Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : 2028 ರ ವರೆಗೆ ಈ ಸರ್ಕಾರ ನಡೆಯುವುದು ಬಹಳ ಕಷ್ಟ. ಸರ್ಕಾರವನ್ನು ನಾವೇ ಕೆಡುವುತ್ತೇವೆ ಅಂತ ನಾನು ಹೇಳುವುದಿಲ್ಲ. ಆದರೆ ಈ ಒಂದು ಸರ್ಕಾರದಿಂದ ಜನರು ಬೇಸತ್ತು ಹೋಗಿದ್ದಾರೆ. ಹಾಗಾಗಿ ಜನರೇ ತೀರ್ಮಾನಿಸುತ್ತಾರೆ. ಜನ ಬಯಸಿದರೆ ಮತ್ತೆ ಯಾಕೆ ನಾನು ಸಿಎಂ ಆಗಬಾರದು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುವ ಆಸೆ ಬಿಚ್ಚಿಟ್ಟಿದ್ದಾರೆ. ಮಂಡ್ಯದಲ್ಲಿ ಉದ್ಯೋಗ ಮೇಳ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲೇ ಸಚಿವರು ಮತ್ತು ಶಾಸಕರಗಳ ನಡುವೆ ಅಸಮಾಧಾನ ಸ್ಪೋಟವಾಗಿದೆ. ಅದು ಇನ್ನೂ ಹೊರ ಬಿದ್ದಿಲ್ಲ. ಅದು ಯಾವಾಗ ಸ್ಪೋಟಗೊಳ್ಳುತ್ತದೆ ಅವಾಗ ಸರ್ಕಾರ ಬೀಳಲಿದೆ. ಸರ್ಕಾರದ ನಿಷ್ಕ್ರಿಯತೆ ಹಾಗೂ ಹಳ್ಳಿಗಳಿಗೆ ಶಾಸಕರು ಭೇಟಿ ಮಾಡದೆ ಇರುವಂತಹ ವಾತಾವರಣ ನಿರ್ಮಾಣವಾಗಿದೆ. ಹಲವಾರು ಜನ ಕಾಂಗ್ರೆಸ್ ಶಾಸಕರು ಸರ್ಕಾರದ ನಡವಳಿಕೆಯ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ.2028 ರ ವರೆಗೆ ಈ ಸರ್ಕಾರ ಇರುವುದಿಲ್ಲ. ಮತ್ತೆ ನಾನೇ ಈ ರಾಜ್ಯದ ಸಿಎಂ ಆಗ್ತೀನಿ ಜನ…
ಹುಬ್ಬಳ್ಳಿ : ಚುನಾವಣೆಗೆ ಟಿಕೇಟ್ ಕೊಡಿಸುವುದಾಗಿ ಕೋಟಿ ಕೋಟಿ ಹಣ ಪಡೆದು ವಂಚನೆ ಮಾಡಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧ ಆರೋಪ ಕೇಳಿ ಬಂದಿದೆ.ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರು ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅವರನ್ನು ಬಂಧಿಸಿದ್ದಾರೆ. ಈ ಕುರಿತು ಪ್ರಹ್ಲಾದ್ ಜೋಶಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಸಹೋದರನ ವಿರುದ್ಧ ಆರೋಪ ಬಂದಿದೆ. ನಾನು ಗೋಪಾಲ್ ಬೇರೆಯಾಗಿ 35 ವರ್ಷವಾಗಿದೆ. ನನ್ನ ಮತ್ತು ಗೋಪಾಲ್ ಮಧ್ಯೆ ಯಾವುದೇ ವ್ಯವಹಾರ ಇಲ್ಲ.ಗೋಪಾಲ ಜೋಶಿ ನನ್ನ ಸಹೋದರನಾಗಿದ್ದರೂ, ಅವರಿಂದ ನಾನು ಬೇರೆಯಾಗಿ 35 ವರ್ಷವಾಗಿದೆ. ನಮ್ಮಿಬ್ಬರ ಮಧ್ಯೆ ಯಾವುದೇ ಸಂಬಂಧ ಉಳಿದಿಲ್ಲ. ತಪ್ಪು ಮಾಡಿದವರ ವಿರುದ್ಧ ಧಾರಾಳವಾಗಿ ಕಠಿಣ ಶಿಕ್ಷೆ ಕೈಗೊಳ್ಳಬಹುದು ಎಂದು ಜೋಶಿ ಸ್ಪಷ್ಟನೆ ನೀಡಿದ್ದಾರೆ. ನಾವು ನಾಲ್ವರು ಸಹೋದರರು ಅದರಲ್ಲಿ ಓರ್ವ ತೀರಿಹೋಗಿದ್ದಾನೆ. ಇನ್ನೋರ್ವ ಗೋಪಾಲ್ ಜೋಶಿ. ಕಳೆದ ಬಾರಿ ಇವರ ಮೇಲೆ ಇಂಥದ್ದೇ ಆರೋಪ ಕೇಳಿ ಬಂದಿತ್ತು. ಪದೇ…
ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಅವರನ್ನು ಬೆಂಗಳೂರಿನ ಬಸವೇಶ್ವರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೌದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ ಜೋಶಿಯನ್ನು ಅರೆಸ್ಟ್ ಮಾಡಿದ್ದಾರೆ. ಜೆಡಿಎಸ್ ಮಾಜಿ ಶಾಸಕ ದೇವಾನಂದ್ ಚೌಹಾಣ್ ಪತ್ನಿ ಸುನಿತಾ ಚೌಹಾಣ್ ಅವರ ಬಳಿ ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಹ್ಲಾದ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಅವರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಕರಣ ಹಿನ್ನೆಲೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ಪಡೆದು ವಂಚಿಸಿದ ಆರೋಪದಡಿ ಇಲ್ಲಿನ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಡಿ ಅಧಿಕಾರಿಗಳು ಮೈಸೂರಿನಲ್ಲಿರುವ ಮುಡಾ ಕಚೇರಿಯ ಮೇಲೆ ದಾಳಿ ಮಾಡಿ ಹಲವು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ ಕೇಳಿ ಬಂದಿದೆ. ಅದು ಕೂಡ ಮುಡಾದಲ್ಲೇ ಆಗಿರುವಂಥದ್ದು ಎಂದು ಹೇಳಲಾಗುತ್ತಿದೆ. ಹೌದು ಮುಡಾದಲ್ಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಭೂ ಅಕ್ರಮ ಮಾಡಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಅವರು ಗಂಭೀರವಾದಂತಹ ಆರೋಪ ಮಾಡಿದ್ದಾರೆ.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ 7 ಗುಂಟೆ ಜಾಗವನ್ನು 2023 ರಲ್ಲಿ ಸೆಪ್ಟೆಂಬರ್ 29 ರಂದು ರಂದು ಸಿಎಂ ಪತ್ನಿ ಪಾರ್ವತಿ ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ನಗರದ ಕೆಆರ್ಎಸ್ ರಸ್ತೆಯಲ್ಲಿರುವ ಸರ್ವೇ ನಂಬರ್ 454ರ ಜಾಗ ನೋಂದಾಯಿಸಿಕೊಳ್ಳಲಾಗಿತ್ತು. ಅಲ್ಲಿ ಗಣೇಶ್ ದೀಕ್ಷಿತ್ ಎಂಬುವವರಿಗೆ ಸೇರಿದ 4 ಎಕರೆ 11 ಗುಂಟೆ ಜಾಗವಿತ್ತು. ಅದರಲ್ಲಿ 20 ಗುಂಟೆ ಜಾಗವನ್ನು ಸಿಎಂ ಪತ್ನಿ ಪಾರ್ವತಿ…
ಬೆಂಗಳೂರು : ಬಿಗ್ಬಾಸ್ ಕನ್ನಡ ಸೀಸನ್ 11ರಿಂದ ಲಾಯರ್ ಜಗದೀಶ್ ಹೊರ ಹಾಕಲ್ಪಟ್ಟಿದ್ದಾರೆ. ಮನೆಯಲ್ಲಿ ಅಶಿಸ್ತು ತೋರಿ, ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ ಕಾರಣ ಜಗದೀಶ್ ಅನ್ನು ಹೊರಗೆ ಹಾಕಲಾಗಿದೆ. ಹೊರಗಡೆ ಬಂದ ಬಳಿಕ ಅವರು, ಸಾಮಾಜಿಕ ಜಾಲತಾಣದ ಮೂಲಕ ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ ಎಂದು ಅವರು ತಿಳಿಸಿದ್ದಾರೆ. ನಿಮ್ಮ ಪ್ರತಿ ಒಂದು