Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಭಾರಿ ಮಳೆ ಸುರಿದಿದ್ದು ರಾತ್ರಿ ಘೋರ ದುರಂತ ಒಂದು ಸಂಭವಿಸಿದೆ. ಈ ವೇಳೆ ಜೋರಾದ ಮಳೆ ಸುರಿದಿದ್ದು, ನಿರ್ಮಾಣ ಹಂತದ ಕಟ್ಟಡ ಪಕ್ಕದಲ್ಲಿದ್ದ ಮಣ್ಣು ಕುಸಿದು ಆಂಧ್ರಪ್ರದೇಶ ಮೂಲದ ಕಾರ್ಮಿಕ ಸಾವನ್ನಪ್ಪಿದ್ದ ಆದರೆ ಇದೀಗ ಮತ್ತೊಂದು ಕಾರ್ಮಿಕ ದುರಂತದಲ್ಲಿ ಸಾವನಪ್ಪಿದ್ದಾನೆ. ಮಣ್ಣಿನಡಿ ಸಿಲುಕಿ ಮೃತಪಟ್ಟವರ ಸಂಖ್ಯೆ ಇದೀಗ ಎರಡಕ್ಕೆ ಏರಿದೆ ಜೆ.ಶಿವ ಹಾಗೂ ಮಧುಸೂದನ್ ರೆಡ್ಡಿ ಮೃತಕಾರ್ಮಿಕರು ಎಂದು ತಿಳಿದುಬಂದಿದೆ. ಇಬ್ಬರು ಆಂಧ್ರಪ್ರದೇಶದ ಮೂಲದ ಕಟ್ಟಡ ಕಾರ್ಮಿಕರು ಎಂದು ತಿಳಿದುಬಂದಿದೆ ಸದ್ಯ ಮೃತ ದೇಹ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.
ಬೆಂಗಳೂರು : ಗೃಹ ಸಚಿವ ಪರಮೇಶ್ವರ ಅವರನ್ನು SIT ಮುಖ್ಯಸ್ಥ ಪ್ರಣಬ್ ಮೋಹಂತಿ ಇಂದು ಭೇಟಿಯಾದರು. ಜಿ ಪರಮೇಶ್ವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರಿನ ಸದಾಶಿವನಾಗರದಲ್ಲಿರುವ ಪರಮೇಶ್ವರ್ ನಿವಾಸದಲ್ಲಿ ಎಸ್ಐಟಿ ಮುಖ್ಯಸ್ಥ ಆಗಿರುವ ಪ್ರಣಬ್ ಮೋಹಂತಿ ಧರ್ಮಸ್ಥಳ ಪ್ರಕರಣದ ಕುರಿತು ಚರ್ಚಿಸಿದರು. ಬೆಂಗಳೂರಿನ ಸದಾಶಿವ ನಗರ ನಿವಾಸಕ್ಕೆ ಆಗಮಿಸಿದ ಎಸ್ ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ, ಗೃಹ ಸಚಿವ ಡಾ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಧರ್ಮಸ್ಥಳ ಪ್ರಕರಣದಲ್ಲಿ ಈವರೆಗಿನ ತನಿಖಾ ಬೆಳವಣಿಗೆ, ಎಸ್ ಐಟಿ ಕೈಗೊಳ್ಳಲಿರುವ ಮುಂದಿನ ನಡೆ ವಿಚಾರವಾಗಿ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.
