Author: kannadanewsnow05

ತುಮಕೂರು : ತುಮಕೂರು ಜಿಲ್ಲೆಯ ಗೃಹ ಸಚಿವ ಜಿ ಪರಮೇಶ್ವರ್ ಅವರ ಮತಕ್ಷೇತ್ರ ಕೊರಟಗೆರೆಯಲ್ಲಿ ರಸ್ತೆಯ 3 ಕಿಲೋಮೀಟರ್ ಉದ್ದಕ್ಕೂ ಶವದ ತುಂಡುಗಳು ಪತ್ತೆಯಾಗಿದ್ದವು. ಇದೀಗ ಈ ಒಂದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೊನೆಗೂ ಪೊಲೀಸರು ಶವದ ಜಾಡು ಹಿಡಿದು ಹೊರಟಾಗ ಸಹಜವಾಗಿ ಶಾಕ್ ಗೆ ಒಳಗಾಗಿದ್ದಾರೆ. ಹೌದು ಮಹಿಳೆಯನ್ನು ಕೊಲೆ ಮಾಡಿ ದೇಹವನ್ನು ತುಂಡುಗಳಾಗಿ ಕತ್ತರಿಸಿ ಅಂಗಾಂಗಗಳನ್ನು ತಾಲ್ಲೂಕಿನ ಹೊಳವನಹಳ್ಳಿ, ಕೋಳಾಲ ಹಾಗೂ ಚನ್ನರಾಯನದುರ್ಗಾ ಹೋಬಳಿ ವ್ಯಾಪ್ತಿಯ ವಿವಿಧೆಡೆ ಎಸೆಯಲಾಗಿದೆ. ಮಹಿಳೆ ದೇಹದ ಭಾಗಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ತುಂಬಿ ತಾಲ್ಲೂಕಿನ ಒಟ್ಟು ಐದು ಕಡೆ ಎಸೆಯಲಾಗಿದೆ. ಚಿಂಪುಗಾನಹಳ್ಳಿ ಬಳಿ ಗುರುವಾರ ನಾಯಿಯೊಂದು ಪ್ಲಾಸ್ಟಿಕ್‌ ಕವರ್‌ ಎಳೆದಾಡುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಶ್ವಾನದಳ ಕರೆಸಿ ಪರಿಶೀಲಿಸಿದ್ದಾರೆ. ಕೊಲೆಯಾದ ಮಹಿಳೆಯ ಹೆಸರು, ವಿವರ ಲಭ್ಯವಾಗಿಲ್ಲ. ಯಾವ ಕಾರಣಕ್ಕೆ ಕೊಲೆಯಾಗಿದೆ ಎಂಬ ಮಾಹಿತಿಯೂ ತಿಳಿದು ಬಂದಿಲ್ಲ. ರುಂಡ ಸೇರಿದಂತೆ ದೇಹದ ಇನ್ನೂ ಕೆಲವು ಭಾಗಗಳು ದೊರೆತಿಲ್ಲ. ಮೃತದೇಹದ…

Read More

ಶಿವಮೊಗ್ಗ : ಮತಗಳ್ಳತನ ಆರೋಪ ಮಾಡಿ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿರುವ ರಾಹುಲ್ ಗಾಂಧಿಯವರ ವಿಚಾರವಾಗಿ ಕಾಂಗ್ರೆಸ್‍ಗೆ ಮತಗಳ್ಳತನದ ಹಿನ್ನೆಲೆ ಬಹಳ ಹಿಂದಿನಿಂದಲೂ ಇದೆ. ರಾಹುಲ್ ಗಾಂಧಿಯವರ ಅಜ್ಜಿಯೇ ಇದರಿಂದ ಗೆದ್ದಿದ್ದರು ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ತುರ್ತು ಪರಿಸ್ಥಿತಿಗೂ ಮೊದಲೇ ಮತಗಳ್ಳತನ ನಡೆದಿದೆ. ರಾಯ್‍ಬರೇಲಿಯಲ್ಲಿ ರಾಜ್ ನಾರಾಯಣ್ ವಿರುದ್ಧ ಇಂದಿರಾ ಗಾಂಧಿ ಮತಗಳ್ಳತನದಿಂದ ಗೆದ್ದಿದ್ದರು. ಈಗ ರಾಹುಲ್ ಅವರು ಪ್ರಚಾರಕ್ಕಾಗಿ ಮತಗಳ್ಳತನದ ಆರೋಪ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ. ಅಲಹಾಬಾದ್ ಹೈಕೋರ್ಟ್ ಇಂದಿರಾಗಾಂಧಿಯವರ ಸದಸ್ಯತ್ವ ರದ್ದು ಮಾಡಿತ್ತು. ಆಗ ಅವರು ಸುಪ್ರೀಂ ಕೋರ್ಟ್‍ಗೆ ಹೋಗಿದ್ದರು. ಅಲಹಾಬಾದ್ ಕೋರ್ಟ್ ತೀರ್ಪನ್ನ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. ಸುಪ್ರೀಂ ಕೋರ್ಟ್ ಹೇಳಿದ್ರೂ ಅಧಿಕಾರದಿಂದ ಅವರು ಕೆಳಗೆ ಇಳಿಯಲಿಲ್ಲ. ತುರ್ತು ಪರಿಸ್ಥಿತಿ ಹೇರಿ ದಬ್ಬಾಳಿಕೆ ಮಾಡಿದ್ರು. ಪ್ರಜಾಪ್ರಭುತ್ವದ ಕತ್ತು ಹಿಸುಕಿದ್ದು ಕಾಂಗ್ರೆಸ್, ರಾಹುಲ್ ಇದನ್ನ ಅರ್ಥ ಮಾಡಿಕೊಳ್ಳಲಿ. 50 ವರ್ಷ ಆಗಿದೆ, ದೇಶದ ಜನರಿಗೂ ಮರೆತು ಹೋಗಿದೆ…

Read More

ನವದೆಹಲಿ : ಆರು ದಶಕಗಳಷ್ಟು ಹಳೆಯದಾದ 1961 ರ ಆದಾಯ ತೆರಿಗೆ ಕಾಯ್ದೆಯನ್ನು ಬದಲಿಸಲು ಫೆಬ್ರವರಿ 13 ರಂದು ಲೋಕಸಭೆಯಲ್ಲಿ ಪರಿಚಯಿಸಲಾದ ಆದಾಯ ತೆರಿಗೆ ಮಸೂದೆ 2025 ಅನ್ನು ಸರ್ಕಾರ ಔಪಚಾರಿಕವಾಗಿ ಹಿಂತೆಗೆದುಕೊಂಡಿದೆ ಎಂದು ತಿಳಿದುಬಂದಿದೆ. ಬೈಜಯಂತ್ ಪಾಂಡಾ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಮಾಡಿದ ಹೆಚ್ಚಿನ ಶಿಫಾರಸುಗಳನ್ನು ಒಳಗೊಂಡ ಆದಾಯ ತೆರಿಗೆ ಮಸೂದೆಯ ಹೊಸ ಆವೃತ್ತಿಯನ್ನು ಆಗಸ್ಟ್ 11 ರ ಸೋಮವಾರ ಮಂಡಿಸಲಾಗುವುದು. ಮಸೂದೆಯ ಬಹು ಆವೃತ್ತಿಗಳಿಂದ ಗೊಂದಲ ಉಂಟಾಗುವುದನ್ನು ತಪ್ಪಿಸಲು ಮತ್ತು ಎಲ್ಲಾ ಬದಲಾವಣೆಗಳೊಂದಿಗೆ ಸ್ಪಷ್ಟ ಮತ್ತು ನವೀಕರಿಸಿದ ಆವೃತ್ತಿಯನ್ನು ಒದಗಿಸಲು, ಆದಾಯ ತೆರಿಗೆ ಮಸೂದೆಯ ಹೊಸ ಆವೃತ್ತಿಯನ್ನು ಸೋಮವಾರ ಸದನದ ಪರಿಗಣನೆಗೆ ಪರಿಚಯಿಸಲಾಗುವುದು ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಮಾಜಿ ಸಂಸದೆ ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಹಾಕಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ಪ್ರಮುಖ A1 ಆರೋಪಿ ಪ್ರಮೋದ್ ಗೌಡ (18) ನನ್ನು ಇಂದು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೆಆರ್ ಪುರಂ ಮೂಲದ ಪ್ರಮೋದನ ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಮೋದ್ ಫ್ರೆಂಡ್ ಮೊಬೈಲ್ ನಲ್ಲಿ ಜಾಲತಾಣ ಓಪನ್ ಮಾಡಿದ್ದ. ಈ ವೇಳೆ ಪ್ರಮೋದ್ ಫ್ರೆಂಡ್ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣದ ಮೂಲಕ ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಈ ಕುರಿತಂತೆ ನಟಿ ರಮ್ಯಾ ಬೆಂಗಳೂರು ಕಮಿಷನರ್ ಗೆ ದೂರು ನೀಡಿದ್ದರು. ಬಳಿಕ ಪ್ರಕರಣವನ್ನು ಕಮಿಷನರ್ ಸಿಸಿಬಿಗೆ ವರ್ಗಾಯಿಸಿದರು. ಈ ವೇಳೆ ಸಿಸಿಬಿ ಸುಮಾರು 48 ಐಡಿ ಪತ್ತೆ ಮಾಡಿದ್ದು ಅದರಲ್ಲಿ ಈಗಾಗಲೇ ಹಲವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಇದೀಗ ಪೊಲೀಸರು ಪ್ರಕರಣದ A1 ಆರೋಪಿಯಾಗಿರುವ ಪ್ರಮೋದ್ ಗೌಡನನ್ನು ಅರೆಸ್ಟ್ ಮಾಡಿದ್ದಾರೆ.

