Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಸಂಕಷ್ಟದಲ್ಲಿದ್ದು ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನಡುವೆ ವಾಕ್ಸಮರ ತಾರಕಕ್ಕೇರಿದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಮತ್ತೆ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದು ಪೆನ್ ಡ್ರೈವ್ ಹಿನ್ನೆಲೆ ಏನೆಂದು ಬಿಚ್ಚಿಡಬೇಕಾ ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಪೆನ್ಡ್ರೈವ್ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪದೇ ಪದೇ ನಿಲುವು ಬದಲಿಸುತ್ತಿರುವುದು ಯಾಕೆ? ಪೆನ್ಡ್ರೈವ್ ಹಿನ್ನೆಲೆ ಏನು ಎಂದು ನಾವು ಬಿಚ್ಚಿಡಬೇಕಾ? ಎಂದು ಉಪಮುಖ್ಯಮಂತ್ರಿ ಶಿವಕುಮಾರ್ಪ್ರಶ್ನಿಸಿದ್ದಾರೆ. ಕುಮಾರಸ್ವಾಮಿ ಅವರೇ ಮೇ 7 ರವರೆಗೆ ಯಾಕೆ ಕಾಯಬೇಕು? ಇದರ ಮೂಲ ಏನು? ಇದರ ಹಿನ್ನೆಲೆ ಏನು? ಇದರ ಹಿಂದೆ ಯಾರು ಯಾರು ಇದ್ದಾರೆ ಎಂದು ನಾವು ಬಿಚ್ಚಿ ಇಡಬೇಕಾ? ಇದು ಅವರ ಕುಟುಂಬದ ಆಂತರಿಕ ವಿಚಾರ. ಈ ಬಗ್ಗೆ ಮಾಧ್ಯಮದವರು ಮದವರು…
ಬೆಂಗಳೂರು : ಇದೀಗ ರಾಜ್ಯ ಅಷ್ಟೇ ಅಲ್ಲದೆ ದೇಶದಾದ್ಯಂತ ಸಂಚಲನ ಸೃಷ್ಟಿಸಿದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನ ಹನ್ನೆರಡು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ವಿಚಾರ ನನಗೆ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ವಿಚಾರದಿಂದ ಜೆಡಿಎಸ್ನ 12 ಮಂದಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ ಎಂಬ ವಿಚಾರವೆಲ್ಲಾ ಸುಳ್ಳು. ಊಹಾ ಪೋಹಗಳನ್ನು ಹರಡಲಾಗುತ್ತಿದೆ. ಜೆಡಿಎಸ್ನವರು ಬಿಜೆಪಿ ಜತೆ ಮೈತ್ರಿಯಾದರೂ ಮಾಡಿ ಕೊಳ್ಳಲಿ, ಪಕ್ಷವನ್ನು ವಿಲೀನವಾದರೂ ಮಾಡಿಕೊಳ್ಳಲಿ ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪ್ರಜ್ವಲ್ ಅವರ ವಿಚಾರದಿಂದ ಜೆಡಿಎಸ್ ಪಕ್ಷದ 12 ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂಬ ಚರ್ಚೆ ಬಗ್ಗೆ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಅದೆಲ್ಲವೂ ಸುಳ್ಳು, ನನ್ನ ಜತೆ ಯಾರೊಬ್ಬರೂ ಸಂಪರ್ಕದಲ್ಲಿಲ್ಲ. ನಾನು ಯಾರ ಜತೆಯೂ ಮಾತುಕತೆ ನಡೆಸಿಲ್ಲ. ಎಂತಹವ ರಾದರೂ…
