Author: kannadanewsnow05

ಬೆಂಗಳೂರು : ಇತ್ತೀಚಿಗೆ ತಂದೆಯಾದ ಕಾರ್ ಪಡೆಯುತ್ತಿದ್ದಾಗ ಎಕ್ಸೆಲೆಟರ್ ತುಳಿದು, ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಹಾ ಸೋಮಣ್ಣವೆ ಮತ್ತೊಂದು ಘಟನೆ ನಡೆದಿದ್ದು ನೀರಿನ ಸಂಪ್ ನಲ್ಲಿ ಐದು ವರ್ಷದ ಮಗು ಬಿದ್ದು ಸಾವನಪ್ಪಿರುವ ಘಟನೆ ಇದೀಗ ಬೆಂಗಳೂರಿನ ಕೆ ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಸಂಪಿಗೆ ಬಿದ್ದು 5 ವರ್ಷದ ಮಗು ಸಾವನನಪ್ಪಿರುವ ಘಟನೆ ನಡೆದಿದೆ. ನೇಪಾಳ ಮೂಲದ ದಂಪತಿಯ ಪುತ್ರ ಸಬೀನ್ (5) ಸಾವನ್ನಪ್ಪಿರುವ ಮಗು ಎಂದು ತಿಳಿಬಂದಿದೆ. ಬೆಂಗಳೂರಿನಲ್ಲಿ ನೇಪಾಳ ಮೂಲದ ದಂಪತಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹಲ್ಲೆಯ ಯತ್ನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೆ…

Read More

ವಿಜಯಪುರ : ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಈಜು ದುರಂತಗಳಿಂದ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಕೂಡ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. ದೇಶಪಾಂಡೆ ತಾಂಡಾದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಅಮಿತ್ ರಾಠೋಡ್ (12) ಸುದೀಪ ರಾಠೋಡ್ (10) ಸಾವನ್ನುಪ್ಪಿರುವ ಮೃತ ಬಾಲಕರು. ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪ್ರಕಾರಣಕ್ಕೆ ಸಂಬಂಧಿಸಿದಂತೆ ಇದೀಗ ಘಟನೆಯಲ್ಲಿ ಮತ್ತೊರ್ವ ಮಹಿಳೆ ಸಾವನ್ನಪ್ಪಿದ್ದಾಳೆ. ಹೌದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟವಾಗಿದೆ. ಬಾಯ್ಲರ್ ಸ್ಫೋಟದಿಂದ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಸುನಂದಾ ತೇಲಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಗಾಯಾಳುಗಳು ಅಥಣಿ ಮತ್ತು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಗಾಯಗೊಂಡ ಶೋಭಾ ತೇಲಿ ಎನ್ನುವ ಇನ್ನೊರ್ವ ಮಹಿಳೆ ಮಾರ್ಗ ಮಧ್ಯ ಸಾವನ್ನಪ್ಪಿದ್ದಾಳೆ. ಬ್ಲಾಸ್ಟ್ ಆದ ಸ್ಥಳದಲ್ಲಿ ಕೆಲಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದೆ ಘಟನೆ ಕುರಿತಂತೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನಪ್ಪಿದು, ಮೂವರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟವಾಗಿದೆ. ಬಾಯ್ಲರ್ ಸ್ಫೋಟದಿಂದ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಸುನಂದಾ ತೇಲಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಗಾಯಾಳುಗಳು ಅಥಣಿ ಮತ್ತು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಲಾಸ್ಟ್ ಕೆಲಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದೆ ಘಟನೆ ಕುರಿತಂತೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಪ್ರಸಕ್ತ ವರ್ಷದ 5 ತಿಂಗಳಲ್ಲಿ ರಾಜ್ಯದ ಅರಣ್ಯ ಪ್ರದೇಶದಲ್ಲಿ ಆನೆಗಳ ಸಾವು ಹಾಗೂ ವನ್ಯ ಜೀವಿ ಹಾಗೂ ಮಾನವ ಸಂಘರ್ಷದಲ್ಲಿ ಸಾವನ್ನಪ್ಪಿದವರ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿರುವ ಅರಣ್ಯ ಇಲಾಖೆ, ಜನವರಿಯಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ 25 ಆನೆಗಳು ಹಾಗೂ 26 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ರಾಜ್ಯದ ಅರಣ್ಯದಲ್ಲಿ ಸಾವನ್ನಪ್ಪಿರುವ 25 ಆನೆಗಳ ಪೈಕಿ 23 ಆನೆಗಳು ಸ್ವಾಭಾ ವಿಕವಾಗಿ ಸಾವನ್ನಪ್ಪಿದ್ದರೆ, 2 ಆನೆಗಳು ಬೇಟೆ ಅಥವಾ ಬೇರೆ ಕಾರಣದಿಂದ ಅಸಹಜ ಸಾವ ನ್ನಪ್ಪಿವೆ. ವನ್ಯಜೀವಿ ದಾಳಿಯಿಂದ 26 ಜನ ಸಾವನ್ನಪ್ಪಿದ್ದು, ಅದರಲ್ಲಿ ಆನೆ ದಾಳಿಯಿಂದ 22 ಜನ ಮೃತಪಟ್ಟಿದ್ದಾರೆ. ಎಷ್ಟು ಆನೆಗಳ ಸಾವು? ಜನವರಿಯಲ್ಲಿ 2, ಫೆಬ್ರುವರಿಯಲ್ಲಿ 6, ಮಾರ್ಚ್ 8 ಏಪ್ರಿನಲ್ಲಿ 3, ಮೇನಲ್ಲಿ 6, ಸೇರಿದಂತೆ ಒಟ್ಟು ಇಲ್ಲಿಯವರೆಗೆ ಅಂದರೆ ಐದು ತಿಂಗಳಿನಲ್ಲಿ 25 ಆನೆಗಳು ಸಾವನ್ನಪ್ಪಿವೆ ಎಂದು ಅರಣ್ಯ ಇಲಾಖೆ ಬಿಡುಗಡೆ ಮಾಡಿರುವಂತಹ ಅಂಕಿ ಅಂಶಗಳಲ್ಲಿ ಬಹಿರಂಗವಾಗಿದೆ.

