Author: kannadanewsnow05

ಬೆಂಗಳೂರು : ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ, SIT ವಶದಲ್ಲಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಅವರನ್ನು ಇಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಇದೀಗ ಚಿಕಿತ್ಸೆ ಅಂತ್ಯವಾಗಿದ್ದು ಪೊಲೀಸರು ಅವರನ್ನು ಮತ್ತೆ ಎಸ್ ಐ ಟಿ ಕಚೇರಿಗೆ ಕರೆದೋಯ್ದಿದ್ದಾರೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದಂತ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು. ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ತಕ್ಷಣ ವಿಟ್ಟೋರಿಗೆ ಆಸ್ಪತ್ರೆಗೆ ದಾಖಲಿಸಲಾಯಿತು ಅಲ್ಲಿ ವೈದ್ಯರು ಸುದೀರ್ಘವಾಗಿ 2 ಗಂಟೆಗಳ ಕಾಲ ಅವರಿಗೆ ಚಿಕಿತ್ಸೆ ನೀಡಿದರು.ಈ ವೇಳೆ ಆಸ್ಪತ್ರೆಗೆ ಭೇಟಿ ನೀಡಿದ್ದ ಎಸ್ಐಟಿ ಎಸ್ ಪಿ ಸುಮನ್ ಡಿ. ಪನ್ನೇಕರ್ ಅವರು ರೇವಣ್ಣ ಅವರ ಆರೋಗ್ಯದ ಕುರಿತಂತೆ ಆಸ್ಪತ್ರೆಯ ವೈದ್ಯರಿಂದ ಮಾಹಿತಿಯನ್ನು ಪಡೆದುಕೊಂಡರು. ಮೊದಲು ಅವರನ್ನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ಕೂಡ ಮಾಡಿಸಲಾಗಿತ್ತು. ಈ ಬೆನ್ನಲ್ಲೇ ಆರೋಗ್ಯದಲ್ಲಿ ಏರುಪೇರಾಗಿದೆ. ಎದೆನೋವು…

Read More

ಹಾವೇರಿ : ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆಯಿತು. ಆದರೆ ಹಾವೇರಿಯಲ್ಲಿ ಒಂದು ಘಟನೆ ನಡೆದಿದ್ದು, ಮನೆಯಲ್ಲಿ ಪತಿ ತೀರಿಹೋಗಿದ್ದರೂ ಕೂಡ ಪತ್ನಿ ಮತದಾನದ ಮಹತ್ವವನ್ನು ಅರಿತುಕೊಂಡು ಮತಗಟ್ಟೆಗೆ ಬಂದು ಮತ ಚಲಾಯಿಸಿ ಮತ ಹಾಕದೆ ಇರುವವರಿಗೆ ಮತ ಹಾಕಿ ಎಂದು ಮಹತ್ವ ಸಂದೇಶ ಸಾರಿರುವ ಘಟನೆ ನಡೆದಿದೆ. ಹೌದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ಗಂಡ ತೀರಿಹೋದರೂ ಹೆಂಡತಿ ಮತದಾನ ಮರೆತ್ತಿಲ್ಲ. ಪತಿ ನಾಗಪ್ಪ ಮೃತಪಟ್ಟಿದ್ದರು ಪತ್ನಿ ಚಿನ್ನವ್ವ, ಮಗ ಮಾಲತೇಶ, ಮಗಳು ಜ್ಯೋತಿ ದುಖಃದ ಮಡುವಿನಲ್ಲಿ ಇದ್ದರೂ ಸಹಿತ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ. ಆ ಮೂಲಕ ಎಲ್ಲರೂ ಮತ ಚಲಾಯಿಸುವಂತೆ ಸಂದೇಶ ಸಾರಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ನಾಗಪ್ಪ ಕಳಂಗಿ ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು.ನಿನ್ನೆ ಅವರು ಹೃದಯಘಾತದಿಂದ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ…

