Author: kannadanewsnow05

ಬೆಂಗಳೂರು : ಸಾಮಾನ್ಯವಾಗಿ ಬಸ್ ನಿಲ್ದಾಣ, ದೇವಸ್ಥಾನ ಸೇರಿದಂತೆ ಹಲವು ಜನನಿಬೀಡ ಪ್ರದೇಶಗಳಲ್ಲಿ ಭಿಕ್ಷಾಟನೆ ಮಾಡುವುದನ್ನು ನಾವು ನೋಡಿರುತ್ತೇವೆ ಆದರೆ ಇದೀಗ ಬೆಂಗಳೂರಿನ ನಮ್ಮ ಮೆಟ್ರೋದಲ್ಲೂ ಕೂಡ ವ್ಯಕ್ತಿ ಒಬ್ಬ ಭಿಕ್ಷೆ ಬೇಡುತ್ತಿರುವುದು ಕಂಡು ಬಂದಿದೆ. ಹೌದು ನಮ್ಮ ಮೆಟ್ರೋ ಟ್ರೈನ್ ನಲ್ಲಿ ವಿಶೇಷ ಚೇತನ ವ್ಯಕ್ತಿ ಒಬ್ಬ ಸಹ ಪ್ರಯಾಣಿಕರ ಬಳಿ ಭಿಕ್ಷೆ ಬೇಡಿರುವ ಘಟನೆ ನಡೆದಿದೆ. ಚೆಲ್ಲಕಟ್ಟದಿಂದ ವೈಟ್ಫೀಲ್ಡ್ ವರೆಗೆ ಮೆಟ್ರೋ ಟ್ರೈನ್ ಸಂಚರಿಸುತ್ತಿತ್ತು ಈ ವೇಳೆ ಪ್ರಯಾಣಿಕರ ಸೋಗಿನಲ್ಲಿ ಬಂದಂತಹ ವಿಶೇಷ ಚೇತನ ವ್ಯಕ್ತಿ ಒಬ್ಬ ಸಹಪ್ರಾಣಿಕರ ಬಳಿ ಭಿಕ್ಷೆ ಬೇಡಿದ್ದಾನೆ. ತನ್ನ ದೈಹಿಕ ಊನವನ್ನು ತೋರಿಸಿ ಭಿಕ್ಷಾಟನೆ ಮಾಡಿದ್ದನ್ನು ಕಂಡು ಪ್ರಯಾಣಿಕರು ದಂಗಾಗಿದ್ದಾರೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್‌ ಪಡೆದು ಭಿಕ್ಷೆ ಬೇಡಿದ್ದು ಹಲವರ ಅಚ್ಚರಿಗೆ ಕಾರಣವಾಗಿದೆ. ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಈಗ ನಮ್ಮ ಮೆಟ್ರೋದಲ್ಲೂ ಭಿಕ್ಷಾಟನೆ ಶುರುವಾಯಿತಾ ಎಂದು ಪ್ರಶ್ನಿಸಿದ್ದಾರೆ.

Read More

ಬೀದರ್ : ವೇಗವಾಗಿ ಚಲಿಸುತ್ತಿದ್ದಂತಹ ಕಾರು ಒಂದು ನಿಯಂತ್ರಣ ಕಳೆದುಕೊಂಡು ಪಲ್ಟಿ ಆಗಿದ್ದ ಪರಿಣಾಮ ಕಾರಿನಲ್ಲಿ ಚಲಿಸುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಧರಿಹನುಮಾನ್ ಕ್ರಾಸ್ ಬಳಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮಶಿವಕುಮಾರ್ ಪೊಲೀಸ್ ಪಾಟೀಲ್ (47) ಎನ್ನುವ ವ್ಯಕ್ತಿ ಸ್ಥಳದಲ್ಲಿ ಸಾವನಪ್ಪಿದ್ದಾರೆ.ಮೃತರು ಔರಾದ್ ತಾಲೂಕಿನ ಧೂಪತ್ ಮಹಾಗಾಂವ್ ಗ್ರಾಮದವರಾದ ವ್ಯಕ್ತಿ ಸಂತಪೂರ್ ಕಡೆಯಿಂದ ಸ್ವ ಗ್ರಾಮಕ್ಕೆ ತೆರಳುತ್ತಿದ್ದಾಗ ಕಾರು ಪಲ್ಟಿಯಾಗಿದೆ.ಈ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾವೇರಿ : ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟಿದ್ದಕ್ಕೆ ಅಪಘಾತ ನಡೆದಿದ್ದು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತಂದೆಗೆ 27 ಸಾವಿರ ರೂಪಾಯಿ ದಂಡ ವಿಧಿಸಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಜೆಎಂಎಫ್ಸಿ  ಕೋರ್ಟ್ ಆದೇಶ ಹೊರಡಿಸಿದೆ. ಹೌದು ಮಗನಿಗೆ ಬೈಕ್ ಕೊಟ್ಟಿದ್ದಕ್ಕೆ ಇದೀಗ ತಂದೆಗೆ ಕೋರ್ಟ್ 27,000 ದಂಡ ಹಾಕಿದೆ. ತಂದೆಯೊಬ್ಬರು ತಮ್ಮ ಮಗನಿಗೆ ಬೈಕ್ ನೀಡಿದ್ದರು. ಈ ವೇಳೆ ಅಪಘಾತ ಒಂದು ನಡೆದಿತ್ತು. ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಬೈಕ್ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪ್ರಾಪ್ತ ಮಗನಿಗೆ ಬೈಕ್ ಅಪಘಾತ ನೀಡಿದ್ದರಿಂದ ಕೇಸ್ ದಾಖಲಾಗಿತ್ತು. ರಾಣೆಬೆನ್ನೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

