Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಬೈಕ್ ಮೇಲೆ ತೆರಳುತ್ತಿದ್ದಾಗ ಕಂಟೆನರ್ ಬಿದ್ದು 4 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರವಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನರಸನಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಘಟನೆ ವೇಳೆ 4 ವರ್ಷದ ಬಾಲಕಿ ಬೈಕ್ ಮೇಲೆ ತೆರಳುತ್ತಿದ್ದಾಗ ಕಂಟೆನರ್ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಲ್ಲದೇ ಕಂಟೆನರ್ ಕೆಳಗಡೆ ಮತ್ತಿಬ್ಬರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇಶಾ ಫೌಂಡೇಶನ್ ಗೆ ಹೋಗಿ ವಾಪಸ್ ಬರುವಾಗ ಈ ಘೋರವಾದ ದುರಂತ ಸಂಭವಿಸಿದೆ.
ಮಂಗಳೂರು : ವಕ್ಫ್ ತಿದ್ದುಪಡಿ ವಿರೋಧಿ ಸೇನೆನೆ ಮಂಗಳೂರಿನ ಅಡ್ಯಾರ್ ಮೈದಾನದಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದ್ದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಪ್ರತಿಭಟನೆ ವೇಳೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ವಿಚಾರವಾಗಿ ಪ್ರತಿಭಟನಾಕಾರರ ವಿರುದ್ಧ ಇದೀಗ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಿನ್ನೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಕೃಷ್ಣಾಪುರ ನಿವಾಸಿ ಜಲೀಲ್, ಹೊಳಚ್ಚಿಲ್ ನಿವಾಸಿ ಫಾಜಿಲ್ ಹಾಗು ಮೊಹಮ್ಮದ್ ಹನೀಫ್ ನೌಫಾಲ್ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. BNS ಕಾಯ್ದೆ 189(2), 126(2), 270, 324, 132, 185, 190ರಡಿ ಪ್ರಕರಣ ದಾಖಲಾಗಿದೆ ನೆನ್ನೆ ಮಂಗಳೂರಿನ ಆಡಾರಿನಲ್ಲಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಗೂ ಮುನ್ನ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡದಂತೆ ಪ್ರತಿಭಟನೆ ಮಾಡಿ ಎಂದು ಸೂಚನೆ ನೀಡಿತ್ತು. ಆದರೆ ಹೈಕೋರ್ಟ್ ಆದೇಶವನ್ನು ಮೀರಿಭಟ್ಟನಾಕಾರರು ರಾಷ್ಟ್ರೀಯ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಮೆಡಿಕಲ್ ಶಾಪ್ ಮತ್ತು ಜನರಲ್ ಸ್ಟೋರ್ ಆಕಸ್ಮಿಕ ಬೆಂಕಿಯಿಂದಾಗಿ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಗಾಯತ್ರಿನಗರದ ಮುಖ್ಯ ರಸ್ತೆಯಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ. ಬೆಂಗಳೂರಿನಲ್ಲಿ ಮೆಡಿಕಲ್ ಶಾಪ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹೆಲ್ತ್ ಕೇರ್ ಫಾರ್ಮ ಮತ್ತು ಜನರಲ್ ಸ್ಟೋರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಗಾಯತ್ರಿನಗರದ ಮುಖ್ಯ ರಸ್ತೆಯಲ್ಲಿರುವ ಮೆಡಿಕಲ್ ಶಾಪ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರವೀಣ್ ಆತ್ಮಹತ್ಯೆ ಮಾಡಿಕೊಳ್ಳೋಕು ಮುನ್ನ ಡೆತ್ ನೋಟ್ ಅಲ್ಲಿ ಉಲ್ಲೇಖಿಸಿದ ಇಬ್ಬರು ಆರೋಪಿಗಳನ್ನು ಆನೇಕಲ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಕರಣದ A1 ಆರೋಪಿ ಕಿರಣಗೌಡ ಮತ್ತು A3 ಹರೀಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಪ್ರವೀಣ್ ಗೌಡನ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಪ್ರಕರಣದ ಪ್ರಮುಖ ಆರೋಪಿಗಳಿಂದ ಪ್ರವೀಣ್ ವಿಡಿಯೋ ವೈರಲ್ ಆಗಿದೆ. ಆನೇಕಲ್ ಮಂಡಲ ಬಿಜೆಪಿ ಅಧ್ಯಕ್ಷ ಮುನಿರಾಜುಗೌಡ ಆನೇಕಲ್ ಪುರಸಭೆ ಸದಸ್ಯೆ ಭಾಗ್ಯಲಕ್ಷ್ಮಿ ಮತ್ತು ಪತಿ ಶ್ರೀನಿವಾಸ್ ಅವರಿಂದ ವಿಡಿಯೋ ವೈರಲ್ ಆಗಿದೆ. ಪ್ರಕರಣ ಹಿನ್ನೆಲೆ? ನಿನ್ನೆ ಆನೇಕಲ್ ನ ಎಸ್.ವಿ.ಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೇಸ್ಬುಕ್ ವಿಡಿಯೋ ಮಾಡಿ ಹಲವರ ಹೆಸರುಗಳನ್ನು ಪ್ರಸ್ತಾಪಿಸಿರುವ ಪ್ರವೀಣ್, ಮರಕ್ಕೆ ನೇಣು…
BREAKING : ಏನು ಮಾಡೋಕ್ ಆಗಲ್ಲ ಕನ್ನಡ ಕಲಿ : ಹಿಂದಿ ಮಾತನಾಡು ಎಂದವನಿಗೆ ಕನ್ನಡಿಗನ ಖಡಕ್ ವಾರ್ನಿಂಗ್ | Video Viral
ಬೆಂಗಳೂರು : ಇತ್ತೀಚಿಗೆ ಉತ್ತರ ಭಾರತದಿಂದ ಕರ್ನಾಟಕಕ್ಕೆ ವಲಸೆ ಬಂದಿರುವವರಿಂದ ಕನ್ನಡದವರ ಮೇಲೆನೆ ದೌರ್ಜನ್ಯ ನಡೆಸಿರುವ ಪ್ರಕರಣಗಳು ನಡೆದಿದ್ದು, ಅದರಲ್ಲೂ ಉತ್ತರ ಪ್ರದೇಶ, ಬಿಹಾರ, ಗುಜರಾತ್ ಇತರೆ ರಾಜ್ಯಗಳಿಂದ ಬಂದಂತಹ ಉತ್ತರ ಭಾರತದ ಜನ ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದ್ದು, ಕನ್ನಡಿಗ ಆಟೋ ಚಾಲಕನಿಗೆ ಹಿಂದಿ ಕಲಿ ಎಂದು ಧಮ್ಕಿ ಹಾಕಿರುವ ಘಟನೆ ನಡೆದಿದೆ. ಹೌದು ಬೆಂಗಳೂರಿನ ಎಸ್ಎಂಎಸ್ ಆರ್ಕೇಡ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಓರ್ವ ಆಟೋ ಚಾಲಕನಿಗೆ ಧಮ್ಕಿ ಹಾಕಿದ್ದಾನೆ. ಕನ್ನಡಿಗ ಆಟೋ ಚಾಲಕನಿಗೆ ಹಿಂದಿಯಲ್ಲಿ ಮಾತನಾಡು ಎಂದು ಹಿಂದಿ ಭಾಷಿಕ ಧಮ್ಕಿ ಹಾಕಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಿಂದಿಯಲ್ಲಿ ಮಾತನಾಡು ಎಂದು ಯುವಕ ಧಮ್ಕಿ ಹಾಕಿದ್ದಕ್ಕೆ ಆಟೋ ಚಾಲಕ ಏನೂ ಮಾಡಕ್ಕಾಗಲ್ಲ. ಕನ್ನಡ ಮಾತನಾಡು ಕಲಿ ನೀನು. ನೀನು ಬೆಂಗಳೂರಿಗೆ ಬಂದಿರುವುದು ಆಯ್ತಾ ಎಂದು ತಿರುಗೇಟು ಕೊಡುತ್ತಾನೆ. ಇದನ್ನು ಒಬ್ಬಾತ ವಿಡಿಯೋ ಮಾಡುತ್ತಿದ್ದರೆ, ಮತ್ತೊಬ್ಬ ಮಹಿಳೆ ಹಿಂದಿ…
