Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಸಮರ್ಥವಾಗಿದ್ದು ಹಾಗಾಗಿ ಈ ಒಂದು ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತುಂಬಾ ಆಳವಾಗಿ ತನಿಖೆ ನಡೆಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆಯುತ್ತಿರುವ ಸಲುವಾಗಿ ಈಗಾಗಲೇ ಎಸ್ಐಟಿ ಅಧಿಕಾರಿಗಳು, ಸಿಬಿಐ ಮುಖಾಂತರ ಬ್ಲ್ಯೂ ಕಾರ್ನರ್ ನೋಟಿಸ್ ಹೊರಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಇರುವುದರಿಂದ ತನಿಖೆ ತ್ವರಿತವಾಗಿ ನಡೆಸುವುದು ಸ್ವಲ್ಪ ಕಷ್ಟವಾಗುತ್ತದೆ ಎಂದರು. ಪ್ರಕರಣದ ತನಿಖೆಯ ದಾರಿಯನ್ನು ರಾಜ್ಯ ಸರ್ಕಾರ ಹಾದಿ ತಪ್ಪಿಸುತ್ತಿದ್ದು ಇದರಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಸರಿಯಾಗಿ ಪ್ರಕರಣದ ತನಿಖೆ ನಡೆಯುತ್ತಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಪೊಲೀಸರು ಸಮರ್ಥರಿದ್ದಾರೆ ರಾಜಕೀಯ ಹೇಳಿಕೆ ಬಿಟ್ಟು ತನಿಖೆಯು ಸರಿಯಾದ ದಾರಿಯಲ್ಲಿ…
ನವದೆಹಲಿ: ಅಂಬಾನಿ ಅದಾನಿ ಹೇಳಿಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. X ಅಲ್ಲಿ ಪೋಸ್ಟ್ ಅನ್ನು ಹಂಚಿಕೊಂಡ ಅವರು, ಪ್ರಧಾನಿ ಅವರೇ, ನೀವು ಹೆದರದಂತೆ ಕಾಣುತ್ತಿದೆ ಹಾಗಾಗಿ ಅಂಬಾನಿ ಆದಾನಿ ಅವರ ಜೊತೆ ಕೋಣೆಯೊಳಗೆ ಮಾತನಾಡುತ್ತಿದ್ದ ನೀವು ಇದೀಗ ಸಾರ್ವಜನಿಕವಾಗಿ ಮಾತನಾಡುತ್ತಿದ್ದೀರಿ ಎಂದು ತಿರುಗೇಟು ನೀಡಿದರು. ಟ್ವೀಟ್ ಮುಖಾಂತರ ತಿರುಗೇಟು ನೀಡಿದ ಅವರು, ಬಿಜೆಪಿಯ ಭ್ರಷ್ಟಾಚಾರದ ಗತಿಗೆ ಚಾಲಕರು ಮತ್ತು ಸಹಾಯಕರು ಯಾರು ಎಂಬುದು ದೇಶಕ್ಕೆ ಗೊತ್ತಿದೆ’ ಎಂದು ಪೋಸ್ಟ್ನಲ್ಲಿ ಬರೆಯಲಾಗಿದೆ.ಹಿಂದೆ ಅದಾನಿ-ಅಂಬಾನಿ ಹೆಸರುಗಳನ್ನು ಮುಚ್ಚಿ ಬಾಗಿಲು ತೆಗೆಯಲಾಗುತ್ತಿತ್ತು ಮತ್ತು ಈಗ ಪ್ರಧಾನಿ ಅವರ ಹೆಸರನ್ನು ಬಹಿರಂಗವಾಗಿ ಕರೆಯುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು. “ಮೊದಲ ಬಾರಿಗೆ ನೀವು ಸಾರ್ವಜನಿಕವಾಗಿ ಅದಾನಿ, ಅದಾನಿ ಮತ್ತು ಅಂಬಾನಿ ಎಂದು ಹೇಳಿದ್ದೀರಿ” ಎಂದು ಕಾಂಗ್ರೆಸ್ ಸಂಸದರು ಹೇಳಿದರು. ಟೆಂಪೋದಲ್ಲಿ ಕಪ್ಪು ಹಣ ತೆಗೆದುಕೊಳ್ಳಲಾಗಿದೆಯೇ ಎಂದು ಮೋದಿಯವರು ರಾಹುಲ್ ಗಾಂಧಿಯವರನ್ನು ಪ್ರಶ್ನಿಸಿದ್ದರು.ಇದಕ್ಕೆ ರಾಹುಲ್ ಗಾಂಧಿ ತಿರುಗೇಟು…