Read More

ಹೈದ್ರಾಬಾದ್ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಹಾಸನ ಜಿಲ್ಲೆಯ ಒಂದರಲ್ಲಿ ಸರಣಿ ಹೃದಯಾಘಾತಕ್ಕೆ ಸುಮಾರು 45ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಅಲ್ಲದೆ ವಿವಿಧ ಜಿಲ್ಲೆಗಳನ್ನು ಕೂಡ ಸರಣಿ ಹೃದಯಾಘಾತದಿಂದ ಅನೇಕರು ಸಾವನಪ್ಪಿದ್ದ ಘಟನೆಗಳು ನಡೆದಿದೆ. ಇದೀಗ ಹೈದರಾಬಾದ್ ನಲ್ಲಿ ಕೋರ್ಟ್ ಆವರಣದಲ್ಲಿ ವಕೀಲ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ತೆಲಂಗಾಣದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹೈಕೋರ್ಟ್​ ಆವರಣದಲ್ಲಿ ವಕೀಲರೊಬ್ಬರು ಹೃದಯಾಘಾತದಿಂದ ಹಠಾತ್ತನೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ. ಈ ವಿಡಿಯೋದಲ್ಲಿ ವಕೀಲರೊಬ್ಬರು ಬೆಂಚ್ ಮೇಲೆ ಕುಳಿತಿದ್ದರು ಅಲ್ಲೇ ಕುಸಿದುಬಿದ್ದಿದ್ದಾರೆ. ಅವರು ಅಲ್ಲಿ ಕಳಿತುಕೊಂಡಯ ಎಷ್ಟು ಸಮಯವಾಗಿತ್ತು ಎಂಬುದು ತಿಳಿದುಬಂದಿಲ್ಲ. ಯಾವಾಗ ಅವರ ಕೈಯಲ್ಲಿದ್ದ ಮೊಬೈಲ್ ಕೆಳಗೆ ಬಿತ್ತೋ ಆಗ ಅಲ್ಲಿದ್ದವರು ಓಡಿ ಹೋಗಿ ನೋಡಿದಾಗ ಅಷ್ಟರಲ್ಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಮೃತರನ್ನು ಖಮ್ಮಂ ಜಿಲ್ಲೆಯ ಸಿಂಗರೇಣಿ ಮಂಡಲದ ಗೇಟ್ ಕರೆಪಲ್ಲಿ ಗ್ರಾಮದ ನಿವಾಸಿ…

Read More

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಒಂದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ 80 ಕ್ಷೇತ್ರಗಳಲ್ಲಿ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಅನೇಕ ವಿಚಾರ ಹೇಳಿದ್ದಾರೆ. ಕೇವಲ ರಾಜಕಾರಣಿಯಾಗಿ ಮಾಡುತ್ತಿರುವ ಆಪಾದನೆ ಅಲ್ಲ. ಸಂಪೂರ್ಣವಾಗಿ ಅಧ್ಯಯನ ಮಾಡಿ ಸಾಕ್ಷಾಧಾರ ಬಿಡುಗಡೆ ಮಾಡಿದ್ದಾರೆ. ಪ್ರತಿಭಟನಾ ರ್ಯಾಲಿ ಕರ್ನಾಟಕದ ಬೆಂಗಳೂರಿನಿಂದ ಪ್ರಾರಂಭ ಆಗಿದೆ. ಸಂಪೂರ್ಣವಾಗಿ ಅಧ್ಯಯನ ಮಾಡಿ ರಾಹುಲ್ ಗಾಂಧಿ ಈ ಸತ್ಯ ಬಯಲು ಮಾಡಿದ್ದಾರೆ.ಶ್ರೀಮಂತರಾಗಲಿ ಬಡವರಾಗಲಿ ಒಬ್ಬ ವ್ಯಕ್ತಿಗೆ ಒಂದೇ ಮತ ಎಂದು ತಿಳಿಸಿದರು. ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಅಧ್ಯಯನ ಮಾಡಿದ್ದಾರೆ. ಚುನಾವಣಾ ಆಯೋಗ ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು. ದೇಶದ ಪ್ರತಿಯೊಬ್ಬ ಪ್ರಜೆಗೂ ಮತ್ತಾನದ ಹಕ್ಕು ಕೊಟ್ಟಿದ್ದು…