ಶಿವಮೊಗ್ಗ : ಶಿವಮೊಗ್ಗದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ವರದಕ್ಷಿಣೆಗಾಗಿ ಪತಿಯ ಕುಟುಂಬಸ್ಥರಿಂದ ಕೊಲೆ ಆರೋಪ ಕೇಳಿಬರುತ್ತಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಚ್. ಜಂಕ್ಷನ್ ಗ್ರಾಮದಲ್ಲಿ ಗೃಹಿಣಿ ತೇಜಸ್ವಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಹಾಗೂ ಆತನ ಕುಟುಂಬಸ್ಥರಿಂದ ತೇಜಸ್ವಿನಿ ಕೊಲೆ ಆರೋಪ ಕೇಳಿಬರುತ್ತಿದೆ. ಭದ್ರಾವತಿ ಗ್ರಾಮಾಂತರ ಠಾಣೆಗೆ ಮೃತ ತೇಜಸ್ವಿನಿಯ ಪತಿ, ಅತ್ತೆ ಹಾಗು ಮಾವನ ವಿರುದ್ಧ ಇದೀಗ ಮೃತಳ ಕುಟುಂಬಸ್ಥರ ದೂರು ನೀಡಿದ್ದಾರೆ. ಪೊಲೀಸರು ದೂರು ನೀಡಿದರು ಕೂಡ ಕ್ರಮ ಕೈಗೊಂಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರ ಹಾಕುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಇದೀಗ ಎಚ್. ಜಂಕ್ಷನ್ ನಲ್ಲಿ ತೇಜಸ್ವಿನಿ ಮೃತ ದೇಹವನ್ನು ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಭದ್ರಾವತಿ ಲಕ್ಕವಳ್ಳಿ ರಸ್ತೆ ತಡೆದು ಕುಟುಂಬಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.
ರಾಯಚೂರು : ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಯಡವಟ್ಟು ಮಾಡಿಕೊಂಡಿದ್ದು,, ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಬ್ಲಡ್ ಗ್ರೂಪ್ ಅನ್ನೆ ಬದಲಿಸಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಗಳು ಬದಲಿ ಬ್ಲಡ್ ಗ್ರೂಪ್ ವರದಿ ಕೊಟ್ಟಿದ್ದಾರೆ. ಶಾಹಿಮ್ ಬೇಗಂ ಎನ್ನುವವರು ಕೈಮುರಿದು ಗಂಭೀರವಾಗಿ ಗಾಯಗೊಂಡಿದ್ದರು. ಏಪ್ರಿಲ್ 14ರಂದು ರಾಯಚೂರಿನ ರಿಮ್ಸ್ ಗೆ ಶಾಹಿಂ ಬೇಗಂ ದಾಖಲಾಗಿದ್ದರು. ರೋಗಿಯ ಸಂಬಂಧಿಕರ ಸಮಯ ಪ್ರಜ್ಞೆ ಮತ್ತು ಭಾರಿ ಅನಾಹುತ ಒಂದು ತಪ್ಪಿದೆ. ತಪ್ಪಾಗಿ ಬದಲಿ ಗ್ರೂಪ್ ರಕ್ತ ಹಾಕಿದರೆ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಶಾಹಿಂ ಬೇಗಂ ಗೆ ಆಪರೇಷನ್ ಮಾಡಲು ಹೆಚ್ಚಿನ ರಕ್ತದ ಅವಶ್ಯಕತೆ ಇತ್ತು. ಈ ವೇಳೆ ಆಸ್ಪತ್ರೆಯ ಸಿಬ್ಬಂದಿಗಳು ಬಿ ಪಾಸಿಟಿವ್ ರಕ್ತ ವರದಿ ನೀಡಿದ್ದಾರೆ.
