Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮುಡಾ ಅಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಅವರು, ಲೋಕಾಯುಕ್ತದ ತನಿಖೆಯ ಮೇಲೆ ನಂಬಿಕೆ ಇಲ್ಲ ಎಂದು ಹೈಕೋರ್ಟಿಗೆ ಸಿಬಿಐ ತನಿಖೆ ನಡೆಸಬೇಕೆಂದು ಅರ್ಜಿ ಸಲ್ಲಿಸಿದ್ದರು.ಇದೀಗ ಇಂದು ಹೈಕೋರ್ಟ್ ನಲ್ಲಿ ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಲಿದೆ. ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಹಾಜರಾಗಿದ್ದರು. ಅಲ್ಲದೆ ಪತ್ನಿ ಪಾರ್ವತಿ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭೂಮಾಲಿಕ ದೇವರಾಜು ಅವರು ಕೂಡ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು.ಹಾಗಾಗಿ ಇಂದು ನಡೆಯುವ ವಿಚಾರಣೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಪರ ವಕೀಲರು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾ ಗೊಳಿಸಬೇಕು ಎಂದು ಮನವಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತರು ಕಳಾದಂತಹ ನಟೇಶ್ ಹಾಗೂ ದಿನೇಶ್ ಕುಮಾರ್ ಅವರನ್ನು…
ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ಮದುವೆ ಮಂಟಪದಿಂದಲೇ ಫೋಟೋಗ್ರಾಫರ್ ಒಬ್ಬರನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿರುವ ಘಟನೇ ಬೆಳಕಾವಿ ನಗರದ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಈ ಒಂದು ಘಟನೆ ನಡೆದಿದೆ. ಅಪಹರಣಕ್ಕೆ ಒಳಗಾಗಿ ಹಲ್ಲೆಗೆ ಒಳಗಾದಂತಹ ಫೋಟೋಗ್ರಾಫರ್ ನನ್ನು ಉಮೇಶ್ ಹೊಸೂರು ಎಂದು ಗುರುತಿಸಲಾಗಿದೆ. ಕಿಡ್ನಾಪ್ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಫೋಟೋಗ್ರಾಫರ್ ಉಮೇಶ ಹೊಸೂರು ಅವರನ್ನು