Read More

ದೊಡ್ಡಬಳ್ಳಾಪುರ : ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ಸಲುವಾಗಿ ವ್ಯಕ್ತಿಯಿಂದ 3.5 ಲಕ್ಷ ಹಣವನ್ನು ಲಂಚ ಸ್ವೀಕರಿಸುತ್ತಿದ್ದ, ಗ್ರಾಮೀಣ ಅಭಿವೃದ್ಧಿ ಅಧಿಕಾರಿ (PDO) ಒಬ್ಬ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಳಗೆ ಬಿದ್ದಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ಸಲುವಾಗಿ ಲಂಚ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿ ಕಚೇರಿ, ಅವರಣದಲ್ಲಿ ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಅಧಿಕಾರಿ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ನಿರಂಜನ್ ಅರಳು ಮಲ್ಲಿಗೆ ಗ್ರಾಮ ಪಂಚಾಯತಿ ಪಿಡಿಒ ಅಧಿಕಾರಿ ಎಂದು ತಿಳಿದುಬಂದಿದೆ.ಲೋಕಾಯುಕ್ತ ಎಸ್ಪಿ ಪ್ರವೀಣ್ ನೆಜ್ಜುರು ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದ್ದು, ಇದೀಗ ಪೊಲೀಸರು ನಿರಂಜನ್ ಅನ್ನು ಬಂಧಿಸಿದ್ದಾರೆ.

Read More

ಬೆಂಗಳೂರು : ಕರ್ನಾಟಕದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಬೆಂಗಳೂರು ಬಳ್ಳಾರಿ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಅಲ್ಲಿ ಶ್ರೀಕಿಯನ್ನ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. 2017ರಲ್ಲಿ ತುಮಕೂರು ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್​ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 1.14 ಲಕ್ಷ ಮೌಲ್ಯದ 60.6 ಬಿಟ್ ಕಾಯಿನ ಕಳುವು ಆಗಿರುವ ಕುರಿತು ಆರೋಪ ಕೇಳಿಬಂದಿತ್ತು. ಪ್ರೀತಿ ಲ್ಯಾಪ್ಟಾಪ್ ಪರಿಶೀಲನೆ ವೇಳೆ ಬಿಟ್ ಕಾಯಿನ್ ಕಳುವಾಗಿರುವುದು ದೃಢವಾಗಿದೆ. ಯುನೋಕಾಯಿನ್ ಪ್ರೈ. ಲಿ. ಗ್ರಾಹಕರಿಗೆ ಈ ಬಿಟ್ ಕಾಯಿನ್ ಸೇರಿದ್ದು ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಇದೀಗ ಪ್ರಮುಖ ಆರೋಪಿಯಾದ ಶ್ರೀಕಿಯನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣ ಎಸ್​ಐಟಿಗೆ ವರ್ಗಾವಣೆ ಆಗಿತ್ತು. ಈ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದರು.ಬಳಿಕ ಜಾಮೀನಿನ ಮೇಲೆ ಹೊರಗಡೆ ಬಂದಿದ್ದನು. ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿ ಸಿಐಡಿ ತನಿಖೆಗೆ…

Read More

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಬಂಧನವಾಗಿದ್ದು ಇಂದು ಅವರನ್ನು SIT ಅಧಿಕಾರಿಗಳು ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಈ ವೇಳೆ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡರೆ ಹಿನ್ನಲೆಯಲ್ಲಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಬಂಧಿಸಿತ್ತು. ಈ ವೇಳೆ ರೇವಣ್ಣ ಅವರನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ಸಂದರ್ಭದಲ್ಲಿ ನಾನು ಯಾರನ್ನು ಕಿಡ್ನ್ಯಾಪ್ ಮಾಡಿಲ್ಲ. ಕಿಡ್ನ್ಯಾಪಿಗೂ ನನಗೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂದು ಒಂದೇ ಉತ್ತರ ನೀಡುತ್ತಿದ್ದರು. ಆದರೂ ಎಸ ಐ ಟಿ ಅಧಿಕಾರಿಗಳು ಬಿಡದೆ ಅವರಿಂದ ಹೇಳಿಕೆಗಳನ್ನು ಪಡೆಯಲು ನಿರಂತರವಾಗಿ ವಿಚಾರಣೆ ನಡೆಸಿದರು. ಇದರಿಂದ ಮಾನಸಿಕ ಹಾಗು ದೈಹಿಕವಾಗಿ ಎಚ್ ಡಿ ರೇವಣ್ಣ ಅವರು ಕುಗ್ಗಿದ್ದರು. ಆದ್ದರಿಂದ ಅವರ ಆರೋಗ್ಯದಲ್ಲಿ ಕೊಂಚ ಏರುಪೇರು ಆಗಿತ್ತು.…

