Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಅವರು 5 ವರ್ಷಗಳ ಕಾಲ ಅಧಿಕಾರದಲ್ಲಿ ಇರುತ್ತಾರೋ ಇಲ್ಲವೋ ಗೊತ್ತಿಲ್ಲ ಎಂದು ಮುಖ್ಯಮಂತ್ರಿಗಳ ಆಪ್ತ ಸಲಹೆಗಾರ ಹಾಗೂ ಆಳಂದ್ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವಂತಹ ಬಿ ಆರ್ ಪಾಟೀಲ್ ಸ್ಫೋಟಕ ವಾದಂತಹ ಹೇಳಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ. ಆದರೆ, ಅವರು 5 ವರ್ಷ ಇರಬೇಕು ಅಂತಾ ಬಯಸುತ್ತೇವೆ. ಆದರೆ ಹೈಕಮಾಂಡ್ ಏನು ನಿರ್ಧಾರ ಮಾಡುತ್ತೆ ಗೊತ್ತಿಲ್ಲ. ಹೈಕಮಾಂಡ್ ಬೇರೆ ನಿರ್ಧಾರ ತೆಗೆದುಕೊಂಡರೆ ನಾವೇನು ಮಾಡುವುದಕ್ಕೆ ಆಗುತ್ತೆ? ಎಂದು ಅವರು ತಿಳಿಸಿದರು. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಇನ್ನೂ ದೊಡ್ಡ ಜವಾಬ್ದಾರಿ ನೀಡಬಹುದು. ಆದರೆ, ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕು ಅಂತಾ ಯಾವ ಶಾಸಕರ ಮನಸ್ಸಿನಲ್ಲಿ ಇಲ್ಲ ಆದರೆ ಹೈಕಮಾಂಡ್ ಸೂಚನೆ ಬಂದರೆ ಐದು ವರ್ಷ ಅಧಿಕಾರದಲ್ಲಿ ಇರುತ್ತಾರೋ ಇಲ್ಲವೋ ಎನ್ನುವುದು ಗೊತ್ತಿಲ್ಲ ಎಂದು ಬಿ.ಆರ್ ಪಾಟೀಲ್ ತಿಳಿಸಿದರು. ಐದು ಗ್ಯಾರಂಟಿಗಳು ಬಹಳಷ್ಟು ಯಶಸ್ವಿಯಾಗಿ ಅನುಷ್ಠಾನ…
ಮಹಾರಾಷ್ಟ್ರ : ಕರ್ನಾಟಕದಲ್ಲಿ ವಕ್ಫ್ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಿಜೆಪಿ ಹೋರಾಟ ಮತ್ತು ಪ್ರತಿಭಟನೆ ಮಾಡಿದೆ ಇದೀಗ ಬಿಜೆಪಿ ಇನ್ನೊಂದು ಟೀಮ್ ಆದಂತಹ ಶಾಸಕ ಬಸನಗೌಡ ಪಾಟೀಲ ಮತ್ತೊಂದು ಟೀಮ್ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ. ರಾಜ್ಯ ಆಗೋದೆಲಿ ಮಟ್ಟದಲ್ಲೂ ಬಿಜೆಪಿ ವಕ್ಫ್ ಮಂಡಳಿ ವಿರುದ್ಧ ಹೋರಾಟ ನಡೆಸುತ್ತಿದ್ದರೆ ಅತ್ತ ಮಹಾರಾಷ್ಟ್ರದಲ್ಲಿ ಮಹಾಯುತಿಯು ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಅನುದಾನ ನೀಡಿದೆ. ಹೌದು ಮಹಾರಾಷ್ಟ್ರದಲ್ಲಿ ಮಹಾಯುತಿಯು ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದೆ. 10 ಕೋಟಿ ರೂಪಾಯಿ ಅನುದಾನ ನೀಡಲು ಮಹಾಯುತಿ ನಿರ್ಧಾರಿಸಿದೆ. ಇತ್ತ ಕರ್ನಾಟಕ ದೆಹಲಿ ಸೇರಿದಂತೆ ಹಲವಡೆ ವಕ್ಫ್ ವಿರುದ್ಧ ಪ್ರತಿಭಟಿಸುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಅನುದಾನ ಘೋಷಣೆ ಮಾಡಲಾಗಿದೆ. ಬಿಜೆಪಿಯ ನೇತೃತ್ವದ ಮಹಾಯುತಿ ಅನುದಾನ ಘೋಷಿಸಿದೆ. ಮಹಾರಾಷ್ಟ್ರದಲ್ಲಿ ಈ ಒಂದು ನಿರ್ಧಾರವು ಕಾಂಗ್ರೆಸ್ ಗೆ ಪ್ರಬಲ ಅಸ್ತ್ರ ವಾಗುವ ಸಾಧ್ಯತೆ ಇದೆ ಎನ್ನಲಾಗಿದೆ ಏಕೆಂದರೆ ಕರ್ನಾಟಕ ಸಿರಿದಂತೆ ದೆಹಲಿ ಮಟ್ಟದವರೆಗೂ ಬಿಜೆಪಿ…