Read More

ಬೆಂಗಳೂರು : ಎಂಎಲ್ಸಿ ಟಿಕೆಟ್ ಆಕಾಂಕ್ಷಿ ಗಳಿಗೆ ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದು, ಬಿಳಿ ಜುಬ್ಬಾ ಕಾರು ತೆಗೆದುಕೊಂಡು ಬಂದು ಸ್ಥಾನಕ್ಕೆ ಹೇಳುವುದಲ್ಲ ನಿಮ್ಮ ಬೂತ್ ನಲ್ಲಿ ಲೀಡ್ ಕೊಡಿಸಿ ಬಂದು ನಾಯಕತ್ವ ಕೇಳಿ ಇಲ್ಲ ಜಾಗ ಖಾಲಿ ಮಾಡಿ ಎಂದು ಸರಿಯಾಗಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದಾಗ ಅಧಿಕಾರಕ್ಕೆ ಬಂದಿದ್ದು ಮುಖ್ಯ ಎಂದು ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ ಅದು ಮುಖ್ಯ. ಇದೆ ವೇಳೆ ಎಂಎಲ್‌ಸಿ ಟಿಕೆಟ್ ಆಕಾಂಕ್ಷಿಗಳಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ನಾಲ್ಕು ವೋಟ್ ಕೂಡ ಹಾಕಿಸದೆ ಬಂದು ಸ್ಥಾನ ಕೇಳುತ್ತೀರಾ? ಮೊದಲು ನಿಮ್ಮ ಬೂತ್ ನಲ್ಲಿ ಸಂಘಟನೆ ಮಾಡಿ. ಬಿಳಿ ಜುಬ್ಬಾ ಕಾರು ತೆಗೆದುಕೊಂಡು ಬಂದು ಸ್ಥಾನಕ್ಕೆ ಹೇಳುವುದಲ್ಲ.ನಿಮ್ಮ ಬೂತ್ ನಲ್ಲಿ ಲೀಡ್ ಕೊಡಿಸಿ ಬಂದು ನಾಯಕತ್ವ ಕೇಳಿ ಮೊದಲು ಸಂಘಟನೆ…