ಕಿಡ್ನಾಪ್ ಮಾಡಿ ಹಲ್ಲೆ ನಡೆಸಲಾಗಿದೆ. ಉಮೇಶ್ ಬೈಲಹೊಂಗಲ ಪಟ್ಟಣದಲ್ಲಿ ವಾಸವಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್ ಅಂತ ಉಮೇಶ್ ಬೆಳಗಾವಿಗೆ ಬಂದಿದ್ದರು. ಈ ವೇಳೆ ಉಮೇಶ್ ಅವರನ್ನು ಕಿಡ್ನಾಪ್ ಮಾಡಿ ನಾಲ್ವರು ಹಲ್ಲೆ ಮಾಡಿದ್ದಾರೆ. ಬೈಲಹೊಂಗಲ ತಾಲೂಕಿನ ಚಿವಟಗೊಂಡಿ ಕ್ರಾಸ್ ಬಳಿ ಕಾರು ನಿಲ್ಲಿಸಿ ಹಲ್ಲೆ ನಡೆಸಿದ ಬಳಿಕ ದುಷ್ಕರ್ಮಿಗಳು ಅವರನ್ನು ಅಲ್ಲಿಗೆ ಬಿಟ್ಟು ಹೋಗಿದ್ದಾರೆ. ಉಮೇಶ್ ಹೆಣ್ಣು ಮಕ್ಕಳನ್ನು ಕಾಡಿಸುತ್ತಿದ್ದ ಎಂದು ಆರೋಪ ಕೇಳಿ ಬಂದಿದ್ದರಿಂದ ಹಲ್ಲೆ ನಡೆಸಲಾಗಿದೆ. 8 ಜನರ ವಿರುದ್ಧ ಇದೀಗ…
ಬೆಂಗಳೂರು : ಗುತ್ತಿಗೆದಾರ ವೇಲು ನಾಯ್ಕರ್ ನಿಗೆ ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಫ್ ಎಸ್ ಎಲ್ ವರದಿಯ ಪ್ರಕಾರ ಈ ಒಂದು ಆಡಿಯೋದಲ್ಲಿ ಶಾಸಕ ಮುನಿರತ್ನ ಅವರದ್ದೇ ಧ್ವನಿ ಎಂದು FSL ವರದಿಯಲ್ಲಿ ದೃಢಪಟ್ಟಿದೆ. ಚೆಲುವರಾಜು ಜತೆಗೆ ಮಾತನಾಡುವ ವೇಳೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆಂದು ಗುತ್ತಿಗೆದಾರ ವೇಲು ನಾಯ್ಕರ್ ಅವರು ಮುನಿರತ್ನ ಅವರ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೇ ಮುನಿರತ್ನ ನಿಂದನೆ ಮಾಡಿದ್ದ ಆಡಿಯೋವನ್ನು ಸಹ ಪೊಲೀಸರಿಗೆ ನೀಡಿದ್ದರು. ಈ ದೂರಿನ ಮೇರೆಗೆ ಮುನಿರತ್ನ ವಿರುದ್ಧ ಸೆಪ್ಟೆಂಬರ್ 13 ರಂದು ಎಫ್ಐಆರ್ ದಾಖಲಾಗಿತ್ತು. ಬಳಿಕ ಸೆ.14ರಂದು ಎಸ್ಐಟಿ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು. ಆ ವೇಳೆ ಪೆನ್ ಡ್ರೈವ್ ಆಡಿಯೋ ಕ್ಲಿಪ್ ಹಾಗೂ ಬಂಧನ ವೇಳೆ ಪಡೆಯಲಾಗಿದ್ದ ಶಾಸಕ ಮುನಿರತ್ನ ವಾಯ್ಸ್ ಸ್ಯಾಂಪಲ್ ಅನ್ನು ಎಫ್ಎಸ್ಎಲ್ಗೆ ಕಳುಹಿಸಿದರು. ಈಗ ಎಫ್ಎಸ್ಎಲ್ ರಿಪೋರ್ಟ್ ಎಸ್ಐಟಿ ಪೊಲೀಸರ…
