Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಮುಂಬರುವ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಮತ್ತು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ದಾನಾಪುರ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ನಡೆಸಲು ಪೂರ್ವ ಮಧ್ಯ ರೈಲ್ವೆಯು ಸೂಚಿಸಿದೆ. ರೈಲು ಸಂಖ್ಯೆ 03351 ದಾನಾಪುರ-ಎಸ್ಎಂವಿಟಿ ಬೆಂಗಳೂರು ವಿಶೇಷ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 22 ಮತ್ತು 29, 2024 ರಂದು (ಭಾನುವಾರ) ದಾನಾಪುರದಿಂದ ಮಧ್ಯಾಹ್ನ 3 ಗಂಟೆಗೆ ಹೊರಟು, ಮೂರನೇ ದಿನ (ಮಂಗಳವಾರ) ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಮಧ್ಯಾಹ್ನ 2:30 ಗಂಟೆಗೆ ಆಗಮಿಸಲಿದೆ. ರೈಲು ಸಂಖ್ಯೆ 03352 ಎಸ್ಎಂವಿಟಿ ಬೆಂಗಳೂರು-ದಾನಾಪುರ ವಿಶೇಷ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 24 ಮತ್ತು 31, 2024 ರಂದು (ಮಂಗಳವಾರ) ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 11:50ಕ್ಕೆ ಹೊರಟು, ಮೂರನೇ ದಿನ (ಗುರುವಾರ) ದಾನಾಪುರ ನಿಲ್ದಾಣವನ್ನು ರಾತ್ರಿ 11:55ಕ್ಕೆ ತಲುಪಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಅರಾ,…
ಬೆಳಗಾವಿ : ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಸ್ಪಷ್ಟಪಡಿಸಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಸುನಿಲ್ ಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ ಕಳೆದ ಮೂರು ವರ್ಷಗಳಲ್ಲಿ ಒಟ್ಟು 5751 ದಾಳಿಗಳನ್ನು ನಡೆಸಿ, 4437 ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಕರಣಗಳಲ್ಲಿ ಭಾಗಿಯಾದ 5021 ಆರೋಪಿತರನ್ನು ದಸ್ತಗಿರಿ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಬೆಳಗಾವಿ : ಬಳ್ಳಾರಿಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರಲ್ಲಿ ತಪ್ಪಿತಸ್ಥರಾದವರನ್ನು ಸುಮ್ಮನೆ ಬಿಡುವುದಿಲ್ಲ. ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿ, ಬಾಣಂತಿಯರ ಸಾವಿನ ಕುರಿತು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು. ಒಂದು ವೇಳೆ ನಾನು ತಪ್ಪಿತಸ್ಥನೆಂದು ತಿಳಿದು ಬಂದರೆ, ಯಾವುದೇ ಮುಲಾಜು ಇಲ್ಲದೇ, ನನ್ನ ಮೇಲಿನ ಕ್ರಮಕ್ಕೂ ಸಿದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ, ವಿರೋಧ ಪಕ್ಷದ ನಾಯಕರು ನಿಯಮ 69 ಅಡಿ ಬಾಣಂತಿಯರ ಸಾವಿನ ಕುರಿತು ಪ್ರಸ್ತಾಪಿಸಿದ್ದ ವಿಚಾರಗಳಿಗೆ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಉತ್ತರಿಸಿದರು.ಕಳೆದ ನವೆಂಬರ್ ತಿಂಗಳ 9, 10 ಹಾಗೂ 11 ತಾರೀಖಿನಂದು ಬಳ್ಳಾರಿ ಆಸ್ಪತ್ರೆಯಲ್ಲಿ 34 ಸಿಜೇರಿಯನ್ ಹೆರಿಗೆ ಮಾಡಲಾಗಿದೆ. ಈ ಪೈಕಿ 7 ಬಾಣಂತಿಯರು ಹೆರಿಗೆ ನಂತರ ತೀವ್ರ ತರನಾಗಿ ಅಸ್ವಸ್ಥಗೊಂಡರು. ಇದರಲ್ಲಿ 5 ಬಾಣಂತಿಯರು ಸಾವನಪ್ಪಿದರೆ, ಇಬ್ಬರು ಸಾವಿನಿಂದ ಪಾರಾದರು. ಘಟನೆ ತಿಳಿದ ತಕ್ಷಣವೇ, ಸಾವಿನ…
