Author: kannadanewsnow05

ಬೀದರ್ : ಜಾತಿ ಗಣತಿ ವರದಿ ಜಾರಿ ಮಾಡುವ ಕುರಿತು ಒಂದು ಕಡೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವಾಗ, ಇದರ ಮಧ್ಯ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗುವ ಕಾಲ ಬಹಳ ದೂರವಿಲ್ಲ ಎಂದು ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದೇವರು ತಿಳಿಸಿದ್ದಾರೆ. ಇಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಂತಹ ಕಲ್ಯಾಣ ಪರ್ವ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಬಸವಲಿಂಗ ಪಟ್ಟದೇವರು, ಬಸವಣ್ಣನವರ ಕಾಲದಿಂದ ಇಲ್ಲಿಯವರೆಗೂ ಲಿಂಗಾಯತ ಧರ್ಮಕ್ಕೆ ವಿರೋಧ ಮಾಡುವವರು ಇದ್ದೇ ಇದ್ದಾರೆ. ವಿರೋಧದ ಮಧ್ಯೆಯೂ 21ನೇ ಶತಮಾನದವರೆಗೆ ಜಾಗೃತ ಮಾಡುತ್ತಾ ಬಂದಿದ್ದು ಲಿಂಗಾಯತ ಸ್ವತಂತ್ರ ಧರ್ಮ ಮುದ್ರೆ ಪಡೆದೇ ತೀರೋಣ ಎಂದು ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ್ದೇವರು ಹೇಳಿದ್ದಾರೆ. ಬಸವಣ್ಣನವರ ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಆಗಬಾರದು ಅಂತ ಅನೇಕ ಶಕ್ತಿಗಳು ವಿರೋಧ ಮಾಡುತ್ತಿವೆ. ಆದ್ರೆ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗುವ ಕಾಲ ಬಂದೇ ಬರುತ್ತೆ.12ನೇ ಶತಮಾನದಲ್ಲೇ ಅನುಭವ ಮಂಟಪದಲ್ಲಿ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮುದ್ರೆ ಬಿದ್ದಿದೆ. ಇನ್ನು ಸರ್ಕಾರದಲ್ಲಿ ಸ್ವತಂತ್ರ ಧರ್ಮದ…

Read More

ಬೆಂಗಳೂರು : ಈಗಾಗಲೆ ಬಿಗ್ ಬಾಸ್ 11ರ ಶೋನಿಂದ ಹೊರಹಾಕಲ್ಪಟ್ಟ ಲಾಯರ್ ಜಗದೀಶ್ ಅವರಿಗೆ ಕರ್ನಾಟಕದ ಕ್ರಶ್ ಎಂದೇ ಅಭಿಮಾನಿಗಳು ಬಿರುದು ಕೊಟ್ಟಿದ್ದರು. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಮೊದಲನೇ ವಾರದಲ್ಲಿ ಅವಕಾಶ ಸಿಕ್ಕರೆ ನಾನು ರಾಜ್ಯದ ಸಿಎಂ ಆಗುತ್ತೇನೆ ಎಂದು ಹೇಳಿದ್ದರು. ಇದೀಗ ಅವರು ಬಿಗ್ ಬಾಸ್ ನಲ್ಲಿ ಕೆಲವು ಅವಾಚ್ಯ ಪದಗಳನ್ನು ಬಳಸಿದ್ದರ ಹಿನ್ನೆಲೆಯಲ್ಲಿ ಅವರನ್ನು ಶೋನಿಂದ ಹೊರ ಹಾಕಲಾಗಿದೆ. ನಾನು ಕೂಡ ಸಿಎಂ ಆಗುತ್ತೇನೆ ಎಂಬ ಹೇಳಿಕೆ ನೀಡಿದ್ದ ಅವರು ಇದೀಗ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೊಟ್ಟರೆ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಸ್ಪರ್ಧಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ಹೈಕಮಾಂಡ್ ಯಾರು ಗೊತ್ತಿಲ್ಲ ಅಕಸ್ಮಾತ್ ಕಾಂಗ್ರೆಸ್ ನನಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ. ಜನರ ಸೇವೆ ಮಾಡೋಕೆ ಯಾವ ಕೆಲಸ ಕೊಟ್ಟರೂ ಮಾಡುತ್ತೇನೆ. ಕಾಂಗ್ರೆಸ್ ಹೈಕಮಾಂಡ್ ನನ್ನನ್ನು ಕರೆದು ಟಿಕೆಟ್ ಕೊಟ್ಟರೆ ನನ್ನ…