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕಾರಕ್ಕೆ ಸಂಬಂಧಿಸಿದಂತೆ HD ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಇದೀಗ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು ಇದೀಗ, ತಂದೆ ಹಾಗೂ ಮಗನ ವಿರುದ್ಧ ಸುಮಾರು 700 ಗಣ್ಯರಿಂದ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಹೌದು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಎಚ್.ಡಿ.ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೇಶದ ಹಲವು ಮಹಿಳಾ ಸಂಘಟನೆಗಳು, ವಿವಿಧ ವೃತ್ತಿಯ ಮಹಿಳೆಯರು ಸೇರಿದಂತೆ 700 ಗಣ್ಯರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಬಹುತ್ವ ಕರ್ನಾಟಕದ ನಿಶಾ ಅಬ್ದುಲ್ಲಾ, ಕರ್ನಾಟಕ ಜನ ಶಕ್ತಿಯ ಲಲಿತಾ, ಅಖಿಲ ಭಾರತ ಸ್ತ್ರೀವಾದಿ ಒಕ್ಕೂಟ, ವುಮೆನ್ ಫಾರ್ ಡೆಮಾಕ್ರಸಿ ಸಂಘಟನೆಯ ಪದಾಧಿಕಾರಿಗಳು ಸೇರಿ ವಿವಿಧ ವೃತ್ತಿಯಲ್ಲಿರುವ ಹಲವು ಮಹಿಳೆಯರು, ಗಣ್ಯರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.ಸುಮಾರು 2,976 ವಿಡಿ ಯೋಗಳಿವೆ ಎನ್ನಲಾಗುತ್ತಿದೆ ಇಷ್ಟಾದರೂ ಆಯೋಗ ಮೌನವಾಗಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು : ವರ್ಷವಿಡೀ ಕೆಲಸ ಮಾಡುವ, ಅಸಂಘಟಿತ ವಲಯದ ಕಾರ್ಮಿಕರ ವ್ಯಾಪ್ತಿಯಲ್ಲಿನ ವಾಹನ ಚಾಲಕರ ಶ್ರಮಕ್ಕೆ ಗೌರವ ಸಲ್ಲಿಸಲು ಅಪಘಾತ ರಹಿತ ಚಾಲನೆ ಮಾಡಿದ ಚಾಲಕರನ್ನು ಗುರುತಿಸಿ ಪ್ರಶಸ್ತಿ ನೀಡುವುದರ ಜತೆಗೆ ‘ಚಾಲಕರ ದಿನ’ವನ್ನು ಆಚರಿಸಲು ರಾಜ್ಯ ಸಾರಿಗೆ ಇಲಾಖೆ ನಿರ್ಧರಿಸಿದೆ. ಹೌದು ಚಲನಚಿತ್ರ ನಟ ಶಂಕರ್ ನಾಗ್ ಅವರ ಜನ್ಮದಿನದಂದು ಈ ಒಂದು ದಿನಾಚರಣೆಯ ಆಚರಿಸಬೇಕು ಎಂದು ಚಾಲಕರ ಒತ್ತಾಯವಾಗಿದ್ದು, ಈ ಕುರಿತಂತೆ ಸಾರಿಗೆ ಇಲಾಖೆಚರ್ಚಿಸಿ ನಿರ್ಧಾರ ಕೈಗೊಳ್ಳಲ್ಲಿದೆ ಎಂದು ಹೇಳಲಾಗುತ್ತಿದೆ. ಕಳೆದವರ್ಷವಿವಿಧಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಸಾರಿಗೆ ಒಕ್ಕೂಟದ ವಿವಿಧ ಸಂಘಟನೆಗಳು ಪ್ರತಿಭಟಿಸಿದ ಸಂದರ್ಭದಲ್ಲಿ ಚಾಲಕರ ಶ್ರಮವನ್ನು ಗುರುತಿಸಿ, ಗೌರವಿಸುವ ಸಲುವಾಗಿ ಚಾಲಕರ ದಿನವನ್ನು ಆಚರಿಸಬೇಕು ಎಂಬ ಬೇಡಿಕೆಯನ್ನೂ ಇಡಲಾಗಿತ್ತು. ಅದಕ್ಕೆ ಒಪ್ಪಿಗೆ ಸೂಚಿಸಿದ್ದ ಸರ್ಕಾರ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚಿಸಿತ್ತು. ಆ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಚಾಲಕರ ದಿನವನ್ನು ಯಾವಾಗ? ಯಾವ ರೀತಿಯಲ್ಲಿ ಆಚರಿಸಬೇಕು ಎಂಬುದರ ಬಗ್ಗೆ ಇಲಾಖೆ ನಿರ್ಧರಿಸಲಿದೆ.…
