿಮಾಪುರ್ ಭ್ರಷ್ಟಾಚಾರ ನಡೆದಿದ್ದನ್ನು ಒಪ್ಪಿಕೊಂಡ್ರಾ ಎನ್ನುವ ಪ್ರಶ್ನೆ ಮೂಡಿದೆ. ಮಂತ್ರಿಗಳ ಭ್ರಷ್ಟಾಚಾರ ನೋಡಿ ಏನಪ್ಪಾ ಅಂತ ಅನಿಸುತ್ತಿದೆ. ಎಲ್ಲಾ ಮಂತ್ರಿಗಳ ಭ್ರಷ್ಟಾಚಾರ ಇದೆ ವ್ಯವಸ್ಥೆ ಕೆಟ್ಟಿದೆ. ಸುಧಾರಣೆ ಮಾಡಬೇಕಿದೆ ವ್ಯವಸ್ಥೆ ಹಾಗೆ ಇದ್ದರೆ ಟೀಕೆಗಳು ಬರುತ್ತವೆ. ಸುಧಾರಣೆ ಮಾಡುವ ಕೆಲಸಕ್ಕೆ ನಾನು ಕೈ ಹಾಕಿದ್ದೇನೆ ಹೀಗಾಗಿ ಹೊಸ…

Read More

ಕಲಬುರ್ಗಿ : ಬಿಜೆಪಿಯವರು ಕ್ರಿಮಿನಲ್ ಕೆಲಸ ಮಾಡುತ್ತಾರೆ. ಅದಾದ ಮೇಲೆ ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಾರೆ. ಇಂತಹ ಕ್ರಿಮಿನಲ್ ಕೆಲಸಗಳನ್ನು ಮಾಡಿ ಆಮೇಲೆ ಜೈ ಶ್ರೀರಾಮ್ ಎಂದು ಕೂಗಿದರೆ ಮಾಡಿರುವ ಕೆಲಸಗಳು ಮುಚ್ಚಿ ಹೋಗುತ್ತಾ? ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಸ್ವಾಮೀಜಿ ಆದ ತಕ್ಷಣ ಕಾನೂನು ಬರಲ್ವಾ? ಆರ್. ಅಶೋಕ್ ಸ್ವಾಮೀಜಿಯವರಿಗೆ ಈ ನೆಲದ ಕಾನೂನು ಅನ್ವಯ ಆಗಲ್ವಾ? ತಮ್ಮ ಹೇಳಿಕೆಗೆ ಖುದ್ದು ಚಂದ್ರಶೇಖರನಾಥ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ಬಿಜೆಪಿ ಸ್ವಾಮೀಜಿಯವರ ಹೇಳಿಕೆ ಸಮರ್ಥನೆ ಮಾಡಿಕೊಳ್ಳುತ್ತಿದೆ. ನಮಗೆ ಬೇರೆ ಕಾನೂನು ನಿಮಗೆ ಬೇರೆ ಕಾನೂನ? ಬಸವಣ್ಣವರನ್ನು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹೇಡಿ ಅಂತಾರೆ. ಇದಕ್ಕೆ ಬಿಜೆಪಿಯವರು ಏನು ಹೇಳುತ್ತಾರೆ? ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಎಲ್ಲಿದ್ದಾರೆ? ಬಸವಣ್ಣ ಅಂದರೆ ನಿಮಗೆ ಅಲರ್ಜಿನ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಹಣಕಾಸಿನ ವಿಚಾರಕ್ಕೆ ವ್ಯಕ್ತಿಯ ಬರ್ಬರ ಕೊಲೆ ನಡೆದಿದ್ದು, ಮಾರಾಕಸ್ತ್ರಗಳಿಂದ ಕೊಚ್ಚಿ ಹಲ್ಲೆ ಮಾಡಿ ಅಭಿಷೇಕ್ (36) ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಎರಡು ದಿನದ ಹಿಂದೆ ಅಂದ್ರಳ್ಳಿಯ ಶಾಲೆಯ ಬಳಿ ಈ ಒಂದು ಗಲಾಟೆ ನಡೆದಿತ್ತು. ಮಾರಕಾಸ್ತ್ರಗಳಿಂದ ಅಭಿಷೇಕ್ ತಲೆಗೆ ಕಾರ್ತಿಕ್ ಎನ್ನುವವ ಹೊಡೆದಿದ್ದ. ಬಳಿಕ ಗಾಯಗೊಂಡಿದ್ದ ಅಭಿಷೇಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಭಿಷೇಕ್ ಈಗ ಸಾವನಪ್ಪಿದ್ದಾನೆ. ಆರೋಪಿಗಳಾದ ಕಾರ್ತಿಕ್ ಹಾಗೂ ಚೇತನ್ ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ರಾಜ್ಯ ಬಿಜೆಪಿಯ ಆಂತರಿಕ ಹಾಗೂ ಬಣ ಬಡಿದಾಟ ಇದೀಗ ಬೀದಿಗೆ ಬಂದಿದ್ದು, ಒಂದೆಡೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ಮಾಡುತ್ತಿದ್ದರೆ, ಇನ್ನು ಇತ್ತ ಬಿವೈ ವಿಜಯೇಂದ್ರ ಬೆಂಬಲಿಗರಾದಂತಹ ಎಂ.ಪಿ ರೇಣುಕಾಚಾರ್ಯ, ಬಿಸಿ ಪಾಟೀಲ್ ಸೇರಿದಂತೆ ಹಲವರು ಯತ್ನಾಳ್ ವಿರುದ್ಧ ಕಿಡಿ ಕಾರಿದ್ದಾರೆ. ಕಾದು ನೋಡಿ ಯತ್ನಾಳ್ ಪಕ್ಷದಿಂದ ಉಚ್ಚಾಟನೆ ಆಗ್ತಾರೆ ಎಂದು ಹೊಸ ಬಾಂಬ್ ಸಿಡಿಸಿದರು. ಮೈಸೂರಿನಲ್ಲಿ ಎಂಪಿ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದು, ಯತ್ನಾಳ ರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡುತ್ತಾರೆ. ಈ ಕೆಲಸ ಅತಿ ಶೀಘ್ರದಲ್ಲಿ ಆಗುತ್ತದೆ ನಮ್ಮ ಪಕ್ಷದಲ್ಲಿ ಆಂತರಿಕ ಶತ್ರುಗಳ ಸಂಖ್ಯೆ ಜಾಸ್ತಿಯಾಗಿದೆ. ಶತ್ರುಗಳ ನಾಶ ಆಗಲೇಬೇಕು ಅದಕ್ಕಾಗಿ ಪೂಜೆ ಮಾಡಿದ್ದೇವೆ ನಾನು ಸ್ಪಷ್ಟವಾಗಿ ಹೇಳುತ್ತಿದ್ದೇವೆ ಯತ್ನಾಳ್ ಉಚ್ಚಾಟನೆ ಆಗುತ್ತಾರೆ ಎಂದು ಮೈಸೂರಿನಲ್ಲಿ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ತಿಳಿಸಿದರು. ಚಾಮುಂಡೇಶ್ವರಿ ದೇವಿಯಲ್ಲಿ…

Read More

ಚಿಕ್ಕಮಗಳೂರು : ಕಳೆದ ಕೆಲವು ದಿನಗಳ ಹಿಂದೆ ಕಾಫಿನಾಡು-ಕೃಷ್ಣನಗರಿಯಲ್ಲಿ ನಕ್ಸಲರ ಹೆಜ್ಜೆಗುರುತು ಸಿಕ್ಕ 15-20 ದಿನದಲ್ಲೇ ನಕ್ಸಲ್ ನಾಯಕ ವಿಕ್ರಂಗೌಡ ಎಎನ್‌ಎಫ್ (ANF) ಗುಂಡಿಗೆ ಕಾಡಲ್ಲೇ ಹತನಾದ. ಇದೀಗ ಕರ್ನಾಟಕದ ಐವರು ನಕ್ಸಲರಿಗಾಗಿ ಚಿಕ್ಕಮಂಗಳೂರು ಜಿಲ್ಲೆಯ ಸುತ್ತಮುತ್ತ ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದೆ. ಹೌದು ಒಂದೂವರೆ ತಿಂಗಳ ಹಿಂದೆ ಕೇರಳದಿಂದ ಬಂದ ನಕ್ಸಲರು 2 ತಂಡ ಮಾಡಿಕೊಂಡು ಉಡುಪಿ-ಚಿಕ್ಕಮಗಳೂರು ಸೇರಿದ್ದರು. ಮುಂಡಗಾರು ಲತಾ ಕಾಡಲ್ಲಿ ಕಾಣೆಯಾದ ಬೆನ್ನಲ್ಲೇ ವಿಕ್ರಂಗೌಡ ಉಡುಪಿಯಲ್ಲಿ ಎನ್‌ಕೌಂಟರ್ ಆದ. ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದ್ದು, ಕರ್ನಾಟಕದ 5 ನಕ್ಸಲರಿಗಾಗಿ ಇದೀಗ ಶೋಧ ಕಾರ್ಯ ತೀವ್ರಗೊಂಡಿದೆ. ಶೃಂಗೇರಿ ತಾಲೂಕಿನ ಸುತ್ತಿನ ಗುಡ್ಡದಲ್ಲಿ ನಕ್ಸಲರು ಓಡಾಡಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸುತ್ತಿನ ಗುಡ್ಡದಲ್ಲಿ ಇದೀಗ ಅವರು ಸುತ್ತಾಡಿರುವ ಶಂಕೆ ವ್ಯಕ್ತವಾಗಿದ್ದರಿಂದ ಸುತ್ತಿನಗುಡ್ಡ ಕೆರೆಕಟ್ಟೆ ಅರಣ್ಯದಲ್ಲಿ ನಕ್ಸಲೆಗಳಿಗಾಗಿ ಕೋಂಬಿಕಾರ್ಯಚರಣೆ ನಡೆಯುತ್ತಿದೆ ಕಳೆದ ನಾಲ್ಕು ದಿನಗಳಿಂದ ಶೋಧ ಕಾರ್ಯಾಚರಣೆ ನಡೆಸುತ್ತಿದೆ.ವಿಕ್ರಂಗೌಡ ಎನ್‌ಕೌಂಟರ್ ಆದ ಬೆನ್ನಲ್ಲಿ ಮತ್ತೆ ನಕ್ಸಲರ…

