Author: kannadanewsnow05

ಕಲಬುರ್ಗಿ : ಕಲಬುರ್ಗಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ರೌಡಿಶೀಟರ್, ಮಾಜಿ ಗ್ರಾ.ಪಂ ಸದಸ್ಯನ ಕೊಲೆ ಆರೋಪಿ ಮೇಲೆ ಗುಂಡಿನ ದಾಳಿ ನಡೆದಿದ್ದು, ಆಳಂದ ತಾಲೂಕಿನ ಖಾನಾಪುರದ ಕ್ರಾಸ್ ಬಳಿ ನಡೆದಿದ್ದ ವಿಶ್ವನಾಥ್ ಜಮಾದಾರ ಕೊಲೆ ಪ್ರಕರಣದ ಆರೋಪಿ ಲಕ್ಷ್ಮಣ ಪೂಜಾರಿ ಮೇಲೆ ಶನಿವಾರ ಮಾಡ್ಯಾಳ ಗ್ರಾಮದ ಬಳಿಯಲ್ಲಿ ಬೆಳಗ್ಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ. ಹೌದು ಸೆ.13ರಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ ಜಮಾದಾರ ಮೇಲೆ ಮೂರು ಸುತ್ತು ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಲಕ್ಷ್ಮಣ ಪೂಜಾರಿಯು ತಾನು ಬಚ್ಚಿಟ್ಟಿದ್ದ ಗನ್ ವಶಕ್ಕೆ ಪಡೆಯಲು ಪೊಲೀಸರು ತೆರಳಿದಾಗ ನಿಂಬರ್ಗಾ ಮಹಿಳಾ ಪಿಎಸ್‌ಐ ಮೇಲೆ ಲಕ್ಷ್ಮಣ ಹಲ್ಲೆ ಮಾಡಿದ್ದಾನೆ. ಇದರಿಂದ ಪಿಎಸ್‌ಐ ಕೈಗೆ ಗಾಯವಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ಪಿಎಸ್‌ಐ ಸೋಮಲಿಂಗ ಒಡೆಯರ್ ಲಕ್ಷ್ಮಣ ಕಾಲಿಗೆ ಗುಂಡು ಹಾರಿಸಿದ್ದಾರೆ. ಕೂಡಲೇ ಸ್ಥಳದಲ್ಲಿ ಕುಸಿದು ಬಿದ್ದ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ‌. ಲಕ್ಷ್ಮಣ ವಿರುದ್ಧ…

Read More

ಬೆಂಗಳೂರು : ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಿದ್ದರು. ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿಯಾದ ಹಿನ್ನೆಲೆಯಲ್ಲಿ ಇಂದು ಅವರು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಿದ್ದರು.ಇದೀಗ ಲೋಕಾಯುಕ್ತ ಅಧಿಕಾರಿಗಳಿಂದ ವಿಚಾರಣೆ ಮುಗಿಸಿ ಕಚೇರಿಯಿಂದ ಯಡಿಯೂರಪ್ಪ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಎಸ್​​​ ಯಡಿಯೂರಪ್ಪ ಈ ಇಬ್ಬರೂ ನಾಯಕರು ಜಂಟಿಯಾಗಿ ಡಿನೋಟಿಫಿಕೇಷನ್​ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪವಿದೆ. ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು A1 ಆರೋಪಿಯನ್ನಾಗಿ ಮಾಡಲಾಗಿದೆ. ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆಗೂ ಹೆಚ್ಚು ಗುಂಟೆ ಭೂಮಿಯನ್ನು ಸತ್ತವರ ಹೆಸರಲ್ಲಿ ಕುಮಾರಸ್ವಾಮಿ ಹಾಗೂ ಬಿಎಸ್​​ವೈ ಅಕ್ರಮವಾಗಿ ಡಿನೋಟಿಫಿಕೇಷನ್​ ಮಾಡಿಸಿದ್ದರು ಎಂಬ ಆರೋಪವಿದೆ. 2007ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ, ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ IAS​​ ಅಧಿಕಾರಿ ರಾಕೇಶ್ ಸಿಂಗ್ ಅವರಿಂದ ನಿಯಮ 164ರಡಿ ಲೋಕಾಯುಕ್ತ ಅಧಿಕಾರಿಗಳು ಮಾಜಿಸ್ಟ್ರೇಟ್​​​​​​ ಮುಂದೆ ಹೇಳಿಕೆ ಪಡೆದುಕೊಂಡಿದ್ದರು.

