Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಮೊದಲನೇ ಪತ್ನಿಯ ಮಕ್ಕಳ ಜೊತೆ ಸೇರಿ ವ್ಯಕ್ತಿಯೊಬ್ಬ ಎರಡನೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ರಾಜೇಂದ್ರ ನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನ ಅಖಿಲಾ ಭಾನು (46) ಎಂದು ಗುರುತಿಸಲಾಗಿದೆ. ಮೊದಲ ಪತ್ನಿ ಮಕ್ಕಳ ಜೊತೆ ಸೇರಿ ಅಖಿಲ ಬಾನು ಕೊಲೆ ಮಾಡಲಾಗಿದೆ.ಘಟನೆ ಸಂಬಂಧ ಆರೋಪಿ ಪತಿ ಅಬ್ಬ ಥಾಯೂಬ್, ಆತನ ಮೊದಲನೇ ಹೆಂಡತಿಯ ಮಕ್ಕಳಾದ ಮೊಹಮದ್ ಆಸಿಫ್, ಮೊಹಮದ್ ಥೋಸಿಫ್ ಹಾಗೂ ಮೊಹಮದ್ ಹೈದರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. https://kannadanewsnow.com/kannada/bengaluru-woman-accuses-actor-of-sexually-exploiting-her-on-the-pretext-of-getting-her-a-chance-in-a-movie/ ಥಾಯೂಬ್ ಗೆ ಮೊದಲ ಹೆಂಡತಿಯಲ್ಲಿ ನಾಲ್ವರು ಮಕ್ಕಳಿದ್ದರು. 2013 ರಲ್ಲಿ ಅಖಿಲಾ ಭಾನುರನ್ನು ಎರಡನೇ ವಿವಾಹವಾಗಿದ್ದ, ಆರೋಪಿ ಅಬ್ಬ ಥಾಯೂಬ್ ಸಿಲ್ಕ್ ಫ್ಯಾಕ್ಟರಿಯಲ್ಲಿ ನೌಕರನಾಗಿದ್ದ ಎಂದು ಹೇಳಲಾಗುತ್ತಿದೆ.ಎರಡನೇ ಪತ್ನಿ ಅಖಿಲಾ ಭಾನು ಕ್ಯಾನ್ಸರ್ನಿಂದ ಬಳಲುತ್ತಿದ್ದು ಗುಣಮುಖರಾಗಿದ್ದರು. ಆಕೆಗೆ ಮಕ್ಕಳಿರಲಿಲ್ಲ. ಇತ್ತೀಚೆಗೆ ಅಖಿಲಾ ಭಾನು ಅವರ ಅಕ್ಕನ ಮಗ ಸೈಯದ್ ಇರ್ಫಾನ್ ಆಕೆಗಾಗಿ ನಾಯ್ಡುನಗರದಲ್ಲಿ ಆರ್ಥಿಕ ನೆರವು ನೀಡಿ ಒಂದು…
ಬೆಂಗಳೂರು : ಕನ್ನಡ ಸೇರಿದಂತೆ ತಮಿಳು ಸಿನಿಮಾಗಳಲ್ಲಿ ಸಣ್ಣ ಪುಟ್ಟ ಪಾತ್ರವನ್ನು ಮಾಡಿಕೊಂಡಿದಂತಹ ಸಂತೋಷ ಎನ್ನುವ ಆರೋಪಿಯೂ ಯುವತಿಗೆ ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ ಲೈಂಗಿಕವಾಗಿ ಬಳಸಿಕೊಂಡು ವಂಚನೆ ಮಾಡಿರುವ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. https://kannadanewsnow.com/kannada/breaking-msp-plan/ ಆರೋಪಿ ಸಂತೋಷ್ ಯುವತಿಗೆ ಮೊದಲು ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ ನಂತರ ಪ್ರೀತಿ ಮಾಡುವುದಾಗಿ ನಾಟಕ ಮಾಡುತ್ತಾನೆ. ನಂತರ ಯುವತಿಯನ್ನು ಆರೋಪಿ ಸಂತೋಷ್ ರಾಜ್ಯದ ಬೇರೆ ಬೇರೆ ಭಾಗಗಳಿಗೆ ಕರೆದುಕೊಂಡು ಹೋಗಿ ಲೈಂಗಿಕವಾಗಿ ಬಳಸಿಕೊಳ್ಳುತ್ತಾನೆ . ನಂತರ ಯುವಕನಿಗೆ ಬೇರೊಂದು ಮದುವೆ ಆಗಿರುವುದು ಗೊತ್ತಾಗಿ ಯುವತಿಗೆ ನಾನು ಮೋಸ ಹೋಗಿದ್ದೇನೆ ಎಂಬುದು ತಿಳಿಯುತ್ತದೆ. https://kannadanewsnow.com/kannada/we-will-reduce-corruption-but-corruption-free-governance-is-not-possible-siddaramaiah/ ಈ ಕುರಿತಂತೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸರಿಗೆ 6 ತಿಂಗಳ ಹಿಂದೆ ದೂರು ನೀಡುತ್ತಾಳೆ. ಪ್ರಕರಣವನ್ನು ಅತ್ತಿಬೆಲೆ ಪೊಲೀಸ್ ಠಾಣೆಗೆ ಜ್ಞಾನ ಭಾರತಿ ಪೋಲಿಸರು ವರ್ಗಾಯಿಸುತ್ತಾರೆ.ಆದರೆ ಇದುವರೆಗೂ ಪೊಲೀಸರು ಯುವಕನ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂಬುದು ತಿಳಿದುಬಂದಿದೆ. ಸಿನಿಮಾದಲ್ಲಿ ಅವಕಾಶ ಸಿಗದ ಬಳಿಕ…
ಹಾವೇರಿ : ಭ್ರಷ್ಟಾಚಾರ ಸಂಪೂರ್ಣ ತಡೆಯೋಕೆ ಆಗಲ್ಲ ಬ್ಲ್ಯಾಕ್ ಶೀಫ್ಗಳು ಇದ್ದೇ ಇರ್ತಾವೆ. ನಾವು ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಇಲ್ಲ ಅಂತಾ ಎಲ್ಲೂ ಹೇಳಿಲ್ಲ. ಭ್ರಷ್ಟಾಚಾರ ಕಡಿಮೆ ಮಾಡುತ್ತೇವೆ ಅಂತಾ ಹೇಳಿದ್ದೇವೆ. ಭ್ರಷ್ಟಾಚಾರ ರಹಿತ ಅಂತಾ ಹೇಳಲು ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/breaking-papuva-people/ ಹಾವೇರಿ ನಗರದ ಹೊರವಲಯದ ಮೆಡಿಕಲ್ ಕಾಲೇಜ್ನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಯಾವುದೇ ಸರ್ಕಾರವಿರಲಿ ಭ್ರಷ್ಟಾಚಾರ ಇದ್ದೇ ಇರುತ್ತದೆ ಆದರೆ ಅದನ್ನು ಕಡಿಮೆ ಮಾಡುತ್ತೇವೆ ಆದರೆ ಭ್ರಷ್ಟಾಚಾರ ರಹಿತ ಆಡಳಿತ ಸಾಧ್ಯವಿಲ್ಲ.ಬ್ಲ್ಯಾಕ್ ಶೀಫ್ಗಳು ಇದ್ದೆ ಇದ್ದಾವೆ. ಅವುಗಳನ್ನು ಪತ್ತೆ ಹಚ್ಚಿ ಅವರಿಗೆ ಶಿಕ್ಷೆ ಕೊಡುವ ಕೆಲಸ ಇದೆಯಲ್ವಾ, ಅದನ್ನು ನಾವು ಮಾಡುತ್ತೇವೆ ಎಂದರು. https://kannadanewsnow.com/kannada/jds-mla-quit-party/ ಬರ ಹಾಗೂ ಬೆಳೆ ನಷ್ಟ ಹಿ ನೆಲೆಯಲ್ಲಿ ರೈತರಿಗೆ ಸಮರ್ಪಕವಾಗಿ ಪರಿಹಾರದ ಹಣ ಸೇರಿಲ್ಲ ಪ್ರಶ್ನೆಗೆ ಉತ್ತರಿಸಿದವರು ಈಗಾಗಲೇ ಕೇಂದ್ರಕ್ಕೆ ರಾಜ್ಯ ಸರ್ಕಾರ ಹಲವು ಬಾರಿ ಮನವಿ ಮಾಡಿದೆ ಸಮೀಕ್ಷೆಗಳ ವರದಿ ಪ್ರಕಾರ 35,000 ಕೋಟಿ…