ಚಪ್ಪಾಳೆ, ಸಂದೇಶ, ನಿಮ್ಮ ಆಶೀರ್ವಾದ ನನ್ನ ಈ ಬಿಗ್ಬಾಸ್ ಪಯಣ ಯಶಸ್ಸು, ಅದು ನೀವು ಇಟ್ಟ ಈ ನಂಬಿಕೆ. ಮತ್ತೊಮ್ಮೆ ಕೋಟಿ ಕೋಟಿ ನಮನ. ಸಾರ್ಥಕ ಆಯಿತು, ನನ್ನ ಈ ಹುಟ್ಟು, ಈ ಪ್ರೀತಿ, ನನ್ನ ಗೆಲುವಿಗೆ ನೀವು ಕೊಟ್ಟ ಆ ಒಡನಾಟ, ವಿಶ್ಲೇಷಣೆ ಮಾಡಲು ನನ್ನ ಬಳಿ ಪದಗಳು ಕಡಿಮೆ ಎಂದು ತಿಳಿಸಿದ್ದಾರೆ. ನೂರಾರು ಕ್ಯಾಮೆರಾ, ಸಾವಿರಾರು ಬಿಗ್ಬಾಸ್ ಸಿಬ್ಬಂದಿ, ಆ ನಿರ್ದೇಶಕ, ಆ ಮಾಂತ್ರಿಕ ತಂತ್ರಜ್ಞರು, ಅವರ 24/7 ಡೆಡಿಕೇಷನ್ ಹಾಗೂ 20 ಕೋಟಿಗೂ ಹೆಚ್ಚಿನ ಬಿಗ್ಬಾಸ್ ಅಭಿಮಾನಿ…
ಬೆಂಗಳೂರು : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದ್ದರ ಕುರಿತಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಕೋರ್ಟ್ ಆದೇಶ ನೀಡಿದರೆ ಶಾಸಕ ಯತ್ನಾಳ ಅವರನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ನಾವು ಕೋರ್ಟ್ಗೆ ಕೇಳಿಕೊಂಡಿದ್ದೇವೆ. ಅದು ನಾನ್ ಬೇಲೆಬಲ್ ವಾರಂಟ್ ಆಗಿದೆ. ಕೋರ್ಟ್ ಸೂಚನೆ ಕೊಟ್ಟರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಬಂಧನ ಪ್ರಕ್ರಿಯೆ ಸೇರಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಇನ್ನು ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯವರು ವ್ಯಕ್ತಿಯೊಬ್ಬರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಎಸೆಗಿರುವ ಆರೋಪಕ್ಕೆ ಸಂಬಂಧ ಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಈ ಒಂದು ಕೇಸ್ ಗೆ ಸಂಬಂಧಪಟ್ಟಂತೆ ಪ್ರಹ್ಲಾದ್ ಜೋಶಿ ಸಹೋದರನಿಗಾಗಿ ಹುಡುಕಾಟ ನಡೆಯುತ್ತಿದೆ…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರಿನಲ್ಲಿರುವ ಮುಡಾ ಕಚೇರಿಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿದ್ದು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದೆ ವೇಳೆ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಮೂಲ ದಾಖಲೆಗಳನ್ನು ಕೊಡಿ. ನಮಗೆ ನಕಲಿ ಪ್ರತಿಗಳು ಬೇಡ ಎಂದು ಇಡಿ ಅಧಿಕಾರಿಗಳು ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಒಂದು ಪ್ರಕಾರಣ ಗಂಭೀರವಾದಂತಹ ಸ್ವರೂಪವನ್ನು ಪಡೆದುಕೊಂಡಿದೆ ಎನ್ನಲಾಗುತ್ತಿದೆ. ನಮಗೆ ನಕಲು ಪ್ರತಿ ಬೇಡ ನಮಗೆ ಮೂಲ ದಾಖಲೆಗಳನ್ನು ತಕ್ಷಣ ಕೊಡಿ ಎಂದು ಅಧಿಕಾರಿಗಳು ಮುಡಾd ಕಾರ್ಯದರ್ಶಿಗೆ ತಿಳಿಸಿದ್ದಾರೆ.