Read More

ಕಲಬುರ್ಗಿ : ಸಂಶೋಧನಾ ವಿದ್ಯಾರ್ಥಿಯು ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಹೊರವಲಯದಲ್ಲಿರುವ ಕಡಗಂಚಿ ವಿಶ್ವವಿದ್ಯಾಲಯದ ಹತ್ತಿರ ಇರುವ ಪೆಟ್ರೋಲ್ ಬಂಕ್ ಬಳಿ ಈ ಸಂಶೋಧನಾ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಆನಂದ್ (42) ಎಂದು ಹೇಳಲಾಗುತ್ತಿದ್ದು, ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು ಎಂದು ತಿಳಿದುಬಂದಿದೆ.ವಿಶ್ವವಿದ್ಯಾಲಯದ ಪೆಟ್ರೋಲ್ ಪಂಪ್ ಬಳಿ ಅವರ ಶವ ಪತ್ತೆಯಾಗಿದೆ. ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅವರು ಕನ್ನಡ ವಿಷಯದಲ್ಲಿ ಪಿಹೆಚ್‍ಡಿ ಮಾಡುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ. ಸುದ್ದಿ ತಿಳಿದು ನರೋಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನರೋಣಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

Read More

ಹುಬ್ಬಳ್ಳಿ : ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸನ್ನು ಸಿಐಡಿ ಗೆ ವಹಿಸಿ ಎಂದು ಕಾರ್ಮಿಕ ಸಚಿವ ಸಂತೋಷದ ಆಗ್ರಹಿಸಿದರು. ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಅಂಜಲಿ ಅಂಬಿಗರ ನಿವಾಸಕ್ಕೆ ಭೇಟಿ ನೀಡಿದ ಸಂತೋಷ್ ಲಾಡ್, ನಗರದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸುವಂತೆ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುತ್ತದೆ ಎಂದು ತಿಳಿಸಿದರು. ನನಗೆ ಅನಾರೋಗ್ಯದ ಕಾರಣಕ್ಕೆ ಘಟನೆ ನಡೆದ ದಿನ ಅಂಜಲಿ ನಿವಾಸಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ, ಈ ವಿಷಯದಲ್ಲಿ ಬಿಜೆಪಿಯವರು ನೀಡುತ್ತಿರುವ ಹೇಳಿಕೆಗಳು ಸರಿಯಲ್ಲ. ನಾನು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸುವುದಿಲ್ಲ. ಅವರ ಆರೋಪಕ್ಕೆ ನಾನು ತಕ್ಕ ಉತ್ತರ ನೀಡಿದ್ದೇನೆ ಎಂದು ತಿರುಗೇಟು ನೀಡಿದರು. ನೇಹಾ ಹಿರೇಮಠ ಕೊಲೆ ಘಟನೆ ನಂತರ ಇನ್ನೊಂದು ಅಂತಹದ್ದೆ ಘಟನೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಸಮಾಜದಲ್ಲಿ ಶಾಂತಿ ಕದಡುವ ಹಾಗೂ ಅಹಿತಕರ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ…