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ HD ರೇವಣ್ಣಗೆ ಅಲ್ಲಿನ ಜೈಲಾಧಿಕಾರಿಗಳು ರೇವಣ್ಣ ಅವರಿಗೆ ವಿಚಾರಣಾಧೀನ ಬಂಧಿ ನಂಬರ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಜೈಲಿನಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ವಿಚಾರಣಾಧೀನ ಬಂಧಿ ನಂಬರ್ 4567 ಎಂದು ಹೇಳಲಾಗಿತ್ತಿದೆ. ಜೈಲಿಗೆ ಬರುವ ಎಲ್ಲಾ ಆರೋಪಿಗಳಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ.ಅದೇ ರೀತಿ ರೇವಣ್ಣಗೆ ವಿಚಾರಣಾ ಬಂದಿ ಸಂಖ್ಯೆಯನ್ನು ಇದೀಗ ಅಧಿಕಾರಿಗಳು ನೀಡಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿ ರೇವಣ್ಣ ಅವರು ಬೆಂಗಳೂರಿನ 17ನೇ ಎಸಿ ಎಂ ಎಂ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದರು ಇಂದು ಅರ್ಜಿ ವಿಚಾರ ನಡೆಸಿದ ಕೋರ್ಟ್ ಆಮೆ 14 ರವರೆಗೆ ಅಂದರೆ 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿತು ಈ ನೆಲೆಯಲ್ಲಿ ಇದೀಗ ಎಸ್ಐಟಿ ಅಧಿಕಾರಿಗಳು ಅವರನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ಕರೆತಂದಿದ್ದಾರೆ.
ಬೆಂಗಳೂರು : ವಿಚ್ಛೇದನ ಪಡೆದುಕೊಳ್ಳಲು ಎರಡು ಆರೋಪಗಳಿದ್ದ ಸಂದರ್ಭದಲ್ಲಿ ಒಂದು ಆರೋಪ ಸಾಬೀತಾದರೂ ಕೂಡ, ವಿಚ್ಛೇದನ ಪಡೆದುಕೊಳ್ಳಬಹುದು. ಎಲ್ಲಾ ಆರೋಪಗಳು ಸಾಬೀತಾಗಬೇಕಿಲ್ಲ ಎಂದು ಹೈಕೋರ್ಟ್ ತಿಳಿಸಿತು. ಪ್ರಕರಣದಲ್ಲಿ ಪತಿಯ ಮಾನಸಿಕ ಕ್ರೌರ್ಯ ಮತ್ತು ಪರಿತ್ಯಾಗದ ಕಾರಣವನ್ನು ಪರಿಗಣಿಸಿ ವಿಚ್ಛೇದನ ನೀಡಲು ವಿವಾಹವನ್ನು ಅನೂರ್ಜಿತಗೊಳಿಸಿ ವಿಚ್ಛೇದನ ಮಂಜೂರು ಮಾಡುವಂತೆ ತುಮಕೂರಿನ ನವ್ಯ ಎಂಬ ಮಹಿಳೆಯ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಅನು ಶಿವರಾಮನ್ ಅವರಿದ್ದ ವಿಭಾಗೀಯ ಪೀಠ ಈ ಒಂದು ತೀರ್ಪು ನೀಡಿದೆ. ಪ್ರಕರಣದಲ್ಲಿ ಪತಿಯ ಮಾನಸಿಕ ಕ್ರೌರ್ಯ ಮತ್ತು ಪರಿತ್ಯಾಗದ ಕಾರಣವನ್ನು ಪರಿಗಣಿಸಿ ವಿಚ್ಛೇದನ ನೀಡಲು ಪತ್ನಿ ಕೋರಿದ್ದಾರೆ. ದಾಖಲೆಗಳನ್ನು ಪರಿಶೀಲಿಸಿದಾಗ ಪತ್ನಿ ತನ್ನ ಸಹೋದ್ಯೋಗಿಯೊಬ್ಬನ ಜತೆ ಸಂಬಂಧ ಹೊಂದಿದ್ದರು. ಆತನನ್ನು ಮದುವೆಯಾಗಲೆಂದೇ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಪತಿ ಧ್ರುವ ಆಧಾರರಹಿತ ಆರೋಪ ಮಾಡಿರುವುದು ಸಾಬೀತಾಗಿದೆ. ಇದು ಪತ್ನಿಯ ಚಾರಿತ್ರ್ಯವನ್ನು ಹಾಳು ಮಾಡುವುದು ಬಿಟ್ಟು ಮತ್ತೇನು ಅಲ್ಲ ಮತ್ತು ಪತ್ನಿ ಮೇಲೆ ಎಸಗಿದ ಮಾನಸಿಕ ಕ್ರೌರ್ಯ ಎಂದು ಪೀಠ ಅಭಿಪ್ರಾಯಪಟ್ಟಿದೆ. ಹೀಗಿದ್ದರೂ…
ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಹಲವು ದಿನಗಳಿಂದ ಭರ್ಜರಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಇದೀಗ ವಿಶ್ರಾಂತಿಗಾಗಿ ಅವರು ಊಟಿಗೆ ತೆರಳಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಭಾಷಣದಲ್ಲಿ ಹೇಳಿರುವ ಕೆಲವು ಅಂಶಗಳನ್ನು ಟ್ವೀಟ್ ಮುಖಾಂತರ ತಿಳಿಸಿದ್ದಾರೆ. ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು. ಸುಮ್ಮನೆ ಲೆಕ್ಕ ಹಾಕತೊಡಗಿದೆ. ಸದ್ಯಕ್ಕೆ ಇಷ್ಟು ನೆನಪಾಯಿತು. ಹೆಚ್ಚುವರಿಯಾಗಿ ನಿಮಗೆ ನೆನಪಾದರೆ ಇದಕ್ಕೆ ಸೇರಿಸಿಕೊಳ್ಳಿ.ಈ ಸುಳ್ಳುಗಳ ಸರಮಾಲೆ ಇಲ್ಲಿಗೆ ನಿಲ್ಲಲಾರದು, ಮುಂದುವರಿಯಲಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವ ಪ್ರಧಾನಮಂತ್ರಿಯೂ ಇಷ್ಟೊಂದು ನಿರ್ಲಜ್ಜವಾಗಿ ಈ ರೀತಿ ಹಸಿಹಸಿ ಸುಳ್ಳುಗಳನ್ನು ಹೇಳಿರಲಾರರು. ಯಾರೂ ಕೂಡಾ ಪ್ರಧಾನಮಂತ್ರಿ ಕುರ್ಚಿಯ ಘನತೆಯನ್ನು ಈ ರೀತಿ ಮಣ್ಣು ಪಾಲು ಮಾಡಿರಲಾರರು.ಮತದಾನದ ದಿನ ದೇಶದ ಜನರಿಗೆ ಸತ್ಯ-ಸುಳ್ಳುಗಳನ್ನು ಅರಿತುಕೊಳ್ಳುವ ಸದ್ಬುದ್ದಿಯನ್ನು ದೇವರು ಕರುಣಿಸಲಿ ಎಂದು…
ಶಿವಮೊಗ್ಗ : ಹಳೆ ವೈಶಮ್ಯದ ಹಿನ್ನೆಲೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆಗೈದಿರುವ ಘಟನೆ ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ. ಮಾರಕಸ್ತ್ರಗಳಿಂದ ಕೊಚ್ಚಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಮಹಮ್ಮದ್ ಗೌಸ್ (30) ಶೋಯಬ್ (35) ಎನ್ನುವ ವ್ಯಕ್ತಿಗಳನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕೋಟೆ ಠಾಣೆಯ ಪೊಲೀಸರು ಬೇಟೆ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹಾಸನ : ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಇರುವ ಪೆನ್ ಡ್ರೈವ್ ಅನ್ನು ಹಂಚಿದ ಆರೋಪದ ಅಡಿಯಲ್ಲಿ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಸೇರಿದಂತೆ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ಇದೀಗ ಹಾಸನ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ. ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಹಂಚಿಕೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದಡಿ ವಕೀಲ ಪೂರ್ಣಚಂದ್ರ ಅವರು ಹಾಸನದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಆರೋಪಿಗಳಾದ ಕಾರ್ತಿಕ್, ನವೀನ್, ಚೇತನ್, ಪುಟ್ಟರಾಜ್ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಈ ಜಾಮೀನು ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ಹಾಸನ ಜಿಲ್ಲಾ ಜಿಲ್ಲಾ 3 ನೇ ಅಧಿಕ ಸತ್ರ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ ಎಂದು ತಿಳಿಬಂದಿದೆ.
