Author: kannadanewsnow05

ಬೆಂಗಳೂರು : ಬಿಸಿಲಿನಿಂದ ಬಸವಳಿದಿದ್ದ ಬೆಂಗಳೂರಿನ ಜನತೆಗೆ ವರುಣ ಕೃಪೆ ತೋರಿದ್ದು ಇದೀಗ ನಗರದ ಹಲವೆಡೆ ಬಿರುಗಾಳಿ ಸಮೇತ ಮಳೆ ಶುರುವಾಗಿದೆ. ಮುಂದಿನ 3 ಗಂಟೆಗಳಲ್ಲಿ ಮಳೆ ಸಾಧ್ಯತೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಇದೀಗ ನಗರದ ಚಾಲುಕ್ಯ ಸರ್ಕಲ್, ಪ್ಯಾಲೇಸ್ ರಸ್ತೆ ಸೇರಿ ಹಲವೆಡೆ ಮಳೆರಾಯ ಆರ್ಭಟಿಸಿದ್ದಾನೆ. ಬೆಂಗಳೂರು ನಗರದ ಆನೇಕಲ್ ತಾಲೂಕಿನ, ಚಂದಾಪುರ, ವಣಕನಹಳ್ಳಿ, ಸೋಲೂರು ಗೋಮ್ಮಾಳಪುರ ಭಾಗದಲ್ಲಿ ಆಲಿಕಲ್ಲು ಮಳೆಯಾಗಿದೆ.ಅದೇ ರೀತಿಯಾಗಿ ಮುಂದಿನ 3 ಗಂಟೆಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More

ಬೆಂಗಳೂರು : ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ 108 ಆಂಬುಲೆನ್ಸ್ ಚಾಲಕರು ಮುಷ್ಕರ ನಡೆಸುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಮಾತನಾಡಿ, ಲೋಕಸಭೆ ಚುನಾವಣೆ ಇರುವುದರಿಂದ ಪುಷ್ಕರವನ್ನು ಕೈಬಿಡಿ ಎಂದು ಚಾಲಕರಲ್ಲಿ ಮನವಿ ಮಾಡಿದರು. ಬೆಂಗಳೂರಿನಲ್ಲಿ ಮುಷ್ಕರ ಕುರಿತು ಮಾತನಾಡಿದ ಅವರು, ಸಿಬ್ಬಂದಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣದ ಕೊರತೆ ಇಲ್ಲ. 108 ಆಂಬುಲೆನ್ಸ್ ಚಾಲಕರಿಗೆ ಪೂರ್ತಿ ಹಣ ನೀಡಿದ್ದೇವೆ. ವೇತನ ನೀಡುವಲ್ಲಿ ಸಣ್ಣ ಸಮಸ್ಯೆಯಾಗಿತ್ತು. ಆದರೆ ಸಂಬಳ ಕೊರತೆ ಮಾಡಿಲ್ಲ ಎಂದು ಅವರು ತಿಳಿಸಿದರು. ಇದು ಚುನಾವಣೆ ಸಮಯ ಬದಲಾವಣೆ ಮಾಡುವುದಕ್ಕೆ ಆಗುವುದಿಲ್ಲ. ಅಶೋಕ್ ಅವರೇ ನಿಮ್ಮ ಸರ್ಕಾರದ ಅವಧಿಯಲ್ಲಿ ಲೋಪವಾಗಿತ್ತು. ಚುನಾವಣಾ ನೀತಿ ಸಂಹಿತೆ ಇರುವುದರಿಂದ ಸಿಬ್ಬಂದಿ ಮುಷ್ಕರ ಕೈ ಬಿಡಿ ಎಂದು 108 ಆಂಬುಲೆನ್ಸ್ ಚಾಲಕರಿಗೆ ಮನವಿ ಮಾಡಿದರು. ಒಂದು ವೇಳೆ ಕೈ ಬಿಡದಿದ್ದರೆ ನಾವು ಪರ್ಯಾಯ ಕ್ರಮಕ್ಕೆ ಮುಂದಾಗುತ್ತೇವೆ 108 ಜನರಿಗೆ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು ನಮ್ಮ ಬಳಿ ಬೇರೆ ಚಾಲಕರಿದ್ದಾರೆ…