Read More

ಉತ್ತರಕನ್ನಡ : ಜಿಲ್ಲೆಯ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಕೊನೆಗೂ ಪತ್ತೆಯಾಗಿದೆ. ಹೌದು ಮುಳುಗು ತಜ್ಞ ಈಶ್ವರ ಮಲ್ಪೆ ತಂಡದಿಂದ ಲಾರಿಯನ್ನು ಮೇಲೆತ್ತಲಾಗುತ್ತಿದ್ದು ಲಾರಿಗೆ ಹಗ್ಗ ಕಟ್ಟಿ ಮೇಲೆ ಎಳೆಯಲು ರಕ್ಷಣಾ ಸಿಬ್ಬಂದಿ ಇದೀಗ ಸಿದ್ಧತೆ ಮಾಡಿಕೊಂಡಿದ್ದಾರೆ. ಆದಷ್ಟು ಬೇಗ ಲಾರಿಯನ್ನು ಮೇಲೆ ತರಲು ಅಗ್ನಿಶಾಮಕ ದಳ ಸಿಬ್ಬಂದಿ ಸೇರಿದಂತೆ ಎಲ್ಲಾ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡದ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ ಘಟನೆ ಬಳಿಕ ರಾಡಾರ್ ಮೂಲಕ ಶೋಧ ಕಾರ್ಯ ನಡೆಸಿ ಶಂಕಿತ ಸ್ಥಳದಲ್ಲಿ ಶೋಧ ಕಾರ್ಯ ಮಾಡಿದರೂ ಟ್ರಕ್, ಟ್ಯಾಂಕರ್ ಗಳು ಇರುವುದು ಪತ್ತೆಯಾಗಿತ್ತು. ರಸ್ತೆಯ ಬದಿ ಇದ್ದ ಅಂಗಡಿ ನೆಲಸಮವಾದ ಕಡೆ ಶೋಧ ಕಾರ್ಯ ನಡೆಸಲಾಗಿದ್ದು, ಗಂಗಾವಳಿ ನದಿಗೆ ಬಿದ್ದ ಮಣ್ಣಿನ ಗುಡ್ಡದಲ್ಲಿ NDRF ,SDRF ,ಆರ್ಮಿ ಕಮಾಂಡೋಗಳ ತಂಡ ಶೋಧ ಕಾರ್ಯ ಮಾಡಿತ್ತು. ಸಂತ್ರಸ್ತರಿಗೆ ಮೋದಿ…

Read More

ತುಮಕೂರು : ಇಂದು ತುಮಕೂರಿನ ಚರ್ಚ್ ವೃತ್ತದ ಬಳಿ ಇರುವ ಹಿಂದೂ ಮಹಾಸಭಾ ಗಣಪತಿಯ ಒಂದು ವೇದಿಕೆ ಕಾರ್ಯಕ್ರಮದಲ್ಲಿ ಹಿಂದೂಪರ ಮುಖಂಡ ಪುನೀತ್ ಕೆರೆಹಳ್ಳಿ ಭಾಷಣ ಮಾಡಬೇಕಾಗಿತ್ತು, ಆದರೆ ವಿವಾದಾತ್ಮಕ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಪೊಲೀಸರಿಂದ ಹಿಂದೂ ಪರ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿದೆ. ತುಮಕೂರಿನ ಕ್ಯಾತ್ಸಂದ್ರ ಬಳಿರುವ ಜಾಸ್ ಟೋಲ್ ಬಳಿ ಬಂಧಿಸಲಾಗಿದೆ. ತುಮಕೂರಿನ ಚರ್ಚ್ ವೃತ್ತದಲ್ಲಿ ಪುನೀತ್ ಕೆರೆಹಳ್ಳಿ ಭಾಷಣ ಮಾಡಬೇಕಾಗಿತ್ತು. ವಿವಾದಾತ್ಮಕ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ಯನ್ನು ಇದೀಗ ತುಮಕೂರು ಪೊಲೀಸರು ಬಂಧಿಸಿದ್ದಾರೆ.

