Author: kannadanewsnow05

ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜ ಗೌಡರನ್ನು ಇದೀಗ ಎಸ್ಐಟಿ ಅಧಿಕಾರಿಗಳು ಹಾಸನದ 5 ನೇ ಸಿವಿಲ್ ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ದೇವರಾಜೇಗೌಡ ನನ್ನು ಒಂದು ದಿನ ಎಸ್ಐಟಿ ವಶಕ್ಕೆ ಕೋರ್ಟ್ ನೀಡಿತ್ತು. ಇದೀಗ ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ದೇವರಾಜೆಗೌಡನನ್ನು ಕೋರ್ಟಿಗೆ ಕರೆತಂದಿದ್ದಾರೆ ಲ್.ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟಿಗೆ ಎಸ್ಐಟಿ ಅಧಿಕಾರಿಗಳು ಕರೆತಂದಿದ್ದಾರೆ. ಹಾಗಾಗಿ ಹಾಸನ ನ್ಯಾಯಾಲಯದ ಆವರಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Read More

ಬೆಂಗಳೂರು : ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದೇವರಾಜ ಗೌಡ ಡಿಕೆ ಶಿವಕುಮಾರ್ ನನಗೆ ಮೋದಿ ಬಿಜೆಪಿ ಹಾಗೂ ಹೆಚ್‍ಡಿ ಕುಮಾರಸ್ವಾಮಿಗೆ ಕೆಟ್ಟ ಹೆಸರು ಬರಲು 100 ಕೋಟಿ ಆಫರ್ ನೀಡಿದ್ದರು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬಾಯಿ ದೇವರಾಜೇಗೌಡನದ್ದು, ಮಾತು ಬ್ರದರ್ ಸ್ವಾಮಿಗಳದ್ದು ಎಂದು ಪರೋಕ್ಷವಾಗಿ ಹೆಚ್‍ಡಿ ಕುಮಾರಸ್ವಾಮಿ ಹಾಗೂ ಹೆಚ್ ಡಿ ರೇವಣ್ಣ ಕುರಿತು ವ್ಯಂಗ್ಯವಾಡಿದೆ. ಟ್ವೀಟ್ ಮೂಲಕ ವ್ಯಂಗ್ಯವಾಡಿದ ಕಾಂಗ್ರೆಸ್ ದೇವರಾಜೇಗೌಡನ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ. ದಿನಕ್ಕೊಂದು ಮಾತಾಡುವ ದೇವರಾಜೇಗೌಡ ಮಹಿಳೆಯರ ಮಾನ ಕಳೆದ ಪ್ರಕರಣವನ್ನು ಬೇರೆಡೆಗೆ ತಿರುಗಿಸಿ, ರಾಜಕೀಕರಣಗೊಳಿಸಿ ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿದ್ದಾರೆ ಎಂದು ತಿಳಿಸಿದೆ. SIT ಅಧಿಕಾರಿಗಳು ದೇವರಾಜೇಗೌಡರಿಗೆ ಮಾನಸಿಕ ಚಿಕೆತ್ಸೆ ಕೊಡಿಸುವುದು ಒಳ್ಳೆಯದು ಬ್ರದರ್ ಸ್ವಾಮಿಗಳು ಹೇಳಿಕೊಟ್ಟ ಮಾತನ್ನು ದೇವರಾಜೇಗೌಡ ಆಡಿದ್ದಾರೆ, ಆತನ ಬಾಯಲ್ಲಿ ಬರುವ ಪ್ರತಿ ಮಾತುಗಳಲ್ಲೂ “ದೊಡ್ಡವರ“ ಚಿತಾವಣೆ ಇರುತ್ತದೆ ಎಂದು ಹೇಳಿದೆ. ಬಾಯಿ ದೇವರಾಜೇಗೌಡನದ್ದು, ಮಾತು…