Read More

ಬಳ್ಳಾರಿ : ಇತ್ತೀಚಿಗೆ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ಹೆರಿಗೆಗೆ ಎಂದು ದಾಖಲಾಗಿದ್ದ ಗರ್ಭಿಣಿಯರಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಈ ಒಂದು ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಸೂಚಿಸಿತ್ತು. ತನಿಖೆಯಲ್ಲಿ IV ಗ್ಲೋಕೋಸ್ ನಿಂದ ಮೃತ ಪಟ್ಟಿರುವುದಾಗಿ ತಿಳಿದುಬಂದಿತ್ತು. ಇದೀಗ ಮತ್ತೊಂದು ವಿಷಯ ಬಹಿರಂಗವಾಗಿದ್ದು, ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಏಳು ಜನ ಬಾಣಂತಿಯರಲ್ಲಿ ಮೂವರಿಗೆ ಇಲಿ ಜ್ವರ ಕಂಡುಬಂದಿತ್ತು ಎಂದು ತಿಳಿದು ಬಂದಿದೆ. ಹೌದು ಬಳ್ಳಾರಿಯ ಸರ್ಕಾರಿ ಆಸ್ಪತ್ರೆಗೆ ಏಳು ಮಂದಿ ಗರ್ಭಿಣಿಯರು ದಾಖಲಾಗಿದ್ದರು. ಏಳೂ ಮಂದಿ ಗರ್ಭಣಿಯರಿಗೆ ನವೆಂಬರ್​ 9 ರಂದು ಸಿಸೇರಿಯನ್ ಮಾಡಲಾಗಿತ್ತು. ಸಿಸೇರಿಯನ್ ಬಳಿಕ ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗುತ್ತಿತ್ತು. ಆರೋಗ್ಯದಲ್ಲಿನ ಏರುಪೇರಿಂದ ನಾಲ್ವರು ಬಾಣಂತಿಯರು ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಲ್ಲಿ ಇಲಿ ಜ್ವರ ಪತ್ತೆಯಾಗಿದೆ. ಇಲಿ ಜ್ವರದಿಂದ ಇಬ್ಬರು ಗುಣಮುಖರಾಗಿದ್ದು, ಒಬ್ಬರಿಗೆ ಚಿಕಿತ್ಸೆ ಮುಂದೆವರೆದಿದೆ. ಬಾಣಂತಿಯರ ಸಾವಿನ ನಂತರ ಇದರಿಂದ ಎಚ್ಚೆತ್ತ ಸರ್ಕಾರ ನವೆಂಬರ್​ 14 ರಂದು ತನಿಖಾ ತಂಡವನ್ನು ರಚನೆ ಮಾಡಿ ಬಳ್ಳಾರಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿತ್ತು.ಬಳ್ಳಾರಿಗೆ ಬಂದ ತನಿಖಾ…

Read More

ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ನಟನೆಯ ಕಲ್ಟ್ ಚಿತ್ರದ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಎಂಬುವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರು ಮಾಗಡಿ ರಸ್ತೆಯಲ್ಲಿರುವ ಪೊಲೀಸ್ ಠಾಣೆಯಲ್ಲಿ ಚಿತ್ರತಂಡದ ವಿರುದ್ಧ NCR ದಾಖಲಾಗಿದೆ. ನವೆಂಬರ್ 25 ರಂದು ಚಿತ್ರದುರ್ಗದಲ್ಲಿ ಕಲ್ಟ್ ಸಿನಿಮಾ ಶೂಟಿಂಗ್ ಗೆ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಗೆ ದಿನಕ್ಕೆ 25 ಸಾವಿರ ರೂ. ನಿಗದಿ ಮಾಡಿ ಶೂಟ್ ಮಾಡುತ್ತಿದ್ದರು. ಶೂಟಿಂಗ್ ವೇಳೆ ಡ್ರೋನ್ ತುಂಡಾಗಿದ್ದು, ನಷ್ಟ ಭರಿಸದ ಚಿತ್ರದ ನಾಯಕ ಜೈದ್ ಖಾನ್ ಹಾಗು ನಿರ್ದೇಶಕ ಮೇಲೆ ಆರೋಪ ಮಾಡಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಲ್ಟ್ ಚಿತ್ರ ತಂಡದ ವಿರುದ್ಧ ಠಾಣೆಯಲ್ಲಿ NCR ದಾಖಲಾಗಿದೆ. ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಇದೀಗ ಎನ್ ಸಿ ಆರ್ ದಾಖಲಾಗಿದೆ. ಚಿತ್ರತಂಡಕ್ಕೆ ವಿಚಾರಣೆಗೆ ಬರುವಂತೆ ಪೊಲೀಸರು ಇದೀಗ ತಿಳಿಸಿದ್ದಾರೆ. ಮಂಗಳವಾರ…