Read More

ತಮಿಳುನಾಡು : ಮನುಷ್ಯರಲ್ಲಿ ಇನ್ನೂ ಮಾನವೀಯತೆ, ಕರುಣೆ ಇದೆ ಎನ್ನುವುದಕ್ಕೆ ಈ ಒಂದು ಘಟನೆ ಪ್ರಮುಖ ಸಾಕ್ಷಿಯಾಗಿದೆ. ಕೆಲವೊಂದು ಬಾರಿ ಗೊತ್ತಿಲ್ಲದೆ ಸಮಯ ಪ್ರಜ್ಞೆಯಿಂದ ಕೆಲವರು ಮತ್ತೊಬ್ಬರ ಜೀವ ಉಳಿಸಿರುತ್ತಾರೆ. ಇದೀಗ ಇಂತಹ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ವಿದ್ಯುತ್ ಟ್ರಾನ್ಸ್ಫಾರ್ಮರ್ ಮೇಲೆ ಕುಳಿತಿದ್ದ ಕಾಗೆ ಒಂದು ಕರೆಂಟ್ ಶಾಕ್ ನಿಂದ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿತ್ತು. ಈ ವೇಳೆ ತಕ್ಷಣ ಅಲ್ಲಿಯೇ ಇದ್ದಂತಹ ಅಗ್ನಿಶಾಮಕ ದಳದ ಸಿಬ್ಬಂದಿ ಒಬ್ಬರು ಕಾಗೆಗೆ ಸಿಪಿಆರ್ ಮೂಲಕ ಮರು ಜೀವ ನೀಡಿ ಮಾನವೀಯತೆ ಮೆರೆದಿದ್ದಾರೆ. ಹೌದು ಈ ಒಂದು ಘಟನೆ ತಮಿಳುನಾಡಿನಲ್ಲಿ ನಡೆದಿದ್ದು,ಕೊಯಮತ್ತೂರಿನ ಕವುಂಡಂಪಾಳ್ಯದಲ್ಲಿ ನಡೆದಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿಯೋರ್ವ ತಮ್ಮ ಸಮಯ ಪ್ರಜ್ಞೆಯಿಂದ ಕರೆಂಟ್‌ ಶಾಕ್‌ ಹೊಡೆದು ಕುಸಿದು ಬಿದ್ದ ಕಾಗೆಯ ಪ್ರಾಣವನ್ನು ರಕ್ಷಿಸಿದ್ದಾರೆ. ಕರೆಂಟ್‌ ಶಾಕ್‌ ಹೊಡೆದ ಪರಿಣಾಮ ಕಾಗೆಯೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಪ್ರಾಣ ಉಳಿಸಿಕೊಳ್ಳಲು ನರಳಾಡುತ್ತಿತ್ತು, ಆ ಸಂದರ್ಭದಲ್ಲಿ ಕಾಗೆಯನ್ನು ಎತ್ತಿಕೊಂಡು ಅದರ ಬಾಯಿಗೆ ಬಾಯಿಟ್ಟು ಉಸಿರು ನೀಡಿ ಸಿಪಿಆರ್‌…

Read More

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಧಾನ ತಾಲೂಕ್ ಅವರು ಮಂಡ್ಯಾಕೆ ಭೇಟಿ ನೀಡುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಅವರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಆಕ್ರೋಶ ಹೊರಹಾಕಿದ ಪ್ರಮೋದ್ ಮುತಾಲಿಕ್, ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಇವೆಲ್ಲಾ ಗಲಭೆ ನಡೆಯುತ್ತಿವೆ. ಇಂತವರನ್ನು ಶೂಟ್ ಮಾಡಬೇಕು ಎಂದು ಕಿಡಿ ಕಾಡಿದರು. ಮದ್ದೂರಿನ ನಿಡಘಟ್ಟದ ಬಳಿ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದು, ಅಂಬೇಡ್ಕರ್ ಅವರು ಸಂವಿಧಾನದ ಮೂಲಕ‌ ಎಲ್ಲಾ ರೀತಿಯ ಸ್ವಾತಂತ್ರ್ಯ ನೀಡಿದ್ದಾರೆ. ನಾನು ಹೋದ ಮೇಲೆ ಏನಾದರೂ ಆದರೆ ನನ್ನ ಮೇಲೆ‌ ಕೇಸ್ ಹಾಕಿ. ನಮ್ಮನ್ನು ತಡೆಯುವ ಕೆಲಸ ಅಕ್ಷಮ್ಯ ಅಪರಾಧ. ನಮ್ಮ ಸಂಘಟನೆ ಹಾಗೂ ನಮ್ಮ ವೈಚಾರಿಕತೆಯನ್ನು ತಡೆಯುತ್ತಿದ್ದಾರೆ ಎಂದು ಕಿಡಿ ಕಾರಿದರು. ನಾನು ನಾಗಮಂಗಲಕ್ಕೆ ಹೋಗ್ತಾ ಇಲ್ಲ. ನಾನು‌ ಹೋಗ್ತಾ ಇದ್ದು ಮಂಡ್ಯದ ಜೈಲಿಗೆ. ಇಲ್ಲಿನ‌ ನಾನು ಯಾವುದೇ ಸಭೆ ಮಾಡುತ್ತಿರಲಿಲ್ಲ.ನಾನು‌ ಬಂಧತ ಹಿಂದೂ ಯುವಕರನ್ನು‌ ಮಾತಾಡಿಸಲು‌ ಹೋಗ್ತಾ…