ಮಂಡ್ಯ : ಇತ್ತೀಚಿಗೆ ಬೆಂಗಳೂರು ನಗರದಲ್ಲಿ ಚಿರತೆಯ ಕಾಟದಿಂದ ಜನರು ಭಯಭರಿತರಾಗಿದ್ದರು. ಕೂಡಲೆ ಅರಣ್ಯ ಅಧಿಕಾರಿಗಳು ಮೂರು ಚಿರತೆಗಳನ್ನು ಸೆರೆ ಹಿಡಿದು ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ದಿಗ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗಾಧರ ನಗರದಲ್ಲಿ ಚಿರತೆಯೊಂದು ರಾತ್ರಿಯ ವೇಳೆ ನಾಯಿಯನ್ನು ಹೊತ್ತೊಯ್ದು ಕೊಂಡಿರುವ ಘಟನೆ ನಡೆದಿದೆ. ಹೌದು ಮನೆ ಕಾಯುತ್ತಿದ್ದ ನಾಯಿಯನ್ನೇ ಹೊತ್ತುಕೊಂಡು ಹೋದ ಚಿರತೆ ಮಂಡ್ಯದ ಗಂಗಾಧರ ನಗರದ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಚಿರತೆ ದಾಳಿ ಮಾಡಿರುವಂತಹ ಸಿಸಿಟಿವಿಯಲ್ಲಿ ಸೆರಿಯಾಗಿದೆ. ಮಂಡ್ಯದ ನಾಗಮಂಗಲ ತಾಲೂಕಿನ ಗಂಗಾಧರ ನಗರದಲ್ಲಿ ನಡೆದಿದೆ. ಪದೇ ಪದೇ ಈ ಗ್ರಾಮದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ ಹಸು, ನಾಯಿಗಳ ಮೇಲೆ ಈಗಾಗಲೇ ಚಿರತೆ ಹಲವು ಬಾರಿ ದಾಳಿ ಮಾಡಿದೆ. ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು ಕೂಡ ಅವರು ನಿರ್ಲಕ್ಷ ತೋರಿದ್ದಾರೆ. ನಿನ್ನೆ ಮತ್ತೆ ಗ್ರಾಮಕ್ಕೆ ನುಗ್ಗಿ ನಾಯಿಯನ್ನು ಹೊತ್ತೋಯ್ದುಕೊಂಡಿದೆ. ರಾಮದಾಸ ಎನ್ನುವವರ ಮನೆಯ ನಾಯಿಯನ್ನು ಚಿರತೆ ಎಳೆದೋಯಿದಿದೆ.
ನವದೆಹಲಿ : ಕಳೆದ ಕೆಲವು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಅವರು, ಎರಡು ವರ್ಷಗಳ ಬಳಿಕ ಹುದ್ದೆ ತ್ಯಾಗ ಮಾಡಬೇಕಾಗುತ್ತದೆ ಎಂದು ಸಂಪುಟ ಪುನಾರಚನೆ ಕುರಿತಂತೆ ಸುಳಿವು ನೀಡಿದ್ದರು. ಇದೀಗ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಂಪುಟ ಪುನಾರಚನೆ ಕುರಿತಂತೆ ಸದ್ಯಕ್ಕೆ ಯಾವುದೇ ಚರ್ಚೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದರು. ಇಂದು ನವದೆಹಲಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಸಚಿವ ಸಂಪುಟ ಪುನರಚನೆ ಬಗ್ಗೆ ಯಾವುದೇ ಚರ್ಚೆ ಇಲ್ಲ. ಸಂಪುಟ ಪುನಾರಚನೆ ಸಂದರ್ಭ ಬಂದಿಲ್ಲ. ಕಾಂಗ್ರೆಸ್ ಅಧಿವೇಶನದ ಬಗ್ಗೆ ಖರ್ಗೆ ಜೊತೆಗೆ ಚರ್ಚೆ ನಡೆಸಿದ್ದೇವೆ. ಬೆಳಗಾವಿಯಲ್ಲಿ ಅಧಿವೇಶನ ಮಾಡಬೇಕು