Read More

ಬೆಂಗಳೂರು : ರಾಜ್ಯದಲ್ಲಿ ಮುಂದಿನ ತಿಂಗಳು ನವೆಂಬರ್ 13 ರಂದು ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ನಾಳೆ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಿಸಲಾಗುತ್ತೆ ಎಂದು ಹೇಳಲಾಗುತ್ತಿದೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಮನೆ ಎದುರು ಶಿಗ್ಗಾಂವಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಗಲಾಟೆ ಮಾಡುತ್ತಿದ್ದಾಗ ಯಾರೇ ಗಲಾಟೆ ಮಾಡಿದ್ರು ಅವರ ಅರ್ಜಿ ಕಿತ್ತಾಕ್ತೇನೆ ಎಂದು ಗದರಿದ್ದಾರೆ. ಹೌದು ರಾಜ್ಯದಲ್ಲಿ ಚನ್ನಪಟ್ಟಣ ಉಪಚುನಾವಣೆಯ ಕಾವು ಹೆಚ್ಚಾಗಿದ್ದು, ಅದರ ಬೆನ್ನಲ್ಲೇ ಶಿಗ್ಗಾಂವಿ ಕ್ಷೇತ್ರದ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆದಿದೆ. ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಿವಾಸದ ಮುಂದೆಯೇ ಟಿಕೆಟ್‌ಗಾಗಿ ಜಟಾಪಟಿ ನಡೆದಿದೆ. ಆರ್.‌ ಶಂಕರ್‌, ಖಾದ್ರಿ, ಶಿವಲೀಲಾ ಕುಲಕರ್ಣಿ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರು ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಮುಂದೆ ವಾದ ಮಾಡಿದ್ದರು. ಇದರಿಂದ ಕುಪಿತಗೊಂಡ ಡಿಕೆ ಶಿವಕುಮಾರ್ ಜಗಳ ಆಡೋಕೆ ನಮ್ಮ ಮನೆಗೆ ಬಂದಿದ್ದೀರಾ ನಡೀರಿ ಮನೆಗೆ. ಯಾರೇ ಮಾತಾಡಿದ್ರು ಅವರ…

Read More

ಹಾವೇರಿ : ರಾಜ್ಯದಲ್ಲಿ ಮುಂದಿನ ತಿಂಗಳು ನವೆಂಬರ್ 13 ರಂದು ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ನಾಳೆ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಿಸಲಾಗುತ್ತೆ ಎಂದು ಕಾನೂನು ಸಚಿವ HK ಪಾಟೀಲ್ ತಿಳಿಸಿದರು. ಇಂದು ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ನಾಳೆ ಶಿಗ್ಗಾಂವ್​ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಲಿದೆ.ಅಭ್ಯರ್ಥಿ ಆಯ್ಕೆ ಸಂಬಂಧ ಸಿಇಸಿ ಮೀಟಿಂಗ್ ನಡೆಯುತ್ತಿದೆ ಎಂದು ತಿಳಿಸಿದರು. ಅಜ್ಜಂಪೀರ ಖಾದ್ರಿ ಹಾಗೂ ಯಾಸೀರಖಾನ್​ ಪಠಾಣ್​ ಇಬ್ಬರನ್ನೂ ಕೂರಿಸಿ ಚರ್ಚೆ ಮಾಡುತ್ತೇವೆ. ಅವರಲ್ಲಿ ಒಬ್ಬರಿಗೆ ಟಿಕೆಟ್​ ಕೊಡುತ್ತೇವೆ. ಇಲ್ಲದಿದ್ದರೆ ಅವರು ಸೂಚಿಸಿದವರಿಗೆ ನೀಡುತ್ತೇವೆ. ಹೈಕಮಾಂಡ್​ಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಕಾರ್ಯಕರ್ತರ ಅಭಿಪ್ರಾಯ, ನಾಯಕರ ಶಿಫಾರಸು ಹಾಗೂ ಶಾಸಕರ ಅಭಿಪ್ರಾಯ ಗಮನದಲ್ಲಿಟ್ಟುಕೊಂಡು ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿದರು. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಈಗಾಗಲೇ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಪಚುನಾವಣೆ ಹಿನ್ನೆಲೆಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ ಇಂದು ರಾತ್ರಿ ಅಥವಾ ನಾಳೆ…

