Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರ ವಲಯದ ರಾಣಿ ಕ್ರಾಸ್ ನಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ಅನಂತಪುರ ಮೂಲದ ಅನಿತಾ (20) ಅಮೃತ ಯುವತಿ ಎಂದು ತಿಳಿದುಬಂದಿದೆ ಇನ್ನು ಬೈಕ್ ನ ಹಿಂಬದಿ ಕುಳಿತಿದ್ದ ಮತ್ತು ಮಹಿಳೆಗೆ ಗಂಭೀರವಾದ ಗಾಯಗಳಾಗಿದ್ದು ಟಿಪ್ಪರ್ ಜಪ್ತಿ ಮಾಡಿ ಪೊಲೀಸರು ಲಾರಿ ಚಾಲಕನನ್ನು ಅರೆಸ್ಟ್ ಮಾಡಿದ್ದಾರೆ. ಅಪಘಾತದ ಕುರಿತು ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ,ನ,೧೬- ಜನಪ್ರಿಯ ಕತೆಗಳಿಗೆ ಚಲನಚಿತ್ರಗಳ ಸಂಭಾಷಣೆಯಲ್ಲಿ ಸಾಹಿತ್ಯದ ಸ್ಪರ್ಶ ಮೂಡಿಸುವ ಮೂಲಕ ಹೊಸ ಅಧ್ಯಾಯವನ್ನು ಬಿ.ಎಲ್.ವೇಣು ಸೃಷ್ಟಿಸಿದರು ಎಂದು ಚಿಂತಕ ಹಾಗೂ ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್ ಅಭಿಪ್ರಾಯಪಟ್ಟರು.ಕೆಂಧೂಳಿ ವಾರಪತ್ರಿಕೆ ಬಳಗದಿಂದ ಕೊಡಮಾಡುವ ಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿಯನ್ನು ಬಿ.ಎಲ್ ವೇಣು ಅವರಿಗೆ ಪ್ರದಾನ ಮಾಡಿ ಅವರು ಮಾತನಾಡಿದರು, ಬಿ.ಎಲ್ ವೇಣು ಅವರು ಜನಪ್ರಿಯ ಕತೆ,ಕಾದಂಬರಿಕಾರರು ಸಹಜವಾಗಿಯೇ ಚಲನಚಿತ್ರಗಳ ಸಂಭಾಷಣೆಯ ಅವಕಾಶ ಬಂದಾಗ ಅದಕ್ಕೊಂದು ಸಾಹಿತ್ಯದ ಸ್ಪರ್ಶನೀಡಿ ಹೊಸ ಅರ್ಥ ಸೃಷ್ಟಿಸಿದರು ಎಂದು ಅವರು ಹೇಳಿದರು.ಸಮಾಜದ ದೊಡ್ಡ ಸಮಸ್ಯೆಯಾಗಿದ್ದ ಬೆತ್ತಲೆ ಸೇವೆಯಂತ ಸಾಮಾಜಿಕ ಸಮಸ್ಯೆಯ ಕುರಿತು ಬರೆದ ಕಾದಂಬರಿ ಲಕ್ಷಾಂತರ ಜನರಿಗೆ ಅದರ ಅರಿವು ಮೂಡಿಸುವ ಮೂಲಕ ಅನಿಷ್ಟ ಪದ್ದತಿಯನ್ನು ಹೋಗಲಾಡಿಲಸು ಕಾರಣವಾಯಿತು ಅಲ್ಲದೆ ಅದು ಚಲನಚಿತ್ರವಾಗುವ ಮೂಲಕ ಮತ್ತಷ್ಟು ಜನರಿಗೆ ಅರಿವು ಮೂಡಿಸಿದ ಕೆಲಸ ಮಾಡಿಸಿತು ಎಂದು ಅಭಿಪ್ರಾಯಪಟ್ಟರು. ಚಿತ್ರದುರ್ಗ ಇತಿಹಾಸವನ್ನು ಬರೆದ ವೇಣು ಅವರು ಅಪವಾದವಾಗಿದ್ದ ಹಿದು ಮುಸ್ಲಿಂ ನ ದ್ವೇಷಭಾವನೆಯನ್ನು ಅವರು ಕಲ್ಲರಳಿ ಹೂವಾಗಿ ಕಾದಂಬರಿ ಮೂಲಕ ಹಿಂದು ಮುಸ್ಲಿಂ…
ಬೆಂಗಳೂರು : ಬೆಂಗಳೂರಲ್ಲಿ ನಡು ರಸ್ತೆಯಲ್ಲಿಯೇ ಗ್ರಾಹಕ ನಿಂದ ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗ್ರಾಹಕ ಸಂತೋಷ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸಾರ್ವಜನಿಕರು ಮತ್ತು ಪೊಲೀಸರ ಮೇಲು ಸಂತೋಷ್ ಎನ್ನುವವನಿಂದ ಹಲ್ಲೆ ನಡೆದಿದೆ ಮೈಸೂರು ನಿಂದ ಬೆಂಗಳೂರು ಏರ್ಪೋರ್ಟ್ಗೆ ಸಂತೋಷ್ ಕಾರ್ ಬುಕ್ ಮಾಡಿದ್ದ ಸಂತೋಷ್ ಕುಟುಂಬದ ಸದಸ್ಯರ ಜೊತೆಗೆ ಬದ್ರಿನಾಥ್ ಗೆ ತೆರಳುತ್ತಿದ್ದ. ಈ ವೇಳೆ ಕ್ಯಾಬ್ ಡ್ರೈವರ್ ಮೇಲೆ ಸಂತೋಷ ಹಲ್ಲೆ ಮಾಡಿದ್ದಾನೆ.
