Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಕನ್ನಡಿಗರಿಗೆ ಸರ್ಕಾರಿ ಉದ್ಯೋಗ ಮೀಸಲಾತಿ ಕುರಿತಂತೆ ಇಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟ ನಡೆಸಿತು. ನಾನು ಕನ್ನಡದ ಪರವಾಗಿ ಇದ್ದೀನಿ ಅಂತ ಸಿಎಂ ಸಿದ್ದರಾಮಯ್ಯ ಮಾತು ಕೊಟ್ಟಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣಗೌಡ, ಕಾನೂನು ಸಜ್ಞರ ಜೊತೆ ನಾಳೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ಖುಷಿಯಿಂದ ಸಿಎಂ ಸಿದ್ದರಾಮಯ್ಯ ಅವರು ಮನವಿ ಸ್ವೀಕಾರ ಮಾಡಿದ್ದಾರೆ ಎಂದರು. ಮುಂದೆ ಮಾಡಬೇಕಾದ ಕಾರ್ಯಕ್ರಮದ ಬಗ್ಗೆ ಚರ್ಚೆ ಮಾಡಿದ್ದಾರೆ. ಸಿಎಂ ಗೆ ಕನ್ನಡದ ನಾಡು ನುಡಿ ಬಗ್ಗೆ ಇರುವ ಕಳಕಳಿ ವ್ಯಕ್ತವಾಗಿದೆ. ಕಾದು ನೋಡಿ ನಂತರ ಮುಂದಿನ ಹೋರಾಟವನ್ನು ರೂಪಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿಕೆ ನೀಡಿದರು. ಕನ್ನಡಿಗರ ಉದ್ಯೋಗಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದ್ದು, ಸರೋಜಿನಿ ಮಹಿಷಿ ವರದಿಗಾಗಿ 40 ವರ್ಷದಿಂದ ಹೋರಾಟ ಮಾಡಲಾಗುತ್ತಿದೆ. ವರದಿ ಕುರಿತ…
ಬೆಂಗಳೂರು : ಹಿಂದೆ ಮುಂದೆ AK-47 ಗನ್ ಹಿಡಿದುಕೊಂಡಿರುವ ಗನ್ ಮ್ಯಾನ್ ಗಳು, ಐಷಾರಾಮಿ ಕಾರುಗಳು, ಮೈ ತುಂಬ ಬಂಗಾರ ಹಾಕಿಕೊಂಡು ಕೈಯಲ್ಲಿ ಎಕೆ47 ಇಟ್ಕೊಂಡು ಕೆಶೋ ಕೊಡುತ್ತಿದ್ದ ಅಸಾಮಿಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಹೌದು ರೀಲ್ಸ್ಗಾಗಿ ಫುಲ್ ರಿಚ್ ಆಗಿ ಕಾಣಿಸಿಕೊಳ್ಳಲು ಮೈಮೇಲೆ ಕೆಜಿಗಟ್ಟಲೇ ಚಿನ್ನ ಧರಿಸಿಕೊಂಡು ಶೋ ಕೊಡಲು ಹೋಗಿ ಈಗ ರೀಲ್ಸ್ ಸ್ಟಾರ್ ಜೈಲುಪಾಲಾಗಿದ್ದಾನೆ. ಗನ್ ಮ್ಯಾನ್, ಐಷಾರಾಮಿ ಕಾರು, ಕಂತೆ ಕಂತೆ ಹಣ, ಕೆಜಿಗಟ್ಟಲೆ ಚಿನ್ನಾಭರಣ ಹಾಕಿಕೊಂಡು ಶೋ ಮಾಡುತ್ತಿದ್ದವ ಶೋಕಿವಾಲಾನನ್ನು ಇದೀಗ ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಶೋ ಕೊಡಲು ಹೋಗಿ ಜೈಲು ಪಾಲಾದ ಯುವಕನ ಕಥೆ ಇದು. ಅರುಣ್ ಕಟಾರೆ ಎನ್ನುವ ಯುವಕನನ್ನು ಇದೀಗ ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. AK-47 ಮಾದರಿ ನಕಲಿ ಗನ್ ಹಿಡಿದು ರಸ್ತೆಯಲ್ಲಿ ಶೋ ಕೊಡುತ್ತಿದ್ದ. ಈತನ ಬಿಲ್ಡಪ್ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದಾರೆ. ತಕ್ಷಣ ಅರುಣ್ ಕಟಾರೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ವಿಚಾರಣೆ…
