Author: kannadanewsnow05

ಬೆಂಗಳೂರು : ಹಾಸನ ಜಿಲ್ಲೆ ಹೊಳೆನರಸೀಪುರ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಅರ್ಜಿಯ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿ ಆದೇಶ ಹೊರಡಿಸಿತು. ಹೊಳೆನರಸೀಪುರ ಪ್ರಕರಣದಲ್ಲಿ ಸಾಕ್ಷಿಯ ವಿಚಾರಣೆಯೇ ಆರಂಭವಾಗಿಲ್ಲ. ವಿಚಾರಣೆ ಆರಂಭವಾಗದೆ ಜೈಲಿನಲ್ಲಿ ಕಳೆಯುವಂತಾಗಿದೆ. ಈ ಕೇಸ್ ನಲ್ಲಿ 150 ಸಾಕ್ಷಿಗಳ ವಿಚಾರಣೆ ಆಗಬೇಕಿದೆ. ಸದ್ಯಕ್ಕೆ ವಿಚಾರಣೆ ಮುಗಿಯುವ ಸಾಧ್ಯತೆ ಇಲ್ಲ. ಹಾಗಾಗಿ ಜಾಮೀನು ನೀಡಬೇಕು. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣರನ್ನು ಪೊಲೀಸರು ವಶಕ್ಕೂ ತೆಗೆದುಕೊಂಡಿಲ್ಲ. ಹೀಗಾಗಿ ಷರತ್ತು ವಿಧಿಸಿ ಜಾಮೀನು ನೀಡುವಂತೆ, ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಾಗಿ ಕೋರ್ಟಿಗೆ ಮನವಿ ಮಾಡಿದರು. ಈ ವೇಳೆ ಸರ್ಕಾರದ ಪರವಾಗಿ ಎಸ್ ಪಿ ಪಿ ರವಿವರ್ಮ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದು, ಒಂದು ಕೇಸ್ನಲ್ಲಿ ಈಗಾಗಲೇ ಸಾಕ್ಷಿಗಳ ವಿಚಾರಣೆ ಅಂತಿಮ ಹಂತದಲ್ಲಿದೆ. ಕೋರ್ಟ್ ವಿಚಾರಣೆ ಅಡ್ಡಿಪಡಿಸಲು ಪ್ರಜ್ವಲ್ ರೇವಣ್ಣ…

Read More

ಚಾಮರಾಜನಗರ : ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆಯಲ್ಲಿ, ಪೋಷಕರು ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿರುವ ಘಟನೆ ಹೊಮ್ಮ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಇದೀಗ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಒಂದಕ್ಕೆ ಕುಸಿತವಾಗಿದೆ. ಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಟಿಸಿ ಪಡೆದು ಪೋಷಕರು ಮಕ್ಕಳನ್ನು ಬೇರೆ ಬೇರೆ ಶಾಲೆಗೆ ಸೇರಿಸಿದ್ದಾರೆ. ಹಾಗಾಗಿ ಇದೀಗ ಹೊಮ್ಮ ಸರ್ಕಾರಿ ಪ್ರಾಥಮಿಕ ಶಾಲೆ ಮುಚ್ಚುವ ಹಂತಕ್ಕೆ ಬಂದಿದೆ. ಕಳೆದ 2024 25 ನೇ ಶೈಕ್ಷಣಿಕ ವರ್ಷದಲ್ಲಿ 22 ವಿದ್ಯಾರ್ಥಿಗಳಿದ್ದರು. ಈಗಾಗಲೇ ಪೋಷಕರು 12 ವಿದ್ಯಾರ್ಥಿಗಳ ಟಿಸಿ ಪಡೆದಿದ್ದಾರೆ ಉಳಿದವರಿಂದಲೂ ಟಿಸಿ ಪಡೆಯಲು ಶಾಲೆಗೆ ಅರ್ಜಿ ಸಲ್ಲಿಕೆಯಾಗಿದೆ. ಶಾಲೆಯಲ್ಲಿ ಇದೀಗ ಕೇವಲ ಒಬ್ಬ ವಿದ್ಯಾರ್ಥಿ ಮತ್ತು ಇಬ್ಬರು ಶಿಕ್ಷಕರು ಮಾತ್ರ ಇದ್ದಾರೆ. ಈ ಹಿಂದೆ ಶಿಕ್ಷಕರು ಸರಿಯಾಗಿ ಪಾಠ ಮಾಡುತ್ತಿಲ್ಲ ಎಂದು ಪ್ರತಿಭಟನೆ ನಡೆಸಿದ್ದರು. ಸರ್ಕಾರಿ ಶಾಲೆ ಶಿಕ್ಷಕರ ವಿರುದ್ಧ ಪೋಷಕರು ಪ್ರತಿಭಟನೆ ಮಾಡಿದ್ದರು. ಆದರೆ ಇದೀಗ ಮುಖ್ಯ ಅಡುಗೆ ಸಿಬ್ಬಂದಿಯಾಗಿ…

Read More

ಬೆಂಗಳೂರು : ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಗರ್ಲ್ ಮ್ಯಾನ್ ಶ್ರೀಧರ್ ಮತ್ತು ಕಾರು ಚಾಲಕ ಮಹೇಶಗೆ ಜಾಮೀನು ನೀಡಲಾಗಿದೆ.ಇಬ್ಬರಿಗೂ ಷರತ್ತು ಬದ್ಧ ಜಾಮೀನು ನೀಡಲಾಗಿದೆ. ನೆಲಮಂಗಲ JMFC ನ್ಯಾಯಾಲಯದಿಂದ ಇಬ್ಬರಿಗೂ ಜಮೀನು ನೀಡಿ ಆದೇಶ ಹೊರಡಿಸಲಾಗಿದೆ. ಪ್ರಕರಣ ಹಿನ್ನೆಲೆ ಕಾರುಗಳ ಓವರ್ ಟೆಕ್ ವಿಚಾರದಲ್ಲಿ ಗಲಾಟೆಯಾಗಿ ಕಾರಿನಲ್ಲಿದ್ದ ಮುಸ್ಲಿಂ ವ್ಯಕ್ತಿಗಳಿಗೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಬೆಂಬಲಿಗರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದ್ದು, ಇಂದು ಅನಂತ್ ಕುಮಾರ್ ಹೆಗಡೆ ಗನ್ ಮ್ಯಾನ್ ಹಾಗೂ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು.ಬೆಂಗಳೂರಿನ ದಾಬಸ್ ಪೇಟೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಗನ್ ಮ್ಯಾನ್ ಶ್ರೀಧರ್ ಹಾಗೂ ಚಾಲಕ ಮಹೇಶ್ ನನ್ನು ಬಂಧಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪದಲ್ಲಿ ಕೇಂದ್ರದ ಮಾಜಿ ಸಚಿವ, ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ…

Read More

ಬೆಂಗಳೂರು : ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಯವರು ಸೂಕ್ತವಾದ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ದೂರ ನೋಡಿದರು ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಅವರ ವಿರುದ್ಧ ಜೆಡಿಎಸ್ ಮುಖಂಡ ಪ್ರದೀಪ್ ಎನ್ನುವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಹೌದು ಸಚಿವ ಜಮೀರ್ ಅಹಮದ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು, ಜೆಡಿಎಸ್ ಕಾನೂನು ವಿಭಾಗದ ಪ್ರದೀಪ್ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಮತ್ತು ಆರ್ಥಿಕ ಇಲಾಖೆಯ ಅನುಮತಿ ಪಡೆಯದೆ ಅನುದಾನ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸುಮಾರು 831 ಕೋಟಿ ಅನುದಾನ ವಂಚಿಸಿದ ಬಗ್ಗೆ ರಾಜ್ಯಪಾಲರಿಗೆ ಪ್ರದೀಪ್ ದೂರು ನೀಡಿದ್ದಾರೆ. ಅಕ್ರಮದ ತನಿಖೆ ಮತ್ತು ಪ್ರಾಸಿಕ್ಯೂಷನ್ ತನಿಖೆಗೆ ಆದೇಶಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಮುಖಂಡ ಪ್ರದೀಪ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