Read More

ಕೊಪ್ಪಳ : ಹಾಸನದಲ್ಲಿ ನಾಲ್ವರು ಮಕ್ಕಳು ಹಾಗೂ ರಾಮನಗರದಲ್ಲಿ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಬೆನ್ನಲ್ಲೇ, ಇದೀಗ ಕೊಪ್ಪಳದಲ್ಲಿ ಕೂಡ ಒಂದು ಘಟನೆ ನಡೆದಿದ್ದು, ಸ್ನೇಹಿತರ ಜೊತೆಗೆ ತೆರಳಿದ ಯುವಕನೊಬ್ಬ ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಕೆರೆಯಲ್ಲಿ ನಡೆದಿದೆ. ಸಾಣಾಪುರ ಕೆರೆಯಲ್ಲಿ ಮಂಜುನಾಥ್ (19) ಎನ್ನುವ ಯುವಕ ನೀರು ಪಾಲಾಗಿರುವ ಘಟನೆ ನಡೆದಿದೆ.ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಕೆರೆಯಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ ಶವಕ್ಕಾಗಿ ಇದೀಗ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮಹಾಕದನ ನಡೆಯಲಿದೆ. ಹಾಗಾಗಿ ಇಂದು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಲೂ ಪಾರ್ಕಿಂಗ್ ಅನ್ನು ನಿಷೇಧಿಸಲಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಲೂ ಪಾರ್ಕಿಂಗ್ ನಿಷೇಧ ಮಾಡಿದ್ದೂ, ಮಧ್ಯಾಹ್ನ 3 ರಿಂದ ರಾತ್ರಿ 11:00 ವರೆಗೆ ಇದೀಗ ಪಾರ್ಕಿಂಗ್ ನಿಷೇಧಿಸಲಾಗಿದೆ. ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಕಬ್ಬನ್ ರಸ್ತೆ, ರಾಜಭವನ, ಮ್ಯೂಸಿಯಂ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ತ್ರಿನಿಟಿ ಲೆವೆಲ್ಲಿ ರಸ್ತೆ ಹಾಗೂ ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಇನ್ನು ಮ್ಯಾಚ್ ನೋಡಲು ಬರುವವರಿಗೆ ಬೇರೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಶಿವಾಜಿನಗರ ಬಸ್ ನಿಲ್ದಾಣದ ಮೊದಲ ಮಹಡಿಯ ಸೇರಿದಂತೆ ಹಲವು ಬೇರೆ ಬೇರೆ ಪ್ರದೇಶಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಒಂದೆಡೆ ಆರ್‌ಸಿಬಿ ಹಾಗೂ ಸಿಎಸ್‌ಕೆ ಪಂದ್ಯ ಬಹಳ ರೋಚಕ ಹಾಗೂ ಕುತೂಹಲ ಮೂಡಿಸಿದ್ದು, ಇನ್ನೊಂದಡೆ ಬೆಂಗಳೂರಿನಲ್ಲಿ ಮಳೆರಾಯನ ಭೀತಿ ಕೂಡ…