ಹಾವೇರಿ : ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರ ಭಾರಿ ಚರ್ಚೆಯಾಗುತ್ತಿದ್ದು, ಈ ವಿಷಯವಾಗಿ ಸಚಿವ ಶಿವಾನಂದ್ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಬಹಿರಂಗ ವೇದಿಕೆಯಲ್ಲಿ ಒಕ್ಕಲಿಗ ಸಮುದಾಯದ ಚಂದ್ರಶೇಖರ ಸ್ವಾಮೀಜಿಗಳು ಸಿಎಂ ಸ್ಥಾನದ ಕುರಿತು ಮಾತನಾಡಿದರು. ಈ ವಿಷಯವಾಗಿ ಪ್ರತಿಕ್ರಿಯಿಸಿದ ಶಿವಾನಂದ ಪಾಟೀಲ್ ಸೇಮ್ ಬದ್ಲಾವಣೆ ಬಗ್ಗೆ ಯಾಕೆ ತಲೆ ಕೆಡಿಸಿಕೊಳ್ಳುತ್ತೀರ ಅದೇನು ಆಗೋದ ಹೋಗುವುದ ಎಂದು ತಿಳಿಸಿದರು. ಹಾವೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ್ ಪಾಟೀಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯಾರೋ ಒಬ್ಬರು ಮಾತನಾಡಿದರು ಎಂದು ಅದಕ್ಕೆ ಯಾಕೆ ಪ್ರತಿಕ್ರಿಯೆ ಕೊಡಬೇಕು? ಒಬ್ಬರು ಸ್ವಾಮೀಜಿ ಮಾತನಾಡಿದರೆ ರಾಜಕಾರಣ ಆಗುತ್ತಾ? ಸ್ವಾಮೀಜಿಗಳ ಮಾತು ಅಲ್ಲೇ ಕೇಳಿ ಅಲ್ಲೇ ಬಿಡಬೇಕು. ಅದು ಯಾರು ಅವರನ್ನು ಬಳಸಿಕೊಂಡಿದ್ದಾರೋ ನನಗೆ ಗೊತ್ತಿಲ್ಲ ಎಂದು ಅವರು ತಿಳಿಸಿದರು. ಸಿಎಂ ಸ್ಥಾನದ ಬದಲಾವಣೆ ಕುರಿತಂತೆ ಸ್ವಾಮೀಜಿಗಳು ಮಾತನಾಡಿದ್ದಾರೆ. ರಾಜಕಾರಣಿಗಳು ಆ ವಿಷಯದ ಬಗ್ಗೆ ಮಾತನಾಡಿದರೆ ಅದಕ್ಕೊಂದು ಬೆಲೆ ಇರುತ್ತದೆ ಆದರೆ…
ನವದೆಹಲಿ : ಅಗ್ನಿವೀರ್ ಯೋಜನೆಯು ಇದು ಸರ್ಕಾರ ಯೋಜನೆಯಲ್ಲ ಇದು ಮೋದಿ ಯೋಜನೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಸದನದಲ್ಲಿ ಇಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಮಾತನಾಡಿದ ಅವರು, ಅಗ್ನಿವೀರ್ ಸರ್ಕಾರದ ಯೋಜನೆ ಎಲ್ಲಾ ಮೋದಿ ಯೋಜನೆ. ಅಗ್ನಿವೀರ ಯೋಜನೆಯಲ್ಲಿ ಉಪಯೋಗಿಸಿಕೊಂಡು ಕೈಬಿಡುತ್ತಾರೆ.ಅಗ್ನಿವೀರ್ ಯೋಧರನ್ನು ಹುತಾತ್ಮರಾಗಿ ಪರಿಗಣಿಸುವುದಿಲ್ಲ .ಅಗ್ನಿ ವೀರ ಯೋಧರಿಗೆ ಪಿಂಚಣಿ ವ್ಯವಸ್ಥೆ ಸಹ ಮಾಡಿಲ್ಲ. ಹುತಾತ್ಮರಾದ ಅಗ್ನಿವೀರ ಯೋಧರಿಗೆ ಪರಿಹಾರ ನೀಡಬೇಕು. ಅವರ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದರು. ನನ್ನನ್ನು ದೇವರು ಕಳಿಸಿದ್ದಾನೆಂದು ಮೋದಿ ಹೇಳಿಕೊಂಡಿದ್ದರು. ನೋಟ್ ಬ್ಯಾನ್ ಮಾಡಲು ಮೋದಿಗೆ ದೇವರೇ ಹೇಳಿರಬೇಕು ಎಂದು ಪ್ರಧಾನಮಂತ್ರಿ ಮೋದಿ ವಿರುದ್ಧ ರಾಹುಲ್ ಗಾಂಧಿ ವ್ಯಂಗ್ಯವಾಡಿದರು. ಅವೈಜ್ಞಾನಿಕ ಜಿಎಸ್ಟಿ ನಿಯಮಗಳಿಂದ ಜನರಿಗೆ ಸಮಸ್ಯೆಯಾಗಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು…
ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಡೀ ದೇಶದ ಜನತೆಗೆ ಅಷ್ಟೇ ಅಲ್ಲ ಬಿಜೆಪಿಯವರಿಗೂ ಕೂಡ ಭಯ ಹುಟ್ಟಿಸಿದ್ದಾರೆ ಎಂದು ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು. ಲೋಕಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ರಾಹುಲ್ ಗಾಂಧಿ, ಇಡಿ ದೇಶದಲ್ಲಿ ನರೇಂದ್ರ ಮೋದಿ ಭಯ ಹುಟ್ಟಿಸಿದ್ದಾರೆ. ಬೆಳಗ್ಗೆ ಸದನಕ್ಕೆ ಬಂದಾಗ ರಾಜನಾಥ್ ಸಿಂಗ್ ಗೆ ಅತ್ಯಂತ ನಗುಮುಖದಿಂದ ಸ್ವಾಗತಿಸಿದರು. ಆದರೆ ಮೋದಿ ಮುಖದಲ್ಲಿ ನಗುವಿರು ಇಲ್ಲ ನಗು ಮಾಯವಾಗಿದೆ. ನಿತಿನ್ ಗಡ್ಕರಿ ಪರಿಸ್ಥಿತಿ ಸಹ ಇದೇ ರೀತಿ ಆಗಿದೆ ಎಂದರು. ಮೋದಿಯವರು ಕೇವಲ ದೇಶದ ಜನತೆಗೆ ಮಾತ್ರ ಭಯ ಹುಟ್ಟಿಸಿಲ್ಲ. ಬಿಜೆಪಿಯವರಿಗೂ ಮೋದಿ ಭಯ ಹುಟ್ಟಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಮಾತಿಗೆ ಸ್ಪೀಕರ್ ಓಂ ಬಿರ್ಲಾ ಈ ವೇಳೆ ಆಕ್ಷೇಪ ವ್ಯಕ್ತಪಡಿಸಿದರು. ಸದನದ ಗೌರವ ಉಳಿಸಿ ವ್ಯಕ್ತಿಗತ ದಾಳಿ ಬೇಡ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡಿ ಎಂದು…
ಬಳ್ಳಾರಿ : ಸಿಎಂ ಹಾಗೂ ಡಿಸಿಎಂ ವಿಚಾರವಾಗಿ ಯಾರೂ ಬಾಯಿ ಬಿಡಬಾರದು. ಒಂದು ವೇಳೆ ಬಹಿರಂಗ ಹೇಳಿಕೆ ನೀಡಿದರೆ ನೋಟಿಸ್ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಶಾಸಕರಿಗೆ ಹಾಗೂ ಸಚಿವರಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಇದೀಗ ಶಾಸಕ ಶಿವಗಂಗಾ ಬಸವರಾಜು ಡಿಕೆ ಶಿವಕುಮಾರ್ ಅವರು ಸಿಎಂ ಆಗಲೇಬೇಕು ಹಾಗೆ ಆಗುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯ ಕೊಟ್ಟೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 9 ಸ್ಥಾನ ಬರಲು ಡಿಕೆ ಶಿವಕುಮಾರ್ ಅವರೇ ಕಾರಣರಾಗಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಖಚಿತ ಎಂದರು. ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿ ಬಳಿಕ ಡಜನ್ಗಟ್ಟಲೆ ಡಿಸಿಎಂ ಮಾಡಲಿ ಬೇಡ ಅನೋದಿಲ್ಲ. ಕೆಲ ಕಾರಣಕ್ಕಾಗಿ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಸಿಎಂ ಮಾಡಿದೆ. ಡಿಸಿಎಂ ಹುದ್ದೆ ಬೇಕೆಂದವರು ಹೈಕಮಾಂಡ್ ಬಳಿ ತೆರಳಿ ಚರ್ಚಿಸಬೇಕು ಎಂದರು. ಸಿಎಂ…
