Author: kannadanewsnow05

ಚಿಕ್ಕಮಗಳೂರು : ಟೂರಿಸ್ಟ್ ವಾಹನದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಸಂಪೂರ್ಣವಾಗಿ ವಾಹನಕ್ಕೆ ಬೆಂಕಿ ವ್ಯಾಪಿಸಿದ ಪರಿಣಾಮ, ಪೂರ್ತಿಯಾಗಿ ವಾಹನ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖದಲ್ಲಿ ನಡೆದಿದೆ ಅದೃಷ್ಟವಶಾತ್ ಟೂರಿಸ್ಟ್ ವಾಹನದಲ್ಲಿ ಸಂಚರಿಸುತ್ತಿದ್ದ 11 ಜನರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನದಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನದ ತುಂಬಾ ವ್ಯಾಪಿಸಿದೆ‌.‌ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ತಕ್ಷಣ ಹೊರ ಬಂದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿ ಜ್ಚಾಲೆಗೆ ವಾಹನ‌ ಸಂಪೂರ್ಣ ಸುಟ್ಟು ಹೋಗಿದೆ‌. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ. ಕೂಡಲೇ ಅಗ್ನಿಶಾಮಕ ದಳದವರಿಗೆ ಘಟನೆ ಕುರಿತು ಮಾಹಿತಿ ನೀಡಿದ್ದು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಟೂರಿಸ್ಟ್ ವಾಹನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದರು.ಬಳಿಕ ಟೂರಿಸ್ಟ್ ವಾಹನದ ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಿಸಿ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ.

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಾವು ನಂಬಿರುವ ಯಾವುದೋ ವ್ಯಕ್ತಿ ನಮಗೆ ಮೋಸ ಮಾಡಿದಾಗ ನಾವು ಅತ್ಯಂತ ವಿಶ್ವಾಸ ಇಟ್ಟಿರುವ ವ್ಯಕ್ತಿ ನಮ್ಮ ಬೆನ್ನಿಗೆ ಚೂರಿ ಹಾಕಿದಾಗ ನಮ್ಮ ಮನಸ್ಸು ಅತ್ಯಂತ ಭಯಂಕರ ಸಿಟ್ಟು ಮತ್ತು ಪ್ರತಿಶೋಧ ದಿಂದ ತುಂಬಿ ಕೊಳ್ಳುತ್ತದೆ ಏಕೆಂದರೆ ನಾವು ಅವರ ಜೊತೆಗೆ ತುಂಬಾ ಸಮಯದಿಂದ ಆತ್ಮೀಯ ಆಗಿರುತ್ತೇವೆ ನಮ್ಮ ಮನ ನಮ್ಮ ಧನ ಮತ್ತು ತನ ಎಲ್ಲವನ್ನೂ ಅವರ ಮೇಲೆ ಬಂಡವಾಳ ಹಾಕುತ್ತೇವೆ ಇಷ್ಟೆಲ್ಲಾ ಮಾಡಿದ ಮೇಲೆ ಯಾರೋ ನಮಗೆ ಮೋಸ ಮಾಡಿದಾಗ ಮನಸ್ಸಿಗೆ ತುಂಬಾ ನೋವು ಆಗುತ್ತದೆ. ತುಂಬಾ ಕಷ್ಟ ಆಗುತ್ತದೆ ನಾವು ಅವರಲ್ಲಿ ಇಟ್ಟ ನಂಬಿಕೆ ಪಡೆದ ಪ್ರೀತಿ ಪಡೆದ ವಿಶ್ವಾಸದಲ್ಲಿ ಏನು ಕಡಿಮೆ ಆಯಿತು ಎಂದು ಯೋಚಿಸುತ್ತೇವೆ ಇಂತಹ ಸಮಯದಲ್ಲಿ ನಾವು ಏಕಾಂಗಿ ಆಗಿ ಬಿಡುತ್ತವೆ ಅವರ ನೆನಪು ನಮಗೆ ಎಡ ಬಿಡದೆ ಕಾಡುತ್ತಾ ಇರುತ್ತದೆ ಅದೇ…