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಸಭೆಯಲ್ಲಿ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು ಕಠಿಣವಾದಂತಹ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು. ಈ ಒಂದು ಸಭೆಯಲ್ಲಿ ಪ್ರಜ್ವಲ್ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡ ಸಿಎಂ ಸಿದ್ದರಾಮಯ್ಯ, ಕಾವೇರಿ ನಿವಾಸದಲ್ಲಿ ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡಿರು. ಪ್ರಕರಣದ ಬೆಳವಣಿಗೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು, ಲುಕ್ ಔಟ್ ನೋಟಿಸ್ ಜೊತೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗೆ ವಿವರಣೆ ನೀಡಿದರು. ಈ ವೇಳೆ ಸಿದ್ದರಾಮಯ್ಯ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕಠಿಣ ಕ್ರಮ ಕೈಗೊಳ್ಳಿ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ.ಈ ವಿಚಾರದಲ್ಲಿ ನಿರ್ಲಕ್ಷ ಹಾಗೂ ವಿಳಂಬ ಧೋರಣೆ ಸಹಿಸಲಾಗದು. ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಈ ವೇಳೆ…
ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣ ಮುಂದಿಟ್ಟುಕೊಂಡು ಒಕ್ಕಲಿಗ ನಾಯಕತ್ವಕ್ಕೆ ಯತ್ನಿಸುತ್ತಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಕಿಡಿ ಕಾರಿದ್ದರು. ಇದಕ್ಕೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್ ನಾನು ಹಲವು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷ ನಾಗಿರುವುದಕ್ಕೆ ಆತ್ಮ ತೃಪ್ತಿದೆ ಬಿಜೆಪಿ ಸೃಷ್ಟಿಯ ಒಕ್ಕಲಿಗ ನಾಯಕತ್ವ ಬೇಕಿಲ್ಲ ಎಂದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು ಒಕ್ಕಲಿಗರ ನಾಯಕನಾಗುವ ಪ್ರಯತ್ನ ಮಾಡುತ್ತಿಲ್ಲ, ಅದರೆ ಒಕ್ಕಲಿಗನಾಗಿ ಹುಟ್ಟಿದ್ದೇನೆ ಮತ್ತು ಸಮುದಾಯಕ್ಕೆ ತನ್ನಿಂದಾಗುವ ಸಹಾಯ ಮಾಡುತ್ತೇನೆ, ಒಕ್ಕಲಿಗ ನಾಯಕತ್ವ ಬಿಜೆಪಿಯ ಸೃಷ್ಟಿ, ತನಗೆ ಆ ನಾಯಕತ್ವ ಬೇಕಿಲ್ಲ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ನಾಯಕನಾಗಿ ಗುರುತಿಸಿಕೊಂಡಿದ್ದೇನೆ, ಕಳೆದ 4 ವರ್ಷಗಳಿಂದ ರಾಜ್ಯ ಕಾಂಗ್ರೆಸ್ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ ಮತ್ತು ತಾನು ಮಾಡುತ್ತಿರುವ ಕೆಲಸ ಆತ್ಮತೃಪ್ತಿ ನೀಡಿದೆ ಎಂದು ಶಿವಕುಮಾರ್ ಹೇಳಿದರು.
ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗುತ್ತಿದ್ದಂತೆ ಸರ್ಕಾರ ಈ ಒಂದು ಪ್ರಕರಣವನ್ನು ಎಸ್ ಐ ಟಿ ಗೆ ವಹಿಸಿತ್ತು. ಎಸ್ಐಟಿ ತನಿಖೆಯನ್ನು ಚುರುಕುಗೊಳಿಸಿದ ತಕ್ಷಣ ನಿನ್ನೆ ಹಾಸನದ ಆರ್ಸಿ ರಸ್ತೆಯಲ್ಲಿರುವ ಸಂಸದರ ನಿವಾಸಕ್ಕೆ ಬೀಗ ಹಾಕಲಾಗಿತ್ತು. ಎಸ್ಐಟಿ ಅಧಿಕಾರಿಗಳು ಸಂಸದರ ನಿವಾಸಕ್ಕೆ ಬಂದು ಸ್ಥಳ ಮಹಜರು ನಡೆಸಲಿದ್ದಾರೆ ಎಂಬ ಮಾಹಿತಿ ಬಂದ ತಕ್ಷಣ ಸಂಸದರ ನಿವಾಸಕ್ಕೆ ನಿನ್ನೆ ಬೀಗ ಹಾಕಲಾಗಿತ್ತು.ಆದರೆ ಸ್ಥಳೀಯ ಪೊಲೀಸರು, ಸಂಸದರ ನಿವಾಸದ ಕೀಯನ್ನು ಇದೀಗ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಪಿಎ ಬಳಿ ಇದ್ದ ಕೀಯನ್ನು ಇದೀಗ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೀಗ ಪ್ರಕರಣ ದಾಖಲಾಗುತ್ತಿದ್ದಂತೆ ಹಾಸನ ಪೊಲೀಸರು ಇದೀಗ ಪಿಎ ಬಳಿಕ ಪಡೆದುಕೊಂಡಿದ್ದಾರೆ.ಕೆಲವೇ ಹೊತ್ತಿನಲ್ಲಿ ಸಂಸದರ ನಿವಾಸಕ್ಕೆ ಎಸ್ಐಟಿ ತಂಡ ಎಂಟ್ರಿ ಕೊಡುವ ಸಾಧ್ಯತೆ ಇದೆ ಸಂತ್ರಸ್ತ ಮಹಿಳೆಯನ್ನು ಕರೆತಂದು ಸಂಸದರ ನಿವಾಸದಲ್ಲಿ ಸ್ಥಳ ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಈಗಾಗಲೇ ಪ್ರಜ್ವಲ್ ಗೆ ರೆಡ್ ಕಾರ್ನರ್ ನೋಟಿಸ್ ನೀಡಿದ್ದು ಇದೀಗ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ನೀಡಲು ಎಸ್ಐಟಿ ಸಿಬಿಐಗೆ ಮನವಿ ಮಾಡಿದೆ. ನ್ಯೂ ಕಾರ್ನರ್ ನೋಟೀಸಿಗೆ ಎಸ್ಐಟಿ ಇದೀಗ ಸಿಬಿಐಗೆ ಮನವಿ ಮಾಡಿದ್ದು ಇಂಟರ್ಫೋಲ್ ಮೂಲಕ ಮನವಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದು ಅಲ್ಲಿ ಅವರ ಚಲನವಲನ ಅವರ ಚಟುವಟಿಕೆ ಹಾಗೂ ಅಲ್ಲಿ ಏನು ಮಾಡುತ್ತಿದ್ದಾನೆ ಎಂಬುದರ ಕುರಿತಂತೆ ಮಾಹಿತಿ ಕಲೆ ಹಾಕಲು ಎಸ್ಐಟಿ ನ್ಯೂ ಕಾರ್ನರ್ ನೋಟಿಸ್ ಗೆ ಜಾರಿ ಮಾಡಲು ಎಸ್ಐಟಿ ಸಿಬಿಐ ಮೊರೆ ಹೋಗಿದೆ. ಇಂಟರ್ಫೋಲ್ ನಿಂದ ಹೆಚ್ಚಿನ ಮಾಹಿತಿ ಕಲೆ ಹಾಕಲು ತಯಾರಿ ನಡೆಸಿದ್ದು ಬ್ಲೂ ಕಾರ್ನರ್ ನೋಟಿಸ್ ಮೂಲಕ ಪ್ರಜ್ವಲ್ ರೇವಣ್ಣ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಏನಿದು ‘ಬ್ಲೂ ಕಾರ್ನರ್’ ನೋಟಿಸ್? ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಸದ್ಯಕ್ಕೆ ಅವರ ಡಿಪ್ಲೋಮೆಟಿಕ್ ಪಾಸ್ ಪೋರ್ಟ್ ರದ್ದು ಆಗದೆ ಇರುವ ಕಾರಣ…