ನವದೆಹಲಿ : ಭಾರತೀಯ ಕರಾವಳಿ ಪಡೆಯು ದೇಶದ ಇತಿಹಾಸದಲ್ಲೇ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮೀನುಗಾರರ ಬೋಟ್ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 25 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಒಂದು ಕಾರ್ಯಾಚರಣೆಯಲ್ಲಿ ಇಬ್ಬರು ಮಯನ್ಮಾರ್ ಪ್ರಜೆಗಳನ್ನು ಅರೆಸ್ಟ್ ಮಾಡಲಾಗಿದೆ. ಹೌದು ಪೋರ್ಟ್ ಬ್ಲೇರ್ ನಿಂದ 150 ಕಿಲೋಮೀಟರ್ ದೂರದಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದರು. ಮೀನುಗಾರಿಕೆ ಬೋಟ್ನಲ್ಲಿ ಬಂಧಿತರು ಡ್ರಗ್ಸ್ ಸಾಗಿಸುತ್ತಿದ್ದರು. ಅನುಮಾನದ ಮೇಲೆ ಬೊಟ್ ಅನ್ನು ಪರಿಶೀಲನೆ ಮಾಡುವ ವೇಳೆ ಡ್ರಗ್ಸ್ ಪತ್ತೆಯಾಗಿದೆ. ಇತ್ತೀಚಿಗೆ ಬೃಹತ್ ಪ್ರಮಾಣದ ಡ್ರಗ್ಸ್ ಅನ್ನು ಕರಾವಳಿ ಪಡೆ ವಶಕ್ಕೆ ಪಡೆದುಕೊಂಡಿತ್ತು.ಭಾರತೀಯ ಕೋಸ್ಟ್ ಗಾರ್ಡ್ ಅಂಡಮಾನ್ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯಿಂದ ಸುಮಾರು 5500 ಕೆಜಿ ತೂಕದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆಲೆ 25000 ಕೋಟಿ ರೂ. ಆಗಿದೆ. ಈ ಸರಕು ಎಲ್ಲಿಂದ ಬರುತ್ತಿತ್ತು ಮತ್ತು ಯಾರಿಗೆ ಮತ್ತು ಎಲ್ಲಿಗೆ ಸರಬರಾಜು ಮಾಡಬೇಕಿತ್ತು ಎಂಬುದರ…
ಕಲಬುರ್ಗಿ : ಇತ್ತೀಚಿಗೆ ವಿಜಯಪುರ ನಗರದಲ್ಲಿ ಆಸ್ಪತ್ರೆಯಿಂದ ನವಜಾತ ಶಿಶುವನ್ನು ವ್ಯಕ್ತಿ ಒಬ್ಬ ಕಿಡ್ನ್ಯಾಪ್ ಮಾಡಿದ್ದ. ಬಳಿಕ ಮತ್ತೆ ಆಸ್ಪತ್ರೆಗೆ ಬಂದು ತಾಯಿಯ ಕೈಗೆ ಒಪ್ಪಿಸಿದ್ದ ಘಟನೆ ನಡೆದಿತ್ತು. ಇದೀಗ ಕಲ್ಬುರ್ಗಿ ಜಿಮ್ಸ್ ಆಸ್ಪತ್ರೆಯಲ್ಲಿ ಒಂದು ದಿನದ ಗಂಡು ಮಗುವನ್ನು ಮಹಿಳೆಯರಿಬ್ಬರೂ ನರ್ಸ್ ವೇಷದಲ್ಲಿ ಬಂದು ಅಪಹರಿಸಿರುವ ಘಟನೆ ನಡೆದಿದೆ. ಹೌದು ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯ ವಾರ್ಡ್ ನಂಬರ್ 115ರಲ್ಲಿ ಮಗು ಅಪಹರಣವಾಗಿದೆ. ನಿನ್ನೆ ಮುಂಜಾನೆ ನಾಲ್ಕು ಗಂಟೆಗೆ ಗಂಡು ಮಗುವಿಗೆ ಕಸ್ತೂರಿ ಎನ್ನುವ ಮಹಿಳೆ ಜನ್ಮ ನೀಡಿದ್ದರು. ರಕ್ತಪಾಸಣೆಗೆ ಮಗು ಕರೆದುಕೊಂಡು ಬನ್ನಿ ಎಂದು ನಕಲಿ ನರ್ಸ್ ಗಳು ಹೇಳಿದ್ದರು. ಸಂಪೂರ್ಣವಾಗಿ ಇಬ್ಬರು ಮಹಿಳೆಯರು ಮುಖ ಮುಚ್ಚಿಕೊಂಡು ಬಂದಿದ್ದರು. ರಕ್ತ ತಪಾಸಣೆಗಾಗಿ ಮಗುವನ್ನು ತೆಗೆದುಕೊಂಡು ಸಂಬಂಧಿಕರು ಹೋಗಿದ್ದರು. ಈ ವೇಳೆ ನಕಲಿ ನರ್ಸ್ಗಳು ಮಗುವನ್ನು ನಮಗೆ ಕೊಡಿ ಅಂತ ಹೇಳಿದ್ದಾರೆ ಬಳಿಕ ಮಗುವನ್ನು ಎತ್ತಿಕೊಂಡು ಮಹಿಳೆಯರು ಪರಾರಿಯಾಗಿದ್ದಾರೆ. ಹೆತ್ತ ಮಗುವನ್ನು ಕಳೆದುಕೊಂಡು ಇದೀಗ ಕಸ್ತೂರಿ ಕಣ್ಣೀರು ಇಡುತ್ತಿದ್ದಾರೆ. ಮೂಲತಃ ಚಿತಾಪುರ…
ಹಾಸನ : ತನ್ನನ್ನು ಮದುವೆಯಾಗುವಂತೆ ಯುವಕನೊಬ್ಬ ಯುವತಿಗೆ ಪೀಡಿಸುತ್ತಿದ್ದ. ಈ ವೇಳೆ ಮದುವೆಗೆ ಒಪ್ಪದ ಯುವತಿಯನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕಾರಗೋಡು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಮದುವೆಗೆ ಒಪ್ಪದ ಯುವತಿಯ ಕೊಲೆಗೆ ಯತ್ನ ನಡೆದಿರುವ ಘಟನೆ ನಡೆದಿದೆ. ಮದುವೆಗೆ ನಿರಾಕರಿಸಿದ ಗಾನವಿ ಎನ್ನುವ ಯುವತಿಗೆ ಮೋಹಿತ್ ಎನ್ನುವ ಯುವಕ ಕೊಲೆಗೆ ಯತ್ನಿಸಿದ್ದಾನೆ. ಆಲೂರು ತಾಲೂಕಿನ ಕಾರುಗೋಡು ಗ್ರಾಮದ ಮೋಹಿತ್ ಮತ್ತು ಗಾನವಿ ಎರಡು ವರ್ಷದಿಂದ ಸ್ನೇಹಿತರಾಗಿದ್ದರು. ಮೋಹಿತ್ ನಿಂದ ಕೆಲ ದಿನಗಳಿಂದ ಗಾನವಿ ಅಂತರವನ್ನು ಕಾಯ್ದುಕೊಂಡಿದ್ದಳು. ಆದರೂ ಮದುವೆ ಆಗುವಂತೆ ಮೋಹಿತ್ ಒತ್ತಾಯ ಮಾಡುತ್ತಿದ್ದ. ಮೋಹಿತ್ ಕಾಟದ ಬಗ್ಗೆ ಗಾನವಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಳು. ಯಾರ ತಂಟೆಗೂ ಯಾರು ಬರದಂತೆ ಎರಡು ಕುಟುಂಬಗಳು ಮಾತುಕತೆ ನಟಿಸಿದ್ದವು. ಗ್ರಾಮಸ್ಥರ ಜೊತೆಗೆ ಮುಚ್ಚಳಿಕೆ ಬರಿಸುವ ತಯಾರಿಯಲ್ಲಿ ಕುಟುಂಬಗಳು ಇದ್ದವು. ಈ ವೇಳೆ ಪಟ್ಟಣ ಪಂಚಾಯಿತಿ ಮುಂಭಾಗ ನಿಂತಿದ್ದ ಗಾನವಿ…