ಬೆಂಗಳೂರು : ರಾಜ್ಯದಲ್ಲಿ ಸಿಎಂ ಹಾಗೂ ಡಿಸಿಎಂ ವಿಷಯ ಕುರಿತು ಚರ್ಚೆ ಜೋರಾಗಿದ್ದು, ಇದೀಗ ಸಿಎಂ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸಿಎಂ ಬದಲಾವಣೆ ವಿಷಯ ಬಹಿರಂಗವಾಗಿ ಚರ್ಚಿಸುವ ವಿಷಯವಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ನಾವು ಅದನ್ನು ಪಾಲಿಸುತ್ತೇವೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಇದು ಬಹಿರಂಗವಾಗಿ ಚರ್ಚಿಸುವ ವಿಷಯವೇ ಅಲ್ಲ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ. ಹೈಕಮಾಂಡ್ ಇದೆ ಹೈಕಮಾಂಡ್ ಏನು ಹೇಳುತ್ತದೊ ಅದನ್ನ ನಾವು ಪಾಲಿಸುತ್ತೇವೆ. ಚಂದ್ರಶೇಖರ ಶ್ರೀಗಳ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು : ಹೆಚ್ಐವಿ ಸೋಂಕಿತನ ಮೇಲೆ ಸಲಿಂಗ ಕಾಮಿ ಅತ್ಯಾಚಾರ ಎಸಗಿ, ಬಳಿಕ ಆತನ ಮನೆಯಲ್ಲಿದ್ದ ನಗದು, ಚಿನ್ನಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಘಟನೆ ನಡೆದಿದೆ. ಹೌದು ಬೆಂಗಳೂರಲ್ಲಿ ಇಂತಹ ವಿಚಿತ್ರ ಘಟನೆ ನಡೆದಿದ್ದು, 56 ವರ್ಷದ ವ್ಯಕ್ತಿಯ ಮೇಲೆ ಶ್ಯಾಮ್ ಪಾಟೀಲ್ ಎನ್ನುವ ಸಲಿಂಗಕಾಮಿ ಅತ್ಯಾಚಾರ ಎಸಗಿದ್ದಾನೆ.ಹೆಚ್ಐವಿ ಸೋಂಕಿತ ವ್ಯಕ್ತಿ ನೆಟ್ ವರ್ಕ್ ಪಾಸಿಟಿವ್ ಪೀಪಲ್ ಎಂಬ ಹೆಸರಿನ ಎನ್ಜಿಒನಲ್ಲಿ ಕೆಲಸ ಮಾಡುತ್ತಿದ್ದರು. ಒಂದು ವರ್ಷದ ಹಿಂದೆ ಶ್ಯಾಮ್ ಪಾಟೀಲ್ ಎಂಬ ವ್ಯಕ್ತಿ ತನಗೆ ಟಿಬಿ ಕಾಯಿಲೆ ಇದೆ ಎಂದು ಹೆಚ್ಐವಿ ಸೋಂಕಿತ ವ್ಯಕ್ತಿಗೆ ಪರಿಚಯನಾಗಿದ್ದನು. ಇತ್ತೀಚಿಗೆ ಹೆಚ್ಐವಿ ಸೋಂಕಿತನ ಹೆಂಡತಿ ಮತ್ತು ಮಕ್ಕಳು ಸಂಬಂಧಿಕರ ಮನೆಗೆ ಹೋಗಿದ್ದರು. ಈ ವಿಚಾರ ತಿಳಿದು ಸಲಿಂಗಿ ಕಾಮಿ ಶ್ಯಾಮ್ ಪಾಟೀಲ್ ಹೆಚ್ಐವಿ ಸೋಂಕಿತನ ಮನೆಗೆ ಬಂದಿದ್ದಾನೆ. ಬಳಿಕ ಜ್ಯೂಸ್ನಲ್ಲಿ ನಿದ್ರೆ ಮಾತ್ರೆ ಹಾಕಿ ಹೆಚ್ಐವಿ ಸೋಂಕಿತನಿಗೆ ನೀಡಿದ್ದಾನೆ. ಅಲ್ಲದೆ, ಹೆಚ್ಐವಿ ಸೋಂಕಿತ ವ್ಯಕ್ತಿಯ ಮುಖಕ್ಕೆ ಸ್ಪ್ರೇ…