Read More

ಗದಗ : ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದೆ. ಅವುಗಳಲ್ಲಿ ಪ್ರಮುಖವಾದಂತದ್ದು ಗೃಹಲಕ್ಷ್ಮಿ ಯೋಜನೆ, ಈ ಒಂದು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಸರ್ಕಾರವು ಮನೆಯ ಯಜಮಾನಿಗೆ 2,000 ಹಣ ಅವರ ಖಾತೆಗೆ ಹಾಕುತ್ತಿದೆ. ಈ ಒಂದು ಹಣದಿಂದ ಈಗಾಗಲೇ ಮಹಿಳೆಯರು ಹಲವಾರು ರೀತಿ ಪ್ರಯೋಜನ ಪಡೆದುಕೊಂಡಿದ್ದು, ಇದೀಗ ಗದಗದಲ್ಲಿ ಬೋರ್ವೆಲ್ ಕೊರೆಸಿ ಅತ್ತೆ, ಸೊಸೆ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೌದು ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಕೊಳವೆ ಬಾವಿ ಕೊರೆಸಿದ್ದಾರೆ. ಬೋರ್​ವೆಲ್​ನಲ್ಲಿ ಅವರಿಗೆ ನೀರು ಕೂಡ ದೊರೆತಿದೆ. ಇದೀಗ ಈ ಬಗ್ಗೆ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಹರ್ಷ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರ ನೀಡುವ ಗ್ರಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅತ್ತೆ ಮತ್ತು ಸೊಸೆ ಇಬ್ಬರು ಈ ಒಂದು ಯೋಜನೆಯ ಹಣವನ್ನು…