Read More

ಚಿತ್ರದುರ್ಗ : ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಲಾಗಿದೆ ಎಂದು ಶಂಕಿಸಿ ಆಟೋ ಚಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಹುಣುವಿನಡು ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಹುಣವಿನಡು ಗ್ರಾಮದಲ್ಲಿ ಆಟೋ ಚಾಲಕನಾದ ಶ್ರೀನಿವಾಸ್ (30) ಎನ್ನುವ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಮೂರ್ನಾಲ್ಕು ಜನರ ಗುಂಪಿನಿಂದ ಶ್ರೀನಿವಾಸ್ ಕೊಲೆ ನಡೆದಿದೆ. ಮಹಿಳೆ ಜೊತೆ ಅನಂತ ಸಂಬಂಧ ಹಿನ್ನೆಲೆಯಲ್ಲಿ ಈ ಒಂದು ಭೀಕರವಾದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗದ ಡಿವೈಎಸ್ಪಿ ಶಿವಕುಮಾರ್ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ಮಂಗಳೂರಿನ ಯೂನಿಸೆಕ್ಸ್ ಸಲೂನಿನ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಅನೈತಿಕ ಚಟುವಟಿಕೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಉರ್ವ ಠಾಣೆ ಪೋಲೀಸರು ದಾಳಿ ಮಾಡಿದ್ದಾರೆ.ಮಂಗಳೂರಿನ ಬಿಜೈ ನಲ್ಲಿರುವ ಸಿಕ್ಸ್ತ್ ಸೆನ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ್ದಾರೆ. ಈ ಒಂದು ಪಾರ್ಲರ್ ಉಡುಪಿಯ ಬ್ರಹ್ಮಗಿರಿ ಮೂಲದ ಸುದರ್ಶನ್ ಗೆ ಸೇರಿದ್ದು, ಈ ಒಂದು ಮಸಾಜ್ ಪಾರ್ಲರ್ ನ ಟ್ರೇಡ್ ಲೈಸೆನ್ಸ್ ಅನ್ನು ರದ್ದುಗೊಳಿಸುವಂತೆ ಪೊಲೀಸರು ಪತ್ರ ಬರೆದಿದ್ದಾರೆ. ಉರ್ವ ಠಾಣೆ ಪೊಲೀಸರ ಪತ್ರದ ಆಧಾರದಲ್ಲಿ ಟ್ರೇಡ್ ಲೈಸೆನ್ಸ್ ಅನ್ನು ಮಂಗಳೂರು ನಗರ ಪಾಲಿಕೆ ಆಯುಕ್ತರು ಇದೀಗ ರದ್ದುಗೊಳಿಸಿದ್ದಾರೆ. ಉರ್ವ ಠಾಣೆಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Read More

ಹಾವೇರಿ : ಇಂದು ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಗಂಗೆಭಾವಿ ಕ್ರಾಸ್ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಎನ್ನುವ ಗುತ್ತಿಗೆದಾರರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಆಸ್ತಿಯ ವಿಚಾರಕ್ಕೆ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುಪಾರಿ ಕೊಟ್ಟು ಸಂಬಂಧಿಕರೇ ಶಿವಾನಂದ ಅವರನ್ನು ಕೊಲೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟಕ ಶಿಗ್ಗಾವಿ ಠಾಣೆ ಪೊಲೀಸ್ರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ಕೊಲೆ ಕುರಿತು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು ತನ್ನ ಅತ್ತಿಗೆ ಜೊತೆಗೆ ಬೇರೊಬ್ಬ ವ್ಯಕ್ತಿಯ ಜೊತೆ ಅಕ್ರಮ ಸಂಬಂಧದ ಬಗ್ಗೆ ಹೇಳಿಕೊಂಡು ಓಡಾಡುತ್ತಿದ್ದವನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಮುನಿರೆಡ್ಡಿ ಲೇಔಟ್ ನ ಮನೆಯೊಂದರಲ್ಲಿ ಶೈಲೇಶ್ ಯಾದವ್ ಎನ್ನುವ ವ್ಯಕ್ತಿ ಭೀಕರವಾಗಿ ಕೊಲೆಯಾಗಿದ್ದಾನೆ. ಉತ್ತರ ಪ್ರದೇಶ ಮೂಲದ ಶೈಲಿಶ್ ಯಾದವ್ ಗೆ ಹಿಗ್ಗಾ ಮುಗ್ಗಾ ಥಳಿಸಿ ಕೊಲೆ ಮಾಡಿದ್ದಾರೆ. ಬಿರೇಂದ್ರ ಯಾದವ್, ಸತೀಶ್ ಹಾಗು ಅರುಣ್ ಯಾದವ್ ಎನ್ನುವರು ಶೈಲೇಶ್ ಯಾದವನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಆರೋಪಿ ಬೀರೇಂದ್ರ ಯಾದವ್ ತನ್ನ ಅತ್ತಿಗೆ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಆತನ ಬಗ್ಗೆ ಸಿಕ್ಕ ಸಿಕ್ಕವರ ಬಳಿ ಶೈಲೇಶ್ ಯಾದವ್ ಹೇಳುತ್ತಿದ್ದ. ಹಾಗಾಗಿ ಶೈಲೇಶ್ ಯಾದವ್ ನನ್ನು ಸತೀಶ್ ಮನೆಗೆ ಕರೆಸಿಕೊಂಡು ಮೂವರು ಥಳಿಸಿದ್ದಾರೆ. ಜೂನ್ 18 ರಂದು ಹಲ್ಲೆ ನಡೆಸಿ ಶೈಲೇಶ್ ಯಾದವನನ್ನು ಮೂವರು ಕೊಲೆ ಮಾಡಿದ್ದಾರೆ. ಎರಡು ದಿನಗಳ ಕಾಲ ಶೈಲೇಶ್ ಶವವನ್ನು ಸತೀಶ್ ಮನೆಯಲ್ಲಿಯೇ ಇರಿಸಿಕೊಂಡಿದ್ದರು. ಎರಡು…

Read More

ತುಮಕೂರು : ಪ್ರೇಮಿಗಳ ನಡುವೆ ರೀಲ್ಸ್ ಫೋಟೋಸ್ ಗಾಗಿ ಗಲಾಟೆ ನಡೆದಿದೆ.ಪ್ರಿಯಕರ ಜೊತೆಗೆ ಜಗಳ ಮಾಡಿದ ಯುವತಿ ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾಳೆ. ಚೈತನ್ಯ (22) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಹೊಸಹಳ್ಳಿಯಲ್ಲಿ ನಡೆದಿದೆ. ನಿನ್ನೆ ಸ್ಟೇಟಸ್ ನಲ್ಲಿ ಯುವತಿ ಚೈತನ್ಯ ರಿಲ್ಸ ಹಾಕಿದ್ದಳು. ನಿನ್ನೆ ರಾತ್ರಿ ಚೈತನ್ಯ ಮನೆಯ ಬಳಿ ಬಂದಿದ್ದ. ತಾಯಿ ಇದ್ದರೂ ಬಾಗಿಲು ಹಾಕಿಕೊಂಡು ಇಬ್ಬರೂ ಜಗಳ ಮಾಡಿದ್ದಾರೆ. ಪ್ರಿಯಕರೊಂದಿಗೆ ಜಗಳ ಆಡಿದ ನಂತರ ಚೈತನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚೈತನ್ಯ ಸಂಬಂಧಿಗೆ ಕರೆ ಮಾಡಿ ಪ್ರಿಯಕರ ವಿಜಯ್ ಈ ಕುರಿತು ವಿಚಾರ ತಿಳಿಸಿದ್ದ. ಹೊಸಹಳ್ಳಿಯಲ್ಲಿ ತಾಯಿಯೊಂದಿಗೆ ಚೈತನ್ಯ ವಾಸವಿದ್ದಳು. ಅಂತಿಮ ಪದವಿ ವ್ಯಾಸ ಮಾಡುತ್ತಿದ್ದಳು. ಮಾಡೆಲಿಂಗ್ ಮತ್ತು ಮೇಕಪ್ ಆರ್ಟಿಸ್ಟ್ ಸಹ ಆಗಿದ್ದಳು. ಪಕ್ಕದ ಊರಿನ ವಿಜಯ್ ಕುಮಾರ್ ಜೊತೆಗೆ ಚೈತನ್ಯ ಪ್ರೀತಿಯಲ್ಲಿ ಬಿದ್ದಿದ್ದಳು. ವಿಜಯ್ ಕುಮಾರ್ ಕಾರು ಚಾಲಕನಾಗಿದ್ದ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದ್ದು, ಬಳಿಕ…