ಬೆಂಗಳೂರು : ವಾಲ್ಮೀಕಿ ನಿಗಮ ಹಾಗೂ ಮೈಸೂರು ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದನ್ನ ಮುಚ್ಚಿಹಾಕಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜಕೀಯ ನಾಟಕ ಆಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು. ಮೈಸೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಮೂಗಿನ ಅಡಿಯಲ್ಲಿ ಇವೆಲ್ಲ ಹಗರಣ ನಡೆದಿವೆ. ಆದರೆ ಈಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮುಚ್ಚಿಹಾಕಲು ನಾಟಕವಡುತ್ತಿದ್ದಾರೆ ಎಂದು ಆರೋಪಿಸಿದರು. ಸಿಎಂ ಮೂಗಿನಡಿ ಸಾವಿರಾರು ಕೋಟಿ ಬೆಲೆ ಬಾಳುವ ಮುಡಾ ಆಸ್ತಿ ಕಳ್ಳರ ಪಾಲಾಗಿದೆ. 69ನೇ ಇಸವಿಯಲ್ಲಿ ಭೂಮಿ ಕಳೆದುಕೊಂಡವರು ಇವತ್ತಿಗೆ ಜ್ಞಾನೋದಯವಾಗಿ ಅರ್ಜಿ ಕೊಟ್ಟಿದ್ದಾರಂತೆ. ಮುಡಾದವರು ಲಕ್ಷ ಲಕ್ಷ ಅಡಿಯನ್ನ ಬಿಟ್ಟು ಕೊಟ್ಟಿದ್ದಾರೆ. ಮುಡಾ ಲೂಟಿಯನ್ನ ನೋಡಿದರೆ ಚಾಲ್ಸ್ ಶೋಬರಾಜ್ ನನ್ನದು ಏನು ಹಗರಣ ಇಲ್ಲ ಅಂದುಕೊಳ್ಳುತ್ತಾರೆ ಎಂದರು.
ಮಂಡ್ಯ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರಿಂದ ಸ್ಯಾಂಡಲ್ ವುಡ್ ಗೆ ಕಳಂಕ ವಿಚಾರವಾಗಿ ಸಂಗೀತ ನಿರ್ದೇಶಕ ಹಂಸಲೇಖ ಅವರು ಮಾತನಾಡಿದ್ದು, ನಟ ದರ್ಶನ್ ನನ್ನು ನನ್ನ ಮಗುವಂತ ತಿಳಿದುಕೊಳ್ಳಿ ಎಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದಲ್ಲಿ ಈ ಕುರಿತಂತೆ ಮಾತನಾಡಿದ ಅವರು, ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಗೆ ಬೀಳುವುದು ಬೇಡ.ನಮ್ಮದು ಚಂದನವನ.ಒಂದು ಮಳೆಗೆ ಮರ ಒಣಗಿದರೇನಂತೆ ಇನ್ನೊಂದು ಮಳೆಗೆ ಕಾಡು ಬೆಳೆದೆ ಬೆಳೆಯುತ್ತದೆ. ಸಿನಿಮಾ ಕಲಾವಿದರಾದವರು ಸಣ್ಣದಾಗಿ ಯೋಚನೆ ಮಾಡಬೇಕು. ಸಿಟ್ಟನ್ನು ಸ್ಕ್ರಿಪ್ಟ್ ಮಾಡಬೇಕು.ದ್ವೇಷವನ್ನ ಕ್ಯಾರೆಕ್ಟರ್ ಮಾಡಬೇಕು. ನಾವು ಆ ರೀತಿ ಸಿನಿಮಾದಲ್ಲಿ ತೋರಿಸಬೇಕು ಅಷ್ಟೇ ನಿಜ ಜೀವನದಲ್ಲಿ ಸ್ಕ್ರಿಪ್ಟನ್ನು ತರಬಾರದು ನಿಜ ಜೀವನದಲ್ಲಿ ಕ್ಯಾರೆಕ್ಟರ್ ಆಗಬಾರದು ಇದು ಕಲಾವಿದರ ಕರ್ತವ್ಯ. ನಟ ದರ್ಶನ್ ನನ್ನ ಮಗು ಅಂತ ತಿಳಿದುಕೊಳ್ಳಿ. ಮಗು ತಪ್ಪು ಮಾಡಿದ್ದಾಗ ತಂದೆ ಎಷ್ಟು ನೋವು ಅನುಭವಿಸುತ್ತಾನೋ, ನಾನು ನೋವು ಅನುಭವಿಸಿದ್ದೇನೆ.…