ಎಂಬ ಮನವಿ ಮಾಡಿದ್ದೇವೆ. ಅಲ್ಲದೆ ಇವತ್ತು CWC ಸಭೆಯಲ್ಲಿ ಚರ್ಚೆ ಆಗಲಿದೆ. ಇನ್ನು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ವಿಚಾರವಾಗಿ ಮಾಧ್ಯಮದ ಮೂಲಕ ರಾಜಕೀಯ ನಡೆಯಲ್ಲ ಎಂದು ತಿಳಿಸಿದರು. ಇನ್ನು ಡಿಸೆಂಬರ್ 5 ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸ್ವಾಭಿಮಾನ ಸಮಾವೇಶ ಹಮ್ಮಿಕೊಂಡಿದ್ದಾರೆ.ಈ ಕುರಿತು ರಾಜ್ಯದ ಕೆಲ…
ಬೆಂಗಳೂರು : ಡಿಸೆಂಬರ್ 5 ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಈ ಒಂದು ಸ್ವಾಭಿಮಾನಿ ಸಮಾವೇಶಕ್ಕೆ ಕೆಲ ರಾಜ್ಯ ಕಾಂಗ್ರೆಸ್ ನಾಯಕರು ಇದೀಗ ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪತ್ರ ಬರೆದು ಪಕ್ಷದ ಚಿಹ್ನೆ ಬಳಸಿ ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ನಡೆಸಲು ಮನವಿ ಮಾಡಿದ್ದಾರೆ. ಹೌದು AICC ನಾಯಕರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಇದೀಗ ದೂರು ನೀಡಿದ್ದಾರೆ. ಪತ್ರದಲ್ಲಿ ಹೆಸರನ್ನು ಮರೆಮಾಚಿಸಿ ನಾಯಕರಿಗೆ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಪರ ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ. ಪಕ್ಷದ ವೇದಿಕೆಯಿಂದ ಹೊರತಾದ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ. ಇಲ್ಲಿ ಆಯೋಜಕರೆಲ್ಲ ಪಕ್ಷದ ಸಚಿವರು, ಪಕ್ಷದ ಶಾಸಕರು, ಮುಖಂಡರೆ ಇದ್ದಾರೆ. ಆದರೂ ಯಾಕೆ ಕಾಂಗ್ರೆಸ್ ಪಕ್ಷದ ಚಿನ್ಹೆಯ ಮೇಲೆ ಸಮಾವೇಶ ಮಾಡುತ್ತಿಲ್ಲ. ವೈಯಕ್ತಿಕ ಬಲಪ್ರದರ್ಶನಕ್ಕೆ ಪಕ್ಷದ ನಾಯಕರನ್ನು ಬಳಸಿಕೊಳ್ಳಲಾಗುತ್ತಿದ್ದು,ಅಧಿಕಾರ ಕೊಟ್ಟ ಪಕ್ಷ ದೂರ ಬಿಟ್ಟು ಸಮಾವೇಶ ಮಾಡುವ ಉದ್ದೇಶವೇನು? ಸ್ವಾಭಿಮಾನ ಸಮಾವೇಶವನ್ನು ಪಕ್ಷದ…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ವಾರಾಹಿ ದೇವಿಯ ಶಕ್ತಿ ತುಂಬಿದ ತಾಯಿತ ಬೇಕಾದಲ್ಲಿ ಸಂಪರ್ಕಿಸಿ ಪ್ರಯೋಜನಗಳು 1. ಶತ್ರುಗಳು, ದುಷ್ಟ ಕಣ್ಣು, ಬೂತ್ ಪ್ರೇತ್ ಇತ್ಯಾದಿಗಳಿಂದ ಸಂಪೂರ್ಣ ರಕ್ಷಣೆ. 