Read More

ಬೆಂಗಳೂರು : ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ರಂಚ ಪಡೆದಿರುವ ಆರೋಪದ ಕುರಿತಂತೆ ಕಲ್ಬುರ್ಗಿ ಜಿಲ್ಲೆಯ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಹಾಗೂ ಸಚಿವ ಜಮೀರ್ ಅಹ್ಮದ್ ಕಾರ್ಯದರ್ಶಿಯಾಗಿರುವ ಸರ್ಫರಾಜ್ ಖಾನ್ ಮಾತನಾಡಿರುವ ಆಡಿಯೋ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ನೈಜ ಹೋರಾಟಗಾರರ ವೇದಿಕೆ ಅಧ್ಯಕ್ಷ HM ವೆಂಕಟೇಶ್ ಅವರು ಈ ಕುರಿತು ದೂರು ನೀಡಿದ್ದಾರೆ. ಲಂಚ ಕೊಟ್ಟರೆ ನಿವೇಶನ ಕೊಡುವುದಾಗಿ ಮಾತನಾಡಿದ್ದಾರೆ. ಲೋಕಾಯುಕ್ತರು ಸುಮೋಟೋ ಕೇಸ್ ದಾಖಲಿಸಿಕೊಳ್ಳಬೇಕಿತ್ತು. ಜನರ ತೆರಿಗೆ ಹಣವನ್ನು ಇವರು ಬಳಸಿಕೊಂಡು ವಂಚನೆ ಮಾಡಿದ್ದಾರೆ. ಸರ್ಫರಾಜ್ ಖಾನ್ ಜಮೀರ್ ಆಪ್ತ ಕಾರ್ಯದರ್ಶಿಯಾಗಿದ್ದಾರೆ. ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿ ಮನೆಗಳನ್ನು ಹಂಚಬೇಕಿತ್ತು. ದುರ್ಬಲರಿಗೆ ಹಂಚಿಕೆಯಾಗಬೇಕಿದ್ದ ಮನೆಗಳಿಗೆ ಹಣ ಪಡೆಯುತ್ತಿದ್ದಾರೆ. ಮನೆಗಳ ಹಂಚಿಕೆಗೆ ಪ್ರತಿ ಮನೆಗೆ ಹತ್ತು ಸಾವಿರ ಹಣ ಪಡೆಯಲಾಗಿದೆ. ಬಿ ಆರ್ ಪಾಟೀಲ್, ಸರ್ಪರಾಜ್ ಮಾತನಾಡಿರುವುದರಲ್ಲಿ ಸತ್ಯಾಂಶ ಇರಬಹುದು. ಹಾಗಾಗಿ ಆಡಿಯೋ ಇಟ್ಟುಕೊಂಡು ತನಿಖೆ ನಡೆಸುವಂತೆ HM ವೆಂಕಟೇಶ್ ಲೋಕಾಯುಕ್ತಕ್ಕೆ…

Read More