ಬೆಂಗಳೂರು : ಪ್ರತಿಷ್ಠಿತ ಹೋಟೆಲ್ಗಳಿಗೆ ಕ್ಯಾಷಿಯರ್ ಕೆಲಸಕ್ಕೆ ಸೇರಿಕೊಂಡು ಗ್ರಾಹಕರು ನೀಡುವ ನಗದು ದೋಚಿ ಪರಾರಿಯಾಗುತ್ತಿದ್ದ ಆರೋಪಿಯನ್ನು ರೇಡ್ ಹ್ಯಾಂಡ್ ಆಗಿ ಸೆರೆಸಿಕ್ಕ ಆರೋಪಿಯನ್ನು ಇದೀಗ ಮಾಲೀಕರು ಆರೋಪಿಯನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬನಶಂಕರಿಯ ಕತ್ರಿಗುಪ್ಪೆ ನಿವಾಸಿ ಎಂ. ಎಸ್ ರವಿಕುಮಾರ್ 66) ಬಂಧಿತ ಆರೋಪಿಯಾಗಿದ್ದಾನೆ. ದೇವನಹಳ್ಳಿ ಬಳಿಯ ನಂದಗೋಕುಲ ಹೋಟೆಲ್ನಲ್ಲಿ ಕ್ಯಾಷಿಯರ್ ಕೆಲಸಕ್ಕೆ ಸೇರಿದ್ದಈ ಮಾಹಿತಿ ತಿಳಿದ ಕೆ.ಆರ್.ಪುರ ಬಳಿಯ ಭಟ್ಟರಹಳ್ಳಿಯ ನ್ಯೂ ಉಡುಪಿ ಗ್ಯಾಂಡ್ ಹೋಟೆಲ್ ಮಾಲೀಕ ಸತೀಶ್ ಶೆಟ್ಟಿ ಸ್ಥಳಕ್ಕೆ ಹೋಗಿ ಹಿಡಿದು ಕೆ.ಆರ್.ಪುರ ಠಾಣೆಗೆ ಒಪ್ಪಿಸಿದ್ದಾರೆ. https://kannadanewsnow.com/kannada/a-man-who-kept-batteries-for-a-private-part-for-sexual-satisfaction-the-doctors-were-shocked/ ಇದರ ಮೇರೆಗೆ ಪೊಲೀಸರು ತನಿಖೆ ಕೈ ಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಂ.ಕಾಂ ಓದಿರುವ ರವಿಕುಮಾರ್, ದೊಡ್ಡ ದೊಡ್ಡ ಹೋಟೆಲ್ ಮಾಲೀಕರ ಬಳಿಗೆ ಹೋಗಿ ನಾನು ಇಂತಹ ಜಾತಿಗೆ ಸೇರಿದವ ಪ್ರತಿಷ್ಠಿತ ಹೋಟೆಲ್ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡಿದ ಅನುಭವ ಇದೆ. ವಯಸ್ಸಾಗಿದೆಯಲ್ಲದೆ ಆರ್ಥಿಕವಾಗಿ ಸಂಕಷ್ಟವಿದ್ದು ಕೆಲಸ ಕೊಟ್ಟರೆ ಮಾಡುವುದಾಗಿ ಗೋಗರೆದು ಕೆಲಸಕ್ಕೆ ಸೇರಿಕೊಳ್ಳುತ್ತಿದ್ದ. https://kannadanewsnow.com/kannada/devolop-india-modi/ ಗ್ರಾಹಕರು…
ಉತ್ತರಪ್ರದೇಶ : ಪರೀಕ್ಷೆ ಬರೆಯುವ ವೇಳೆ ನಿದ್ರೆ ಬಾರದಿರಲಿ ಎಂದು ಮಕ್ಕಳು ಉಗ್ರ ಮಾತ್ರೆಗಳನ್ನು ನುಂಗುವಂತಹ ಆಘಾತಕಾರಿ ಅಂಶ ಇದೀಗ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ವೈದ್ಯರು ಆತಂಕ ವ್ಯಕ್ತಪಡಿಸಿದ್ದು ಇಂತಹ ಮಾತ್ರೆಗಳ ಬಳಕೆ ತಡೆಗೆ ಅಗತ್ಯ ಕ್ರಮ ಹಾಗೂ ಮಾರಾಟ ಮಾಡೋ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. https://kannadanewsnow.com/kannada/when-guarantee-was-announced-they-said-the-state-would-go-bankrupt-now-karnataka-is-stable-siddaramaiah/ ಉತ್ತರ ಪ್ರದೇಶದ 10ನೇ ತರಗತಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಪ್ರಜಕ್ತಾ ಸ್ವರೂಪ್ ಎಂಬ ವಿದ್ಯಾರ್ಥಿನಿ ಇತ್ತೀಚೆಗೆ ಏಕಾಏಕಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಳು.ತಪಾಸಣೆ ವೇಳೆ ಆಕೆಯ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ನರಗಳೆಲ್ಲಾ ಊದಿಕೊಂಡಿದ್ದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಆಕೆಗೆ ಶಸ್ತ್ರ ಚಿಕಿತೆ ನಡೆಸಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ. ಇದೀಗ ವಿದ್ಯಾರ್ಥಿನಿ ಆಸ್ಪತ್ರೆ ದಾಖಲಾದ ವೇಳೆ ಆಕೆಯ ಪೋಷಕರು ಮನೆಯಲ್ಲಿನ ಆಕೆಯ ಕೋಣೆ ತಪಾಸಣೆ ಮಾಡಿದಾಗ ಅಲ್ಲಿ ಒಂದು ಬಾಟಲ್ನಲ್ಲಿ ಮಾತ್ರೆ ಕಂಡಿದೆ. https://kannadanewsnow.com/kannada/andaman-firest-death/ ಅದನ್ನು ವೈದ್ಯರಿಗೆ ತೋರಿಸಿದಾಗ ಅದು ನಿದ್ದೆಯಿಂದ ತಪ್ಪಿಸಿಕೊಳ್ಳಲು ಬಳಸುವ ಮಾತ್ರೆ ಎಂಬುದು ಕಂಡುಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯನ್ನು…
ಹಾವೇರಿ : ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಾದ ಐದು ಗ್ಯಾರಂಟಿ ಯೋಜನೆಗಳು ಜಾರಿ ಆಗುವುದರಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ನಮ್ಮ ವಿರೋಧಿಗಳು ಹೇಳಿದ್ದರು. ಆದರೆ ಇದೀಗ ರಾಜ್ಯ ಸುಭದ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಾವೇರಿಯಲ್ಲಿ 411 ಕೋಟಿಯರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಈ 5 ಗ್ಯಾರಂಟಿ ಗಳಿಂದ ರಾಜ್ಯದ ಜನತೆ ಸಂತೋಷವಾಗಿದ್ದಾರೆ. ಅಲ್ಲದೆ ಮಹಿಳೆಯರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಇದರ ಲಾಭವನ್ನು ಪಡೆದುಕೊಂಡಿದ್ದಾರೆ. ಆದರೆ ವಿರೋಧಿಗಳು ರಾಜ್ಯದಿವಾಳೆ ಆಗುತ್ತದೆ ಎಂದು ಹೇಳಿದರು ಆದರೆ ಇದೀಗ ರಾಜ್ಯ ಸುಭದ್ರವಾಗಿದೆ ಎಂದು ಅವರು ತಿಳಿಸಿದರು. https://kannadanewsnow.com/kannada/good-news-for-minority-communities-applications-invited-for-self-employment-up-to-rs-1-lakh/ ಈ ವೇಳೆ, ಆಶಾಕಿರಣ ಯೋಜನೆ ಜಾರಿ ಮಾಡಲಾಗಿದ್ದು, ದೃಷ್ಟಿ ದೋಷ ಇರುವ ಜನರಿಗೆ ಉಚಿತ ಕನ್ನಡಕ ಕೊಡುತ್ತಿದ್ದೇವೆ. ರಾಜ್ಯದ ಜನರಿಗೆ 5 ಗ್ಯಾರಂಟಿ ಯೋಜನೆ ನೀಡಲಾಗಿದೆ. ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ರೈತರ ಆತ್ಮಹತ್ಯೆ ಪ್ರಕಾರಣಗಳಿಗೆ ಪರಿಹಾರಕ್ಕೆ ಸಂಬಂಧಿಸಿದಂತೆ ಎಫ್ಐಆರ್…
ಬೆಂಗಳೂರು : ಬಾಡಿಗೆ ಮನೆಗೆ ಗ್ರಾಹಕರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿದೇಶಿ ಮಹಿಳೆಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ಸಂರಕ್ಷಣೆ ದಳದ ಪೊಲೀಸರು ಬಂಧಿಸಿ, ದಂಧೆಯಲ್ಲಿ ಸಿಲುಕಿದ್ದ ಮೂವರು ವಿದೇಶಿ ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. https://kannadanewsnow.com/kannada/modi-if-win-kharge/ ಕೂಡ್ಲು ಮುಖ್ಯರಸ್ತೆಯ ಸಫೀನಾ ಬಂಧಿತೆ. ಈಕೆ ಕೂಡ್ಲು ಮುಖ್ಯ ರಸ್ತೆಯಲ್ಲಿ ವಾಸಕ್ಕೆ ಮನೆಯೊಂದನ್ನು ಬಾಡಿಗೆ ಪಡೆದಿದ್ದಳು. ಆದರೆ, ಕೆಲವು ವಿದೇಶಿ ಮಹಿಳೆಯರಿಗೆ ಹಣದ ಆಮಿಷವೊಡ್ಡಿ ಮನೆಗೆ ಕರೆತಂದು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿ ಕೊಂಡು ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದಳು. ಈ ಸಂಬಂಧ ದೊರೆತ ಖಚಿತ ಖಚಿತ ಮಾಹಿ ಮಾಹಿತಿ ಮೇರೆಗೆ ಆ ಮೇಲೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ, ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ. ದಾಳಿ ವೇಳೆ ದಂಧೆಯಲ್ಲಿ ಸಿಲುಕಿದ್ದ ಮೂವರು ವಿದೇಶಿ ಮಹಿಳೆಯರನ್ನು ರಕ್ಷಿಸ ಲಾಗಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/note-call-this-number-if-you-have-difficulties-getting-hsrp/
ಬಾಗಲಕೋಟೆ: ಕಲಾದಗಿ ಗ್ರಾಮದ ಗುರುಲಿಂಗೇಶ್ವರ ಮಠದ ಉತ್ತರಾಧಿಕಾರಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ರಂಭಾಪುರಿ ಜಗದ್ಗುರುಗಳ ಕಾರಿಗೆ ಮುತ್ತಿಗೆ ಹಾಕಿದ ಹಾಗೂ ಚಪ್ಪಲಿ ಎಸೆದ ಘಟನೆಗೆ ಸಂಬಂಧಿಸಿದಂತೆ ಕಲಾದಗಿ ಪೊಲೀಸ್ ಠಾಣೆಯಲ್ಲಿ 59 ಜನರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.