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಎಂಎಲ್ಸಿ ಸಿಟಿ ರವಿ ಅವರು ಅವಾಚ್ಯವಾಗಿ ಪದ ಬಳಿಸಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಟಿ ರವಿ ವಿರುದ್ಧ ದೂರು ನೀಡಿದ್ದಾರೆ. ಅಲ್ಲದೆ ಪೊಲೀಸರಿಗೂ ದೂರು ನೀಡಲು ಅವರು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಹಿನ್ನೆಲೆ ಏನು? ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯರು ಪ್ರಾಸ್ಟೂ* ಎಂಬ ಪದ ಬಳಕೆ ಮಾಡಿದ್ದಾರೆ. ಸಿ.ಟಿ. ರವಿ ಅವರು ಲಕ್ಷ್ಮಿ ಹೆಬ್ಬಾಳ್ಕರ್ ವೇ* ಎಂದು ಹೇಳಿದ್ದಾರೆ. ಈ ಪದವನ್ನು ಬಳಕೆ ಮಾಡಿದ್ದರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೆಂಡಾಮಂಡಲವಾಗಿದ್ದಾರೆ. ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ. ಈ ಬಗ್ಗೆ ಬಿಜೆಪಿ ಸದಸ್ಯರು ಸಿ.ಟಿ. ರವಿ ಅವರು ಹಾಗೇ ಮಾತನಾಡಿಲ್ಲ ಎಂದು ವಾದ ಮಾಡಿದ್ದಾರೆ. ಇನ್ನು ಈ ಘಟನೆ ನಡೆಯುವ ಸ್ವಲ್ಪ ಮುಂಚೆ ಸಿ.ಟಿ. ರವಿ ಹೊರಗೆ…
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಎಂಎಲ್ಸಿ ಸಿಟಿ ರವಿ ಅವರು ಅವಾಚ್ಯವಾಗಿ ಪದ ಬಳಿಸಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಸುವರ್ಣ ಸೌಧದ ಪಡಸಾಲೆಯಲ್ಲಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಖಾಸಗಿ ಪಿಎ ಸಂಗನಗೌಡ ದಾಂದಲೆ ಮಾಡಿದ್ದು, ಪೊಲೀಸರು ಈ ವೇಳೆ ಪಿಎ ಸಂಗನಗೌಡ ಸೇರಿದಂತೆ 30ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಖಾಸಗಿ ಪಿಎ ಸಂಗನಗೌಡ ನಿಂದಲೇ ಈ ಒಂದು ದಾಂದಲೆ ನಡೆದಿದ್ದು, ಗೇಟ್ ಬಳಿ ಕೋಟ್ ಬಿಚ್ಚಿದು ಸಿಟಿ ರವಿ ವಿರುದ್ಧ ನಿಂದನೆ ಮಾಡಿದರು. ಬಿಜೆಪಿ ಎಂಎಲ್ಸಿ ಸಿಟಿ ರವಿ ಎದುರೇ ಸಂಗನಗೌಡ ಕೂಗಾಡಿದ್ದಾನೆ. ಗೇಟ್ ತಳ್ಳಿ ಒಳನುಗ್ಗಲು ಖಾಸಗಿ ಪಿಎ ಸಂಗನಗೌಡ ಯತ್ನಿಸಿದ್ದಾನೆ. ಈ ವೇಳೆ ತಡೆಯಲು ಯತ್ನಿಸಿದ ಮಾರ್ಷಲ್ ಗಳ ಜೊತೆಗೂ ಕೂಡ ತಳ್ಳಟ, ನೂಕಾಟ ನಡೆದಿದೆ. ಸಂಗನಗೌಡ ಆರ್ಭಟಕ್ಕೆ ಮಾರ್ಷಲ್ ಗಳು ಕೂಡ ಕೆಲಕಾಲ ದಂಗಾಗಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಖಾಸಗಿ ಪಿಎ ಸಂಗನಗೌಡನನ್ನು ಇದೀಗ ಪೊಲೀಸರು ವಶಕ್ಕೆ…
