Author: kannadanewsnow05

ಮಂಗಳೂರು : ಮಂಗಳೂರಿನಲ್ಲಿ ಪೊಲೀಸರ ಸಮಯ ಪ್ರಜ್ಞೆಯಿಂದ ಎರಡು ಜೀವಗಳು ಉಳಿದಿದ್ದು, ಹೆತ್ತ ಮಗುವಿನೊಂದಿಗೆ ತಂದೆಯೊಬ್ಬ ಆತ್ಮಹತ್ಯೆಗೆ ಯತ್ನಿಸುತ್ತಿದ್ದ. ಆದರೆ ಸರಿಯಾದ ಸಮಯಕ್ಕೆ ಪೊಲೀಸರು ಆಗಮಿಸಿ ತಂದೆ ಮತ್ತು ಮಗುವಿನ ಜೀವ ಉಳಿಸಿರುವ ಘಟನೆ ಮಂಗಳೂರಿನ ಪಣಂಬೂರು ಎಂಬಲ್ಲಿ ನಡೆದಿದೆ. ಕಾವೂರು ಠಾಣಾ ವ್ಯಾಪ್ತಿಯ ಅಂಬಿಕಾನಗರದ 35 ವರ್ಷದ ನಿವಾಸಿಯೊಬ್ಬರು ತಮ್ಮ ಮಗುವಿನೊಂದಿಗೆ ಮಂಗಳವಾರ ಸಂಜೆ ಪಣಂಬೂರು ಸಮುದ್ರ ತೀರಕ್ಕೆ ಬಂದಿದ್ದರು. ಬಳಿಕ ಮಗುವಿನೊಂದಿಗೆ ‘ನಾವಿಬ್ಬರೂ ಸಾಯೋಣ’ ಎಂದು ಹೇಳುತ್ತಾ ವಿಡಿಯೋ ಮಾಡಿದ್ದಾರೆ. ಈ ವಿಡಿಯೋವನ್ನು ಅವರು ತನ್ನ ಅಕ್ಕನಿಗೆ ಕಳುಹಿಸಿದ್ದರು. ಬಳಿಕ ಅವರು ಅದನ್ನು ಪೊಲೀಸರಿಗೆ ಕಳುಹಿಸಿದ್ದರು. ಈ ವಿಡಿಯೋ ಗಮನಿಸಿದ ಬಳಿಕ ಪಣಂಬೂರು ಪೊಲೀಸರು ಬೀಚ್‌ನಲ್ಲಿ ಎಲ್ಲಾ ಕಡೆ ತಂದೆ, ಮಗುವನ್ನು ಹುಡುಕಾಡಿದ್ದಾರೆ. ಆದರೆ ಅಲ್ಲಿ ಅವರು ಸಿಗದಿದ್ದ ಕಾರಣ ಆತನ ಮನೆಯನ್ನು ಹುಡುಕಾಡಿ ಮನೆಯತ್ತ ಬಂದಿದ್ದಾರೆ. ಪಣಂಬೂರು ಪೊಲೀಸರು ಮನೆಗೆ ಬಂದಾಗ ವ್ಯಕ್ತಿಯು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸುತ್ತಿದ್ದ. ಅದೇ ಸಮಯದಲ್ಲಿ ಅಲ್ಲಿಗೆ ಬಂದ ಪೊಲೀಸ್ ಸಿಬ್ಬಂದಿ ತಕ್ಷಣ…