Read More

ಬೆಳಗಾವಿ : ಕಾಂಗ್ರೆಸ್ ಪಕ್ಷದಲ್ಲಿದ್ದಾಗ ನನಗೆ ಪಕ್ಷ ಯಾವುದೇ ರೀತಿ ಕೆಟ್ಟದ್ದು ಮಾಡಿರಲಿಲ್ಲ. ಆದರೆ ಆ ಪಕ್ಸದಲ್ಲಿದ್ದಾಗ ಒಬ್ಬ ವ್ಯಕ್ತಿಯ ಷಡ್ಯಂತರದಿಂದ ನಾನು ಕಾಂಗ್ರೆಸ್ನಿಂದ ಹೊರಬಂದು ಬಿಜೆಪಿಗೆ ಸೇರಿದ್ದೇನೆ. ಆದರೆ ಬಿಜೆಪಿಯಲ್ಲಿ ಇದ್ದಾಗಲೂ ನನ್ನ ಮೇಲೆ ಷಡ್ಯಂತರ ಮಾಡಿದ್ದರು ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದರು. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿದ್ದಾಗ ಎಲ್ಲರೂ ಸೇರಿ ಷಡ್ಯಂತರ ಮಾಡಿದರಿಂದ ಕಾಂಗ್ರೆಸ್ ಪಕ್ಷದಿಂದ ಹೊರಬಂದೆ. ಬಳಿಕ ಬಿಜೆಪಿ ಸೇರಿಕೊಂಡೆ ಆದರೆ ಬಿಜೆಪಿಯಲ್ಲಿ ಬೆಳೆಯುತ್ತಿದ್ದಂತೆ ಇಲ್ಲೂ ಕೂಡ ಷಡ್ಯಂತರ ಮಾಡಿದರು. ಅದಕ್ಕೂ ನಾನು ಹೆದರಲಿಲ್ಲ ಎಂದು ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಶಾಸಕರ್ಮೇಶ್ ಜಾರಕಿಹೊಳಿ ಹೇಳಿದರು. ಜನರಿಗೆ ಮೋಸ ಮಾಡಿದ್ದರೆ ಹೆದರುತ್ತಿದ್ದೆ ಆದರೆ ಸಿಡಿಗೆ ಹೆದರಲ್ಲ ಎಂದಿದ್ದೆ. ನನಗೆ ಧೈರ್ಯ ಹೇಳಲು ಬಂದಿದ್ದ ಸ್ವಾಮೀಜಿಗಳಿಗೆ ನಾನು ಹೇಳಿದ್ದೆ. ನನ್ನ ವಿರುದ್ಧ ವೈಯಕ್ತಿಕ ಷಡ್ಯಂತರ ನಡೆದಿದೆ ಅಂತ ಹೇಳಿದ್ದೆ. ಒಡೆದು ಆಳುವ ನೀತಿಯಿಂದ ಹಿಂದುಳಿದ ಸಮುದಾಯಗಳಿಗೆ ಧಕ್ಕೆಯಾಗಿದೆ. ಕೊನೆ ಗಳಿಗೆಯಲ್ಲಿ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣೆಯನ್ನು ಡಿಸೆಂಬರ್ 3ಕ್ಕೆ ಮುಂದೂಡಿ ಆದೇಶ ಹೊರಡಿಸಿದರು. ವಿಚಾರಣೆ ಸಂದರ್ಭದಲ್ಲಿ ಈಗಾಗಲೇ ನಟ ದರ್ಶನ್ ಪರ ವಕೀಲ ಸಿ ವಿ ನಾಗೇಶ್ ಅವರು ನಿನ್ನೆ ಸುದೀರ್ಘ ವಾದಂತಹ ವಾದ ಮಂಡನೆ ಮಾಡಿದ್ದರು. ನಿನ್ನೆ ನ್ಯಾಯಾಧೀಶರಾದಂತಹ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶಿಸಿದ್ದರು. ಇಂದು ಕೂಡ ವಿಚಾರಣೆ ನಡೆಸಿದ ಅವರು ಡಿಸೆಂಬರ್ 3ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಆದೇಶಿಸಿದರು. ಈ ಸಂದರ್ಭದಲ್ಲಿ ಆರೋಪಿ ನಾಗರಾಜು ಪರ ವಕೀಲರ ವಾದ ಮಂಡನೆ ಅಂತ್ಯವಾಯಿತು. ಹಾಗಾಗಿ ವಿಚಾರಣೆ ಡಿಸೆಂಬರ್ 3ಕ್ಕೆ ಹೈಕೋರ್ಟ್ ಮುಂದೂಡಿತು. ಇನ್ನೂ ಪವಿತ್ರಗೌಡ ಸೇರಿದಂತೆ ಉಳಿದವರ ಪರ ವಾದ ಮಂಡನೆ ಬಾಕಿ ಇದ್ದು, ಡಿಸೆಂಬರ್ 3ರಂದು ಸರ್ಕಾರದ ಪರವಾಗಿ ಎಸ್.ಪಿ.ಪಿ ವಾದಮಂಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Read More