ಬೆಳಗಾವಿ : ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ವೇ* ಎಂಬ ಬಳಕೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲಿಯೇ ಪರಿಶೀಲನೆ ಕಾರ್ಯ ನಡೆಯುತ್ತಿರುವ ನಡುವೆಯೇ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಸಿ.ಟಿ. ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಈ ಕುರಿತು ಪೊಲೀಸರು 15 ಜನರನ್ನು ಅರೆಸ್ಟ್ ಮಾಡಿದ್ದಾರೆ. ಇಂದು ಸುವರ್ಣಸೌಧಕ್ಕೆ ಕಾರಿನಲ್ಲಿ ಆಗಮಿಸಿದ ಎಂಎಲ್ಸಿ ಸಿ.ಟಿ. ರವಿ ಅವರು ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಏಕಾಏಕಿ ರವಿ ಅವರ ಕಾರಿನತ್ತ ನುಗ್ಗಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ. ರವಿ ಕಾರು ಮುತ್ತಿಗೆ ಹಾಕಿದ ಕಾರ್ಯಕರ್ತರು ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಹಿಡಿದು ಹಿಂದಕ್ಕೆ ತಳ್ಳಿದ್ದಾರೆ. ಈ ವೇಳೆ ಸುಮಾರು 15ರ ಜನರು ಗುಂಪುಗೂಡಿ…
ಬೆಳಗಾವಿ : ಅಂಬೇಡ್ಕರ್ ಭಾವಚಿತ್ರ ಹಿಡಿದು ಇಂದು ಸದನದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಬಿಜೆಪಿ MLC ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಸಿದ್ದಾರೆ ಎಂದು ಆರೋಪಿಸಿ ಇದೀಗ, ಹೆಬ್ಬಾಳ್ಕರ್ ಬೆಂಬಲಿಗರಿಂದ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಲಾಗಿದ್ದು, ಸುವರ್ಣಸೌಧದ ಮೊಗಸಾಲೇಯಲ್ಲಿ ಭಾರಿ ಹೈಡ್ರಾಮಾ ನಡೆಯಿತು.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಸಿಟಿ ರವಿ ಮೇಲೆ ಹಲ್ಲಿಗೆ ಯತ್ನಿಸಲಾಗಿದೆ ಎನ್ನಲಾಗಿದೆ. ಇದಕ್ಕೂ ಮೊದಲು, ಬೆಳಗಾವಿಯ ಸುವರ್ಣಸೌಧದ ಬಳಿ ಎಂಎಲ್ಸಿ ಸಿಟಿ ರವಿ ಅವರ ಕಾರಿಗೆ ಮುತ್ತಿಗೆ ಹಾಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಂಬಲಿಗರು ಘೋಷಣೆ ಕೂಗಿ ಧಿಕ್ಕಾರ ಕೂಗಿದರು. ಬಿಜೆಪಿಯ ಎಂ.ಎಲ್ ಸಿ ಸಿಟಿ ರವಿ ವಿರುದ್ಧ ಧಿಕ್ಕಾರ ಕೂಗಿ ಘೋಷಣೆ ಕೂಗಿದರು.ಅಶ್ಲೀಲ ಪದ ಬಳಕೆ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಿಟಿ ರವಿಗೆ ಮುತ್ತಿಗೆ ಹಾಕಲಾಯಿತು. ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಘೋಷಣೆ ಕೂಗಿದರು. ಸುವರ್ಣ ಸೌಧದ ಬಳಿ ಎಂಎಲ್ಸಿ ಸೀಟಿ ರವಿಗೆ…
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಐಐಎಸ್ ಸಿ ವಿದ್ಯಾರ್ಥಿ ಅನ್ಮೋಲ್ ಗಿಲ್ ನಾಪತ್ತೆಯಾಗಿದ್ದ. ಇದೀಗ ಇಂದು ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಐಐಎಸ್ಸಿ ವಿದ್ಯಾರ್ಥಿ ಅನ್ಮೋಲ್ ಗಿಲ್ ಪತ್ತೆಹಚ್ಚಿದ್ದಾರೆ. ಆತನನ್ನು ಅನ್ಮೋಲ್ ಎಂದು ಪತ್ತೆ ಹಚ್ಚಿ ಪೊಲೀಸರು ಆತನ ಪೋಷಕರಿಗೆ ಅವವನ್ನು ಒಪ್ಪಿಸಿದ್ದಾರೆ. ಡಿಸೆಂಬರ್ 16ರಂದು ಅನ್ಮೋಲ್ ಗಿಲ್ ನಾಪತ್ತೆಯಾಗಿದ್ದ. ಕಳೆದೆರಡು ದಿನದಿಂದ ನಗರದ ವಿವಿಧ ಭಾಗದಲ್ಲಿ ಅನ್ಮೋಲ್ ಓಡಾಡಿದ್ದಾನೆ. ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿ ಅನ್ಮೋಲ್ ರಾತ್ರಿಯನ್ನು ಕಳೆದಿದ್ದಾನೆ. ಇಷ್ಟವಿಲ್ಲದ ಕೋರ್ಸ್ ಗೆ ಪೋಷಕರು ಸೇರಿಸಿ ಹಾಸ್ಟೆಲ್ ಗೆ ಕೂಡ ಸೇರಿಸಿದ್ದರು. ಹಾಸ್ಟೆಲ್ ಸೇರಿಸಿದ್ದು ಸೇರಿ ಹಲವು ಕಾರಣಕ್ಕೆ ಗಿಲ್ ಮನನೊಂದಿದ್ದ. ಸದ್ಯ ಅನ್ಮೋಲ್ ಪತ್ತೆ ಹಚ್ಚಿ ಪೋಷಕರಿಗೆ ಯಶವಂತಪುರ ಪೊಲೀಸರು ವಿಧಿಗೆ ಒಪ್ಪಿಸಿದ್ದಾರೆ. ಐಐಎಸ್ ಸಿ ಯಲ್ಲಿ ಅನ್ಮೋಲ್ ಗಿಲ್ ಎಂಟೆಕ್ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನ ಯಶವಂತಪುರ ಬಳಿ ಇರುವ ಐಐಅ ಎಸ್ ಸಿ ಕ್ಯಾಂಪಸ್…
ಬೆಂಗಳೂರು : ಸಾರ್ವಜನಿಕರಿಂದ ವ್ಯಾಪಕವಾದ ಅಂತಹ ದೂರುಗಳು ಬಂದಂತಹ ಹಿನ್ನೆಲೆಯಲ್ಲಿ ಇಂದು ಉಪಲೋಕಾಯುಕ್ತ ನ್ಯಾ.ಬಿ ವೀರಪ್ಪ ಹಾಗೂ ಎಸ್.ಪಿ ವಂಶಿಕೃಷ್ಣ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಬೆಸ್ಕಾಂ ಹಾಗೂ ಜಲಮಂಡಳಿ ಕಚೇರಿಯ ಮೇಲೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೌದು ಬೆಂಗಳೂರಿನ ಎಂಬಿ ರಸ್ತೆಯ ಬೆಸ್ಕಾಂ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಹಾಗೂ ಎಸ್ ಪಿ ವಂಶಿಕೃಷ್ಣ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.ಬೆಸ್ಕಾಂ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ಕಡತ ಪರಿಶೀಲನೆ ಮಾಡುತ್ತಿದ್ದಾರೆ. ಬೆಸ್ಕಾಂ ಮತ್ತು ಜಲ ಮಂಡಳಿಯ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಇದೀಗ ದಾಳಿ ಮಾಡಿದ್ದಾರೆ.
ಮಂಗಳೂರು : ಪಹಣಿ ಒಂದರಲ್ಲಿ ತಮ್ಮ ಹೆಸರನ್ನು ಸೇರಿಸಲು ಕಂದಾಯ ಇಲಾಖೆಯ ನಿರೀಕ್ಷಕನೊಬ್ಬ ವ್ಯಕ್ತಿಯ ಒಬ್ಬರ ಬಳಿ ನಾಲ್ಕು ಲಕ್ಷ ರೂಪಾಯಿಯ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ಸಂದರ್ಭದಲ್ಲಿ ವ್ಯಕ್ತಿಯಿಂದ ನಾಲ್ಕು ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಕಂದಾಯ ನೀರಿಕ್ಷಕ ದಿನೇಶ್ ಎನ್ನುವ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಮಂಗಳೂರು ಜಿಲ್ಲೆಯ ಮುಲ್ಕಿಯಲ್ಲಿ ನಡೆದಿದೆ. ಹೌದು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಆರ್ ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಪಹಣಿಯಲ್ಲಿ ಹೆಸರು ಸೇರಿಸಲು 4 ಲಕ್ಷ ರೂಪಾಯಿ ಲಂಚಕ್ಕೆ ಆರ್ ಐ ಬೇಡಿಕೆ ಇಟ್ಟಿದ್ದ. ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದರೂ ಕೂಡ ಒಂದು ವರ್ಷದಿಂದ ಕ್ರಮ ಕೈಗೊಂಡಿರಲಿಲ್ಲ. ಸರ್ಕಾರಿ ಕೆಲಸಕ್ಕೆ ಕಂದಾಯ ನಿರೀಕ್ಷಕ ದಿನೇಶ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕುರಿತಂತೆ ಮಂಗಳೂರು ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಕೆಯಾಗಿತ್ತು ವ್ಯಕ್ತಿಯ ದೂರಿನ ಮೇರೆಗೆ ಲೋಕಾಯುಕ್ತ ಎಸ್ ಪಿ ನಟರಾಜ್ ನೇತ್ರತ್ವದಲ್ಲಿ…