ಎಂಟು ವರ್ಷಗಳ ಹಿಂದೆ ಸ್ವಾಮೀಜಿ ನಿಧನರಾಗಿದ್ದು, ರಂಭಾಪುರಿ ಶ್ರೀಗಳು ಮಠಕ್ಕೆ ಗಂಗಾಧರ ಸ್ವಾಮೀಜಿಯನ್ನು ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡಿದ್ದರು. ಆದರೆ, ಈ ನೇಮಕಕ್ಕೆ ಗ್ರಾಮದ ಕೆಲವು ಭಕ್ತರು ವಿರೋಧಿಸಿದ್ದರು. ಹೀಗಾಗಿ ವಿವಾದ ಕೋರ್ಟ್ ಮೆಟ್ಟಿಲೇರಿತ್ತು. https://kannadanewsnow.com/kannada/digital-scanig-fir/ ಶನಿವಾರ ಉದಗಟ್ಟಿಯಲ್ಲಿನ ಕಾರ್ಯಕ್ರಮಕ್ಕೆ ಹೊರಟಿದ್ದರ ರಂಭಾಪುರಿ ಶ್ರೀಗಳ ಕಾರಿಗೆ ಕೆಲವು ಭಕ್ತರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ್ದರು. ಈ ವೇಳೆ ಮಹಿಳೆಯೋರ್ವಳು ಶ್ರೀಗಳ ಕಾರಿನತ್ತ ಚಪ್ಪಲಿ ಎಸೆದ ವಿಡಿಯೋ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ರಂಭಾಪುರಿ ಜಗದ್ಗುಗಳು ಈ ಘಟನೆ ನಡೆದಿರುವುದನ್ನು ತಳ್ಳಿಹಾಕಿದ್ದರು. ಆದರೀಗ 59 ಜನರ ವಿರುದ್ಧ ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-good-news-for-gram-panchayat-library-supervisors-state-govt-orders-increase-in-minimum-wages-da/ ಬಾಗಲಕೋಟೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ .ಪಿ.ಅಮರನಾಥ ರೆಡ್ಡಿ, ಭಕ್ತ ರಂಗಪ್ಪ…
ಬೆಂಗಳೂರು : ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರಿಗೆ ಸರಕಾರ ಸಿಹಿ ಸುದ್ದಿಯೊಂದ್ದನ್ನು ನೀಡಿದ್ದು, 2023ರ ಸೆ.4ರಿಂದ ಪೂರ್ವಾನ್ವಯ ಆಗುವಂತೆ ಮಾಸಿಕ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/good-news-for-bmtc-employees-compensation-amount-increased-under-group-insurance-scheme/ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರಿಗೆ 16,382 ರು. ಮಾಸಿಕ ಕನಿಷ್ಠ ವೇತನ ಹಾಗೂ ಕಾರ್ಮಿಕ ಇಲಾಖೆಯು ಕಾಲಕಾಲಕ್ಕೆ ನಿಗದಿ ಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಬೇಕು. ಸೆಪ್ಟೆಂಬರ್ ತಿಂಗಳಿಂದ ಅನ್ವಯವಾಗುವಂತೆ ಬಾಕಿ ಮೊತ್ತವನ್ನು ಗ್ರಂಥಾಲಯ ಮೇಲ್ವಿಚಾರಕರಿಗೆ ಪಾವತಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆಯು ಆದೇಶದಲ್ಲಿ ತಿಳಿಸಿದೆ. ಹೀಗಾಗಿ 2023-24ನೇ ಸಾಲಿನ ಸೆಪ್ಟೆಂಬರ್ನಿಂದ 16,382 ರು. ಕನಿಷ್ಠ ವೇತನ ಹಾಗೂ ವ್ಯತ್ಯಾಸವಾಗುವ ತುಟ್ಟಿ ಭತ್ಯೆ (ವಿಡಿಎ) 1,542 ರು. ಸೇರಿದಂತೆ ಮಾಸಿಕ 17,924 ರು. ಪಾವತಿಸಲು ಆದೇಶಿಸಲಾಗಿದೆ. https://kannadanewsnow.com/kannada/submission-of-income-certificate-for-rythu-vidyanidhi-scholarships-allowed-till-february-29/ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪ್ರಿಯಾಂಕ್ ಖರ್ಗೆ, ಗ್ರಂಥಾಲಯ ಮೇಲ್ವಿಚಾರಕರ ಪಾತ್ರ ಮಹತ್ವದ್ದು ಎಂದು ಪರಿಗಣಿಸಿ, ಗ್ರಾಮ…
ಬೆಂಗಳೂರು : ಬಿಎಂಟಿಸಿ ಸಿಬ್ಬಂದಿ ಕರ್ತವ್ಯದ ವೇಳೆ ಅಪಘಾತ ಹೊರತುಪಡಿಸಿ ಬೇರೆ ಕಾರಣದಿಂದ ಮೃತಪಟ್ಟರೆ ಅವರ ಕುಟುಂಬದವರಿಗೆ ಗುಂಪು ವಿಮಾ ಯೋಜನೆ ಅಡಿಯಲ್ಲಿ ಪರಿಹಾರ ನೀಡಲಾಗುತ್ತಿದೆ. ಈ ಹಿಂದೆ 3 ಲಕ್ಷ ನೀಡಲಾಗುತ್ತಿದ್ದ ಪರಿಹಾರ ಮೊತ್ತವನ್ನು 2023ರ ನವೆಂಬರ್ 20ರ ನಂತರದಿಂದ 10 ಲಕ್ಷ ನೀಡಲಾಗುತ್ತದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/submission-of-income-certificate-for-rythu-vidyanidhi-scholarships-allowed-till-february-29/ ಗುಂಪು ವಿಮಾ ಯೋಜನೆಗಾಗಿ ಬಿಎಂಟಿಸಿ ಸಿಬ್ಬಂದಿಯಿಂದ ಪಡೆಯಲಾಗುವ ಮಾಸಿಕ ವಂತಿಗೆಯನ್ನು ಹೆಚ್ಚಿಸಲಾಗಿದ್ದು, ಇನ್ನು ಮುಂದೆ ಪ್ರತಿ ಸಿಬ್ಬಂದಿ ವೇತನದಲ್ಲಿ ಮಾಸಿಕ ರೂ.350 ಕಡಿತಗೊಳಿಸುವುದಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/the-work-of-a-woman-who-works-from-home-is-precious-and-priceless-sc/ ಅದರ ಜತೆಗೆ ಸಿಬ್ಬಂದಿ ಅಪಘಾ ತದಿಂದ ಮೃತಪಟ್ಟರೆ ರೂ.50 ಲಕ್ಷ ಪರಿಹಾರ ಮೊತ್ತ ನೀಡಲಾಗುತ್ತಿದೆ. ಪರಿಹಾರ ಮೊತ್ತ ಹೆಚ್ಚಳವಾದ ಕಾರಣ ವಂತಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಲಾಗಿದೆ. ಈ ಹಿಂದೆ ಗುಂಪು ವಿಮಾ ಯೋಜನೆಗೆ ಸಿಬ್ಬಂದಿಯಿಂದ ಮಾಸಿಕ ರೂ.70 ವಂತಿಗೆ ಪಡೆಯುತ್ತಿತ್ತು. ಇದೀಗ ಮೊತ್ತವನ್ನು 350ಕ್ಕೆ ಹೆಚ್ಚಿಸಿದೆ ಎಂದು ನಿಗಮದ ವ್ಯವಸ್ಥಾಪಕರು ಸುತ್ತೋಲೆಯಲ್ಲಿ…