Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು: ಮಾಜಿ ಸಿಎಂ ಬಿಎಸ್ವೈ (BSY) ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಈ ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ಟ್ರಯಲ್ಗೆ ಅನುಮತಿ ನೀಡಿತ್ತು. ಅದಾದ ಬಳಿಕ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು. ಸದ್ಯ ಈ ಸಂಬಂಧ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಏನಿದು ಪ್ರಕರಣ? ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಬಿಎಸ್ವೈ ಮೇಲಿದೆ. ಸಹಾಯ ಕೇಳಿ ಬಂದಾಗ ಯಡಿಯೂರಪ್ಪನವರು ಮಗಳ ಮೇಲೆ ಲೈಂಗಿಕ…
ಬೆಂಗಳೂರು : ಸ್ಮಾರ್ಟ್ ಮೀಟರ್ ಹಗರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್ ವಿರುದ್ಧದ್ದ ಖಾಸಗಿ ದೂರು ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕೆಜೆ ಜಾರ್ಜ್ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣಕ್ಕೆ ಸಂಬಂಧಸಿದಂತೆ ಬಿಜೆಪಿ ನಾಯಕರು ಸಲ್ಲಿಸಿದ್ದ ಪ್ರಕರಣ ಇದೀಗ ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಈ ಒಂದು ಪ್ರಕರಣದಿಂದ ಸಚಿವ ಕೆಜೆ ಜಾರ್ಜ್ ಗೆ ಸದ್ಯಕ್ಕೆ ರಿಲೀಫ್ ಸಿಕ್ಕಂತಾಗಿದೆ.
ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಬೆಂಗಳೂರು ಹೋಟೆಲುಗಳ ಸಂಘ (ರಿ) ಹೈಕೋರ್ಟ್ ಮಟ್ಟಿಲೇರಿದೆ. ಅರ್ಜಿದಾರ ಸಂಘಟನೆಯ ಸದಸ್ಯರು ನಡೆಸುತ್ತಿರುವ ಸಂಸ್ಥೆಗಳಲ್ಲಿ ಕೈಗಾರಿಕೆಗಳ ಸ್ವರೂಪವನ್ನು ಆಧರಿಸಿ ಕಾರ್ಖಾನೆ ಕಾಯ್ದೆ, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳಡಿ ನೋಂದಾಯಿಸಿಕೊಳ್ಳಲಾಗಿದೆ. ಈ ಕಾಯಿದೆಗಳು ಕೆಲಸದ ಸಮಯ, ಸಾಪ್ತಾಹಿಕ ರಜಾದಿನಗಳು, ವೇತನದೊಂದಿಗೆ ರಜೆ ಇತ್ಯಾದಿಗಳನ್ನು ಒಳಗೊಂಡಂತೆ ಉದ್ಯೋಗಿಗಳ ಆರೋಗ್ಯ, ಕಲ್ಯಾಣವನ್ನು ನಿಯಂತ್ರಿಸುತ್ತಿವೆ. ಅಲ್ಲದೆ, ಕರ್ನಾಟಕ ಕೈಗಾರಿಕಾ ಉದ್ಯೋಗ ನಿಯಮಗಳಲ್ಲಿ ಸೇರಿಸಿರುವ ಸ್ಥಾಯಿ ಆದೇಶಗಳ ಷರತ್ತುಗಳ ಪ್ರಕಾರ ವೇತನಸಹಿತ ರಜೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಹೀಗಾಗಿ ಕಾನೂನು ಮೂಲಕ ಉದ್ಯೋಗದಾತರು ಉದ್ಯೋಗಿಗಳಿಗೆ ಸಾಕಷ್ಟು ರಜೆಗಳನ್ನು ನೀಡುವುದು ಕಡ್ಡಾಯವಾಗಿದೆ. ಅದರಂತೆ ಕಾರ್ಮಿಕರು ಅಥವಾ ನೌಕರರ ಆರೋಗ್ಯ, ಯೋಗಕ್ಷೇಮ, ಸುರಕ್ಷತೆ ಕೆಲಸದ…
