Author: kannadanewsnow05

ಬೆಂಗಳೂರು : ರಾಜ್ಯದ ಶಕ್ತಿಸೌಧ ವಿಧಾನಸೌಧ ಇಂದಿನಿಂದ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದೆ. ಹೀಗಾಗಿ ಶಕ್ತಿಸೌಧವನ್ನ ದೂರದಿಂದಲೇ ನೋಡಿ.. ಫೋಟೋ ಕ್ಲಿಕ್ಕಿಸಿ ಸಂತಸಪಟ್ಟುಕೊಳ್ಳುತ್ತಿದ್ದ ಜನರಿಗೆ ಹತ್ತಿರದಿಂದಲೇ ನೋಡುವ ಅವಕಾಶ ಸಿಕ್ಕಿದೆ. ಭವ್ಯ ವಿಧಾನಸೌಧ ವೀಕ್ಷಣೆಗೆ ರಾಜ್ಯ ಸರ್ಕಾರ ʻಗೈಡೆಡ್ ಟೂರ್ʼ ಹೆಸರಿನಲ್ಲಿ ಪ್ರವಾಸ ಭಾಗ್ಯ ಕಲ್ಪಿಸಿದೆ. ಹೌದು ಇತಿಹಾಸದಲ್ಲೇ ಮೊದಲ ಬಾರಿಗೆ ಸರ್ಕಾರ ವಿಧಾನಸೌಧ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಟ್ಟಿದೆ. ಇಂದಿನಿಂದ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ವಿಧಾನಸೌಧ ಪ್ರವಾಸಕ್ಕೆ ಮುಕ್ತ. ಮೊದಲ ದಿನವೇ ವಿಧಾನಸೌಧ ಟೂರ್‌ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಮೊದಲ ದಿನ ತಲಾ 25-30 ಜನ ಇರುವ ನಾಲ್ಕೈದು ಬ್ಯಾಚ್‌ಗಳ ಮೂಲಕ ಪ್ರವಾಸಿಗರು ವಿಧಾನಸೌಧದ ಒಳಗೆಲ್ಲಾ ಸುತ್ತಾಡಿ, ಅದರ ಸೌಂದರ್ಯ ತಮ್ಮ ಕಣ್ಮನದೊಳಗೆ ತುಂಬಿಕೊಂಡರು. ಕುಟುಂಬ, ಸ್ನೇಹಿತರೊಂದಿಗೆ ಬಂದ ಹಲವರು ವಿಧಾನಸೌಧದ ಒಳಗೆ, ಹೊರಗೆ ಸುತ್ತಾಡಿ ಖುಷಿಪಟ್ಟರು. ಪ್ರತೀ ಭಾನುವಾರ, ಎರಡನೇ ಹಾಗೂ ನಾಲ್ಕನೇ ಶನಿವಾರ ವಿಧಾನಸೌಧ ಟೂರ್‌ಗೆ ಅವಕಾಶವಿರುತ್ತದೆ. 16 ವರ್ಷ ಮೇಲ್ಪಟ್ಟ ಎಲ್ಲರಿಗೂ ತಲಾ 50 ರೂ, 15 ವರ್ಷದೊಳಗಿನ…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಘೋರವದ ದುರಂತ ಒಂದು ಸಂಭವಿಸಿದ್ದು ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ದೇವರಾಜ ಎಂದು ತಿಳಿದುಬಂದಿದೆ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್‌ ಸ್ಪರ್ಶಸಿ ಅಸ್ವಸ್ಥರಾಗಿದ್ದರು. ಮೃತ ದೇವರಾಜ ವಿವಾಹವಾಗಿ ಕೇವಲ 10 ದಿನಗಳಾಗಿದ್ದವು ಎಂದು ತಿಳಿದುಬಂದಿದೆ. ಘಟನೆ ಬಳಿಕ ಸ್ಥಳೀಯರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ದೇವರಾಜ್ ಮೃತಪಟ್ಟಿದ್ದಾರೆ‌. ಘಟನೆ ಕುರಿತು ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಯಚೂರು : ಹಟ್ಟಿ ಚಿನ್ನದ ಗಣಿಯಲ್ಲಿ ಗಣಿಗಾರಿಕೆ ವೇಳೆ ಮಣ್ಣು ಕುಸಿತವಾಗಿ ಘೋರವಾದ ದುರಂತವೊಂದು ಸಂಭವಿಸಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕನಿಗೆ ಕಾಲು ಕಟ್ ಆಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಈ ಒಂದು ದುರಂತ ನಡೆದಿದೆ. ಸುಮಾರು 2800 ಅಡಿ ಆಳದಲ್ಲಿ ಗೋಲ್ಡ್ ಮೈನಿಂಗ್ ವೇಳೆ ಈ ಒಂದು ದುರಂತ ಸಂಭವಿಸಿದೆ. ಮೈನಿಂಗ್ ವೇಳೆ ಮಣ್ಣು ಕುಸಿದು ಕಾರ್ಮಿಕ ಶರಣಬಸವ (40) ಸಾವನ್ನಪ್ಪಿದ್ದು, ಲಿಂಗಸೂಗೂರು ತಾಲೂಕಿನ ವೀರಾಪುರ ಗ್ರಾಮದ ನಿವಾಸಿಯಾಗಿದ್ದಾನೆ. ಹಾಗೂ ಮತ್ತೊರ್ವ್ ಕಾರ್ಮಿಕ ನಿರುಪಾದಿ ಗಾಯಗೊಂಡಿದ್ದು, ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬೆಂಗಳೂರು : ಪ್ರಶ್ನೆ ಮಾಡಿದ ಯುವತಿಯ ಮೇಲೆ ಬಿಎಂಟಿಸಿ ಬಸ್ ಹತ್ತಿಸಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯ ಮೇರೆಗೆ ಚಾಲಕನನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಚಾಲಕನನ್ನು ಅಮಾನತುಗೊಳಿಸಿ ಆದೇಶ ಪ್ರಕಟಿಸಲಾಗಿದೆ. ಕಳೆದ ಮೇ 23 ರಂದು ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿತ್ತು.ಪ್ರಶ್ನೆ ಮಾಡಿದ ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ ಡ್ರೈವರ್ ನನ್ನು ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಶಾಂತ್‌ ಅಮಾನತಾದ ಚಾಲಕ ಎಂದು ಗುರುತಿಸಲಾಗಿದೆ. ಮೇ 23ರಂದು ಸಂಜೆ 5:40ಕ್ಕೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಿಎಂಟಿಸಿ ಬಸ್ ಪಕ್ಕ ಕಾರಿನಲ್ಲಿದ್ದ ಯುವತಿ ಕಾರಿನಿಂದ ಇಳಿದು ಬಸ್ ಚಾಲಕನನ್ನು ಪ್ರಶ್ನೆ ಮಾಡಿದ್ದಾಳೆ. ಯಾವ ವಿಚಾರವಾಗಿ ಯುವತಿ ಪ್ರಶ್ನೆ ಮಾಡಿದ್ದಾಳೆ ಎಂಬ ಕುರಿತು ಸ್ಪಷ್ಟತೆ ದೊರೆತಿಲ್ಲ. ಬಳಿಕ ಬಸ್ ಚಾಲಕ ಮತ್ತು ಯುವತಿ ನಡುವೆ ಜಗಳ ನಡೆದು ಬಸ್ ಚಾಲಕನನ್ನು ಪ್ರಶ್ನೆ ಮಾಡಲು…

