Author: kannadanewsnow05

ಕೊಡಗು : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದ್ದು ರಾಮನಗರದಲ್ಲಿ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರಿಗೆ ಮದ್ಯಪಾನ ಮಾಡಿಸಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ ಡ್ಯಾನ್ಸ್ ಮಾಡುವಂತೆ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.ಈ ಕುರಿತಂತೆ ಉಪನ್ಯಾಸಕರಾದ ವಿಶ್ವನಾಥ್, ಲಕ್ಷ್ಮೀಶ್, ನಾಗೇಶ್ ಅವರ ವಿರುದ್ಧ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಹೌದು ರಾಮನಗರ ಜಿಲ್ಲೆ ಕನಕಪುರ ಪಟ್ಟಣದ ರೂರಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಕ್ಟೋಬರ್ 5ರಿಂದ 10ರವರೆಗೆ ಕೊಡಗು ಮಡಿಕೇರಿ ಪ್ರವಾಸ ಕೈಗೊಂಡಿದ್ದಾಗ ಈ ಒಂದು ಘಟನೆ ನಡೆದಿದೆ. ಮೂರು ವಿದ್ಯಾರ್ಥಿಯನೀರನ್ನು ಕೂಡಿ ಹಾಕಿ ಮದ್ಯ ಕುಡಿಸಿದ ಆರೋಪ ಕೇಳಿ ಬಂದಿದೆ. ಕಾಲೇಜಿಗೆ ಬಂದ ಬಳಿಕ ಈ ಕುರಿತು ಮಹಿಳಾ ಉಪನ್ಯಾಸಕರಿಗೆ ಮಾಹಿತಿ ನೀಡಲಾಗಿದೆ. ಮಹಿಳಾ ಉಪನ್ಯಾಸಕಿಯರ ಬಳಿ ವಿದ್ಯಾರ್ಥಿನಿಯರು ಹೇಳಿದ್ದರು. ಆದರೆ ಕಾಲೇಜು ಅಂದಮೇಲೆ ಇದು ಕಾಮನ್ ಎಂದು ಅಧ್ಯಾಪಕಿಯರು ವಿದ್ಯಾರ್ಥಿನಿಯರಿಗೆ ತಿಳಿಸಿದ್ದಾರೆ. ನಂತರ ಮಕ್ಕಳ ಹಕ್ಕುಗಳ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಅಲ್ಲದೆ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಇದೇ ಅಕ್ಟೋಬರ್ 22ರಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇದರ ಮಧ್ಯನಟ ದರ್ಶನ್ ವಿರುದ್ಧದ ಹಳೆ ಕೇಸಿಗೆ ಮತ್ತೆ ಮರುಜೀವ ಬಂದಿದೆ. ನಿರ್ಮಾಪಕ ಭರತಗೆ ಕರೆ ಮಾಡಿ ದರ್ಶನ್ ಬೆದರಿಕೆ ಹಾಕಿದ್ದ ಕೆಸ್ ಇದೀಗ ಮರುಜೀವ ಪಡೆದುಕೊಂಡಿದೆ. ಈ ಕುರಿತಂತೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಹೊಸದಾಗಿ ಎನ್ ಸಿ ಆರ್ ದಾಖಲಾಗಿದೆ. 2022 ಆಗಸ್ಟ್ ನಲ್ಲಿ ಕೆಂಗೇರಿ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿತ್ತು.ನಟ ಧ್ರುವನ್ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿತ್ತು.ಸಿನಿಮಾ ವಿಚಾರವಾಗಿ ನಟ ದರ್ಶನ್ ಬಳಿ ದ್ರುವನ್ ಹೋಗಿದ್ದರು. ದರ್ಶನ್ ಮೂಲಕ ನಿರ್ಮಾಪಕ ಭರತ್ಗೆ ದ್ರುವಂತ್ ಕರೆ ಮಾಡಿಸಿದ್ದರು. ಸಿನಿಮಾ ಚಿತ್ರೀಕರಣ ಮುಗಿಸದಿದ್ದರೆ ನೀನೇ ಇರುವುದಿಲ್ಲ ಅಂತ ದರ್ಶನ್ ಬೆದರಿಕೆ ಹಾಕಿದ್ದಾರೆ. ನಿರ್ಮಾಪಕ ಭರತ್…