ಬೆಂಗಳೂರು : ಬೆಂಗಳೂರು ಟೆಕ್ಕಿ ತೇಜಸ್ ಎಂಬವರನ್ನು ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಮೋಸಮಾಡಿ 48 ಲಕ್ಷ ರೂ. ವಂಚಿಸಿದ ವಿಜಯ್ ಗುರೂಜಿಯನ್ನು ಬೆಂಗಳೂರಿನ ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಔಷಧಿಯಿಂದ ಕಿಡ್ನಿ ಹಾನಿಯಾದ ಬಳಿಕ ತೇಜಸ್ ದೂರು ನೀಡಿದ್ದರು. ಪ್ರಕರಣದಲ್ಲಿ ತನಿಖೆ ಮುಂದುವರಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೇಜಸ್ ಎಂಬ ಟೆಕ್ಕಿ ಲೈಂಗಿಕ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಕೆಂಗೇರಿ ಸನೈರಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹೋಗಿ ಬರುವಾಗ ರಸ್ತೆ ಪಕ್ಕದ ಟೆಂಟ್ನಲ್ಲಿ ‘‘ಲೈಂಗಿಕ ಸಮಸ್ಯೆಗೆ ಚಿಕಿತ್ಸೆ’’ ಎಂಬ ಬೋರ್ಡ್ ನೋಡಿ ಒಳಗೆ ಹೋಗಿದ್ದರು. ಅಲ್ಲಿ ಭೇಟಿಯಾದ ವ್ಯಕ್ತಿ ವಿಜಯ್ ಗುರೂಜಿಯನ್ನು ಪರಿಚಯಿಸಿ, ಆಯುರ್ವೇದಿಕ್ ಚಿಕಿತ್ಸೆ ಮೂಲಕ ಸಮಸ್ಯೆ ಗುಣವಾಗುತ್ತದೆ ಎಂದು ಭರವಸೆ ನೀಡಿದ್ದರು. ತೇಜಸ್ ನಂತರ ಟೆಂಟ್ ಗುರೂಜಿಯನ್ನು ಭೇಟಿಯಾಗಿ ‘ದೇವರಾಜ್ ಬೂಟಿ’ ಎಂಬ 1 ಗ್ರಾಂ ಔಷಧಿಗೆ 1.60 ಲಕ್ಷ ರೂ. ದರ ಫಿಕ್ಸ್ ಮಾಡಲಾಗಿತ್ತು. ಯಶವಂತಪುರದ ವಿಜಯಲಕ್ಷ್ಮೀ ಆಯುರ್ವೇದಿಕ್ ಶಾಪ್ಗೆ ಹೋಗಿ ಮಾತ್ರೆಗಳು…
ಬೆಂಗಳೂರು : ರಾಜ್ಯದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಜೋರಾಗಿ ನಡೆಯುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿ ಉಪಹಾರ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಈ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಾತನಾಡಿ ನನ್ನ ಮನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನು ಕರೆಯುತ್ತೇನೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಅಗತ್ಯ ಬಿದ್ರೆ ನಮ್ಮ ಮನೆಗೂ ಬ್ರೇಕ್ಫಾಸ್ಟ್ ಗೆ ಕರೆಯುತ್ತೇನೆ. ಇಬ್ಬರನ್ನು ನನ್ನ ಮನೆಗೆ ಬ್ರೇಕ್ ಫಾಸ್ಟ್ ಗೆ ಯಾಕೆ ಕರೆಯಬಾರದು? ಪಕ್ಷದಲ್ಲಿ ಸದ್ಯ ಎಲ್ಲವೂ ತಿಳಿಯದೆ ಖುಷಿಯ ವಾತಾವರಣ ಇದೆ. 