Read More

ಮಂಡ್ಯ : ಇತ್ತೀಚಿಗೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಕಲ್ಲುತೂರಾಟ ಹಾಗೂ ಕೋಮುಗಲಭೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ನಾಗಮಂಗಲಕ್ಕೆ ಭೇಟಿ ನೀಡಲು ಆಗಮಿಸಿದ್ದರು. ಆದರೆ ಮಂಡ್ಯ ಜಿಲ್ಲೆಯ ಗಡಿಯಲ್ಲಿ ಪೊಲೀಸರು ಅವರನ್ನು ತಡೆದಿದ್ದಾರೆ. ಹೌದು ಮಂಡ್ಯ ಜಿಲ್ಲೆಯ ಗಡಿಯಲ್ಲಿಯೇ ಪ್ರವೇಶಕ್ಕೆ ಬ್ರೇಕ್ ಹಾಕಿರುವ ಪೊಲೀಸರು, ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ನಿಡಘಟ್ಟ ಬಳಿ ತಡೆಡಿದ್ದಾರೆ.ಸದ್ಯ ಗಲಭೆಗೆ ಸಂಬಂಧಪಟ್ಟಂತೆ ಬದ್ರಿಕೊಪ್ಪಲು ಗ್ರಾಮದ ಯುವಕರು ಮಂಡ್ಯದ ಜಿಲ್ಲಾ ಕಾರಾಗೃಹದಲ್ಲಿದ್ದಾರೆ. ಬಂಧಿತ ಯುವಕರನ್ನ ಭೇಟಿ ಮಾಡಲು ಮುತಾಲಿಕ್ ಮುಂದಾಗಿದ್ದರು. ಆದರೆ ಮುತಾಲಿಕ್ ಆಗಮನಕ್ಕೂ ಮುನ್ನವೇ ಮಂಡ್ಯ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿತ್ತು.ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಗಡಿಯಲ್ಲಿಯೇ ತಡೆದು ಜಿಲ್ಲೆಗೆ ಪ್ರವೇಶಿಸದಂತೆ ತಾಕೀತು ಮಾಡಿದ್ದಾರೆ.ಇದೇ ವೇಳೆ ಪೊಲೀಸರು ಆದೇಶ ಪತ್ರ ತೋರಿಸಿ ವಾಪಾಸ್ ಕಳುಹಿಸಿದ್ದಾರೆ. ಇದೆ ವೇಳೆ ಟೀ ಕುಡಿಯಲು ಹೋಟೆಲ್‌ ಗೆ ತೆರಳಲು…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಆಗಿರುವ ದರ್ಶನ್  ಇದೀಗ ಅವರ ಪರ ವಕೀಲರಿಂದ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟಿಗೆ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಬೆಂಗಳೂರಿನ ಸೇಷನ್ಸ್ ಕೋರ್ಟಿಗೆ ನಟ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚಿಗೆ ನಟ ದರ್ಶನ್ ಅವರನ್ನು ನೋಡಲು ತಾಯಿ ಮೀನಾ ತೂಗುದೀಪ್, ಅಕ್ಕ ಹಾಗೂ ಭಾವ, ಸೋದರ ಅಳಿಯ ಜೈಲಿಗೆ ಭೇಟಿ ನೀಡಿದ್ದರು. ಅಲ್ಲದೆ ಪತ್ನಿ ವಿಜಯಲಕ್ಷ್ಮಿ ಕೂಡ ಭೇಟಿ ನೀಡಿ ಕಾನೂನು ಹೋರಾಟದ ಕುರಿತು ಚರ್ಚಿಸಿದ್ದರು. ಇದೀಗ ನಟ ದರ್ಶನ್ ಅವರು ಜಾಮೀನು ಕೋರಿ ಬೆಂಗಳೂರಿನ ಸೆಕ್ಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