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಇಂದಿರಾನಗರದ ಅಪಾರ್ಟ್‌ಮೆಂಟ್‌ನಲ್ಲಿ ಅಸ್ಸಾಂ ಮೂಲದ ಯುವತಿ ಮಾಯಾ ಗೊಗಾಯ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಪಟ್ಟಂತೆ ಕೊಲೆ ಆರೋಪಿ ಆರವ್ ಹನೋಯ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ಮಾಯಾಳನ್ನು ಆತನ ಪ್ರಿಯಕರ ಆರವ್ ಅಪಾರ್ಟ್ಮೆಂಟ್ ನಲ್ಲಿ ಚಾಕುವಿನಿಂದ ಭೀಕರವಾಗಿ ಕೊಂದು ಅಲ್ಲಿಂದ ಪರಾರಿಯಾಗಿದ್ದ. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ಇದೀಗ ಹೊರ ರಾಜ್ಯದಲ್ಲಿ ಆತನ ಹೆಡೆಮುರಿ ಕಟ್ಟಿ ರಾಜ್ಯಕ್ಕೆ ಕರೆದುಕೊಂಡು ಬರುತ್ತಿದ್ದು, ವಿಚಾರಣೆಯ ಬಳಿಕವಷ್ಟೇ ಮಾಯಾಳ ಹತ್ಯೆಗೆ ಏನು ಕಾರಣ ಎನ್ನುವುದು ತಿಳಿಯಲಿದೆ . ಕಳೆದ ಕೆಲ ತಿಂಗಳ ಹಿಂದಷ್ಟೇ ಪರಿಚಯವಾಗಿದ್ದ ಇವರಿಬ್ಬರ ನಡುವೆ ಪ್ರೀತಿ ಶುರುವಾಗಿದೆ.ಇದೇ 23 ರಂದು ಇಂದಿರಾನಗರ ಸರ್ವೀಸ್ ಅಪಾರ್ಟ್‌ಮೆಂಟ್‌ಗೆ ಬಂದಿದ್ದರು. ಶನಿವಾರದಿಂದ ಅಪಾರ್ಟ್‌ಮೆಂಟ್‌ನಲ್ಲಿದ್ದ ಆರವ್ ಹನೋಯ್, ಮೂರು ದಿನಗಳ ಅಂತರದಲ್ಲಿ ಮಾಯಾ ಗೊಗಾಯ್‌ಳನ್ನು ಕೊಲೆ ಮಾಡಿದ್ದು, ಬಳಿಕ ಮಂಗಳವಾರ ಬೆಳಗ್ಗೆ 8.19 ಕ್ಕೆ ರೂಂನಿಂದ ಹೊರ ಹೋಗಿದ್ದಾನೆ ಎಂದು ತಿಳಿದು ಬಂದಿತ್ತು. ಇನ್ನು…

Read More