ಮೈಸೂರು : ಬಿಜೆಪಿ ನಾಯಕರಿಂದ ಧರ್ಮಸ್ಥಳ ಯಾತ್ರೆ ವಿಚಾರವಾಗಿ ಬಿಜೆಪಿ ಅವರು ಮೊದಲೇ ಏಕೆ ಧರ್ಮಸ್ಥಳ ಯಾತ್ರೆ ಮಾಡಲಿಲ್ಲ? ವೀರೇಂದ್ರ ಹೆಗಡೆಯವರೇ ಎಸ್ಐಟಿ ತನಿಖೆಯನ್ನು ಸ್ವಾಗತ ಮಾಡಿದ್ದಾರೆ. ಸತ್ಯ ಹೊರಗೆ ಬರಬೇಕು ಅಂತ ವೀರೇಂದ್ರ ಹೆಗ್ಗಡೆ ಅವರೇ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುತ್ತಿಲ್ಲ ಇಷ್ಟೆಲ್ಲ ಮಾಡಬೇಕಾದರೆ ದುಡ್ಡು ಎಲ್ಲಿಂದ ಬಂದಿದೆ? ಹೋರಾಟ ಮಾಡಲು ಬಿಜೆಪಿ ಅವರಿಗೆ ಹೊರದೇಶದಿಂದ ದುಡ್ಡು ಬಂದಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದರು. ಸೌಜನ್ಯ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವ ವಿಚಾರವಾಗಿ ಸಿಬಿಐ ಯಾರ ಕೈ ಕೆಳಗೆ ಇದೆ? ಸುಪ್ರೀಂ ಕೋರ್ಟ್ ಮೊರೆ ಹೋಗುವುದು ಸೌಜನ್ಯ ಕುಟುಂಬಕ್ಕೆ ಬಿಟ್ಟಿದ್ದು. ಒಂದು ಕಡೆ ಬಿಜೆಪಿಯವರು ವೀರೇಂದ್ರ ಹೆಗ್ಗಡೆಗೆ ಜೈಕಾರ ಅಂತಾರೆ. ಮತ್ತೊಂದು ಕಡೆ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ವಿಪಕ್ಷದವರು ಹೇಳುವ ವಿಚಾರ ಎಲ್ಲವೂ ಸತ್ಯನ ಅಸೆಂಬ್ಲಿಯಲ್ಲಿ ಆರ್ ಅಶೋಕ್, ಸುನಿಲ್ ಕುಮಾರ್ ಇಬ್ಬರು ಚರ್ಚೆ ಮಾಡಿದರು. ಸೌಜನ್ಯ ಪ್ರಕರಣದ ಬಗ್ಗೆ…
ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಅಶ್ವಿನಿ ಕುಮಾರರ ಹೆಸರನ್ನು ಕೇಳಿರುತ್ತೀರಿ ಇವರು ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ, ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ ಸುವರ್ಣ ರಥದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ಮನುಷ್ಯರಿಗೆ ಸಂಪತ್ತನ್ನು ದಯಪಾಲಿಸುತ್ತಾರೆ ಮತ್ತು…
ಬೆಂಗಳೂರು : ನಟಿ ರಮ್ಯಾ ಗೆ ಇತ್ತೀಚಿಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಮೆಸೇಜ್ ಮಾಡಿ ನಿಂದಿಸಿದ ಪ್ರಕರಣ ನಡೆದಿತ್ತು. ಇದೀಗ ಈ ಒಂದು ಪ್ರಕರಣ ಮುಗಿಯುತ್ತಿದ್ದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕೂಡ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಹಾಕಿ ನಿಂದಿಸಿದ್ದಾರೆ. ಈ ವಿಚಾರವಾಗಿ ಸಿ.ಕೆ ಅಚ್ಚುಕಟ್ಟು ಠಾಣೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು. ಪ್ರಕರಣದ ದಾಖಲಿಸಿಕೊಂಡ ಪೊಲೀಸರು ಘಟನೆಯಗೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ವಿಜಯಲಕ್ಷ್ಮಿ ಅವರಿಗೆ ನೋಟಿಸ್ ನೀಡಿದ್ದಾರೆ. ಆದರೆ ನೋಟಿಸ್ ಗೆ ಇದುವರೆಗೂ ವಿಜಯಲಕ್ಷ್ಮಿ ಯಾವುದೇ ಉತ್ತರ ಸಹ ನೀಡಿಲ್ಲ ಎಂದು ತಿಳಿದು ಬಂದಿದೆ. ಮಾಹಿತಿ ನೀಡುವಂತೆ ಪೊಲೀಸರು ನೋಟಿಸ್ ನೀಡಿದ್ದು ನೋಟಿಸ್ ಬಂದರೂ ಕೂಡ ವಿಜಯಲಕ್ಷ್ಮಿ ಹಾಜರಾಗಿಲ್ಲ. ಪೊಲೀಸರು ಇದೀಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ ಆರು ಸೋಶಿಯಲ್ ಮೀಡಿಯಾ ಖಾತೆಗಳ ಅಶ್ಲೀಲ ಪೋಸ್ಟ್ ಮಾಡಲಾಗಿದ್ದು ವಿಜಯಲಕ್ಷ್ಮಿಗೆ ಅಶ್ಲೀಲ ಪೋಸ್ಟ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾ ಖಾತೆಗಳ ಬಗ್ಗೆ ಪೊಲೀಸರು ತನಿಖೆ…
ಬೆಂಗಳೂರು : ಕೊಲೆ ಆರೋಪಿ ದರ್ಶನ್ ಪಾಲಿಗೆ ಇಂದು ಬಿಗ್ ಡೇ ಸದ್ಯ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್, ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿದೆ. ಇನ್ನೊಂದು ಕಡೆ ನಟ ದರ್ಶನ್ ಪರ ವಕೀಲರು ಹಾಸಿಗೆ ದಿಂಬು ನೀಡುವಂತೆ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಕೋರ್ಟ್ ನಲ್ಲಿ ಎರಡು ಪ್ರಮುಖ ಅರ್ಜಿಗಳ ವಿಚಾರಣೆ ಇಂದು ನಡೆಯಲಿದೆ. ಬಳ್ಳಾರಿ ಜಿಲ್ಲೆಗೆ ಶಿಫ್ಟ್ ಮಾಡುವಂತೆ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಹಾಸಿಗೆ ದಿಂಬು ಕೋರಿ ಇನ್ನೊಂದು ಅರ್ಜಿ ಸಲ್ಲಿಸಲಾಗಿದೆ. ದರ್ಶನ್, ಜಗದೀಶ್, ಲಕ್ಷ್ಮಣ್, ನಾಗರಾಜ್, ಪ್ರಧೋಷ್ ಆರೋಪಿಗಳ ಶಿಫ್ಟ್ ಕುರಿತು ಅರ್ಜಿ ಸಲ್ಲಿಸಲಾಗಿದೆ. ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ಪ್ರಾಸಿಕ್ಯೂಷನ್ ಕೋರಿದ್ದು, ಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಲಿರುವ ಆರೋಪಿಗಳ ಪರ ವಕೀಲರು. ಇಂದು ನ್ಯಾಯಾಲಯ ವಿಚಾರಣೆ ನಡೆಸಿ ಆದೇಶ ನೀಡಲಿದೆ.
ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಗಿರೀಶ್ ಮಟ್ಟಣ್ಣನವರ್ ಮಹೇಶ್ ತಿಮರೋಡಿ ಸೇರಿದಂತೆ ಹಲವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದು ಇದೀಗ ಗಿರೀಶ್ ಮಟ್ಟನನ್ನವರು ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಧರ್ಮಸ್ಥಳದ ಕುರಿತು ಯೌಟ್ಯೂಬ್ ಚಾನೆಲ್ ಸಂದರ್ಶನ ಒಂದರಲ್ಲಿ ಆಶೀಲವಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಗಿರೀಶ್ ಮಟ್ಟಣ್ಣನವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಂದ್ರ ದಾಸ ಎಂಬುವವರಾದೂರಿನ ಮೇರೆಗೆ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಯುಟ್ಯೂಬ್ ಚಾನೆಲ್ ಗೆ ಸಂದರ್ಶನದ ವೇಳೆ ಅಶ್ಲೀಲವಾಗಿ ಮಾತನಾಡಿದ್ದಾರೆ ಅಶ್ಲೀಲವಾಗಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪ ಕೇಳಿಬಂದಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 296ರ ಅಡಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗ ಮೈದಾನ ಹೆಸರು ಬದಲಾವಣೆಗೆ ಇದೀಗ ಬಿಜೆಪಿ ಮುಂದಾಗಿದೆ. ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆ ಚುಕ್ಕಾಣಿ ಹಿಡಿದಿರುವ ಬಿಜೆಪಿ ಹುಬ್ಬಳ್ಳಿ ನಗರದ ಹೃದಯ ಭಾಗದಲ್ಲಿರುವ ಈ ವಿಧಾನದ ಹೆಸರು ಬದಲಾವಣೆಗೆ ಮುಂದಾಗಿದೆ ಅದಕ್ಕೆ ರಾಣಿ ಚೆನ್ನಮ್ಮ ಮೈದಾನ ಎಂದು ಹೆಸರು ಬದಲಾವಣೆ ಮಾಡಲು ಬಿಜೆಪಿ ಮುಂದಾಗಿದೆ. 2022 ರಲ್ಲಿ ಈದ್ಗ ಮೈದಾನದ ಹೆಸರು ಬದಲಾವಣೆಗೆ ಠರಾವು ಪಾಸ್ ಮಾಡಿತ್ತು. ರಾಣಿ ಚೆನ್ನಮ್ಮ ಮೈದಾನ ಅಂತ ಹೆಸರು ಬದಲಾಯಿಸಲು ಠರಾವು ಪಾಸ್ ಮಾಡಿತ್ತು. ಇದೀಗ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಹೆಸರು ಬದಲಾವಣೆ ಮಾಡಲು ನಿರ್ಧರಿಸಿದ್ದು, ಹೆಸರು ಬದಲಿಸಿ, ಹುಬ್ಬಳ್ಳಿ ಧಾರವಾಡ ಪಾಲಿಕೆ ಮುಂದಾಗಿದೆ. ಹುಬ್ಬಳ್ಳಿ ನಗರದ ಹೃದಯ ಭಾಗದಲ್ಲಿ 1.5 ಎಕರೆ ವಿಸ್ತೀರ್ಣದಲ್ಲಿ ಈದ್ಗಾ ಮೈದಾನವಿದೆ. ಸದ್ಯ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ದಿನದಲ್ಲಿರುವ ಜಾಗ ಇದರಿಂದ ಹೆಸರು ಬದಲಿಸುವ ಅಧಿಕಾರ ಪಾಲಿಕೆಗೆ ಇದೆ ಎಂದ ಬಿಜೆಪಿ ಆದರೆ ಇದಕ್ಕೆ ಕಾಂಗ್ರೆಸ್ ನಾಯಕರು ಮತ್ತು ವ್ಯಕ್ತಪಡಿಸಿದ್ದು ಬಿಜೆಪಿ…
ಯಾದಗಿರಿ : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ ಒಂದು ನಡೆದಿದ್ದು, ಹೃದಯಾಘಾತದಿಂದ ಇಬ್ಬರು ಸಹೋದರರು ಸಾವನ್ನಪ್ಪಿರುವ ಘೋರ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಬಾವಿ ಪಟ್ಟಣದಲ್ಲಿ ಈ ಒಂದು ದುರಂತ ಸಂಭವಿಸಿದೆ. ಹೌದು ಹೃದಯಾಘಾತದಿಂದ ಶಂಶುದ್ದೀನ್ (42) ಹಾಗೂ ಇರ್ಫಾನ್ (38) ಎನ್ನುವವರು ಸಹೋದರರು ಸಾವನಪ್ಪಿದ್ದಾರೆ. ಅಣ್ಣನಿಗೆ ಹೃದಯಾಘಾತ ಆಗಿರುವ ಸುದ್ದಿ ತಿಳಿದು ತಮ್ಮನಿಗೂ ಹೃದಯಾಘಾತ ಸಂಭವಿಸಿದೆ. ಎದೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಬ್ಬರು ಸಹೋದರರು ಸಾವನಪ್ಪಿದ್ದಾರೆ ಕೆಂಭಾವಿ ಪಟ್ಟಣದಲ್ಲಿ ಸಾವಿನಲ್ಲೂ ಸಹೋದರರು ಒಂದಾಗಿದ್ದಾರೆ. ಸಹೋದರರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಇದೀಗ ಇದೀಗ ಮುಗಿಲು ಮುಟ್ಟಿದೆ. ಕೆಂಭಾವಿ ಪಟ್ಟಣ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಂಡ್ಯ : ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವ ವೇಳೆ ವ್ಯಕ್ತಿಯೊಬ್ಬ ನೀರು ಪಾಲಾಗಿರುವ ಘಟನೆ ಮದ್ದೂರು ತಾಲೂಕಿನ ಕಾರ್ಕಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮದ್ದೂರು ತಾಲೂಕಿನ ಸಿಎಂ ಕೆರೆ ಹೋಬಳಿಯ ಕಾರ್ಕಳ್ಳಿ ಗ್ರಾಮದ ರವಿಕುಮಾರ್ (40) ಎಂಬ ದುರ್ದೈವಿಯಾಗಿದ್ದಾನೆ. ಗೌರಿ – ಗಣೇಶ ಹಬ್ಬದ ಅಂಗವಾಗಿ ಕಾರ್ಕಳ್ಳಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ವಿಸರ್ಜನೆ ಅಂಗವಾಗಿ ಸೋಮವಾರ ಸಂಜೆ ಗ್ರಾಮದಲ್ಲಿ ಅದ್ದೂರಿಯಾಗಿ ಮೆರವಣಿಗೆ ಕೂಡ ನಡೆಸಲಾಗಿತ್ತು. ಮಧ್ಯರಾತ್ರಿ 1 ಗಂಟೆ ವೇಳೆಗೆ ಕ್ಯಾತಘಟ್ಟ ಗ್ರಾಮದ ಬಳಿಯ ಹೆಬ್ಬಾಳ ನಾಲೆಗೆ ವಿಸರ್ಜನೆ ಮಾಡಲು 20 ರಿಂದ 30 ಜನ ಆಗಮಿಸಿ ಪೂಜೆ ಸಲ್ಲಿಸಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ನೀರಿಗೆ ಇಳಿದಿದ್ದಾರೆ. ಆದರೆ, ನೀರಿನ ರಭಸಕ್ಕೆ ಬಸವರಾಜು ಎನ್ನುವವರು ಕೊಚ್ಚಿ ಹೋಗಿದ್ದಾನೆ. ತಕ್ಷಣವೇ ಸ್ಥಳೀಯರು ರಕ್ಷಣೆಗೆ ಮುಂದಾದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಮಂಗಳವಾರ ಮುಂಜಾನೆಯಿಂದಲೇ ಕೆ.ಎಂ.ದೊಡ್ಡಿ ಪೋಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು,…