Read More

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಶೀಲ ವಿಡಿಯೋ ಪ್ರಕರಣಕ್ಕೆ ಇದೀಗ ಬಿಜೆಪಿ ಮುಖಂಡ ಹೊಸ ಸಿಡಿಸಿದ್ದು, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹಸ್ತಕ್ಷೇಪವಿದೆ ಎಂದು ಮಾಡುವುದೇ ಕಾಂಗ್ರೆಸ್ ನವರ ಗುರಿಯಾಗಿತ್ತು ಎಂದು ಗಂಭೀರವಾದಂತಹ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿರುವ ಆಡಿಯೋವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಮೂರು ದಿನದ ಹಿಂದೆ ಡಿಕೆ ಶಿವಕುಮಾರ್ ನನಗೆ ಕರೆ ಮಾಡಿದ್ದರು.ಸಂಧಾನಕ್ಕೆ ಶಿವರಾಮೇಗೌಡರನ್ನು ಕಳುಹಿಸಿದ್ದರು. ನನಗೆ ರಾತ್ರಿ 12:40ಕ್ಕೆ ಡಿಕೆ ಶಿವಕುಮಾರ್ ಕರೆ ಮಾಡಿದ್ದರು.ಮೋದಿ ಹಸ್ತಕ್ಷೇಪ ಇದೆ ಅಂತ ಪ್ರೂವ್ ಮಾಡುವುದೇ ಕಾಂಗ್ರೆಸ್ ನವರ ಗುರಿಯಾಗಿತ್ತು ಎಂದು ಆರೋಪಸಿದರು. ಈ ಪ್ರಕರಣದ ಬಗ್ಗೆ ದೇಶಾದ್ಯಂತ ಪ್ರಚಾರ ಮಾಡುವ ಉದ್ದೇಶವಾಗಿತ್ತು.ಅದಕ್ಕಾಗಿ ಕೈಜೋಡಿಸಬೇಕು ಎಂದು ನನ್ನನ್ನು ಕರೆದಿದ್ದರು. ಹತ್ತಕ್ಕೂ ಹೆಚ್ಚು ಬಾರಿ ಶಿವರಾಮೇಗೌಡ ನನ್ನ ಭೇಟಿಯಾಗಿದ್ದಾರೆ. ಒಂದೊಂದು ಟೈಮ್ ಅಲ್ಲಿ ಒಂದೊಂದು ರೀತಿ ನನ್ನ ಜೊತೆಗೆ ಮಾತನಾಡಿದ್ದಾರೆ.ಈ ಕೇಸ್…

Read More

ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ, ಪೆನ್ ಡ್ರೈವ್ ನ ಕಥಾನಾಯಕರೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಗಂಭೀರವಾದ ಆರೋಪ ಮಾಡಿದರು.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಕಥಾನಾಯಕರೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ಡಿಸಿಎಂ ಆಗಿರುವ ಡಿಕೆ ಶಿವಕುಮಾರ್ ಅವರೇ ಇದರ ರೂವಾರಿ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇದರಲ್ಲಿ ಇನ್ನೊಬ್ಬರ ನಾಯಕರ ಆಡಿಯೋ ಸಹ ಇದೆ ದೇವರಾಜೇಗೌಡ ಮೇಲೆ ಕೆಸ್ ಹಾಕಲು ಈಗ ಹೊರಟಿದ್ದಾರೆ.ಡಿಸಿಎಂ ರವರು ಮಾತುಕತೆಗೆ ನನ್ನ ಬಳಿ ಕೆಲ ಜನರನ್ನು ಕಳುಹಿಸಿದ್ದರು.ಪೆನ್ ಡ್ರೈವ್ ಒಬ್ಬ ಮಹಾ ನಾಯಕನ ಬಳಿ ಹೋಗಿತ್ತು. ಡಿಕೆ ಮಾತಾಡಿರುವ ಆಡಿಯೋ ಬಿಡುಗಡೆ ಮಾಡಿದ ದೇವರಾಜ್ ಗೌಡ LR ಶಿವರಾಮೇಗೌಡ ಮೊದಲು ಮಾತನಾಡಿದರು ಆಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಫೋನ್ ಕೊಟ್ಟರು ಎಲ್ಲರ ಶಿವರಾಮೇಗೌಡರಿಂದ ಆಡಿಯೋದಲ್ಲಿ ಭರವಸೆ ನೀಡಿದರು ಎಂದು ಡಿಕೆ ಶಿವಕುಮಾರ್…

Read More

ಬೆಂಗಳೂರು : ತೀವ್ರ ಬರ ಹಾಗೂ ಅತ್ಯಂತ ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಜನರಿಗೆ ಇತ್ತೀಚಿಗೆ ಹಲವು ಕಡೆಗಳಲ್ಲಿ ಮಳೆಯಾಗಿ ಜನರ ಮುಖದಲ್ಲಿ ಸ್ವಲ್ಪ ನೆಮ್ಮದಿ ಕಾಣುವಂತಾಗಿದೆ.ಇದೀಗ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆ ಸಾಧ್ಯತೆ ಇರಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರದಲ್ಲಿ ಮಳೆಯಾಗಲಿದೆ. ಇವತ್ತು ಬೆಂಗಳೂರಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು ಈ ಕುರಿತಂತೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