ಉತ್ತರಕನ್ನಡ : ಸಮುದ್ರದಲ್ಲಿ ಮುಳುಗುತ್ತಿದ್ದ ವಿದೇಶಿ ಪ್ರಜೆಯನ್ನು ರಕ್ಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೊಕಿನ ಕುಡ್ಲೆ ಬೀಚ್ನಲ್ಲಿ ಈ ಒಂದು ಘಟನೆ ನಡೆದಿದೆ. ಕುಡ್ಲೆ ಬೀಚ್ನಲ್ಲಿ ಕಜಕಿಸ್ತಾನ ಮೂಲದ ಐದಾಲಿ (25) ಎನ್ನುವ ವಿದೇಶಿ ಪ್ರಜೆಯನ್ನು ರಕ್ಷಿಸಲಾಗಿದೆ. ಐದಾಲಿ ಸಮುದ್ರದಲ್ಲಿ ಈಜಲು ತೆರಳಿದ್ದಾಗ ಅಲೆಗೆ ಸಿಲುಕಿದ್ದಾನೆ. ಮಂಜುನಾಥ ಹರಿಕನ್ತ್ರ, ಗಿರೀಶ್ ಗೌಡ ಹಾಗೂ ನಾಗೇಂದ್ರ ಎನ್ನುವವರು ವಿದೇಶ ಪ್ರಜೆಯನ್ನು ರಕ್ಷಿಸಿದ್ದಾರೆ. ಘಟನೆ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಿಡಿಗೇಡಿಗಳು ಕಾರಾಗೃಹದ ಎಡಿಜಿಪಿ ಆಗಿರುವಂತಹ ಬಿ.ದಯಾನಂದ್ ಅವರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ವರದಿಯಾಗಿದೆ. ಹೌದು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ದಯಾನಂದ್ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿದ್ದಾರೆ. ಈ ಹಿಂದೆ ಮೂರು ಬಾರಿ ನಕಲಿ ಅಕೌಂಟ್ ಓಪನ್ ಆಗಿರುವ ಬಗ್ಗೆ ದಯಾನಂದ್ ಸೈಬರ್ ಪೊಲೀಸರ ಗಮನಕ್ಕೆ ತಂದಿದ್ದರು. ಆದರೂ ಸೈಬರ್ ಖದೀಮರು ಮುಂದುವರೆದು ಸೂಟ್ ಹಾಕಿರುವ ಹಾಗೂ ಮಕ್ಕಳ ಜೊತೆ ಇರುವ ಪೋಟೋ ಬಳಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಸದ್ಯ ಕಾರಾಗೃಹ ಎಡಿಜಿಪಿಯಾಗಿ ದಯಾನಂದ್ ಕರ್ತವ್ಯ ನಿರ್ವಹಿಸುತ್ತಿದ್ದು ಇತ್ತೀಚೆಗೆ ಜೈಲಿನ ಒಳಗಡೆ ಇರುವ ವಿಡಿಯೋ ವೈರಲ್ ಆಗಿತ್ತು. ದಯಾನಂದ್ ಅವರಿಗೆ ಕೆಟ್ಟ ಹೆಸರು ತರಲು ವಿಡಿಯೋ ವೈರಲ್ ಮಾಡಲಾಗುತ್ತಿದೆ ಎಂಬ ಮಾತು ಕೇಳಿ ಬಂದಿತ್ತು. ಈಗ ನಕಲಿ ಎಫ್ಬಿ ಖಾತೆ ತೆರೆದುಹಲವು ಮಂದಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ ಬಗ್ಗೆ ದೂರು ದಾಖಲಿಸಿ…
ಹುಬ್ಬಳ್ಳಿ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹೃದಯಾಘಾತವಾಗಿ ಸಾವನ್ನಪ್ಪಿದ ಎಎಸ್ಐಯೋರ್ವರು ಸಾವನ್ನಪ್ಪಿದ್ದು, ಅವರು ತಮ್ಮ ಸಾವಿನಲ್ಲೂ ಕೂಡ ಸಾರ್ಥಕತೆ ಮೆರೆದಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ ಹುಟಗಿ (58) ಅವರು ಭಾನುವಾರ(ನ.16) ಬೆಳಗ್ಗೆ ಹೃದಯಾಘಾತದಿಂದ ಹುಬ್ಬಳ್ಳಿ ಸುಚರಾಯು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿ ಆಗದೆ ನಿಧನರಾದರು. ತಮ್ಮವರನ್ನು ಕಳೆದುಕೊಂಡ ನೋವಿನ ಸಂದರ್ಭದಲ್ಲೂ ಕೂಡ ಅವರ ಕುಟುಂಬ ಚಂದ್ರಕಾಂತ ಅವರ 2 ಕಣ್ಣುಗಳನ್ನು ದಾನ ಮಾಡಿದ್ದಾರೆ.