Read More

ಬೆಂಗಳೂರು : ಪತ್ನಿಯ ಕಿರುಕುಳಕ್ಕೆ ಬೇಸತ್ತು ಇತ್ತೀಚಿಗೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಅವರು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ, ಅದು ಸುಭಾಷ್ ಪತ್ನಿಗೆ ಬಂಧನದ ಭೇಟಿ ಯದುರಾದ ಹಿನ್ನೆಲೆಯಲ್ಲಿ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಅತುಲ್ ಪತ್ನಿ, ಹಾಗೂ ಕುಟುಂಬಸ್ಥರಿಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ತಲೆಮರಿಸಿಕೊಂಡ ಅತುಲ್ ಪತ್ನಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ. ಅಲಹಾಬಾದ್ ಹೈಕೋರ್ಟಿಗೆ ಅತುಲ್ ಪತ್ನಿ ನಿರೀಕ್ಷಣಾ ಜಾಮೀನು ಸಲ್ಲಿಸಿದ್ದರೆ. ಪತ್ನಿ ನಿಕಿತಾ ಸೇರಿದಂತೆ ಇತರೆ ಆರೋಪಿಗಳು ಕೂಡ ನಿರೀಕ್ಷಣಾ ಜಾಮಿನಿಗೆ ಅರ್ಜಿ ಸಲ್ಲಿಸಿದ್ದಾರೆ. ಉತ್ತರ ಪ್ರದೇಶ ಬಿಟ್ಟು ಬೇರೆ ಕಡೆಗೆ ಆರೋಪಿಗಳು ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಾಸ ಸ್ಥಳ ಬದಲಾವಣೆ ಮಾಡಿಕೊಂಡು ಆರೋಪಿಗಳು ಓಡಾಡುತ್ತಿರುವ ಬಗ್ಗೆ ಪೊಲೀಸರಿಗೆ…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಇಂದು ಕಟ್ಟಡದ ಮಹಡಿಯಲ್ಲಿರುವ ಕೆಫೆ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಖರ್ಗೆ ಸರ್ಕಲ್ ಬಳಿ ಇರುವ ಕಟ್ಟಡ ಒಂದರಲ್ಲೇ ಮೂರನೆ ಮಹಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯಾದಂತಹ ಪ್ರಾಣಾಪಾಯ ಸಂಭವಿಸಿಲ್ಲ. ಖರ್ಗೆ ಸರ್ಕಲ್ ಬಳಿ ಇರುವ ಕಟ್ಟಡ ಒಂದರಲ್ಲಿ ಕಾಫಿಜಾ ಕೆಫೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಟ್ಟಡವನ್ನು ಆವರಿಸಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಂಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಆಹಾರ ಸುರಕ್ಷತೆ ಗುಣಮಟ್ಟ & ಔಷಧ ನಿಯಂತ್ರಣ ಈ ಎರಡು ಇಲಾಖೆಗಳನ್ನು ವಿಲೀನಗೊಳಿಸಿ ಹೊಸ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಿದೆ. ರಾಜ್ಯ ಸರ್ಕಾರವು ಆಹಾರ ಸರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರೆ ಮುಖ್ಯಸ್ಥರಾಗಿ ನೇಮಕವಾಗಿದ್ದು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಮುಖ್ಯಸ್ಥರಾಗಿ ನೇಮಕರಾಗಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತರ ನಿಯಂತ್ರಣದಲ್ಲಿಯೇ ಕೆಲಸ ನಿರ್ವಹಿಸಲಿದ್ದು, ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಣೆಗೆ ರಾಜ್ಯ ಸರ್ಕಾರ ಸೂಚಿಸಿದೆ.ಈ ಮೂಲಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇವರ ಆಡಳಿತಾತ್ಮಕ ನಿಯಂತ್ರಣದಡಿಯಲ್ಲಿ ಎರಡು ಇಲಾಖೆಗಳ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯ ಬಾಣಂತಿಯರ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂಬ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಔಷಧ ನಿಯಂತ್ರಣ ಇಲಾಖೆ…

Read More

ರಾಯಚೂರು : ಇತ್ತೀಚಿಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು ವಯಸ್ಕರು ಎನ್ನದೆ ಎಲ್ಲರ ಮೇಲು ನಾಯಿಗಳು ದಾಳಿ ಮಾಡುತ್ತಿವೆ. ಇದೀಗ ರಾಯಚೂರಿನಲ್ಲಿ ಬೀದಿ ನಾಯಿಗಳು ದಾಳಿ ಮಾಡಿದಾಗ ಅವುಗಳಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿ ಯುವತಿ ಒಬ್ಬಳು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ನಡೆದಿತ್ತು. ಇದೀಗ ಚಿಕಿತ್ಸೆಫಲ್ಲಿಸದೆ ಯುವತಿ ಸಾವನಪ್ಪಿದ್ದಾಳೆ. ಹೌದು ರಾಯಚೂರಿನ ಬಡ್ಡಿಪೇಟೆಯಲ್ಲಿ ಈ ಒಂದು ಘಟನೆ ನಡೆದಿತ್ತು. ಕೋಮಾ ಸ್ಥಿತಿ ತಲುಪಿದ್ದ ಯುವತಿಯನ್ನು ಮಹಾದೇವಿ (20) ಎಂದು ತಿಳಿದುಬಂದಿದೆ. ಡಿಸೆಂಬರ್ 4 ರಂದು ಈ ಘಟನೆ ನಡೆದಿತ್ತು.ದೇವಾಲಯಕ್ಕೆ ಹೋಗುವ ವೇಳೆ ನಾಯಿಗಳು ದಾಳಿ ಮಾಡಿವೆ. ನಾಯಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟಾಗಿದೆ. ಕೆಳಗೆ ಬಿದ್ದ ಯುವತಿಯನ್ನು ನಾಯಿಗಳು ಎಳೆದಾಡಿವೆ. ಯುವತಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಳು. ಯುವತಿಯ ತಲೆಗೆ ಬಲವಾಗಿ ಪೆಟ್ಟು ಬಿದ್ದಿರುವುದರಿಂದ ರಕ್ತ ಹೆಪ್ಪುಗಟ್ಟಿದ್ದು, ಪ್ರಜ್ಞೆ ಕಳೆದುಕೊಂಡಿರುವ ಯುವತಿ ಕೋಮಾ ಸ್ಥಿತಿ ತಲುಪಿದ್ದರು. ರಿಮ್ಸ್…