Read More

ಬೆಂಗಳೂರು : ಬಿಗ್ ಬಾಸ್ 11ನೇ ಸೀಸನ್ ನಲ್ಲಿ ಕರ್ನಾಟಕದ ಕ್ರಶ್ ಎಂದೇ ಖ್ಯಾತಿ ಪಡೆದು ಬಳಿಕ ಶೋನಿಂದ ಹೊರಗಡೆ ಬಂದ ಲಾಯರ್ ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ತಮಗೆ ಆದಂತಹ ಅನುಭವ ಹಾಗೂ ಸಂತಸದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಮನೆಯೊಳಗೆ ಇಷ್ಟು ದಿನ ಇರುತ್ತೇನೆ ಎಂಬುದನ್ನು ಲೆಕ್ಕಾಚಾರ ಹಾಕಿ ನಾನು ಅಲ್ಲಿಗೆ ಹೋಗಿರಲಿಲ್ಲ. ನಮ್ಮ ಲೆಕ್ಕಾಚಾರ ಏನು ಎಂಬುದನ್ನು ಜನರು ನೋಡಿದ್ದಾರೆ. ನನ್ನನ್ನು ಜನರು ಇಷ್ಟಪಟ್ಟಿದ್ದಾರೆ.ಆ ಮನೆಯಲ್ಲಿ 16 ಜನರ ಒಂದು ಗುಂಪು ಆಗಿತ್ತು. ನಾನು ಒಬ್ಬನೇ ಆಗಿದ್ದೆ. ನನಗೆ ಏನೂ ಬೇಜಾರು ಇಲ್ಲ. ಒಂಟಿಯಾಗಿ ಎದುರಿಸಲು ನಾನು ಸಿದ್ಧನಾಗಿದ್ದೆ. ಅವರ ಮೇಲೆ ಅಟ್ಯಾಕ್ ಮಾಡಲು ನಾನು ಮಾನಸಿಕವಾಗಿ ಸಿದ್ಧನಾಗಿದ್ದೆ ಎಂದಿದ್ದಾರೆ. ಬಿಗ್ ಬಾಸ್​ ಕಾರ್ಯಕ್ರಮವನ್ನು ಕೋಟ್ಯಂತರ ಜನರು ನೋಡುತ್ತಾರೆ. ಅವರು ಯಾಕೆ ನಮ್ಮನ್ನು ನೋಡಬೇಕು ​ಎಂಬುದನ್ನು ನಾವೇ ಪ್ರಶ್ನೆ ಮಾಡಿಕೊಂಡಾಗ ನಾವು ಏನು ಮಾಡಬೇಕು ಎಂಬುದು ಗೊತ್ತಾಗುತ್ತದೆ. ಅಲ್ಲಿ ಪೈಪೋಟಿ ಅಲ್ಲ, ಒಬ್ಬರಿಗೊಬ್ಬರು ಹೊಡೆದಾಡುವುದೂ ಅಲ್ಲ. ಅಲ್ಲಿ ಪರ್ಫಾರ್ಮೆನ್ಸ್…

Read More

ಬೆಂಗಳೂರು : ಸದ್ಯ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ ಭಾರಿ ಸದ್ದು ಮಾಡುತ್ತಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರು ಕೂಡ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಮತ್ತೊಂದು ಸುದ್ದಿ ಭಾರಿ ಸದ್ದು ಮಾಡುತ್ತಿದ್ದು ಸಚಿವ ಭೈರತಿ ಸುರೇಶ್ ಅವರು ಬಿಎಸ್ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂದು ಹೊಸ ಬಾಂಬ್ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಎಸ್ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರವಿದೆ. ಬಿಎಸ್ ಯಡಿಯೂರಪ್ಪ ಪಾಪ ಒಳ್ಳೆಯವರು. ಆದರೆ ಮೈತ್ರಾದೇವಿ ಸಾವು ಹೇಗಾಯಿತು?ಮೈತ್ರಾದೇವಿ ಸಾವು ತನಿಖೆಯಾಗಿ ಶೋಭಾ ಕರಂದ್ಲಾಜೆ ಅವರನ್ನು ಬಂಧಿಸಬೇಕು ಈ ಬಗ್ಗೆ ತನಿಖೆ ಆಗಲಿ ಅಂತ ಹೇಳುತ್ತಿದ್ದೇನೆ ಇದನ್ನು ಅವರು ಒಪ್ಪಿಕೊಳ್ಳುತ್ತಾರಾ ಎಂದು ಪ್ರಶ್ನಿಸಿದ್ದಾರೆ.