Read More

ಬೆಂಗಳೂರು : ಪಹಲ್ಗಾಮ್ ಉಗ್ರರ ನಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಇದೇ ವಿಚಾರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲೇ ಹೋದರು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾಷಣ ಮಾಡುತ್ತಾರೆ. ಹಾಗಾಗಿ ಎಲ್ಲಾ ನನ್ನಿಂದಲೇ ಆಯ್ತು ಅನ್ನೋದನ್ನ ಮೋದಿ ಬಿಡಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಎಲ್ಲಾ ನನ್ನಿಂದಲೇ ಆಯ್ತು ಅನ್ನೋದನ್ನ ಮೋದಿ ಬಿಡಬೇಕು. ಇಡೀ ದೇಶ ನಮ್ಮ ಸೇನೆಯ ಹಿಂದೆ ಇದೆ. ಸೇನೆ ಮಾಡುವ ಕೆಲಸಕ್ಕೆ ನಮ್ಮೆಲ್ಲರ ಬೆಂಬಲವೂ ಇದೆ. ನಾನು ಅದು ಮಾಡಿದ್ದೇನೆ ಇದು ಮಾಡಿದ್ದೇನೆ ನನ್ನ ಒಬ್ಬನಿಂದಲೇ ಎಲ್ಲವೂ ಸಾಧ್ಯ ಅನ್ನೋದನ್ನ ಬಿಡಬೇಕು. ಚುನಾವಣಾ ಭಾಷಣೆಗಳಲ್ಲಿ ಮೋದಿ ಬಳಸುವುದನ್ನು ಬಿಡಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದರು.

Read More

ಬಾಗಲಕೋಟೆ : ಈಗಾಗಲೇ ರಾಜ್ಯದಲ್ಲಿ ಕೊರೊನಾ ವೈರಸ್‌ಗೆ ಮೂವರು ಬಲಿಯಾಗಿದ್ದು, ಕೊರೊನಾ ಪ್ರಕರಣಗಳ ಸಂಖ್ಯೆ 425 ಕ್ಕೆ ಏರಿಕೆಯಾಗಿದೆ. ಇದರ ಮಧ್ಯ ರಾಜ್ಯಕ್ಕೆ ಮತ್ತೊಂದು ವೈರಸ್ ಎಂಟ್ರಿ ಆಗಿದ್ದು, ಬಾಗಲಕೋಟೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. ಹೌದು ಜಿಲ್ಲೆಯ ಇಳಕಲ್​ ತಾಲೂಕಿನ ಗೊರಬಾಳ ಗ್ರಾಮದಲ್ಲಿರುವ ಸಾಕಾಣಿಕೆ ಕೇಂದ್ರದಲ್ಲಿ ಇಂತಹ ರೋಗ ಪತ್ತೆಯಾಗಿದೆ. ಅನ್ಯರಾಜ್ಯದಿಂದ ಹಂದಿಗಳನ್ನು ಆಮದು ಮಾಡಿಕೊಂಡಿರುವ ವೇಳೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೇ 22ಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಂದಿಗಳ ರಕ್ತದ ಮಾದರಿಯನ್ನು ಭೋಪಾಲ್​ನ ಲ್ಯಾಬೊರೇಟರಿಗೆ ಕಳುಹಿಸಿ ಪರೀಕ್ಷಿಸಲಾಗಿದೆ. ಇಳಕಲ್​ ತಾಲೂಕಿನಲ್ಲಿ ಹಂದಿ ಸಾಗಾಣಿಕೆ ಮಾಡಿ, ಕೇರಳ, ತಮಿಳುನಾಡು ಹಾಗೂ ರಾಜ್ಯದ ಕೊಡಗು ಜಿಲ್ಲೆಗಳಿಗೆ ಕಳುಹಿಸಲಾಗುತ್ತದೆ. ಹಾಗಾಗಿ ಬಾಗಲಕೋಟೆ ಜಿಲ್ಲೆಗೆ ಈ ರೋಗ ಸೀಮಿತವಾಗಿಲ್ಲ. ಈಗಾಗಲೇ ಕೇಂದ್ರ ಸರ್ಕಾರ, ಕೇರಳ ಸೇರಿದಂತೆ ಇತರ ರಾಜ್ಯಗಳಲ್ಲಿ ಹಂದಿ ಜ್ವರ ಹರಡಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಹೀಗಾಗಿ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಮೂರು ರ‍್ಯಾಪಿಡ್ ಟೀಮ್​ಗಳನ್ನು ಕಾರ್ಯಾಚರಣೆಗೆ ಇಳಿಸಿದ್ದಾರೆ. 0-1…