Read More

ಮೈಸೂರು : ಇಂದು ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನ ಯಾತ್ರೆ ನಡೆಯಲಿದೆ ಇದರ ಮಧ್ಯ ಮತ್ತೆ ಜಾಮಿಯಾ ಮಸೀದಿ ವಿವಾದ ಮುನ್ನೆಲೆಗೆ ಬಂದಿದೆ. ಯಾತ್ರೆ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಸಂಪೂರ್ಣ ಕೇಸರಿಮಯವಾಗಿದ್ದು, ನಿಮಿಷಾಂಬ ದೇಗುಲದ ಬಳಿ ಯಾತ್ರೆಗೆ ಇಂದು ಚಾಲನೆ ಸಿಗಲಿದೆ. ಮಧ್ಯಾಹ್ನ 12ಕ್ಕೆ ಹನುಮ ಸಂಕೀರ್ತನ ಯಾತ್ರೆಗೆ ಚಾಲನೆ ಸಿಗಲಿದೆ. ಹೌದು ಇದೀಗ ಜಾಮಿಯಾ ಮಸೀದಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಇಂದು ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶ್ರೀರಂಗಪಟ್ಟಣದಲ್ಲಿ ಸಾವಿರಾರು ಪೊಲೀಸರ ಬಿಗಿ ಭದ್ರತೆಯ ನಡುವೆ ಈ ಒಂದು ಶೋಭಾಯಾತ್ರೆ ನಡೆಯಲಿದೆ. ಹಾಗಾಗಿ ಸಾವಿರಾರು ಪೊಲೀಸರಿಂದ ಹದ್ದಿನ ಕಣ್ಣು ಇಡಲಾಗಿದೆ ಯಾವುದೇ ಅಹಿತಕರ ಘಟನೆ ನಡೆದಂತೆ ಭದ್ರತೆ ಒದಗಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸಾವಿರಾರು ಪೊಲೀಸರಿಂದ ಹದ್ದಿನ ಕಣ್ಣು ಇಡಲಾಗಿದೆ. ಹನುಮ ಸಂಕೀರ್ತನ ಯಾತ್ರೆ ಹಿನ್ನೆಲೆಯಲ್ಲಿ, ಜಾಮಿಯಾ ಮಸೀದಿಗೆ ಸಾರ್ವಜನಿಕರ ನಿರ್ಬಂಧ ಹೇರಲಾಗಿದೆ. ಮಸೀದಿಯ ಮುಂಭಾಗವೇ ಈ ಒಂದು ಸಂಕೀರ್ತನ ಯಾತ್ರೆ ಸಾಗಲಿದ್ದು…