Read More

ಬೆಂಗಳೂರು : ಲೋಕಸಭೆ ಚುನಾವಣೆಯ ವೇಳೆ ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಕಳತನ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಪಕ್ಷ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಈ ಒಂದು ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಸೋಮವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಕೊಡುತ್ತೇವೆ ಎಲ್ಲಾ ವಿಪಕ್ಷ ಸಂಸದರು ಸೇರಿ ಚುನಾವಣಾ ಆಯೋಗಕ್ಕೆ ದೂರು ಕೊಡುತ್ತೇವೆ ಎಂದು ಫ್ರೀಡಂ ಪಾರ್ಕ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದರು. ಸೋಮವಾರದಂದು ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಿ ನಂತರ ಮನವಿ ಸಲ್ಲಿಸುತ್ತೇವೆ. ಚುನಾವಣಾ ಅಕ್ರಮ ಖಂಡಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ಮತಗಳ್ಳತನ ಮಾಡಿ ಅಧಿಕಾರಕ್ಕೆ ಬಂದಿರುವ ಬಗ್ಗೆ ದೂರು ನೀಡುತ್ತೇವೆ. 2024ರ ಚುನಾವಣೆಯಲ್ಲಿ ಮೋದಿ ಅಂಡ್ ಕಂಪನಿ , ನಿಜವಾಗಿ ಗೆದ್ದಿಲ್ಲ ಕಳ್ಳತನದಿಂದ ಗೆದ್ದ ಬಿಜೆಪಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಜನರಿಂದ ಛೀಮಾರಿ ಹಾಕಿಸುತ್ತೇವೆ. ಮೋದಿ…

Read More

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಮಹದೇವಪುರದಲ್ಲಿ ಒಂದು ಲಕ್ಷ ಮತಗಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಗವಿರವಾಗಿ ಆರೋಪಿಸಿದ್ದು ಈ ನೆಲೆಯಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‘ ನಮ್ಮ ಮತ ನಮ್ಮ ಹಕ್ಕು, ನಮ್ಮ ಹೋರಾಟ’ ಧ್ಯೇಯದೊಂದಿಗೆ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ. ಈ ವೇಳೆ ಚುನಾವಣಾ ಆಯೋಗದವರು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ಈ ಒಂದು ಸಮಾವೇಶದಲ್ಲಿ ಭಾಷಣ ಆರಂಭಕ್ಕೂ ಮುನ್ನ ಸಂವಿಧಾನದ ಪುಸ್ತಕ ತೋರಿಸುತ್ತಾ ರಾಹುಲ್ ಗಾಂಧಿ ಭಾಷಣ ಆರಂಭಿಸಿದರು. ಪವಿತ್ರವಾದ ಗ್ರಂಥದಲ್ಲಿ ಮಹಾನ್ ನಾಯಕರ ಧ್ವನಿ ಕೇಳಿ ಬರುತ್ತದೆ ಈ ಗ್ರಂಥದಲ್ಲಿ ಬಸವಣ್ಣ ಅವರ ಧ್ವನಿ ಸಹ ಕೇಳಿ ಬರುತ್ತಿದೆ. ಕಳೆದ ಚುನಾವಣೆಯಲ್ಲಿ ಸಂವಿಧಾನವನ್ನು ನಾವು ರಚನೆ ಮಾಡಿದ್ದೇವೆ. ಅಂಬೇಡ್ಕರ್ ನೆಹರು ಗಾಂಧೀಜಿ ಪಟೇಲ್ ಅವರ ಧ್ವನಿ ಮೊಳಗುತ್ತದೆ ಸಂವಿಧಾನದಲ್ಲಿ ಭಾರತದ ನೂರಾರು ವರ್ಷಗಳ ಇತಿಹಾಸವಿದೆ ಎಂದು ಭಾಷಣ ಆರಂಭಿಸಿದರು. ಒನ್ ಮ್ಯಾನ್ ಒನ್ ಓಟ್ ಎಂಬುವುದೇ ಸಂವಿಧಾನದ ಅಡಿಪಾಯವಾಗಿದೆ. ಪ್ರತಿಯೊಬ್ಬ…