2ನೇ ಬಾರಿಯೂ ನನ್ನ ಕರೆದಿಲ್ಲ. ಬ್ರೇಕ್ ಫಾಸ್ಟ್ ಗೆ ನನ್ನ ಕರೆದಿದ್ದರೆ ಹೋಗುತ್ತಿದ್ದೆ ಎಂದು ತಿಳಿಸಿದರು. ಗೃಹ ಸಚಿವ ಜಿ.ಪರಮೇಶ್ವರ್ ಸಿಎಂ ಆಗಲಿ ಎಂದು ಅಭಿಮಾನಿಗಳು ಮುಡಿ ವಿಚಾರವಾಗಿ ಎಲ್ಲ ನಾಯಕರ ಅಭಿಮಾನಿಗಳಿಗೆ ಸಿಎಂ ಆಗಲಿ ಅಂತ ಆಸೆ ಇರುತ್ತದೆ ತಮ್ಮ ನಾಯಕರು ಮುಖ್ಯಮಂತ್ರಿ ಆಗಲಿ ಅಂತ…
ನವದೆಹಲಿ : 2025-26ನೇ ಆರ್ಥಿಕ ವರ್ಷದ ಮೊದಲ 6 ತಿಂಗಳಲ್ಲಿ (ಏಪ್ರಿಲ್-ಸೆಪ್ಟೆಂಬರ್) ಭಾರತ ಹಾಗೂ ದೇಶದ ಯಾವ ರಾಜ್ಯಗಳಲ್ಲಿ ಎಷ್ಟು ವಿದೇಶಿ ನೇರ ಬಂಡವಾಳ (ಎಫ್ಡಿಐ) ಹರಿದು ಬಂದಿದೆ ಎಂಬ ಅಂಕಿ-ಅಂಶ ವನ್ನು ಸರ್ಕಾರ ಬಿಡುಗಡೆ ಮಾಡಿದ್ದು, ದೇಶದಲ್ಲೇ ಕರ್ನಾಟಕ 2ನೇ ಸ್ಥಾನ ಪಡೆದಿದೆ. ರಾಜ್ಯಗಳ ಪೈಕಿ ಮಹಾರಾಷ್ಟ್ರಕ್ಕೆ ಅತಿ ಹೆಚ್ಚು (95 ಸಾವಿರ ಕೋಟಿ ರು.) ಹೂಡಿಕೆ ಹರಿದುಬಂದಿದ್ದರೆ, 84.2 ಸಾವಿರ ಕೋಟಿ ರು. ಹೂಡಿಕೆ ಪಡೆಯುವ ಮೂಲಕ ಕರ್ನಾಟಕ 2ನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿರುವ ತಮಿಳುನಾಡು 32 ಸಾವಿರ ಕೋಟಿ ರು., ಹರ್ಯಾಣ 28.8 ಸಾವಿರ ಕೋಟಿ ರು., ದೆಹಲಿ 20.6 ಸಾವಿರ ಕೋಟಿ ರು., ಗುಜರಾತ್ 20 ಸಾವಿರ ಕೋಟಿ ರು. ಹಾಗೂ ತೆಲಂಗಾಣಕ್ಕೆ 10 ಸಾವಿರ ಕೋಟಿ ರು. ಹೂಡಿಕೆ ಆಕರ್ಷಿಸಿವೆ.
ಬೆಂಗಳೂರು : ರಾಜ್ಯದಲ್ಲಿ ಕಳೆದ 15 ದಿನಗಳಿಂದ ಕುರ್ಚಿ ಕದನ ಜೋರಾಗಿತ್ತು. ಕಳೆದ ಶನಿವಾರವಷ್ಟೇ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಹ್ವಾನಿಸಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕುರ್ಚಿ ಕದನಕ್ಕೆ ಫುಲ್ ಸ್ಟಾಪ್ ಹಾಕಿದ್ದರು. ಇದೀಗ ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಖಾಸಗಿ ನಿವಾಸಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಅವರನ್ನು ಡಿಕೆ ಶಿವಕುಮಾರ್ ಉಪಹಾರ ಕೂಟಕ್ಕೆ ಅಧಿಕೃತವಾಗಿ ಆಹ್ವಾನಿಸಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೂಡ ಭಾರಕೂಟಕ್ಕೆ ಬರುವುದಾಗಿ ಸಿಎಂ ಸಿದ್ದರಾಮಯ್ಯ ಸಹ ತಿಳಿಸಿದ್ದರು. ಡಿಸಿಎಂ ಆಹ್ವಾನ ಒಪ್ಪಿದ ಸಿಎಂ ಸಿದ್ದರಾಮಯ್ಯ ತಮ್ಮ ಆಹ್ವಾನದಂತೆ ಮನೆಗೆ ಬರುವುದಾಗಿ ತಿಳಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ. ಉಪಹಾರದ ಜೊತೆಗೆ ಒಂದಷ್ಟು ರಾಜಕೀಯ ಬೆಳವಣಿಗೆಗಳ ಚರ್ಚೆ ನಡೆಸಲಿದ್ದಾರೆ. ಇತ್ತ ಅಧಿಕಾರ ಹಂಚಿಕೆಗೆ ಕಿತ್ತಾಡಿದ್ದ ಉಭಯ ನಾಯಕರಿಂದ…
ಬೆಂಗಳೂರು : ರಾಜ್ಯದಲ್ಲಿ ಕಳೆದ 15 ದಿನಗಳಿಂದ ಕುರ್ಚಿ ಕದನ ಜೋರಾಗಿತ್ತು. ಕಳೆದ ಶನಿವಾರವಷ್ಟೇ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಹ್ವಾನಿಸಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕುರ್ಚಿ ಕದನಕ್ಕೆ ಫುಲ್ ಸ್ಟಾಪ್ ಹಾಕಿದ್ದರು. ಮತದ ಬಳಿಕ ಎಂದು ಬೆಂಗಳೂರಿನ ಸದಾಶಿವನಗರ್ದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಖಾಸಗಿ ನಿವಾಸಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಅವರನ್ನು ಡಿಕೆ ಶಿವಕುಮಾರ್ ಉಪಹಾರಕೂಟಕ್ಕೆ ಅಧಿಕೃತವಾಗಿ ಆಹ್ವಾನಿಸಿದ್ದರು ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೂಡ ಭಾರಕೂಟಕ್ಕೆ ಬರುವುದಾಗಿ ಸಿಎಂ ಸಿದ್ದರಾಮಯ್ಯ ಸಹ ತಿಳಿಸಿದ್ದರು. ಡಿಸಿಎಂ ಆಹ್ವಾನ ಒಪ್ಪಿದ ಸಿಎಂ ಸಿದ್ದರಾಮಯ್ಯ ತಮ್ಮ ಆಹ್ವಾನದಂತೆ ಮನಗೆ ಬರುವುದಾಗಿ ತಿಳಿಸಿದ್ದಾರೆ. ಇಂದು ಬೆಳಗ್ಗೆ 9.30ಕ್ಕೆ ಉಪಹಾರದ ಜೊತೆಗೆ ಒಂದಷ್ಟು ರಾಜಕೀಯ ಬೆಳವಣಿಗೆಗಳ ಚರ್ಚೆ ನಡೆಸಲಿದ್ದಾರೆ. ಇತ್ತ ಅಧಿಕಾರ ಹಂಚಿಕೆಗೆ ಕಿತ್ತಾಡಿದ್ದ ಉಭಯ ನಾಯಕರಿಂದ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಶುರುವಾಗಿದೆ ಎಂದು…
ಬೆಂಗಳೂರು : ನ್ಯಾಯಬೆಲೆ ಅಂಗಡಿಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು QR ಸ್ಕ್ಯಾನ್ ಕಡ್ಡಾಯ ಮಾಡುವಂತೆ ಸಿಎಂ ಸಿದ್ದರಾಮಯ್ಯ ಆಹಾರ ಇಲಾಖೆಗೆ ಸೂಚನೆ ನೀಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5ಕೆ.ಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಇಂದಿರಾ ಕಿಟ್ನಲ್ಲಿ ಏನೆಲ್ಲಾ ಸಾಮಗ್ರಿ ಸಿಗಲಿವೆ? ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು ಕೆಜಿ ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು. ಪ್ರತಿ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್ ಅಗತ್ಯವಿದ್ದು, ಇದಕ್ಕಾಗಿ ಪ್ರತಿ ತಿಂಗಳು ರೂ.466 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಈ ಯೋಜನೆಯಡಿ ಪ್ರತಿ ತಿಂಗಳು ಒಟ್ಟು 18628 ಮೆ.ಟನ್ ತೊಗರಿ ಬೇಳೆ ಮತ್ತು ತಲಾ 12419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯ ಅಂದಾಜಿಸಲಾಗಿದೆ. ಆಹಾರ ಕಿಟ್ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿ ಬೇಳೆ ಗರಿಷ್ಟ ಪ್ರಮಾಣದಲ್ಲಿ ನೀಡಲು ಕ್ರಮ…
ಪರಿಚಯ: ವೈದಿಕ ಜ್ಯೋತಿಷದಲ್ಲಿ “#ಪಿತೃ #ದೋಷ” ಒಂದು ಅತ್ಯಂತ ಮಹತ್ವದ ಮತ್ತು ವ್ಯಾಪಕವಾಗಿ ಚರ್ಚಿತವಾದ ಪರಿಕಲ್ಪನೆಯಾಗಿದೆ. ಇದು ಕೇವಲ ಜ್ಯೋತಿಷ್ಯ ಯೋಗವಲ್ಲ, ಬದಲಿಗೆ ವೈದಿಕ ಸಂಸ್ಕೃತಿಯಲ್ಲಿ ವರ್ಣಿಸಲಾದ ಪಿತೃಗಳು, ಶ್ರಾದ್ಧ-ತರ್ಪಣ, ಋಣ-ತ್ರಯ (ದೇವ-ಋಷಿ-ಪಿತೃ) ಮತ್ತು ಕರ್ಮಬಂಧನದ ವಿಶಾಲ ದಾರ್ಶನಿಕ ಹಿನ್ನೆಲೆಯೊಂದಿಗೆ ಸಂಬಂಧ ಹೊಂದಿರುವ ಸಿದ್ಧಾಂತವಾಗಿದೆ. ಜನ್ಮಕುಂಡಲಿಯಲ್ಲಿ ನಿರ್ದಿಷ್ಟ ಗ್ರಹ ಸ್ಥಿತಿಗಳು, ವಿಶೇಷವಾಗಿ ಸೂರ್ಯ, ರಾಹು, ಶನಿ ಮತ್ತು ಹನ್ನೆರಡನೇ, ಒಂಬತ್ತನೇ, ಐದನೇ ಭಾವಗಳ ಸ್ಥಿತಿಗಳು ಪಿತೃ ದೋಷದ ಪ್ರಮುಖ ಕಾರಣಗಳೆಂದು ಪರಿಗಣಿಸಲಾಗಿದೆ. ಶಾಸ್ತ್ರಗಳಲ್ಲಿ ಹೇಳಲಾಗಿದೆ, ಪಿತೃಗಳು ತೃಪ್ತರಾದರೆ ವಂಶದಲ್ಲಿ ಸಮೃದ್ಧಿ ಬರುತ್ತದೆ, ಮತ್ತು ಅಪ್ರಸನ್ನರಾದರೆ ವಂಶ-ರಕ್ಷಣೆ, ಸಂತಾನ-ಲಾಭ ಮತ್ತು ಪುರುಷಾರ್ಥಗಳಲ್ಲಿ ಅಡಚಣೆಗಳು ಉದ್ಭವಿಸುತ್ತವೆ. “ಪಿತೃಣಾಂ ತೃಪ್ತಿರಸ್ಯ ಲೋಕಸ್ಯ ಸ್ಥಿರತಾ” — (ಗೃಹ್ಯಸೂತ್ರ) ಅರ್ಥಾತ್, ಪಿತೃಗಳ ತೃಪ್ತಿಯಿಂದಲೇ ಕುಲದ ಸ್ಥಿರತೆ ಸಾಧ್ಯ. ಈ ಲೇಖನದಲ್ಲಿ ಪಿತೃ ದೋಷದ ಶಾಸ್ತ್ರೀಯ ವ್ಯಾಖ್ಯಾನ, ಕುಂಡಲಿ ಆಧಾರಿತ ಕಾರಣಗಳು, ಕರ್ಮ-ಹಿನ್ನೆಲೆ, ಪುರಾಣಗಳಲ್ಲಿ ನೀಡಲಾದ ಪುರಾವೆಗಳು ಮತ್ತು ಜ್ಯೋತಿಷ್ಯ ಪರಿಹಾರಗಳನ್ನು ವಿವರವಾಗಿ ವಿಶ್ಲೇಷಿಸಲಾಗಿದೆ. ಪ್ರಧಾನ ಗುರುಗಳು ಹಾಗೂ ದೈವಿಕ…














