Subscribe to Updates
Get the latest creative news from FooBar about art, design and business.
Author: kannadanewsnow05
ಚಿತ್ರದುರ್ಗ : ಹೊಳೆನರಸೀಪುರ ಠಾಣೆಯಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ದೂರು ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೆಗೌಡನನ್ನು ಚಿತ್ರದುರ್ಗದ ಹಿರಿಯೂರಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಮೇ 1 ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ವಕೀಲ ದೇವರಾಜೇಗೌಡ ವಿರುದ್ಧ ಲೈಂಗಿಕ ದೌರ್ಜನ್ಯ ಕುರಿತು ದೂರು ದಾಖಲಿಸಿದ್ದಳು. ದಾಖಲಾಗಿರುವ ದೂರಿನ ಆಧಾರದ ಮೇಲೆ ಇದೀಗ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಪೊಲೀಸರು ದೇವರಾಜೇಗೌಡನನ್ನು ವಶಪಡಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಅಜ್ಞಾತ ಸ್ಥಳದಲ್ಲಿ ಇದ್ದು ಮೂರು ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದ ದೇವರಾಜೇಗೌಡ, ಸಂತ್ರಸ್ತ ಮಹಿಳೆ ತನ್ನ ಗಂಡನ ಜೊತೆ ಮಾತನಾಡಿರುವ ಒಂದು ಆಡಿಯೋ ಹಾಗೂ ಶಿವರಾಮೇಗೌಡ ಡಿಕೆ ಶಿವಕುಮಾರ್ ಅವರಷ್ಟೇ ಮಾತನಾಡಿರುವ ಇನ್ನೊಂದು ಆಡಿಯೋ ಸೇರಿದಂತೆ ಪಟು ಮೂರು ಆಡಿಯೋಗಳನ್ನು ಬಿಡುಗಡೆ ಮಾಡಿದ್ದರು. ಇದೀಗ ಚಿತ್ರದುರ್ಗದ ಹಿರಿಯೂರಿನಲ್ಲಿ ದೇವರಾಜ ಗೌಡನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಹಿರಿಯೂರು ಠಾಣೆಯ…
ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ವಿರುದ್ಧವೂ ದೂರು ದಾಖಲಾಗಿದೆ. ಬಂಧನದ ಭೀತಿ ಎದುರಿಸುತ್ತಿರುವಂತ ಅವರು, ನಾಪತ್ತೆಯಾಗಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಇದೀಗ ಅಜ್ಞಾತ ಸ್ಥಳದಲ್ಲಿರುವ ಅವರು ನಾನು ಎಲ್ಲಿಯೂ ಕಾಣೆಯಾಗಿಲ್ಲ ಮೂರು ದಿನ ರಜೆ ಇದ್ದ ಕಾರಣ ದೇವಾಲಯಕ್ಕೆ ಬಂದಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸದ್ಯ ದೇವರಾಜೇಗೌಡ ಅಜ್ಞಾತ ಸ್ಥಳದಲ್ಲಿ ಇದ್ದು, ಅಲ್ಲಿಂದಲೇ ಮಾತನಾಡಿದ್ದು, ನಾನು ಎಲ್ಲೂ ಕಾಣೆಯಾಗಿಲ್ಲ. ಮೂರು ದಿನ ರಜೆ ಇದ್ದಿದ್ದರಿಂದ ದೇಗುಲಕ್ಕೆ ಬಂದಿದ್ದೇನೆ. ಕಾಣೆಯಾಗುವ ಪರಿಸ್ಥಿತಿ ನನಗೆ ಬಂದಿಲ್ಲ.3 ದಿನ ರಜೆ ಇದ್ದ ಕಾರಣ ಕುಟುಂಬದ ಸಮೇತ ದೇವಸ್ಥಾನಕ್ಕೆ ಬಂದಿದ್ದೇನೆ. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ವಕೀಲ ದೇವರಾಜ ಗೌಡ ತಿಳಿಸಿದ್ದಾರೆ. ಮತ್ತೆ 3 ಆಡಿಯೋ ಕ್ಲಿಪ್ ಬಿಡುಗಡೆ ಇದೆ ವೇಳೆ ಪ್ರಜ್ವಲ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ದಂತೆ ಅಜ್ಞಾತ ಸ್ಥಳದಲ್ಲಿರುವ ವಕೀಲ ದೇವರಾಜಗೌಡ ಶಿವರಾಮೇಗೌಡ ಜೊತೆ ಮಾತನಾಡಿರುವ ಎರಡು ಆಡಿಯೋ ತುಣುಕುಗಳನ್ನು ಬಿಡುಗಡೆ…