Read More

ಕಲಬುರ್ಗಿ : ಕಳೆದ ಎರಡು ದಿನಗಳ ಹಿಂದೆ ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ನಡೆದಂತಹ ಕರ್ಮಕಾಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಲ್ಬುರ್ಗಿ ಕಮಿಷನರ್ ಡಾ.ಶರಣಪ್ಪ ಅವರು ಈ ಒಂದು ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದ್ದಾರೆ. ಹೌದು ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಕರ್ಮಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಿ ಕಲ್ಬುರ್ಗಿ ಪೊಲೀಸ್ ಕಮಿಷನರ್ ಡಾ. ಶರಣಪ್ಪ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ? ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಅಲ್ಲಿ ರಾಜಾತಿಥ್ಯ ಪಡೆದುಕೊಳ್ಳುವ ವಿಚಾರವಾಗಿ ನಂತರ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾದರಿಯಲ್ಲೇ ಇದೀಗ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಆರೋಪಿಗಳು ಜೈಲಿನಲ್ಲಿ ಇದ್ದುಕೊಂಡೆ ಸ್ಮಾರ್ಟ್ ಫೋನ್ ಬಳಸಿ ವಿಡಿಯೋ ಕಾಲ್ ಮಾಡಿರುವ ಫೋಟೋ ಇದೀಗ ವೈರಲ್ ಆಗಿದತ್ತು. ವಿಶಾಲ, ಸಾಗರ ಹಾಗೂ ಸೋನು…

Read More

ಕೊಪ್ಪಳ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರಿನಲ್ಲಿ ಮಟನ್ ಚಿಕನ್ ಅಂಗಡಿ ಒಂದು ಓಪನ್ ಆಗಿದ್ದು, ಇದೀಗ ಅಂಗಡಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದೆ. ಈ ಒಂದು ಅಂಗಡಿ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿದೆ. ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಬಸ್‌ ನಿಲ್ದಾಣದ ಬಳಿ ಅಂಗಡಿಯ ಮಾಲಕ ಖಾದಿರ್‌ ಬಾಬಣ್ಣ ಕಲಾಲ್‌ 20 ವರ್ಷಗಳಿಂದ ಸಚಿವೆ ಶೋಭಾ ಅವರ ಅಭಿಮಾನಿಯಾಗಿದ್ದಾರೆ. ಅಂಗಡಿಗೂ ಸಹ ಶೋಭಾ ಕರಂದ್ಲಾಜೆ ಮಟನ್‌ ಚಿಕನ್‌ ಸೆಂಟರ್‌ ಎನ್ನುವ ಬೋರ್ಡ್‌ ಹಾಕಿಸಿದ್ದಾರೆ. ಕುಕನೂರು ಪಟ್ಟಣದ ಯುವಕ ಖಾಧೀರ್ ಕಲಾಲ್‌ ಎನ್ನುವ ಯುವಕ ಆರಂಭಿಸಿರುವ ಉದ್ಯಮ ಇದೀಗ ಸಾಕಷ್ಟು ಸದ್ದು ಮಾಡುತ್ತಿದೆ. ಅದಕ್ಕೆ ಆತ ತನ್ನ ಉದ್ಯಮಕ್ಕೆ ಇಟ್ಟಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರು. ಪಟ್ಟಣದ ನಿವಾಸಿ ಖಾಧೀರ್ ಬಾಬಣ್ಣ ಕಲಾಲ್‌ ಎನ್ನುವ ಯುವಕ ಕಳೆದ 20 ವರ್ಷಗಳಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಅಪ್ಪಟ ಅಭಿಮಾನಿಯಾಗಿದ್ದಾನೆ. ಕುಕನೂರಿನ ಖಾಧೀರ್…