Read More

ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪೂರ ಗ್ರಾಮದ ಸ್ವಯಂ ಘೋಷಿತ ಮುತ್ಯಾ ನೀಡಿದ ನಾಟಿ ಔಷಧ ಸೇವಿಸಿ ಸಾವನ್ನಪ್ಪಿದವರ ಕುಟುಂಬಕ್ಕೆ ಸರಕಾರ ತ್ವರಿತವಾಗಿ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಆಗ್ರಹಿಸಿದ್ದಾರೆ. ಈ‌ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸೇಡಂ ತಾಲೂಕಿನ ಬುರಗಪಲ್ಲಿ ಗ್ರಾಮದ ನಿವಾಸಿ ಲಕ್ಷ್ಮಿ ನರಸಿಂಹಲು ಪಲ್ಲಾ (55), ಮದಕಲ್ ಗ್ರಾಮದ ನಾಗೇಶ ಗಡುಬು (31) ಶಹಾಬಾದನ ಡಕ್ಕಾ ತಂಡಾ ನಿವಾಸಿ ಗಣೇಶ ರಾಠೋಡ್ (30), ಚಿತ್ತಾಪುರ ತಾಲೂಕಿನ ಭೀಮನಳ್ಳಿ ತಾಂಡಾದ ಮನೋಹರ್ ಚಹ್ವಾಣ (35) ನಾಟಿ ಔಷಧಿ ಪಡೆದು ಸಾವಿನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇವರನ್ನು ಹೊರತುಪಡಿಸಿ ಹಿಂದೆಯೂ ಇದೇ ಇಮಡಾಪೂರದ ಸ್ವಯಂ ಘೋಷಿತ ಮುತ್ಯಾ ನೀಡಿದ ನಾಟಿ ಔಷಧಿ ಸೇವಿಸಿ ಸಾವಿನಪ್ಪಿರುವ ಬಗ್ಗೆ ಸಾರ್ವಜನಿಕರಿಂದ ತಿಳಿದು ಬಂದಿದೆ. ಈ ಬಗ್ಗೆ ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ರೀತಿ ಔಷಧಿ ಸೇವಿಸಿ ಎಷ್ಟು ಜನ ಇಲ್ಲಿಯವರೆಗೆ ಮೃತಪಟ್ಟಿದ್ದಾರೆ ಎನ್ನುವುದು…

Read More

ಮೈಸೂರು : ಲೋಕಸಭೆ ಚುನಾವಣೆಯ ವೇಳೆ ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ್ಮ ಮತಗಳ್ಳತನ ಕುರಿತು ನಿನ್ನೆ ರಾಹುಲ್ ಗಾಂಧಿ ದಾಖಲೆ ಸಮೇತ ಬಯಲಿಗೆ ಎಳೆದಿದ್ದರು. ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಈ ಕುರಿತು ರಾಹುಲ್ ಗಾಂಧಿ ಇಂದು ಪ್ರತಿಭಟನೆ ಹಮ್ಮಿಕೊಂಡಿದ್ದು, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಗಿಯಾಗಲಿದ್ದಾರೆ. ರಾಹುಲ್ ಗಾಂಧಿ ನಿನ್ನೆ ಆರೋಪ ಮಾಡಿದ ಬೆನ್ನೆಲ್ಲೆ ಇದೀಗ ಮೈಸೂರು ಜಿಲ್ಲೆಯ ವರುಣ ಕ್ಷೇತ್ರದಲ್ಲಿ ಕೂಡ, ನಕಲಿ ವೋಟರ್ ಐಡಿ ಪತ್ತೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಇಂದು ಬಿಜೆಪಿಯಿಂದಲೂ ನಕಲಿ ವೋಟರ್ ಐಡಿ ಪತ್ತೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ ಆರೋಪ ಮಾಡಿದ್ದು ವರುಣ ಕ್ಷೇತ್ರದಲ್ಲಿ ವೋಟರ್ ಐಡಿ ಪತ್ತೆ ಮಾಡಿದ ಬಿಜೆಪಿ ಬೆಂಗಳೂರಿನ ಕಾಂಗ್ರೆಸ್ ನಾಯಕರು ಕ್ಷೇತ್ರದಲ್ಲೂ ನಕಲಿ ವೋಟರ್ ಐಡಿ ಪತ್ತೆ ಮಾಡಿದೆ. ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪಗಳ ಸುರಿಮಳೆಗೈದಿದ್ದು, ರಾಹುಲ್…

Read More