Read More

ದಾವಣಗೆರೆ : ಬೆಳಗಾವಿಯಲ್ಲಿ 2ಎ ಮೀಸಲಾತಿ ಹೋರಾಟದ ನೇತೃತ್ವ ವಹಿಸಿದ್ದ ಕೂಡಲ ಸಂಗಮ ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಮುಗಿಸಲು, ಹೋರಾಟಗಾರರ ಮೇಲೆ ಗೋಲಿಬಾರ್ ಮಾಡಲು ಸಂಚು ಮಾಡಿದ್ದರು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸ್ಫೋಟಕವಾದ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀ ಜಯ ಮೃತ್ಯುಂಜಯ ಸ್ವಾಮಿಗಳು ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿದ್ದಾರೆ. ಪ್ರತಿಭಟನೆ ನೇತೃತ್ವ ವಹಿಸಿರುವ ಅವರನ್ನೇ ಮುಗಿಸಿದರೆ, ರಾಜ್ಯದಲ್ಲಿ ಇಡೀ ಹೋರಾಟವೇ ನಿಲ್ಲುತ್ತದೆಂದು ಗೋಲಿಬಾರ್ ಮಾಡಲು ಕೆಲವರು ಪ್ಲಾನ್ ಮಾಡಿಕೊಂಡಿದ್ದರು. ಎಂದರು. ಪಂಚಮಸಾಲಿ, ಮಲೆಗೌಡ, ಗೌಡ ಲಿಂಗಾಯತ, ದೀಕ್ಷಾ ಗೌಡಗೂ ಮೀಸಲಾತಿ, ಲಿಂಗಾಯತ ಒಳಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸುವಂತೆ ನಿರಂತರ ಹೋರಾಡುತ್ತಾ ಬಂದಿದ್ದಾರೆ. ಸ್ವಾಮೀಜಿ ಮೇಲಿನ ಹಲ್ಲೆ, ದೌರ್ಜನ್ಯ, ಬಂಧನವನ್ನು ಸಮಸ್ತ ಮಠಾಧೀಶರು, ಸ್ವಾಮೀಜಿಗಳು ಖಂಡಿಸಬೇಕು ಎಂದರು. ಶ್ರೀಗಳು, ಸಮಾಜದ ಮುಖಂಡರು, ಹೋರಾಟಗಾರರ ಮೇಲೆ ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಬೇಕು. ಹೋರಾಟಗಾರರ ಲಾಠಿ ಬೀಸದೇ, ಮುತ್ತು ಕೊಡಲು ಕೇಳಬೇಕಿತ್ತಾ…

Read More

ಬೆಳಗಾವಿ : ಇತ್ತೀಚಿಗೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕೈದಿಗಳು ಸಿಗರೇಟ್ ಸೇದುತ್ತಾ ಇಸ್ಪೀಟ್ ಆಡುತ್ತಿರುವ ವಿಡಿಯೋ ಭಾರಿ ವೈರಲ್ ಆಗಿತ್ತು. ಇದೀಗ ಹಿಂಡಲಗಾ ಜೈಲಿನಲ್ಲಿ ಮತ್ತೊಂದು ಘಟನೆ ನಡೆದಿದ್ದು ಗಾಂಜಾ ಗಾಗಿ ಜೈಲರ್ ಹಾಗೂ ಖೈದಿ ನಡುವೆ ಗಲಾಟೆ ನಡೆದಿದ್ದು ವಿಚಾರಣಾಧೀನ ಕೈದಿ ಒಬ್ಬ ಜೈಲರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬಳಕೆಗೆ ಬಂದಿದೆ. ಹೌದು ಸಹಾಯಕ ಜೈಲರ್ ಮೇಲೆ ಕೈದಿಯಿಂದಲೇ ಮಾರಣಾಂತಿಕ ಹಲ್ಲೆ ನಡೆದಿದೆ. ಸಹಾಯಕ ಜೈಲರ್ ಜಿ ಆರ್ ಕಾಂಬಳೆ ಮೇಲೆ ಕೈದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ವಿಚಾರಣಾಧೀನ ಕೈದಿ ಶಾಹಿದ್ ಖುರೇಷೆಯಿಂದ ಹಲ್ಲೆ ನಡೆದಿದೆ. ಡಿಸೆಂಬರ್ 11ರಂದು ಜೈಲಿನಲ್ಲಿ ನಡೆದಂತಹ ಘಟನೆ ಇದೀಗ ತಡವಾಗಿ ಬಳಕೆಗೆ ಬಂದಿದೆ. ಅಧಿವೇಶನ ಹಿನ್ನೆಲೆಯಲ್ಲಿ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಬೆಳಗಾವಿಯ ಹಿಂಡಲಗಾ ಜೈಲು ಅಧಿಕಾರಿಗಳು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ವೈದ್ಯರಿಂದ ಈ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ…

Read More

ಮೈಸೂರು : ಚಾಮುಂಡೇಶ್ವರಿ ದೇಗುಲದ ಸೀರೆ ಕಳ್ಳತನ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕೃಷ್ಣರಾಜ ಪೊಲೀಸ್ ಠಾಣೆಗೆ ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿಯಾಗಿರುವ ರೂಪ ದೂರು ಸಲ್ಲಿಸಿದ್ದಾರೆ. ಸ್ನೇಹಮಯಿ ಕೃಷ್ಣ ಅವರು ರೂಪ ಅವರ ವಿರುದ್ಧ ಚಾಮುಂಡೇಶ್ವರಿ ಬೆಟ್ಟದಲ್ಲಿ ಸೀರೆ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಇದೀಗ ಸ್ನೇಹಮಯಿ ಕೃಷ್ಣ ವಿರುದ್ಧ ದೂರು ನೀಡಿದ್ದಾರೆ. ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ನಿನ್ನೆ ರಾತ್ರಿ ಕೆಆರ್ ಠಾಣೆಗೆ ರೂಪ ಅವರು ದೂರು ನೀಡಿದ್ದಾರೆ. ಪ್ರಕರಣ ಹಿನ್ನೆಲೆ? ಮೈಸೂರು ದಸರಾ ವೇಳೆ ಸಾವಿರಾರು ಭಕ್ತರು ತಾಯಿ ಚಾಮುಂಡೇಶ್ವರಿಗೆ ಭಕ್ತಿಯಿಂದ ಸೀರೆಗಳನ್ನು ಸಮರ್ಪಿಸುತ್ತಾರೆ. ಇದರಲ್ಲಿ ಬಹುತೇಕ ರೇಷ್ಮೆ ಸೀರೆಗಳು ಇರುತ್ತವೆ. ಹೀಗೆ ಭಕ್ತಿಯಿಂದ ಸಮರ್ಪಿತವಾದ ಸೀರೆಗಳನ್ನು ಅಕ್ರಮವಾಗಿ ಕಾರಿನಲ್ಲಿ ಸಾಗಿಸಿ ಕಾಳಸಂತೆಯಲ್ಲಿ ಅರ್ಧಬೆಲೆ ಮಾರಾಟ ಮಾಡುವ ಗಂಭೀರ ಆರೋಪ ರೂಪಾ ವಿರುದ್ಧ ಕೇಳಿಬಂದಿದೆ. ಈ…

Read More

ಬೆಂಗಳೂರು : ಗ್ರಾಮೀಣ ಭಾಗದ ಪತ್ರಕರ್ತರಿಗೆ ಅನುಕೂಲವಾಗಲೆಂದು ಬಸ್ ಪಾಸ್ ಜಾರಿ ಸಂಬಂಧ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಹಿನ್ನೆಲೆಯಲ್ಲಿ, ಹೊಸ ವರ್ಷದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಗ್ರಾಮೀಣ ಬಸ್ ಪಾಸ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸತತ ಸಭೆಗಳು ಆಗಿದ್ದು, ತಾಲೂಕು ಮಟ್ಟದಲ್ಲಿರುವ ಪತ್ರಕರ್ತರಿಗೂ ಈ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಇಲಾಖೆ ಕ್ರಮ ಕೈಗೊಂಡಿದೆ. ಹಾಗಾಗಿ ಶೀಘ್ರದಲ್ಲಿ ಮುಖ್ಯಮಂತ್ರಿಗಳಿಂದ ಯೋಜನೆಗೆ ಚಾಲನೆ ಕೊಡಿಸಲಾಗುವುದು ಎಂದಿದ್ದಾರೆ. ಅರ್ಜಿ ಸಲ್ಲಿಕೆ ಹೇಗೆ? ಬಸ್ ಪಾಸ್ ಗಾಗಿ ಪತ್ರಕರ್ತರು ವಾರ್ತಾ ಇಲಾಖೆಗೆ ಅರ್ಜಿ ಸಲ್ಲಿಸಬೇಕಿಲ್ಲ. ಬಸ್ ಪಾಸ್‌ಗಾಗಿಯೇ ಸ್‌ಟಾ ವೇರ್ ಅಭಿವೃದ್ಧಿಪಡಿಸಲಾಗಿದೆ. ಸೇವಾ ಸಿಂಧುವಿನಲ್ಲಿ ನಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲವೇ ಅರ್ಜಿ ಸಲ್ಲಿಸುವ ವ್ಯವಸ್ಥೆ ಮಾಡಲಾಗುತ್ತಿದೆ.…