Read More

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು ಹಾಗಾಗಿ ಅಭ್ಯರ್ಥಿಗಳನ್ನು ಫೈನಲ್ ಮಾಡುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಅಂಬಿ ವೈ ವಿಜಯೇಂದ್ರ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಟಿಕೆಟ್ ನೀಡುವ ವಿಚಾರವಾಗಿ ವರಿಷ್ಠರ ಜೊತೆಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಬಿಜೆಪಿ 2:1 ಅನುಪಾತದಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದ್ದು, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯಲಿದ್ದು, ಇನ್ನೂ ಚನ್ನಪಟ್ಟಣ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬುದರ ಕುರಿತು ಬಿಜೆಪಿ ವರಿಷ್ಠರು ಎಚ್ ಡಿ ಕುಮಾರಸ್ವಾಮಿ ಅವರಿಗೆ ಜವಾಬ್ದಾರಿ ವಹಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೊಂದು ಕಡೆ ಈ ಬಾರಿ ಟಿಕೆಟ್ ನನಗೆ ಎಂದು ಮಾಜಿ ಶಾಸಕ ಸಿಪಿ ಯೋಗೇಶ್ವರ್ ಅವರು ಹೇಳಿಕೆ ನೀಡಿದ್ದಾರೆ. ಹಾಗಾಗಿ ಬಿ ವೈ ವಿಜಯೇಂದ್ರ ಅವರಿಗೆ ಯಾವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವುದು ದೊಡ್ಡ ಸವಾಲಾಗಿದೆ. ಹಾಗಾಗಿ ಅವರು ನಾಳೆ ದೆಹಲಿಗೆ ಪ್ರಯಾಣಿಸಲಿದ್ದು, ವರಿಷ್ಠರ ಜೊತೆಗೆ ಚರ್ಚಿಸಿ ಸೂಕ್ತ ಅಭ್ಯರ್ಥಿಗೆ…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಬಿ ನಾಗೇಂದ್ರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಇಡಿ ಅಧಿಕಾರಿಗಳು ನನ್ನ ಮೇಲೆ ಯಾವುದೇ ಕೇಸ್ ದಾಖಲಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ರಾಜಕೀಯ ದ್ವೇಷಕ್ಕಾಗಿ ಸಿಬಿಐ, ಇ.ಡಿ.ಯನ್ನು ದುರ್ಬಳಕೆ ಮಾಡಿಕೊಂಡರು. ಯಾರ್‍ಯಾರ ಮೇಲೆ ಕೇಸು ಹಾಕಿದ್ದಾರೆ ಎಂಬುದನ್ನು ನೀವೂ ನೋಡಿದ್ದೀರಿ. ಅಂದಾಗ ಮಹಿಳೆಯೊಬ್ಬರು ನಿಮ್ಮ ಮೇಲು ಇಡಿ ಕೇಸ್ ದಾಖಲಿಸಿದೆ ಅಂದಾಗ ಸಿಎಂ ಸಿದ್ದರಾಮಯ್ಯ ಇಲ್ಲಮ್ಮ ನನ್ನ ಮೇಲೆ ಕೇಸು ಹಾಕಿಲ್ಲ. ನಾಗೇಂದ್ರ ಏನು ಹೇಳಿದರು ಎಂದು ಕೇಳಿದ್ರಲ್ಲ. ಸರ್ಕಾರ ಅಸ್ಥಿರಗೊಳಿಸಲು ಇ.ಡಿ. ದುರ್ಬಳಕೆ ಮಾಡಿಕೊಳ್ತಿದಾರೆ. ನನ್ನ ಮೇಲೆ ಕೇಸು ಹಾಕಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಸುಳ್ಳು ಹೇಳಲ್ಲ. ಕೊಟ್ಟ ಮಾತು ಮರೆಯಲ್ಲ. ನಮ್ಮ ಸರ್ಕಾರ ಎಲ್ಲಾ ಭರವಸೆ ಈಡೇರಿಸುವ ಕೆಲಸ ಮಾಡುತ್ತಿದೆ.…

Read More

ಬೆಂಗಳೂರು: ದಮ್ಮು, ತಾಕತ್ತಿನ ಬಿಜೆಪಿಯವರಿಗೆ ನನ್ನ ಸವಾಲು, ಎಲ್ಲ ತನಿಖಾ ಏಜೆನ್ಸಿಗಳನ್ನು ಕಳುಹಿಸಲಿ, ಎಲ್ಲಿ ಬೇಕಾದರೂ ರೈಡ್ ಮಾಡಿಸಲಿ, ನಮ್ಮ ಕುಟುಂಬದ 50 ಸಾವಿರ ಕೋಟಿ ರೂ.ಗಳ ಆಸ್ತಿಯನ್ನು ಹುಡುಕಿಕೊಡಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಟ್ವೀಟ್ ಮಾಡಿರುವ ಅವರು, ಫೇಕ್ ಫ್ಯಾಕ್ಟರಿಯನ್ನು ಸ್ಥಾಪಿಸಿ ಸುಳ್ಳುಗಳ ವ್ಯಾಪಾರಕ್ಕೆ ಹೆಸರುವಾಸಿಯಾಗಿರುವ ಬಿಜೆಪಿ ಹಾಗೂ ಅದರ ನಾಯಕರು ಬಹಳ ಹಿಂದಿನಿಂದಲೂ ನಮ್ಮ ಕುಟುಂಬದ ಮೇಲೆ ₹50,000 ಕೋಟಿ ಆಸ್ತಿಯ ಆರೋಪ ಮಾಡುತ್ತಿದ್ದಾರೆ, ಹೀಗೆ ಆರೋಪ ಮಾಡಿದ್ದ ಬಿಜೆಪಿಯ ಕೆಲ ಪುಡಿ ಮುಖಂಡರಿಗೆ ಲೀಗಲ್ ನೋಟಿಸ್ ಕಳಿಸಿದ್ದೆ, ಆದರೆ ಇದುವರೆಗೂ ಅವರ್ಯಾರೂ 50,000 ಕೋಟಿಯ ಅಸ್ತಿಯನ್ನು ತೋರಿಸದಿರುವುದು ನನಗೆ ನಿರಾಸೆಯನ್ನುಂಟುಮಾಡಿದೆ. ಕಳೆದ ಹನ್ನೊಂದು ವರ್ಷ ವರ್ಷದಿಂದ ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದೆ, ಸೋಕಾಲ್ಡ್ ಶಕ್ತಿಮಾನ್ ಪ್ರಧಾನಿ ಇದ್ದಾರೆ, ಐಟಿ, ಇಡಿ, ಸಿಬಿಐಗಳಿಗೆ ಇವರ ಕೈನಲ್ಲೇ ಇದ್ದಾವೆ, ಹೀಗಿದ್ದೂ ಇದುವರೆಗೂ ನಮ್ಮ…

Read More

ಬೆಂಗಳೂರು : ಈಗಾಗಲೇ ಬೆಂಗಳೂರಿನ ಜನರು ಮಳೆಯ ಹೊಡೆತಕ್ಕೆ ಸಂಪೂರ್ಣವಾಗಿ ನಲುಗಿ ಹೋಗಿದ್ದಾರೆ. ಇದೀಗ ಇಂದು ಮಳೆ ನಿಂತಿದ್ದ ಕಾರಣ ಜನರು ಸ್ವಲ್ಪ ಸುಧಾರಿಸಿಕೊಂಡಿದ್ದು ಇದೀಗ ಮತ್ತೆ ರಾಜ್ಯದಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಭಾರಿ ಮಳೆಯ ಆಗುವ ಮುನ್ಸೂಚನೆ ಕುರಿತು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಮಾತನಾಡಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಅ.21ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ 7 ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ತುಮಕೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಕ್ಟೋಬರ್ 18 ಮತ್ತು 19 ರಂದು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು,…

Read More

ಕಲಬುರ್ಗಿ : ಇತ್ತೀಚಿಗೆ ಕಲಬುರ್ಗಿ ಜೈಲಿನಲ್ಲಿ ಕೈದಿಗಳು ಗುಟ್ಕಾ ಸಿಗರೇಟ್ ಸರಿದಂತೆ ಮಾದಕ ವಸ್ತುಗಳನ್ನು ಬಳಸುತ್ತಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಕಮಿಷನರ್ ನೇತೃತ್ವದಲ್ಲಿ ದಾಳಿ ನಡೆದಿತ್ತು. ಇದೀಗ ಜೈಲಿನ ವಿರುದ್ಧ ಮತ್ತೊಂದು ಗಂಭೀರವಾದ ಆರೋಪ ಕೇಳಿ ಬಂದಿದ್ದು, ಜೈಲಿನಲ್ಲಿರುವ ಉಗ್ರನೊಬ್ಬ ಸಹಕೈದಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಹನಿ ಟ್ರ್ಯಾಪ್ ಮಾಡಿರುವ ಆರೋಪ ಕೇಳಿ ಬಂದಿದೆ. ಹೌದು ಭಯೋತ್ಪಾದನೆ ಪ್ರಕರಣದ ವಿಚಾರಣಾಧೀನ ಕೈದಿ ಜುಲ್ಫಿಕರ್ ಹಾಗೂ ಶಿವಮೊಗ್ಗದ ರೌಡಿ ಶೀಟರ್ ಬಚ್ಚನ್ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.ಕೆಲ ಕೈದಿಗಳನ್ನು ವಿಡಿಯೊ ಕಾಲ್‌ ನೆಪದಲ್ಲಿ ಹನಿ ಟ್ರ್ಯಾಪ್‌ಗೆ ಕೆಡವಿ, ಅವರಿಗೆ ಹಣದ ಬೇಡಿಕೆ ಇರಿಸುತ್ತಿದ್ದಾರೆ. ಕೈದಿಗಳಿಂದ ಹಣ ಪಡೆದ ಕೆಲ ಜೈಲು ಸಿಬ್ಬಂದಿಯ ದೃಶ್ಯಗಳನ್ನೂ ವಿಡಿಯೊ ಮಾಡಿಕೊಂಡು ಅವರಿಗೂ ಬೆದರಿಕೆ ಹಾಕುತ್ತಿದ್ದಾರೆ. ಈ ಕುರಿತಾಗಿ ಜೈಲಿನ ಕೈದಿಯೊಬ್ಬರ ಫೋನ್‌ ಕರೆಯ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಭಯೋತ್ಪಾದನೆ ಪ್ರಕರಣದ ವಿಚಾರಣಾಧೀನ ಕೈದಿ ಜುಲ್ಫಿಕರ್ ಹಾಗೂ ಶಿವಮೊಗ್ಗದ ರೌಡಿ ಶೀಟರ್ ಬಚ್ಚನ್, ಕೊಲೆ ಪ್ರಕರಣದ ಸಜಾ ಕೈದಿ ಸಾಗರ ಶಿವಪ್ಪ…

Read More

ಬೆಂಗಳೂರು : ಈಗಾಗಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ಬಿಸಿ ಊಟ ಹಾಗೂ ವಾರಕ್ಕೆ ಆರು ದಿನ ಮೊಟ್ಟೆ ವಿತರಿಸುವ ಯೋಜನೆ ಜಾರಿ ಮಾಡಿದೆ.ಇದೀಗ ಎಲ್ಲಾ ಸರ್ಕಾರಿ ಮಕ್ಕಳಿಗೆ ಸರ್ಕಾರ ಸಿಹಿ ಸುದ್ದಿ ಒಂದು ನೀಡಿದ್ದು, ಉಚಿತವಾಗಿ ಟ್ಯೂಷನ್ ಹೇಳಿ ಕೊಡುವ ಯೋಜನೆ ಜಾರಿ ಮಾಡುವ ಚಿಂತನೆ ನಡೆಸುತ್ತಿದೆ. ಹೌದು ಈಗಾಗಲೆ ಶೈಕ್ಷಣಿಕ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಅಲ್ಲದೆ ಪಠ್ಯಕ್ರಮ ವಿಚಾರದಲ್ಲಿ ಹಲವು ವಿಷಯಗಳು ಮಕ್ಕಳಿಗೆ ಕಬ್ಬಿಣದ ಕಡಲೆಯಂತಾಗಿವೆ. ಖಾಸಗಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸುವ ಪೋಷಕರೇನೋ ದುಡ್ಡು ಕೊಟ್ಟು ಪ್ರೈವೇಟ್ ಟ್ಯೂಷನ್ ತರಗತಿಗೆ ಕಳುಹಿಸುತ್ತಾರೆ. ಆದರೆ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ರಾಜ್ಯ ಸರ್ಕಾರ ಫ್ರೀ ಟ್ಯೂಷನ್ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ. ವಿದ್ಯಾರ್ಥಿ ಯಾವ ತರಗತಿಯ ವಿಷಯದಲ್ಲಿ ಹಿಂದೆ ಇದ್ದಾನೆ ಎಂದು ಅರ್ಥ ಮಾಡಿಕೊಂಡು ಸ್ಪೆಷಲ್ ಟ್ಯೂಷನ್​ಗೆ ಕಳುಹಿಸುತ್ತಿದ್ದಾರೆ. ಈಗ ಈ ಭಾಗ್ಯ ಸರ್ಕಾರಿ ಶಾಲೆಗಳ ಮಕ್ಕಳಿಗೂ ಬರುತ್ತಿದೆ. ಮುಂಜಾನೆ…

Read More