Read More

ಬೆಂಗಳೂರು : ಬೆಂಗಳೂರಿನಲ್ಲಿ ಹೊರ ರಾಜ್ಯದವರ ದಬ್ಬಾಳಿಕೆ ಮುಂದುವರೆದಿದ್ದು ಇತ್ತೀಚಿಗೆ ಬ್ಯಾಂಕ್ ಸಿಬ್ಬಂದಿ ಒಬ್ಬಳು ನಾನು ಕನ್ನಡ ಮಾತಾಡಲ್ಲ ಅಂತ ಉದ್ಧಟತನ ತೋರಿದಳು ಬಳಿಕ ಕ್ಷಮೆ ಕೂಡ ಹಾಕಿಸಿದಳು. ಇದೀಗ ಬೆಂಗಳೂರಿನಲ್ಲಿ ಸ್ಕೂಟಿಗೆ ಆಟೋ ಟಚ್ ಆಗಿದ್ದಕ್ಕೆ ಹೊರ ರಾಜ್ಯದ ಯುವತಿ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದಿದ್ದಾಳೆ. ಹೌದು ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ. ಹೊರರಾಜ್ಯದ ಯುವತಿಯಿಂದ ಇದೀಗ ಅತೀರೆಕದ ವರ್ತನೆ ನಡೆದಿದೆ. ಬೆಂಗಳೂರಿನ ಬೆಳ್ಳಂದೂರು ವೃತ್ತದಲ್ಲಿ ಈ ಒಂದು ಘಟನೆ ನಡೆದಿದೆ. ಸ್ಕೂಟಿಗೆ ಆಟೋ ಟಚ್ ಆಗುತ್ತಿದ್ದಂತೆ ಚಾಲಕ ಮತ್ತು ಯುವತಿಯ ನಡುವೆ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಆಟೋ ಚಾಲಕನಿಗೆ ಯುವತಿ ಚಪ್ಪಲಿಯಿಂದ ಹೊಡೆದಿದ್ದಾಳೆ. ಸದ್ಯ ಆಟೋ ಚಾಲಕ ಮತ್ತು ಯುವತಿ ಠಾಣೆಗೆ ತೆರಳಿದ್ದಾರೆ.

Read More

ಮೈಸೂರು : ಪಹಲ್ಗಾಮ್ ಉಗ್ರರ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಮೂಲಕ ಉಗ್ರರ ನೆಲೆಗಳನ್ನು ನಾಶ ಮಾಡಿದೆ. ಇದೀಗ ಈ ಒಂದು ಆಪರೇಷನ್ ಸಿಂಧೂರ ಕುರಿತು ಬಹುಭಾಷಾ ನಟ ಕಿಶೋರ್ ಅವರು ಪ್ರತಿಕ್ರಿಯೆ ನೀಡಿದು ಆಪರೇಷನ್ ಎಂದು ದೇಶದ ಹೊರಗೆ ನಡೆದಿದ್ದಕ್ಕಿಂತ ದೇಶದ ಒಳಗಡೆ ನಡೆದಿದೆ. ಪ್ರಧಾನಿಗಳು ಆರ್ಮಿ ಜೆರಸಿ ಹಾಕಿಕೊಂಡು ರಾಜಕೀಯ ಲಾಭ ಪಡೆದುಕೊಂಡರು. ಎಷ್ಟು ಸಾಧ್ಯವೋ ಅಷ್ಟು ರಾಜಕೀಯ ಲಾಭ ಪಡೆದುಕೊಂಡಿದ್ದಾರೆ ಎಂದು ಮೈಸೂರು ನಗರದಲ್ಲಿ ಬಹುಭಾಷ ನಟ ಕಿಶೋರ್ ಹೇಳಿಕೆ ನೀಡಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು, ಧ್ವನಿ ಅಡಗಿಸುವ ಮೂಲಕ ಪ್ರಜಾಪ್ರಭುತ್ವ ವೀಕ್ ಆಗುತ್ತಿದೆ. ಜಾತಿ, ಧರ್ಮ, ಭಾಷೆಯ ಬಗ್ಗೆ ಅಂಧಾಭಿಮಾನ ಎಲ್ಲಿಯ ತನಕ ಇರಲಿದೆಯೋ, ಅಲ್ಲಿಯವರೆಗೂ ಬಳಸಿಕೊಳ್ಳುವವರು ಕೂಡ ಇರುತ್ತಾರೆ. ಪಹಲ್ಗಾಂನಲ್ಲಿ ನಡೆದ ಘಟನೆಯ ಬಗ್ಗೆ ಪರಿಹಾರ ಕಂಡುಕೊಳ್ಳಬೇಕು. ಅದನ್ನು ರಾಜಕೀಯ ಲಾಭಕ್ಕಾಗಿ ನಾವು ಬಿಟ್ಟುಕೊಡಬಾರದು ಎಂದರು. ಈ ಹಿಂದಿನ ಘಟನೆಗಳ ಸತ್ಯಾಸತ್ಯತೆಗಳು ಇನ್ನೂ ಹೊರ ಬಂದಿಲ್ಲ. ಅಲ್ಲಿನ ಗವರ್ನರ್ ಸತ್ಯಪಾಲ್ ಆರೋಪಗಳ…