Read More

ಬಳ್ಳಾರಿ : ಬಳ್ಳಾರಿಯಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಘಟನೆ ನಡೆದಿದ್ದು, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಸಂಡೂರು ತಾಲೂಕಿನ ಗ್ರಾಮವೊಂದರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಜಂಬಣ್ಣ(58) ಬಂಧಿತ ಮುಖ್ಯಶಿಕ್ಷಕ. ಮುಖ್ಯ ಶಿಕ್ಷಕ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸುಭದ್ರಾದೇವಿ, ತಾಲೂಕಿನ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ, ಮಕ್ಕಳನ್ನು ವಿಚಾರಿಸಿದ್ದಾರೆ. ಮಕ್ಕಳು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಾಹಿತಿ ನೀಡಿದ ಬೆನ್ನಲ್ಲೇ ಸಂಡೂರು ಠಾಣೆಯ ಪೊಲೀಸರು ಆರೋಪಿ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಚಿಕ್ಕಬಳ್ಳಾಪುರ : ಮಹಿಳೆಯ ಕಾಟ ತಾಳಲಾರದೆ ಯುವಕ ನೇಣಿಗೆ ಶರಣಾಗಿರುವ ಘಟನೆ ಮೂಡಚಿಂತನಹಳ್ಳಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮೂಡಚಿಂತನಹಳ್ಳಿಯಲ್ಲಿ ನಿಖಿಲ್ ಕುಮಾರ್ (19) ಆತ್ಮಹತ್ಯೆಗೆ ಶರಣಾಗಿರುವ ಯುವಕ ಎಂದು ತಿಳಿದುಬಂದಿದೆ. 38 ವರ್ಷದ ಶಾರದಾ ಜೊತೆಗೆ ಯುವಕ ಅಕ್ರಮ ಸಂಬಂಧ ಹೊಂದಿದ್ದ ಎನ್ನುವ ಆರೋಪ ಕೇಳಿ ಬಂದಿದ್ದು, ಪೋಷಕರ ವಿರೋಧದ ನಡುವೆಯೂ ಕೂಡ ಶಾರದಾ ಯುವಕನನ್ನು ಬಿಟ್ಟಿರಲಿಲ್ಲ. ಪೋಷಕರ ಕಣ್ತಪ್ಪಿಸಿ ಯುವಕನನ್ನು ಶಾರದ ಹೊರಗಡೆ ಕರೆದುಕೊಂಡು ಹೋಗುತ್ತಿದ್ದಳು. ಹಲವು ವರ್ಷಗಳ ಹಿಂದೆ ಶಾರದಾ ಗಂಡನಿಗೆ ವಿಚ್ಚೇದನ ನೀಡಿದ್ದಾಳೆ. ಇಬ್ಬರು ಮಕ್ಕಳೊಂದಿಗೆ ಶಾರದಾ ಮೂಡಚಿಂತನಹಳ್ಳಿಯಲ್ಲಿ ವಾಸವಿದ್ದಾಳೆ. ಇದೀಗ ಕೆರೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಶಾರದಾ ವಿರುದ್ಧ ಮೃತ ಯುವಕನ ಪೋಷಕರು ಉದುರು ನೀಡಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಿರ್ಲೋಸ್ಕರ್ ಫೆರೋಸ್ ಇಂಡಸ್ಟ್ರೀಸ್ ಕರ್ನಾಟಕದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕೋಟಿ ರೂ. ಬಂಡವಾಳ ಹೂಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ತಿಳಿಸಿದರು.‌ ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಎಂ.ಬಿ ಪಾಟೀಲ್, ಹೂಡಿಕೆ ಆಕರ್ಷಣೆ, ಉದ್ಯಮ ವಿಸ್ತರಣೆಯ ಗುರಿ ಇರಿಸಿಕೊಂಡು ಕೈಗಾರಿಕಾ ಇಲಾಖೆಯ ಉನ್ನತಮಟ್ಟದ ನಿಯೋಗದೊಂದಿಗೆ ಈ ದಿನ ಪುಣೆಯಲ್ಲಿ ರೋಡ್ ಶೋ ಹಮ್ಮಿಕೊಳ್ಳಲಾಗಿದೆ. ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರಿಸ್ ಪ್ರಮುಖರೊಂದಿಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಸಂಸ್ಥೆಯು ಮುಂದಿನ 3 ವರ್ಷಗಳಲ್ಲಿ ಉಕ್ಕು ತಯಾರಿಕೆಯನ್ನು ವಿಸ್ತರಿಸಲು, ಕಬ್ಬಿಣದ ಅದಿರು ಸಂಸ್ಕರಣೆಯನ್ನು ಹೆಚ್ಚಿಸಲು ಮತ್ತು ಸ್ಪಾಂಜ್ ಪೈಪ್ ಉತ್ಪಾದನೆಗಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸ್ಥಾವರವನ್ನು ಅಭಿವೃದ್ಧಿಪಡಿಸಲು ₹3,000 ಕೋಟಿ ಹೂಡಿಕೆ ಮಾಡಲಿದೆ. ತನ್ನ ಸಂಸ್ಥೆಯಲ್ಲಿ ಶೇ. 99 ರಷ್ಟು ಕನ್ನಡಿಗರಿಗೆ ಮೀಸಲಿಡುವುದಾಗಿ ತಿಳಿಸಿದ್ದು ಸಂತಸ ತರಿಸಿದೆ. ಕಳೆದ ಎರಡು ದಶಕಗಳಿಂದ ಸಂಸ್ಥೆ ತನ್ನ ಲಾಭದ ಶೇ. 2ರಷ್ಟು ಅಂಶವನ್ನು…

Read More

ಬೆಂಗಳೂರು : ಈಗಾಗಲೇ ನವೆಂಬರ್ನಲ್ಲಿ ಕ್ರಾಂತಿ ಆಗಲಿದೆ ಎಂದು ವಿಪಕ್ಷ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದು ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಸಂಪುಟ ಪುಣೆ ರಚನೆಯ ಕುರಿತು ಮತ್ತೊಮ್ಮೆ ಸುಳಿವು ನೀಡಿದ್ದಾರೆ. ಈ ಮೂಲಕ ಸಂಪುಟ ಪುನಾ ರಚನೆ ಆಗುವುದು ಬಹುತೇಕ ಫಿಕ್ಸ್ ಎಂದೇ ಹೇಳಲಾಗುತ್ತಿದೆ. ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸುಳಿವು ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಕುರಿತು ಮಾತನಾಡಿ, ಸಂಪುಟ ಪುನಾರಚನೆ ವೇಳೆ ನೋಡೋಣ ಎಂದು ಹೇಳಿದರು. ನಾಲ್ಕು ಮಂದಿ ಶಾಸಕರನ್ನು ಹೊಂದಿರುವ ಜಿಲ್ಲೆಗೆ ಸಚಿವ ಸ್ಥಾನದ ಬೇಡಿಕೆ ಕುರಿತು ಪರಿಶೀಲಿಸಲಾಗುವುದು ಎಂದರು.

Read More

ಬೆಂಗಳೂರು : ಬ್ಯಾಂಕ್ ಗಳಿಂದ ಲೆಕ್ಕ ಕೋರಿ ಹೈಕೋರ್ಟಿಗೆ ವಿಜಯಮಲ್ಯ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದು ಹೈಕೋರ್ಟ್ ನಲ್ಲಿ ವಿಜಯ್ ಮಲ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಯಿತು. ಬ್ಯಾಂಕುಗಳ ಪರ ಹಿರಿಯ ವಕೀಲ ವಿಕ್ರಂ ಹುಯ್ಲಗೋಳ ಅವರು ವಾದ ಮಂಡಿಸಿದರು. ವಿಜಯ್ ಮಲ್ಯ ದೇಶ ತೊರೆದು ದೇಶ ಭ್ರಷ್ಟರಾಗಿದ್ದಾರೆ. ವಿಜಯ್ ಮಲ್ಯ ಮುಗ್ಧರಾದರೆ, ನ್ಯಾಯಾಂಗದ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಭಾರತಕ್ಕೆ ಮರಳಿ ನ್ಯಾಯಾಂಗದ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅವರು ದೇಶ ಬಿಟ್ಟು ಪರಾರಿ ಆಗಿದ್ದಾರೆ. ತಮಗೆ ಬೇಕಾದಾಗ ಮಾತ್ರ ಕೋರ್ಟ್ ಮುಂದೆ ಬರುತ್ತಾರೆ ಎಂದು ವಾದಿಸಿದರು. ಈ ವೇಳೆ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಮೂರ್ತಿ ಲಲಿತ ಕನ್ನೆಗಂಟಿ ಸೂಚನೆ ನೀಡಿದರು. ಬ್ಯಾಂಕುಗಳ ಪರ ವಕೀಲರಿಗೆ ನ್ಯಾಯಮೂರ್ತಿ ಲಲಿತ ಕನ್ನೆಗಂಟಿ ಸೂಚನೆ ನೀಡಿದರು. ಬಳಿಕ ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ಹೊರಡಿಸಿತು. ಈ ವೇಳೆ ಹೈ ಕೋರ್ಟ್ ನೀವು ಕಂಪನಿ ಕೋರ್ಟಿಗೆ ಅರ್ಜಿ ಏಕೆ ಸಲ್ಲಿಸಲಿಲ್ಲ? ಎಂದು…

Read More

ಬೀದರ್ : ಸಾಮಾನ್ಯವಾಗಿ ರೈಲು ಹಳಿ ದಾಟುವಾಗ ರೈಲು ಬರುತ್ತಿದ್ದಂತೆ ಗೇಟ್ ಹಾಕುತ್ತಾರೆ. ಆದರೂ ಕೂಡ ಕೆಲವರು ಹುಂಬತನದಿಂದ ರೈಲು ಹಳಿ ದಾಟಲು ಪ್ರಯತ್ನಿಸಿ ಪ್ರಾಣ ಕಳೆದುಕೊಂಡಿರುವ ಅದೆಷ್ಟೋ ಉದಾಹರಣೆಗಳಿವೆ. ಇದೀಗ ಬೀದರ್ನಲ್ಲಿ ಇದೇ ರೀತಿ ಒಂದು ಘಟನೆ ನಡೆದಿದ್ದು, ಬೈಕ್ ಸವಾರ ರೈಲು ಹಳಿ ದಾಟಲು ಯತ್ನಿಸಿದ್ದಾನೆ. ಆದರೆ ಬೈಕ್ ಸವಾರ ಅದೃಷ್ಟವಶಾತ್ ಪ್ರಣಾಪಾಯದಿಂದ ಪರ ಆಗಿರುವ ಘಟನೆ ಬೀದರ್ ನೌಬಾದ್ ರೈಲು ಹಳಿ ಬಳಿ ಈ ಒಂದು ಘಟನೆ ಸಂಭವಿಸಿದೆ. ಹೌದು ಬೀದರ್ನಲ್ಲಿ ಬೈಕಿನಲ್ಲಿ ರೈಲ್ವೆ ಹಳಿ ದಾಟವಾಗ ಭಾರಿ ಅನಾಹುತ ಒಂದು ತಪ್ಪಿದೆ. ರೈಲಿನ ಕೆಳಗೆ ಬೈಕ್ ಸವಾರ ಸಿಲುಕಿಕೊಂಡು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದ್ದಾನೆ. ರೈಲು ಬರುತ್ತಿದ್ದಂತೆ ಬೈಕ್ ಬಿಟ್ಟು ಸವಾರ ಜೀವ ಉಳಿಸಿಕೊಂಡಿದ್ದಾನೆ. ರೈಲ್ವೆ ಹಳಿಯ ಮೇಲೆ ಬೈಕ್ ಬಿಟ್ಟು ವ್ಯಕ್ತಿ ಪರಾರಿಯಾಗಿದ್ದಾನೆ. ಬೀದರ್ ನಗರದ ನೌಬಾದ್ ಬಳಿ ಈ ಒಂದು ಘಟನೆ ಸಂಭವಿಸಿದೆ.

Read More

ಹಾಸನ : ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಶಾಸಕ ಎಚ್ ಡಿ ರೇವಣ್ಣ ಆಕ್ರೋಶ ಹೊರಹಾಕಿದ್ದು ಜಿಲ್ಲಾಧಿಕಾರಿ ಕೆ ಎಸ್ ಲತಾ ಕುಮಾರಿ ಸರ್ವಾಧಿಕಾರಿ ಅಂತೆ ವರ್ತಿಸುತ್ತಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ಜಿಲ್ಲೆಯ ಜನ ಜಿಲ್ಲಾಧಿಕಾರಿಯನ್ನು ಸರಿ ಮಾಡುತ್ತಾರೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹಾಸನಾಂಬೆ ಜಾತ್ರೆಯಲ್ಲಿ ಹಾಸನ ಎಡಿಎಲ್ ಆರ್ ನನ್ನ ಜೊತೆಗೆ ಬಂದಿದ್ದರು. ಸಂಶುದ್ದಿನ್ ನನ್ನ ಜೊತೆ ನಡೆದುಕೊಂಡು ಬಂದರು. ಇದೇ ಕಾರಣಕ್ಕೆ ಸಂಶುದ್ದೀನ್ ರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದಾರೆ. ಸರ್ಕಾರಿ ಅಧಿಕಾರಿಗಳು ಎಂಎಲ್ಎ ಜೊತೆ ಮಾತನಾಡಬಾರದ? ಪ್ರಮಾಣಿಕ ಅಧಿಕಾರಿ ಸಂಶುದ್ದಿನ್ ಮಾಡಿದ ತಪ್ಪಾದರೂ ಏನು? ಮುಸ್ಲಿಮರು ವೋಟ್ ಹಾಕದಿದ್ದರೆ ಕಾಂಗ್ರೆಸ್ 136 ಸ್ಥಾನ ಗೆಲ್ಲುತ್ತಿರಲಿಲ್ಲ. ಆದರೆ ರಾಜ್ಯದಲ್ಲಿ ಮುಸ್ಲಿಮರಿಗೆ ಭದ್ರತೆ ಇಲ್ಲದಂತಾಗಿದೆ ಎಂದು ಹಾಸನದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದರು

Read More

ಬೆಂಗಳೂರು : ಯುಡಿಆರ್ ಕೇಸ್ ಪ್ರತಿ ನೀಡಲು ಲಂಚಕ್ಕೆ ಬೇಡಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳಂದೂರು ಠಾಣೆಯ ಇನ್ಸ್ಪೆಕ್ಟರ್ ರಮೇಶ್ ರೊಟ್ಟಿಯನ್ನು ಸಸ್ಪೆಂಡ್ ಮಾಡಲಾಗಿದೆ. ಅಮಾನತುಗೊಳಿಸಿ, ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಬಿಪಿಸಿಎಲ್ ನಿವೃತ್ತ ಅಧಿಕಾರಿ ಶಿವಕುಮಾರ್ ಇನ್ಸ್ಪೆಕ್ಟರ್ ರಮೇಶ್ ರೊಟ್ಟಿ ಲಂಚ ಕೇಳಿದ್ದಾರೆ ಎನ್ನುವ ಆರೋಪ ಮಾಡಿದ್ದರು. ವರದಿ ನೀಡುವಂತೆ ಕಮಿಷನರ್ ಸೀಮಂತ ಕುಮಾರ್ ಸೂಚನೆ ನೀಡಿದರು. ಕಮಿಷನರ್ ಗೆ ವೈಟ್ ಫೀಲ್ಡ್ ಡಿಸಿಪಿ ಪರಶುರಾಮ್ ಈ ಕುರಿತು ವರದಿ ಸಲ್ಲಿಸಿದರು. ಡಿಸಿಪಿ ವರದಿ ಆಧಾರದ ಮೇಲೆ ಪಿಐ ಪರಮೇಶ್ ರೊಟ್ಟಿ ಸಸ್ಪೆಂಡ್ ಮಾಡಿ ಸೀಮಂತ ಕುಮಾರ್ ಸಿಂಗ್ ಅದೇಶಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸುದ್ದು, ಡ್ರಗ್ಸ್ ದಂಧೆ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. MDMA ಮತ್ತು ಇತರೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಡ್ರಗ್ಸ್ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದಾರೆ. ಸುಮಾರು 75 ಲಕ್ಷ ಮೌಲ್ಯದ 752 ಗ್ರಾಂ ಕೊಕೇನ್ ಜಪ್ತಿ ಮಾಡಿದ್ದಾರೆ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮಲ್ಲೇಶ್ವರಂ ಪೊಲೀಸ್ರು ಸಹ ಗಾಂಜಾ ಮಾರುತಿದೆ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಬಂಧಿತರಿಂದ 80,000 ಮೌಲ್ಯದ 885 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ರೈಲ್ವೆ ಬಳಿ ಮೆಟ್ಟಿಲುಗಳ ಮೇಲೆ ಗಾಂಜಾ ಮಾರಾಟ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಮತ್ತೊಂದು ಪ್ರಕರಣದಲ್ಲಿ ವೀಡ್ ಆಯಿಲ್ ಮಾರುತಿದವನು ಅರೆಸ್ಟ್ ಮಾಡಿದ್ದಾರೆ.

Read More