Read More

ಕೊಡಗು : ಸಾಮಾನ್ಯವಾಗಿ ಚಿಕ್ಕ ಚಿಕ್ಕ ವಿಷಯಗಳಿಗೆ ಸಂಬಂಧಿಸಿದಂತೆ ಮದುವೆ ಮುರಿದು ಬಿದ್ದಿರುವುದನ್ನು ನಾವು ನೋಡಿದ್ದೇವೆ ಇದೀಗ ಅಂತಹದ್ದೇ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದ್ದು ಸಿಹಿ ಅಡುಗೆ ಮಾಡಿಲ್ಲ ಎಂದು ಆರೋಪಿಸಿ ಇದೀಗ ವರನ ಕಡೆಯವರು ಮದುವೆ ಮುರಿದಿದ್ದಾರೆ. ಹೌದು ಸಿಹಿ ಅಡುಗೆ ಮಾಡಿಲ್ಲ ಎಂದು ಮದುವೆ ಮುರಿದ ವರನ ಕಡೆಯವರು, ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಈ ಒಂದು ಘಟನೆ ನಡೆದಿದೆ. ಸೋಮವಾರಪೇಟೆಯ ಛತ್ರ ಒಂದರಲ್ಲಿ ಮದುವೆಯೊಂದು ನಿಗದಿಯಾಗಿತ್ತು. ಸೋಮವಾರಪೇಟೆಯ ಹಾನಗಲ್ ಗ್ರಾಮದ ಯುವತಿ ಹಾಗೂ ಕುಣಿಗಲ್ ಯುವಕನ ಜೊತೆಗೆ ವಿವಾಹ ನಿಶ್ಚಯವಾಗಿತ್ತು. ಈ ವೇಳೆ ಅಡುಗೆಯಲ್ಲಿ ಸಿಹಿ ಮಾಡಿಲ್ಲ ಎಂದು ವರನ ಕಡೆಯವರು ತಗಾದೆ ತೆಗೆದಿದ್ದಾರೆ. ಇದೆ ಸಂದರ್ಭದಲ್ಲಿ ಮಧುಮಗ ಮತ್ತು ಮಧುಮಗಳು ಉಂಗುರವನ್ನು ಬಿಸಾಕಿದ್ದಾರೆ. ವಧು ಕಡೆ ವರದಕ್ಷಿಣೆ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಇದೀಗ ಸೋಮವಾರಪೇಟೆ ಠಾಣೆಯಲ್ಲಿ ವರನ ವಿರುದ್ಧ ಯುವತಿಯ ಕಡೆಯವರು ದೂರು ದಾಖಲಿಸಿದ್ದಾರೆ.

Read More

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಬಂದಿಯುತ ರಾಗಿರುವ ಶಾಸಕ ಎಚ್ಡಿ ರೇವಣ್ಣ ಅವರು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನೀಗಾಗಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದರು.ಇದೀಗ ಈ ಒಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣೆಯನ್ನು ನಾಳೆ ಮುಂದೂಡಿದೆ. ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ಅಪಹರಣಕ್ಕೆ ಒಳಗಾಗಿದ್ದ ಮಹಿಳೆಯ ಮಗ ಇತ್ತೀಚಿಗೆ ನನ್ನ ತಾಯಿ ಕಾಣೆಯಾಗಿದ್ದಾಳೆ ಹುಡುಕಿ ಕೊಡಿ ಎಂದು ದೂರು ಸಲ್ಲಿಸಿದ್ದ. ಈ ಪ್ರಕರಣದಲ್ಲಿ HD ರೇವಣ್ಣ ಹಾಗೂ ಭವಾನಿ ರೇವಣ್ಣ ಸಂಬಂಧಿಯಾಗಿರುವ ಸತೀಶ್ ಬಾಬು ವಿರುದ್ಧ FIR ದಾಖಲಾಗಿತ್ತು. ಕಳೆದ ಎರಡು ದಿನಗಳ ಹಿಂದೆ ಈ ಒಂದು ಪ್ರಕರಣದಲ್ಲಿ ಶಾಸಕ HD ರೇವಣ್ಣ ಅವರನ್ನು ಬಂಧಿಸಲಾಗಿತ್ತು.ಬಂಧನಕ್ಕೂ ಮುನ್ನ ಅವರು ನಿರೀಕ್ಷಣಾ ಜಾಮೀನನ್ನು ಸಲ್ಲಿಸಿದ್ದರು. ಆದರೆ ಅದನ್ನು ಕೋರ್ಟ್ ಅದನ್ನು ಮುಕ್ತಾಯಗೊಳಿಸಿದ್ದು ಇದೀಗ ಬಂಧನದಲ್ಲಿರುವ ರೇವಣ್ಣ ಅವರು ಮತ್ತೆ ಜಾಮೀನಿಗಾಗಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ನಾಳೆಗೆ ಮುಂದೂಡಿದೆ.

