Author: kannadanewsnow05

ಶಿವಮೊಗ್ಗ : ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಮಾಡಲು ಬೈಕ್ ಮೇಲೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಶಿಕಾರಿಪುರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಇಂದು ಮತದಾನ ಹಿನ್ನೆಲೆಯಲ್ಲಿ ಬೈಕ್ ಸವಾರ ಮತದಾನ ಮಾಡಲು ತೇರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಮಂಜುನಾಥ್ (32) ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.ಚುರ್ಚಿಗೊಂಡಯಿಂದ ಭದ್ರಾವತಿಗೆ ತೆರಳುವಾಗ ಈ ಒಂದು ಅಪಘಾತ ಸಂಭವಿಸಿದೆ. ಶಿಕಾರಿಪುರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರವಾದ ಆರೋಪ ಮಾಡಿದ್ದೂ, ಈ ಒಂದು ಪೆನ್ ಡ್ರೈವ್ ಕೆಸಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಸ್ಕ್ರಿಪ್ಟ್ ರೈಟರ್ ಆಗಿದ್ದು, ಸಿದ್ದರಾಮಯ್ಯ ಡೈರೆಕ್ಷನ್ ಹಾಗೂ ಡಿಕೆ ಶಿವಕುಮಾರ್ ಪ್ರೊಡ್ಯೂಸರ್ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದರು. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಕ್ಕಲಿಗರಿಗೆ ಅವಮಾನ ಮಾಡಲು ಒಂದು ಲಕ್ಷ ಪೆನ್ ಡ್ರೈವ್ ಹಂಚಿಕೆ ಮಾಡಿದ್ದಾರೆ. ಒಂದು ಲಕ್ಷ ಪೆನ್ ಡ್ರೈವ್ ಗಳಲ್ಲಿ ವಿಡಿಯೋ ಹಾಕಿ ಹಂಚಿದ್ದಾರೆ. ಲಿಂಗಾಯತರಿಗೆ ಅವಮಾನ ಮಾಡಿದ್ರು ಈಗ ಒಕ್ಕಲಿಗರಿಗೆ ಅಪಮಾನ ಮಾಡುತ್ತಿದ್ದಾರೆ ಎಂದರು. ಎಸ್ಐಟಿ ಸಿದ್ದರಾಮಯ್ಯ ಮತ್ತು ಡಿಕೆ ಪರ ರಬ್ಬರ್ ಸ್ಟ್ಯಾಂಪ್ ಆಗಿದೆ. ದಾಖಲೆಗಳನ್ನು ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಸಿಎಂ ರಹಸ್ಯ ಸಭೆ ಮಾಡಿ ಸಂಚು ಮಾಡಿದ್ದಾರೆ. ಪ್ರಜ್ವಲ್ ವಿದೇಶಕ್ಕೆ ಹೋಗುವುದರಲ್ಲೂ…

Read More

ಬೆಂಗಳೂರು : ರಾಜ್ಯದಲ್ಲಿ ಎರಡನೇ ಸುತ್ತಿನ ಲೋಕಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದೂ, ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾರರಿಂದ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಹೌದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಎರಡನೇ ಹಂತದ ಮತದಾನ ನಡೆದಿದ್ದು, ಮತದಾರರಿಂದ ಭರ್ಜರಿ ರೆಸ್ಪೋನ್ಸ್ ಸಿಕ್ಕಿದ್ದು, ಇಂದು ಮಧ್ಯಾಹ್ನ 1 ಗಂಟೆಯವರೆಗೆ ಶೇ 41.59 ರಷ್ಟು ಮತದಾನ ಆಗಿದೆ ಎಂದು ತಿಳಿದುಬಂದಿದೆ. ಚಿಕ್ಕೋಡಿ 45, ಉತ್ತರ ಕನ್ನಡ 44.22, ಶಿವಮೊಗ್ಗ 44.98 ಬೆಳಗಾವಿ 40.57, ಬಳ್ಳಾರಿ 44.36, ದಾವಣಗೆರೆ 42.32, ಬಾಗಲಕೋಟೆ 41.91, ಬೀದರ್ 37.97 ವಿಜಯಪುರ 33.87, ಧಾರವಾಡ 40.61 ಕಲಬುರ್ಗಿ 37.48, ಹಾವೇರಿ 43.29, ಕೊಪ್ಪಳ 47.74, ಕೊಪ್ಪಳ 42.74, ರಾಯಚೂರು 38.6 ಶಿವಮೊಗ್ಗ 44.98 ರಷ್ಟು ಪ್ರತೀಶತ ಮತದಾನ ನಡೆದಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