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಎರಡು ಬೈಕ್ ಮಧ್ಯ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಚೌಡಹಳ್ಳಿ ಬಳಿ ಈ ಘಟನೆ ನಡೆದಿದೆ. ಅಜೀತ್ (22) ಶಿವಯ್ಯ (49) ಮೃತರು ಎಂದು ತಿಳಿದು ಬಂದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡ್ಹಳ್ಳಿ ಎಂಬ ಘಟನೆ ನಡೆದಿದೆ. ಇನ್ನು ಅಪಘಾತದಲ್ಲಿ ಗಾಯಗೊಂಡ ಚಂದ್ರು ಎನ್ನುವ ಇನ್ನೊರ್ವ ವ್ಯಕ್ತಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಕುರಿತಂತೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತುಮಕೂರಲ್ಲಿ ದಂಪತಿಗಳ ಸಾವು ಅದೇ ರೀತಿಯಾಗಿ ತುಮಕೂರಲ್ಲೂ ಭೀಕರ ಅಪಘಾತವಾಗಿದ್ದು, ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಂದನಕೆರೆ ಬಳಿ ಈ ಘಟನೆ ನಡೆದಿದೆ. ಮೃತ ದಂಪತಿಗಳನ್ನ ಗೋಪಿ ಹಾಗೂ ಪುಷ್ಪ ಎಂದು ಗುರುತಿಸಲಾಗಿದ್ದು, ಭರಣಪುರ ಗ್ರಾಮದ…

Read More

ಕೊಡಗು : ಕೊಡಗಿನಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಅಪ್ರಾಪ್ತೆಗೆ ಜನಿಸಿದ್ದ ನವಜಾತ ಶಿಶು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಆದರೆ ಅಪ್ರಾಪ್ತೆ ತಾಯೀನೇ ಶಿಶುವನ್ನು ನಾಪತ್ತೆ ಮಾಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಅಕ್ಟೋಬರ್ 17ರಂದು ಅಪ್ರಾಪ್ತೆ ರಹಸ್ಯವಾಗಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿ ತಾಯಿಯೇ ಮಗುವನ್ನು ನಾಪತ್ತೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗರ್ಭಿಣಿಯಾಗಲು 13 ವರ್ಷದ ಬಾಲಕ ಕಾರಣ ಅಂತ ಹೇಳಿದ್ದಳು. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಬಾಲಕನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಶಿಶುವಿನ DNA ಪರೀಕ್ಷೆಗೆ ಬಾಲಕನ ಪೋಷಕರು ಆಗ್ರಹಿಸಿದ್ದಾರೆ. ಹೆರಿಗೆ ನಂತರ ಚಿಕಿತ್ಸೆ ಇಲ್ಲದೆ ಬಾಲಕೀಯ ಸ್ಥಿತಿ ಗಂಭೀರವಾಗಿತ್ತು.ಆರೋಗ್ಯ ಹದಗೆಟ್ಟ ನಂತರ ಬಾಲಕಿ ಆಸ್ಪತ್ರೆಗೆ ದಾಖಲಾಗಿದ್ದಳು. ಬಾಲಕಿಯನ್ನು ತಡವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಹೆರಿಗೆಯಾಗಿ ನಾಲ್ಕು ದಿನ ಕಳೆದರೂ ನವಜಾತ ಶಿಶು ಪತ್ತೆಯಾಗಿಲ್ಲ.…