ಬೆಂಗಳೂರು : ಸೌದಿಯಲ್ಲಿ ನಡೆದ 2 ದಿನಗಳ ಕಾಲ ನಡೆದ 2025 IPL ಆಟಗಾರರ ಹರಾಜು ಪ್ರಕ್ರಿಯೆ ಮುಗಿದಿದ್ದು, ಮೊದಲನೇ ದಿನ ಕನ್ನಡಿಗ KL ರಾಹುಲ್ ಅವರನ್ನು ಕೈಬಿಟ್ಟ RCB ಮ್ಯಾನೇಜ್ಮೆಂಟ್ ವಿರುದ್ಧ ಅಭಿಮಾನಿಗಳು ಸಹಜವಾಗಿ ಅಸಮಾಧಾನಗೊಂಡಿದ್ದರು. ಬಳಿಕ ನಿನ್ನೆ ನಡೆದ ಮತ್ತೊಂದು ಹರಾಜು ಪ್ರಕ್ರಿಯೆಯಲ್ಲಿ ಹಲವು ಸ್ಟಾರ್ ಆಟಗಾರರನ್ನು ಆರ್ ಸಿ ಬಿ ಖರೀದಿಸುವ ಮೂಲಕ ಅಭಿಮಾನಿಗಳಿಗೆ ಕೊಂಚ ನಿರಾಳ ತಂದಿದೆ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಂದು ಸ್ಟ್ರಾಂಗ್ ಟೀಮ್ ಆಗಿದ್ದು, ಈ ಒಂದು ತಂಡಕ್ಕೆ ನಾಯಕ ಯಾರು ಎನ್ನುವ ಪ್ರಶ್ನೆ ಉದ್ಭವಿಸಿದೆ. ಆರ್ಸಿಬಿ ಖರೀದಿಸಿರುವ ಎಲ್ಲಾ ಆಟಗಾರರಲ್ಲಿ ಒಳ್ಳೆಯ ಬ್ಯಾಟ್ಸ್ಮ ಮ್ಯಾನ್ ಮತ್ತು ಬೌಲರ್ಸ್ ಗಳಿದ್ದಾರೆ. ಆದರೆ ನಾಯಕತ್ವ ಜವಾಬ್ದಾರಿ ವಹಿಸುವ ಆಟಗಾರ ಯಾರು ಇಲ್ಲ. ಹೀಗಾಗಿ ಸಹಜವಾಗಿ ಕಿಂಗ್ ವಿರಾಟ್ ಕೊಹ್ಲಿ ಅವರೇ ಈ ಬಾರಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರ್ಸಿಬಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ…
ತೆಲಂಗಾಣ : ಹೈದರಾಬಾದ್ ನಲ್ಲಿ ಮಧ್ಯಾಹ್ನದ ಊಟದ ವೇಳೆ ಒಟ್ಟಿಗೆ ಮೂರು ಪೂರಿಗಳನ್ನು ತಿಂದು ಉಸಿರುಗಟ್ಟಿ 11 ವರ್ಷದ ಶಾಲಾ ಬಾಲಕ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ, ನಿಮ್ಮ ಮಗ ಊಟದ ಸಮಯದಲ್ಲಿ ಒಟ್ಟಿಗೆ ಮೂರು ಪೂರಿಗಳನ್ನು ತಿಂದು ಉಸಿರು ಗಟ್ಟಿ ಅಸ್ವಸ್ಥನಾಗಿ ಸಾವನ್ನಪ್ಪಿದ್ದಾನೆ ಎಂದು ಕರೆ ಬಂದಿತ್ತು ಎಂದು ಮೃತ ಬಾಲಕನ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಸ್ವಸ್ಥನಾಗಿದ್ದ ಬಾಲಕನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.