ದಾವಣಗೆರೆ : ದಾವಣಗೆರೆಯಲ್ಲಿ ಘೋರ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ರೋಟವೇಟರ್ ಯಂತ್ರಕ್ಕೆ ಸಿಲುಕಿ ರೈತ ಸಾವನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದಿದ್ದಿಗಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ. ದಿದ್ದಿಗಿ ಗ್ರಾಮದ ನಾರಪ್ಪ (30) ರೋಟವೇಟರ್ ಯಂತ್ರ ಸಿಲುಕಿ ಸಾವನಪ್ಪಿರುವ ರೈತ ಎಂದು ತಿಳಿದು ಬಂದಿದೆ. ಎಂದಿನಂತೆ ರೈತ ನಾರಪ್ಪ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ರೋಟವೇಟರ್ ಹೊಡೆಸುತ್ತಿದ್ದರು. ಈ ವೇಳೆ ಚಾಲಕನ ಪಕ್ಕದಲ್ಲಿ ಕುಳಿತಿದ್ದ ರೈತ ನಾರಪ್ಪ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಆಗ ಏಕಾಏಕಿ ಆತನ ಮೇಲೆ ರೋಟವೇಟರ್ ಯಂತ್ರ ಹರಿದಿದೆ. ಪರಿಣಾಮ ರೋಟವೇಟರ್ಗೆ ಸಿಕ್ಕ ರೈತನ ದೇಹ ಛಿದ್ರವಾಗಿದೆ. ತಕ್ಷಣವೇ ಟ್ರ್ಯಾಕ್ಟರ್ ನಿಲ್ಲಿಸಿ ನೋಡಿದಾಗ ಸ್ಥಳದಲ್ಲೇ ರೈತ ನಾರಪ್ಪ ಕೊನೆಯುಸಿರೆಳೆದಿದ್ದರು. ಮನೆಗೆ ಆಧಾರವಾಗಿದ್ದ ರೈತ ನಾರಪ್ಪನನ್ನು ಕಳೆದುಕೊಂಡ ಕುಟುಂಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ ಹತ್ತಿರದ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಹುಟ್ಟು ಹಬ್ಬದ ದಿನವೇ ಒಂಬತ್ತನೇ ತರಗತಿ ವಿದ್ಯಾರ್ಥಿನಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾದನಾಯಕನಹಳ್ಳಿ ಠಾಣೆ ಪೋಲೀಸರು ಆರೋಪಿಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಯುವಕ ಯತೀಶ್ 15 ವರ್ಷದ ಬಾಲಕಿಯನ್ನ ಕೇಕ್ ಕತ್ತರಿಸುವುದಾಗಿ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ಕೇಕ್ ಕತ್ತರಿಸುವ ನೆಪದಲ್ಲಿ ರಾಶಿ ಲೇಔಟ್ಟೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಅತ್ಯಾಚಾರ ಬಳಿಕ ಕಾಮುಕ ಎಸ್ಕೆಪ್ ಆಗಿದ್ದಾನೆ. 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಈ ಸಂಬಂಧ ಪೊಲೀಸರಿಗೆ ಪೋಷಕರು ದೂರು ನೀಡಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ತಡರಾತ್ರಿ ಭೀಕರವಾದ ಅಪಘಾತ ಸಂಭವಿಸಿದ್ದು ಈ ಒಂದು ಅಪಘಾತದಲ್ಲಿ ನವವಿವಾಹಿತ ಸಾವನಪ್ಪಿದ್ದಾನೆ. ಖಾಸಗಿ ಬಸ್ ಡಿಕ್ಕಿಯಾಗಿ ನವವಿವಾಹಿತ ಮೃತಪಟ್ಟಿರುವ ಘಟನೆ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ ರವಿವಾರ ರಾತ್ರಿ ನಡೆದಿದೆ. ಶಾಂತಿ ನಗರದ ನಿವಾಸಿ ಅಹ್ಮದ್ (31) ಮೃತ ಯುವಕ ಎಂದು ತಿಳಿದುಬಂದಿದೆ. ರಾಗಿಗುಡ್ಡ ಕಡೆಯಿಂದ ಬಂದ ಖಾಸಗಿ ಬಸ್ ಮಣ್ಣಿನ ದಿಬ್ಬ ಹಾರಿ ಅಡ್ಡಾದಿಡ್ಡಿ ಚಲಿಸಿದ್ದು, ಮೂರು ದ್ವಿಚಕ್ರ ವಾಹನಗಳು, ನಾಲ್ವರು ವ್ಯಕ್ತಿಗಳಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ಗಳು ಜಖಂಗೊಂಡಿದ್ದರೆ, ಪೊಲೀಸ್ ಬ್ಯಾರಿಕೇಡ್ ತುಂಡಾಗಿದೆ. ಫುಟ್ಪಾತ್ಗೆ ಅಳವಡಿಸಿದ್ದ ರೇಲಿಂಗ್ ಕೂಡ ಹಾನಿಯಾಗಿದೆ. ಅಪಘಾತದಲ್ಲಿ, ಮೂವರು ಗಾಯಗೊಂಡಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಡೇಟಿಂಗ್ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ ಪ್ರೇಮಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಬಂದಿದ್ದರನ್ನು ಕವಿಪ್ರಿಯ ಹಾಗೂ ಹರ್ಷವರ್ಧನ ಎಂದು ತಿಳಿದು ಬಂದಿದೆ. ಆಪ್ ಗಳ ಮೂಲಕ ಇಬ್ಬರು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು ಸಾಲ ತೀರಿಸಲು ಆಗದೆ ಪ್ಲಾನ್ ಮಾಡಿ ಡೇಟಿಂಗ್ ಆಪ್ ಮೂಲಕ ವಂಚನೆ ಎಸಗುತ್ತಿದ್ದರು. ಹ್ಯಾಪನ್ ಆಪ್ ನಲ್ಲಿ ಫೋಟೋ ಹಾಕಿ ಯುವಕರಿಗೆ ಬಲೆ ಬೀಸುತ್ತಿದ್ದರು ಪ್ರಿಯಕರ ಪ್ಲಾನ್ ಅಂತ ಕವಿಪ್ರಿಯಾಳಿಂದ ಯುವಕರಿಗೆ ಬಲೆ ಹಾಕಲಾಗುತ್ತಿತ್ತು. ಯುವಕರ ಭೇಟಿಯ ಬಳಿಕ ಚಿನ್ನ ನಗದು ದೋಚಿ ಪರಾರಿ ಆಗುತ್ತಿದ್ದರು. ನವೆಂಬರ್ ಒಂದರಂದು ಓರ್ವ ಯುವಕನನ್ನು ಲಾಡ್ಜ್ ಗೆ ಕರೆದು ಆತನಿಗೆ ಪ್ರಜ್ಞೆ ತಪ್ಪಿಸಿ ಆತನ ಬಳಿ ಇರುವ ಚಿನ್ನ ನಗದು ಹಣ ದೋಚಿ ಪರಾರಿಯಾಗಿದ್ದಳು. ನವೆಂಬರ್ 1 ರಂದು ಬೆಂಗಳೂರಿನ ಇಂದಿರಾನಗರದ ಲಾಡ್ಜ್ ಒಂದಕ್ಕೆ ಕವಿಪ್ರಿಯ ಯುವಕನನ್ನು ಕರೆಸಿದ್ದಾಳೆ. ಅಲ್ಲಿ ಇಬ್ಬರು ಕಂಟಪೂರ್ತಿ ಕುಡಿದಿದ್ದಾರೆ. ಬಳಿಕ ಆಕೆ ಆನ್ಲೈನ್ ನಲ್ಲಿ ಊಟ ತರಿಸಿದ್ದಾಳೆ. ನಂತರ ನೀರಿನಲ್ಲಿ ಪ್ರಜ್ಞೆ…













