Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ತಮಿಳುನಾಡು : ತಮಿಳುನಾಡಲ್ಲಿ ಸರ್ಕಾರ ರಚನೆ ಮಾಡಲು ದಳಪತಿ ವಿಜಯ್ ನೇತ್ರತ್ವದ ಟಿವಿಕೆ ಪಕ್ಷ ಕಸರತ್ತು ನಡೆಸುತ್ತಿದೆ. ಇದರ ಬೆನ್ನಲ್ಲೇ ಎಡಪಕ್ಷಗಳು ಹಾಗೂ ವಿಸಿಕೆ ಅಧಿಕೃತವಾಗಿ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡಿದ್ದು, ಈ ಒಂದು ಪಕ್ಷಗಳ ಬೆಂಬಲದಿಂದ ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ರಚನೆ ಮಾಡುವುದು ಬಹುತೇಕ ಫಿಕ್ಸ್ ಎಂದೇ ಇದೀಗ ಹೇಳಲಾಗುತ್ತಿದೆ. ಹೌದು ಇಂದು 3ನೇ ಬಾರಿಗೆ ರಾಜ್ಯಪಾಲರ ಭೇಟಿಯಾಗಲಿರುವ ಟಿವಿಕೆ ಸಂಸ್ಥಾಪಕ ವಿಜಯ್. 118 ಶಾಸಕರ ಸಹಿ ಉಳ್ಳ ಬೆಂಬಲ ಪತ್ರ ರಾಜಪಾಲರಿಗೆ ಸಲ್ಲಿಸಲಿದ್ದಾರೆ. ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ್ದಾರೆ. ಅಲ್ಲದೇ ವಿಜಯ್ ಗೆ ಕಾಂಗ್ರೆಸ್ ಬೆಂಬಲ ಘೋಷಿಸಿದೆ. ಎಡಪಕ್ಷಗಳು ವಿಸಿಕೆ ಬೆಂಬಲದೊಂದಿಗೆ ಟಿವಿಕೆ ಸರ್ಕಾರ ರಚನೆ ಬಹುತೇಕ ಫಿಕ್ಸ್ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಂಜೆ 4:30ಕ್ಕೆ ಎಡ ಪಕ್ಷಗಳು ಹಾಗೂ ವಿಸಿಕೆ ಅಧಿಕೃತ ನಿರ್ಧಾರ ಪ್ರಕಟಿಸಲಿದೆ.
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಪಾಲಿಕೆ ವಲಯ ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ದಾಳಿ ಮಾಡಿದೆ. ಒಟ್ಟು 12 ಕಚೇರಿಗಳ ಮೇಲೆ ಲೋಕಾಯುಕ್ತ ದಿಡೀರ್ ದಾಳಿ ಮಾಡಿದೆ. ಇ-ಖಾತ ಪೆಂಡಿಂಗ್ ಸಮಸ್ಯೆ ಸೇರಿ ಮಹತ್ವದ ದಾಖಲೆಗಳನ್ನು ದಾಳಿಯ ವೇಳೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿದರು. ಕಸ ವಿಲೇವಾರಿ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಸೂಚನೆ ಮೇರೆಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಯಿತು. ಈ ವೇಳೆ 12 ಕಚೇರಿಗಳಲ್ಲಿ ಹಲವು ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿದರು.
ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳ ಸೋಗಿನಲ್ಲಿ ‘ಡಿಜಿಟಲ್ ಅರೆಸ್ಟ್’ ಮಾಡಿ 78 ವರ್ಷದ ವೃದ್ಧೆ ಮತ್ತು ಅವರ ಪುತ್ರಿಗೆ ಸೈಬರ್ ವಂಚಕರು 2.1 ಕೋಟಿ ರೂಪಾಯಿ ವಂಚಿಸಿದ್ದಾರೆ. ಈ ಕುರಿತು ವಂಚನೆಗೊಳಗಾದ ಜಯನಗರದ ನಿವಾಸಿ ಪ್ರಸನ್ನ ಪಾರ್ವತಿ ಎಂಬವರು ನೀಡಿದ ದೂರಿನ ಮೇರೆಗೆ ಆಗ್ನೇಯ ವಿಭಾಗದ ಸೆನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಆರೋಪಿಗಳು ಎನ್ಐಎ ಅಧಿಕಾರಿಗಳೆಂದು ಕರೆ ಮಾಡಿ ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಏ.13ರಂದು ವಾಟ್ಸ್ಆ್ಯಪ್ ಮೂಲಕ ವಂಚಕರು, ಪ್ರಸನ್ನ ಪಾರ್ವತಿ ಅವರಿಗೆ ಕರೆ ಮಾಡಿ, ತಾವೂ ಎನ್ಐಎ ಅಧಿಕಾರಿಗಳೆಂದು ಪರಿಚಯಿಸಿಕೊಂಡಿದ್ದರು. ಬಳಿಕ ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯನೊಬ್ಬ ತಮ್ಮ ಹೆಸರಿನಲ್ಲಿ ಡೆಬಿಟ್ ಕಾರ್ಡ್ ಬಳಸುತ್ತಿದ್ದಾನೆ, ನಿಮ್ಮ ಪುತ್ರಿಯೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾಳೆ ಎಂದು ಹೆದರಿಸಿದ್ದಾರೆ. ಕರೆ ಮಾಡಿರುವುದನ್ನು ಯಾರಿಗೂ ತಿಳಿಸಬಾರದು ಎಂದಿರುವ ವಂಚಕರು, ವೃದ್ಧೆ ಹಾಗೂ ಅವರ ಮಕ್ಕಳಿಂದ ಎಲ್ಲ ದಾಖಲೆಗಳನ್ನೂ ಪಡೆದುಕೊಂಡಿದ್ದಾರೆ. ಪೊಲೀಸ್ ಠಾಣೆಯಂತೆ ಕಾಣುವ ಕೊಠಡಿಯಿಂದ ಆರೋಪಿಗಳು ವಿಡಿಯೋ…
ಹುಬ್ಬಳ್ಳಿ : ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್ರಚನೆಯ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಹುಬ್ಬಳ್ಳಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು, “ಆದಷ್ಟು ಬೇಗನೆ ರಾಜ್ಯ ಸಚಿವ ಸಂಪುಟ ಪುನರ್ರಚನೆಯಾಗಲಿದೆ,” ಎಂದು ಮಹತ್ವದ ಸುಳಿವು ನೀಡಿದ್ದಾರೆ. ದೆಹಲಿ ಭೇಟಿಯ ಬಳಿಕ ನಿರ್ಧಾರ ಸಂಪುಟ ಪುನರ್ರಚನೆಯ ಪ್ರಕ್ರಿಯೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿಯ ಮೇಲೆ ಅವಲಂಬಿತವಾಗಿದೆ. ಇಬ್ಬರೂ ನಾಯಕರು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಚರ್ಚಿಸಿದ ನಂತರವೇ ಅಂತಿಮ ತೀರ್ಮಾನ ಹೊರಬೀಳಲಿದೆ. ಬಹುಶಃ ಮೇ ತಿಂಗಳಲ್ಲೇ ಈ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಹೊಸಬರಿಗೆ ಅವಕಾಶ ನೀಡಲು ಮನವಿ ಸಂಪುಟದಲ್ಲಿ ಬದಲಾವಣೆ ತರುವ ಮೂಲಕ ಹೊಸ ಮುಖಗಳಿಗೆ ಹಾಗೂ ಉತ್ಸಾಹಿ ನಾಯಕರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಪಕ್ಷದ ಹಲವರ ಆಶಯವಾಗಿದೆ. ಈ ಕುರಿತು ಈಗಾಗಲೇ ಹೈಕಮಾಂಡ್…
ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿರುವ ಉಮೇಶ್ ಮೇಟಿ ಹಾಗೂ ಸಮರ್ಥ್ ಶಾಮನೂರು ಅವರು ಮೇ 11ರಂದು ಅಧಿಕೃತವಾಗಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದ ಗಮನ ಸೆಳೆದಿದ್ದ ಉಪ ಚುನಾವಣಾ ಕಣದ ವಿಜೇತರು ಈಗ ಶಾಸಕಾಂಗ ಸಭೆಯನ್ನು ಪ್ರವೇಶಿಸಲು ಸಜ್ಜಾಗಿದ್ದಾರೆ. ಸೋಮವಾರ ಬೆಳಗ್ಗೆ ಕಾರ್ಯಕ್ರಮ: ಪೂರ್ವ ನಿಗದಿಯಂತೆ ಮೇ 11ರ ಸೋಮವಾರ ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭವು ನಡೆಯಲಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜನೆಯಾಗಲಿರುವ ಈ ಕಾರ್ಯಕ್ರಮದಲ್ಲಿ ಉಭಯ ನಾಯಕರು ಸಂವಿಧಾನಬದ್ಧವಾಗಿ ಶಾಸಕ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವಾಲಯದಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಚುನಾವಣಾ ಗೆಲುವಿನ ಸಂಭ್ರಮ: ಉಪ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಈ ಇಬ್ಬರು ನಾಯಕರ ಬೆಂಬಲಿಗರಲ್ಲಿ ಹರ್ಷೋದ್ಗಾರ ಮುಗಿಲು ಮುಟ್ಟಿದೆ. ಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸಗಳು ಹಾಗೂ ಪಕ್ಷದ ಸಂಘಟನೆಯ ಬಲದಿಂದ ಉಮೇಶ್ ಮೇಟಿ ಮತ್ತು ಸಮರ್ಥ್ ಶಾಮನೂರು ಮತದಾರರ ವಿಶ್ವಾಸ…
ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಸುಮಾರು 1 ಕೋಟಿ 25 ಲಕ್ಷ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಬೇಗೂರು ಮುಖ್ಯರಸ್ತೆಯ ಕೊಪ್ಪ ಬಳಿ ಇಬ್ಬರನ್ನು ಬಂಧಿಸಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಜಿಗಣಿ ಪೊಲೀಸರಿಂದ ರಾಮಾಯಣ ಯಾದವ್ (56) ಮತ್ತು ಸಬೀರ್ ಖಾನ್ (51) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲೂಕಿನ ಜಿಗಣಿ ಪೊಲೀಸ್ ಠಾಣೆ ಪೊಲೀಸರು ಈ ಒಂದು ಕಾರ್ಯಚರಣೆ ನಡೆಸಿದ್ದಾರೆ. ರಾಮಾಯಣ ಯಾದವ್ ಮತ್ತು ಸಬೀರ್ ಖಾನ್ ಬಿಹಾರ ಮೂಲದವರು ಎಂದು ತಿಳಿದುಬಂದಿದೆ. ಪ್ರಮುಖ ಆರೋಪಿ ವಿನೋದ್ ಸಿಂಗ್ ಮತ್ತು ಬಾಬುಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಯಾರಿಗೂ ತಿಳಿಯದಂತೆ ಪೌಲ್ಟ್ರಿ ಫೀಲ್ಡ್ಸ್ ಮಧ್ಯೆ ಗಾಂಜಾ ಸಾಗಿಸಿದ್ದರು. ಸಿನಿಮಾ ಶೈಲಿಯಲ್ಲಿ ಗಾಂಜಾ ಸಾಗಾಟ ಮಾಡಿದ್ದ ಬಂಧಿತ ಆರೋಪಿಗಳು. ಪೊಲೀಸರ ಕಾರ್ಯಕ್ಕೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಚಂದ್ರಕಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಕನಕಪುರ: ರಾಮನಗರ ಜಿಲ್ಲೆಯ ಕನಕಪುರ ನಗರದ ಮಹದೇಶ್ವರ ಬಡಾವಣೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಅದೇ ಆಸ್ಪತ್ರೆಯಲ್ಲಿದ್ದ ನರ್ಸ್ ಕೂಡ ನೇಣಿಗೆ ಶರಣಾಗಿದ್ದಾರೆ. ಕೇವಲ ಎರಡು ದಿನಗಳ ಅಂತರದಲ್ಲಿ ನಡೆದ ಈ ಸರಣಿ ಆತ್ಮಹತ್ಯೆಗಳು ಇಡೀ ನಗರದಲ್ಲಿ ಸಂಚಲನ ಮೂಡಿಸಿವೆ. ವೈದ್ಯನ ಸಾವು ತಂದ ಆಘಾತ: ಮೊದಲಿಗೆ ಆಸ್ಪತ್ರೆಯ ವೈದ್ಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವೈದ್ಯರ ಈ ದಿಢೀರ್ ನಿರ್ಧಾರದಿಂದ ಆಸ್ಪತ್ರೆಯ ಸಿಬ್ಬಂದಿ ಹಾಗೂ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದರು. ಆದರೆ ಈ ಸಾವಿನ ನೋವು ಮಾಯುವ ಮುನ್ನವೇ, ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಕೂಡ ಅದೇ ದಾರಿ ತುಳಿದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಕ್ರಮ ಸಂಬಂಧದ ಶಂಕೆ: ಮೂಲಗಳ ಪ್ರಕಾರ, ಮೃತ ವೈದ್ಯ ಮತ್ತು ನರ್ಸ್ ನಡುವೆ ಅಕ್ರಮ ಸಂಬಂಧವಿತ್ತು ಎಂಬ ಮಾತುಗಳು ಕೇಳಿಬರುತ್ತಿವೆ. ವೈದ್ಯರ ಸಾವಿನಿಂದ ತೀವ್ರ ಮನನೊಂದಿದ್ದ ನರ್ಸ್, ಮಾನಸಿಕ ಖಿನ್ನತೆಗೆ ಒಳಗಾಗಿ ಈ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.…
ಬೆಂಗಳೂರು : ಜೂನ್ 14ರಿಂದ 24ರ ವರೆಗೆ ಜಿಬಿಎ ಚುನಾವಣೆ ಫಿಕ್ಸ್ ಮಾಡುವಂತೆ ಜಿಬಿಎ ಸೂಚಿಸಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ ತಿಳಿಸಿದ್ದು, GBA ಚುನಾವಣೆ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಚುನಾವಣೆಗೆ ಸಂಬಂಧಪಟ್ಟ ಪ್ರಕ್ರಿಯೆ ಮುಗಿಸಿದ್ದೇವೆ. ಮಳೆ ಮತ್ತು ಶಾಲೆ ಕಾಲೇಜು ಸ್ಯಾನ್ಸನ್ ಗಮನಿಸಿ ದಿನಾಂಕ ನಿಗದಿ ಆಗಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ ಮಾಹಿತಿ ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂನ್ 14ರಿಂದ ಜೂನ್ 24ರ ಒಳಗಾಗಿ ಒಂದು ಡೇಟ್ ಹೇಳಲು ಸೂಚನೆ ನೀಡಿದ್ದೇವೆ ಒಂದು ದಿನಾಂಕ ಹೇಳಿ ಅಂತ ಸೂಚನೆ ಕೊಟ್ಟಿದ್ದೇವೆ. ಈ ಅಂತರದಲ್ಲಿಯೇ GBA ಚುನಾವಣೆ ದಿನಾಂಕ ಘೋಷಣೆ ಆಗಬೇಕು ಕೆಲವೇ ದಿನಗಳಲ್ಲಿ ಜಿಬಿಎ ಚುನಾವಣೆಗೆ ಅಂತಿಮ ದಿನಾಂಕ ತಿಳಿಸುತ್ತೇವೆ. ಮುಂದೂಡಿಕೆ ಮಾಡುವ ಅಧಿಕಾರ ಸುಪ್ರೀಂ ಕೋರ್ಟ್ ಗೆ ಮಾತ್ರ ಇದೆ. ಜೂನ್ 30ರ ಒಳಗಾಗಿ ಜಿಬಿಎ ಚುನಾವಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ ನಿಗದಿತ ಕಾಳಮಿತಿಯಲ್ಲಿ ಚುನಾವಣೆ…
BIG NEWS : ಜೈಲಲ್ಲಿ ಅರಳಿದ ಪ್ರೇಮ : ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ವರಿಸಿದ ಮಹಿಳಾ ಪೊಲೀಸ್ ಅಧಿಕಾರಿ!