ಚನ್ನಪಟ್ಟಣ : ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದಂತಹ ಹೆಚ್ಡಿ ಕುಮಾರಸ್ವಾಮಿ ಹಾಗೂ ಬಿಜೆಪಿಯ ರಾಜ್ಯಾಧ್ಯಕ್ಷರಾಗಿರುವಂತಹ ಬಿವೈ ವಿಜಯೇಂದ್ರ ಅವರ ಪಿತೂರಿಯಿಂದ ನಾನು ಬಿಜೆಪಿಯಿಂದ ಹೊರ ಬಂದೆ ಹೊರತು, ನಾನಾಗೆ ಬಿಟ್ಟು ಬರಲಿಲ್ಲ ಎಂದು ಕಾಂಗ್ರೆಸ್ ಶಾಸಕ ಸಿಪಿ ಯೋಗೇಶ್ವರ್ ತಿಳಿಸಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಬಿಟ್ಟು ಬರಲಿಲ್ಲ ಪಿತೂರಿಯಿಂದಾಗಿ ಹೊರ ಬಂದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಶಾಸಕ ಸಿಪಿ ಯೋಗೇಶ್ವರ್ ಹೇಳಿಕೆ ನೀಡಿದರು. ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ಪಿತೂರಿ ಮಾಡಿದರು. ಇವರ ಪಿತೂರಿಯಿಂದಾಗಿ ನಾನು ಬಿಜೆಪಿಯಿಂದ ಹೊರ ಬಂದೆ. ಅನಿವಾರ್ಯ ರಾಜಕೀಯ ಸ್ಥಿತಿ ನನ್ನನ್ನು ಆ ರೀತಿ ಮಾಡಿಸಿದೆ.ನಾನು ಪಕ್ಕ ಕಾಂಗ್ರೆಸ್ಸಿಗ ನಾನು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಜೆಡಿಎಸ್ ನವರು ಸೋತು ಸೋಣವಾಗಿದ್ದಾರಲ್ಲ ಅದಕ್ಕೇನು ಹೇಳುತ್ತಾರೆ? ಮಗನ್ನೇ ಗೆಲ್ಲಿಸಿಕೊಳ್ಳದವರು ಕೇಂದ್ರ ಸಚಿವರಾಗಿ ಏನು ಪ್ರಯೋಜನ? ಕುಮಾರಸ್ವಾಮಿಗೆ ಇದ್ರೆ ಈ ಊರು ಬಿಟ್ಟರೆ ಇನ್ನೊಂದು ಊರು ಎಂದು ಚನ್ನಪಟ್ಟಣದಲ್ಲಿ ಕಾಂಗ್ರೆಸ್…
ಮೈಸೂರು : ಚನ್ನಪಟ್ಟಣ ಉಪಚುನಾವಣೆಯ ಪ್ರಚಾರಕ್ಕೆ ಎಚ್ ಡಿ ದೇವೇಗೌಡರು ಜೆಡಿಎಸ್ ಶಾಸಕ ಜಿಟಿ ದೇವೇಗೌಡರಿಗೆ ಕರೆ ಮಾಡಿ ಕರೆದರೂ ಕೂಡ ಅವರು ಬಂದಿಲ್ಲ ಎಂದು ಶಾಸಕ ಸಾರಾ ಮಹೇಶ್ ತಿಳಿಸಿದ್ದರು. ಇವರ ಈ ಒಂದು ಹೇಳಿಕೆಗೆ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ತಿರುಗೇಟು ನೀಡಿದ್ದು, ಉಪಚುನಾವಣೆಯ ಪ್ರಚಾರಕ್ಕೆ ಎಚ್ ಡಿ ದೇವೇಗೌಡರು ನನ್ನನ್ನು ಕರೆದೇ ಇಲ್ಲ. ಒಂದು ವೇಳೆ ಕರೆದಿದ್ದೇನೆ ಎಂದು ಹೇಳಿದರೆ ಈಗಲೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸವಾಲು ಹಾಕಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಪ್ರಚಾರಕ್ಕೆ ದೇವೇಗೌಡರು ನನ್ನನ್ನು ಕರೆದಿಲ್ಲ. ಸಾರ ಮಹೇಶ್ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಸುಳ್ಳು ಹೇಳಿ ಚಾಮುಂಡಿ ಬೆಟ್ಟಕ್ಕೆ ಬಾ ಅಂದರೆ ಆಗುತ್ತಾ? ಈ ಹಿಂದೆ ವಿಶ್ವನಾಥ ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಹೋದರು ಅವರ ಕಥೆ ಏನಾಯ್ತು? ಆ ಕಥೆ ನನಗೂ ಆಗಬೇಕಾ? ನಾನು ಹೇಳುತ್ತಿರುವುದೇ ಸತ್ಯ. ನಾನು ತಪ್ಪು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳುತ್ತೇನೆ. ಒಂದು ಬಾರಿ ಯಾವುದೋ ತಪ್ಪು…