ರಾಯಚೂರು : ಜೈ ಶ್ರೀರಾಮ್ ಘೋಷಣೆ ಕೂಗುವವರನ್ನ ಪೊಲೀಸರು ಬೂಟುಗಾಲಲ್ಲಿ ಒದ್ದು ಒಳಗೆಹಾಕಬೇಕು ಎಂಬ ಉದ್ಧಟತನದ ಹೇಳಿಕೆ ನೀಡಿದ್ದ ರಾಯಚೂರು ಕಾಂಗ್ರೆಸ್ ಮುಖಂಡ ಬಷಿರುದ್ದೀನ್ ಬಿಜೆಪಿ ಮುಖಂಡರ ಆಕ್ರೋಶ ಗುರಿಯಾಗಿದ್ದಾರೆ. ಕಾಂಗ್ರೆಸ್ ಮುಖಂಡ ಬಷಿರುದ್ದೀನ್ ಹೇಳಿಕೆಯನ್ನು ಖಂಡಿಸಿ ಈಗಾಗ್ಲೇ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿಯಿಂದ ಧರಣಿ ನಡೆಸಲಾಗುತ್ತಿದೆ. ಲೋಕಸಭ ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ ನೇತೃತ್ವದಲ್ಲಿ ದೂರು ನೀಡಲು ಇದೀಗ ಬಿಜೆಪಿ ಮುಂದಾಗಿದೆ. ಕೆಲವೇ ಕ್ಷಣಗಳಲ್ಲಿ ಅಣ್ಣಾಮಲೈ ಅವರು ರಾಯಚೂರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಲಿದ್ದಾರೆ.ಡಿಸಿ ಕಚರಿಗೆ ಆಗಮಿಸಿ ಬಿಜೆಪಿ ದೂರು ನೀಡಲಿದೆ. ಇದೆ ವೇಳೆ ರಾಯಚೂರು ಶಾಸಕ ಶಿವರಾಜ ಪಾಟೀಲ್ ಹಾಗೂ ಬಿಜೆಪಿ ಕಾರ್ಯಕರ್ತರು ಈಗಾಗಲೇ ಆಗಮಿಸಿದ್ದಾರೆ. ಕೆಲದಿನಗಳ ಹಿಂದೆ ನಗರ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಬಷಿರುದ್ಧೀನ್ ಉದ್ದಟತನದ ಹೇಳಿಕೆ ನೀಡಿದ್ದರು. ಜೈ ಶ್ರೀರಾಮ ಅಂದವರನ್ನ ಪೊಲೀಸರು ಬೂಟುಗಾಲಲ್ಲಿ ಒದ್ದು ಒಳಗೆ ಹಾಕಬೇಕು ಅಂತಾ. ಬಷಿರುದ್ಧೀನ್ ವಿಡಿಯೋ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹಿಂದೂ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ದಂತೆ ನಿನ್ನೆ ಪೊಲೀಸರು ರೇವಣ್ಣ ಸಂಬಂಧಿ A2 ಆರೋಪಿ ಸತೀಶ್ ಬಾಪುನನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಸತೀಶ್ ಬಾಬುನನ್ನು ಕಸ್ಟಡಿಗೆ ನೀಡಿ ಎಂದು ಅರ್ಜಿ ಸಲ್ಲಿಸಿದೆ. ಹೌದು ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸತೀಶ್ ಬಾಬು ಕಸ್ಟಡಿ ಅಗತ್ಯವಿದೆ.ಹೆಚ್ಚಿನ ವಿಚಾರಣೆ ನಡೆಸಲು ಸತೀಶ್ ಬಾಬು ಕಸ್ಟಡಿ ಅಗತ್ಯವಿದೆ. ಹಾಗಾಗಿ ಕಸ್ಟಡಿಗೆ ನೀಡಲು ಇದೀಗ SIT ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟಿಗೆ ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಎಸ್ಐಟಿ ಪರ ಎಸ್ ಪಿ ಪಿ ಜಗದೀಶ್ ರಿಂದ ಮನವಿ ಸಲ್ಲಿಕೆಯಾಗಿದೆ. ಸದ್ಯ ಆರೋಪಿ ಸತೀಶ್ ಬಾಬು ಈಗಾಗಲೇ 14 ದಿನಗಳವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ರೇವಣ್ಣ ಸತೀಶ್ ಬಾಬು ವಿರುದ್ಧ ಅಪಹರಣಕ್ಕೆ ಸಂಬಂಧಿಸಿದಂತೆ ಅಪರಾರಣಕ್ಕೆ ಒಳಗಾದ ಮಹಿಳೆಯ ಮಗ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ…