Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಇಲ್ಲಿನ ಬುರಾರಿ ಸರ್ಕಾರಿ ಆಸ್ಪತ್ರೆ ಮತ್ತು ಮಂಗೋಲ್ಪುರಿಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಬಾಂಬ್ ಬೆದರಿಕೆ ಕೇಳಿ ಬಂದಿತ್ತು. ಇದಾದ ಬಳಿಕ ಅಂದರೆ 2 ಗಂಟೆ ಅಂತರದಲ್ಲೇ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಸ್ವೀಕರಿಸಿದ 2 ಗಂಟೆಗಳ ಅಂತರದಲ್ಲೇ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.ಕೂಡಲೇ ಎಚ್ಚೆತ್ತುಕೊಂಡಿರುವ ದೆಹಲಿ ಪೊಲೀಸರು ಅಗ್ನಿಶಾಮಕ ದಳದ ಅಧಿಕಾರಿಗಳೊಂದಿಗೆ ಶೋಧಕಾರ್ಯ ನಡೆಸುತ್ತಿದ್ದಾರೆ. IGI ಟರ್ಮಿನಲ್-3 ರಲ್ಲಿ ಭಾನುವಾರ ಸಂಜೆ 6:19ಕ್ಕೆ ಕರೆ ಬಂದಿದೆ. ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಕ್ರೈಂ ಬ್ರಾಂಚ್ ಅಧಿಕಾರಿ ತಂಡಗಳು ಆಸ್ಪತ್ರೆಗೆ ತೆರಳಿ ಶೋಧಕಾರ್ಯ ನಡೆಸುತ್ತಿವೆ. ಮತ್ತೊಂದು ಕಡೆ ಇ-ಮೇಲ್ ಮೂಲವನ್ನು ತನಿಖೆ ನಡೆಸುತ್ತಿದ್ದಾರೆ. ಸದ್ಯ ಆಸ್ಪತ್ರೆ ಹೊರಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯಪುರ : ಕಳೆದ ವರ್ಷದಿಂದ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿತ್ತು. ಇದರಿಂದ ಇಡೀ ರಾಜ್ಯದ ಜನರು ಬರಗಾಲಕ್ಕೆ ತತ್ತರಿಸಿ ಹೋಗಿದ್ದರು. ಇದೀಗ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೇ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ರುಕ್ಮವ್ವ ದುಂಡಪ್ಪ ಬಾಡಿಗಿ ಆತ್ಮಹತ್ಯೆಗೆ ಶರಣಾದ ರೈತ ಮಹಿಳೆ ಎಂದು ತಿಳಿದುಬಂದಿದೆ. ಹೌದು ಕಳೆದ ವರ್ಷದಿಂದ ರಾಜ್ಯವು ಮಳೆ ಬಾರದೇ ತೀವ್ರ ಬರಗಾಲ ಎದುರಿಸಿತ್ತು. ರೈತರು ಬೆಳೆಗಳಿಗೆ ನೀರಿಲ್ಲದೆ ಸಾಕಷ್ಟು ಕಷ್ಟ ಅನುಭವಿಸಿದ್ದರು. ಇದೀಗ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೇ ರೈತ ಮಹಿಳೆ ರುಕ್ಮವ್ವ ದುಂಡಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ. ರುಕ್ಮಿವ್ವ ದುಂಡಪ್ಪ ಅವರು, ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗದ್ಯಾಳ ಗ್ರಾಮದಲ್ಲಿ ಜಮೀನು ಹೊಂದಿದ್ದರು.ಹಾಗಾಗಿ ಅದೇ ಗ್ರಾಮದ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕಿನಲ್ಲಿ 1 ಲಕ್ಷ, ವಿಜಯಪುರ ಎಚ್ಡಿಎಫ್ಸಿ ಬ್ಯಾಂಕಿನಲ್ಲಿ 2.5 ಲಕ್ಷ, ಬಬಲೇಶ್ವರದ ಚೈತನ್ಯ ಪೈನಾನ್ಸ್ನಲ್ಲಿ 50…
ಬೀದರ್ : ಜಿಲ್ಲೆಯ ಬಸವಕಲ್ಯಾಣದಲ್ಲಿ ನೈತಿಕ ಪೊಲೀಸ್ಗಿರಿ ಘಟನೆ ನಡೆದಿದ್ದು, ಬಸವಕಲ್ಯಾಣದ ಹೊರವಲಯದ ಪಾರ್ಕ್ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜತೆ ಕುಳಿತಿದ್ದಕ್ಕೆ ಮುಸ್ಲಿಂ ಧರ್ಮೀಯ ಮಹಿಳೆ ಮೇಲೆ ಅದೇ ಧರ್ಮದ ಕೆಲ ಯುವಕರು ಹಲ್ಲೆ ಮಾಡಿದ್ದರು ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಘಟನೆ ಕುರಿತಂತೆ ಇದೀಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ಬಸವಕಲ್ಯಾಣದ ಹೊರವಲಯದ ಪಾರ್ಕ್ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ ಧರ್ಮೀಯ ಮಹಿಳೆ ಮೇಲೆ ಅದೇ ಧರ್ಮದ ಕೆಲ ಯುವಕರು ಹಲ್ಲೆ ಮಾಡಿದ್ದರು.ವ್ಯಕ್ತಿ ಆಟೋ ಚಾಲಕನಾಗಿದ್ದು, ಈತನ ಜೊತೆಗೆ ನೀನು ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ, ಮುಸ್ಲಿಮರ ಹೆಸರು ಹಾಳು ಮಾಡುತ್ತೀಯಾ ಎಂದು ಕೆಲ ಮುಸ್ಲಿಂ ಯುವಕರು ಮಹಿಳೆ ಮೇಲೆ ಹಲ್ಲೆ ನಡೆಸಿದ್ದರು. ಸದ್ಯ ಪೊಲೀಸರು ಮೂವರನ್ನ ಬಂಧಿಸಿದ್ದಾರೆ.ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿದ ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು…
ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿರುವ ಎಚ್ ಡಿ ರೇವಣ್ಣ ಅವರ ವಿರುದ್ಧ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಪಹರಣಕ್ಕೆ ಒಳಗಾದ ಸಂತ್ರಸ್ತ ಮಹಿಳೆ ವಿಡಿಯೋ ಹೇಳಿಕೆ ಒಂದನ್ನು ಬಿಡುಗಡೆ ಮಾಡಿದ್ದು ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಹೌದು ಅಪಹರಣಕ್ಕೆ ಒಳಗಾದ ಮಹಿಳೆ ಇದೀಗ ಸುಮಾರು 2 ನಿಮಿಷ 35 ಸೆಕೆಂಡುಗಳನ್ನು ಒಳಗೊಂಡಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದೂ, ವಿಡಿಯೋದಲ್ಲಿ ನನ್ನನ್ನು ಯಾರು ಕಿಡ್ನ್ಯಾಪ್ ಮಾಡಿಲ್ಲ. ನಾನಾಗಿಯೇ ಮನೆಯಿಂದ ಬಂದಿದ್ದೇನೆ.ಭವಾನಿ, ಎಚ್ ಡಿ ರೇವಣ್ಣ, ಪ್ರಜ್ವಲ್ M ಹಾಗೂ ಬಾಬಣ್ಣರಿಂದ ಯಾವುದೇ ರೀತಿಯಾಗಿ ತೊಂದರೆ ಆಗಿಲ್ಲ. ನಮ್ಮ ಊರಿನವರು ಏನೇನು ಮಾತನಾಡಿದ್ದನು ಕೇಳಿ ಬೇಸರವಾಗಿತ್ತು ಹೀಗಾಗಿ ನಾಲ್ಕು ದಿನ ಇದ್ದು ಹೋಗೋಣವೆಂದು ನೆಂಟರ ಮನೆಗೆ ಬಂದಿದ್ದೇನೆ. ಸಂಬಂಧಿಕರ ಮನೆಯಲ್ಲಿ ಇದ್ದೇನೆ ಎರಡು ದಿನಗಳ ಬಳಿಕ ನಾನೇ ಬರುತ್ತೇನೆ.ನನ್ನ ಮಗ ಗೊತ್ತಿಲ್ಲದೆ ಗಾಬರಿಯಿಂದಾಗಿ ಹೀಗೆ ಮಾಡಿದ್ದಾನೆ. ನಾಲ್ಕು ಜನ ಕಾಲ ಕಳೆದು ಬರಲು ನಾನೇ ನೆಂಟರ ಮೆನೆಗೆ…
ಮೈಸೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ನವೀನ್ ಗೌಡ ಫೇಸ್ಬುಕ್ನಲ್ಲಿ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕ ಎ ಮಂಜು ಅವರಿಗೆ ನೀಡಿದ್ದೇನೆ ಎಂದು ಪೋಸ್ಟ್ ಹಾಕಿದ್ದು, ಈ ಕುಡಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಶಾಸಕ ಎ ಮಂಜು ನನಗೆ ಮಾಹಿತಿ ಇರೋ ಪ್ರಕಾರ ಈ ಪ್ರಕಾರಣ ಇಟ್ಟುಕೊಂಡು ಜೆಡಿಎಸ್ ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಆದರೆ ಯಾರಿಂದಲೂ ಅದು ಸಾಧ್ಯವಿಲ್ಲ ಎಂದು ತಿಳಿದರು. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನವೀನ ಗೌಡ ಯಾರು ಅಂತಾನೆ ನನಗೆ ಗೊತ್ತಿಲ್ಲ. ಹಾಗಾಗಿ ಎಸ್ಐಟಿ ಅಧಿಕಾರಿಗಳು ಮೊದಲು ನವೀನ್ ಗೌಡನನ್ನು ಬಂಧಿಸಬೇಕು ಎಂದು ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕ ಮಂಜು ಹೇಳಿಕೆ ನೀಡಿದರು. ರಸ್ತೆಗಳು, ಪಾರ್ಕ್, ಅಂಗಡಿ ಮುಂಗಟ್ಟು ಮುಂದೆ ಪೆನ್ ಡ್ರೈವ್ ಎಸೆದಿದ್ದರು.ಊರಿಗೆಲ್ಲ ಹಂಚಿದ ಮೇಲೆ ನನಗೆ ಕೊಟ್ಟೆ ಎಂದು ಹೇಳಿದ್ದೇನೆ. ನಾನು ಎಚ್ ಡಿ ದೇವೇಗೌಡ ಕುಟುಂಬಕ್ಕೆ ಹತ್ತಿರವಾದ…
ಬೆಂಗಳೂರು : ಕೇವಲ ಲೋಕಸಭೆ ಚುನಾವಣೆಗೆ ಅಷ್ಟೇ ಬಿಜೆಪಿ ಜೆಡಿಎಸ್ ಮೈತ್ರಿ ಎಂದು ಹೇಳಲಾಗಿತ್ತು ಆದರೆ ಇದೀಗ ವಿಧಾನ ಪರಿಷತ್ ಚುನಾವಣೆಗೂ ಕೂಡ ಬಿಜೆಪಿ ಜೆಡಿಎಸ್ ಮೈತ್ರಿ ಮುಂದುವರೆದಿದೆ. ಇದೀಗ ವಿಧಾನ ಪರಿಷತ್ ಚುನಾವಣಾ ಟಿಕೆಟ್ ಹಂಚಿಕೆಯ ವಿಚಾರವಾಗಿ ಮಾಜಿ ಸಿಎಂ HD ಕುಮಾರಸ್ವಾಮಿ ಅವರ ಬೇಡಿಕೆಯಂತೆ ಜೆಡಿಎಸ್ ಗೆ ಎರಡು ಸ್ಥಾನ ಕೊಡಲು ಇದೀಗ ಬಿಜೆಪಿ ಒಪ್ಪಿಗೆ ಸೂಚಿಸಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರ ಇದೀಗ ಜೆಡಿಎಸ್ ಪಾಲಾಗಿದೆ. ಈ ಕುರಿತಂತೆ ಎಚ್ ಡಿ ಕುಮಾರಸ್ವಾಮಿ ದೂರವಾಣಿ ಮೂಲಕ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಹಾಗೂ ಬಿವೈ ವಿಜಯೇಂದ್ರ ಜೊತೆಗೆ ಮಾತುಕತೆ ನಡೆಸಿದರು. ನಿನ್ನೆ ಇ.ಸಿ ನಿಂಗರಾಜು ಹೆಸರನ್ನು ಬಿಜೆಪಿ ಹೈಕಮಾಂಡ್ ಘೋಷಿಸಿತ್ತು.6 ಕ್ಷೇತ್ರಗಳಲ್ಲಿ ಪೈಕಿ 5 ಕ್ಷೇತ್ರಗಳ ಅಭ್ಯರ್ಥಿ ಹೆಸರನ್ನು ಬಿಜೆಪಿ ಘೋಷಣೆ ಮಾಡಿತ್ತು. ಹೀಗಾಗಿ ಒಟ್ಟು ಎರಡು ಕ್ಷೇತ್ರಗಳ ಬಗ್ಗೆ ಜೆಡಿಎಸ್ ನಿರೀಕ್ಷೆಯಲ್ಲಿತ್ತು ನಿರೀಕ್ಷೆಯಂತೆ ಇದೀಗ ಜೆಡಿಎಸ್ ಗೆ ಎರಡು ಕ್ಷೇತ್ರ…
ದೆಹಲಿ : ಇತ್ತೀಚಿಗೆ ದೆಹಲಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದ ಕೆಲವು ದಿನಗಳ ನಂತರ, ಮತ್ತೊಂದು ಸಂದೇಶ ಬಂದಿದ್ದು, ದೆಹಲಿಯ ಎರಡು ಪ್ರಸಿದ್ಧ ಆಸ್ಪತ್ರೆಗಳಿಗೆ ಇಂದು ಮಧ್ಯಾಹ್ನ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಹೌದು ದೆಹಲಿಯ ಬುರಾರಿ ಸರ್ಕಾರಿ ಆಸ್ಪತ್ರೆ ಮತ್ತು ಮಂಗೋಲ್ಪುರಿಯ ಸಂಜಯ್ ಗಾಂಧಿ ಆಸ್ಪತ್ರೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.ಮಾಹಿತಿ ಮೇರೆಗೆ ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳದ ಹಲವು ತಂಡಗಳು ಸ್ಥಳಕ್ಕೆ ಧಾವಿಸಿವೆ. ಏತನ್ಮಧ್ಯೆ, ಡಿಸಿಪಿ (ಉತ್ತರ) ಮನೋಜ್ ಮೀನಾ ಅವರು ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಹೇಳಿದರು. ಬಾಂಬ್ ಬೆದರಿಕೆಯ ಕುರಿತು ಬುರಾರಿ ಆಸ್ಪತ್ರೆಯಲ್ಲಿ ಇಮೇಲ್ ಸ್ವೀಕರಿಸಲಾಗಿದೆ. ಸ್ಥಳೀಯ ಪೊಲೀಸರು, ಬಾಂಬ್ ನಿಷ್ಕ್ರಿಯ ತಂಡಗಳು (ಬಿಡಿಟಿ) ಆಸ್ಪತ್ರೆಯಲ್ಲಿದ್ದಾರೆ. ಇನ್ನೂ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೊದಲ ಕರೆಯನ್ನು ಅಗ್ನಿಶಾಮಕ ಅಧಿಕಾರಿಗಳು ಮಧ್ಯಾಹ್ನ 3.15 ಗಂಟೆಗೆ ಬುರಾರಿ ಆಸ್ಪತ್ರೆಯಿಂದ ಮತ್ತು ಎರಡನೇ ಕರೆಯನ್ನು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಿಂದ…
ಹೊಸದಿಲ್ಲಿ: ದೆಹಲಿಯ ಚಾಂದಿನಿ ಚೌಕ್ನ ಪ್ರಸಿದ್ಧ ದರಿಬಾ ಬಜಾರ್ ಪ್ರದೇಶದ ವ್ಯಾಪ್ತಿಯಲ್ಲಿರುವ ಕಟ್ಟಡದಲ್ಲಿ ಭಾನುವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬೆಂಕಿ ಅವಘಡದ ದೃಶ್ಯಗಳು ಹರಿದಾಡುತ್ತಿದ್ದೂ, ಬೆಂಕಿ ಹೊತ್ತಿಕೊಳ್ಳಲು ಏನು ಕಾರಣ ಎಂಬುದರ ಕುರಿತು ತನಿಖೆಯ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯವನ್ನು ಮುಂದುವರೆಸಿದ್ದಾರೆ. ಮಧ್ಯಾಹ್ನ 1.08ಕ್ಕೆ ಬೆಂಕಿಯ ಬಗ್ಗೆ ನಮಗೆ ಕರೆ ಬಂದಿತ್ತು. ನಾಲ್ಕು ಅಗ್ನಿಶಾಮಕ ಟೆಂಡರ್ಗಳನ್ನು ಸೇವೆಗೆ ಒತ್ತಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮತ್ತು ಯಾವುದೇ ಸಾವುನೋವುಗಳ ವರದಿಗಳಿಲ್ಲ ಎಂದು ಹೇಳಿದರು. ಇನ್ನೆರಡು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://twitter.com/ians_india/status/1789606918001963200?t=M4Hnlt7_NqeI5nUiX8d5Uw&s=19
ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ಹಗರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಇದೀಗ ಈ ಒಂದು ಪ್ರಕರಣದಲ್ಲಿ ಅರಕಲಗೂಡು ಶಾಸಕ ಎ ಮಂಜು ಅವರ ಹೆಸರು ಕೂಡ ತಳಕು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ಹೌದು ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಇದಿಗ ಸ್ಪೋಟಕ ತಿರುವು ಸಿಕ್ಕಿದ್ದು, ಅರಕಲಗೂಡು ಜೆಡಿಎಸ್ ಶಾಸಕ ಎ ಮಂಜು ಹೆಸರು ತಳಕು ಹಾಕುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನವೀನ ಗೌಡ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ಪೆನ್ ಡ್ರೈವ್ ನನ್ನು ಶಾಸಕ ಮಂಜು ಅವರಿಗೆ ನಾನು ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಆರೋಪಿ ನವೀನ್ ಗೌಡ ಫೇಸ್ಬುಕ್ ಖಾತೆಯಿಂದ ಈ ಒಂದು ಪೋಸ್ಟ್ ವೈರಲಾಗುತ್ತಿದೆ. ಏಪ್ರಿಲ್ 20 ರಂದು ನನಗೆ ರಸ್ತೆಯಲ್ಲಿ ಪೆನ್ ಡ್ರೈವ್ ಸಿಕ್ಕಿದ್ದು, ಅರಕಲಗೂಡು ಶಾಸಕರಾದ ಎ ಮಂಜು ಅವರಿಗೆ 21 ರಂದು ಅರಕಲಗೂಡಿನ ಮಾರುತಿ ಕಲ್ಯಾಣ ಮಂಟಪದಲ್ಲಿ A ಮಂಜು ಅವರಿಗೆ ನೀಡಿದ್ದೇನೆ ಕುಮಾರಸ್ವಾಮಿ ಅವರು ಹೇಳಿದ ಹಾಗೆ ವಿಡಿಯೋ…
ಕಲಬುರಗಿ : ವಿವಾಹಿತ ಮಹಿಳೆಯೊಬ್ಬಳ ಜೊತೆ ಯುವಕನೊಬ್ಬ ಅನೈತಿಕ ಸಂಬಂಧ ಹೊಂದಿದ್ದ ಎಂದು ತಿಳಿದ ಮಹಿಳೆಯ ಕುಟುಂಬದವರು, ಆತ ಒಬ್ಬಂಟಿಯಾಗಿ ಸಿಗುವುದಕ್ಕೆ ಕಾದು ಆತನ ಮೇಲೆ ಹಲ್ಲೆ ನಡೆಸಿ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಮಣ್ಣೂರಿನಲ್ಲಿ ನಡೆದಿದೆ. ಮಣ್ಣೂರಿನ ರಂಜಾನ್ ಮೆಹಬೂಬ್ ತಾರಾ ವ್ಯಕ್ತಿ ಕೊಲೆಯಾಗಿದ್ದು, ಅದೇ ಗ್ರಾಮದ ವಿವಾಹಿತ ಮಹಿಳೆಯೊಬ್ಬಳ ಜೊತೆ ಈ ರಂಜಾನ್ ಮೆಹಬೂಬ್ ಅನೈತಿಕ ಸಂಬಂಧ ಹೊಂದ್ದಿದ್ದ. ಆಕೆ ಗಂಡ ದುಬೈನಲ್ಲಿ ಇರುವುದರಿಂದ ಈ ರಂಜಾನ್ ಜೊತೆ ಕದ್ದು ಮುಚ್ಚಿ ಇಬ್ಬರು ಸೇರುತ್ತಿದ್ದರಂತೆ. ಇದನ್ನ ನೋಡಿದ್ದ ಮಹಿಳೆ ಕುಟುಂಬಸ್ಥರು ಹತ್ತಾರು ಭಾರಿ ಕರೆದು ರಾಜಿ ಪಂಚಾಯಿತಿ ಮಾಡಿದ್ದಾರೆ. ಆದರೂ ರಾಜಿ ಪಂಚಾಯಿತಿ ಹಾಗೂ ಎಚ್ಚರಿಕೆಗೂ ಕೂಡ ರಂಜಾನ್ ಮೆಹಬೂಬ್ ತಲೆ ಕೆಡಿಸಿಕೊಳ್ಳದೆ ಮಹಿಳೆಯ ಜೊತೆ ಸಂಬಂಧವನ್ನು ಮುಂದುವರೆಸಿದ್ದ. ಇದರಿಂದ ಕುಪಿತಗೊಂಡ ಮಹಿಳೆಯ ಕುಟುಂಬಸ್ಥರು ಈತನಿಗೆ ಒಂದು ಗತಿ ಕಾಣಿಸಬೇಕೆಂದು ನಿನ್ನೆ ಆತ ಹೊಲದ ಕಡೆಯಿಂದ ಒಬ್ಬನೇ ವಾಪಸ್ ಮರಳುತ್ತಿದ್ದಾಗ, ಗ್ರಾಮದ ಹೊರವಲಯದಲ್ಲಿ ಮನಬಂದಂತೆ…