2. ಭೂಮಿ, ಮನೆ ಮತ್ತು ಪೂರ್ವಜರ ಆಸ್ತಿಗಳಿಗೆ ಸಂಬಂಧಿಸಿದ ವಿವಾದಗಳು ಕೊನೆಗೊಳ್ಳುತ್ತವೆ 3. ವಾಹನಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲಾಗುವುದು 4. ಕುಟುಂಬ ಸದಸ್ಯರ ನಡುವಿನ ಜಗಳಗಳು ಬಗೆಹರಿಯಲಿವೆ 4. ಪೊಲೀಸ್ ಕೋರ್ಟ್/ನ್ಯಾಯಾಲಯದ ಪ್ರಕರಣಗಳು ಕೊನೆಗೊಳ್ಳುವಾದಕ್ಕೆ ವಾರಾಹಿ ಯಂತ್ರ ವರಾಹಿ ಮಾತೃಕೆಗಳಲ್ಲಿ ಒಂದಾಗಿದೆ, ಹಿಂದೂ ಪುರಾಣಗಳಲ್ಲಿ ಉಗ್ರ ದೇವತೆಗಳ ಗುಂಪು. ರಕ್ಷಣೆ, ಶಕ್ತಿ ಮತ್ತು ಸಮೃದ್ಧಿಗೆ ಸಂಬಂಧಿಸಿದ ಪ್ರಬಲ ದೇವತೆ ಎಂದು ಪರಿಗಣಿಸಲಾಗಿದೆ.ಇದನ್ನು ಸಾಮಾನ್ಯವಾಗಿ ತಾಮ್ರದ ಲೋಹದಿಂದ ತಯಾರಿಸಲಾಗಿದೆ. ಶ್ರೀಗಂಧದ ಪೇಸ್ಟ್ , ಅರಿಶಿನ ಪುಡಿಯಂತಹ ವಿವಿಧ 108 ಗಿಡಮೂಲಿಕೆ ವಸ್ತುಗಳನ್ನು ಬಳಸಿ ಲೇಪನ ಮಾಡಿ ಪ್ರಾಣ ಪ್ರತಿಷ್ಟಾಪನೆ ಮತ್ತು ಜೀವಕಳೆ ನೀಡಲಾಗಿದೆ. ವರಾಹಿಯ ಭಕ್ತರು ವರಾಹಿ ಯಂತ್ರವನ್ನು…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ತಾವರೆ ಮಾಲೆ 108 ಮಣಿಗಳು : ಈ ಕಮಲದ ಮಣಿಗಳು ಪ್ರಕೃತಿಯ ಅದ್ಭುತ ಕೊಡುಗೆಗಳಲ್ಲಿ ಒಂದಾಗಿದೆ, ಈ ಕಮಲದ ಬೀಜಗಳನ್ನು ಕುಬೇರ ಬೀಜಗಳು ಎಂದು ಕರೆಯಲಾಗುತ್ತದೆ. ಈ ಕಮಲದ ಬೀಜಗಳಲ್ಲಿ ಮಹಾಲಕ್ಷ್ಮಿ ದೇವಿ ನೆಲೆಸಿದ್ದಾಳೆ ಎಂಬ ಪ್ರತೀತಿ ಇದೆ. ತಾವರೆ ಮಾಲೆಯನ್ನು ಕಮಲ ಕಟ್ಟ ಮಾಲಾ, ಪದ್ಮ ಮಾಲಾ, ಲಕ್ಷ್ಮೀದೇವಿ ಅನುಗ್ರಹ ಮಾಲಾ ಎಂದು ಕರೆಯಲಾಗುತ್ತದೆ. ಕೈಯಲ್ಲಿ ಹಣನಿಲ್ಲದೆ ಇರುವವರು ತಾವರೆ ಮಾಲೆಯೊಂದಿಗೆ ಜಪಮಾಡಿ ಅದನ್ನು ಧರಿಸುವುದರಿಂದ ಸಂಪತ್ತು, ಧನ ಅಭಿವೃದ್ಧಿ ಪಡೆಯಬಹುದು.ಕಮಲದ ಮಣಿ ಧನಾತ್ಮಕ ಶಕ್ತಿಯನ್ನು ಹೊಂದಿದೆ. ಕಮಲದ ಮಣಿ ಧನವನ್ನು ಆಕರ್ಷಿಸುತ್ತದೆ.ತಾವರೆ ಮಾಲೆಯನ್ನು ಧರಿಸುವವರು ಮಾನಸಿಕ ಸಂಯಮ, ಏಕಾಗ್ರತೆ ಮತ್ತು ಒಳ್ಳೆ ವಿವೇಚನ ಶಕ್ತಿ, ಸಾತ್ವಿಕ ಗುಣಗಳನ್ನು ಹೊಂದಿರುತ್ತಾರೆ. ಮಾಲೆಯನ್ನು ಧರಿಸುವುದರಿಂದ ದೇಹದಲ್ಲಿ ವಿದ್ಯುತ್ ಶಕ್ತಿಯು ನೆಲೆಗೊಳ್ಳುತ್ತದೆ. ಇದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆಧ್ಯಾತ್ಮಿಕ ಚಿಂತಕರು ಪ್ರಧಾನ್…
ಯಾದಗಿರಿ : ವೇಗವಾಗಿ ಬಂದಂತಹ ಕಾರೊಂದು ಹಿಂದಿನಿಂದ ಬೈಕಿಗೆ ಗುದ್ದಿದ್ದ ಪರಿಣಾಮ ಬೈಕ್ ಮೇಲೆ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪುರ್ ತಾಲೂಕಿನ ಮದ್ರಕಿ ಎಂಬಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರನ್ನು ಅಲಿಯೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸವಾರರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಹಳ್ಳಪ್ಪ ದೊಡ್ಡನಂದಪ್ಪ, ಹಾಗೂ ಮಲ್ಲಯ್ಯ ಹನುಮಂತ್ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.