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಸುಕಿನ ಜಾವ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹುಬ್ಬಳ್ಳಿಯಲ್ಲಿ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿದ್ದು ಅಂಜಲಿ ಕುಟುಂಬಕ್ಕೆ ಒಂದು ವೇಳೆ ಸರ್ಕಾರದಿಂದ ಪರಿಹಾರ ದೊರಕದೇ ಹೋದರೆ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪರಿಹಾರಕ್ಕಾಗಿ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು ಸುದ್ಧಿಗಾರರೊಂದಿಗೆ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿದ್ದು, ಹುಬ್ಬಳ್ಳಿಯಲ್ಲಿ ಎರಡು ಅಮಾನುಷ ಕೃತ್ಯಗಳು ನಡೆದಿದೆ.ಈ ಘಟನೆಯಿಂದ ಸಮಾಜ ಕಾನೂನು ತಲೆತಗ್ಗಿಸುವಂತೆ ಆಗಿದೆ.ಕಾನೂನಿನ ಬಗ್ಗೆ ಭಯ ಇಲ್ಲವಾಗಿದೆ.ಹೋರಾಟ ಹತ್ತಿಕ್ಕಲು ಮಾತ್ರ ಪೊಲೀಸ್ ಇಲಾಖೆ ಇದೆ.ಅನ್ಯಾಯ ಹಕ್ಕಿಗೂ ಕೆಲಸ ಪೊಲೀಸ ಇಲಾಖೆ ಮಾಡುತ್ತಿಲ್ಲ ಎಂದರು. ನೇಹಾ ಕೊಲೆ ಬಳಿಕ ರಾಜ್ಯ ಸರ್ಕಾರ ಸೂಕ್ತ ಕಾನೂನು ತಂದಿಲ್ಲ ಅಂಜಲಿ ಕುಟುಂಬಸ್ಥರಿಗೆ ಪರಿಹಾರ ಮನೆ ಸರ್ಕಾರಿ ನೌಕರಿ ನೀಡಬೇಕು ಆರೋಪಿಗೆ ಮರಣದಂಡನೆ ವಿಧಿಸಬೇಕು ಅಂಜಲಿ ಕುಟುಂಬಕ್ಕೆ ಪರಿಹಾರ ಸಿಗದಿದ್ದರೆ ಸಿಎಂ ಭೇಟಿಯಾಗಿ ಮನವಿ ಸಲ್ಲಿಸಲಾಗುತ್ತದೆ ಅದು ಹುಬ್ಬಳ್ಳಿಯಲ್ಲಿ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ…

Read More

ತುಮಕೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಹಾಗೂ ಎಚ್ ಡಿ ರೇವಣ್ಣ ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಗುಬ್ಬಿ ಶಾಸಕ ಹೆಸರಿನಿವಾಸ ಪ್ರತಿಕ್ರಿಯೆ ನೀಡಿದ್ದು ಈ ಒಂದು ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣನನ್ನು ಕುಟುಂಬಸ್ಥರೇ ಫ್ಲೈಟ್ ಬುಕ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಗಂಭೀರವಾದ ಆರೋಪ ಮಾಡಿದರು. ತುಮಕೂರಿನಲ್ಲಿ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಸುದ್ಧಿಗಾರರೊಂದಿಗೆ ಮಾತನಾಡಿ, ಪ್ರಜ್ವಲನ್ನು ಕುಟುಂಬಸ್ಥರೇ ಫ್ಲೈಟ್ ಬುಕ್ ಮಾಡಿ ಕಳುಹಿಸಿದ್ದಾರೆ.ಎಚ್ ಡಿ ದೇವೇಗೌಡ, ಎಚ್ ಡಿ ಕುಮಾರಸ್ವಾಮಿ ಹಾಗೂ ರೇವಣ್ಣ ಫ್ಲೈಟ್ ಬುಕ್ ಮಾಡಿ ಕಳುಹಿಸಿದ್ದಾರೆ.ಪ್ರಜ್ವಲ್ ರೇವಣ್ಣ ಎಲ್ಲಿದ್ದಾನೆಂದು ದೇವೇಗೌಡರ ಕುಟುಂಬಕ್ಕೆ ಗೊತ್ತಿದೆ ಎಂದರು. ವಿದೇಶಕ್ಕೆ ಕಳುಹಿಸಿದವರು ಯಾರು? ಇದೆಲ್ಲಾ ಕುಮಾರಸ್ವಾಮಿ ನಾಟಕ. ಕಾನೂನಿನಲ್ಲಿ ಏನು ಶಿಕ್ಷೆ ಆಗಬೇಕು ಅಂತ ಸಂವಿಧಾನದಲ್ಲಿ ಬರೆದಿದ್ದಾರೆ.ಪ್ರಜ್ವಲ್ ಗೆ ಅದೇ ಶಿಕ್ಷೆ ಆಗಲೆಂದು ನಾನು ಕೂಡ ಒತ್ತಾಯ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.

Read More

ಹುಬ್ಬಳ್ಳಿ : ಇತ್ತೀಚಿಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಅಂಜಲಿ ಅಂಬಿಗೇರ ಎನ್ನುವ ಯುವತಿಯ ಬರ್ಬರ ಕೊಲೆಯಾಗಿತ್ತು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಇಂದು ಅಂಬಿಗೇರ ಚೌಡಯ್ಯ ಪೀಠದ ಶಾಂತಭೀಷ್ಮ ಶ್ರೀಗಳು ಮಾತನಾಡಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ತಂದಿರುವ ಕಾನೂನು ರಾಜ್ಯದಲ್ಲೂ ತರಬೇಕು ಎಂದು ಆಗ್ರಹಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಂಜಲಿ ಕೊಲೆ ಪ್ರಕರಣಕ್ಕೆ ಸರ್ಕಾರವೇ ನೇರ ಕಾರಣ. ಪೊಲೀಸರ ನಿರ್ಲಕ್ಷವೇ ಈ ಒಂದು ಉಘಟನೆಗೆ ಕಾರಣ. ನೇಹಾ ಹಿರೇಮಠ್ ಕೊಲೆಯ ಬಳಿಕ ಮತ್ತೆ ಇದೇ ರೀತಿಯ ಕೃತ್ಯ ನಡೆದಿದೆ.ಯಾರೇ ಆಗಲಿ ತೊಂದರೆ ಅಂತ ಬಂದಾಗ ನ್ಯಾಯ ಕೊಡಿಸಬೇಕು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಂದಿರುವ ಕಾನೂನು ಇಲ್ಲಿಯೂ ತರಬೇಕು. ಅಂಜಲಿಯದ್ದು ಬಡ ಕುಟುಂಬ ಅವರಿಗೆ ಮನೆ ಕೊಡಬೇಕು. ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ನೌಕರಿ ನೀಡಬೇಕು. ಅಂಜಲಿ ಕುಟುಂಬದವರಿಗೆ ಸೂಕ್ತ ರಕ್ಷಣೆ ಕೊಡಬೇಕು.ಅಂಜಲಿ ಸಾವಿಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡಲಾಗುತ್ತದೆ ಎಂದು…

Read More

ಕಲಬುರಗಿ : ಇಂದು ಕಲಬುರ್ಗಿ ಹಾಗೂ ವಿಜಯಪುರದಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರದ ಸರ್ವೆಯರ್ ಮಲ್ಲಪ್ಪ ಜಂಬಗಿ ಮತ್ತು ಕಲಬುರಗಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಫ್​​ಡಿಎ ಶಿವಶಂಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಹೌದು ಇಂದು ವಿಜಯಪುರದ ಸರ್ವೆಯರ್ ಮಲ್ಲಪ್ಪ ಜಂಬಗಿ ಮತ್ತು ಕಲಬುರಗಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಫ್​​ಡಿಎ ಶಿವಶಂಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಎಸ್​ಎಸ್​ಎಲ್​ಸಿ ಅಂಕಪಟ್ಟಿ ನಕಲು ಪತ್ರಿ ನೀಡಲು ಅರುಣ್ ಖತೀಬ್ ಎಂಬುವರಿಂದ ಎಫ್​​ಡಿಎ ಶಿವಶಂಕರ ಐದು ಸಾವಿರ ಹಣ ಪಡೆಯುತ್ತಿದ್ದರು. ಈ ವಿಚಾರ ತಿಳಿದು ಲೋಕಾಯುಕ್ತ ಎಸ್​ಪಿ ಜಾನ್ ಆಂಟೋನಿ ಮತ್ತು ಡಿವೈಎಸ್​ಪಿ ಗೀತಾ ಬೇನಾಳ್ ನೇತೃತ್ವದ ತಂಡ ದಾಳಿ ಮಾಡಿ ಅಧಿಕಾರಿಯನ್ನು ಬಂಧಿಸಿದ್ದಾರೆ. ಅದೇ ರೀತಿಯಾಗಿ ವಿಜಯಪುರದ ಸರ್ವೆಯರ್ ಮಲ್ಲಪ್ಪ ಜಂಬಗಿ ಮತ್ತು ಸಹಾಯಕ ಗುರುದತ್ತ ಬಿರಾದಾರ‌ ಜಮೀನಿನ ತಾತ್ಕಾಲಿಕ ಪೋಡಿ ಮಾಡಲು ಪ್ರಕಾಶ್ ಸಿಂಗೆ ಎಂಬುವರಿಂದ 47,500 ರೂ. ಲಂಚ…