Read More

ಹಾವೇರಿ : ನಾನು ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ಆಸ್ಟ್ರೇಲಿಯಾದಿಂದ ಬಂದು ಮತ ಹಾಕುತ್ತಿದ್ದೇನೆ. ಸಮರ್ಥ ನಾಯಕನ ಆಯ್ಕೆಗಾಗಿ ಪ್ರತಿಯೊಬ್ಬರು ಮತದಾನ ಮಾಡಿ ಒಂದು ವೇಳೆ ಮತ ಹಾಕದೆ ಇರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಂಡು ಶಿಕ್ಷೆ ನೀಡಿ ಎಂದು ನಟಿ ಭಾವನಾ ಶಿವಾನಂದ ತಿಳಿಸಿದರು. ಇಂದು ಅವರು ಹಾವೇರಿ ಜಿಲ್ಲೆಯಲ್ಲಿ ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ನಾನು ಆಸ್ಟ್ರೇಲಿಯಾದಿಂದ ಅಷ್ಟು ದೂರದಿಂದ ಬಂದು ಮತ ಹಾಕುತ್ತಿದ್ದೇನೆ ಆದರೆ ಇಲ್ಲಿಯ ಜನರಿಗೆ ಏನಾಗಿದೆಯೋ ಗೊತ್ತಾಗುತ್ತಿಲ್ಲ. ಅದರಲ್ಲೂ ಬೆಂಗಳೂರಿನ ಜನತೆ ಮತದಾನ ಪ್ರಕ್ರಿಯೆಯಲ್ಲಿ ಆಸಕ್ತಿ ತೋರದೆ ಇರುವುದು ತುಂಬಾ ಬೇಸರದ ಸಂಗತಿ ಎಂದು ತಿಳಿಸಿದರು. ಸಮರ್ಥನ ನಾಯಕನನ್ನು ಆಯ್ಕೆ ಮಾಡಿದರೆ ದೇಶಕ್ಕೂ ಒಳ್ಳೆಯದು, ಜನರಿಗೆ ಒಳ್ಳೆಯದು, ಮುಂದಿನ ಭವಿಷ್ಯದ ಪೀಳಿಗೆಗೂ ಒಳ್ಳೆಯದು. ನಿಮ್ಮ ಒಂದು ಮತದಿಂದ ಭವಿಷ್ಯದಲ್ಲಿ ಒಳ್ಳೆಯ ನಾಯಕ ಊಟಿಕೊಳ್ಳುತ್ತಾನೆ ಇದರಿಂದ ದೇಶದ ಅಭಿವೃದ್ಧಿ ಆಗಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು. ನಾನು ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ಆಸ್ಟ್ರೇಲಿಯಾದಿಂದ ಬಂದು…