Read More

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ ಐ ಟಿ ಅಧಿಕಾರಿಗಳು ಶಾಸಕ ಎಚ್ ಡಿ ರೇವಣ್ಣ ಅವರ ನಿವಾಸದಲ್ಲಿ ಸತತವಾಗಿ 5 ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿದ್ದು ಇದೀಗ ಅದು ಮುಕ್ತಾಯವಾಗಿದೆ. ಹೌದು ಬೆಂಗಳೂರಿನ ಬಸವನಗುಡಿ ನಿವಾಸದಲ್ಲಿ ಸ್ಥಳ ಮಹಜರು ಇದೀಗ ಮುಕ್ತಾಯಗೊಂಡಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ಶಾಸಕ ನಿವಾಸಕ್ಕೆ ಇಂದು ಬೆಳಿಗ್ಗೆ ಎಸ್ಐಟಿ ಅಧಿಕಾರಿಗಳು ಭೇಟಿ ನೀಡಿದ್ದರು. ಈ ವೇಳೆ ಸಂತ್ರಸ್ತ ಮಹಿಳೆಯರು ಕೂಡ ಸ್ಥಳ ಮಹಾರಾಜರು ಸಂದರ್ಭದಲ್ಲಿ ಮಹಾಜರು ಪ್ರಕ್ರಿಯೆ ನಡೆಸಿದ್ದಾರೆ ಈ ವೇಳೆ ಅಧಿಕಾರಿಗಳು ಸಂಪೂರ್ಣವಾಗಿ ಪ್ರಕ್ರಿಯೆಯ ವಿಡಿಯೋವನ್ನು ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.ಸತತವಾಗಿ 5 ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿತು ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದ್ದು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾಗಿರುವ ಭವಾನಿ ರೇವಣ್ಣ ಸಂಬಂಧಿಯಾಗಿರುವ ಸತೀಶ್ ಭಾವವನ್ನು ಇದೀಗ ಎಂಟು ದಿನಗಳ ಕಾಲ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 17ನೇ ಎಸಿ ಎಂ ಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಹೌದು ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಎಸ್ಐಟಿ ಸತೀಶ್ ಬಾಬು ಕಸ್ಟಡಿಗೆ ನೀಡಿ ಎಂದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮೇ 13 ರವರೆಗೆ ಆರೋಪಿ ಸತೀಶ್ ಬಾಬು ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಆರೋಪಿ ಸತೀಶ್ ಬಾಬುಗೆ ಎಂಟು ದಿನ ಎಸ್ಐಟಿ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಸತೀಶ್ ಬಾಬುನನ್ನು ಬಂಧಿಸಲಾಗಿತ್ತು. ಈ ಕುರಿತಂತೆ ಎಸ್ಐಟಿ ಕೋರ್ಟ್ ಗೆ ಹಾಜರುಪಡಿಸಿ ಕಸ್ಟಡಿಗೆ…

Read More

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಶಾಸಕ ಎಚ್ಡಿ ರೇವಣ್ಣ ಇದೀಗ ಮತ್ತೆ ಕೋರ್ಟ್ ಮೊರೆ ಹೋಗಿದ್ದು, ಜಾಮೀನಿಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮತ್ತೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ ಹೌದು ಈ ಮೊದಲು ಅಂದರೆ ಎಸ್ಐಟಿ ಬಂಧನಕ್ಕೂ ಮುನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದನ್ನು ಕೋರ್ಟ್ ತಿರಸ್ಕರಿಸಿದ್ದು, ಇದೀಗ ಹೆಚ್ ಡಿ ರೇವಣ್ಣ ಮತ್ತೆ ಜಾಮೀನು ಕೋರಿ ಬೆಂಗಳೂರಿನ ವಿಶೇಷ ನ್ಯಾಯ ಇಲಾಖೆ ಅರ್ಜಿ ಸಲ್ಲಿಸಿದ್ದಾರೆ. ಹೌದು ಜಾಮೀನು ಕೋರಿ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದು, ಎಚ್ ಡಿ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ರೇವಣ್ಣ ಇದೀಗ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಬಂಧನ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಕ್ತಾಯಗೊಳಿಸಿತ್ತು. ಈಗ ಎಚ್ ಡಿ ರೇವಣ್ಣ ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

Read More