Read More

ಬೆಂಗಳೂರು : ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು, ಇದೀಗ ಬೆಂಗಳೂರಿನ ಜನರಲ್ಲಿ ನಿಫಾ ವೈರಸ್ ಕುರಿತು ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೆ ಮೃತ ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ‌ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರ ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ‌ ಐಸೊಲೇಷನ್ ಮಾಡಲಾಗಿದೆ. ಅದರಲ್ಲಿ ಓರ್ವ ವ್ಯಕ್ತಿಗೆ ಸೋಂಕಿನ ಗುಣಲಕ್ಷಣಗಳು ಕೂಡ ಪತ್ತೆಯಾಗಿದ್ದು, ಆತಂಕಕ್ಕೆ ಎಡೆಮಾಡಿಕೊಟ್ಟಿದೆ. 41 ಸಂಪರ್ಕಿತರ ಪೈಕಿ ಒಬ್ಬರಿಗೆ ನಿಫಾ ಗುಣಲಕ್ಷಣ ಕಂಡು ಬಂದಿದ್ದು ಗುಣಲಕ್ಷಣಗಳಿರುವ ವ್ಯಕ್ತಿಯ ರಕ್ತ ಮತ್ತು ಸೆರಂ ಮಾದರಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಸದ್ಯ ಕೋವಿಡ್​ನಲ್ಲಿ ಭಯ ಹುಟ್ಟಿಸಿದ್ದ ಕ್ವಾರಂಟೈನ್ ಈಗ ಮತ್ತೆ ನಿಫಾ ಹೆಸರಲ್ಲಿ ಶುರುವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಬಿ ಅಲರ್ಟ್ ಅಂತಿದ್ದಾರೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾ ಇಟ್ಟಿದ್ದಾರೆ.

Read More

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಪೊಲೀಸ್​ ವಶದಲ್ಲಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅಕ್ರಮಗಳಿಗೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಈಗ ಬಯಲಾಗುತ್ತಿವೆ. ಹೂ ಗುಚ್ಛ ನೀಡುವ ನೆಪದಲ್ಲಿ ಇಂಜೆಕ್ಟ್‌ ಮಾಡಲು ಮುನಿರತ್ನ ಅವರು ಪ್ಲ್ಯಾನ್‌ ಹಾಕಿಕೊಂಡಿದ್ದರು ಎಂದು ಹೇಳಲಾಗಿದೆ. ಹೌದು ವಿಪಕ್ಷ ನಾಯಕರದ ಆರ್ ಅಶೋಕ್ ಸೇರಿದಂತೆ ತಮ್ಮ ಪಕ್ಷದವರು ಸೇರಿದಂತೆ ವಿರೋಧಿಗಳಿಗೆ ಈ ಒಂದು ಏಡ್ಸ್ ರಕ್ತ ಬಳಸಿ ಎಚ್‌ಐವಿ ಹಬ್ಬಿಸಲು ಪ್ರಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಇದೀಗ ಈ ಒಂದು ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ವೆಂಗ್ಯವಾಡಿದೆ. ಮುನಿರತ್ನರ ದ್ವೇಷದ ರಾಜಕೀಯಕ್ಕೆ, ಭ್ರಷ್ಟಾಚಾರಕ್ಕೆ ಗುರಿಯಾದವರಲ್ಲಿ ಬಿಜೆಪಿ ನಾಯಕರೂ ಹೊರತಾಗಿಲ್ಲ. ಮಾಧ್ಯಮ ವರದಿಗಳ ಪ್ರಕಾರ ಸ್ವತಃ ಬಿಜೆಪಿ ನಾಯಕ ಅಶೋಕ್ ಅವರಿಗೆ ಏಡ್ಸ್ ಸೋಂಕು ತಗುಲಿಸಲು ಪ್ರಯತ್ನಿಸಿದ್ದ ಅಘಾತಕಾರಿ ಸಂಗತಿ ಹೊರಬಂದಿದೆ. ಇಂತಹ ವಿಕೃತರತ್ನನನ್ನು ತಲೆ ಮೇಲೆ ಹೊತ್ತು ಮೆರೆಸುವ ಬಿಜೆಪಿ ಪಕ್ಷದ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಏಡ್ಸ್…

Read More