Read More

ಹೈದ್ರಾಬಾದ್ : ಹೈದರಾಬಾದ್ ನಲ್ಲಿ ಪುಷ್ಪ 2 ಸಿನಿಮಾ ವೀಕ್ಷಣೆ ವೇಳೆ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಜೈಲಿಂದ ಬಿಡುಗಡೆಯಾಗಿ ಬಂದಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ರೇವತಿ ಕುಟುಂಬಕ್ಕೆ ಕ್ಷಮೆ ಕೇಳುತ್ತೇನೆ ಎಂದು ಪ್ರತಿಕ್ರಿಯಿಸಿದರು. ಹೈದ್ರಾಬಾದ್ ನ ಜುಬ್ಲಿಹಿಲ್ಸ್ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಲ್ತುಳಿತ ಪ್ರಕರಣಕ್ಕೆ ನಾನು ಕ್ಷಮೆ ಕೇಳುತ್ತೇನೆ. ನಾನು ಪ್ರಕರಣದ ಬಗ್ಗೆ ಹೆಚ್ಚಿಗೆ ಏನು ಮಾತನಾಡಲ್ಲ. ಈ ಒಂದು ಘಟನೆಯಿಂದ ನನಗೆ ತುಂಬಾ ನೋವಾಗಿದೆ. ಹಾಗಾಗಿ ರೇವತಿ ಕುಟುಂಬಕ್ಕೆ ನಾನು ಕ್ಷಮೆ ಕೇಳುತ್ತೇನೆ. 20 ವರ್ಷಗಳಿಂದ ನಾನು ಆ ಥಿಯೇಟರಿಗೆ ಹೋಗುತ್ತಿದ್ದೇನೆ. ಅಲ್ಲದೆ 30ಕ್ಕೂ ಹೆಚ್ಚು ಬಾರಿ ಅಲ್ಲಿಗೆ ನಾನು ಭೇಟಿ ಮಾಡಿದ್ದೇನೆ. ಆದರೆ ಇಂತಹ ಘಟನೆ ಯಾವತ್ತೂ ನಡೆದಿರಲಿಲ್ಲ. ನಾನು ಚಿತ್ರ ನೋಡಲು ಬಂದಾಗ ಆಕಸ್ಮಿಕವಾಗಿ ಈ ಘಟನೆ ನಡೆದಿದೆ ರೇವತಿ ಕುಟುಂಬಕ್ಕೆ ನಾನು…

Read More

ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ನಾಳೆ ಹುಣ್ಣಿಮೆಯಂದು ಮತ್ತು ಮುಂಬರುವ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರದಂದು ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್​​ಗಳ ವ್ಯವಸ್ಥೆ ಮಾಡಲಾಗಿದೆ. ಹೌದು ವಾಯುವ್ಯ ಕರ್ನಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಇಂದ ಹುಬ್ಬಳ್ಳಿಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಕಳೆದ ಶೀಗೆ ಹುಣ್ಣಿಮೆ, ದೀಪಾವಳಿ ಅಮವಾಸ್ಯೆ ಹಾಗೂ ನಂತರದ ಹುಣ್ಣಿಮೆಗಳ ಸಮಯದಲ್ಲಿ ಸವದತ್ತಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಈ ನೇರ ಬಸ್ ಗಳಿಂದಾಗಿ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದ್ದು, ಹಾಗಾಗಿ ಈಗಲು ಬಸ್ ವ್ಯವಸ್ಥೆ ಮುಂದುವರೆಸಲಾಗುತ್ತಿದೆ. ಭಕ್ತರು, ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹುಣ್ಣಿಮೆಯ ದಿನ ಡಿಸೆಂಬರ್ 15ರಂದು ಭಾನುವಾರ ಹಾಗೂ ಮುಂದಿನ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರಗಳಂದು ಬಸ್​ಗಳು ಸಂಚರಿಸಲಿವೆ. ಅಂದರೆ, ಡಿಸೆಂಬರ್ 17, 20, 24 ಹಾಗೂ 27ರಂದು ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ನೇರ ಬಸ್​​​ ವ್ಯವಸ್ಥೆ…

Read More