ಬೆಂಗಳೂರು : ಪ್ರಜ್ವಲ್ ರೇವಣ್ಣ ಶ್ರೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ರೋಚಕ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಗಂಭೀರವಾದ ಆರೋಪ ಮಾಡಿದ್ದು ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಪತ್ನಿಯನ್ನು ಕೂಡ ಕಿಡ್ನ್ಯಾಪ್ ಮಾಡಿದ್ದರು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ತಿಕ್ ಪತ್ನಿ ಮೇಲೆ ಹಲ್ಲೆ ನಡೆದಾಗ ನಮಗೆ ನ್ಯಾಯ ಸಿಗಲಿಲ್ಲ. ಈ ಹಿಂದೆ ಕಾರ್ತಿಕ್ ಗೌಡ ಪತ್ನಿಯನ್ನು ಕಿಡ್ನ್ಯಾಪ್ ಮಾಡಲಾಗಿತ್ತು. ಆಗ ನಾನೇ ಖುದ್ದು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದೆ ಎಂದು ತಿಳಿಸಿದರು. ಮೂರು ತಿಂಗಳ ಹಿಂದೆ ಪತ್ರ ಬರೆದಿದ್ದೆ ಆದರೂ ನ್ಯಾಯ ಸಿಗಲಿಲ್ಲ. ಕಾಂಗ್ರೆಸ್ ನಾಯಕರನ್ನೇ ಮಹಿಳಾ ಆಯೋಗದ ಅಧ್ಯಕ್ಷ ಮಾಡಿದ್ದಾರೆ.ಮಹಿಳಾ ಆಯೋಗದ ಅಧ್ಯಕ್ಷೆ ಪತ್ರವನ್ನು ಸಿಎಂ ಪುರಸ್ಕರಿಸುತ್ತಾರೆ ಎಂದು ಬೆಂಗಳೂರಿನಲ್ಲಿ ದೇವರಾಜೇಗೌಡ ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬೆತ್ತಲೆ ಮಾಡಲು ಒಂದು ಗ್ಯಾಂಗ್ ರೆಡಿಯಾಗಿತ್ತು.ಅದು ಕೂಡ ರಾಜಕೀಯ ಷಡ್ಯಂತ್ರವಾಗಿತ್ತು. ಈಗಾಗಲೇ ನಾನು…
ಬೆಂಗಳೂರು : ಬೆಂಗಳೂರಲ್ಲಿ ಬಿಸಿಲಿನಿಂದ ಕಂಗೆಟ್ಟ ಜನರಿಗೆ ಇದೀಗ ವರುಣ ತಂಪೆರೆದಿದ್ದಾನೆ. ಮೊನ್ನೆಯಷ್ಟೇ ಸಾಕಷ್ಟು ಮಳೆಯಾಗಿ ಅವಾಂತರ ಸೃಷ್ಟಿಯಾಗಿದ್ದು ಇದೀಗ ಬೆಂಗಳೂರಿನಲ್ಲಿ ಟೌನ್ ಹಾಲ್ ಬಳಿ ಭಾರಿ ಮಳೆಯಾಗಿದ್ದು ಸಂಜೆ ಆಫೀಸ್ ಮುಗಿಸಿಕೊಂಡು ಹೋಗುವಂತಹ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಹೌದು ಇಂದು ಬೆಂಗಳೂರಿನಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಸಂಜೆ ಕೆಲಸ ಮುಗಿಸಿ ಮನೆಗೆ ಹೊರಟ ವಾಹನ ಸವಾರರು ರಸ್ತೆಯಲ್ಲಿ ಧಾರಾಕಾರ ಮಳೆಯಿಂದ ಪರದಾಟ ನಡೆಸಿದರು. ಕಾರ್ಪೊರೇಷನ್ ವಿಧಾನಸೌಧ ಸುತ್ತಲೂ ಧಾರಾಕಾರ ಮಳೆಯಾಗಿದೆ. ಭಾರಿ ಮಳೆಯಾಗಿದ್ದರಿಂದ ಕಾರ್ಪೊರೇಷನ್ ಸುತ್ತಮುತ್ತಲು ಸಂಚಾರ ದಟ್ಟಣೆ ಉಂಟಾಗಿದೆ. ಮಡಿವಾಳ ಅಡಗೋಡಿಯಲ್ಲಿ ತುಂತುರು ಮಳೆಯಾಗಿದೆ.11ನೇ ತಾರೀಖಿನವರೆಗೆ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆಯು ಇಂದು ಅಥವಾ ನಾಳೆ ಎಲ್ಲೋ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಎಂ ಜಿ ರಸ್ತೆ ಗುಟ್ಟಹಳ್ಳಿ ಕೆ ಆರ್ ಸರ್ಕಲ್ ಯಲಹಂಕ ಪರೀಕ್ಷೆ ಮಂಡ್ ಟೌನ್ ಮಡಿವಾಳ ಸದಾಶಿವನಗರ್ ಹೆಬ್ಬಾಳ ಅರಮನೆ ಮೈದಾನ ಮಲ್ಲೇಶ್ವರಂ…
ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಚಿವ ಕೃಷ್ಣ ಬೈರೇಗೌಡ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷವನ್ನು ಮುಗಿಸಲು ಬಿಜೆಪಿ ಏನು ಬೇಕು ಅದನ್ನು ಮಾಡುತ್ತಿದೆ ಎಂದು ಗಂಭೀರವಾದ ಆರೋಪ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ,ಸಂತ್ರಸ್ತೆಯರ ಮಾನಹರಣದ ಜೊತೆಗೆ ನ್ಯಾಯಾಹರಣ ಆಗುತ್ತಿದೆ. ಆರೋಪಿ ಹತ್ತಿರ ಕೆಲಸ ಮಾಡುತ್ತಿದ್ದವರು ವಿಡಿಯೋ ನೀಡಿದ್ದಾರೆ. ವಿಡಿಯೋ ತೆಗೆದುಕೊಂಡು ಹೋಗಿ ವಕೀಲರಿಗೆ ನೀಡಿದ್ದಾರೆ ಆ ವಕೀಲ ಕಾನೂನು ಬಗ್ಗೆ ಮಾತನಾಡುತ್ತಿದ್ದಾರೆ ಅವರು ಡಿಜಿ ಮತ್ತು ಐಜಿಪಿ ಹೈಕೋರ್ಟ್ ಸಿಜೆಗೆ ನೀಡಬಹುದಿತ್ತಲ್ಲ? ಎಂದರು. ಇಷ್ಟೊಂದು ದೊಡ್ಡ ಕ್ರೈಂ ಆದರೂ ಏಕೆ ಬ್ಲಾಕ್ ಮೇಲ್ ಮಾಡ್ಕೊಂಡು ಕುಳಿತಿದ್ದರು? ಈ ಕುರಿತಂತೆ ಮಾಜಿ ಸಿಎಂ ಎಲ್ಡಿ ಕುಮಾರಸ್ವಾಮಿ ಹಾಗೂ ಆ ವಕೀಲ ಏನು ಚರ್ಚಿಸಿದ್ದಾರೋ ಅದರ ಕುರಿತಂತೆ ಹಾಸನಾಂಬ ದೇವಸ್ಥಾನಕ್ಕೆ ಬಂದು ಪ್ರಮಾಣವನ್ನು ಮಾಡಲಿ. ಹೈಕೋರ್ಟ್ ಜಡ್ಜ್ ಗೆ ನೀಡಿದ್ದರೆ ವಿಡಿಯೋ ವೈರಲ್ ಆಗುತ್ತಿತ್ತ?…