ಮೈಸೂರು : ಮೈಸೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಮುಂಡಿ ಬೆಟ್ಟಕ್ಕೆ ಬಂದಿದ್ದ ಬೆಂಗಳೂರು ಮೂಲದ ಕಾರು ಒಂದು ವಾಪಸ್ ಆಗುವ ವೇಳೆ ತಡೆಗೋಡೆಗೆ ಡಿಕ್ಕಿ ಹೊಡೆದು ಕಾರು ಪಟ್ಟಿಯಾಗಿರುವಾಗ ಘಟನೆ ನಡೆದಿದೆ. ಹೌದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ. ಚಾಮುಂಡಿ ಬೆಟ್ಟದಿಂದ ವಾಪಾಸ್ ಆಗುವಾಗ ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಚಾಮುಂಡೇಶ್ವರಿ ದರ್ಶನಕ್ಕೆ ಕುಟುಂಬ ಆಗಮಿಸಿತ್ತು. ಅಪಘಾತದ ಕುರಿತು ಸಿದ್ದಾರ್ಥ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಒಂದು ವಾರದ ಹಿಂದೆ ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಬಿಸಿಎ ಓದುತ್ತಿದ್ದ ವಿದ್ಯಾರ್ಥಿನಿ ಶಿಲ್ಪಾ ಆತ್ಮಹತ್ಯೆಗೆ ಶರಣಾಗಿದ್ದಳು. ಇದೀಗ ಈ ಒಂದು ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ ನಿವಾಸಿಯಾದ ಶಿಲ್ಪಾ (22) ಆತ್ಮಹತ್ಯೆಗೆ ಶರಣಾಗಿದ್ದಳು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ ಶಿಲ್ಪಾ ಬೆಳಗಾವಿಯಲ್ಲಿ ಬಿಸಿಎ ಓದುತ್ತಿದ್ದಳು. ನವೀನ್ ಎಂಬ ಯುವಕನನ್ನು ಶಿಲ್ಪಾ ಪ್ರೀತಿಸುತ್ತಿದ್ದಳು. ಶಿಗ್ಗಾವಿಯ ಫರ್ನಿಚರ್ ಅಂಗಡಿಯಲ್ಲಿ ನವೀನ್ ಕೆಲಸ ಮಾಡುತ್ತಿದ್ದ. ಈ ವೇಳೆ ಶಿಲ್ಪಾಗೆ ಕರೆ ಮಾಡಿ ಮುಸ್ಲಿಂ ವ್ಯಕ್ತಿ ಟಾರ್ಚರ್ ನೀಡಿದ್ದ ಎಂಬ ಆರೋಪ ಕೇಳಿ ಬಂದಿದ್ದು, ನವೀನ್ ಕೆಲಸ ಮಾಡುತ್ತಿದ್ದ ಅಂಗಡಿ ಮಾಲೀಕನೇ ಶಿಲ್ಪಾಗೆ ಕಿರುಕುಳ ನೀಡುತ್ತಿದ್ದ. ಕಳೆದ ಮೂರು ವರ್ಷಗಳಿಂದ ಶಿಲ್ಪಾ…
ತುಮಕೂರು : ರಾಜ್ಯದ ಜನರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆ. ಆರ್ಥಿಕವಾಗಿ, ಸಮಾಜಕವಾಗಿ ಶಕ್ತಿ ಬಂದರೆ, ಸಮಾನತೆ ಬರಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ತುಮಕೂರಿನಲ್ಲಿ ಕುರುಬ ಸಾಹಿತಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ಆರ್ಥಿಕವಾಗಿ ಸಮಾಜಕವಾಗಿ ಶಕ್ತಿ ಬಂದರೆ, ಸಮಾನತೆ ಬರಲು ಸಾಧ್ಯವಾಗುತ್ತದೆ ಕೆಲ ಪಟ್ಟ ಭದ್ರ ಹಿತಾಸಕ್ತಿಗಳು ಇದು ದೊಡ್ಡ ತಪ್ಪು ಅಂತ ಮಾತನಾಡುತ್ತಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಿಂದ ಎಷ್ಟು ಉಪಯೋಗ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಧರ್ಮಸ್ಥಳದ ಹೆಗ್ಡೆ ಅವರು ನನಗೆ ಪತ್ರ ಬರೆದಿದ್ದರು. ದೇವಾಲಯಕ್ಕೆ ಬರುವ ಸಂಖ್ಯೆ ಹೆಚ್ಚಾಗಿದೆ ಅಂತ ಪತ್ರ ಬರೆದಿದ್ದರು 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಿದ್ದೇನೆ. ಹಿಂದುಳಿದವರು ಜಾರಿ ಸಮಾವೇಶ ಮಾಡಲಿ ಮುಂದುವರೆಯವರು ಮಾಡಬಾರದು ಅಂತ ಲೋಹಿಯಾ ಹೇಳುತ್ತಿದ್ದರು.ಇದೆಲ್ಲ ಚಿಂತನೆ ಮಾಡಬೇಕು ನನಗೆ ಗೊತ್ತಿರುವ ವಿಚಾರ ಹೇಳಿದ್ದೇನೆ. ಇದರಿಂದ ಕೆಲವರಿಗೆ ನೋವಾದರೆ ನಾನು ಏನು ಮಾಡುವುದಕ್ಕೆ…