Read More

ಹರಿಯಾಣ : ಲೋಕಸಭಾ ಚುನಾವಣೆ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಹರಿಯಾಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಈ ಹಿಂದೆ ಬೆಂಬಲ ಸೂಚಿಸಿದ ಮೂವರು ಸ್ವತಂತ್ರ ಅಭ್ಯರ್ಥಿಗಳು ಇದೀಗ ಬೆಂಬಲವನ್ನು ಹಿಂಪಡೆದಿದ್ದಾರೆ ಈ ಮೂಲಕ ಹರಿಯಾಣದಲ್ಲಿ ಬಿಜೆಪಿಗೆ ಸಂಕಷ್ಟ ಎದುರಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಮನೋಹರ್ ಲಾಲ್ ಮತ್ತು ರಂಜಿತ್ ಚೌತಾಲಾ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಇದಾದ ಬಳಿಕ ಬಿಜೆಪಿಯ ಅಂಕಿ-ಅಂಶ 46ಕ್ಕೇರಿತ್ತು. ಮೂವರು ಸ್ವತಂತ್ರ ಶಾಸಕರು ಕೂಡ ಬೆಂಬಲ ಹಿಂಪಡೆದಿದ್ದಾರೆ. ಅವರಲ್ಲಿ ಚರ್ಖಿ ದಾದ್ರಿ ಶಾಸಕ ಸೋಮವೀರ್ ಸಾಂಗ್ವಾನ್, ನಿಲೋಖೇರಿ ಶಾಸಕ ಧರಂಪಾಲ್ ಗೊಂಡರ್ ಮತ್ತು ಪುಂಡ್ರಿ ಶಾಸಕ ರಣಧೀರ್ ಗೋಲನ್ ಸೇರಿದ್ದಾರೆ. ಸದ್ಯ ಸರ್ಕಾರಕ್ಕೆ 43 ಶಾಸಕರ ಬೆಂಬಲವಿದೆ. ಅಂದರೆ ಸರ್ಕಾರ ಅಲ್ಪಮತದಲ್ಲಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ 30 ಶಾಸಕರನ್ನು ಹೊಂದಿದ್ದರೆ, ಜನನಾಯಕ ಜನತಾ ಪಕ್ಷವು 10 ಶಾಸಕರನ್ನು ಹೊಂದಿದೆ. ಬಿಜೆಪಿ 40 ಶಾಸಕರನ್ನು ಹೊಂದಿದೆ. ಆದರೆ ರಂಜಿತ್ ಚೌತಾಲಾ ರಾಜೀನಾಮೆ ನೀಡಿದ ಕಾರಣ ಸ್ವತಂತ್ರರ ಸಂಖ್ಯೆ 7 ರಿಂದ 6 ಕ್ಕೆ…

Read More

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಬಂಧನವಾಗಿದ್ದು ಇದೀಗ ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು SIT ಅಧಿಕಾರಿಗಳು ಕರೆತಂದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಬಂಧಿಸಿತ್ತು. ಈ ವೇಳೆ ರೇವಣ್ಣ ಅವರನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ಸಂದರ್ಭದಲ್ಲಿ ನಾನು ಯಾರನ್ನು ಕಿಡ್ನ್ಯಾಪ್ ಮಾಡಿಲ್ಲ. ಕಿಡ್ನ್ಯಾಪಿಗೂ ನನಗೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂದು ಒಂದೇ ಉತ್ತರ ನೀಡುತ್ತಿದ್ದರು. ಆದರೂ ಎಸ ಐ ಟಿ ಅಧಿಕಾರಿಗಳು ಬಿಡದೆ ಅವರಿಂದ ಹೇಳಿಕೆಗಳನ್ನು ಪಡೆಯಲು ನಿರಂತರವಾಗಿ ವಿಚಾರಣೆ ನಡೆಸಿದರು. ಇದರಿಂದ ಮಾನಸಿಕ ಹಾಗು ದೈಹಿಕವಾಗಿ ಎಚ್ ಡಿ ರೇವಣ್ಣ ಅವರು ಕುಗ್ಗಿದ್ದರು. ಆದ್ದರಿಂದ ಅವರ ಆರೋಗ್ಯದಲ್ಲಿ ಕೊಂಚ ಏರುಪೇರು ಆಗಿತ್ತು. ಹಾಗಾಗಿ ಇಂದು ಸೊಸೈಟಿ ಅಧಿಕಾರಿಗಳು ಅವರನ್ನು ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು ಕರೆದುಕೊಂಡು…