ಬೆಂಗಳೂರು : ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಯನ್ನು ದುಷ್ಕರ್ಮಿಗಳು ಕುತ್ತಿಗೆ ಹಿಸುಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಒಂಟಿಯಾಗಿದ್ದ ದಿವ್ಯ (36)ಎನ್ನುವ ಮಹಿಳೆಯನ್ನು ದುಷ್ಕರ್ಮಿಗಳು ಕೊಲೆಗೈದು ಚಿನ್ನದ ಸರ ಕಳ್ಳತನ ಮಾಡಲಾಗಿದೆ. ಮೃತ ದಿವ್ಯ ಪತಿ ಗುರುಮೂರ್ತಿ ಸಲೂನ್ ನಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಗುರುಮೂರ್ತಿ ಸಲೂನ್ ಗೆ ಹೋಗಿದ್ದಾಗ ದುಷ್ಕರ್ಮಿಗಳು ಕೊಲೆಗೈದಿದ್ದಾರೆ.ಮರಣೋತ್ತರ ಪರೀಕ್ಷೆಗಾಗಿ ದಿವ್ಯ ಶವವನ್ನು ಆರ್ ಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತಂತೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿ: ಸಿಡಿಲು ಬಡಿದು ರೈತ ಮಹಿಳೆ, ಶ್ವಾನ ಸಾವು ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದು ರೈತ ಮಹಿಳೆ ಹಾಗೂ ಶ್ವಾನ ದುರ್ಮರಣಕ್ಕೀಡಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೋನಸಪೂರ ಗ್ರಾಮದಲ್ಲಿ ನಡೆದಿದೆ.ಸ್ವಪ್ನಾ(48), ಸಿಡಿಲಿಗೆ ಬಲಿಯಾದ ರೈತ ಮಹಿಳೆ. ಮೃತ ಮಹಿಳೆಯ 20 ವರ್ಷದ ಮಗ ಜ್ಞಾನೇಶ್ವರ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ…
ಬೆಂಗಳೂರು : ವಾಟರ್ ಫಿಲ್ಟರ್ ರಿಪೇರಿಗೆ ಎಂದು ಬಂದ ವ್ಯಕ್ತಿ ಒಬ್ಬ ಮಹಿಳಾ ಟೆಕ್ಕಿ ಅಡುಗೆ ಮನೆಯಲ್ಲಿದ್ದಾಗ ಹಿಂದಿನಿಂದ ಹೋಗಿ ತಬ್ಬಿಕೊಂಡು ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಿಂದ ಆಘಾತಕ್ಕೊಳಗಾದ ಟೆಕ್ಕಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಮಹೇಂದ್ರನ್ (25) ಎಂಬುವನನ್ನು ಬಂಧಿಸಿದ್ದಾರೆ. ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುವ 30 ವರ್ಷದ ಮಹಿಳೆ ಬೆಂಗಳೂರಿನ ಸಿಂಗಸಂದ್ರದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾರೆ. ಕಳೆದ ಮೇ 4ರಂದು ಮನೆಗೆ ವಾಟರ್ ಪ್ಯೂರಿಫೈಯರ್ ಅಳವಡಿಸಿಕೊಂಡಿದ್ದರು. ಮಾರನೇ ದಿನ ಅದರಲ್ಲಿ ಸಮಸ್ಯೆ ಉಂಟಾಗಿದ್ದರಿಂದ ಮೊದಲ ದಿನ ಆಗಮಿಸಿದ್ದ ಸರ್ವೀಸ್ ಮಾಡಿಕೊಟ್ಟಿದ್ದ ಯುವಕನಿಗೆ ಕರೆ ಮಾಡಿ ರಿಪೇರಿ ಮಾಡಿಕೊಡುವಂತೆ ಕೋರಿದ್ದರು.ಅದರಂತೆ ಮೇ 5ರಂದು ಸಾಯಂಕಾಲ ಬಂದ ಸುರೇಂದ್ರ ತನ್ನ ಕೆಲಸ ಮುಗಿಸಿ ಅಡಿಗೆ ಮನೆಯಲ್ಲಿದ್ದ ಮಹಿಳಾ ಟೆಕ್ಕಿಯನ್ನು ತಬ್ಬಿ ಕೊಂಡಿದ್ದಾನೆ ಇದರಿಂದ ಕಂಗಾಲದ ಮೇಲೆ ಆತನನ್ನು ಅಡುಗೆ ಮನೆಯಿಂದ ಹೊರಗೆ ತಳ್ಳಿ ಮಾಡಿ ತನ್ನ ಸ್ನೇಹಿತನಿಗೆ…
ಕಲಬುರಗಿ : ಆಕೆ ಕೇಂದ್ರ ಲೋಕ ಸೇವಾ ಆಯೋಗ ನಡೆಸುವ (UPSC) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಳು. IAS ಅಧಿಕಾರಿಯಾಗುವ ಕನಸು ಕೂಡ ಕಂಡಿದ್ದಳು. ಆದರೆ ಯಾವುದೋ ಒಂದು ಕ್ಷುಲ್ಲಕ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ನಗರದ ಕೋಟನೂರು (ಡಿ) ಬಳಿ ಈ ಒಂದು ಘಟನೆ ನಡೆದಿದೆ. ನಡೆದಿದೆ. ಹೌದು ಕ್ಷುಲ್ಲಕ ಕಾರಣಕ್ಕೆ ನೇಣು ಬಿಗಿದುಕೊಂಡು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ನಗರದಲ್ಲಿ ನಡೆದಿದೆ. ಆಳಂದ ತಾಲೂಕಿನ ಕೌಲಗ ನಿವಾಸಿ ಪುಷ್ಪ (26) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ ಎಂದು ಹೇಳಲಾಗುತ್ತಿದೆ. ಮೃತ ಪುಷ್ಪಾ ಕಲಬುರ್ಗಿಯಲ್ಲಿ ಪುಷ್ಪ ಬಾಡಿಗೆ ರೂಂ ಪಡೆದುಕೊಂಡು ವಾಸವಾಗಿದ್ದಳು ಎಂದು ಹೇಳಲಾಗುತ್ತಿದ್ದು, ಮೃತ ಯುವತಿ ಕೇಂದ್ರ ಸರ್ಕಾರ ನಡೆಸುವ ಯುಪಿಎಸ್ಸಿ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿದ್ದಳು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ವಿಶ್ವವಿದ್ಯಾಲಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುಗುಗಳನ್ನು ಪಡೆಯುತ್ತಿದ್ದು, ಇದೀಗ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು,ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಾದ ಬೆನ್ನಲ್ಲಿಯೇ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ನಾಪತ್ತೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ವಿರುದ್ಧ ಆರೋಪಿಸಿದ್ದ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಇದೀಗ ನಾಪತ್ತೆಯಾಗಿದ್ದಾರೆ ಎಂದು ಕೇಳಿಬರುತ್ತಿದೆ. ಕಳೆದ ಹಲವು ದಿನಗಳಿಂದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಬಾರಿ ಸದ್ದು ಮಾಡುತ್ತಿದೆ.ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ನಾಲ್ಕು ಎಫ್ಐಆರ್ ದಾಖಲಾಗಿದ್ದರೂ, ಯಾರ ಕೈಗೂ ಸಿಗದೇ ವಿದೇಶದಲ್ಲಿ ಉಳಿದುಕೊಂಡಿದ್ದಾನೆ.ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕುರಿತಂತೆ ಪೆನ್ ಡ್ರೈವ್…
ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ನಮ್ಮ ಪೊಲೀಸರ ಮೇಲೆ ವಿಶ್ವಾಸವಿದೆ.ನಮ್ಮ ಪೊಲೀಸರೇ ಈ ಪ್ರಕರಣದ ತನಿಖೆ ನಡೆಸುತ್ತಾರೆ. ಹಾಗಾಗಿ ಪ್ರಕರಣವನ್ನು ಸಿಬಿಐ ವಹಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಜ್ವಲ್ ರೇವಣ್ಣ ಪ್ರಕರಣ ಇಡೀ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದ್ದು,ಈ ಪ್ರಕರಣವನ್ನು ಸಿಬಿಐ ವಹಿಸಬೇಕೆಂದು ಪ್ರತಿಪಕ್ಷಗಳು ಅಗ್ರಹಿಸುತ್ತಿವೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಆದಂತಹ ಪ್ರಕರಣಗಳನ್ನು ಎಂದಾದರೂ ಬಿಜೆಪಿ ಸಿಬಿಐಗೆ ವಹಿಸಿತ್ತಾ? ಎಂದು ಪ್ರಶ್ನಿಸಿದರು. ನಮ್ಮ ಸರ್ಕಾರ ಕಾನೂನು ರೀತ್ಯ ನಡೆಯುತ್ತಿರುವ ಕೆಲಸದಲ್ಲಿ, ತನಿಖೆಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಾರೆಂದು ನಂಬಿದ್ದೇನೆ.ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್ ಆಗಲೀ, ಸರ್ಕಾರದ ಯಾರೊಬ್ಬರೂ ಹಸ್ತಕ್ಷೇಪ ಮಾಡುತ್ತಿಲ್ಲ. ನನಗೆ ಎಸ್ಐಟಿ ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ ಎಂದರು. ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ…
ದಕ್ಷಿಣಕನ್ನಡ : ವ್ಯಕ್ತಿ ಒಬ್ಬ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟಂಪ್ಪಾಡಿಯ ಪಾರೆ ಗ್ರಾಮದಲ್ಲಿ ನಡೆದಿದೆ.