ಅಪಘಾತದ ಬಳಿಕ ಕಾರು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಭೀಮರಾಯನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು. ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿಯನ್ನು ಹೇರುವುದು ಅವರ ಉದ್ದೇಶವಾಗಿದ್ದರೆ ಕರ್ನಾಟಕ ಬಿಟ್ಟು ತೊಲಗಲಿ. ನಿಮ್ಮ ಅವಶ್ಯಕತೆ ನಮಗಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಮಾತನಾಡಿದ ಅವರು, ಆರ್ ಸಿಬಿಯನ್ನು ಕನ್ನಡಿಗರು ಮೊದಲಿನಿಂದಲೂ ಬೆಂಬಲಿಸಿಕೊಂಡು ಬಂದಿದ್ದಾರೆ. ಆರ್ ಸಿಬಿಗೆ ಇರುವಷ್ಟು ಅಭಿಮಾನಿಗಳು ಇನ್ಯಾವ ತಂಡಕ್ಕೂ ಇಲ್ಲ. ಹೀಗಾಗಿಯೇ ಅದರ ಆದಾಯ ವರ್ಷವರ್ಷಕ್ಕೂ ಹೆಚ್ಚುತ್ತಲೇ ಇದ್ದು, ಒಮ್ಮೆಯೂ ಕಪ್ ಗೆಲ್ಲದಿದ್ದರೂ ಮೂರನೇ ಶ್ರೀಮಂತ ತಂಡವಾಗಿದೆ. ಇದಕ್ಕೆ ಕಾರಣ ಕನ್ನಡಿಗರು ಎಂಬುದನ್ನು ಅದು ಮರೆತಿದೆ. ಆರ್ ಸಿಬಿ ಹಿಂದಿಯಲ್ಲಿ ಪುಟವನ್ನು ತೆರೆಯುವ ಮೂಲಕ ಕನ್ನಡಿಗರನ್ನು ಅಪಮಾನಿಸುತ್ತಿದೆ. ತಂಡದಲ್ಲಿ ಇತರ ರಾಜ್ಯಗಳ ಆಟಗಾರರಿದ್ದಾರೆ ಎಂಬ ಕಾರಣಕ್ಕೆ, ಹೊರರಾಜ್ಯಗಳಲ್ಲೂ ಅಭಿಮಾನಿಗಳಿದ್ದಾರೆ ಎಂಬ ಕಾರಣಕ್ಕೆ ಹಿಂದಿಯಲ್ಲಿ ಪುಟ ತೆರೆದಿರುವುದಾದರೆ, ದೇಶದ ಎಲ್ಲ ಭಾಷೆಗಳಲ್ಲೂ…
ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ದೆಹಲಿ ಮೂಲದ ಯುವತಿಯೊಬ್ಬಳು ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದೀಗ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಪದವಿ ಓದುತ್ತಿರುವ ಯುವತಿ ಒಬ್ಬಳು ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಜಾಜಿನಗರದ ರಾಮಮಂದಿರ ಬಳಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಾಜಿನಗರದ ರಾಮಮಂದಿರ ಬಳಿ ನಡೆದಿದೆ. ಮನೆಯ ಟೆರೆಸ್ ನಲ್ಲಿ ಪ್ರಿಯಾಂಕ (19) ಎನ್ನುವ ಯುವತಿ ನೇಣಿಗೆ ಶರಣಾಗಿದ್ದಾಳೆ. ಎಂ ಇ ಎಸ್ ಕಾಲೇಜಿನಲ್ಲಿ ಪ್ರಿಯಾಂಕ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದಳು. ಖಿನ್ನತೆಗೆ ಒಳಗಾಗಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರಾಜಾಜಿನಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.