Read More

ಮಹಾರಾಷ್ಟ್ರ : ಮತಗಟ್ಟೆಗೆ ಈವಿಎಂ ಮಷೀನ್ ಗಳು ತಡವಾಗಿ ಆಗಮಿಸಿದ್ದಕ್ಕೆ ಕಿಡಿಗೇಡಿ ಒಬ್ಬ ಮಷೀನ್ ಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಸಂಗೋಳ ತಾಲೂಕಿನ ಬಾದಲಾವಡಿ ಗ್ರಾಮದಲ್ಲಿ ನಡೆದಿದೆ. ಹೌದು ತಡವಾಗಿ ಬಂದಿದ್ದಕ್ಕೆ ಕುಪಿತಗೊಂಡ ಕಿಡಿಗೇಡಿ ಈವಿಎಂ ಗೆ ಬೆಂಕಿ ಹಚ್ಚಿದ್ದಾನೆ. ಸೋಲಾಪುರ ಜಿಲ್ಲೆಯ ಸಂಗೋಳ ತಾಲೂಕಿನ ಬಾದಲವಾಡಿಯಲ್ಲಿ ಇವಿಎಂ ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಈವಿಎಂ ತಡವಾಗಿ ಬಂದಿದ್ದಕ್ಕೆ ಕಿಡಿಗೇಡಿ ಬೆಂಕಿ ಹಚ್ಚಿದ್ದಾನೆ.ಇದೀಗ ಕಿಡಿಗೇಡಿಯನ್ನು ಚುನಾವಣಾ ಸಿಬ್ಬಂದಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಸೊಲ್ಲಾಪುರ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಉತ್ತರಕನ್ನಡ : ಮತಗಟ್ಟೆ ಕೇಂದ್ರದಲ್ಲಿ ‘ನಮ್ಮ ಮತ ನಮ್ಮ ಹಕ್ಕು’ ಬದಲು ‘ನಮ್ಮ ಹಕ್ಕು ನಮ್ಮ ಶಕ್ತಿ’ ಬರೆದಿದ್ದಕ್ಕೆ ಚುನಾವಣಾಧಿಕಾರಿಗೆ ಶಾಸಕ ದಿನಕರ ಶೆಟ್ಟಿ ತರಾಟೆಗೆ ತೆಗೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಗಿಬ್ ಅಂಗ್ಲಮಾಧ್ಯಮ ಶಾಲೆಯ ಮತಗಟ್ಟೆಯಲ್ಲಿ ನಡೆದಿದೆ. ಲೋಕಸಭಾ ಚುನಾವಣೆಗೆ 2ನೇ ಹಂತದ ಮತದಾನ ಹಿನ್ನೆಲೆ ಇಂದು ಕುಮಟಾ ಪಟ್ಟಣ ಗಿಬ್ ಅಂಗ್ಲಮಾಧ್ಯಮ ಶಾಲೆ ಮತಗಟ್ಟೆಗೆ ಮತ ಚಲಾಯಿಸಲು ಬಂದಿದ್ದ ಶಾಸಕ. ಈ ವೇಳೆ ಗೋಡೆಯ ಮೇಲೆ “ನಮ್ಮ ಮತ ನಮ್ಮ ಶಕ್ತಿ’ ಬರೆಹ ಕಂಡು ಸಿಡಿಮಿಡಿಗೊಂಡಿದ್ದಾರೆ. ತಕ್ಷಣ ಚುನಾವಣಾ ಸಿಬ್ಬಂದಿಗಳಿಗೆ ಕರೆದು ಬರಹದ ಮೇಲೆ ಪೋಸ್ಟರ್ ಅಂಟಿಸಿ ಮರೆಮಾಚಿಸಿದ್ದಾರೆ. ಮತಗಟ್ಟೆಯ ಗೋಡೆಯ ಮೇಲೆ ಈ ರೀತಿ ಬರೆಯುವಂತೆ ಹೇಳಿದವರು ಯಾರು? ಶಕ್ತಿ ಎಂಬ ಪದ ಯಾಕೆ ಬಳಕೆ ಮಾಡಿದ್ದೀರಿ? ಶಕ್ತಿ ಎನ್ನುವುದು ಗ್ಯಾರಂಟಿ ಯೋಜನೆಗಳಲ್ಲಿ ಒಂದು ಎಂಬುದು ನಿಮಗೆ ತಿಳಿದಿಲ್ಲವೇ? ಮತಗಟ್ಟೆಯಲ್ಲಿ ಈ ರೀತಿ ಬಹಳ ದೊಡ್ಡದಾಗಿ ಬರೆದಿರುವುದು ನನಗೆ ಅಸಮಾಧಾನ ತಂದಿದೆ ಎಂದು…

Read More