Read More

ಬೆಂಗಳೂರು : ಕೆಪಿಸಿಸಿ ಉಪಾಧ್ಯಕ್ಷ GN ನಂಜುಂಡಸ್ವಾಮಿ ಕಾರು ಅಪಘಾತವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಈ ಒಂದು ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಒಂದು ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಕಾರು ಪಲ್ಟಿಯಾಗಿದ್ದರಿಂದ GN ನಂಜುಂಡಸ್ವಾಮಿ ತಲೆಗೆ ಪೆಟ್ಟಾಗಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಗಂಭೀರವಾಗಿ ಗಾಯಗೊಂಡಿರುವ ಜಿಎನ್ ನಂಜುಂಡಸ್ವಾಮಿ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲೀಸಲಾಗಿದ್ದು,ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಆಡಿಷನ್​ಗೆ ಬಾ ಎಂದು ಕಾಸ್ಟಿಂಗ್ ನಿರ್ದೇಶಕ ಸೂರ್ಯ ಅಶ್ಲೀಲವಾಗಿ ಮೆಸೇಜ್ ಮಾಡಿದ ಹಿನ್ನೆಲೆಯಲ್ಲಿ ಆತನ ವಿರುದ್ಧ ಬೆಂಗಳೂರು ನಗರದ ಆರ್.ಆರ್. ನಗರ ಠಾಣೆಯಲ್ಲಿ ನಟಿ ಅಮೂಲ್ಯ ಗೌಡ ದೂರು ನೀಡಿದ್ದಾರೆ. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದು ಕಾಂಪ್ರಮೈಸ್ ಆಗು ಅಂದಿದ್ದಕ್ಕೆ  ಆತನಿಗೆ ಪೊಲೀಸರ ಎದುರೇ ಚಪ್ಪಲಿಂದ ಹೊಡೆದಿದ್ದೇನೆ ಎಂದು ನಟಿಯ ಅಮೌಲ್ಯ ಗೌಡ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ದೇಶಕ ಸೂರ್ಯ ನನಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು.ಹೀಗಾಗಿ ಆರ್ ಆರ್ ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದೇನೆ ಎಂದು ಬೆಂಗಳೂರಿನಲ್ಲಿ ನಟಿ ಅಮೂಲ್ಯ ಗೌಡ ಹೇಳಿಕೆ ನೀಡಿದರು. ಸೂರ್ಯ ಇದೀಗ ಪೋಲೀಸರ ಕೈಗೆ ಸಿಕ್ಕಿದ್ದಾನೆ ಪೊಲೀಸರಿಗೆ ಕಾಂಪ್ರಮೈಸ್ ಮಾಡಿಕೊಳ್ಳಿ ಅಂದರು. ನಾನು ಪೊಲೀಸರ ಮುಂದೆ ಆತನಿಗೆ ಚಪ್ಪಲಿಯಲ್ಲಿ ಹೊಡೆದೆ. ಹೀಗಾಗಿ ನನ್ನ ಮೇಲೆ ಈಗ ಎಫ್ಐಆರ್ ದಾಖಲಿಸಿದ್ದಾನೆ. ನಾನು ಸುಮ್ಮನಿದ್ದರೆ ಮತ್ತಷ್ಟು ಹುಡುಗಿಯರಿಗೆ ಇದೇ ರೀತಿ ಮಾಡುತ್ತಾನೆ ಎಂದು ಕಿಡಿ ಕಾರಿದರು. ಹೀಗಾಗಿ ಅದಕ್ಕೆ ಬಂದು ದೂರು ಕೊಟ್ಟಿದ್ದೇನೆ.…

Read More

ಚಿಕ್ಕಮಗಳೂರು : ರಸ್ತೆಯಲ್ಲಿ ವೇಗವಾಗಿ ಬೈಕ್ ಚಲಾಯಿಸುತ್ತಿದ್ದಾಗ ನಿಯಂತ್ರಣಕ್ಕೆ ಸಿಗದೇ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರಗುಂದ ಗ್ರಾಮದಲ್ಲಿ ನಡೆದಿದೆ. ಮೃತ ಸವಾರರನ್ನು ಹೊರನಾಡು ಗ್ರಾಮದ ಉಮೇಶ್, ಮುಂಡುಗದ ಮನೆ ಗ್ರಾಮದ ಸುನಿಲ್​ ಮೃತಪಟ್ಟ ಯುವಕರು ಎಂದು ಹೇಳಲಾಗುತ್ತಿದೆ.ಉಮೇಶ್, ಸುನೀಲನನ್ನು ಶಿವಮೊಗ್ಗಕ್ಕೆ ಬಿಡಲು ಬೈಕ್​ನಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ತಿರುವಿನಲ್ಲಿ ಬೈಕ್ ನಿಯಂತ್ರಣಕ್ಕೆ ಸಿಗದೇ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಘಟನಾ ನಂತರ ಸ್ಥಳಕ್ಕೆ ಎನ್‌.ಆರ್ ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಎನ್‌.ಆರ್ ಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಕುರಿತಂತೆ ಎನ್‌.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತದಾನಕ್ಕೆ ಅವಕಾಶ ನೀಡಿ ಎಂದು ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ವಜಾಗೊಳಿಸಿದೆ. ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆಗೆ ಸೀಮಿತವಾಗಿ ಧಾರವಾಡ ಪ್ರವೇಶ ಕೋರಿದ್ದ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು. ದಿಗ ನಾಳೆ ಮತದಾನಕ್ಕೆ ಅವಕಾಶ ನೀಡಿ ಎಂದು ಶಾಸಕರು ಕರಣಿ ಅರ್ಜಿ ಸಲ್ಲಿಸಿದ್ದರು ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಅವರ ಅರ್ಜಿಯನ್ನು ವಜಾ ಗೊಳಿಸಿದೆ.