Read More

ಬೆಳಗಾವಿ : ಅಭಯ್ ಪಾಟೀಲ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಶಾಸಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ತಿಳಿಸಿದ್ದಾರೆ. ಹೌದು ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಶಾಸಕ ಮುನಿರತ್ನ ಹಾಗೂ ಬೆಂಬಲಿಗರಿಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರೀಕ್ಷಣಾ ಜಾಮೀನು ಕೋರಿ, ಮುನಿರತ್ನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು.ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಮುನಿರತ್ನ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಜನಪ್ರತಿನಿಧಿಗಳು ನ್ಯಾಯಾಲಯ ಆದೇಶ ಹೊರಡಿಸಿದೆ. ಅರ್ಜಿಗೆ ಸಂತ್ರಸ್ತೆಯ ಪರ ಹಿರಿಯ ವಕೀಲ ಹನುಮಂತರಾಯ ಆಕ್ಷೇಪಣೆ ಸಲ್ಲಿಕೆ ಮಾಡಿದ್ದಾರೆ. ವಾದಮಂಡನೆಗೆ ಕಾಲಾವಕಾಶ ನೀಡಬೇಕು ಎಂದು ಎಸ್ಪಿಪಿ ಕೋರಿದ್ದಾರೆ.ಪ್ರಕರಣದ ಇತರೆ ಆರೋಪಿಗಳು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಬಲವಂತದ ಕ್ರಮ ಕೈಗೊಳ್ಳಲ್ಲವೆಂದು ಎಸ್ ಎಸ್ ಪಿ ಹೈಕೋರ್ಟ್ ಗೆ ತಿಳಿಸಿದ್ದಾರೆ. ಮುನಿರತರನ್ನು ಬಂಧಿಸಲು ಪೊಲೀಸರು ಯತ್ನಿಸುತ್ತಿದ್ದಾರೆ. ಇತರೆ ಆರೋಪಿಗಳಿಗೆ ನೀಡಿರುವ ರಕ್ಷಣೆ ಮುನಿರತ್ನವು ಅನ್ವಯಿಸಬೇಕು ಎಂದು ಮುನಿರತ್ನ ಪರ ವಕೀಲರಿಂದ ಕೋರ್ಟಿಗೆ ಮನವಿ ಮಾಡಲಾಯಿತು. ಮುಂದಿನ ವಿಚಾರಣೆವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ ಹೊರಡಿಸಿತು. ಬಳಿಕ ಜೂನ್ 2ರಂದು ವಿಚಾರಣೆ ನಿಗದಿಪಡಿಸಿತು.

Read More