Read More

ಬೆಂಗಳೂರು : ನನ್ನ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಬೇಡಿ ಎಂದು ಅಭಿಮಾನಿಗಳು ಮತ್ತು ಜೆಡಿಎಸ್‌ ಕಾರ್ಯಕರ್ತರಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮನವಿ ಮಾಡಿದ್ಧಾರೆ. ನನ್ನೆಲ್ಲಾ ನೆಚ್ಚಿನ ಕಾರ್ಯಕರ್ತ ಬಂಧುಗಳಲ್ಲಿ ನನ್ನ ಮನವಿ.ಡಿಸೆಂಬರ್ 16ರಂದು ನನ್ನ ಜನ್ಮದಿನ. ಪ್ರತೀ ವರ್ಷ ನೀವೆಲ್ಲ ಬಹಳ ಅರ್ಥಪೂರ್ಣವಾಗಿ ನನ್ನ ಹುಟ್ಟುಹಬ್ಬ ಆಚರಿಸುತ್ತಾ ನನ್ನ ಬದುಕಿಗೆ ಸಾರ್ಥಕತೆ ತಂದು ಕೊಟ್ಟಿದ್ದೀರಿ. ರಾಜಕೀಯವಾಗಿ ನನ್ನ ಯಶಸ್ಸಿಗೆ ಮೂಲ ಆಧಾರಸ್ತಂಭವೇ ತಾವುಗಳು. ಆ ಕೃತಜ್ಞತಾ ಭಾವದಿಂದ ನಿಮ್ಮಲ್ಲಿ ನನ್ನದೊಂದು ವಿನಮ್ರ ಕಳಕಳಿಯ ಮನವಿ. ಸಂಸತ್ ಅಧಿವೇಶನ ನಡೆಯುತ್ತಿದೆ. ಹೀಗಾಗಿ ನಾನು ನವದೆಹಲಿಯಲ್ಲಿಯೇ ಉಳಿಯಬೇಕಾಗಿದೆ. ಅಲ್ಲದೆ; ಬೆಳಗಾವಿ ಸುವರ್ಣಸೌಧದಲ್ಲಿ ಕಲಾಪವೂ ಸಾಗಿದೆ. ಇಂಥಹ ಸನ್ನಿವೇಶದಲ್ಲಿ ವಿಜೃಂಭಣೆಯ ಹುಟ್ಟುಹಬ್ಬ ಬೇಡ ಎನ್ನುವುದು ನನ್ನ ಅಭಿಪ್ರಾಯ.ತಾವುಗಳು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಅಷ್ಟು ಸಾಕು ನನಗೆ. ಸಾಧ್ಯವಾದರೆ ಸಮಾಜಕ್ಕೆ, ದುರ್ಬಲ ಜನರಿಗೆ ಏನಾದರೂ ಸಹಾಯ ಮಾಡಿ. ಜನಸೇವೆ ಜಾತ್ಯತೀತ ಜನತಾದಳ ಪಕ್ಷದ ಮೂಲತತ್ತ್ವ. ಅದೇ ನನಗೆ ತಾವು ಕೊಡುವ ಉಡುಗೋರೆ. ಎಂದು ಮನವಿ ಮಾಡಿದ್ಧಾರೆ.…