Read More

ಬೆಂಗಳೂರು : ದೇಶದಾದ್ಯಂತ ಹಲವು ವಿಮಾನ ನಿಲ್ದಾಣಗಳಿಗೆ, ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್‌ ಕರೆ ಬರುತ್ತಿರುವ ಬೆಳವಣಿಗೆಗಳ ನಡುವೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಇದರ ಮಧ್ಯ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೂಡ ಬಾಂಬ್ ಬೆದರಿಕೆ ಕರೆ ಬಂದಿದೆ. ಆದರೆ ಅದು ಹುಸಿ ಬಾಂಬ್ ಬೆದರಿಕೆ ಸಂದೇಶ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದವರ ವಿರುದ್ಧ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಹೌದು ಟ್ವೀಟ್ ಮೂಲಕ ಕೆಂಪೇಗೌಡ ಏರ್ಪೋರ್ಟ್ಗೆ ಬೆದರಿಕೆ ಹಾಕಿದ ಸಂದೇಶ ಬಂದಿದೆ. ಕಮಾಂಡ ಸೆಂಟರ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. ಆರು ವಿಮಾನಗಳಲ್ಲಿ 12 ಡಾಂಬರ್ ಗಳಿದ್ದಾರೆಂದು ಟ್ವೀಟ್ ಮಾಡಲಾಗಿದೆ. ಪ್ರತಿಯೊಂದು ವಿಮಾನದಲ್ಲಿ ಇಬ್ಬರು ಬಾಂಬರ್ ಗಳಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ. ಅನಾಮಧಯ ಟ್ವಿಟರ್ ಖಾತೆಯಿಂದ ಈ ಒಂದು ಸಂದೇಶ ಬಂದಿದೆ. ಮಂಗಳೂರು-ದುಬೈ ತಿರುವನಂತಪುರಂ-ಮಾಸ್ಕಟ್ ಸೇರಿದಂತೆ ವಿವಿಧ ವಿಮಾನಗಳಲ್ಲಿ ತೆರಳುವ ವಿಮಾನಗಳಲ್ಲಿ ಬಾಂಬರ್ ಗಳಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿದು…

Read More

ಬೆಂಗಳೂರು : ದೇಶದಾದ್ಯಂತ ಹಲವು ವಿಮಾನ ನಿಲ್ದಾಣಗಳಿಗೆ, ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್‌ ಕರೆ ಬರುತ್ತಿರುವ ಬೆಳವಣಿಗೆಗಳ ನಡುವೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಇದರ ಮಧ್ಯ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೂಡ ಬಾಂಬ್ ಬೆದರಿಕೆ ಕರೆ ಬಂದಿದೆ ಹೌದು ಟ್ವೀಟ್ ಮೂಲಕ ಕೆಂಪೇಗೌಡ ಏರ್ಪೋರ್ಟ್ಗೆ ಬೆದರಿಕೆ ಹಾಕಿದ ಸಂದೇಶ ಬಂದಿದೆ. ಕಮಾಂಡ ಸೆಂಟರ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. ಆರು ವಿಮಾನಗಳಲ್ಲಿ 12 ಡಾಂಬರ್ ಗಳಿದ್ದಾರೆಂದು ಟ್ವೀಟ್ ಮಾಡಲಾಗಿದೆ. ಪ್ರತಿಯೊಂದು ವಿಮಾನದಲ್ಲಿ ಇಬ್ಬರು ಬಾಂಬರ್ ಗಳಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ. ಅನಾಮಧಯ ಟ್ವಿಟರ್ ಖಾತೆಯಿಂದ ಈ ಒಂದು ಸಂದೇಶ ಬಂದಿದೆ. ಮಂಗಳೂರು-ದುಬೈ ತಿರುವನಂತಪುರಂ-ಮಾಸ್ಕಟ್ ಸೇರಿದಂತೆ ವಿವಿಧ ವಿಮಾನಗಳಲ್ಲಿ ತೆರಳುವ ವಿಮಾನಗಳಲ್ಲಿ ಬಾಂಬರ್ ಗಳಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿದು ಬಂದಿದೆ. ಬೆಳಗಾವಿ ಏರ್ ಪೋರ್ಟ್ ಗು ಬೆದರಿಕೆ ಕರೆ ದೇಶದಾದ್ಯಂತ ಹಲವು ವಿಮಾನ ನಿಲ್ದಾಣಗಳಿಗೆ ಈಗಾಗಲೇ ಹಲವು ಬಾರಿ ಬಾಂಬ್ ಬೆದರಿಕೆ ಕರೆ…

Read More