ಮಧ್ಯಪ್ರದೇಶ : ಸಾಮಾನ್ಯವಾಗಿ ಜೈಲು ಎಂದರೆ ಶಿಕ್ಷೆ, ಕತ್ತಲೆ ಮತ್ತು ಕಠಿಣ ನಿಯಮಗಳ ನೆನಪಾಗುತ್ತದೆ. ಆದರೆ ಮಧ್ಯಪ್ರದೇಶದ ಸತ್ನಾ ಕೇಂದ್ರ ಕಾರಾಗೃಹವು ಇತ್ತೀಚೆಗೆ ಅತ್ಯಂತ ಅಪರೂಪದ ಮತ್ತು ಅಚ್ಚರಿಯ ಮದುವೆಗೆ ಸಾಕ್ಷಿಯಾಗಿದೆ. ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಧರ್ಮೇಂದ್ರ ಸಿಂಗ್ ಎಂಬ ಕೈದಿಯನ್ನು, ಸಹಾಯಕ ಪೊಲೀಸ್ ಅಧೀಕ್ಷಕಿ (ASP) ಫಿರೋಝಾ ಖಾಟೂನ್ ಅವರು ವಿವಾಹವಾಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ಪ್ರೇಮ ಕಥೆ ಆರಂಭವಾಗಿದ್ದು ಧರ್ಮೇಂದ್ರ ಸಿಂಗ್ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಕಾಲದಲ್ಲಿ. ಧರ್ಮೇಂದ್ರ ಸಿಂಗ್ ಒಬ್ಬ ಸುಶಿಕ್ಷಿತ ವ್ಯಕ್ತಿಯಾಗಿದ್ದು, ಜೈಲಿನಲ್ಲಿದ್ದ ಅವಧಿಯಲ್ಲಿ ತನ್ನ ನಡವಳಿಕೆಯಿಂದ ಎಲ್ಲರ ಮೆಚ್ಚುಗೆ ಪಾತ್ರನಾಗಿದ್ದ ಎನ್ನಲಾಗಿದೆ. ಇದೇ ಸಮಯದಲ್ಲಿ ಸತ್ನಾ ಜೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫಿರೋಝಾ ಖಾಟೂನ್ ಅವರಿಗೆ ಧರ್ಮೇಂದ್ರನ ವ್ಯಕ್ತಿತ್ವ ಮತ್ತು ಆತನ ಮೇಲಿದ್ದ ಸುಳ್ಳು ಆರೋಪಗಳ ಬಗ್ಗೆ ಸಹಾನುಭೂತಿ ಮೂಡಿತ್ತು ಎಂದು ಹೇಳಲಾಗುತ್ತಿದೆ. ಕಾಲಕ್ರಮೇಣ ಇವರಿಬ್ಬರ ನಡುವೆ ಸ್ನೇಹ ಬೆಳೆದು ಅದು ಪ್ರೀತಿಗೆ ತಿರುಗಿದೆ. ಧರ್ಮೇಂದ್ರ ಸಿಂಗ್ ಕೊಲೆ ಪ್ರಕರಣವೊಂದರಲ್ಲಿ…
ತಮಿಳುನಾಡು : ತಮಿಳುನಾಡಲ್ಲಿ ಸರ್ಕಾರ ರಚನೆ ಕಸರತ್ತು ಮದ್ಯ, ದೊಡ್ಡ ಹೈಡ್ರಾಮಾವೇ ನಡೆದಿದೆ. ರಾಜ್ಯಪಾಲರ ವಿರುದ್ಧ ಟಿವಿಕೆ ಕಾರ್ಯಕರ್ತರು ಸಿಡಿದೆದ್ದಿದ್ದು, ದಳಪತಿ ವಿಜಯ್ ಬೆಂಬಲಿಗರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ತಮಿಳುನಾಡಿನ ಲೋಕಭವನದ ಎದುರು ಟಿ ವಿ ಕೆ ಕಾರ್ಯಕರ್ತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಈ ವೇಳೆ ಟಿವಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ರಾಜ್ಯಪಾಲರ ನಿಲುವಿನಿಂದ ಅಸಮಾಧಾನಗೊಂಡಿರುವ ಟಿವಿಕೆ ಕಾರ್ಯಕರ್ತರು ದೊಡ್ಡ ಮಟ್ಟದ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವೇಳೆ ರಾಜಭವನದ (ಲೋಕಭವನ) ಮುಂಭಾಗದಲ್ಲಿ ಹೈಡ್ರಾಮಾವೇ ನಡೆದಿದ್ದು, ದಳಪತಿ ವಿಜಯ್ ಅವರ ಬೆಂಬಲಿಗನೊಬ್ಬ ಎಲ್ಲರ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದು ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸರ್ಕಾರ ರಚನೆಯ ಪ್ರಕ್ರಿಯೆಯಲ್ಲಿ ರಾಜ್ಯಪಾಲರು ವಿಳಂಬ ಮಾಡುತ್ತಿದ್ದಾರೆ ಅಥವಾ ಪಕ್ಷಪಾತ ಮಾಡುತ್ತಿದ್ದಾರೆ ಎಂಬುದು ಕಾರ್ಯಕರ್ತರ ಮುಖ್ಯ ಆರೋಪವಾಗಿದೆ. ತಮ್ಮ ನಾಯಕ ವಿಜಯ್ ಅವರಿಗೆ ಸಿಗಬೇಕಾದ ರಾಜಕೀಯ ಮನ್ನಣೆಯ ವಿಚಾರದಲ್ಲಿ…