ಚಿತ್ರದುರ್ಗ : ಯುವಕನೊಬ್ಬ ನನ್ನ ಪ್ರೀತಿಸು ಎಂದು ಕಾಟ ಕೊಡುತ್ತಿದ್ದ. ಇದರಿಂದ ಮನನೊಂದ ಯುವತಿಯೊಬ್ಬಳು ಕಾಲೇಜಿನ ಕಟ್ಟಡದ ಮೇಲಿನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ನಗರದ ಡಾನ್ ಬೋಸ್ಕೋ ಕಾಲೇಜಿನ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದು ಪ್ರೇಮಾ(18) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಚಳ್ಳಕೆರೆ ಮೂಲದ ಪ್ರೇಮಾ ಡಾನ್ ಬೋಸ್ಕೋ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಟ್ಟಡದ ಮೇಲಿನಿಂದ ಬಿದ್ದು ಪ್ರೇಮಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರೇಮಾಗೆ ಯುವನೊಬ್ಬ ನನ್ನ ಪ್ರೀತಿಸು ಎಂದು ವಿಪರೀತ ಕಾಟ ಕೊಡುತ್ತಿದ್ದನಂತೆ. ಸದ್ಯ ಈ ಬಗ್ಗೆ ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯವರು ವ್ಯಕ್ತಿಯೊಬ್ಬರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಈ ಒಂದು ಕೇಸ್ ಗೆ ಸಂಬಂಧಪಟ್ಟಂತೆ ಪ್ರಹ್ಲಾದ್ ಜೋಶಿ ಸಹೋದರನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ತರಹದ ಕೇಸ್ಗಳು ಬಂದಾಗ ಗಂಭೀರವಾಗಿಯೇ ತೆಗೆದುಕೊಳ್ಳಲಾಗುತ್ತದೆ. ಈಗಾಗಲೇ ಅವರಿಗಾಗಿ ಹುಡುಕಾಟ ನಡೆಯುತ್ತಿದೆ, ಅವರಿನ್ನೂ ಸಿಕ್ಕಿಲ್ಲ ಎಂದು ಅವರು ತಿಳಿಸಿದರು. ಪ್ರಕರಣ ಹಿನ್ನೆಲೆ? ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ಪಡೆದು ವಂಚಿಸಿದ ಆರೋಪದಡಿ ಇಲ್ಲಿನ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಸುನೀತಾ ಚವ್ಹಾಣ್ ಎಂಬುವರು ನೀಡಿದ ದೂರಿನನ್ವಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ,…
ಬೆಂಗಳೂರು : ಮೈಸೂರಿನ ಮುಡಾ ಕಚೇರಿಯ ಮೇಲೆ ED ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಸುಮಾರು 20 ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಈ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ರವರು ಪ್ರತಿಕ್ರಿಯೆ ನೀಡಿದ್ದು ಇದೊಂದು ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಒಂದು ದಾಳಿ ರಾಜಕೀಯ ಪ್ರೇರಿತವಾಗಿದೆ. ವಿರೋಧಪಕ್ಷಗಳ ಮೇಲೆ ಪ್ರಯೋಗ ಮಾಡುವುದು ಹೊಸದೇನಲ್ಲ. ಹತ್ತು ಹದಿನೈದು ದಿನದ ಹಿಂದೆ ಇಡಿ ಅಧಿಕಾರಿಗಳು ಕೇಸ್ ದಾಖಲಿಸಿದ್ದರು. ಸಾಮಾನ್ಯ. ಮುಡಾ ಕೇಸ್ನಲ್ಲಿ ಯಾವುದೇ ಹಣಕಾಸು ಮಹಿವಾಟು ನಡೆದಿಲ್ಲ. ಈ ಪ್ರಕರಣದಲ್ಲಿ ಏನೂ ಇಲ್ಲ ಅನ್ನೋದು ಅವರಿಗೆ ಗೊತ್ತಾಗುತ್ತದೆ ಎಂದು ತಿಳಿಸಿದರು. ಲೋಕಾಯುಕ್ತ ಪ್ರವೇಶಕ್ಕೆ ಅವಕಾಶವಿದೆ ಸತ್ಯಂ ಶಿವರಾ ಬರಬೇಕು ಹಾಗಾಗಿ ಇದೊಂದು ರಾಜಕೀಯ ಪ್ರೇರಿತ ಪ್ರಕರಣ ಯಾವುದೇ ಸತ್ಯಾಂಶ ಇಲ್ಲ ಈ ಕುರಿತು ಕೊನೆಗೆ ಅವರಿಗೂ ಅರ್ಥವಾಗುತ್ತದೆ ಎಂದು ಅವರು ತಿಳಿಸಿದರು. ಇಂದು ಮುಡಾ ಕಚೇರಿ ಮೇಲೆ ಸುಮಾರು 20 ಅಧಿಕಾರಿಗಳು ದಾಳಿ…