Read More

ತುಮಕೂರು : ಕೆಮ್ಮಿನ ಔಷಧ ಎಂದು ಭಾವಿಸಿ ಕೀಟನಾಶಕ ಸೇವಿಸಿ ರೈತನೊಬ್ಬ ಸಾವಿಗೀಡಾಗಿರುವ ಘಟನೆ ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿ ಗೊಲ್ಲರಹಟ್ಟಿಯಲ್ಲಿ ಶುಕ್ರವಾರ ಸಂಭವಿಸಿದೆ. ಚೊಟ್ನರ್‌ ನಿಂಗಪ್ಪ (65) ಮೃತಪಟ್ಟವರು. ರಾತ್ರಿ ಕೆಮ್ಮು ಬಂದಿದ್ದು, ಕೆಮ್ಮಿನ ಔಷಧ ಎಂದುಕೊಂಡು ಗಿಡಕ್ಕೆ ಸಿಂಪಡಿಸಲು ತಂದಿದ್ದ ಕೀಟನಾಶಕವನ್ನು ಸೇವಿಸಿದರು. ಬಳಿಕ ಅವರಿಗೆ ಅದು ಔಷಧವಲ್ಲ ಕೀಟನಾಶಕ ಎಂದು ತಿಳಿದಿದೆ ಕೊಡಲೇ ಮಕ್ಕಳಿಗೆ ಕೀಟನಾಶಕ ಸೇವಿಸಿದ್ದರ ಕುರಿತು ತಿಳಿಸಿದ್ದಾರೆ. ತಕ್ಷಣ ಮಕ್ಕಳು ನಿಂಗಪ್ಪ ಅವರು ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಚಿಕಿತ್ಸೆ ಫಲಿಸಿದೆ ಅವರು ಸಾವನ್ನಪ್ಪಿದ್ದಾರೆ.

Read More

ಬೆಂಗಳೂರು : ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಬಾಲಾಪರಾಧಿಗಳು ಇದ್ದು, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 5000ಕ್ಕೂ ಹೆಚ್ಚು ಬಾಲಾಪರಾಧಿಗಳ ಮೇಲೆ ಪ್ರಕರಣ ದಾಖಲಾಗಿವೆ.ಈ ಪೈಕಿ ಬೆಂಗಳೂರು ನಗರದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ವಿಧಾನಪರಿಷತ್ ಸದಸ್ಯ ಎಸ್ ವಿ ಸಂಕನೂರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉತ್ತರ ನೀಡಿದೆ. ಬಾಲಾಪರಾಧಿಗಳ ವಿಚಾರಣೆಯು ಕಾಲಮಿತಿ ಒಳಗಾಗಿ ನಡೆಯದೆ ಇರುವುದರಿಂದ ಬಾಲ ಮಂದಿರಗಳು ಭರ್ತಿ ಆಗುತ್ತಿವೆ ಎಂಬ ಆರೋಪವೂ ಕೇಳಿ ಬಂದಿದೆ. ಸದ್ಯ ರಾಜ್ಯದಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳ ರಕ್ಷಣೆಗಾಗಿ 1 ವಿಶೇಷ ಗೃಹ, 17 ವೀಕ್ಷಣಾಲಯ, 1 ಪ್ಲೇಸ್ ಆಫ್ ಸೇಫ್ಟಿ ಒಳಗೊಂಡು 19 ಸಂಸ್ಥೆಗಳು ಕಾರ್ಯನಿರ್ವಹಣೆ ಮಾಡುತ್ತಿವೆ.ಈ 19 ಸಂಸ್ಥೆಗಳಲ್ಲಿ 600 ಮಕ್ಕಳಿಗೆ ರಕ್ಷಣೆ ಕಲ್ಪಿಸಲು ಅವಕಾಶ ಇದೆ. ಇನ್ನು ಕಾನೂನು ಸಂಘರ್ಷಕ್ಕೊಳಗಾದ ಮಕ್ಕಳ ಪುನರ್ವಸತಿಗಾಗಿ ವಿಜಯಪುರ ಹೊರತಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲನ್ಯಾಯ…

Read More