ಆದರೆ ಮೃತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರು ಸಲ್ಲಿಸಿದ್ದಾರೆ. ಆದರೆ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಮೃತ ತಾಯಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯ ಪಾರೆ ಗ್ರಾಮದಲ್ಲಿ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಚೇತನ್ (33) ಎನ್ನುವ ಮೃತ ವ್ಯಕ್ತಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆಂದು ತಾಯಿ ಉಮಾದೇವಿ ದೂರು ಸಲ್ಲಿಸಿದ್ದಾರೆ. ಆದರೆ ಶವ ಕಂಡು ಅನುಮಾನಗೊಂಡ ಪೂತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿನ್ನೆ ರಾತ್ರಿ ಕುಡಿದು ಬಂದು ತಾಯಿ ಜೊತೆಗೆ ಚೇತನ್ ಜಗಳವಾಡಿದ್ದಾನೆ. ನಂತರ ಪಕ್ಕದ ಮನೆಯ ಯೂಸುಫ್ ಬಳಿಗೆ ತೆರಳಿದ್ದಾನೆ. ಚೇತನ್ ತಾಯಿಗೆ ಯೂಸಫ್ ಕರೆ ಮಾಡಿ ಮನೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾನೆ. ನಂತರ ತಾಯಿ ಉಮಾದೇವಿ ಯೂಸುಫ್…
ಕೊಡಗು : ಕೊಡಗು ಜಿಲ್ಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿನಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಾಲಕಿಯನ್ನು ಕೊಲೆ ಮಾಡಿದ ಪ್ರಕಾಶ್ ಓಂಕಾರಪ್ಪ ಎನ್ನುವ ಕೊಲೆ ಆರೋಪಿ ಅದೇ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಈ ಮೂಲಕ ಆತ ಕೊಲೆ ಮಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲೆ ಆರೋಪಿ ಪ್ರಕಾಶ್ ಓಂಕಾರಪ್ಪ ನೇಣು ಬಿಗಿದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಸೂರ್ಲಬ್ಬಿ ಗ್ರಾಮದ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರ ಶೋಧಕಾರ್ಯ ಸಂದರ್ಭದಲ್ಲಿ ಬಾಲಕಿಯ ರುಂಡ ಕೂಡ ಪತ್ತೆಯಾಗಿಲ್ಲ.ಇದೀಗ ಬಾಲಕಿಯ ರುಂಡಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಘಟನೇ ಹಿನ್ನೆಲೆ? ನಿನ್ನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೂರ್ಲಬಿ ಗ್ರಾಮದಲ್ಲಿ ಇಡಿ ರಾಜ್ಯವೇ ಬೆಚ್ಚಿಬೀಳುವ ಘಟನೆಯೊಂದು ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ಮಾಡಲಾಗಿತ್ತು. ಓಂಕಾರಾಪ್ಪ ಕೊಲೆ ಆರೋಪಿ.…
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಪೆನ್ ಡ್ರೈವ್ ಹಂಚಿಕೆ ಕುರಿತು ಆರೋಪಿಸಿದ್ದರಿಂದ ಇದೀಗ ಬಿಜೆಪಿಯ ಮುಖಂಡ ಹಾಗೂ ವಕೀಲ ದೇವರಾಜೇಗೌಡ ವಿರುದ್ಧ ಬೆಂಗಳೂರಿನ ಪಶ್ಚಿಮ ಕೆಪಿಸಿಸಿ ಪ್ರಚಾರ ಸಮಿತಿಯು ಇದೀಗ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಹೌದು ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕುರಿತಂತೆ ಇದರ ಹಿಂದೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡ ಇದೆ ಎಂದು ಆರೋಪಿಸಿದ್ದರು. ಇದೀಗ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ದೂರು ಸಲ್ಲಿಸಲಾಗಿದೆ. ಬೆಂಗಳೂರು ಪಶ್ಚಿಮ ಜಿಲ್ಲಾ ಕೆಪಿಸಿಸಿ ಪ್ರಚಾರ ಸಮಿತಿಯ ಎಸ್.ಮನೋಹರ್ ಎನ್ನುವವರು ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ದೇವರಾಜೇಗೌಡ ಬ್ಲಾಕ್ ಮೈಲಾರ ಎಂದು ಈಗಾಗಲೇ ಆಗಿದ್ದಾರೆಂದು ಹೊಳೆನರಸೀಪುರ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದು ಬಹಿರಂಗವಾಗಿದೆ ಸರ್ಕಾರದ ವಿರುದ್ಧ ಆರೋಪಿಸುತ್ತಿದ್ದಾರೆ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪಿಸುತ್ತಿದ್ದ ಈತನ ಹೀನ…