Read More

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ್ದು, ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್​ ಇಂದು ಬೆಂಗಳೂರು ಸಿಟಿ ರೌಂಡ್ಸ್​ ಹಾಕಿದ್ದಾರೆ. ಅಲ್ಲದೆ ಇತ್ತೀಚಿಗೆ ಅಪಾರವಾದಂತಹ ಮಳೆ ಆಗಿರುವ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಸಿಟಿ ರೌಂಡ್ಸ್ ಹಾಕಿದರು. ಸಿಲಿಕಾನ್ ಸಿಟಿಯಲ್ಲಿ ಮಳೆ ಹಾನಿ ಪ್ರದೇಶಗಳಿಗೂ ಭೇಟಿ ನೀಡಿದ ಅವರು, ಜೊತೆಗೆ ಕೆ.ಆರ್ ಪುರ ಸಮೀಪದ ಎನ್​ಜಿಎಫ್​​ ಬಳಿ ಸ್ಕೈಡೆಕ್ ಸ್ಥಳ ವೀಕ್ಷಣೆ ಮಾಡಿದ್ದು, ಯಾವುದೇ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಚರಣೆ ಮಾಡುತ್ತೇವೆ. ಖಾಸಗಿ ಬಿಲ್ಡರ್ಸ್ ಹಾಗೂ ಭೂ ಮಾಲೀಕರು ಒತ್ತುವರಿ ತೆರವು ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಂದ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಲೇಔಟ್ ನಿರ್ಮಿಸಿ ಮೂಲಸೌಕರ್ಯ ಒದಗಿಸದವರಿಗೆ ನೋಟಿಸ್ ನೀಡಲಾಗಿದೆ. ಬಿಡಿಎ ಲೇಔಟ್​ಗಳ ಖಾಸಗೀಕರಣ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಬಿಬಿಎಂಪಿ ಮತ್ತು ಬಿಡಿಎಗೆ ಆದಾಯ ಬೇಕಲ್ವಾ. ವಿರೋಧ ಮಾಡೋರು ಮಾಡಲಿ, ಈ ಹಿಂದೆ…

Read More

ದಕ್ಷಿಣಕನ್ನಡ : ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಶಾಲಾ ಕಾಂಪೌಂಡ್ ಕುಸಿದು ಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಸಾವನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ನ್ಯೂಪಡ್ಪು ಶಾಲೆಯಲ್ಲಿ ಈ ಘಟನೆ ನಡೆದಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ನ್ಯೂಪಡ್ಪು ಶಾಲೆಯಲ್ಲಿ ಶಾಲಾ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವನಪ್ಪಿದ್ದಾಳೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಈ ಶಾಲೆಯನ್ನು ಕಟ್ಟಿದ್ದಾರೆ ಎನ್ನಲಾಗುತ್ತಿದೆ.ಗ್ರಾಮದ ಸಿದ್ದಿಕ್ ಜಮೀಲಾ ಪುತ್ರಿ ಶಾಜಿಯ (7) ಸಾವನಪ್ಪಿದ್ದಾಳೆ ಎಂದು ತಿಳಿದುಬಂದಿದೆ. 3ನೇ ತರಗತಿಯಲ್ಲಿ ಮೃತ ವಿದ್ಯಾರ್ಥಿನಿ ಶಾಜಿಯ ಓದುತ್ತಿದ್ದಳು. ಶಾಲೆಯಲ್ಲಿ ಎನ್ಎಸ್ಎಸ್ ಶಿಬಿರದಲ್ಲಿ ವಿದ್ಯಾರ್ಥಿನಿ ಭಾಗಿಯಾಗಿದ್ದಳು. ಆಟವಾಡುತ್ತಿದ್ದಾಗ ಕಾಂಪೌಂಡ್ ಕುಸಿದು ಬಿದ್ದು ಶಾಜಿಯ ದಾರುಣವಾಗಿ ಸಾವನಪ್ಪಿದ್ದಾಳೆ. ನ್ಯೂಪಡ್ಪು ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಶಾಜಿಯಾ ಶಿಬಿರ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿದ್ದಳು. ಬಾಲಕಿಯು ಗೇಟಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಆವರಣ ಗೋಡೆಯು ಆಕೆಯ ಮೇಲೆ ಕುಸಿದು ಬಿದ್ದಿತ್ತು. ಮಳೆಯಿಂದಾಗಿ ಆವರಣಗೋಡೆ ಒದ್ದೆಯಾಗಿತ್ತು ಎಂದು ಸ್ಥಳೀಯರು ಮಾಹಿತಿ…

Read More