Read More

ಬೆಂಗಳೂರು : ಪ್ರಜ್ವಲ್ ಅಶೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ ವಕೀಲ ದೇವರಾಜೇಗೌಡ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೋಟಿ ಆಫರ್ ಆರೋಪ ಮಾಡಿದ್ದರು. ಇದೀಗ ಈ ಒಂದು ವಿಷಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬೀ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ ಕೇಸ್ ನಲ್ಲಿ ಯಾರನ್ನು ಪ್ರೊಟೆಕ್ಟ್ ಮಾಡುವ ಪ್ರಶ್ನೆಯೇ ಇಲ್ಲ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಯಾವುದೇ ಪಕ್ಷ ಮತ್ತೊಂದು ಚರ್ಚೆ ಇಲ್ಲ.ಘಟನೆ ನಡೆದಿರುವುದು ಅಕ್ಷಮ್ಯ ಅಪರಾಧವಾಗಿದೆ. ಪೆನ್ ಡ್ರೈವ್ ಹಿಂದಿರುವವರಿಗೂ ಸರಿಯಾದ ಶಿಕ್ಷೆ ಆಗಬೇಕು. ಇಲ್ಲಿ ಯಾರನ್ನು ಪ್ರೊಟೆಕ್ಟ್ ಮಾಡುವ ಪ್ರಶ್ನೆಯೇ ಇಲ್ಲ. ಇದರ ಹಿಂದಿರುವವರ ಹೆಸರುಗಳು ಬೆಳಗೆಗೆ ಬರಬೇಕು ಘಟಾನುಘಟಿಗಳ ಹೆಸರು ಕೇಳಿ ಬರುತ್ತಿರುವುದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ದೇವರಾಜ ಗೌಡ ದಿನಕ್ಕೊಂದು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಸರಕಾರಕ್ಕೆ ಗಂಭೀರತೆ ಇದ್ದರೆ ಸಿಬಿಐ ತನಿಖೆಗೆ ಕೊಡಬೇಕು.ಈ ಪ್ರಕರಣವನ್ನು ಚರ್ಚಾ ವಸ್ತುವನ್ನಾಗಿ ಬಳಸಿಕೊಳ್ಳುವುದು…

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೇಶದಿಂದ ದೇಶಕ್ಕೆ ಜಿಗಿಯುತ್ತ ತಲೆಮರಿಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಈಗ ಎಸ್ಐಟಿ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಕೋರ್ಟ್ ಮೂಲಕ ವಾರೆಂಟ್ ಜಾರಿ ಮಾಡುವ ಮುಖಾಂತರ ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ಗೆ ವಿಚಾರಣೆಗೆ ಹಾಜರಾಗುವಂತೆ ಹಲವಾರು ಬಾರಿ ನೋಟಿಸ್ ನೀಡಿದ್ದರು. ಅಲ್ಲದೆ ಸಿಐಡಿ ಮುಖಾಂತರ ರೆಡ್ ಕಾರ್ನರ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ಆದರೂ ಕೂಡ ಪ್ರಜ್ವಲ್ ರೇವಣ್ಣ ಯಾವುದೇ ನೋಟಿಸ್ ಗೂ ಸರಿಯಾದ ರೀತಿ ಸ್ಪಂದಿಸಲಿಲ್ಲ. ಹಾಗಾಗಿ ಇದೀಗ ಕೋರ್ಟ್ ಮುಖಾಂತರ ವಾರಂಟ್ ಜಾರಿ ಮಾಡಲು ಎಸ್ಐಟಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಜ್ವಲ್ ಬ್ಯಾಂಕ್ ಖಾತೆ ಬಂದ್ ಮಾಡಲು ಮುಂದಾದ SIT ಸದ್ಯ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ಜರ್ಮನ್…

Read More