Read More

ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಮುಖಂಡ ದೇವರಾಜೇಗೌಡ ಇದಕ್ಕೆಲ್ಲ ರೂವಾರಿಗಳು ಹಾಗೂ ಕಥಾನಾಯಕರು ಡಿಕೆ ಶಿವಕುಮಾರ್ ಎಂದು ಆರೋಪಿಸಿದ್ದರು. ಈ ಆರೋಪಕ್ಕೆ LR ಶಿವರಾಮೇಗೌಡ ತಿರುಗೇಟು ನೀಡಿದ್ದು, ಬಿಜೆಪಿ ಹಾಗೂ ಕುಮಾರಸ್ವಾಮಿ ಪೆನ್ ಡ್ರೈವ್ ಮಹಾ ನಾಯಕರು ಎಂದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ ಒಬ್ಬ ಬ್ಲಾಕ್ ಮೇಲರ್. ಹಣಕ್ಕಾಗಿ ನಮ್ಮ ಬಳಿ ದೇವರಾಜೇಗೌಡ ಬಂದಿದ್ದ ಅನಿಸುತ್ತದೆ. ದೇವರಾಜೇಗೌಡ ಬಳಿ ಏನಿದೆಯೋ ಅದನ್ನೆಲ್ಲ ಬಿಡುಗಡೆ ಮಾಡಲಿ. ಬಿಜೆಪಿ ಮುಖಂಡ ದೇವರಾಜ ಗೌಡಗೆ ನಾನು ಯಾವುದೇ ರೀತಿಯಾದಂತಹ ಆಮೀಷ ಒಡ್ಡಿಲ್ಲ ಎಂದರು. ಬಿಜೆಪಿ ಹಾಗೂ ಹೆಚ್‍ಡಿ ಕುಮಾರಸ್ವಾಮಿಯೇ ಪೆನ್ ಡ್ರೈವ್ ಮಹಾ ನಾಯಕರು.ಇಡೀ ಪ್ರಕರಣದಲ್ಲಿ ನನ್ನ ಪಾತ್ರವೂ ಇಲ್ಲ ಡಿಸಿಎಂ ಡಿಕೆ ಪಾತ್ರವೂ ಇಲ್ಲ. ದೇವರಾಜ್ ಗೌಡನೇ ನನ್ನ ಬಳಿ ಬಂದು ಡಿಕೆ ಭೇಟಿ ಮಾಡಿಸಲು ಒತ್ತಾಯಿಸಿದ್ದ. ಹೀಗಾಗಿ ಡಿಕೆ ಶಿವಕುಮಾರ್ ಅವರ ಜೊತೆ ಒಂದು ನಿಮಿಷ ಮಾತನಾಡಿಸಿದೆ.ಪ್ರಕರಣವನ್ನು…

Read More

ಬೆಂಗಳೂರು : ವಸತಿ ಸಮೋಕ್ಷಯ ನಿರ್ಮಾಣದಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಯುವಕನೊಬ್ಬ ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಚಿಕ್ಕ ಹೊಸಹಳ್ಳಿ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ರಿತೇಶ್ ಎಂದು ಹೇಳಲಾಗುತ್ತಿದ್ದು,ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಜಾರ್ಖಂಡ್ ಯುವಕ ಸಾವನ್ನಪ್ಪಿದ್ದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಿಕ್ಕ ಹೊಸಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಮೃತ ರಿತೇಶ್ ವಸತಿ ಸಮುಚ್ಚಯ ನಿರ್ಮಾಣ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.

Read More

ಬೆಳಗಾವಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇದ್ದರೂ ಕೂಡ, ಆದಾಗ ಅಕ್ರಮವಾಗಿ ಹಣ ಮಧ್ಯ ಸಾಗಾಟ ನಡೆಸುತ್ತಿರುವವರ ಮೇಲೆ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಕಣ್ಣಿಟ್ಟಿದ್ದಾರೆ. ಹಗರಿ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಹಂಚಿಕೆ ಇಲ್ಲದೆ ಮತದಾರರಿಗೆ ಹಣ ಹಂಚುತ್ತಿದ್ದ ಓರ್ವ ವ್ಯಕ್ತಿಯನ್ನು ಇದೀಗ ಪೊಲೀಸರು ಕೋಶಕ್ಕೆ ಪಡೆದಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಉಗಾರ ಬಿಕೆ ಗ್ರಾಮದಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ. ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ಇನ್ನು ಇಬ್ಬರು ಪರಾರಿ ಆಗಿದ್ದಾರೆ. ಮತದಾರರಿಗೆ ತಲಾ 500 ರೂಪಾಯಿ ಹಂಚುತ್ತಿದ್ದ ಗೋಕಾಕ್ ಮೂಲದ ವ್ಯಕ್ತಿ ಎಂದು ಹೇಳಲಾಗುತ್ತಿದ್ದು 35,000 ನಗದು ಹಾಗೂ ಮತದಾರರ ಪಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಕುರಿತಂತೆ ಪ್ರಕರಣ ದಾಖಲಾಗಿದ್ದು ವಶಕ್ಕೆ ಪಡೆದಿರುವ ಆರೋಪಿಯನ್ನು ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Read More